ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
One Nation One Election Archives » Dynamic Leader
October 23, 2024
Home Posts tagged One Nation One Election
ದೇಶ ರಾಜಕೀಯ

ಒಂದು ದೇಶ ಒಂದು ಚುನಾವಣೆ ಅಪ್ರಾಯೋಗಿಕ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಂದು ದೇಶ ಒಂದು ಚುನಾವಣೆ ಯೋಜನೆಗೆ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ, ಒಂದು ದೇಶ ಒಂದು ಚುನಾವಣೆ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದನ್ನು ಕಾಂಗ್ರೆಸ್ ಖಂಡಿಸಿದೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, “ಒಂದು ದೇಶ ಒಂದು ಚುನಾವಣೆ ಯೋಜನೆಯನ್ನು ನಾವು ವಿರುಧಿಸುತ್ತೇವೆ. ಅಪ್ರಾಯೋಗಿಕವಾದದ್ದು. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಒಂದು ದೇಶ ಒಂದು ಚುನಾವಣೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಅಗತ್ಯಕ್ಕೆ ತಕ್ಕಂತೆ ಚುನಾವಣೆ ನಡೆಯಬೇಕು” ಎಂದು ಹೇಳಿದರು.

ಸಂಪಾದಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕೆಂಬುದು ಮೂಲಭೂತವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ; ಮತ್ತು ಇದು ಸಂವಿಧಾನದಲ್ಲಿ ಒದಗಿಸಲಾದ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯವನ್ನು ಹಾಳುಮಾಡುವ ಕ್ರಮವಾಗಿದೆ.

ಸಂವಿಧಾನ ಏನು ಹೇಳುತ್ತದೆ?
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆಸುವುದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕ್ರಮವಾಗಿ ಸಂಸತ್ತು/ವಿಧಾನಸಭೆಗೆ ಉತ್ತರದಾಯಿಗಳಾಗಿರಬೇಕು ಎಂಬ ಸಾಂವಿಧಾನಿಕ ನಿಬಂಧನೆಯನ್ನು ಉಲ್ಲಂಘಿಸುತ್ತದೆ. ಸಂವಿಧಾನದ 75(3)ನೇ ವಿಧಿಯು ಸಂಸತ್ತಿಗೆ/ಶಾಸಕಾಂಗಕ್ಕೆ ಉತ್ತರಿಸಲು ಮಂತ್ರಿಗಳು ಸಾಮೂಹಿಕವಾಗಿ ಜವಾಬ್ದಾರರಾಗಿರುತ್ತಾರೆ ಎಂದು ಹೇಳುತ್ತದೆ. ಅದೇ ರೀತಿ 164(1)ನೇ ವಿಧಿಯು ರಾಜ್ಯಗಳಲ್ಲಿ ಆಡಳಿತ ನಡೆಸುವ ಮಂತ್ರಿಗಳು ರಾಜ್ಯ ಶಾಸಕಾಂಗಗಳಿಗೆ ಉತ್ತರಿಸಲು ಸಾಮೂಹಿಕವಾಗಿ ಜವಾಬ್ದಾರರಾಗಿರುತ್ತಾರೆ.

ಸಂವಿಧಾನದ ಪ್ರಕಾರ, ಸಂಸತ್ತು/ವಿಧಾನಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಿ ಅಂಗೀಕಾರವಾದರೆ ಮತ್ತು ಸಂಸತ್ತು/ವಿಧಾನಸಭೆಯಲ್ಲಿ ವಿಶ್ವಾಸ ಕಳೆದುಕೊಂಡರೆ ಅಥವಾ ಹಣಕಾಸು ಮಸೂದೆ ಸೋತರೆ ಸರ್ಕಾರವು ರಾಜೀನಾಮೆ ನೀಡಲು ಬದ್ಧವಾಗಿರುತ್ತದೆ. ಬದಲಿ ಸರ್ಕಾರ ರಚಿಸಲು ಸಾಧ್ಯವಾಗದಿದ್ದರೆ ಲೋಕಸಭೆ/ವಿಧಾನಸಭೆ ವಿಸರ್ಜಿಸಿ ಉಪಚುನಾವಣೆ ನಡೆಸಬೇಕು.

ಅಧಿಕಾರಾವಧಿಯನ್ನು ವಿಸ್ತರಿಸುವುದು ಕಾನೂನು ಬಾಹಿರ:
ಲೋಕಸಭೆ ಅಥವಾ ರಾಜ್ಯ ವಿಧಾನಸಭೆಗಳಿಗೆ ಯಾವುದೇ ನಿಗದಿತ ಅಧಿಕಾರಾವಧಿ ಇರುವುದಿಲ್ಲ. ಸಂವಿಧಾನದ 83(2) ಮತ್ತು 172(1) ಲೋಕಸಭೆ ಅಥವಾ ರಾಜ್ಯ ವಿಧಾನಸಭೆಗಳ ಅಧಿಕಾರಾವಧಿಯು ಯಾವ ಕಾರಣಕ್ಕಾದರೂ ಅವುಗಳನ್ನು ಮೊದಲೇ ವಿಸರ್ಜಿಸದಿದ್ದರೆ ಐದು ವರ್ಷ ಆಗಲಿದೆ ಎಂದು ತಿಳಿಸಲಾಗಿದೆ.

ಲೋಕಸಭೆ ಅಥವಾ ರಾಜ್ಯ ವಿಧಾನಸಭೆಗಳ ಅಧಿಕಾರಾವಧಿಯನ್ನು ವಿಸ್ತರಿಸುವ ಯಾವುದೇ ಪ್ರಯತ್ನವು ಸಂವಿಧಾನ ವಿರೋಧಿ ಮಾತ್ರವಲ್ಲದೆ ಪ್ರಜಾಪ್ರಭುತ್ವ ವಿರೋಧಿಯೂ ಆಗಿದೆ. ಜನಪ್ರತಿನಿಧಿಗಳ ಮೂಲಕ ಜನರ ಹಿತ ಸದಾ ಮೇಲುಗೈ ಸಾಧಿಸಬೇಕು.

ರಾಷ್ಟ್ರಪತಿ ಆಳ್ವಿಕೆಗೆ ಪ್ರಯತ್ನ:
ಏಕಕಾಲಕ್ಕೆ ಚುನಾವಣೆ ನಡೆಸುವ ಉದ್ದೇಶದಿಂದ ಸಂವಿಧಾನಕ್ಕೆ ತಿದ್ದುಪಡಿ ತರಲು ವಿವಿಧ ಸಲಹೆಗಳನ್ನು ಮುಂದಿಡಲಾಗಿದೆ. ಈ ನಿಟ್ಟಿನಲ್ಲಿ ನೀತಿ ಆಯೋಗವು, ಲೋಕಸಭೆಯ ವಿಸರ್ಜನೆ ಅನಿವಾರ್ಯವಾದರೆ, ಉಳಿದ ಲೋಕಸಭೆಯು ಕಡಿಮೆ ಅವಧಿಯನ್ನು ಹೊಂದಿದ್ದರೆ, ಆ ಅವಧಿಗೆ ದೇಶದಾದ್ಯಂತ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೆ ತರಲು ಸೂಕ್ತವಾದ ಒಂದು ಷರತ್ತನ್ನು ರಚಿಸಬಹುದು ಎಂದು ಸಲಹೆ ನೀಡಿದೆ. ಅಂದರೆ ಮುಂದಿನ ಚುನಾವಣೆ ನಡೆದು ಹೊಸ ಸರ್ಕಾರ ರಚನೆಯಾಗುವವರೆಗೆ ಅವರೇ ನೇಮಿಸುವ ಸಚಿವ ಸಂಪುಟವೇ ದೇಶದ ಆಡಳಿತ ನಡೆಸಬೇಕು ಎಂಬ ಪ್ರಸ್ತಾಪವು ರಾಷ್ಟ್ರಪತಿಯನ್ನು ಆಡಳಿತಗಾರನನ್ನಾಗಿ ಮಾಡುತ್ತದೆ. ಇದು ಹಿತ್ತಲಿನ ಮೂಲಕ ರಾಷ್ಟ್ರಪತಿ ಆಳ್ವಿಕೆಯನ್ನು ತರುವ ಕ್ರಮವಾಗಿದೆ.

ವಿಧಾನಸಭಾ ಸದಸ್ಯರನ್ನು ಆಯ್ಕೆ ಮಾಡುವ ಹಕ್ಕಿನ ಮೇಲೆ ದಾಳಿ:
ವಿಧಾನಸಭೆ ವಿಸರ್ಜನೆಯ ಸಮಯದಲ್ಲಿ, ಉಳಿದ ಅವಧಿಯು ದೀರ್ಘವಾಗಿದ್ದರೆ, ಹೊಸದಾಗಿ ಚುನಾವಣೆಗಳನ್ನು ನಡೆಸಬೇಕು ಮತ್ತು ಅವು ಉಳಿದ ಅವಧಿಗೆ ಮಾತ್ರ ಇರುತ್ತವೆ. ಅಂದರೆ, ಎರಡು ವರ್ಷಗಳ ಅಧಿಕಾರಾವಧಿಯ ನಂತರ ವಿಸರ್ಜಿಸಲ್ಪಟ್ಟರೆ, ಮುಂದಿನ ಚುನಾವಣೆಯು ಮೂರು ವರ್ಷಗಳ ಅವಧಿಗೆ ಮಾತ್ರ ಮಾನ್ಯವಾಗಿರುತ್ತದೆ.

ಈ ಕಾರಣಕ್ಕಾಗಿಯೇ ಏಕಕಾಲಕ್ಕೆ ಚುನಾವಣೆ ನಡೆಸಬೇಕು ಎಂದು ಸಮರ್ಥಿಸಿಕೊಳ್ಳಲಾಗುತ್ತಿದೆ. ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಯತ್ನವು ಪ್ರಜಾಪ್ರಭುತ್ವದ ಮೇಲೆ ನಡೆಸುವ ದಾಳಿಯಾಗಿದೆ. 2015ರ ಸಂಸದೀಯ ಸ್ಥಾಯಿ ಸಮಿತಿಯ 79ನೇ ವರದಿ ಮತ್ತು ಹಣಕಾಸು ಆಯೋಗ ಜಾರಿಗೊಳಿಸಿರುವ ಪ್ರಸ್ತಾವನೆಯಲ್ಲಿ, ‘ಕೆಲವು ಶಾಸಕಾಂಗಗಳ ಅಧಿಕಾರಾವಧಿಯನ್ನು ವಿಸ್ತರಿಸುವುದು,ಅಥವಾ ಕೆಲವು ಶಾಸಕಾಂಗಗಳ ಅಧಿಕಾರಾವಧಿಯನ್ನು ಕಡಿತಗೊಳಿಸುವುದು’ ಎಂದು ಸೂಚಿಸಿದೆ. ಈ ರೀತಿ ಶಾಸಕಾಂಗದ ಅಧಿಕಾರಾವಧಿಯನ್ನು ವಿಸ್ತರಿಸುವುದು ಅಥವಾ ಮೊಟಕುಗೊಳಿಸುವುದು ರಾಜ್ಯಗಳ ಹಕ್ಕುಗಳ ಮೇಲಿನ ದಾಳಿಯಾಗಿದೆ. ಇದು ರಾಜ್ಯದ ಜನರು ತಮ್ಮ ಶಾಸಕರನ್ನು ಆಯ್ಕೆ ಮಾಡುವ ಹಕ್ಕಿನ ಮೇಲಿನ ದಾಳಿಯಾಗಿದೆ.

ರಾಜ್ಯ ಶಾಸಕಾಂಗಗಳಿಗೆ ಸಂಬಂಧಿಸಿದಂತೆ ಮತ್ತೊಂದು ಸಲಹೆಯನ್ನೂ ಮುಂದಿಡಲಾಗಿದೆ. ‘ರಾಜ್ಯ ವಿಧಾನಸಭೆಯು ಅದರ ಅವಧಿಯ ಅಂತ್ಯದ ಮೊದಲೇ ವಿಸರ್ಜಿಸಲ್ಪಟ್ಟರೆ, ರಾಜ್ಯದ ರಾಜ್ಯಪಾಲರು ಅದರ ಉಳಿದ ಅವಧಿಗೆ ರಾಜ್ಯವನ್ನು ಆಳುವುದು’ ಎಂದು ಹೇಳಿದೆ. ಇದರರ್ಥ ಕೇಂದ್ರ ಸರ್ಕಾರದ ಆಡಳಿತವನ್ನು ರಾಜ್ಯಗಳ ಮೇಲೆ ನೇರವಾಗಿ ತರುವುದನ್ನು ಬಿಟ್ಟರೆ ಬೇರೇನೂ ಅಲ್ಲ!

ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಸ್ತಾಪಗಳು:
ಸಂಸತ್ತು/ಶಾಸಕಾಂಗಗಳ ಜವಾಬ್ದಾರಿಯನ್ನು ನಿರಾಕರಿಸುವ ಮತ್ತು ಆಡಳಿತಗಾರರ ಅಧಿಕಾರಾವಧಿಯನ್ನು ವಿಸ್ತರಿಸುವ ಅಸಂಖ್ಯಾತ ಪ್ರಸ್ತಾಪಗಳನ್ನು ಮುಂದಿಡಲಾಗಿದೆ. ಭಾರತದ ಕಾನೂನು ಆಯೋಗದ ಕರಡು, ವರ್ಕಿಂಗ್ ಪೇಪರ್ ಸೇರಿದಂತೆ ಸದನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಯಾದಾಗ ಸದನಕ್ಕೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ನಿರ್ಣಯವನ್ನು ಲಗತ್ತಿಸಬೇಕು ಎಂದು ಪ್ರಸ್ತಾಪಿಸಲಾಗಿದೆ. ಇದರರ್ಥ ಹೊಸ ಸರ್ಕಾರವನ್ನು ಆಯ್ಕೆ ಮಾಡುವ ಷರತ್ತಿನೊಂದಿಗೆ ಸದಸ್ಯರು ಹಾಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬಹುದು ಎಂಬುದಾಗಿದೆ. ಚುನಾಯಿತ ಶಾಸಕರು ಮತ್ತು ಲೋಕಸಭೆಯ ಸದಸ್ಯರು ಯಾವುದೇ ಸರ್ಕಾರಕ್ಕೆ ಮತ ಚಲಾಯಿಸುವ ಹಕ್ಕನ್ನು ಮೊಟಕುಗೊಳಿಸಲಾಗದು. ಅಥವಾ ಸದನದಲ್ಲಿ ನಿಶ್ಚಿತ ಬಹುಮತ ಹೊಂದಿರುವ ಆಡಳಿತ ಪಕ್ಷವು ಸದನವನ್ನು ವಿಸರ್ಜಿಸುವ ಮತ್ತು ಅವಧಿಪೂರ್ವ ಚುನಾವಣೆಗೆ ಶಿಫಾರಸು ಮಾಡುವ ಹಕ್ಕನ್ನು ಮೊಟಕುಗೊಳಿಸಲಾಗದು ಎಂದಿದೆ.

ರಾಜ್ಯ ಸರ್ಕಾರಗಳ ವಿಸರ್ಜನೆಯೇ ಸಮಸ್ಯೆ:
ಲೋಕಸಭೆ ಚುನಾವಣೆಯೊಂದಿಗೆ ರಾಜ್ಯ ವಿಧಾನಸಭೆಗಳಿಗೂ ಚುನಾವಣೆ ನಡೆಸುವ ಎಲ್ಲಾ ಪ್ರಸ್ತಾಪಗಳು ಒಕ್ಕೂಟ ತತ್ವ ಮತ್ತು ರಾಜ್ಯಗಳ ಹಕ್ಕುಗಳನ್ನು ಗೌರವಿಸದ ಪ್ರವೃತ್ತಿಯನ್ನು ಸಹ ತೋರಿಸುತ್ತದೆ. ಮೊದಲನೆಯದಾಗಿ, ಕೇಂದ್ರ ಸರ್ಕಾರವು ಸಂವಿಧಾನದ 356ನೇ ವಿಧಿಯನ್ನು ನಿರಂಕುಶವಾಗಿ ದುರುಪಯೋಗಪಡಿಸಿಕೊಂಡಿದ್ದು, ಜನರಿಂದ ಆಯ್ಕೆಯಾದ ಹಲವಾರು ರಾಜ್ಯ ಸರ್ಕಾರಗಳನ್ನು ವಿಸರ್ಜಿಸಿದ ಪರಿಣಾಮ ಲೋಕಸಭೆ ಮತ್ತು ಹಲವಾರು ರಾಜ್ಯಗಳ ವಿಧಾನಸಭೆಗಳಿಗೆ ಒಂದೇ ಸಮಯದಲ್ಲಿ ಚುನಾವಣೆಗಳನ್ನು ನಡೆಸುವುದು ಅಸಾಧ್ಯವಾಯಿತು.

1959ರಲ್ಲಿ ಕೇರಳದಲ್ಲಿ ಕಮ್ಯುನಿಸ್ಟ್ ಸರ್ಕಾರದ ವಿಸರ್ಜನೆಯೊಂದಿಗೆ ಈ ಪ್ರಕ್ರಿಯೆ ಪ್ರಾರಂಭವಾಯಿತು. ಏಕಕಾಲಕ್ಕೆ ಚುನಾವಣೆ ನಡೆಸುವ ಹೆಸರಿನಲ್ಲಿ ಮುಂದಿಡುವ ಎಲ್ಲ ಪ್ರಸ್ತಾಪಗಳು ರಾಜ್ಯಪಾಲರ ಒಳಗೊಳ್ಳುವಿಕೆ ಮತ್ತು ಆ ಮೂಲಕ ಕೇಂದ್ರ ಸರ್ಕಾರದ ಹಸ್ತಕ್ಷೇಪವನ್ನು ಹೆಚ್ಚಿಸುತ್ತವೆ.

ಭಾರತವು ಅಸಂಖ್ಯಾತ ವೈವಿಧ್ಯತೆಯನ್ನು ಹೊಂದಿರುವ ವಿಶಾಲ ದೇಶವಾಗಿದೆ. ಆದ್ದರಿಂದ ಸಂಯುಕ್ತ ವ್ಯವಸ್ಥೆ (ಫೆಡರಲಿಸಂ) ಆಧಾರಿತ ರಾಜಕೀಯ ಪ್ರಜಾಪ್ರಭುತ್ವ ವ್ಯವಸ್ಥೆ ಮಾತ್ರ ಇಲ್ಲಿ ಉಳಿಯಲು ಸಾಧ್ಯ. ರಾಜ್ಯಗಳಿಗೆ ವಿವಿಧ ಹಂತಗಳಲ್ಲಿ ಚುನಾವಣೆಗಳು ನಡೆಸುವುದು ಒಕ್ಕೂಟ ವ್ಯವಸ್ಥೆಯಲ್ಲಿ ಒಂದು ವೈಶಿಷ್ಟ್ಯವಾಗಿದೆ. ಆದ್ದರಿಂದ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಯಾವುದೇ ಕೃತಕ ಪ್ರಯತ್ನವನ್ನು ಸಂಪೂರ್ಣವಾಗಿ ವಿರೋಧಿಸಲಾಗುವುದು. ಏಕಕಾಲದಲ್ಲಿ ಚುನಾವಣೆ ನಡೆಸುವುದು ಸಂವಿಧಾನದ ಆಧಾರದ ಮೇಲೆ ಪ್ರಸ್ತುತವಾಗಿರುವ ಸಂಸದೀಯ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ.

ರಾಜಕೀಯ

ಡಿ.ಸಿ.ಪ್ರಕಾಶ್, ಸಂಪಾದಕರು

ಸಂಸತ್ತು ಮತ್ತು ಶಾಸಕಾಂಗಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಯೋಜನೆಯನ್ನು ಪರಿಚಯಿಸುವ ಪ್ರಯತ್ನಗಳು ಈಗ ಪ್ರಾರಂಭವಾಗಿದ್ದರೂ, ಇದು 2029 ರಲ್ಲಿ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ಏಕಕಾಲಕ್ಕೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಯೋಜನೆಯನ್ನು ಜಾರಿಗೆ ತರಲು ಕೇಂದ್ರದ ಬಿಜೆಪಿ ಸರ್ಕಾರ ಬಹಳ ದಿನಗಳಿಂದ ಮಾತನಾಡುತ್ತಿದೆ. ಈಗ ಅದನ್ನು ಕಾರ್ಯರೂಪಕ್ಕೆ ತರುವ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದೆ. ಸಂಸತ್ತಿನ ವಿಶೇಷ ಅಧಿವೇಶನದ ಘೋಷಣೆಯಾದಾಗಲೇ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ‘ಒಂದು ದೇಶ; ಒಂದು ಚುನಾವಣೆ’ ಮಸೂದೆ ಮಂಡಿಸಲು ಮುಂದಾಗಿದೆ ಎಂಬ ಮಾತುಗಳೂ ಕೇಳಿ ಬಂದಿದ್ದವು.

ಆದರೆ, ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಯಾವುದೇ ಮಸೂದೆ ಮಂಡನೆಯಾಗಲಿಲ್ಲ. ಬದಲಾಗಿ, ಕೇಂದ್ರ ಸರ್ಕಾರವು ‘ಒಂದು ದೇಶ; ಒಂದು ಚುನಾವಣೆ’ ಯೋಜನೆಯನ್ನು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭಾ ಮಾಜಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಮತ್ತು ಇತರರು ಇದರ ಸದಸ್ಯರಾಗಿದ್ದಾರೆ.

ಪ್ರಸ್ತುತ, ಕಾನೂನು ಆಯೋಗವು ಸಂಸತ್ತು ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸೂತ್ರವನ್ನು ರೂಪಿಸುತ್ತಿದ್ದು, ಈ ಯೋಜನೆಯು 2029ರ ಹೊತ್ತಿಗೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯಗಳು ನಡೆಯುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಸಂಸತ್ತು ಮತ್ತು ವಿಧಾನಸಭೆಗಳ ಜೊತೆಗೆ ಸ್ಥಳೀಯ ಸಂಸ್ಥೆಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಯನ್ನು ಪರಿಶೀಲಿಸುವ ಕಾರ್ಯವನ್ನು ಕಾನೂನು ಆಯೋಗಕ್ಕೆ ವಹಿಸಬಹುದು ಎಂಬ ವರದಿಗಳೂ ಇವೆ.

ಸಂಸತ್ತು, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆದರೆ ಸಮಯ, ವೆಚ್ಚ ತಗ್ಗಲಿದೆ ಎಂಬುದು ಕೇಂದ್ರ ಬಿಜೆಪಿ ಸರ್ಕಾರದ ಅಭಿಪ್ರಾಯ. ಮತದಾರರು ಒಮ್ಮೆ ಮತಗಟ್ಟೆಗೆ ಹೋದರೆ ಸಂಸತ್ತು, ವಿಧಾನಸಭೆ, ಸ್ಥಳೀಯ ಸಂಸ್ಥೆಗೆ ಏಕಕಾಲಕ್ಕೆ ಮತ ಚಲಾಯಿಸಬಹುದು ಎನ್ನುತ್ತಾರೆ ಆಡಳಿತಗಾರರು. ಈ ಸಂಬಂಧ ಕಾನೂನು ಆಯೋಗದ ವರದಿ ಇನ್ನಷ್ಟೇ ಸಿದ್ಧವಾಗಬೇಕಿದೆ.

‘ಒಂದು ದೇಶ; ಒಂದು ಚುನಾವಣೆ’ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಗಂಭೀರ ಪ್ರಯತ್ನ ನಡೆಸುತ್ತಿದೆ. ಇತ್ತೀಚೆಗೆ ದೆಹಲಿಯಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆ ನಡೆಯಿತು. ಆ ಸಭೆಯಲ್ಲಿ, ಕೇಂದ್ರ ಕಾನೂನು ಆಯೋಗ, ಮುಖ್ಯ ಚುನಾವಣಾ ಆಯೋಗ ಮತ್ತು ರಾಜಕೀಯ ಪಕ್ಷಗಳ ಅಭಿಪ್ರಾಯ ಕೇಳಲು ನಿರ್ಧರಿಸಲಾಗಿದೆ. ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕೆಂಬ ಬೇಡಿಕೆ 1983ರಲ್ಲೇ ಹುಟ್ಟಿಕೊಂಡಿತ್ತು. ಅಂದಿನ ಪ್ರಧಾನಿ ಇಂದಿರಾಗಾಂಧಿ ನೇತೃತ್ವದ ಕೇಂದ್ರ ಸರಕಾರ ಇದಕ್ಕೆ ಮಹತ್ವ ನೀಡಲಿಲ್ಲ.

ನಂತರ 1999ರಲ್ಲಿ, ಭಾರತದ ಕಾನೂನು ಆಯೋಗವು ಸಂಸತ್ತು ಮತ್ತು ರಾಜ್ಯ ಶಾಸಕಾಂಗಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಶಿಫಾರಸು ಮಾಡಿತು. ಆಗ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಅಧಿಕಾರದಲ್ಲಿತ್ತು. ನಂತರ 2014ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ‘ಒಂದು ದೇಶ; ಒಂದು ಚುನಾವಣೆ’ ಎಂಬ ಭರವಸೆಯನ್ನು ನೀಡಿತ್ತು.

ಇದೀಗ ಕೇಂದ್ರ ಬಿಜೆಪಿ ಸರ್ಕಾರ ಆ ಭರವಸೆಯನ್ನು ಜಾರಿಗೆ ತರಲು ಪ್ರಯತ್ನ ನಡೆಸಿದೆ. ಆದರೆ ಕೇಂದ್ರ ಸರ್ಕಾರದ ಈ ಕ್ರಮಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ‘ಭಾರತವು ರಾಜ್ಯಗಳ ಒಕ್ಕೂಟವಾಗಿದೆ. ‘ಒಂದು ದೇಶ; ಒಂದು ಚುನಾವಣೆ’ಯ ಕಲ್ಪನೆಯು ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ” ಎಂದು ಎಕ್ಸ್ ಟ್ವಿಟರ್‌ನಲ್ಲಿ ಹೇಳಿದ್ದಾರೆ.

‘ಒಂದು ದೇಶ, ಒಂದೇ ಚುನಾವಣೆಯಾದರೆ ಸಾಮಾನ್ಯ ಜನರಿಗೆ ಏನು ಪ್ರಯೋಜನ. ಇದರ ಬದಲಾಗಿ ನಮಗೆ ಒಂದು ದೇಶ; ಒಂದು ಶಿಕ್ಷಣ, ಒಂದು ದೇಶ; ಒಂದು ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಮುಂತಾದವುಗಳೇ ಬೇಕು’ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೇಶ ರಾಜಕೀಯ

‘ಇಂಡಿಯಾ’ ಮೈತ್ರಿಕೂಟ ಕೆಲವು ಟಿವಿ ನಿರೂಪಕರು ಮತ್ತು ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಿಸಿದೆ.

ನವದೆಹಲಿ: ಸಂಸತ್ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಗುರಿಯೊಂದಿಗೆ ಕಾಂಗ್ರೆಸ್, ಡಿಎಂಕೆ ಸೇರಿದಂತೆ 28 ವಿರೋಧ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ‘ಇಂಡಿಯಾ’ ಎಂದು ಹೆಸರಿಸಲಾದ ಈ ಮೈತ್ರಿಕೂಟದ ಸಮಾಲೋಚನಾ ಸಭೆಗಳನ್ನು ಪಾಟ್ನಾ, ಬೆಂಗಳೂರು ಮತ್ತು ಮುಂಬೈನಲ್ಲಿ ನಡೆಸಲಾಗಿದೆ. ವಿವಿಧ ಸಮಸ್ಯೆಗಳನ್ನು ಪರಿಶೀಲಿಸಲು 14 ಸದಸ್ಯರ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ.

‘ಇಂಡಿಯಾ’ ಮೈತ್ರಿಕೂಟ ಸಮನ್ವಯ ಸಮಿತಿಯ ಮೊದಲ ಸಭೆ ನಿನ್ನೆ ನಡೆಯಿತು. ದೆಹಲಿಯಲ್ಲಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಶರದ್ ಪವಾರ್ ಅವರ ನಿವಾಸದಲ್ಲಿ ಸಭೆ ನಡೆಯಿತು. 14 ಸದಸ್ಯರ ಪೈಕಿ 12 ಮಂದಿ ಹಾಜರಿದ್ದರು. ಸಭೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ರಾಜ್ಯವಾರು ಸೀಟು ಹಂಚಿಕೆ ಕುರಿತು ಚರ್ಚೆ ನಡೆಸಲಾಯಿತು. ಬಿಜೆಪಿ ವಿರುದ್ಧ ಮೈತ್ರಿ ಪಕ್ಷಗಳ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಮಾಲೋಚನೆ ನಡೆಸಲಾಗಿದೆ.

ಇದನ್ನೂ ಓದಿ: ‘ಸರ್ವ-ಜಾತಿ ಪುರೋಹಿತರು’ ಯೋಜನೆಯಡಿ ಮೊದಲ ಬಾರಿಗೆ ಅರ್ಚಕರಾದ ಮೂರು ಮಹಿಳೆಯರು!

ಮಹಾರಾಷ್ಟ್ರ, ತಮಿಳುನಾಡು ಮತ್ತು ಬಿಹಾರ ರಾಜ್ಯಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಇಂಡಿಯಾ ಮೈತ್ರಿಕೂಟ ಅಭಿಪ್ರಾಯಪಟ್ಟಿದೆ. ಆದರೆ ದೆಹಲಿ, ಪಂಜಾಬ್, ಪಶ್ಚಿಮ ಬಂಗಾಳ, ಕೇರಳದಂತಹ ರಾಜ್ಯಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳ ಆಯ್ಕೆಯಲ್ಲಿ ಸಮಸ್ಯೆ ಎದುರಾಗಲಿದೆ ಎಂದು ಭಾವಿಸಲಾಗಿದೆ.

ಇದಲ್ಲದೇ ಮೈತ್ರಿಕೂಟದ ಪ್ರಚಾರ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಲಾಯಿತು. ಯಾವ ಯಾವ ನಗರಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಬೇಕು ಎಂಬ ಬಗ್ಗೆಯೂ ಚರ್ಚಿಸಲಾಯಿತು. ಈ ಹಿನ್ನಲೆಯಲ್ಲಿ, ‘ಇಂಡಿಯಾ’ ಮೈತ್ರಿಕೂಟವು ಕೆಲವು ದೂರದರ್ಶನ ನಿರೂಪಕರು ಮತ್ತು ಕಾರ್ಯಕ್ರಮಗಳನ್ನು ಬಹಿಷ್ಕರಿಸಲು ಹೊರಟಿದ್ದು, ಯಾವ್ಯಾವ ಟೆಲಿವಿಷನ್ ಗಳು ಎಂಬ ವಿವರವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ಮಾಧ್ಯಮದ ಒಂದು ವರ್ಗವು ಹಗೆತನದ ಮನೋಭಾವವನ್ನು ಹೊಂದಿದ್ದು, ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ನಡಿಗೆಯನ್ನು ಕನಿಷ್ಠವಾಗಿ ತೋರಿಸಲಾಯಿತು ಎಂದು ಕಾಂಗ್ರೆಸ್ ಆರೋಪಿಸಿದೆ. ಟಿವಿ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ತನ್ನ ವಕ್ತಾರರನ್ನು ಕಳುಹಿಸುವುದಿಲ್ಲ ಎಂದು ನಿರ್ಧರಿಸಲಾಗಿದೆ. ಎಲ್ಲಾ ಮಾಧ್ಯಮ ಚಾನೆಲ್‌ಗಳು ಮತ್ತು ಸಂಪಾದಕರು ಕಾಂಗ್ರೆಸ್ ಪ್ರತಿನಿಧಿ ಎಂದು ಯಾರನ್ನೂ ಕರೆಯಬಾರದು ಎಂದು ಕಾಂಗ್ರೆಸ್ ಅಧ್ಯಕ್ಷ ರಣದೀಪ್ ಸುರ್ಜೇವಾಲಾ ತಮ್ಮ ಎಕ್ಸ್ ಪೇಜ್‌ನಲ್ಲಿ ಹೇಳಿದ್ದಾರೆ.

ರಾಜಕೀಯ

ನವದೆಹಲಿ: ಒಂದು ದೇಶ; ಒಂದೇ ಚುನಾವಣೆ ಎಂಬುದನ್ನು ಪ್ರಾಯೋಗಿಕ ಪಡಿಸಲು ಸಾಧ್ಯವಿರುವ ಅಂಶಗಳನ್ನು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಪ್ರಥಮವಾಗಿ ಸಮಾಲೋಚನೆ ನಡೆಸಿತು. ಈ ಸಭೆಯಲ್ಲಿ ಕೇಂದ್ರ ಸಚಿವರು ಭಾಗವಹಿಸಿದ್ದರು.

ಇದನ್ನೂ ಓದಿ: ಶಾಲಾ ವಿದ್ಯಾರ್ಥಿಗಳಿಗೆ ಬಿಸಿ ಹಾಲು ನೀಡುವ ಕ್ಷೀರಭಾಗ್ಯ ಯೋಜನೆಗೆ ಈಗ ದಶಮಾನೋತ್ಸವದ ಸಂಭ್ರಮ!

ಒಂದು ದೇಶ; ಒಂದೇ ಚುನಾವಣಾ ಜಾರಿಗೊಳಿಸುವ ಸಾಧ್ಯತೆಗಳನ್ನು ಪರಿಶೀಲಿಸಲು, ಮಾಜಿ ರಾಷ್ಟ್ರಪತಿ ರಾಮನಾಥ್ ಗೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ಸ್ಥಾಪಿಸಿತು. ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್, ಲೋಕಸಭೆ ಮಾಜಿ ಕಾರ್ಯದರ್ಶಿ ಸುಭಾಷ್ ಸಿ.ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ, ಮಾಜಿ ಮುಖ್ಯ ವಿಜಿಲೆನ್ಸ್ ಆಯುಕ್ತ ಸಂಜಯ್ ಕೊಠಾರಿ ಇದ್ದಾರೆ. ಆದರೆ ಅಧೀರ್ ರಂಜನ್ ಚೌಧರಿ ಈ ಗುಂಪಿನ ಭಾಗವಾಗಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಒಂದು ಕೋಟಿ ಗೋವಿಂದ ನಾಮ ಬರೆಯುವವರಿಗೆ ವಿಐಪಿ ದರ್ಶನ: ತಿರುಪತಿಯಲ್ಲಿ ಆಫರ್!

ಈ ಹಿನ್ನಲೆಯಲ್ಲಿ ಈ ಸಮಿತಿಯ ಮೊದಲ ಸಭೆ ಇಂದು ನಡೆಯಿತು. ರಾಮ್ ನಾಥ್ ಕೋವಿಂದ್ ಅವರ ನಿವಾಸದಲ್ಲಿ ಸಭೆ ನಡೆದಿದ್ದು, ಕೇಂದ್ರ ಸಚಿವರಾದ ಅಮಿತ್ ಶಾ, ಅರ್ಜುನ್ ರಾಮ್ ಮೇವಾಲ್ ಮತ್ತಿತರರು ಉಪಸ್ಥಿತರಿದ್ದರು. ಒಂದು ದೇಶ; ಒಂದೇ ಚುನಾವಣೆ ಪ್ರಕ್ರಿಯೆಯ ಸಾಧಕ-ಬಾಧಕಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: ಗೇಮ್ ಚೇಂಜರ್ಸ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ ನೇಮ್ ಚೇಂಜರ್ಸ್ ಆಗಿದೆ!

 

ರಾಜಕೀಯ

ನವದೆಹಲಿ: ದೆಹಲಿಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ‘ಇಂಡಿಯಾ’ ಮೈತ್ರಿಕೂಟದ ವತಿಯಿಂದ ಸಮಾಲೋಚನಾ ಸಭೆ ನಡೆಯಿತು.

ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನಲ್ಲಿ ವಿಶೇಷ ಜಂಟಿ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ‘ಇಂಡಿಯಾ’ ಮೈತ್ರಿ ಪಕ್ಷಗಳ ಪರವಾಗಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ, ಅವರ ಮನೆಯಲ್ಲಿ ಸಮಾಲೋಚನಾ ಸಭೆ ನಡೆಯಿತು.

ಇದನ್ನೂ ಓದಿ: ಮಣಿಪುರ: ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ ವಿಶ್ವಸಂಸ್ಥೆ; ತಿರಸ್ಕರಿಸಿದ ಭಾರತ!

ಸಭೆಯಲ್ಲಿ ಸಂಸತ್ತಿನ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಸಭೆಯಲ್ಲಿ ‘ಒಂದು ದೇಶ-ಒಂದು ಚುನಾವಣೆ’ ಯೋಜನೆ ವಿರುದ್ಧ ನಿರ್ಣಯವನ್ನು ತರಲು ನಿರ್ಧರಿಸಲಾಯಿತು. ಮತ್ತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರ ಅನುಪಸ್ಥಿತಿಯ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ‘ಇಂಡಿಯಾ’ ಮೈತ್ರಿಯ ಹೆಸರನ್ನು ‘ಭಾರತ’ ಎಂದು ಬದಲಾಯಿಸಿದರೆ ಏನು ಮಾಡುತ್ತೀರಿ? ಕೇಜ್ರಿವಾಲ್ ಪ್ರಶ್ನೆ!

ರಾಜಕೀಯ

ನವದೆಹಲಿ: ಒಂದು ದೇಶ ಒಂದು ಚುನಾವಣೆ ಪ್ರಕ್ರಿಯೆಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ ಎಂದು ತಿಳಿದುಬಂದಿದೆ.

ಲೋಕಸಭೆ ಮತ್ತು ರಾಜ್ಯ ಸಭೆಗಳಿಗೆ ಹಲವಾರು ವರ್ಷಗಳ ಅಂತರದಲ್ಲಿ ಚುನಾವಣೆಗಳು ನಡೆಯುತ್ತವೆ. ಇದರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ಧಕ್ಕೆಯಾಗುತ್ತದೆ. ಇದರ ಬೆನ್ನಲ್ಲೇ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಪಕ್ಷಾತೀತವಾಗಿ ಬೆಂಬಲ ಮತ್ತು ವಿರೋಧ ವ್ಯಕ್ತವಾಗಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ಸೇರಿದಂತೆ 5 ರಾಜ್ಯಗಳ ವಿಧಾನಸಭೆಗಳಿಗೆ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಮುಂದಿನ ವರ್ಷ ಲೋಕಸಭೆಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇದೇ 18 ರಿಂದ 22 ರವರೆಗೆ ವಿಶೇಷ ಸಂಸತ್ ಅಧಿವೇಶನ ಕರೆದಿದೆ.

ಇದಕ್ಕೆ ಕಾರಣ ಏನೆಂಬುದನ್ನು ಪ್ರಕಟಿಸದಿದ್ದರೂ, ಒಂದು ದೇಶ ಒಂದು ಚುನಾವಣೆ ಎಂಬ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ದೆಹಲಿ ಮೂಲಗಳು ತಿಳಿಸಿವೆ.

ಈ ಹಿನ್ನಲೆಯಲ್ಲಿ, ಒಂದು ದೇಶ ಒಂದು ಚುನಾವಣೆ ಪ್ರಕ್ರಿಯೆಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ ಎಂದು ತಿಳಿದುಬಂದಿದೆ.  ಸಮಿತಿ ನೀಡುವ ಮಾಹಿತಿ ಆಧರಿಸಿ ಕೇಂದ್ರ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.