ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Opposition Party Leaders Archives » Dynamic Leader
October 23, 2024
Home Posts tagged Opposition Party Leaders
ರಾಜಕೀಯ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಬಹುದು ಎಂಬ ವರದಿಗಳು ಬಂದಿವೆ. ಅದೇ ವೇಳೆ ಈ ಬಗ್ಗೆ ಅವರೇ ನಿರ್ಧರಿಸಬೇಕು ಎಂದು ಪಕ್ಷ ಹೇಳಿದೆ.

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ 234 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಮಾತ್ರ 99 ಸ್ಥಾನಗಳನ್ನು ಪಡೆದಿದೆ. ಸರ್ಕಾರ ರಚಿಸಲು ಅಗತ್ಯ ಸ್ಥಾನಗಳು ಲಭ್ಯವಾಗದ ಕಾರಣ, ವಿರೋಧ ಪಕ್ಷದ ಸಾಲಿನಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ. ಮುಂದೆ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಯಾರು ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿದೆ.

ಈ ಹಿನ್ನೆಲೆಯಲ್ಲಿ, ರಾಹುಲ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಬೇಕೆಂಬ ಆಗ್ರಹ ಕಾಂಗ್ರೆಸ್ ನಲ್ಲಿ ಕೇಳಿ ಬಂದಿದೆ. ಈ ಬಗ್ಗೆ ಹಲವು ಸಂಸದರು ಮುಕ್ತವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷವೂ ರಾಹುಲ್ ವಿರೋಧ ಪಕ್ಷದ ನಾಯಕರಾಗಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದೆ. ಅದೇ ವೇಳೆ ಈ ಬಗ್ಗೆ ಅವರೇ ನಿರ್ಧರಿಸಬೇಕು ಎಂದೂ ಹೇಳಿದೆ.

ಸದ್ಯದಲ್ಲೇ ಕಾಂಗ್ರೆಸ್ ಸಂಸದರ ಸಭೆ ನಡೆಯಲಿದೆ. ಈ ಸಭೆಯ ನಂತರ ವಿರೋಧ ಪಕ್ಷದ ನಾಯಕ ಯಾರು ಎಂಬುದು ಸ್ಪಷ್ಟವಾಗಲಿದೆ ಎಂದು ದೆಹಲಿ ಮೂಲಗಳು ತಿಳಿಸಿವೆ.

ದೇಶ ರಾಜಕೀಯ

ಮುಂಬೈ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯ ಬೇಕಿದ್ದ ವಿಪಕ್ಷ ನಾಯಕರ ಸಭೆಯನ್ನು, ಜುಲೈ 13 ಮತ್ತು 14 ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ಶಿಮ್ಲಾದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ, ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಆಡಳಿತಾರೂಢ ಬಿಜೆಪಿ ವಿರುದ್ಧ ಎಲ್ಲಾ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸಿ, ಆಡಳಿತ ಪಕ್ಷದ ವಿರುದ್ಧ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಪ್ರಯತ್ನ ನಡೆಯುತ್ತಿದೆ. ಇದಕ್ಕಾಗಿ ಜೂನ್ 23 ರಂದು ಪಾಟ್ನಾದಲ್ಲಿ ಪ್ರತಿಪಕ್ಷ ನಾಯಕರ ಸಭೆ ಕರೆಯಲಾಗಿತ್ತು.

ಆ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಂ.ಕೆ.ಸ್ಟಾಲಿನ್, ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್, ಅರವಿಂದ್ ಕೇಜ್ರಿವಾಲ್, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್ ಸೇರಿದಂತೆ 16 ವಿರೋಧ ಪಕ್ಷಗಳ ಮುಖಂಡರುಗಳು ಭಾಗವಹಿಸಿದ್ದರು. ಈ ಸಭೆಯ ಕೊನೆಯಲ್ಲಿ, ಮುಂದಿನ ಸಭೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯಲಿದೆ ಎಂದು ಘೋಷಿಸಲಾಗಿತ್ತು.

ಈ ಹಿನ್ನಲೆಯಲ್ಲಿ, ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಶರದ್ ಪವಾರ್, “ಪಾಟ್ನಾದಲ್ಲಿ ನಡೆದ ಪ್ರತಿಪಕ್ಷ ನಾಯಕರ ಸಭೆಯಿಂದ ಪ್ರಧಾನಿ ಮೋದಿ ಅಸ್ತವ್ಯಸ್ತರಾಗಿ ಕಾಣುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಮುಂದಿನ ಸಭೆ ಜುಲೈ 13 ಮತ್ತು 14 ರಂದು ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಲಿದೆ” ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶ ಶಿಮ್ಲಾದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ, ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ದೇಶ ರಾಜಕೀಯ

ಜುಲೈ 10-12ರ ನಡುವೆ ಮುಂದಿನ ಹಂತದ ವಿಪಕ್ಷ ನಾಯಕರ ಚರ್ಚೆ ನಡೆಯಲಿರುವ ಶಿಮ್ಲಾ ಸಭೆಯಲ್ಲಿ ಪಿಡಿಎಗೆ (Patriotic Democratic Alliance) ಅಂತಿಮ ರೂಪ ನೀಡಲಾಗುವುದು.

ಪ್ರಸ್ತಾವಿತ ವಿರೋಧ ಪಕ್ಷದ ಹೆಸರು ‘ದೇಶಭಕ್ತಿಯ ಪ್ರಜಾಸತ್ತಾತ್ಮಕ ಒಕ್ಕೂಟ’ ಅಥವಾ PDA ಆಗಿರಬಹುದು ಮತ್ತು ಮುಂದಿನ ತಿಂಗಳು ಶಿಮ್ಲಾದಲ್ಲಿ ನಡೆಯುವ ವಿರೋಧ ಪಕ್ಷಗಳ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿದು ಬಂದಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಅವರು ಶನಿವಾರ ಪಾಟ್ನಾದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಈ ಕುರಿತು ಪ್ರತಿಪಾದಿಸಿದರು ಎಂದು ಹೇಳಲಾಗುತ್ತಿದೆ. ಶಿಮ್ಲಾ ಸಭೆಯಲ್ಲಿ ಪಿಡಿಎಗೆ ಅಂತಿಮ ರೂಪ ನೀಡಲಾಗುವುದು ಎಂದು ಅವರು ಹೇಳಿದಾರೆ. ಜುಲೈ 10-12 ರ ನಡುವೆ ಪ್ರತಿಪಕ್ಷ ನಾಯಕರ ಮುಂದಿನ ಹಂತದ ಚರ್ಚೆ ನಡೆಯಲಿದೆ.

ಡಿ.ರಾಜಾ ಅವರು, ಭಾನುವಾರ ಮೈತ್ರಿಯ ಹೆಸರು ‘ಪಿಡಿಎ’ ಆಗಿರಬಹುದು ಎಂದು ಹೇಳಿದ್ದಾರೆ. ಆದರೆ, ಇನ್ನೂ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಒತ್ತಿ ಹೇಳಿದರು. ಹೊಸ ಮೈತ್ರಿಯನ್ನು ಪೇಟ್ರಿಯಾಟಿಕ್ ಡೆಮಾಕ್ರಟಿಕ್ ಅಲೈಯನ್ಸ್ (ಪಿಡಿಎ) ಎಂದು ಹೆಸರಿಸಬಹುದು ಎಂದು ನಾವು ಹೇಳಬಹುದು. ಅದರ ಬಗ್ಗೆ ನಾವು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಎನ್‌ಡಿಎಯನ್ನು ಸೋಲಿಸುವುದು ನಮ್ಮ ಪ್ರಾಥಮಿಕ ಉದ್ದೇಶವಾಗಿದೆ ಮತ್ತು ಎಲ್ಲಾ ವಿರೋಧ ಪಕ್ಷಗಳಿಗೆ ಅದರ ಬಗ್ಗೆ ಸ್ಪಷ್ಟತೆ ಇದೆ ಎಂದು ಅವರು ಹೇಳಿದರು.

ಪ್ರಸ್ತಾವಿತ ವೇದಿಕೆಗೆ ಬರುವ ವಿರೋಧ ಪಕ್ಷಗಳು ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಸಿದ್ಧಾಂತವನ್ನು ಹೊಂದಿರುತ್ತವೆ ಮತ್ತು ಹೊಸ ವೇದಿಕೆಯ ಹೆಸರು ಅದರ ಪ್ರತಿಬಿಂಬವನ್ನು ಹೊಂದಿರುತ್ತದೆ ಎಂದು ರಾಜಾ ಹೇಳಿದ್ದಾರೆ. “ತಮಿಳುನಾಡಿನಲ್ಲಿ ಸೆಕ್ಯುಲರ್ ಡೆಮಾಕ್ರಟಿಕ್ ಫ್ರಂಟ್ ಇದೆ. ಆದರೆ, ಬಿಹಾರದಲ್ಲಿ ಮಹಾಘಟಬಂಧನ್ ಇದೆ. ಆದ್ದರಿಂದ, ಸಂಯೋಜಿತ ವಿರೋಧವಾಗಿ ನಿಮ್ಮ ಬದ್ಧತೆಯನ್ನು ಹಂಚಿಕೊಳ್ಳುವ ಹೆಸರನ್ನು ನಾವು ಹೊಂದಿದ್ದೇವೆ ”ಎಂದು ಅವರು ಹೇಳಿದ್ದಾರೆ.

2004ರಲ್ಲಿ, ಸಾರ್ವತ್ರಿಕ ಚುನಾವಣೆಯ ನಂತರ, ಕಾಂಗ್ರೆಸ್, ಎಡ ಮತ್ತು ಇತರ ಪ್ರಾದೇಶಿಕ ಪಕ್ಷಗಳು ಕೇಂದ್ರದಲ್ಲಿ ಸರ್ಕಾರ ರಚಿಸಲು ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅನ್ನು ರಚಿಸಿಕೊಳ್ಳಲಾಯಿತು. ಬಿಹಾರದಲ್ಲಿ, ಆರ್‌ಜೆಡಿ-ಜೆಡಿ(ಯು), ಕಾಂಗ್ರೆಸ್ ಮತ್ತು ಎಡಪಕ್ಷಗಳು 2015ರ ವಿಧಾನಸಭಾ ಚುನಾವಣೆಯ ಮೊದಲು ಮಹಾ ಮೈತ್ರಿ ಅಥವಾ ಮಹಾಘಟಬಂಧನ್ ಅನ್ನು ರಚಿಸಿ ಒಟ್ಟಿಗೆ ಸೇರಿಕೊಂಡವು.

ಡಿ.ರಾಜಾ ಅವರ ಘೋಷಣೆ, ಪಾಟ್ನಾ ಸಭೆಯ ಒಂದು ದಿನದ ನಂತರ ಹೊರ ಬರುತ್ತಿದೆ, ಪ್ರಸ್ತಾವಿತ ವೇದಿಕೆಗೆ ಔಪಚಾರಿಕ ರೂಪ ನೀಡುವ ಕಸರತ್ತು ಈಗಾಗಲೇ ಮುಂದುವರೆದಿದೆ. ಮತ್ತು ಶಿಮ್ಲಾ ಸಭೆಯು ಅದರ ರಚನೆ ಮತ್ತು ವಿವಿಧ ಕ್ಷೇತ್ರಗಳ ನಡುವೆ ಸೀಟು ಹಂಚಿಕೆಯ ವಿವಿಧ ಅಂಶಗಳ ಮೇಲೆ ಮುದ್ರೆ ಹಾಕುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಪ್ರಾಸಂಗಿಕವಾಗಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಪತ್ರಿಕಾಗೋಷ್ಠಿಯ ತಮ್ಮ ಭಾಷಣದಲ್ಲಿ “ಅವರೆಲ್ಲರೂ ದೇಶದ ಪ್ರಜೆಗಳಾಗಿರುವುದರಿಂದ ಅವರನ್ನು ‘ವಿರೋಧ ಪಕ್ಷದವರು’ ಎಂದು ಕರೆಯಬಾರದು ಅವರನ್ನು ‘ದೇಶಭಕ್ತರು’ ಎಂದು ಕರೆಯಬೇಕು” ಎಂದು ಒತ್ತಾಯಿಸಿದ್ದರು.

ದೇಶ ರಾಜಕೀಯ

ಬಿಹಾರದ ಹಣಕಾಸು ಸಚಿವ ವಿಜಯ್ ಚೌಧರಿ ಸಂಬಂಧಿಕರು ಹಾಗೂ ರಾಜ್ಯದ ದೊಡ್ಡ ಉದ್ಯಮಿಯೂ ಆಗಿರುವ ಅಜಯ್ ಕುಮಾರ್ ಸಿಂಗ್ ಅವರ ಬೇಗುಸರಾಯ್ ನಿವಾಸದ ಮೇಲೆ ಇಂದು ಇಡಿ, ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

ಆದಾಯ ತೆರಿಗೆ (ಐಟಿ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ತಂಡಗಳು ಇಂದು (ಜೂನ್ 22) ಬಿಹಾರದ ಹಣಕಾಸು ಸಚಿವ ವಿಜಯ್ ಕುಮಾರ್ ಚೌಧರಿ ಅವರ ಸೋದರಮಾವ ಅಜಯ್ ಕುಮಾರ್ ಸಿಂಗ್ ಅವರ ಬೇಗುಸರಾಯ್ ಪ್ರದೇಶದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿವೆ.

ಅಜಯ್ ಸಿಂಗ್, ಅಲಿಯಾಸ್ ಕರು ಯಾದವ್, ಜೆಡಿಯು ರಾಜ್ಯ ಅಧ್ಯಕ್ಷ ಲಾಲನ್ ಸಿಂಗ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಬೇಗುಸರಾಯ್‌ನ ಶ್ರೀಕೃಷ್ಣ ಪ್ರದೇಶದಲ್ಲಿರುವ ಅಜಯ್‌ಸಿಂಗ್ ನಿವಾಸದ ಮೇಲೆ ಇಂದು ದಾಳಿ ನಡೆಸಲಾಗಿದೆ.

ಐಟಿ ಮತ್ತು ಇಡಿ ಅಧಿಕಾರಿಗಳು ಬೆಳಗ್ಗೆ 6:00 ಗಂಟೆ ಸುಮಾರಿಗೆ ಉದ್ಯಮಿಯಾಗಿರುವ ಅಜಯ್ ಕುಮಾರ್ ಸಿಂಗ್ ಮನೆಗೆ ತಲುಪಿ ದಾಳಿ ನಡೆಸಿದ್ದಾರೆ. ದಾಳಿಯ ನಿಖರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬೇಗುಸರೈ ಆಡಳಿತ ಮಂಡಳಿಯಿಂದ ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಜೂನ್ 23ರ ವಿರೋಧ ಪಕ್ಷಗಳ ಸಭೆಗೆ ಮುನ್ನ ಕೇಂದ್ರದ ನಿರ್ದೇಶನದ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಜೆಡಿಯು ಮೂಲಗಳು ಹೇಳಿವೆ.