ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Parliament Election Archives » Dynamic Leader
October 23, 2024
Home Posts tagged Parliament Election
ರಾಜಕೀಯ

ಬೆಂಗಳೂರು: ಜನರ ಬದುಕಿಗೆ ಸಂಬಂಧಿಸಿದ ನಿರುದ್ಯೋಗ, ಬಡತನ, ಬೆಲೆಯೇರಿಕೆ, ಬರಪೀಡಿತರಿಗೆ ನೆರವು ಈ ಯಾವ ಪ್ರಶ್ನೆಗಳಿಗೂ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಉತ್ತರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಒಂದಷ್ಟು ಹೊಸ ಸುಳ್ಳುಗಳು ಮತ್ತು ಭಾವನಾತ್ಮಕ ವಿಚಾರಗಳು ಬಿಟ್ಟರೆ ಮೋದಿಯವರ ಬತ್ತಳಿಕೆಯಲ್ಲಿ ಯಾವ ಬಾಣಗಳೂ ಉಳಿದಿಲ್ಲ, ಕಳೆದ ಹತ್ತು ವರ್ಷಗಳಲ್ಲಿ ಅಭಿವೃದ್ಧಿ ಎಂಬುದು ಮೋದಿಯವರ ಆಡಳಿತದ ಹತ್ತಿರವೂ ಸುಳಿದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಕಾಲದ ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಿದ್ದು, ಭಾರತದ ಭೂಭಾಗವನ್ನು ಚೀನಾಗೆ ಬಿಟ್ಟುಕೊಟ್ಟು ತಣ್ಣಗೆ ಕೂತಿದ್ದು, ಐಟಿ, ಇಡಿ ಮೂಲಕ ಬೆದರಿಸಿ ಉದ್ಯಮಿಗಳು, ಭ್ರಷ್ಟರಿಂದ ಸುಲಿಗೆ ಮಾಡಿದ್ದು, ನಾಲ್ಕಾರು ರಾಜ್ಯಗಳಲ್ಲಿ ಆಪರೇಷನ್ ಕಮಲ ಮಾಡಿ ಸರ್ಕಾರ ಬೀಳಿಸಿದ್ದು ಹೀಗೆ ಮೋದಿಯವರ ದುರಾಡಳಿತದ ಪಟ್ಟಿ ಮಾಡುತ್ತಾ ಹೋದರೆ ಅದಕ್ಕೆ ಕೊನೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ.

ದೇಶ

ಎಐ ತಂತ್ರಜ್ಞಾನದ ಮೂಲಕ ರಚಿತವಾದ ನಕಲಿ ರಾಜಕೀಯ ಜಾಹೀರಾತುಗಳು, ಡೀಪ್‌ಫೇಕ್ ಆಡಿಯೊಗಳು ಮತ್ತು ವೀಡಿಯೊಗಳು ಮತದಾರರನ್ನು ದಾರಿ ತಪ್ಪಿಸಬಹುದು ಎಂದು ಮೈಕ್ರೋಸಾಫ್ಟ್ ಎಚ್ಚರಿಸಿದೆ!

ಭಾರತದಲ್ಲಿ ದೇಶಾದ್ಯಂತ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆಯು ಏಪ್ರಿಲ್ 19 ರಂದು ಪ್ರಾರಂಭವಾಗಲಿದ್ದು, 7ನೇ ಹಂತವು ಜೂನ್ 1 ರಂದು ಕೊನೆಗೊಳ್ಳಲಿದೆ. ಈ ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಎಐ (AI) ತಂತ್ರಜ್ಞಾನದೊಂದಿಗೆ ಚೀನಾ ಚುನಾವಣೆಗಳನ್ನು ಅಸ್ಥಿರಗೊಳಿಸುವ ಸಂಚು ರೂಪಿಸಿದೆ ಎಂದು ಮೈಕ್ರೋಸಾಫ್ಟ್ ಎಚ್ಚರಿಸಿದೆ.

ತೈವಾನ್‌ನಲ್ಲಿ ಇತ್ತೀಚೆಗೆ ನಡೆದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲು ಎಐ ತಂತ್ರಜ್ಞಾನವನ್ನು ಬಳಸಲು ಚೀನಾ ಪ್ರಯತ್ನಿಸಿದ್ದು, ಅಮೆರಿಕಾದಲ್ಲಿ ಪ್ರಸ್ತುತ ನಡೆಯುತ್ತಿರುವ ಚುನಾವಣಾ ಪ್ರಚಾರದ ಮೇಲೆಯೂ ಪ್ರಭಾವ ಬೀರಲು ಈ ಚೀನೀ ಗುಂಪುಗಳು ಪ್ರಯತ್ನಿಸುತ್ತಿವೆ ಎಂದು ಮೈಕ್ರೋಸಾಫ್ಟ್ ಇಂಟೆಲಿಜೆನ್ಸ್ ಗ್ರೂಪ್ ಎಚ್ಚರಿಸಿದೆ.

ಎಐ ತಂತ್ರಜ್ಞಾನದ ಮೂಲಕ ರಚಿತವಾದ ನಕಲಿ ರಾಜಕೀಯ ಜಾಹೀರಾತುಗಳು, ಡೀಪ್‌ಫೇಕ್ ಆಡಿಯೊಗಳು ಮತ್ತು ವೀಡಿಯೊಗಳು ಮತದಾರರನ್ನು ದಾರಿ ತಪ್ಪಿಸಬಹುದು ಎಂದು ಮೈಕ್ರೋಸಾಫ್ಟ್ ಎಚ್ಚರಿಸಿದೆ.

ಈ ಎಐ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳ ಹೇಳಿಕೆಗಳು ಮತ್ತು ವಿವಿಧ ವಿಷಯಗಳ ಬಗ್ಗೆ ಅವರ ನಿಲುವುಗಳನ್ನು ಜನರಲ್ಲಿ ತಪ್ಪಾಗಿ ಹರಡಿಸಿ, ಜನರನ್ನು ತಪ್ಪುದಾರಿಗೆಳೆಯಬಹುದು. ಹಾಗಾಗಿ ಆ ಸಂದೇಶಗಳನ್ನು ಪರಿಶೀಲಿಸದೇ ಅನುಮತಿಸಿದರೆ ಮತದಾರರು ಸರಿಯಾದ ನಿರ್ಧಾರ ತೆಗೆದುಕೊಳ್ಳದಿರುವ ಸಾಧ್ಯತೆಗಳು ಇದೆ.

ಅಲ್ಲದೆ, “ಚೀನಾ ಸರ್ಕಾರದ ಬೆಂಬಲಿತ ಸೈಬರ್ ಗುಂಪುಗಳು ಉತ್ತರ ಕೊರಿಯಾದ ಸಹಾಯದಿಂದ 2024ರಲ್ಲಿ ನಡೆಯಲಿರುವ ವಿವಿಧ ಚುನಾವಣೆಗಳನ್ನು ಹಾಳುಮಾಡಲು ಯೋಜಿಸುತ್ತಿವೆ. ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಎಐ ತಂತ್ರಜ್ಞಾನದ ಮೂಲಕ ರಚಿತವಾದ ಅಭಿಪ್ರಾಯಗಳನ್ನು ಹರಡಿಸಿ ಸಾರ್ವಜನಿಕ ಅಭಿಪ್ರಾಯಗಳನ್ನು ಬದಲಾಯಿಸಲು ಯೋಜಿಸಿದ್ದಾರೆ” ಎಂದು ಮೈಕ್ರೋಸಾಫ್ಟ್ ಇಂಟೆಲಿಜೆನ್ಸ್ ಗ್ರೂಪ್ ಎಚ್ಚರಿಸಿದೆ. ಆದರೂ, ಭಾರತದಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮೈಕ್ರೋಸಾಫ್ಟ್ ಸಹ ಸಂಸ್ಥಾಪಕರಲ್ಲಿ ಒಬ್ಬರಾದ ಬಿಲ್ ಗೇಟ್ಸ್ ಕಳೆದ ತಿಂಗಳು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ಸಾಮಾಜಿಕ ಪ್ರಗತಿ, ಮಹಿಳೆಯರ ಅಭಿವೃದ್ಧಿ ಹಾಗೂ ಆರೋಗ್ಯದಲ್ಲಿ ಎಐ ತಂತ್ರಜ್ಞಾನವನ್ನು ಹೇಗೆ ಅತ್ಯುತ್ತಮವಾಗಿ ಬಳಸಿಕೊಳ್ಳುವುದು ಎಂಬುದರ ಬಗ್ಗೆ ಇಬ್ಬರೂ ಚರ್ಚಿಸಿದ್ದು ಗಮನಾರ್ಹ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಬಿಜೆಪಿ ಗೆಲ್ಲಬಹುದಾದ ಸ್ಥಾನಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಲಿದೆ; ಹಾಗಾಗಿ “ಇಂಡಿಯಾ” ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಇದೆ. ಆದರೆ, ಯಾರೇ ಅಧಿಕಾರಕ್ಕೆ ಬಂದರೂ ಕೊಟ್ಟ ಭರವಸೆಗಳನ್ನು ಈಡೇರಿಸಬೇಕು; ಮರೆಯಬಾರದು.

ಅಖಿಲ ಕಾಂಗ್ರೆಸ್ ಸಮಿತಿಯು ಚುನಾವಣಾ ಭರವಸೆಗಳನ್ನು ಸಿದ್ಧಪಡಿಸಲು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ದೇಶದೆಲ್ಲೆಡೆ ಸಂಚರಿಸಿ ಹಲವರಿಂದ ಸಲಹೆ ಪಡೆಯಲಾಯಿತು. ವೆಬ್‌ಸೈಟ್ ಮೂಲಕವೂ ಪ್ರತಿಕ್ರಿಯೆಗಳನ್ನು ಪಡೆಯಲಾಯಿತು. ಅದರ ಆಧಾರದ ಮೇಲೆ ಭರವಸೆಗಳನ್ನು ಸಿದ್ಧಪಡಿಸಿ ಮೊನ್ನೆ ಪ್ರಕಟಿಸಲಾಯಿತು.

ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಆಗ ಮಾತನಾಡಿದ ಪಿ.ಚಿದಂಬರಂ, “ಕಳೆದ 10 ವರ್ಷಗಳಲ್ಲಿ ಯಾರನೆಲ್ಲ ಹೊರಗಿಡಲಾಯಿತೋ ಅಂತಹವರಿಗೆಲ್ಲ ನ್ಯಾಯ ಕೊಡಿಸಲು ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ” ಎಂದರು.

ಪ್ರಣಾಳಿಕೆಯಲ್ಲಿ, ದೇಶಾದ್ಯಂತ ಸಾಮಾಜಿಕ-ಆರ್ಥಿಕ ಮತ್ತು ಜಾತಿವಾರು ಸಮೀಕ್ಷೆ ನಡೆಸಲಾಗುವುದು. ರಾಜ್ಯ ಸರ್ಕಾರಗಳು ಬಯಸಿದಲ್ಲಿ NEET, CUET ನಂತಹ ಪರೀಕ್ಷೆಗಳನ್ನು ನಡೆಸಿಕೊಳ್ಳಬಹುದು. ಪ್ರತಿ ಕುಟುಂಬದಲ್ಲಿ ಒಬ್ಬ ಮಹಿಳೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ ನೀಡಲಾಗುವುದು. ಎಲ್ಲ ಜಾತಿಗಳಿಗೂ ಶೇ.10ರಷ್ಟು ಮೀಸಲಾತಿಯನ್ನು ವಿಸ್ತರಿಸಲಾಗುವುದು. ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರಲಾಗುವುದು.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸಿದ ನಂತರವೇ ಜಾರಿಗೆ ತರಲಾಗುವುದು. 12ನೇ ತರಗತಿವರೆಗೆ ಕಡ್ಡಾಯ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು. ಒಂದು ದೇಶ, ಒಂದು ಚುನಾವಣಾ ವ್ಯವಸ್ಥೆಯನ್ನು ತರುವುದಿಲ್ಲ. ಚುನಾವಣಾ ಪತ್ರಗಳ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು. ಎಂ.ಎಸ್.ಸ್ವಾಮಿನಾಥನ್ ಅವರ ಶಿಫಾರಸ್ಸು ಜಾರಿಗೆ ತರಲಾಗುವುದು. ಸರ್ಕಾರಿ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಮನ್ನಾ ಮಾಡಲಾಗುವುದು.

ಪಾಂಡಿಚೇರಿಗೆ ರಾಜ್ಯ ಸ್ಥಾನಮಾನ ನೀಡಲಾಗುವುದು. ಮಾಧ್ಯಮ ಸ್ವಾತಂತ್ರ್ಯವನ್ನು ಮರುಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. 10 ವರ್ಷಗಳಲ್ಲಿ ಯಾವುದೇ ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಬಿಜೆಪಿ ಜಾರಿಗೊಳಿಸಿದ ಕಾನೂನುಗಳನ್ನು ವಿಶ್ಲೇಷಿಸಿ ಬದಲಾವಣೆಗಳನ್ನು ಮಾಡಲಾಗುವುದು. ನೋಟು ಅಮಾನ್ಯೀಕರಣ, ರಫೇಲ್ ಡೀಲ್, ಪೆಗಾಸಸ್ ಬೇಹುಗಾರಿಕೆ, ಚುನಾವಣಾ ಬಾಂಡ್ ಯೋಜನೆ ಕುರಿತು ತನಿಖೆ ನಡೆಸಲಾಗುವುದು. ಬಿಜೆಪಿ ಸೇರುವ ಮೂಲಕ ಕ್ರಿಮಿನಲ್ ಪ್ರಕರಣಗಳಿಂದ ಪಾರಾದವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲಾಗುವುದು.

ಜನರ ಆಹಾರ, ಉಡುಗೆ, ಪ್ರೇಮ ವಿವಾಹ ಮತ್ತು ಭಾರತದ ಯಾವುದೇ ಭಾಗದಲ್ಲಿ ಪ್ರಯಾಣ ಬೆಳಸಿ ವಾಸಿಸುವಂತಹ ಜನರ ವೈಯಕ್ತಿಕ ಸ್ವಾತಂತ್ರ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಸೇನಾ ನೇಮಕಾತಿಗಾಗಿ ‘ಅಗ್ನಿಪತ್’ ಯೋಜನೆಯನ್ನು ರದ್ದುಗೊಳಿಸಲಾಗುವುದು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ನೀಡಲಾಗುವ ವೇತನವನ್ನು ರೂ.400ಕ್ಕೆ ಹೆಚ್ಚಿಸಲಾಗುವುದು. ಚೀನಾ ಆಕ್ರಮಿಸಿಕೊಂಡಿರುವ ನಮ್ಮ ನೆಲದ ಭಾಗವನ್ನು ಪುನಃಸ್ಥಾಪಿಸಲು ಕ್ರಮ. ಜಮ್ಮು ಮತ್ತು ಕಾಶ್ಮೀರಕ್ಕೆ ತಕ್ಷಣವೇ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡಲಾಗುವುದು. ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು.

ಕಳೆದೆರಡು ಚುನಾವಣೆಗಳಲ್ಲಿ ಸೋತಿರುವ ಕಾಂಗ್ರೆಸ್‌ಗೆ ಈ ಭರವಸೆಗಳು ಫಲ ನೀಡುತ್ತವೆಯೇ?
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ, ಬಯಸಿರುವ ರಾಜ್ಯಗಳಲ್ಲಿ ಮಾತ್ರ ನೀಟ್ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದೆ. ಇದು ದೇಶಾದ್ಯಂತ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ದಕ್ಷಿಣದ ರಾಜ್ಯಗಳಲ್ಲಿ ಮಾತ್ರ ಕಟ್ಟುನಿಟ್ಟಿನ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಉತ್ತರ ಭಾರತದಲ್ಲಿ ಹಾಗಲ್ಲ; ಶಾಲೆಗಳಲ್ಲಿ ನಡೆಯುವ ಪರೀಕ್ಷೆಗಳಲ್ಲಿ ಕೂಡ ಅಕ್ರಮ ನಡೆಸಲಾಗುತ್ತದೆ. ಇದನ್ನು ಸಾಕ್ಷರ ಕುಟುಂಬಗಳು ಸ್ವಾಗತಿಸಿವೆ. ಜನರ ಆಹಾರ, ಉಡುಗೆ, ಪ್ರೇಮ ವಿವಾಹ ಮತ್ತು ಭಾರತದ ಯಾವುದೇ ಭಾಗದಲ್ಲಿ ಪ್ರಯಾಣ ಬೆಳಸಿ ವಾಸಿಸುವಂತಹ ಜನರ ವೈಯಕ್ತಿಕ ಸ್ವಾತಂತ್ರ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಹಾಗಾಗಿ ಇದು ಎಲ್ಲಾ ವರ್ಗದ ಜನರನ್ನು ಆಕರ್ಷಿಸಲಿದೆ. ಅದೇ ರೀತಿ ಒಂದು ಭಾಷಾ ನೀತಿಯನ್ನು ಜಾರಿಗೆ ತರಲು ಬಿಜೆಪಿ ಯೋಜಿಸಿದೆ. ಅದನ್ನು ತಡೆಯಲಿಕ್ಕಾಗಿ ಒಂದು ದೇಶ ಒಂದು ಚುನಾವಣೆಯನ್ನು ತರುವುದಿಲ್ಲ ಎಂದು ಹೇಳಲಾಗಿದೆ. ಕರ್ನಾಟಕದಂತಹ ರಾಜ್ಯಗಳಿಂದ ಹೆಚ್ಚಿನ ಯುವಕರು ಸೇನೆಗೆ ಸೇರುತ್ತಿದ್ದರು. ಅವರನ್ನು ತಡೆಯಲಿಕ್ಕಾಗಿಯೇ ‘ಅಗ್ನಿಪತ್’ ಯೋಜನೆಯನ್ನು ಜಾರಿಗೆ ತರಲಾಯಿತು.

ಅದನ್ನು ರದ್ದುಪಡಿಸುವುದಾಗಿ ಹೇಳಿರುವುದು ಸ್ವಾಗತಾರ್ಹ. ಒಂದು ತಿಂಗಳ ಹಿಂದೆ ಪ್ರಕಟವಾದ ಸಮೀಕ್ಷೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ಹೇಳಲಾಗಿತ್ತು. ಆಗ ಕಾಂಗ್ರೆಸ್ ಬ್ಯಾಂಕ್ ಖಾತೆ ಸ್ಥಗಿತ, ಕೇಜ್ರಿವಾಲ್ ಬಂಧನದಂತಹ ಸಮಸ್ಯೆಗಳಿರಲಿಲ್ಲ. ಹಾಗಾಗಿ ಈಗ ಬಿಜೆಪಿ ಗೆಲ್ಲಬಹುದಾದ ಸ್ಥಾನಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಲಿದೆ; ಹಾಗಾಗಿ “ಇಂಡಿಯಾ” ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಇದೆ. ಆದರೆ ಯಾರೇ ಅಧಿಕಾರಕ್ಕೆ ಬಂದರೂ ಕೊಟ್ಟ ಭರವಸೆಗಳನ್ನು ಈಡೇರಿಸಬೇಕು; ಮರೆಯಬಾರದು.

ರಾಜಕೀಯ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಸಂಸತ್ತಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಹೇಳಿದರು.

ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು, ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. ಇವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರವನ್ನು ವ್ಯಾಪಕವಾಗಿ ಮಾಡುತ್ತಿದ್ದಾರೆ. ಆದರೆ, ಎಂ.ಲಕ್ಷ್ಮಣ್ ಅವರು ಅಪ್ಪಟ ಒಕ್ಕಲಿಗರು. ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ, ಆ ಕಾರಣಕ್ಕೇ ಲಕ್ಷ್ಮಣ್ ಅವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ನಮ್ಮ ನಾಡಿಗೆ ಪ್ರವಾಹ ಬಂದಾಗ ನರೇಂದ್ರ ಮೋದಿ ಬರಲಿಲ್ಲ; ಬರಗಾಲ ಬಂದಾಗಲೂ ಮೋದಿ ಬರಲಿಲ್ಲ. ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ; ಚುನಾವಣೆ ಬಂತು ನೋಡಿ – ಮೋದಿ ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಾರೆ ಎಂದು ವ್ಯಂಗ್ಯವಾಡಿದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ದೇವೇಗೌಡರು ಸಿದ್ದರಾಮಯ್ಯರಿಗೆ ಗರ್ವ ಇದೆ ಎನ್ನುತ್ತಿದ್ದಾರೆ.

ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ. ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಡಿದ ಜೆಡಿಎಸ್ ನವರು, ನನ್ನನ್ನೂ ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದು ಪುನರುಚ್ಚಿಸಿದರು.

ಆದ್ದರಿಂದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಬೇಕು. ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ ಎಂದು ಸವಾಲೆಸದರು.

ಪಶು ಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್,‌ ಚಾಮರಾಜ ಕ್ಷೇತ್ರದ ಶಾಸಕರಾದ ಹರೀಶ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ಮತ್ತು ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರುಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರು ಹಾಗೂ ಬ್ಲಾಕ್ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ಡಿ.ಸಿ.ಪ್ರಕಾಶ್

ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ಸದ್ಯದಲ್ಲೇ ಸಂಸತ್ ಚುನಾವಣೆ ನಡೆಯಲಿದೆ. ಕಳೆದ 10 ವರ್ಷಗಳಲ್ಲಿ ಬಿಜೆಪಿ ಜನರಿಗೆ ಯಾವುದೇ ಒಳ್ಳೆಯ ಕಾರ್ಯಕ್ರಮಗಳನ್ನು ತಂದಿಲ್ಲವಾದ್ದರಿಂದ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ರಾಮಮಂದಿರವನ್ನು ಕೈಗೆತ್ತುಕೊಂಡಿತು.

ಆರಂಭದಲ್ಲಿ ಉತ್ತರದ ರಾಜ್ಯಗಳಲ್ಲಿ ಇದಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಈ ಬಾರಿಯ ಚುನಾವಣೆಯಲ್ಲಿ 400 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಮೋದಿ ಸೇರಿದಂತೆ ಬಿಜೆಪಿ ನಾಯಕರು ಅಬ್ಬರಿಸಿದ್ದರು. ಆದರೆ ಇತ್ತೀಚಿನ ಚುನಾವಣಾ ಬಾಂಡ್ ಹಗರಣ ಬಿಜೆಪಿಯ ನಿಜ ಮುಖವನ್ನು ಬಯಲು ಮಾಡಿದೆ.

ಅಲ್ಲದೆ ಈ ಬಾರಿಯ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಒಗ್ಗೂಡದಂತೆ ಬಿಜೆಪಿ ವಿಪಕ್ಷ ನಾಯಕರನ್ನು ಜಾರಿ ಇಲಾಖೆ ಹಾಗೂ ಐಟಿ ಇಲಾಖೆಯ ಮೂಲಕ ಬಂಧಿಸಿದೆ. ಆದರೂ ವಿರೋಧ ಪಕ್ಷಗಳು “ಇಂಡಿಯಾ” ಮೈತ್ರಿಕೂಟವನ್ನು ರಚಿಸಿಕೊಂಡು ದೇಶಾದ್ಯಂತ ಬಲಗೊಳ್ಳುತ್ತಿವೆ.

ಇದರಿಂದಾಗಿ ಆರಂಭದಲ್ಲಿ ತಮಿಳುನಾಡು, ಕೇರಳದಂತಹ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಪ್ರಧಾನಿ ಮೋದಿ, ಕಳೆದ 6 ದಿನಗಳಿಂದ ಪ್ರಚಾರದಲ್ಲಿ ಹೆಚ್ಚು ಆಸಕ್ತಿ ತೋರಿಸದೆ ಬೇರೆಯ ಚಿಂತೆಯಲ್ಲಿ ಮುಳುಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಸೋಲು ಖಚಿತ ಎಂಬ ಕಾರಣದಿಂದ ಬಿಜೆಪಿಯ ಪ್ರಮುಖ ನಾಯಕರು ಕೂಡ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ ಎಂದೂ ಹೇಳಲಾಗುತ್ತಿದೆ.

ಗುಪ್ತಚರ ಸಂಸ್ಥೆಗಳು ನೀಡಿರುವ ಮಾಹಿತಿ ಪ್ರಕಾರ ದೇಶಾದ್ಯಂತ ಬಿಜೆಪಿ ವಿರೋಧಿ ಅಲೆ ಎದ್ದಿದ್ದು, ದಕ್ಷಿಣ ರಾಜ್ಯಗಳಲ್ಲದೇ ಉತ್ತರದ ರಾಜ್ಯಗಳಲ್ಲೂ ಬಿಜೆಪಿಗೆ ಸೋಲು ಎದುರಾಗಲಿದೆ ಎಂದು ವರದಿಗಳಾಗಿವೆ. ಇದರಿಂದಲೇ ಚುನಾವಣಾ ಪ್ರಚಾರದಲ್ಲಿ ಹೆಚ್ಚು ಆಸಕ್ತಿ ತೋರಿಸದೆ ಪ್ರಧಾನಿ ನರೇಂದ್ರ ಮೋದಿ ದೂರ ಉಳಿದಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜಕೀಯ

ಬೆಂಗಳೂರು: ಈ ಬಾರಿ ಕರ್ನಾಟಕದಲ್ಲಿ “ಇಂಡಿಯಾ” ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ತಮ್ಮ ಬೆಂಬಲ ಎಂದು “ಕರ್ನಾಟಕ ತಮಿಳರ ಸಂಘ” ತೀರ್ಮಾನಿಸಿದೆ ಎಂದು ಅದರ ಅಧ್ಯಕ್ಷ ಪ್ರಕಾಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸುಮಾರು 80 ಲಕ್ಷ ತಮಿಳರಿದ್ದಾರೆ. ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ,  ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಮುಂತಾದ ಜಿಲ್ಲೆಗಳಲ್ಲಿ ಮತ್ತು ಕೋಲಾರದ ಕೆಜಿಎಫ್‌ನಲ್ಲಿ ವ್ಯಾಪಕವಾಗಿ ವಾಸಿಸುತ್ತಿದ್ದಾರೆ. ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಶಿವಮೊಗ್ಗ ಮತ್ತು ಕೋಲಾರದ ಕೆಜಿಎಫ್‌ನಲ್ಲಿ ತಮಿಳರೆ ನಿರ್ಣಾಯಕರು.

ಆದರೆ, ತಮಿಳರಿಗೆ ಇಲ್ಲಿ ಯಾವುದೇ ರಾಜಕೀಯ ಪ್ರಾತಿನಿತ್ಯ ನೀಡುವುದಿಲ್ಲ. ಇಲ್ಲಿ ಎಲ್ಲರಿಗೂ ಜಾತಿ ಆಧಾರದ ಮೇಲೆಯೆ ಅವಕಾಶ ನೀಡಲಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಯಾರೊಬ್ಬರೂ ತಮ್ಮ ಜಾತಿಯ ಮತಗಳಿಂದ ಗೆದ್ದು ಬರುವುದಿಲ್ಲ. ಗೆಲ್ಲಬೇಕಾದರೆ ಅವರಿಗೆ ತಮಿಳರು ಮತ್ತು ಕೊಳಗೇರಿ ಜನರ ಮತಗಳು ಬೇಕು. ಬೆಂಗಳೂರಿನ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ಸುಮಾರು ಶೇ.60ರಷ್ಟು ಜನ ತಮಿಳು ಭಾಷಿಕರಾಗಿದ್ದಾರೆ ಎಂಬುದು ಇಲ್ಲಿ ಗಮನಾರ್ಹ.

ಕಳೆದ ರಾಜ್ಯ ಬಿಜೆಪಿ ಸರ್ಕಾರದಲ್ಲಿ, ಮತಾಂತರ ನಿಷೇಧ ಕಾಯಿದೆ, ಗೋಹತ್ಯೆ ನಿಷೇಧ ಕಾಯಿದೆ ಮುಂತಾದ ಸಂವಿಧಾನ ವಿರೋಧಿ ಕಾಯಿದೆಗಳನ್ನು ತಂದು ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದಬ್ಬಾಳಿಕೆ ಮಾಡಲಾಯಿತು. ಇದರಿಂದ ಕರ್ನಾಟಕದಲ್ಲಿ ಮುಸ್ಲಿಮರು ಮಾತ್ರವಲ್ಲ ತಮಿಳು ಕ್ರೈಸ್ತರು ಮತ್ತು ಆದಿ ದ್ರಾವಿಡ (ತಮಿಳರು) ಸಮುದಾಯವು ಕೂಡ ದಬ್ಬಾಳಿಕೆಯನ್ನು ಎದುರಿಸಬೇಕಾಯಿತು.

ಬೆಂಗಳೂರು ಮಹಾನಗರದ ಸುತ್ತಮುತ್ತ ಮತ್ತು ಕೆಜಿಎಫ್‌ನಲ್ಲಿರುವ ಕ್ರೈಸ್ತರಲ್ಲಿ ಶೇ.80ರಷ್ಟು ಜನ ತಮಿಳು ಕ್ರೈಸ್ತರಾಗಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃದ ಕಾಂಗ್ರೆಸ್ ಸರ್ಕಾರ ಬಂದಮೇಲೆ ರಾಜ್ಯದಲ್ಲಿ ಅಲ್ಪಸಂಖ್ಯಾತರು ವಿಶೇಷವಾಗಿ ತಮಿಳು ಕ್ರೈಸ್ತರು ಹಾಗೂ ಆದಿ ದ್ರಾವಿಡ ಸಮುದಾಯವು ನಿಟ್ಟುಸಿರು ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

2024-25ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ರೂ.500 ಕೋಟಿ ನಿರೀಕ್ಷಿಸಲಾಗಿತ್ತು. ಆದರೆ, ರೂ.200 ಕೋಟಿಯಷ್ಟೆ ಘೋಷಣೆ ಮಾಡಲಾಗಿದೆ. ತಮಿಳು ಕ್ರೈಸ್ತರಿಗೆ ಇದರಲ್ಲೂ ಸ್ವಲ್ಪ ಮಟ್ಟಿಗೆ ಪಾಲು ದೊರೆತಿದೆ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ 5 ಗ್ಯಾರಂಟಿ (ಅನ್ನ ಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಉಚಿತ ಪ್ರಯಾಣ, ಯುವನಿಧಿ)  ಯೋಜನೆಯಿಂದ ಕರ್ನಾಟಕ ತಮಿಳರು ಹೆಚ್ಚಾಗಿ ಅನುಕೂಲ ಪಡೆದಿದ್ದಾರೆ. ವಿಶೇಷವಾಗಿ ಕೊಳಗೇರಿಗಳಲ್ಲಿ ವಾಸವಾಗಿರುವ ಅಸಂಘಟಿ ತಮಿಳು ಕೂಲಿ ಕಾರ್ಮಿಕರು ಹೆಚ್ಚಿನ ರೀತಿಯಲ್ಲಿ ಅನುಕೂಲತೆಯನ್ನು ಪಡೆದುಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ, ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು, ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ತಮಿಳರ ಮಧ್ಯೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಶೋಭಾ ಕರಂದ್ಲಾಜೆ ವಿರುದ್ಧ ತಮಿಳುನಾಡಿನಲ್ಲಿ ಪ್ರಕರಣಗಳು ದಾಖಲಾದವು. ಡಿಎಂಕೆ ದೂರಿನ ಮೇರೆಗೆ, ಕರ್ನಾಟಕದಲ್ಲೂ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. ಶೋಭಾ ಕರಂದ್ಲಾಜೆ ಅವರ ಈ ಹೇಳಿಕೆಯಿಂದ ಕರ್ನಾಟಕ ತಮಿಳರು ಆಘಾತಕ್ಕೆ ಒಳಗಾಗಿದ್ದಾರೆ.

ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಮಾನ ಅವಕಾಶಕ್ಕಾಗಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಜಾತಿಗಣತಿ ನಡೆಸುವ ಆಶ್ವಾಸನೆಯನ್ನು ನೀಡಿದೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ಮತ್ತು ಅತೀ ಹಿಂದುಳಿದ, ಹಾಗೂ ಅಲ್ಪಸಂಖ್ಯಾತ ಸಮುದಾಯಗಳು ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಹಾಗೂ ಆರ್ಥಿಕವಾಗಿ ಇನ್ನು ಹೆಚ್ಚಾಗಿ ಪ್ರಗತಿ ಹೊಂದಲು ಅನುಕೂಲವಾಗಬಹುದು; ಇದು ಸ್ವಾಗತಾರ್ಹ.

ಮೋದಿ ಸರ್ಕಾರಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ; ಅತ್ಯಾಚಾರವೆಂಬುದು ಸಾಮಾನ್ಯವಾಗಿದೆ. ಅಲ್ಪಸಂಖ್ಯಾತರಿಗೆ ಭದ್ರತೆಯಿಲ್ಲ. ಬಿಜೆಪಿ ಸಂಸದರ ವರ್ತನೆಗೆ ಕಡಿವಾಣವಿಲ್ಲ. ಅವರ ನಾಲಿಗೆಯಲ್ಲಿ ಹಿಡಿತವಿಲ್ಲ; ಸಂವಿಧಾನ ಬದಲಿಸುವ ಬಗ್ಗೆ ಮಾತನಾಡುತ್ತಾರೆ. ರಾಜ್ಯದ, ತಮ್ಮ ಕ್ಷೇತ್ರದ ಬಗ್ಗೆ ಕಾಳಜಿಯಿಲ್ಲ; ಅವರಿಗೆ ಜನರ ಸಮಸ್ಯೆಗಳು ಅರ್ಥವಾಗುತ್ತಿಲ್ಲ. ಒಟ್ಟಾರೆಯಾಗಿ ಪ್ರಧಾನಿ ಮೋದಿಯ ಮುಂದೆ ಮಾತನಾಡುವುದೇ ಇಲ್ಲ. ಇಂತಹ ಸಂಸದರು ಮತ್ತೊಮ್ಮೆ ಬೇಕೆ?

ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಏರಿಕೆ, ಜಿಎಸ್‌ಟಿಯಲ್ಲಿ ತಾರತಮ್ಯ, ಉದ್ಯೋಗದ ನೇಮಕಾತಿಯಲ್ಲಿ ಉತ್ತರದವರಿಗೆ ಆದ್ಯತೆ, ಅತಿವೃಷ್ಟಿ-ಅನಾವೃಷ್ಟಿಯ ಕಾಲದಲ್ಲಿ ಅನುದಾನದ ನಿರಾಕರಣೆ, ಹಣ ನೀಡುತ್ತೇವೆ ಎಂದರೂ ರಾಜ್ಯಕ್ಕೆ ಅಕ್ಕಿ ಕೊಡದೆ “ಭಾರತ್ ರೈಸ್” ಹೆಸರಿನಲ್ಲಿ ಹಕ್ಕಿಯನ್ನು ಕಡಿಮೆ ಬೆಲೆಗೆ ನೇರವಾಗಿ ಮಾರಟ ಮಾಡುವುದು ಮುಂತಾದ ಇನ್ನು ಹಲವಾರು ಜನವಿರೋಧಿ ಕಾರ್ಯಗಳಿಂದ ಜನ ಬೇಸತ್ತು ಹೋಗಿದ್ದಾರೆ.

ಆದ್ದರಿಂದ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕ ತಮಿಳರ ಸಂಘವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ತೀರ್ಮಾನವನ್ನು ಮಾಡಿದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಶಿವಮೊಗ್ಗ ಮತ್ತು ಕೋಲಾರದ ಕೆಜಿಎಫ್‌ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ತಿಗಳನ್ನು ಬೆಂಬಲಿಸಿ ಪ್ರಚಾರ ಮಾಡುವುದರೊಂದಿಗೆ ಅವರ ಗೆಲುವಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡುವುದೆಂದು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯ

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಪುಟ್ಟಣ್ಣನವರು ಜಯಗಳಿಸಿದ ಹಿನ್ನೆಲೆಯಲ್ಲಿ ಕೆಂಗೇರಿಯಲ್ಲಿ ಆಯೋಜಿಸಿದ್ದ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿರುವುದು, ನರೇಂದ್ರ ಮೋದಿ ಅವರನ್ನು ವಿಪರೀತ ಹೊಗಳುತ್ತಿರುವುದು ನನಗೆ ತುಂಬಾ ಆಶ್ಚರ್ಯ ಆಗಿದೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಬಯಸುತ್ತೇನೆ. ಬಿಜೆಪಿಗೆ ಯಾವತ್ತೂ ವಿರುದ್ಧವಾಗಿರುತ್ತೇವೆ” ಎಂದು ಈ ಹಿಂದೆ ದೇವೇಗೌಡರು ಹೇಳಿದ್ದುದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

“ಈಗ ತಮ್ಮ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇಂದು ನಾಡಿನ ಜನತೆ ಪ್ರಜ್ಞಾವಂತರಾಗಿದ್ದಾರೆ. ಇವರ ಹೇಳಿಕೆಗಳನ್ನು ಪರಿಶೀಲಿಸಿ ತುಲನೆ ಮಾಡುವಷ್ಟು ತಿಳಿವಳಿಕೆ ನಾಡಿನ ಜನರಿಗೆ ಬಂದಿದೆ. ರಾಜಕೀಯವಾಗಿ ದೇವೇಗೌಡರು ತಮ್ಮ ಕುಟುಂಬದ ಉಳಿವಿಗಾಗಿ ಯಾವುದೇ ನಿರ್ಧಾರಕ್ಕೆ ಬಂದರೂ ಜನರು ಕಣ್ಣುಮುಚ್ಚಿಕೊಂಡು ಅವರನ್ನು ಬೆಂಬಲಿಸಬೇಕು ಎನ್ನುವ ಸಂದರ್ಭ ಈಗ ಇಲ್ಲ” ಎಂದು ಹೇಳಿದರು.

“ಹಿಂದೆ ನಾನು ಜೆಡಿಎಸ್ ನಲ್ಲಿದ್ದಾಗ, ಪುಟ್ಟಣ್ಣನವರಿಗೆ ಶಿಕ್ಷಕರು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದ್ದು, ಚುನಾವಣೆಗೆ ನಿಲ್ಲುವುದಾಗಿ ತಿಳಿಸಿದ್ದರು. 2002ರಲ್ಲಿ ಜನರ ಆಶೀರ್ವಾದದಿಂದ ಜಯಗಳಿಸಿದರು. ನಂತರ ಐದು ಬಾರಿ ಗೆದ್ದಿದ್ದಾರೆ. ಜನರ ಧ್ವನಿಯಾಗಿ ಸಮರ್ಥವಾಗಿ ಕೆಲಸ ಮಾಡಿದ್ದು, ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದರೂ ಅವರನ್ನು ಬೆಂಬಲಿಸಿದ ಶಿಕ್ಷಕ ಸಮುದಾಯದ ಪ್ರಜ್ಞಾವಂತಿಕೆಗೆ ಮೆಚ್ಚುವಂತದ್ದು” ಎಂದು ಹೇಳಿದರು.

“ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್ ಅವರನ್ನು ಕಣಕ್ಕೆ 4 ಬಾರಿ ಇಳಿಸಲಾಗಿದೆ. ಈ ಕ್ಷೇತ್ರದಲ್ಲಿ ಅವರು ಖಂಡಿತ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ಬಿಜೆಪಿಯವರು ನರೇಂದ್ರ ಮೋದಿಯವರ ಹೆಸರಿನಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆಯೇ ಹೊರತು, ಬಿಜೆಪಿಯವರಿಗೆ ಜನರ ಬಳಿ ಹೋಗಲು ಕಾರಣಗಳೇ ಇಲ್ಲ. ನರೇಂದ್ರ ಮೋದಿಯವರ ಹೆಸರಿನ ಮೇಲೆ ಗೆಲ್ಲುತ್ತೇವೆ ಎಂದು  ಬಿಜೆಪಿ ಭಾವಿಸಿದೆ. ನರೇಂದ್ರ ಮೋದಿಯವರು ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಾದಯಾತ್ರೆ ಮಾಡಿದ್ದರೂ ನಮಗೆ 136 ಸ್ಥಾನಗಳು ದೊರೆತವು” ಎಂದು ಸಮರ್ಥಿಸಿಕೊಂಡರು.

“ಮೋದಿಯವರು ಪ್ರಚಾರ ಮಾಡಿದ್ದ ಯಾವ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲೇ ಇಲ್ಲ. ಹೀಗಾಗಿ ನರೇಂದ್ರ ಮೋದಿಯವರ ಹೆಸರಿನ ಮೇಲೆಯೇ ಗೆಲ್ಲುತ್ತೇವೆ ಎನ್ನುವ ಇವರಷ್ಟು ಮೂರ್ಖರು ಯಾರೂ ಇಲ್ಲ. ಕೊಟ್ಟ ಮಾತಿನಂತೆ ನಡೆದುಕೊಳ್ಳವವರು, ಕೆಲಸ ಮಾಡಿರುವವರಿಗೆ ತಾನೇ ಕೂಲಿ ಕೊಡುವುದು. ಗೇಯುವ ಎತ್ತಿಗೆ ಹುಲ್ಲು ಹಾಕಬೇಕು. ಕಳ್ಳ ಎತ್ತಿಗೆ ಹುಲ್ಲು ಹಾಕಬಾರದು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅವರು 28ಕ್ಕೆ 28 ಗೆಲ್ಲುತ್ತೇವೆ ಎಂದುಕೊಂಡಿದ್ದಾರೆ” ಎಂದು ವ್ಯಂಗ್ಯವಾಡಿದರು.

“ದೇವೇಗೌಡರು ನರೇಂದ್ರ ಮೋದಿ ಅವರನ್ನು ಈಗ ಹೊಗಳಿದ್ದೆ ಹೊಗಳಿದ್ದು. ನನಗೂ ಅವರಿಗೂ ಅವಿನಾಭಾವ ಸಂಬಂಧ ಇದೆ, ಜನ್ಮ ಜನ್ಮದ ಸಂಬಂಧವಿದೆ ಅಂತಲೂ ಎನ್ನುತ್ತಾರೆ. ಗೌಡರು ಹೀಗೇಕಾದರು ಎಂದು ಆಶ್ಚರ್ಯವಾಗಿದೆ. ಇದೇ ದೇವೇಗೌಡರು ನರೇಂದ್ರ ಮೋದಿಯವರು ಪುನಃ ಪ್ರಧಾನಿಯಾದರೆ ನಾನು ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಈಗ ಹೊಗಳುತ್ತಾರೆ. ಇದೆಂತಹ ದ್ವಂದ್ವ? ದೇಶದ ಪ್ರಧಾನಮಂತ್ರಿಯಾಗಿದ್ದವರು ಈ ರೀತಿ ಹೇಳುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ” ಆಶ್ಚರ್ಯ ವ್ಯಕ್ತಪಡಿಸಿದರು.

ದೇಶ

‘ಭಾರತೀಯರೆಲ್ಲರೂ ನನ್ನ ಕುಟುಂಬ’ ಎಂದು ಭಾ‍ಷಣ ಮಾಡಿದ ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ ನಟ ಪ್ರಕಾಶ್ ರಾಜ್, ‘ಮಣಿಪುರದ ಜನರು ಕೂಡ ನಿಮ್ಮ ಕುಟುಂಬವೇ’ ಎಂದು ಕೇಳಿದ್ದಾರೆ.

ಬಿಹಾರದ ಪಾಟ್ನಾದ ಗಾಂಧಿ ಮೈದಾನದಲ್ಲಿ ಮಾರ್ಚ್ 3 ರಂದು ನಡೆದ “ಜನ್ ವಿಶ್ವಾಸ್” ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್, “ಪ್ರಧಾನಿ ಮೋದಿಯವರು ರಾಷ್ಟ್ರೀಯ ಜನತಾ ದಳ ಸೇರಿದಂತೆ ವಿವಿಧ ಪಕ್ಷಗಳ ವಿರುದ್ಧ ಕುಟುಂಬ ರಾಜಕಾರಣದ ಆರೋಪಗಳನ್ನು ಎತ್ತುತ್ತಿದ್ದಾರೆ. ನರೇಂದ್ರ ಮೋದಿ ಕುಟುಂಬ ಆಡಳಿತದ ಮೇಲೆ ದಾಳಿ ನಡೆಸುತ್ತಿದ್ದಾರೆ.

ನಿಮಗೆ ಏಕೆ ಮಕ್ಕಳು ಅಥವಾ ಕುಟುಂಬವಿಲ್ಲ ಎಂಬುದನ್ನು ನೀವು (ಮೋದಿ) ಹೇಳಬೇಕು? ಹಲವು ಕುಟುಂಬಗಳು ರಾಜಕೀಯದಲ್ಲಿದ್ದರೆ ಅದು ಕುಟುಂಬ ಆಡಳಿತವೇ? ಇದು ಉತ್ತರಾಧಿಕಾರ ರಾಜಕಾರಣವೇ? ನಿಮಗೆ (ಮೋದಿ) ಕುಟುಂಬವಿಲ್ಲದಿದ್ದರೆ, ಯಾರು ಏನು ಮಾಡಲು ಸಾಧ್ಯ?” ಎಂದು ಕಟುವಾಗಿ ಟೀಕಿಸಿದ್ದರು.

ಈ ಹಿನ್ನೆಲೆಯಲ್ಲಿ, ನಿನ್ನೆ ತಮಿಳುನಾಡಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ಚೆನ್ನೈನ ನಂದನಂನಲ್ಲಿ ಬಿಜೆಪಿ ವತಿಯಿಂದ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. “ನಾನು ಕುಟುಂಬ ಆಡಳಿತ ಎಂದು ಮಾತನಾಡುವುದರಿಂದ ಮೋದಿಗೆ ಕುಟುಂಬವೇ ಇಲ್ಲ ಎಂದು “ಇಂಡಿಯಾ” ಮೈತ್ರಿಕೂಟದ ನಾಯಕರು ಮಾತನಾಡುತ್ತಿದ್ದಾರೆ.

ನನ್ನ ಜೀವನ ಒಂದು ತೆರೆದ ಪುಸ್ತಕ. ದೇಶದ 140 ಕೋಟಿ ಜನರು ನನ್ನ ಕುಟುಂಬದವರೇ ಆಗಿದ್ದಾರೆ. ಕೋಟ್ಯಾಂತರ ಹೆಣ್ಣುಮಕ್ಕಳು, ತಾಯಂದಿರು ಮತ್ತು ಸಹೋದರಿಯರೆಲ್ಲರೂ ಮೋದಿಯ ಕುಟುಂಬಕ್ಕೆ ಸೇರಿದವರೇ” ಎಂದು ಹೇಳುವ ಮೂಲಕ ಲಾಲು ಪ್ರಸಾದ್ ಯಾದವ್ ಅವರ ಪ್ರಶ್ನೆಗೆ ತಕ್ಕ ಉತ್ತರ ನೀಡಿದರು.

ಈ ಹಿನ್ನೆಲೆಯಲ್ಲಿ, ದೇಶದ ಜನರೆಲ್ಲ ನನ್ನ ಕುಟುಂಬ ಎಂಬ ಪ್ರಧಾನಿ ಮೋದಿ ಹೇಳಿಕೆ ವಿರುದ್ಧ ನಟ ಪ್ರಕಾಶ್ ರಾಜ್ ಪ್ರಶ್ನೆ ಎತ್ತಿದ್ದಾರೆ. ಈ ಸಂಬಂಧ ಅವರು ತಮ್ಮ ‘ಎಕ್ಸ್’ ಸೈಟ್‌ನಲ್ಲಿ, “ಮಣಿಪುರದ ಜನರು, ದೇಶದ ರೈತರು, ನಿರುದ್ಯೋಗಿ ಯುವಕರು ನಿಮ್ಮ ಕುಟುಂಬವೇ?” ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಮಣಿಪುರದಲ್ಲಿ ಭುಗಿಲೆದ್ದ ಕೋಮುಗಲಭೆ ಇಂದಿಗೂ ಮುಂದುವರೆದಿದೆ. ಈ ವಿಚಾರದಲ್ಲಿ ಮೋದಿ ಇನ್ನೂ ಆ ರಾಜ್ಯಕ್ಕೆ ಭೇಟಿ ನೀಡಿ ಜನರನ್ನು ಭೇಟಿ ಮಾಡಿಲ್ಲ. ಇನ್ನೂ ಮಣಿಪುರದಲ್ಲಿ ಉದ್ವಿಗ್ನತೆ ಕಡಿಮೆಯಾಗಿಲ್ಲ. ಇದರ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಈ ಪ್ರಶ್ನೆ ಎತ್ತಿರುವುದು ಗಮ್ನಾರ್ಹ.

ದೇಶ

ನವದೆಹಲಿ: ರೈತರ ಪ್ರತಿಭಟನೆ ಕುರಿತು ಪೋಸ್ಟ್ ಮಾಡಿದ್ದ 177 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ನಿರ್ಬಂಧಿಸಿದೆ.

ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಕನಿಷ್ಠ ಬೆಂಬಲ ಬೆಲೆ, ಸಾಲ ಮನ್ನಾ, ರೈತರ ಮೇಲಿನ ಮೊಕದ್ದಮೆ ಹಿಂಪಡೆಯುವುದು ಸೇರಿದಂತೆ ನಾನಾ ಬೇಡಿಕೆಗಳಿಗೆ ಒತ್ತು ನೀಡಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ರಾಜ್ಯಗಳ ರೈತರು ದೆಹಲಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.

ತರುವಾಯ ಕೇಂದ್ರ ಸರ್ಕಾರ ಹಾಗೂ ರೈತರೊಂದಿಗೆ ನಡೆಸಿದ ಮಾತುಕತೆಯಲ್ಲಿ ಯಾವುದೇ ಪ್ರಗತಿ ಕಾಣಲಿಲ್ಲ. ನಾಳೆ (ಫೆಬ್ರವರಿ 21) ದೆಹಲಿ ಕಡೆಗೆ ರ‍್ಯಾಲಿಯನ್ನು ಪ್ರಾರಂಭಿಸುವುದಾಗಿ ರೈತ ಸಂಘಟನೆಗಳು ಘೋಷಿಸಿವೆ.

ಈ ಹಿನ್ನಲೆಯಲ್ಲಿ, ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ 42 ‘ಎಕ್ಸ್’ ಸಾಮಾಜಿಕ ಮಾಧ್ಯಮ ಖಾತೆಗಳಗಳು, 35 ಫೇಸ್‌ಬುಕ್‌ ಖಾತೆಗಳು ಮತ್ತು 14 ಇನ್‌ಸ್ಟಾಗ್ರಾಮ್ ಖಾತೆಗಳು ಸೇರಿದಂತೆ 177 ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂದಿಸಲಾಗಿದೆ.

ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿಯೂ ಈ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

ದೇಶ ರಾಜಕೀಯ

ಪಾಟ್ನಾ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸೇರಿದಂತೆ ಸುಮಾರು 28 ಪಕ್ಷಗಳು ಮಹಾಮೈತ್ರಿಕೂಟ ರಚಿಸಿವೆ. ‘ಇಂಡಿಯಾ’ ಎಂಬ ಹೆಸರಿನಲ್ಲಿ ಒಗ್ಗೂಡಿದ ಈ ಪಕ್ಷಗಳು ಸತತ 3 ಸಭೆ ನಡೆಸಿ ಸಮಾಲೋಚನೆ ನಡೆಸಿವೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು 3ನೇ ಸಮಾಲೋಚನಾ ಸಭೆ ನಡೆದಿದ್ದು, ನಂತರ ‘ಇಂಡಿಯಾ’ ಮೈತ್ರಿಕೂಟದ ನಾಯಕರ ಸಭೆ ನಡೆದಿಲ್ಲ. ಮಧ್ಯಪ್ರದೇಶದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನೂ ರದ್ದುಗೊಳಿಸಲಾಗಿದೆ.

ಈ ಹಿನ್ನಲೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ 5 ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವುದರಿಂದ ಕಾಂಗ್ರೆಸ್ ಸೇರಿದಂತೆ ಪಕ್ಷಗಳು ಚುನಾವಣಾ ಕಾರ್ಯಗಳಲ್ಲಿ ನಿರತವಾಗಿವೆ. ಈ ಹಿನ್ನಲೆಯಲ್ಲಿ, ಬಿಹಾರ ಮುಖ್ಯಮಂತ್ರಿ ಹಾಗೂ ಸಂಯುಕ್ತ ಜನತಾ ದಳದ ನಾಯಕ ನಿತೀಶ್ ಕುಮಾರ್ ಅವರು ಭಾರತ ಮೈತ್ರಿಯಲ್ಲಿನ ಅಸ್ಥಿರತೆಗೆ ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದಾರೆ.

ಇದರ ಬಗ್ಗೆ ಮಾತನಾಡಿದ ನಿತೀಶ್ ಕುಮಾರ್, “ಪ್ರಸ್ತುತ ಕೇಂದ್ರ ಸರ್ಕಾರವನ್ನು ವಿರೋಧಿಸುವ ಪಕ್ಷಗಳು ಒಟ್ಟಾಗಿ ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಿದವು. ಆದರೆ ಇತ್ತೀಚಿನ ದಿನಗಳಲ್ಲಿ ಈ ಕ್ರಮಗಳು ಹೆಚ್ಚಿನ ಪ್ರಗತಿ ಸಾಧಿಸಿಲ್ಲ. 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲೇ ಕಾಂಗ್ರೆಸ್ ಪಕ್ಷ ಹೆಚ್ಚು ಆಸಕ್ತಿ ತೋರುತ್ತಿದೆ. ‘ಇಂಡಿಯಾ’ ಮೈತ್ರಿಕೂಟದಲ್ಲಿ, ಕಾಂಗ್ರೆಸ್‌ಗೆ ಪ್ರಮುಖ ಪಾತ್ರ ನೀಡಲು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ಆದರೆ ಅವರು ಮುಂದಿನ ಸಭೆಯನ್ನು 5 ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರವೇ ಕರೆಯುತ್ತಾರೆ ಎಂದು ತೋರುತ್ತದೆ” ಎಂದು ಅವರು ಹೇಳಿದರು.