ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Priyanka Gandhi Archives » Dynamic Leader
October 23, 2024
Home Posts tagged Priyanka Gandhi
ರಾಜಕೀಯ

ಜಮ್ಮು: ಮೂರನೇ ಹಂತದ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಪ್ರಿಯಾಂಕಾ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಲು ವಿಫಲವಾಗಿದೆ. ಇದಕ್ಕೆ ಬಿಜೆಪಿ ಪಕ್ಷವೇ ಕಾರಣ ಎಂದು ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಕಾಶ್ಮೀರದ ಕಥುವಾ (Kathua) ಜಿಲ್ಲೆಯ ಬಿಲ್ಲಾವರ್ (Billawar) ಮತ್ತು ಬಿಷ್ಣಃ (Bishnah) ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಮನೋಹರ್ ಲಾಲ್ ಅವರಿಗೆ ಬೆಂಬಲ ಸಂಗ್ರಹಿಸಲು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗಾಗಿ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಪ್ರಿಯಾಂಕಾ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಲು ಸಾಧ್ಯವಾಗದ ಕಾರಣ ಕಾರ್ಯಕ್ರಮಗಳಿಗೆ ಅಡ್ಡಿಯಾಗಿದೆ.

ಈ ಬಗ್ಗೆ ಮಾತನಾಡಿದ ಕಾಶ್ಮೀರ ಕಾಂಗ್ರೆಸ್ ಸಮಿತಿಯ ಮುಖ್ಯ ವಕ್ತಾರ, “ಬಿಜೆಪಿಯ ವಿಧ್ವಂಸಕ ಕೃತ್ಯದಿಂದಾಗಿ ಪ್ರಿಯಾಂಕಾ ಅವರ ಕಾರ್ಯಕ್ರಮ ರದ್ದಾಗಿದೆ. ಈ ಕುರಿತು ನಾವು ಚುನಾವಣಾ ಆಯೋಗಕ್ಕೆ ದೂರು ನೀಡಿ ತನಿಖೆಗೆ ಒತ್ತಾಯಿಸುತ್ತೇವೆ” ಎಂದು ಹೇಳಿದರು.

ರಾಜಕೀಯ

ಡಿ.ಸಿ.ಪ್ರಕಾಶ್ 

ದೇಶಾದ್ಯಂತ 7 ಹಂತಗಳಲ್ಲಿ ನಡೆದ 18ನೇ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಏಕ ಬಹುಮತದೊಂದಿಗೆ ಸರ್ಕಾರ ರಚಿಸುವ ಶಕ್ತಿ ಕಂಡುಬಂದಿಲ್ಲ. ಆದರೂ ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಸೇರಿ ಸತತ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದೆ.ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ, ಕೇರಳದ ವಯನಾಡು ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಿದ್ದರು. ಮತದಾನ ಮುಗಿದ ನಂತರ ಅವರು ಕಾಂಗ್ರೆಸ್ ಭದ್ರಕೋಟೆಯಾದ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲೂ ನಾಮಪತ್ರ ಸಲ್ಲಿಸಿದರು.

ಇದಾದ ಬಳಿಕ, ನಡೆದ ಮತ ಎಣಿಕೆ ವೇಳೆ ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಗೆಲುವು ಸಾಧಿಸಿ ಅಚ್ಚರಿ ಮೂಡಿಸಿದರು. ವಯನಾಡಿನಲ್ಲಿ ರಾಹುಲ್ ಗಾಂಧಿ 6,47,445 ಮತಗಳನ್ನು ಪಡೆದು ಆನಿ ರಾಜಾ ಅವರನ್ನು 3,64,422 ಮತಗಳ ಅಂತರದಿಂದ ಸೋಲಿಸಿದರು. ಅದೇ ರೀತಿ ಉತ್ತರಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ 6,87,649 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿಯನ್ನು 3,90,030 ಮತಗಳ ಅಂತರದಿಂದ ಸೋಲಿಸಿದ್ದು ಗಮನಾರ್ಹ.

ಈ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿ ಸ್ಪರ್ದಿಸಿ ಗೆದ್ದ ಎರಡು ಕ್ಷೇತ್ರಗಳ ಪೈಕಿ, ಒಂದರಲ್ಲಿ ರಾಜೀನಾಮೆ ನೀಡಬೇಕಾಗಿದೆ. ಅಂದರೆ, 2 ಕ್ಷೇತ್ರಗಳಲ್ಲಿ ಸ್ಪರ್ದಿಸಿ ಗೆಲುವು ಸಾದಿಸಿದ ಒಬ್ಬ ಅಭ್ಯರ್ಥಿ, 14 ದಿನಗಳೊಳಗೆ ಯಾವುದಾದರೊಂದು ಕಡೆ ಸಂಸದ ಅಥವಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬುದು ನಿಯಮ. ಇದನ್ನು ಆಧರಿಸಿ, ಇಂದು ರಾಹುಲ್ ಗಾಂಧಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಅಲ್ಲದೇ ಆ ಕ್ಷೇತ್ರದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ಸಹೋದರಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪರ್ದಿಸಲಿದ್ದಾರೆ ಎಂದೂ ಅವರು ಹೇಳಿದ್ದಾರೆ.

2019ರಲ್ಲಿ ವಯನಾಡು ಕ್ಷೇತ್ರದಿಂದ ಆಯ್ಕೆಯಾದ ರಾಹುಲ್ ಗಾಂಧಿ ಅದೇ ವರ್ಷ ಕಾಂಗ್ರೆಸ್ ಭದ್ರಕೋಟೆಯಾದ ಅಮೇಥಿಯಲ್ಲೂ ಸ್ಪರ್ದೆಗಿಳಿದರು. ಆದರೆ, ಅಲ್ಲಿ ಸ್ಮೃತಿ ಇರಾನಿ ಎದುರು ಸೋತರು. ತರುವಾಯ, ಅವರು ವಯನಾಡ್ ಕ್ಷೇತ್ರದ ಸಂಸದರಾಗಿ ಮುಂದುವರೆದರು. ಈ ಬಾರಿಯೂ ವಯನಾಡ್‌ನಲ್ಲಿ ಸ್ಪರ್ದೆಗಿಳಿದ ಅವರು ಅಮೇಥಿಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್‌ನ ಹಿರಿಯ ನಾಯಕರ ಒತ್ತಾಯದ ಹೊರತಾಗಿಯೂ ಅವರು ಸ್ಪರ್ಧಿಸಲಿಲ್ಲ. ಏತನ್ಮಧ್ಯೆ, ಕಾಂಗ್ರೆಸ್ ಭದ್ರಕೋಟೆಯಾದ ರಾಯ್ ಬರೇಲಿಯ ಸಂಸದೆ ಸೋನಿಯಾ ಗಾಂಧಿ, ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಆ ಕ್ಷೇತ್ರದಲ್ಲಿ ರಾಹುಲ್ ಅವರನ್ನು ಕಣಕ್ಕಿಳಿಸಲಾಯಿತು. ಈಗ ಅವರು ರಾಯ್ ಬರೇಲಿಯ ಸಂಸದರಾಗಿ ಆಯ್ಕೆಯಾಗಿದ್ದಾರೆ.

ರಾಜಕೀಯಕ್ಕೆ ಬರಲು ನನಗೆ ಯಾವುದೇ ಹಿಂಜರಿಕೆ ಇಲ್ಲ – ಪ್ರಿಯಾಂಕಾ ಗಾಂಧಿ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ವಯನಾಡಿನ ಜನತೆಗೆ ನನ್ನ ಧನ್ಯವಾದಗಳು; ವಯನಾಡಿಗೆ ಭೇಟಿ ನೀಡುವುದನ್ನು ಮುಂದುವರಿಸಲಾಗುವುದು. ಕಳೆದ 5 ವರ್ಷಗಳಿಂದ ವಯನಾಡಿನ ಜನರು ನನಗೆ ನೀಡಿದ ಬೆಂಬಲ ಮತ್ತು ಪ್ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ. ನಾನು ಯಾವಾಗಲೂ ವಯನಾಡಿನ ಜನರ ಪರವಾಗಿ ನಿಲ್ಲುತ್ತೇನೆ. ಪ್ರಿಯಾಂಕಾ ಗಾಂಧಿ ಖಂಡಿತಾ ಇಲ್ಲಿ ಗೆಲ್ಲುತ್ತಾರೆ. ನಾನು ಮತ್ತು ನನ್ನ ಸಹೋದರಿ ವಯನಾಡಿನ ಜನರನ್ನು ಪ್ರತಿನಿಧಿಸಲಿದ್ದೇವೆ” ಎಂದು ಹೇಳಿದರು.

“ನಂತರ ಮಾತನಾದಿಡ ಪ್ರಿಯಾಂಕಾ ಗಾಂಧಿ “ವಯನಾಡಿನಲ್ಲಿ ಸ್ಪರ್ಧಿಸುವುದು ಬಹಳ ಖುಷಿ ತಂದಿದೆ; ಮತ ರಾಜಕೀಯಕ್ಕೆ ಬರಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ? ರಾಹುಲ್ ಗಾಂಧಿ ಚೆಕ್ ಮೇಟ್?

ರಾಜಕೀಯ

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ 235 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಯ ಎನ್‌ಡಿಎ ಮೈತ್ರಿಕೂಟಕ್ಕೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ದುಃಸ್ವಪ್ನವಾಗಿ ಪರಿಣಮಿಸಿದೆ. ಸಂಸತ್ತಿನಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಾತಿನಿಧ್ಯವು ಮುಂಬರುವ ದಿನಗಳಲ್ಲಿ ಗಮನಾರ್ಹವಾದ ಪರಿಣಾಮಗಳನ್ನು ಬೀರುವ ನಿರೀಕ್ಷೆಯಿದೆ.

ಈ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆದ್ದಿದ್ದರು.

ಈ ಹಿನ್ನೆಲೆಯಲ್ಲಿ, ಒಂದು ಕ್ಷೇತ್ರದ ಸಂಸದರಾಗಿ ಮಾತ್ರ ಮುಂದುವರಿಯಬಹುದಾದ್ದರಿಂದ, ಜೂನ್ 4 ರಂದು ಚುನಾವಣಾ ಫಲಿತಾಂಶ ಪ್ರಕಟವಾದಾಗಿನಿಂದ ರಾಹುಲ್ ಗಾಂಧಿ ಯಾವ ಕ್ಷೇತ್ರವನ್ನು ತ್ಯಾಗ ಮಾಡುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಏತನ್ಮಧ್ಯೆ, ಕೇರಳಕ್ಕೆ ಬಂದಿದ್ದ ರಾಹುಲ್ ಗಾಂಧಿ ಯಾವ ಕ್ಷೇತ್ರದಲ್ಲಿ ಸಂಸದರಾಗಿ ಮುಂದುವರಿಯಬೇಕು ಎಂಬುದನ್ನು ಜನರ ಮಾತು ಕೇಳಿ ನಿರ್ಧರಿಸುವುದಾಗಿ ಹೇಳಿದ್ದರು.

ಉತ್ತರ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕಾಗಿರುವುದರಿಂದ ರಾಯ್ಬರೇಲಿ ಕ್ಷೇತ್ರದ ಸಂಸದರಾಗಿಯೇ ಮುಂದುವರಿಯಲು ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ವಯನಾಡನ್ನು ತ್ಯಜಿಸುವ ಮುಜುಗರವನ್ನು ತಪ್ಪಿಸಲು ಕಾಂಗ್ರೆಸ್ ಮಹತ್ವದ ನಿರ್ಧಾರ ಕೈಗೊಂಡಿದೆ ಎಂಬ ಮಾಹಿತಿ ಹೊರಬಿದ್ದಿದೆ. ವಯನಾಡಿನಲ್ಲಿ ಮರುಚುನಾವಣೆ ವೇಳೆ ರಾಹುಲ್ ಅವರ ತಂಗಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕಿ ಪ್ರಿಯಾಂಕಾ ಗಾಂಧಿ ಅಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ವಾರಣಾಸಿ ಕ್ಷೇತ್ರದಲ್ಲಿ ಕಳೆದ ಚುನಾವಣೆಗಿಂತ ಕಡಿಮೆ ಅಂತರದಲ್ಲಿ ಮೋದಿ ಗೆಲುವು ಸಾಧಿಸಿದ್ದನ್ನು ಟೀಕಿಸಿದ್ದ ರಾಹುಲ್ ಗಾಂಧಿ, ಪ್ರಬಲ ವಿರೋಧವಿಲ್ಲದೆಯೇ ಕಡಿಮೆ ಅಂತರದಲ್ಲಿ ಗೆದ್ದ ಮೋದಿ, ವಾರಣಾಸಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರೆ ಖಂಡಿತ ಸೋಲುತ್ತಿದ್ದರು ಎಂದು ಹೇಳಿರುವುದು ಗಮನಾರ್ಹ.

ರಾಜಕೀಯ

ನವದೆಹಲಿ: ಉತ್ತರ ಪ್ರದೇಶದಲ್ಲಿ ಇತ್ತೀಚೆಗಿನ ಲೋಕಸಭೆ ಚುನಾವಣೆ ಫಲಿತಾಂಶದಿಂದ ತೃಪ್ತರಾಗಿರುವ ಕಾಂಗ್ರೆಸ್ ಪಕ್ಷವು ಜೂನ್ 11 ರಿಂದ 15 ರವರೆಗೆ ‘ಧಯವಾದ್ ಯಾತ್ರೆ’ಯನ್ನು ಘೋಷಿಸಿದೆ. ಯಾತ್ರೆಯು ರಾಜ್ಯದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳನ್ನು ತಲುಪುವ ಗುರಿಯನ್ನು ಹೊಂದಿದ್ದು, ಇದರ ಮೂಲಕ ಸಾರ್ವಜನಿಕರಿಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತದೆ ಮತ್ತು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಸಂದೇಶಗಳನ್ನು ರವಾನಿಸುವ ಮಾಹಿತಿಯನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶ ಉಸ್ತುವಾರಿ ಅವಿನಾಶ್ ಪಾಂಡೆ ಅವರು ಹಂಚಿಕೊಂಡಿದ್ದಾರೆ.

ಶುಕ್ರವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪಾಂಡೆ, ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯು ಪ್ರತಿ ಕ್ಷೇತ್ರಗಳ ಲೋಕಸಭಾ ಚುನಾವಣಾ ಫಲಿತಾಂಶಗಳನ್ನು ಪರಿಶೀಲಿಸಿದೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸಿ 6ರಲ್ಲಿ ಗೆಲುವು ಸಾಧಿಸಿದರೆ, ಮೈತ್ರಿಕೂಟ 43 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪರಿಶೀಲನಾ ಸಭೆಯಲ್ಲಿ ಮಹಿಳೆಯರ ಹಕ್ಕು ಸೇರಿದಂತೆ ಒಂಬತ್ತು ಪ್ರಸ್ತಾವನೆಗಳನ್ನು ಅಂಗೀಕರಿಸಲಾಗಿದೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಪರಿಣಾಮವನ್ನು ಪಾಂಡೆ ಎತ್ತಿ ತೋರಿಸಿದರು, ಇದು ಸಾರ್ವಜನಿಕರನ್ನು ಪ್ರತಿಧ್ವನಿಸಿದೆ ಎಂದು ಹೇಳಿದ್ದಾರೆ. ಸಂವಿಧಾನದ ಬೆದರಿಕೆಗಳ ನಡುವೆಯೂ ಉತ್ತರ ಪ್ರದೇಶದ ಜನರು ತಮ್ಮ ಜವಾಬ್ದಾರಿಗಳನ್ನು ಅದ್ಭುತವಾಗಿ ನಿರ್ವಹಿಸಿದ್ದಾರೆ ಎಂದು ಅವರು ಒತ್ತಿ ಹೇಳಿದರು. ಸೀಮಿತ ಸಂಪನ್ಮೂಲಗಳ ಹೊರತಾಗಿಯೂ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಪ್ರಚಂಡ ಪ್ರಯತ್ನವನ್ನು ಮಾಡಿದರು, ಇದರ ಪರಿಣಾಮವಾಗಿ ರಾಜ್ಯದಲ್ಲಿ ಗಮನಾರ್ಹ ಬದಲಾವಣೆಗಳು ಸಂಭವಿಸಿದವು ಎಂದು ಹೇಳಿದರು.

ರಾಜಕೀಯ

ರಾಯ್‌ ಬರೇಲಿ (ಯುಪಿ): ದೇಶದ್ರೋಹಿ (Traitors) ಎಂದು ಕರೆಯುವ ಸರ್ಕಾರ ದೇಶದಲ್ಲಿ ಸ್ಥಾಪನೆಯಾಗುತ್ತದೆ ಎಂದು ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರು ಊಹಿಸಿರಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಬೇಸರ ವ್ಯಕ್ತಪಡಿಸಿದರು.

ಪ್ರಚಾರದ ಹಾದಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷೆಯ ಬಗ್ಗೆಯೂ ಅವರು ವಾಗ್ದಾಳಿ ನಡೆಸಿದರು.

ರಾಯ್ ಬರೇಲಿ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ”ಮಹಾತ್ಮ ಗಾಂಧಿ, ಪಂಡಿತ್ ಜವಾಹರಲಾಲ್ ನೆಹರು ಮುಂತಾದವರು ಜನರ ಹಕ್ಕುಗಳನ್ನು ಬಲಪಡಿಸಲು ಚಳುವಳಿಗಳನ್ನು ಕೈಗೊಂಡರು. ಅವರನ್ನು ದೇಶದ್ರೋಹಿಗಳೆಂದು ಕರೆದು (ಜನರಿಗೆ) ‘ನೀವು ನಮಗೆ 400 ಸ್ಥಾನಗಳನ್ನು ನೀಡಿದರೆ, ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ’ ಎಂದು ಹೇಳುವ ಸರ್ಕಾರ ಬರುತ್ತದೆ ಎಂದು ಅವರು ಎಂದಿಗೂ ಊಹಿಸಿರಲಿಲ್ಲ” ಎಂದು ಹೇಳಿದರು.

ದೇಶ ರಾಜಕೀಯ

ರಾಯ್‌ಪುರ: ಪ್ರಧಾನಿ ಮೋದಿ ಎಲ್ಲಿಗೆ ಹೋದರೂ ನನ್ನನ್ನು ನಿಂದಿಸುತ್ತಿದ್ದಾರೆ. ಆದರೆ ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಛತ್ತೀಸ್‌ಗಢ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಛತ್ತೀಸ್‌ಗಢದ ಪಲೋಡಾ ಬಜಾರ್ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡಿದರು: ಮೋದಿ ಎಲ್ಲಿಗೆ ಹೋದರೂ ನನ್ನನ್ನು ನಿಂದಿಸುತ್ತಿದ್ದಾರೆ. ಆದರೆ ನಾನು ಅದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಮೋದಿ ಗ್ಯಾರಂಟಿ ಎಂದರೆ ಅದು ಅದಾನಿಯ ಗ್ಯಾರಂಟಿಯೇ.

ಛತ್ತೀಸ್‌ಗಢದಲ್ಲಿ ಕೆ.ಜಿ.ಯಿಂದ ಪಿ.ಜಿ.ವರೆಗೆ ಉಚಿತ ಶಿಕ್ಷಣ ನೀಡಲು ಭೂಪೇಶ್ ಬಾಗಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಜಾತಿವಾರು ಜನಗಣತಿ:
ಮಧ್ಯಪ್ರದೇಶದ ದಾಡಿಯಾ ಜಿಲ್ಲೆಯಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು, “ಮಧ್ಯಪ್ರದೇಶದಲ್ಲಿ ನಾವು (ಕಾಂಗ್ರೆಸ್) ಅಧಿಕಾರಕ್ಕೆ ಬಂದರೆ, ಕೃಷಿ ಸಾಲವನ್ನು ಮನ್ನಾ ಮಾಡುತ್ತೇವೆ. ಜಾತಿವಾರು ಜನಗಣತಿ ನಡೆಸುತ್ತೇವೆ.

ಮಧ್ಯಪ್ರದೇಶದಲ್ಲಿ ರಸಗೊಬ್ಬರಕ್ಕಾಗಿ ರೈತರು ಉದ್ದನೆಯ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಇಲ್ಲಿ ರಸಗೊಬ್ಬರ ಸಿಗುತ್ತಿಲ್ಲ. ಮಧ್ಯಪ್ರದೇಶದಲ್ಲಿ ಚುನಾವಣಾ ಸಂದರ್ಭದಲ್ಲಿ ರಸಗೊಬ್ಬರದ ಚೀಲಗಳ ಮೇಲೆ ಮೋದಿ ಫೋಟೋ ಅಂಟಿಸಿದ್ದಕ್ಕೆ ಚುನಾವಣಾ ಆಯೋಗ ಗೊಬ್ಬರ ವಿತರಣೆಗೆ ನಿಷೇಧ ಹೇರಿದೆ. ಇದರಿಂದ ಮಧ್ಯಪ್ರದೇಶದ ರೈತರು ಕಂಗಾಲಾಗಿದ್ದಾರೆ” ಎಂದು ಮಾತನಾಡಿದ್ದಾರೆ.

ದೇಶ ರಾಜ್ಯ

ಜಬಲ್ಪುರ್: ಮಧ್ಯಪ್ರದೇಶಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಲ್ಲಿನ ನರ್ಮದಾ ನದಿಗೆ ವಿಶೇಷ ಆರತಿ ಪೂಜೆ ಸಲ್ಲಿಸಿದರು. ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ, ‘ರಾಜ್ಯದಲ್ಲಿ 220 ತಿಂಗಳ ಬಿಜೆಪಿ ಆಡಳಿತದಲ್ಲಿ 225 ಹಗರಣಗಳು ನಡೆದಿವೆ’ ಎಂದು ಆರೋಪಿಸಿದರು.

ಮಧ್ಯಪ್ರದೇಶ ರಾಜ್ಯದಲ್ಲಿ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಇದಕ್ಕಾಗಿ ಪ್ರಿಯಾಂಕಾ ಅಭಿಯಾನ ಆರಂಭಿಸಲಿದ್ದಾರೆ. ಇಂದು ಜಬಲ್ಪುರಕ್ಕೆ ಆಗಮಿಸಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಕಮಲ್ ನಾಥ್, ಸಂಸದರು ಹಾಗೂ ಶಾಸಕರೊಂದಿಗೆ ನರ್ಮದಾ ನದಿಗೆ ತೆರಳಿ, ಅಲ್ಲಿ ಆರತಿ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಹನುಮಂತನ ವೇಷ ಧರಿಸಿದ ಸ್ವಯಂ ಸೇವಕರು ಪ್ರಿಯಾಂಕಾ ಅವರನ್ನು ಸ್ವಾಗತಿಸಿದರು. ಅನೇಕರು ಪ್ರಿಯಾಂಕಾಗೆ ಹಿಂದೂ ದೇವರಾದ ಗಣೇಶನ ಚಿತ್ರಗಳನ್ನು ಉಡುಗೊರೆಯಾಗಿ ನೀಡಿದರು.

ನಂತರ ಜಬಲ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ನಮ್ಮ ಪಕ್ಷ (ಕಾಂಗ್ರೆಸ್) ಏನು ಭರವಸೆ ನೀಡಿತ್ತೋ, ಅವುಗಳನ್ನು ಛತ್ತೀಸ್‌ಗಢ ಮತ್ತು ಹಿಮಾಚಲ ಪ್ರದೇಶದಲ್ಲಿ ಮಾಡಿ ತೋರಿಸಿದ್ದೇವೆ. ಕಾಂಗ್ರೆಸ್ ಆಡಳಿತದ ರಾಜ್ಯಗಳ ಸ್ಥಿತಿಯನ್ನು ನೋಡಿದರೆ ಅದು ನಿಮಗೇ ಅರ್ಥವಾಗುತ್ತದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಲವು ಕಾಮಗಾರಿಗಳು ಮತ್ತು ಅಭಿವೃದ್ಧಿಗಳನ್ನು ಕೈಗೊಳ್ಳಲಾಯಿತು. ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ, ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿತು. ವ್ಯಾಪಾರ ಮತ್ತು ಪಡಿತರ ವಿತರಣೆಯಲ್ಲಿ ಭ್ರಷ್ಟಾಚಾರ ನಡೆದಿದೆ.

ರಾಜ್ಯದಲ್ಲಿ 220 ತಿಂಗಳ ಬಿಜೆಪಿ ಆಡಳಿತದಲ್ಲಿ 225 ಹಗರಣಗಳು ನಡೆದಿವೆ. ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಕೇವಲ 21 ಸರ್ಕಾರಿ ಉದ್ಯೋಗಗಳನ್ನು ಮಾತ್ರ ನೀಡಿದೆ. ಈ ಅಂಕಿ ಅಂಶವನ್ನು ನನ್ನ ಗಮನಕ್ಕೆ ತಂದಾಗ, ನಾನು ನನ್ನ ಕಛೇರಿಯಿಂದ ಮೂರು ಬಾರಿ ಪರಿಶೀಲಿಸಿದ್ದೇನೆ. ಅದು ಸತ್ಯ. ಮೇ 28 ರಂದು ಉಜ್ಜಯಿನಿಯಲ್ಲಿ ಬೀಸಿದ ಜೋರಾದ ಗಾಳಿಗೆ 6 ದೇವರ ಮೂರ್ತಿಗಳು ಬಿದ್ದು ಹಾನಿಗೀಡಾಗಿದ್ದವು. ಚೌಹಾಣ್ ಸರ್ಕಾರ ದೇವರನ್ನೂ ಬಿಡಲಿಲ್ಲ” ಎಂದರು.

ರಾಜಕೀಯ

ಕಾಂಗ್ರೆಸ್ ಪಕ್ಷದ ಮಾಜಿ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದ ಸಂಸದರಾಗಿದ್ದರು. ಚುನಾವಣೆ ವೇಳೆ ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಕ್ಕೆ ಗುಜರಾತ್ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತು. ತರುವಾಯ, ಚುನಾವಣಾ ನೀತಿ ನಿಯಮಗಳ ಅಡಿಯಲ್ಲಿ, ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹ ಗೊಳಿಸಲಾಯಿತು. ಮತ್ತು ರಾಹುಲ್ ಗಾಂಧಿ ಸ್ಪರ್ಧಿಸಿದ್ದ ವಯನಾಡು ಕ್ಷೇತ್ರವು ಖಾಲಿಯಾಗಿದೆ ಎಂದೂ ಘೋಷಿಸಲಾಯಿತು.

ಮುಂದಿನ ವರ್ಷ ಮೇ ತಿಂಗಳಲ್ಲಿ ಸಂಸತ್ತಿಗೆ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ತೆರವಾಗಿರುವ ವಯನಾಡು ಕ್ಷೇತ್ರಕ್ಕೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿದೆ. ಅದರಂತೆ ವಯನಾಡು ಕ್ಷೇತ್ರಕ್ಕೆ ಬೇಕಾದ ವಿದ್ಯುನ್ಮಾನ ಮತಯಂತ್ರಗಳನ್ನು ಕೋಳಿಕ್ಕೋಡ್, ವಯನಾಡ್ ಮತ್ತು ಮಲಪ್ಪುರಂ ಕಲೆಕ್ಟರ್ ಕಚೇರಿಗಳಲ್ಲಿ ಇರಿಸಲಾಗಿದೆ. ಕೋಳಿಕ್ಕೋಡ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇರಿಸಲಾಗಿದ್ದ ವಿದ್ಯುನ್ಮಾನ ಮತಯಂತ್ರಗಳನ್ನು ನಿನ್ನೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ ಮಾದರಿ ಮತದಾನವನ್ನೂ ನಡೆಸಲಾಯಿತು. ಪಕ್ಷದ ಎಲ್ಲ ಮುಖಂಡರು ಪಾಲ್ಗೊಂಡಿದ್ದರು.

ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಅಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಯಾರು ಸ್ಪರ್ಧಿಸುತ್ತಾರೆ ಎಂಬ ನಿರೀಕ್ಷೆ ಮೂಡಿದೆ. ರಾಹುಲ್ ಗಾಂಧಿ ಇಲ್ಲಿ ಸ್ಪರ್ಧಿಸಿದಾಗ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರ ಪರ ಪ್ರಚಾರ ಮಾಡಿದ್ದರು. ಅವರನ್ನು ಸಂಸದ ಸ್ಥಾನದಿಂದ ಅನರ್ಹ ಗೊಳಿಸಿದ ನಂತರ ನಡೆದ ಕಾಂಗ್ರೆಸ್ ಸಭೆಯಲ್ಲೂ ಭಾಗವಹಿಸಿದ್ದರು. ಅವರು ನಿಯಮಿತವಾಗಿ ವಯನಾಡು ಕ್ಷೇತ್ರದ ಜನರನ್ನು ಭೇಟಿಯಾಗುತ್ತಾ ಪಕ್ಷದ ಪರವಾಗಿ ಪ್ರಚಾರವನ್ನೂ ಮಾಡಿದರು. ಇದರಿಂದಾಗಿ ಈ ಬಾರಿಯ ಉಪಚುನಾವಣೆಯಲ್ಲಿ ಅವರು ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಬಹುದು ಎನ್ನಲಾಗಿದೆ. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಡ ಕಾತರದಿಂದ ಕಾಯುತ್ತಿದ್ದಾರೆ.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

2014ರಲ್ಲಿ ಮೊಟ್ಟಮೊದಲ ಬಾರಿಗೆ ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕರಿಸಿದಾಗಿನಿಂದ ಪ್ರತಿ ತಿಂಗಳ ಕೊನೆಯ ಭಾನುವಾರದಂದು `ಮನ್ ಕಿ ಬಾತ್’ (ಮನಸ್ಸಿನ ಧ್ವನಿ) ಹೆಸರಿನಲ್ಲಿ ರೇಡಿಯೋ ಮೂಲಕ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ.

ಪ್ರಧಾನಿ ಮೋದಿಯವರು ರಾಷ್ಟ್ರವನ್ನುದ್ದೇಶಿಸಿ ತಮ್ಮ 100ನೇ ಮನ್ ಕಿ ಬಾತ್ ಭಾಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. 2014ರಲ್ಲಿ ಮೊಟ್ಟಮೊದಲ ಬಾರಿಗೆ ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕರಿಸಿದಾಗಿನಿಂದ ಪ್ರತಿ ತಿಂಗಳ ಕೊನೆಯ ಭಾನುವಾರದಂದು `ಮನ್ ಕಿ ಬಾತ್’ ಹೆಸರಿನಲ್ಲಿ ರೇಡಿಯೋ ಮೂಲಕ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಇದರ 100ನೇ ಭಾಷಣವನ್ನು ಏಪ್ರಿಲ್ 30 ರಂದು ವಿಶ್ವಸಂಸ್ಥೆಯಿಂದ ಹಿಡಿದು ಅಮೆರಿಕ, ಲಂಡನ್ ಮತ್ತು ಆಸ್ಟ್ರೇಲಿಯಾದವರೆಗೆ ಆಚರಿಸಲಾಯಿತು. ಭಾರತವೊಂದರಲ್ಲೇ ಪ್ರಧಾನಿ ಮೋದಿಯವರ 100ನೇ ಭಾಷಣ ಸಾವಿರಾರು ಸ್ಥಳಗಳಲ್ಲಿ ಪ್ರಸಾರವಾಯಿತು.

ಹೀಗಿರುವಾಗ ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ಭಾಷಣದಿಂದ ಜನರಲ್ಲಿ ಆಗುವ ಪರಿಣಾಮಗಳೇನು? ಇದರಿಂದ ಪ್ರಧಾನಿ ಮೋದಿ ಏನನ್ನು ಸಾಧಿಸುತ್ತಿದ್ದಾರೆ? ಇದರ ಬಗ್ಗೆ ಕೆಲವು ಹಿರಿಯ ಬಿಜೆಪಿ ನಾಯಕರೊಂದಿಗೆ ಮಾತನಾಡಿದಾಗ,

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಅಮೆರಿಕಾದ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಮತ್ತು ಭಾರತೀಯ ಸಮುದಾಯದ ಸದಸ್ಯರು ಯುಎಸ್‌ನ ನ್ಯೂಜೆರ್ಸಿಯಲ್ಲಿ ಪ್ರಧಾನ ಮಂತ್ರಿಯವರ ‘ಮನ್ ಕಿ ಬಾತ್’ ನ 100 ನೇ ಸಂಚಿಕೆಯನ್ನು ಆಲಿಸಿದರು. ಪಿಟಿಐ

“ಈಶಾನ್ಯ ರಾಜ್ಯಗಳಿಂದ ಥಾರ್ ಮರುಭೂಮಿಯವರೆಗೆ, ಕಾರ್ಗಿಲ್ ಹಿಮ ಪ್ರದೇಶದಿಂದ ಕನ್ಯಾಕುಮಾರಿ ಸಮುದ್ರದ ಮೀನುಗಾರರವರೆಗೆ, ಪ್ರಧಾನಿ ಮೋದಿ ರೇಡಿಯೊ ಮೂಲಕ ಎಲ್ಲಾ ಪ್ರದೇಶಗಳ ಜನರನ್ನು ತಲುಪಿದ್ದಾರೆ. ಈ ಭಾಷಣದ ಮೂಲಕ ಸಮಾಜದ ಕಟ್ಟಕಡೆಯ ಜನರು ಮಾಡುವ ಒಳ್ಳೆಯ ಕೆಲಸಗಳನ್ನೂ ಸಾರ್ವಜನಿಕವಾಗಿ ಹೊಗಳಿದ್ದಾರೆ. ಸಾಮಾನ್ಯವಾಗಿ ನಾವು ರಾಷ್ಟ್ರದ ಹೆಮ್ಮೆಯನ್ನು ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವವರಿಗೆ ಹೋಲಿಕೆ ಮಾಡಿ ಹೆಚ್ಚು ಮಾತನಾಡುತ್ತೆವೆ. ಆದರೆ ಸಾಮಾಜಿಕವಾಗಿ ಕೆಳ ಹಂತದಲ್ಲಿರುವ ಜನರು ಹೇಗೆ ಅತ್ಯುತ್ತಮವಾಗಿದ್ದರೆ ಎಂಬುದರ ಕುರಿತು ಪ್ರಧಾನಿ ಮೋದಿ ಮಾತನಾಡುತ್ತಾರೆ.

ಕುಂಬಾರ, ಕ್ಷೌರಿಕ, ಮರವನ್ನು ನೆಟ್ಟ ಮುದುಕಿ, ಬಾಳೆಲೆಯಲ್ಲಿ ಕರಕುಶಲ ಮಾಡುವ ಮಹಿಳೆಯಂತೆ ಸರಳ ಜನರ ಬಗ್ಗೆ ಮಾತನಾಡುತ್ತಾರೆ. ಪ್ರಜಾಪ್ರಭುತ್ವದ ಅಭಿವೃದ್ಧಿ ಎಂದರೆ ತಪ್ಪು ಮಾಡಿದವರನ್ನು ಶಿಕ್ಷಿಸುವುದು ಮಾತ್ರವಲ್ಲ; ಒಳ್ಳೆಯವರನ್ನು ಪ್ರಶಂಶಿಸುವುದು ಕೂಡ. ಒಳ್ಳೆಯದನ್ನು ಮಾಡುವ ಸಾಮಾನ್ಯ ಜನರನ್ನು ಪ್ರಧಾನಿ ಮೋದಿ ಬಡಿದೆಬ್ಬಿಸುತ್ತಿದ್ದಾರೆ. ಇದು ಆ ಜನರಲ್ಲಿ ಭಾರೀ ಪ್ರಭಾವ ಮತ್ತು ಉತ್ಸಾಹವನ್ನು ಸೃಷ್ಟಿಸುತ್ತಿದೆ. ಪ್ರಧಾನಿಯವರ ವ್ಯಕ್ತಿತ್ವದ ಮೋಡಿ ಜನರನ್ನು ಆಕರ್ಷಿಸಿದೆ. ಇದೆಲ್ಲದಕ್ಕೂ ಮನ್ ಕಿ ಬಾತ್ ಭಾಷಣದ ಮೂಲಕ ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳುತ್ತಾರೆ.

ದೆಹಲಿಯಲ್ಲಿ ರೈತರ ಹೋರಾಟ

ಪ್ರಧಾನಿಯಾಗಿ ದೇಶದ ಜನರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಹಾಗೂ ಒಳ್ಳೆಯ ವಿಷಯಗಳನ್ನು ಪ್ರಶಂಶಿಸಲು ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ಮೂಲಕ ರೇಡಿಯೋ ಭಾಷಣ ಮಾಡುತ್ತಿರುವುದು ಒಂದು ಸಾಧನೆಯೇ; ಅದರಲ್ಲಿ ಎರಡು ಮಾತಿಲ್ಲ. ಆದರೆ, ಅವರ ಮಾತಿಗೂ ನಡವಳಿಕೆಗೂ ಯಾವುದೇ ಸಂಬಂಧವಿಲ್ಲ. ಅವರು ಜನರಿಗಾಗಿ ಮಾತನಾಡುತ್ತಿದ್ದಾರೆ ಎಂದರೆ, ರೈತರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ದೆಹಲಿಯಲ್ಲಿ ಒಂದು ವರ್ಷಕ್ಕೂ ಮೇಲಾಗಿ ಹೋರಾಟ ನಡೆಸುತ್ತಿದ್ದಾಗ ಅವರನ್ನು ಭೇಟಿ ಮಾಡಲಿಲ್ಲ. ಅವರ ಸಮಸ್ಯೆಯನ್ನೂ ಕೇಳಲಿಲ್ಲ. ಕನಿಷ್ಠ ಕೃಷಿ ಸಚಿವರನ್ನಾದರೂ ಅಲ್ಲಿಗೆ ಕಳುಹಿಸಿಕೊಡುವ ಆಲೋಚನೆ ಮಾಡಲಿಲ್ಲ.

ಕುಸ್ತಿ ಪಟುಗಳೊಂದಿಗೆ ಪ್ರಿಯಾಂಕಾ ಗಾಂಧಿ

ಈಗಲೂ ದೆಹಲಿಯಲ್ಲಿ ಮಹಿಳಾ ಕುಸ್ತಿಪಟುಗಳು ಪರದಾಡುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಆಲಿಸಲು ಕೂಡ ಪ್ರಧಾನಿ ಮೋದಿ ಸಿದ್ಧರಿಲ್ಲ! ಆದರೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೇಳಿದರು. ಅವರ ಜೊತೆ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿ ಸಾಂತ್ವನ ಹೇಳಿದರು.

1977ರಲ್ಲಿ ಬಿಹಾರದ ಬೆಲ್ಚಿಯಲ್ಲಿ ಇಂದಿರಾಗಾಂಧಿ

1977ರಲ್ಲಿ ಬಿಹಾರದ ಬೆಲ್ಚಿಯಲ್ಲಿ 10ಕ್ಕೂ ಹೆಚ್ಚು ದಲಿತರನ್ನು ಜಾತಿ ಭೂಮಾಲೀಕರ ಗುಂಪು ಗುಂಡಿಕ್ಕಿ ಕೊಂದಿತು. ಅಂದು ಇಂದಿರಾಗಾಂಧಿಯವರು ಅತಿವೃಷ್ಟಿ, ನದಿಯಲ್ಲಿನ ಪ್ರವಾಹ, ಕೆಸರುಮಯವಾದ ರಸ್ತೆ ಹೀಗೆ ನಾನಾ ಅಡೆತಡೆಗಳನ್ನು ದಾಟಿ 10 ಕಿ.ಮೀ.ಗೂ ಹೆಚ್ಚು ದೂರ ಆನೆಯ ಮೇಲೆ ಕುಳಿತು ಸಂತ್ರಸ್ತರ ಕುಟುಂಬದವರನ್ನು ಖುದ್ದಾಗಿ ಭೇಟಿ ಮಾಡಿ ಸಾಂತ್ವನ ಹೇಳಿದರು! ಅವರು ಆ ಜನರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿದರು. ರಾಜೀವ್ ಗಾಂಧಿ ಕೂಡ ಅದನ್ನೇ ಮಾಡಿದರು.

ರಾಹುಲ್ ಗಾಂಧಿ

ಆ ಸಾಲಿನಲ್ಲಿ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯ ಮೂಲಕ ದೇಶದ ಜನರನ್ನು ಖುದ್ದು ಭೇಟಿಯಾದರು. ಜನರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. “ಎಲ್ಲೆಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಾರೋ ಅಲ್ಲಲ್ಲೇ ಅವರ ಅಹವಾಲನ್ನು ಆಲಿಸಬೇಕು” ಎಂಬ ನೆಹರೂ ಕುಟುಂಬದ ಪರಂಪರೆಯೇ ಇದಕ್ಕೆಲ್ಲ ಮೂಲ ಕಾರಣ.

ಆದರೆ ಪ್ರಧಾನಿ ಮೋದಿಯವರು ಟಿವಿ ಮತ್ತು ಮನ್ ಕಿ ಬಾತ್ ರೇಡಿಯೊದಲ್ಲಿ ಮಾತ್ರ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಆದರೆ, ಅವರು ಜನರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಸಮಸ್ಯೆಯನ್ನು ಆಲಿಸಲು ಸಿದ್ಧರಿಲ್ಲ. ದೇಶದ ಚುನಾಯಿತ ಪ್ರಧಾನಿಗೆ ಪ್ರಜಾಪ್ರಭುತ್ವದ ಪ್ರಜ್ಞೆ ಇರಬೇಕು. ಸಂಸತ್ತಿನಲ್ಲಿ ಅಗತ್ಯಕ್ಕಿಂತ ಹೆಚ್ಚು ಸಂಸದರನ್ನು ಹೊಂದಿದ್ದಾರೆ. ಆದರೆ, ಅವರು ಸಂಸದೀಯ ಪ್ರಜಾಪ್ರಭುತ್ವವಾದಿಯಾಗಿಲ್ಲ! ಜನರಿಗೆ ಮೋದಿ ಮೇಲೆ ನಂಬಿಕೆ ಇಲ್ಲ. ಯಾಕೆಂದರೆ ಮೋದಿ ಪ್ರಜಾಪ್ರಭುತ್ವವಾದಿಯಲ್ಲ! ಜನರಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ವಾಧಿಕಾರಿ!

ರಾಜಕೀಯ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ನಾಯಕರು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರದಲ್ಲಿ ಮಾತನಾಡುತ್ತಾ, ಪ್ರಧಾನಿ ಮೋದಿಯನ್ನು ವಿಷ ಷರ್ಪ ಎಂದು ಮೂದಲಿಸಿದ್ದರು.

ಏತನ್ಮಧ್ಯೆ, ನಿನ್ನೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ, “ಕಾಂಗ್ರೆಸ್ ಪಕ್ಷದ ನಾಯಕರು ಇಲ್ಲಿಯವರೆಗೆ 91 ಬಾರಿ ತಮ್ಮನ್ನು ನಿಂದಿಸಿದ್ದಾರೆ” ಎಂದು ಹೇಳಿದರು.

ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಾಗಲಕೋಟೆ ಜಿಲ್ಲೆಯ ಜಮಕಂಡಿ ತಾಲೂಕಿನಲ್ಲಿ ಪ್ರಚಾರ ನಡೆಸಿದರು. ನಂತರ ಮಾತನಾಡಿದ ಅವರು, “ಪ್ರಧಾನಿ ಮೋದಿ ತಮ್ಮ ಬಗ್ಗೆ 91 ಬಾರಿ ದೂಷಣೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಆ ನಿಂದನೆಯ ದೂರುಗಳು ಒಂದೇ ಪುಟದಲ್ಲಿ ಅಡಗಿಬಿಡುತ್ತವೆ. ಆದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಹೇಳಿರುವ ಅಪಪ್ರಚಾರಗಳನ್ನು ಪಟ್ಟಿ ಮಾಡಿದರೆ ಪುಸ್ತಕಗಳಾಗಿ ಪ್ರಕಟಿಸಬಹುದು” ಎಂದು ಹೇಳಿದರು.

“ಸಾರ್ವಜನಿಕರನ್ನು ಭೇಟಿಯಾಗುವ ಪ್ರಧಾನ ಮಂತ್ರಿಗಳು ಜನರ ಸಮಸ್ಯೆಗಳನ್ನು ಆಲಿಸದೆ ತಮ್ಮ ಅಹವಾಲುಗಳನ್ನು ಮಾತ್ರ ಹೇಳಿಕೊಳ್ಳುತ್ತಾರೆ. ಮಾಜಿ ಪ್ರಧಾನಿಗಳಾದ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಗುಂಡೇಟು ಪಡೆದು ಮಡಿದಿದ್ದಾರೆ. ಪಿ.ವಿ.ನರಸಿಂಹರಾವ್, ಮನಮೋಹನ್ ಸಿಂಗ್ ಅವರಂತಹ ಪ್ರಧಾನಿಗಳು ದೇಶಕ್ಕಾಗಿ ಶ್ರಮಿಸಿದ್ದಾರೆ.

ಆದರೆ ಪ್ರಧಾನಿ ಮೋದಿ ಮಾತ್ರ ಜನರ ಮುಂದೆ ತಮ್ಮ ಬಗ್ಗೆ ಅಳುತ್ತಾರೆ. ನಿಮಗೆ ಧೈರ್ಯವಿದೆಯೇ? ನನ್ನ ಸಹೋದರ ರಾಹುಲ್ ಗಾಂಧಿಯಿಂದ ಕಲಿಯಿರಿ. ನನ್ನ ಸಹೋದರ ರಾಹುಲ್ ಗಾಂಧಿ ನೀವು ನೋವಿನಿಂದ ಮಾತನಾಡಿದರೂ, ಗುಂಡು ಹಾರಿಸಿದರೂ, ಇರಿದರೂ, ಸತ್ಯದ ಮಾರ್ಗವನ್ನು ಅನುಸರಿಸುತ್ತಾರೆ. ರಾಹುಲ್ ಗಾಂಧಿ ಈ ದೇಶಕ್ಕಾಗಿ ಪ್ರಾಣ ಕೊಡಲು ಸಿದ್ಧ” ಎಂದು ಹೇಳಿದರು.