ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Pulakeshinagar Archives » Dynamic Leader
October 23, 2024
Home Posts tagged Pulakeshinagar
ಬೆಂಗಳೂರು ರಾಜಕೀಯ

ಬೆಂಗಳೂರು: ‘2023ರ ವಿಧಾನಸಭಾ ಚುನಾವಣೆಯಲ್ಲಿ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ವಿ.ಶಿವರಾಜ್ ಅವರಿಗೆ ಜೆಡಿಎಸ್ ಪಕ್ಷವು ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ’ ಎಂದು ಕ್ಷೇತ್ರದ ಜೆಡಿಎಸ್ ಮುಖಂಡರು ಒತ್ತಿ ಹೇಳುತ್ತಿದ್ದಾರೆ.

1994ರಲ್ಲಿ ನಡೆದ ವಿಧಾನಸಭಾ ಚುನುವಾಣೆಯಲ್ಲಿ ಯಲಹಂಕ ವಿಧಾನಸಭೆ (ಇಂದಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರವು ಅಂದಿನ ಯಲಹಂಕ ವಿಧಾಸಭಾ ಕೇತ್ರದ ಒಂದು ಭಾಗವಾಗಿತ್ತು) ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ದಿಸಿ ಗೆದ್ದಿದ್ದ ಎಂ.ಹೆಚ್.ಜಯಪ್ರಕಾಶ್ ನಾರಾಯಣ್ ಒಂದು ವರ್ಷ ಕಳೆಯುವುದರೊಳಗೆ ಆಕಸ್ಮಿಕವಾಗಿ ಸಾವನ್ನಪ್ಪಿದರು. ಇದರಿಂದ ತೆರವಾದ ಯಲಹಂಕ ವಿಧಾನಸಭಾ ಕ್ಷೇತ್ರದ ಚುನಾವಣೆಗೆ 1995ರಲ್ಲಿ ಉಪ ಚುನಾವಣೆ ನಡೆಯಿತು. ಆ ಚುನಾವಣೆಯಲ್ಲಿ ಜನತಾದಳದ ಅಭ್ಯರ್ಥಿ ವಿ.ಶಿವರಾಜ್ ಸುಮಾರು 55000 ಮತಗಳ ಅಂತರದಿಂದ ಗೆದ್ದು ಹೆಚ್.ಡಿ.ದೇವೇಗೌಡರ ಸರ್ಕಾರದಲ್ಲಿ ಸೇವೆ ಸಲ್ಲಿಸುವ ಅವಕಾಶವನ್ನು ಪಡೆದರು.

2004ರ ವಿಧಾನಸಭಾ ಚುನಾವಣೆಯಲ್ಲಿ ಎರಡನೆ ಬಾರಿಗೆ ಜೆಡಿಎಸ್ ಪಕ್ಷದಿಂದ ಟಿಕೆಟ್ ಪಡೆದಿದ್ದ ಶಿವರಾಜ್ 30,033 ಮತಗಳನ್ನು ಪಡೆದು ಸೋತಿದ್ದರು.

1995ರಲ್ಲಿ ಶಾಸಕರಾದ ಶೀವರಾಜ್ ಅಂದಿನಿಂದ ಇಂದಿನವರೆಗೆ ಸುಮಾರು 28 ವರ್ಷಗಳಿಂದ ಸಕ್ರಿಯ ರಾಜಕಾರಣದಲ್ಲಿಯೇ ಉಳಿದುಕೊಂಡಿದ್ದಾರೆ. ಇವರು ಎಲ್ಲರಿಗೂ ಪರಿಚಯಸ್ತರು. ಕ್ಷೇತ್ರದ ಜನರಿಗೆ ಆತ್ಮೀಯರೂ ಆಗಿದ್ದಾರೆ.

ಕೆ.ಜೆ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯನ್ನೂ ಒಳಗೊಂಡಿರುವ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರವು ಎಸ್.ಸಿ. ಮೀಸಲು ಕ್ಷೇತ್ರವಾಗಿದ್ದರೂ ಇಲ್ಲಿ ಅಲ್ಪಸಂಖ್ಯಾತರಾದ ಮುಸ್ಲಿಮರು ಮತ್ತು ಕ್ರೈಸ್ತರೆ ನಿರ್ಣಾಯಕರು. ಈ ಹಿಂದೆ ಕೆ.ಜೆ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದಿದ್ದ ಕೋಮು ಗಲಭೆಯಿಂದ ಬೇಸತ್ತಿರುವ ದಲಿತರು, ಅಲ್ಪಸಂಖ್ಯಾತರಾದ ಮುಸ್ಲಿಮರು, ಕ್ರಿಶ್ಚಿಯನ್ನರು ಹಾಗೂ ಇತರೆ ವರ್ಗದ ಜನರು ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ಈ ಬಾರಿ ಮತ ಚಲಾಯಿಸುವುದು ಅನುಮಾನವೆ ಎಂದು ಕ್ಷೇತ್ರದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಮಾಜಿ ಶಾಸಕ ವಿ.ಶಿವರಾಜ್ ಅವರನ್ನು ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯೆಂದು ಪಕ್ಷವು ಅಧಿಕೃತವಾಗಿ ಘೋಷಣೆ ಮಾಡಿದರೆ ಗೆಲವು ಸುಲುಭವಾಗಿರುತ್ತದೆ. ಅದೂ ಅಲ್ಲದೇ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ರವರು ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷರಾಗಿರುವುದರಿಂದ ಮುಸ್ಲಿಮರ ಮತಗಳು ಬಹುಪಾಲು ಬೇರೆಡೆಗೆ ಹಂಚಿಹೋಗುವುದಿಲ್ಲ. ಇದರಿಂದ ವಿ.ಶಿವರಾಜ್ ಗೆಲವು ನಿಶ್ಚಿತವಾದದ್ದು ಎಂದು ಕ್ಷೇತ್ರದ ಜನರು ಹೇಳಿಕೊಳ್ಳುತ್ತಿದ್ದಾರೆ.