ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Rahul Gandhi Archives » Page 3 of 8 » Dynamic Leader
October 23, 2024
Home Posts tagged Rahul Gandhi (Page 3)
ರಾಜಕೀಯ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಉತ್ತರಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ.

ಈ ಕುರಿತು ಕಾಂಗ್ರೆಸ್ ಪಕ್ಷದ ಎಕ್ಸ್ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ, ”ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದ ಅಭ್ಯರ್ಥಿಯಾಗಿ ಮತ್ತು ಅಮೇಥಿ ಕ್ಷೇತ್ರಕ್ಕೆ ಕಿಶೋರಿ ಲಾಲ್ ಶರ್ಮಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ” ಎಂದು ಹೇಳಿದೆ.

ಉತ್ತರಪ್ರದೇಶದಲ್ಲಿ ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಕ್ಷೇತ್ರಗಳಾಗಿವೆ. ನೆಹರೂ-ಗಾಂಧಿ ಕುಟುಂಬ ಇಲ್ಲಿ ನಿರಂತರವಾಗಿ ಪೈಪೋಟಿ ನಡೆಸುತ್ತಿದೆ.

ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು 2004 ರಿಂದ 3 ಬಾರಿ ಅಮೇಥಿಯಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಎದುರು ಸೋತಿದ್ದರು. ಆದರೂ ಕೇರಳದ ವಯನಾಡಿನಲ್ಲಿ 2ನೇ ಸ್ಥಾನಕ್ಕೆ ಸ್ಪರ್ಧಿಸಿ ಗೆದ್ದಿದ್ದರು.

ಅದೇ ರೀತಿ, ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಮಾಜಿ ನಾಯಕಿ ಹಾಗೂ ರಾಹುಲ್ ಅವರ ತಾಯಿ ಸೋನಿಯಾ ಗಾಂಧಿ ಅವರು 2004 ರಿಂದ ಸತತ 5 ಬಾರಿ ಉತ್ತರಪ್ರದೇಶದ ರಾಯ್ ಬರೇಲಿಯನ್ನು ಗೆದ್ದಿದ್ದರು. ಈ ಬಾರಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಅಮೇಥಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಮತ್ತು ರಾಯ್‌ಬರೇಲಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂದು ಈಗಾಗಲೇ ಹೇಳಲಾಗಿದ್ದರೂ, ಇದೀಗ ರಾಯ್‌ಬರೇಲಿ ಕ್ಷೇತ್ರದ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅವರನ್ನು ಘೋಷಿಸಲಾಗಿದೆ. ಮೇ 20 ರಂದು ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಗೆ ಐದನೇ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಯ್‌ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಲೇಖನ

ಡಿ.ಸಿ.ಪ್ರಕಾಶ್ ಸಂಪಾದಕರು

ಭಾರತದಾದ್ಯಂತ ಹರಡಿ ಎಲ್ಲೆಡೆ ವ್ಯಾಪಿಸಿರುವ ರೈಲು ಹಳಿಗಳಿಗೆ ಇಲ್ಲಿ ದೊಡ್ಡ ಇತಿಹಾಸವಿದೆ. ಶ್ರೀಮಂತರು, ಮಧ್ಯಮ ವರ್ಗದವರು ಮಾತ್ರವಲ್ಲದೆ ಬಡವರೂ ಸಹ ಕಡಿಮೆ ದರದಲ್ಲಿ ಭಾರತದ ಯಾವುದೇ ಭಾಗಕ್ಕೆ ಪ್ರಯಾಣಿಸಲು ರೈಲುಗಳು ಸಹಾಯ ಮಾಡುತ್ತವೆ.

ಆದರೆ, ಕಳೆದ ಕೆಲವು ವರ್ಷಗಳಿಂದ ರೈಲು ದರವನ್ನು ಹೆಚ್ಚಿಸುವುದು ಮತ್ತು ಬಡವರು ಪ್ರಯಾಣಿಸಬಹುದಾದ ಬೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ಮುಂತಾದ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಇದರಿಂದ ರೈಲು ಪ್ರಯಾಣವನ್ನೇ ಅವಲಂಬಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನರು ತೀವ್ರ ತೊಂದರೆಗೀಡಾಗಿದ್ದಾರೆ. ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಬಗ್ಗೆ ಮಾತನಾಡಿದ್ದಾರೆ.

ಇತ್ತೀಚೆಗಷ್ಟೇ ರಾಹುಲ್ ಗಾಂಧಿ ತಮ್ಮ ಎಕ್ಸ್ ಪೇಜ್ ನಲ್ಲಿ ಸಾಮಾನ್ಯ ಬಡವರ ಪಾಲಿಗೆ ರೈಲು ಪ್ರಯಾಣ ಅಷ್ಟಕ್ಕಷ್ಟೆ ಆಗುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ಅದರಲ್ಲಿ, “ಶ್ರೀಮಂತರನ್ನು ಗಮನದಲ್ಲಿಟ್ಟುಕೊಂಡೇ ಭಾರತೀಯ ರೈಲ್ವೇ ತನ್ನ ನೀತಿಗಳನ್ನು ವಿನ್ಯಾಸಗೊಳಿಸುತ್ತದೆ. ಇದರಲ್ಲಿ ಬಡವರನ್ನು ನಿರ್ಲಕ್ಷಿಸಲಾಗುತ್ತಿದೆ. ರೈಲ್ವೇ ಪ್ರಯಾಣ ದರವನ್ನು ಪ್ರತಿ ವರ್ಷ ಶೇ.10ರಷ್ಟು ಹೆಚ್ಚಿಸಲಾಗುತ್ತಿದೆ. ಭಾರತೀಯ ರೈಲ್ವೇ ಡೈನಾಮಿಕ್ ದರದ ಹೆಸರಿನಲ್ಲಿ ಪ್ರಯಾಣಿಕರಿಂದ ಭಾರಿ ಮೊತ್ತವನ್ನು ಪಡೆಯುತ್ತಿದೆ. ಟಿಕೆಟ್ ರದ್ದತಿಯ ದಂಡವನ್ನೂ ಹೆಚ್ಚಿಸಲಾಗಿದೆ. ರೈಲಿನಲ್ಲಿ ಶ್ರೀಮಂತರೇ ಪ್ರಯಾಣಿಸುವ ಪರಿಸ್ಥಿತಿಯನ್ನು ನಿರ್ಮಾಣ ಮಾಡುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ಕೊರೋನಾ ಅವಧಿಯಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗಿದ್ದ ಪ್ರಯಾಣ ದರದ ರಿಯಾಯಿತಿಯನ್ನೂ ಭಾರತೀಯ ರೈಲ್ವೆ ಇಲಾಖೆ ಹಿಂಪಡೆದಿದೆ. ಇದನ್ನು ತಮ್ಮ ಎಕ್ಸ್ ಪೇಜ್ ನಲ್ಲಿ ಉಲ್ಲೇಖಿಸಿರುವ ರಾಹುಲ್ ಗಾಂಧಿ, “ಕಳೆದ ಮೂರು ವರ್ಷಗಳಲ್ಲಿ ರೈಲ್ವೇ ಇಲಾಖೆಯು ಹಿರಿಯ ನಾಗರಿಕರಿಗೆ ನೀಡಲಾಗಿದ್ದ ಪ್ರಯಾಣ ದರ ರಿಯಾಯಿತಿಯನ್ನು ಕಸಿದುಕೊಳ್ಳುವ ಮೂಲಕ 3,700 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಸುಸ್ಥಿತಿಯಲ್ಲಿರುವವರಿಗೆ ಎಸಿ ಕೋಚ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಬಡವರ ಸಾಮಾನ್ಯ ಕೋಚ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ.

“ರೈಲ್ವೇ ಕೋಚ್‌ಗಳ ಉತ್ಪಾದನೆಯಲ್ಲಿ, ಎಸಿ ಕೋಚ್‌ಗಳನ್ನು ಸಾಮಾನ್ಯ ಕೋಚ್‌ಗಳಿಗಿಂತ ಮೂರು ಪಟ್ಟು ಹೆಚ್ಚು ಉತ್ಪಾದಿಸಲಾಗುತ್ತದೆ. ಹೀಗೆ ಕೇವಲ ರೈಲುಗಳನ್ನೇ ತಮ್ಮ ಪ್ರಯಾಣಕ್ಕೆ ಅವಲಂಬಿಸಿರುವ ಶೇ.80ರಷ್ಟು ಜನರಿಗೆ ಭಾರತೀಯ ರೈಲ್ವೇ ದ್ರೋಹ ಬಗೆಯುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತೀಯ ರೈಲ್ವೇ ಬಗ್ಗೆ ರಾಹುಲ್ ಗಾಂಧಿ ಹೇಳಿರುವ ಮಾತುಗಳು 100% ಸತ್ಯ ಎಂದು ರೈಲಿನಲ್ಲಿ ನಿತ್ಯ ಪ್ರಯಾಣಿಸುವವರು ಹೇಳುತ್ತಾರೆ. ಪ್ರಧಾನಿ ಮೋದಿ ಅವರು ಪ್ರತಿ ರೈಲು ನಿಲ್ದಾಣಕ್ಕೆ ತೆರಳಿ ‘ವಂದೇ ಭಾರತ್’ ರೈಲುಗಳನ್ನು ಉದ್ಘಾಟಿಸಿದ್ದಾರೆ. ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಬುಲೆಟ್ ಟ್ರೈನ್ ಭರವಸೆ ನೀಡಿದೆ. ಆದರೆ ರೈಲು ಪ್ರಯಾಣವನ್ನೇ ಹೆಚ್ಚು ಅವಲಂಬಿಸಿರುವ ಬಡ ಜನರ ಸೌಲಭ್ಯಗಳ ಬಗ್ಗೆ ಆಡಳಿತಗಾರರಿಗೆ ಯಾವುದೇ ಕಾಳಜಿ ಇಲ್ಲ.

ಪ್ರಮುಖ ನಗರಗಳ ನಡುವೆ ಓಡುವ ‘ವಂದೇ ಭಾರತ್’ ರೈಲುಗಳನ್ನು ಭಾರತೀಯ ರೈಲ್ವೇ ಕ್ಷೇತ್ರದ ಪ್ರಗತಿಯ ಸಂಕೇತವೆಂದು ಆಡಳಿತಗಾರರು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಈ ರೈಲಿನ ಬೋಗಿಗಳು ಸಂಪೂರ್ಣ ಹವಾನಿಯಂತ್ರಿತವಾಗಿದ್ದು ವಿಮಾನದಂತೆಯೇ ಐಷಾರಾಮಿ ಸೌಲಭ್ಯಗಳನ್ನು ಹೊಂದಿದೆ. ರೈಲಿನಲ್ಲಿ ಸ್ವಯಂಚಾಲಿತ ಬಾಗಿಲುಗಳು, ವೈ-ಫೈ, ಜಿಪಿಎಸ್, ಆಡಿಯೋ, ವಿಡಿಯೋ, ಆಧುನಿಕ ಶೌಚಾಲಯಗಳು, ಸ್ವಿವೆಲ್ ಆಸನಗಳು, ಟಚ್ ಸ್ಕ್ರೀನ್‌ನಂತಹ ಆಧುನಿಕ ಸೌಲಭ್ಯಗಳಿವೆ. ‘ಎಸಿ ಚೇರ್ ಕಾರ್’ ಮತ್ತು ‘ಎಕ್ಸಿಕ್ಯುಟಿವ್ ಚೇರ್ ಕಾರ್’ ಎಂಬ ಎರಡು ರೀತಿಯ ಕೋಚ್‌ಗಳನ್ನು ಹೊಂದಿರುವ ವಂದೇ ಭಾರತ್ ರೈಲು ಕೇವಲ ಶ್ರೀಮಂತರಿಗೆ ಮಾತ್ರ ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಬಸ್ ಪ್ರಯಾಣ ದರ ರೈಲು ದರಕ್ಕಿಂತ ಹಲವು ಪಟ್ಟು ಹೆಚ್ಚಿರುವುದರಿಂದ ಬಡವರು ಹಾಗೂ ಮಧ್ಯಮ ವರ್ಗದ ಬಹುತೇಕರು ರೈಲು ಪ್ರಯಾಣಕ್ಕೆ ಆದ್ಯತೆ ನೀಡುತ್ತಾರೆ. ಆದರೆ ಎಲ್ಲಾ ರೈಲುಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಸಾಮಾನ್ಯ ಬೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. 2020ರಲ್ಲಿ, ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಲಾಕ್ ಡೌನ್ ಘೋಷಿಸಿದ್ದ ಸಂದರ್ಭದಲ್ಲಿ, ರೈಲ್ವೆ ಆಡಳಿತವು ಹಲವಾರು ಕ್ರಮಗಳನ್ನು ತೆಗೆದುಕೊಂಡಿತು. ಭಾರತದ ಎಲ್ಲಾ ರೈಲುಗಳಲ್ಲಿ ಕಾಯ್ದಿರಿಸಿದ ಬೋಗಿಗಳನ್ನು ಮಾತ್ರ ಓಡಿಸುವುದು ಮತ್ತು ಹಿರಿಯ ನಾಗರಿಕರಿಗೆ ಪ್ರಯಾಣ ದರದ ರಿಯಾಯಿತಿಯನ್ನು ರದ್ದುಗೊಳಿಸುವುದು ಮುಂತಾದ ಕ್ರಮಗಳನ್ನು ತೆಗೆದುಕೊಳ್ಳಲಾಯಿತು.

ಆ ಸಮಯದಲ್ಲಿ, ಎಲ್ಲಾ ರೈಲು ನಿಲ್ದಾಣಗಳಲ್ಲಿ ನಿಲ್ಲಬಹುದಾದ ಅನೇಕ ‘ಲೋಕಲ್’ ಪ್ಯಾಸೆಂಜರ್ ರೈಲುಗಳನ್ನು ಎಕ್ಸ್‌ಪ್ರೆಸ್ ರೈಲುಗಳಾಗಿ ಪರಿವರ್ತಿಸಲಾಯಿತು. ಎಕ್ಸ್‌ಪ್ರೆಸ್ ರೈಲುಗಳನ್ನು ಸೂಪರ್ ಫಾಸ್ಟ್ (Super Fast) ಎಕ್ಸ್‌ಪ್ರೆಸ್ ರೈಲುಗಳಾಗಿ ಪರಿವರ್ತಿಸಲಾಯಿತು. ಅಲ್ಲದೆ, ಕೊರೋನಾ ಹೆಸರನ್ನು ಬಳಸಿಕೊಂಡು, ಭಾರತದ ಎಲ್ಲಾ ರೈಲುಗಳಲ್ಲಿ ಕಾಯ್ದಿರಿಸದ ಸಾಮಾನ್ಯ ಕೋಚ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲಾಯಿತು. ಬದಲಾಗಿ, ಎಸಿ ಕೋಚ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಯಿತು. ಭಾರತೀಯ ರೈಲ್ವೇ ಬಡವರಿಗೆ ವಂಚಿಸುತ್ತಿದೆ ಎಂದು ರೈಲಿನಲ್ಲಿ ನಿತ್ಯ ಸಂಚರಿಸುವ ಜನರ ಯಾತನೆಯಾಗಿದೆ. ಇದನ್ನೇ ರಾಹುಲ್ ಗಾಂಧಿ ಎತ್ತಿ ತೋರಿಸಿದ್ದಾರೆ ಎಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ.

2014ರಲ್ಲಿ 400 ರೂಪಾಯಿ ಇದ್ದ ಅಡುಗೆ ಅನಿಲ ಸಿಲಿಂಡರ್ ಬೆಲೆ ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ 1000 ರೂಪಾಯಿ ದಾಟಿದೆ ಎಂದು ವಿರೋಧ ಪಕ್ಷಗಳು ಹೇಳಿದಾಗ ಜನರಿಗೆ ಸುಲಭವಾಗಿ ಅರ್ಥವಾಗುತ್ತದೆ. ಅದೇ ರೀತಿ ಪ್ರೀಮಿಯಂ ಶುಲ್ಕ, ಡೈನಾಮಿಕ್ ಶುಲ್ಕ ಹೀಗೆ ಹಲವು ಹೆಸರುಗಳಲ್ಲಿ ಹಣ ಸುಲಿಗೆಯಾಗುತ್ತಿರುವಾಗ ಪ್ರಮುಖ ವಿರೋಧ ಪಕ್ಷಗಳು ಅದರ ಬಗ್ಗೆ ಮಾತನಾಡುವುದು ಅನಿವಾರ್ಯವಾಗುತ್ತದೆ. ಅಲ್ಲದೆ, ಮೆಟ್ರೋ, ವಂದೇ ಭಾರತ್ ಮತ್ತು ಬುಲೆಟ್ ರೈಲುಗಳ ಹೆಸರುಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸುವ ಅದೇ ಸಂದರ್ಭದಲ್ಲಿ ಬಡವರು ಬಳಸುವ ರೈಲುಗಳ ಹೊಸ ಯೋಜನೆಗಳನ್ನೂ ಸೇರಿಸಬೇಕು.

ರಾಹುಲ್ ಗಾಂಧಿ ಅವರ ಭಾಷಣ ಚುನಾವಣಾ ಅಖಾಡದಲ್ಲಿ ಸದ್ದು ಮಾಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ರಾಜಕೀಯ

ನವದೆಹಲಿ: ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲು ರಾಹುಲ್‌ಗೆ ಭಯೋತ್ಪಾದಕ ಸಂಘಟನೆ ಪಿಎಫ್‌ಐ ಬೆಂಬಲ ಸಿಕ್ಕಿದೆ ಎಂಬ ಮಾಹಿತಿ ನಮಗೆ ಬಂದಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸ್ಮೃತಿ ಇರಾನಿ, ಐತಿಹಾಸಿಕವಾಗಿ ಕಾಂಗ್ರೆಸ್‌ಗೆ ಸಂಬಂಧಿಸಿದ ಕ್ಷೇತ್ರವಾದ ಅಮೇಠಿಯ ನಿವಾಸಿಗಳ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅಮೇಠಿಯ ಜನರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಶೀರ್ವದಿಸುತ್ತಾರೆ.

ಅಮೇಠಿಯಲ್ಲಿ ಗಾಂಧಿ ಕುಟುಂಬ ಸ್ಪರ್ಧಿಸುವುದು ನಮಗೆ ಗೊತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೇಠಿ ಕ್ಷೇತ್ರದಲ್ಲಿ 19 ಲಕ್ಷ ಜನರಿಗೆ ಪಡಿತರ ಪದಾರ್ಥಗಳನ್ನು ವಿತರಿಸುತ್ತಿದ್ದಾರೆ.

ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲು ರಾಹುಲ್‌ಗೆ ಭಯೋತ್ಪಾದಕ ಸಂಘಟನೆ ಪಿಎಫ್‌ಐ ಬೆಂಬಲ ಸಿಕ್ಕಿದೆ ಎಂಬ ಮಾಹಿತಿ ನಮಗೆ ಬಂದಿದೆ” ಎಂದು ಹೇಳಿದ್ದಾರೆ.

ರಾಜಕೀಯ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸ್ ಮಾಡಲು ಪ್ರಧಾನಿ ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಕೇಜ್ರಿವಾಲ್ ಬಂಧನವನ್ನು ಖಂಡಿಸಿ ದೆಹಲಿಯಲ್ಲಿ ಇಂದು ನಡೆದ “ಇಂಡಿಯಾ” ಮೈತ್ರಿಕೂಟದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಪ್ರಧಾನಿ ಅವರು ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ದೊಡ್ಡ ಪಕ್ಷವಾದ ಕಾಂಗ್ರೆಸ್ ನ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುತ್ತಿದ್ದಾರೆ. ಇದು ಯಾವ ರೀತಿಯ ಚುನಾವಣೆ?

ಬಿಜೆಪಿಯಿಂದ ನನ್ನ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ವಿರೋಧ ಪಕ್ಷದ ನಾಯಕರನ್ನು ಬಂಧಿಸಿ ಜೈಲಿಗೆ ಹಾಕಲಾಗುತ್ತದೆ. ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯ ಮೂಲಕ ದೇಶವನ್ನು ನಡೆಸಲು ಪ್ರಯತ್ನಿಸುತ್ತಿದ್ದಾರೆ. ವಿದ್ಯುನ್ಮಾನ ಮತಯಂತ್ರ, ಮ್ಯಾಚ್ ಫಿಕ್ಸಿಂಗ್, ಸಾಮಾಜಿಕ ಮಾಧ್ಯಮ ಮತ್ತು ಮಾಧ್ಯಮಗಳ ಒತ್ತಡವಿಲ್ಲದೆ ಬಿಜೆಪಿ 180 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ.

ಸಂವಿಧಾನವು ಜನರ ಧ್ವನಿಯಾಗಿದೆ. ಇದು ಕೊನೆಗೊಂಡರೆ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಬಿಜೆಪಿ ಸಂಸದರು ಹೇಳುತ್ತಾರೆ. ಇದು ಅವರ ನೀತಿಯನ್ನು ಪರೀಕ್ಷಿಸುವ ಪ್ರಯತ್ನವಾಗಿದೆ.

ನೀವು ಪೂರ್ಣ ಪ್ರಯತ್ನದಿಂದ ಅವರ ವಿರುದ್ಧ ಮತ ಚಲಾಯಿಸದಿದ್ದರೆ, ಅವರ ಮ್ಯಾಚ್ ಫಿಕ್ಸಿಂಗ್ ಗೆಲ್ಲುತ್ತದೆ. ಅವರು ಗೆದ್ದರೆ ಸಂವಿಧಾನವನ್ನು ನಾಶಪಡಿಸುತ್ತಾರೆ. ಈ ಚುನಾವಣೆ ಸಾಮಾನ್ಯ ಚುನಾವಣೆಯಲ್ಲ. ದೇಶ ಮತ್ತು ಸಂವಿಧಾನವನ್ನು ರಕ್ಷಿಸುವ ಚುನಾವಣೆ” ಎಂದು ರಾಹುಲ್ ಹೇಳಿದರು.

ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ರಾಜ್ಯಗಳಲ್ಲಿ ಸರ್ಕಾರ ರಚಿಸಲು ಮತ್ತು ವಿರೋಧ ಪಕ್ಷದ ನಾಯಕರನ್ನು ಹೆದರಿಸಲು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ಬೇಕೋ ಅಥವಾ ಸರ್ವಾಧಿಕಾರ ಬೇಕೋ ಎಂಬುದನ್ನು ಜನರೇ ನಿರ್ಧರಿಸಬೇಕು. ಸರ್ವಾಧಿಕಾರವನ್ನು ಬೆಂಬಲಿಸುವವರನ್ನು ದೇಶದಿಂದ ಹೊರಹಾಕಬೇಕು. ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿಷ ಇದ್ದಂತೆ; ವಿಷ ತಿಂದರೆ ಸಾವು ಸಂಭವಿಸುತ್ತದೆ” ಎಂದು ಹೇಳಿದರು.

ರಾಜಕೀಯ

ಲಖನೌ: ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಸಮಯವನ್ನು ವ್ಯರ್ಥ ಮಾಡುವುದೇ ಬಿಜೆಪಿ ಸರ್ಕಾರದ ಗುರಿಯಾಗಿದೆ. ಎಂದು ಕಾಂಗ್ರೆಸ್ ಸಂಸದ ರಾಹುಲ್ ಆರೋಪಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ನಡೆಸುತ್ತಿದ್ದಾರೆ. ಈಗ ಉತ್ತರ ಪ್ರದೇಶದಲ್ಲಿ ರ‍್ಯಾಲಿ ನಡೆಯುತ್ತಿದೆ.

ಆಗ್ರಾದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ಸಣ್ಣ ವ್ಯಾಪಾರಿಗಳ ಮೇಲೆ ಪರಿಣಾಮ ಬೀರಿದೆ. ಯುವಕರಿಗೆ ಉದ್ಯೋಗವಿಲ್ಲ, ರೈತರು ಇನ್ನೂ ಬೀದಿಯಲ್ಲಿ ಕುಳಿತಿದ್ದಾರೆ. ಜನರಿಗಾಗಿ ಕೆಲಸ ಮಾಡುವುದು ಸರ್ಕಾರದ ಕರ್ತವ್ಯ. ಜನರು ಇದನ್ನು ಅರ್ಥಮಾಡಿಕೊಳ್ಳದಿದ್ದರೆ, ಯಾವುದೇ ಬದಲಾವಣೆ ಸಂಭವಿಸುವುದಿಲ್ಲ.

ನಿಮ್ಮ ಸ್ವಂತ ಯೋಗಕ್ಷೇಮದ ಬಗ್ಗೆ ಯೋಚಿಸಲು ಪ್ರಾರಂಭಿಸಿ ಎಂಬುದನ್ನು ಮಾತ್ರ ನಾನು ನಿಮಗೆ ಹೇಳಲು ಬಯಸುತ್ತೇನೆ. ಅಗ್ನಿಪಥ್ ಯೋಜನೆಯಡಿ ಸೇನೆಯಲ್ಲಿ ಸೇವೆ ಸಲ್ಲಿಸುವ ಯುವಕರ ಆರ್ಥಿಕ ಸ್ಥಿತಿ 4 ವರ್ಷಗಳ ನಂತರ ಹದಗೆಡಲಿದೆ.

ಯುವಕರಿಗೆ ಉದ್ಯೋಗ ನೀಡಲು ಅವರು ಬಯಸದೇ ಇರುವ ಕಾರಣ, ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಸಮಯವನ್ನು ವ್ಯರ್ಥ ಮಾಡುವುದೇ ಬಿಜೆಪಿ ಸರ್ಕಾರದ ಉದ್ದೇಶವಾಗಿದೆ. ದೇಶದಲ್ಲಿ ದ್ವೇಷ ಹೆಚ್ಚಾಗಲು ಅನ್ಯಾಯವೇ ಕಾರಣ. ಭಾರತದಲ್ಲಿ ಬಡವರಿಗೆ, ರೈತರಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಆರಂಭಿಸಿದ್ದೇನೆ” ಎಂದು ಹೇಳಿದರು.

ದೇಶ

ಪಾಟ್ನಾ: ಬಿಹಾರದಲ್ಲಿ ನಡೆಯುತ್ತಿರುವ ‘ಭಾರತ ಜೋಡೋ ನ್ಯಾಯ ಯಾತ್ರೆ’ಯ ವೇಳೆ ರಾಹುಲ್ ಪ್ರಯಾಣಿಸುತ್ತಿದ್ದ ಜೀಪನ್ನು ರಾಷ್ಟ್ರೀಯ ಜನತಾ ದಳದ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಚಲಾಯಿಸಿದ್ದು ಎಲ್ಲರ ಗಮನ ಸೆಳೆಯಿತು.

ಮಣಿಪುರದಿಂದ ಮುಂಬೈ ವರೆಗೆ ಕಾಂಗ್ರೆಸ್ ಸಂಸದ ರಾಹುಲ್  ಗಾಂಧಿ ಎರಡನೇ ಹಂತದ ಭಾರತ ಜೋಡೋ ನ್ಯಾಯ ಯಾತ್ರೆಯನ್ನು ಕೈಗೊಂಡಿದ್ದಾರೆ. ಇದರ ಅಂಗವಾಗಿ ಯಾತ್ರೆ ಬಿಹಾರದ ಸಸಾರಂ ಪ್ರದೇಶವನ್ನು ಪ್ರವೇಶಿಸಿತು. ಆ ವೇಳೆ ರಾಹುಲ್ ಬಂದಿದ್ದ ಜೀಪನ್ನು ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ಚಲಾಯಿಸಿಕೊಂಡು ಹೋದರು.

ಇದರ ಬೆನ್ನಲ್ಲೇ ಇಂದು ಸಂಜೆ ನಡೆಯುವ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಜೊತೆಗೆ ತೇಜಸ್ವಿ ಯಾದವ್ ವೇದಿಕೆ ಏರಲಿದ್ದಾರೆ. ಇದರ ನಂತರ, ಯಾತ್ರೆಯು ಉತ್ತರಪ್ರದೇಶವನ್ನು ಪ್ರವೇಶಿಸಲಿದೆ. ತೇಜಸ್ವಿ ಯಾದವ್ ಅವರು ರಾಹುಲ್ ಪ್ರಯಾಣಿಸುತ್ತಿದ್ದ ಜೀಪ್ ಅನ್ನು ಚಾಲನೆ ಮಾಡುತ್ತಿರುವ ಚಿತ್ರಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಪುಟದಲ್ಲಿ ಪೋಸ್ಟ್ ಮಾಡಿದ್ದಾರೆ.

ದೇಶ

ಪ್ರಧಾನಿ ನರೇಂದ್ರ ಮೋದಿ ಅವರು ಇತರ ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಅವರು ಜನವರಿ 14 ರಂದು ಮಣಿಪುರದಿಂದ ಮಹಾರಾಷ್ಟ್ರಕ್ಕೆ ಭಾರತ್ ಜೋಡೋ ನ್ಯಾಯ ಯಾತ್ರೆಯ ಎರಡನೇ ಹಂತವನ್ನು ಪ್ರಾರಂಭಿಸಿದರು.

ಯಾತ್ರೆಯು ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ 15 ರಾಜ್ಯಗಳನ್ನು ಒಳಗೊಂಡಿದೆ. ಒಟ್ಟು 66 ದಿನಗಳಲ್ಲಿ 110 ಜಿಲ್ಲೆಗಳಲ್ಲಿ ಸುಮಾರು 6700 ಕಿ.ಮೀ. ಪ್ರಯಾಣಿಸುವ ಸಲುವಾಗಿ ಈ ನಡಿಗೆ ನಡೆಯಲಿದೆ.

ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಬಿಹಾರ ಮತ್ತು ಪಶ್ಚಿಮ ಬಂಗಾಳದ ನಂತರ ಇದೀಗ ಒಡಿಶಾದಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ ನಡೆತ್ತಿದ್ದಾರೆ. ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಪ್ರಧಾನಿ ಮೋದಿ ಇತರ ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ವಾಸ್ತವವಾಗಿ ಮೋದಿ ಸಾಮಾನ್ಯ ಜಾತಿ ಕುಟುಂಬದಲ್ಲಿ ಜನಿಸಿದವರು.

ಇವರು “ತೆಲಿ” ಜಾತಿಗೆ ಸೇರಿದವರು. 2000 ರಲ್ಲಿ, ಗುಜರಾತ್‌ನ ಬಿಜೆಪಿ ಸರ್ಕಾರವು ತೆಲಿ ವರ್ಗವನ್ನು ಇತರ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿಕೊಂಡಿತ್ತು. ಈ ಕಾರಣಕ್ಕಾಗಿ, ತಮ್ಮ ಜೀವನ ಪರ್ಯಂತ ಅವರು ಜಾತಿವಾರು ಜನಗಣತಿ ನಡೆಸಲು ಅನುಮತಿ ಕೊಡುವುದಿಲ್ಲ” ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿಯವರ ಈ ಹೇಳಿಕೆ ಭಾರತದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಮೋದಿಯವರ ಶಿಕ್ಷಣದ ವಿವರಗಳನ್ನು ಬಹಿರಂಗಪಡಿಸದೇ ಇರುವ ಹಿನ್ನಲೆಯಲ್ಲಿ, ಈಗ ಅವರ ಜಾತಿಯ ಪ್ರಶ್ನೆಯೂ ಉದ್ಭವಿಸಿದೆ. ಪ್ರಧಾನಿ ಮೋದಿವಿವಿಧ ವೇದಿಕೆಗಳಲ್ಲಿ ತಾನು ಇತರೆ ಹಿಂದುಳಿದ ವರ್ಗಕ್ಕೆ ಸೇರಿದವನು ಎಂದು ಹೇಳಿಕೊಂಡು ಮತ ಸಂಗ್ರಹಿಸಿರುವುದು ಗಮನಾರ್ಹ.

ರಾಜಕೀಯ

ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ “ಇಂಡಿಯಾ” ಮೈತ್ರಿಕೂಟದಲ್ಲಿ ನಡೆಯುತ್ತಿರುವ ಬಿರುಕುಗಳಿಗೆ ಕಾಂಗ್ರೆಸ್ ಅನ್ನು ದೂಷಿಸಿದ್ದಾರೆ. ಮತ್ತು ಮೈತ್ರಿ ಪಾಲುದಾರರೊಂದಿಗೆ ಚರ್ಚಿಸಲು ಮತ್ತು ತೊಡಗಿಸಿಕೊಳ್ಳಲು ತೋರಿಸಬೇಕಾದ ಉತ್ಸಾಹವು ಗೋಚರಿಸುತ್ತಿಲ್ಲ ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಮುಂದೆ ಬರಬೇಕಿತ್ತು. “ಇಂಡಿಯಾ” ಮೈತ್ರಿಕೂಟದೊಂದಿಗೆ ಚರ್ಚಿಸಲು ಮತ್ತು ತೊಡಗಿಸಿಕೊಳ್ಳಲು ಕಾಂಗ್ರೆಸ್ ತೋರಿಸಬೇಕಾದ ಉತ್ಸಾಹವು ಕಾಣೆಯಾಗಿದೆ” ಎಂದು ಅಖಿಲೇಶ್ ಯಾದವ್ ಇಂಡಿಯಾ ಟುಡೇ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಪ್ರಚಾರ ಮಾಡುವ ಸಾಧ್ಯತೆಯ ಬಗ್ಗೆ ಮಾತನಾಡಿದ ಅಖಿಲೇಶ್ ಯಾದವ್, “ಅಂತಹ ಸಹಯೋಗವು ಕಾರ್ಯರೂಪಕ್ಕೆ ಬರುತ್ತದೆಯೇ ಎಂಬುದನ್ನು ಸಮಯವೇ ಹೇಳುತ್ತದೆ” ಎಂದು ಹೇಳಿದ್ದಾರೆ.

ಬಿಹಾರದಲ್ಲಿನ ಪ್ರಸ್ತುತ ರಾಜಕೀಯ ಪ್ರಕ್ಷುಬ್ಧತೆ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ಇಂಡಿಯಾ” ಮೈತ್ರಿಕೂಟದಿಂದ ಹೊರಹೋಗುವ ಸಂಭಾವ್ಯತೆಯ ಬಗ್ಗೆ ಪ್ರಶ್ನಿಸಿದಾಗ, ಅಖಿಲೇಶ್ ಯಾದವ್ ಮತ್ತೊಮ್ಮೆ ಕಾಂಗ್ರೆಸ್ ಅನ್ನು ಟೀಕಿಸಿದರು ಮತ್ತು ಪಕ್ಷವು ಉಪಕ್ರಮವನ್ನು ತೆಗೆದುಕೊಂಡಿದ್ದರೆ ಪ್ರಸ್ತುತ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ಪ್ರತಿಪಾದಿಸಿದರು.

ನಿತೀಶ್ ಕುಮಾರ್ ಎನ್‌ಡಿಎ ಪಾಳಯಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ವರದಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಖಿಲೇಶ್, “ನಿತೀಶ್ ಕುಮಾರ್ ಅವರು “ಇಂಡಿಯಾ” ಮೈತ್ರಿಯೊಂದಿಗೆ ಇರಬೇಕೆಂದು ನಾನು ಬಯಸುತ್ತೇನೆ. ಎಲ್ಲಾ ನಂತರ, ಅವರೇ ಉಪಕ್ರಮವನ್ನು ತೆಗೆದುಕೊಂಡು ಭಾರತ ಮೈತ್ರಿಯನ್ನು ರಚಿಸಿದರು” ಎಂದು ಹೇಳಿದ್ದಾರೆ.

“ನಿತೀಶ್ ಕುಮಾರ್ ಏಕೆ ಅಸಮಾಧಾನಗೊಂಡಿದ್ದಾರೆ? ಅವರ ಕುಂದುಕೊರತೆಗಳನ್ನು ಚರ್ಚಿಸಬಹುದು, ಮತ್ತು ಅವರು ಕೇಳಿದಾಗ ಪರಿಹಾರವು ಹೊರಹೊಮ್ಮಬಹುದು ಎಂದು ನಾನು ಅರ್ಥಮಾಡಿಕೊಂಡಿದ್ದೇನೆ” ಎಂದು ಯುಪಿ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಜೆಡಿಯು ಮುಖ್ಯಸ್ಥರು ಬಿಹಾರದಲ್ಲಿ ಮತ್ತು ಪ್ರಾದೇಶಿಕ ಪಕ್ಷಗಳು ಮೈತ್ರಿಗೆ ಸೇರ್ಪಡೆಗೊಂಡ ಇತರ ರಾಜ್ಯಗಳಲ್ಲಿ “ಇಂಡಿಯಾ” ಮೈತ್ರಿಕೂಟದಲ್ಲಿ ವಿಫಲವಾದ ಸೀಟು ಹಂಚಿಕೆ ಮಾತುಕತೆಗಳ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಕೇವಲ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಲಾಭಕ್ಕಾಗಿ ಆಯೋಜಿಸಲಾಗಿದೆಯೇ ಹೊರತು “ಇಂಡಿಯಾ” ಮೈತ್ರಿಕೂಟಕ್ಕಲ್ಲ ಎಂದು ನಿತೀಶ್ ಕುಮಾರ್ ನಂಬಿದ್ದಾರೆ.

ಏತನ್ಮಧ್ಯೆ, ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಡುವಿನ ಆಂತರಿಕ ಭಿನ್ನಾಭಿಪ್ರಾಯವು ಬಿಹಾರದ ರಾಜಕೀಯ ವಲಯಗಳನ್ನು ಅಲುಗಾಡಿಸಿದೆ ಮತ್ತು ಪ್ರಸ್ತುತ ಸರ್ಕಾರವು ಭಾರಿ ಬದಲಾವಣೆಯತ್ತ ನೋಡುತ್ತಿದೆ.

ಬಿಹಾರದ ಮಹಾಘಟಬಂಧನ್‌ನ ಪ್ರಮುಖ ಮಿತ್ರಪಕ್ಷಗಳಾದ ಜೆಡಿಯು ಮತ್ತು ಆರ್‌ಜೆಡಿ 122ರ ಮಾಂತ್ರಿಕ ಗುರುತನ್ನು ಪೂರೈಸಲು ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿವೆ.

ನಿತೀಶ್ ಕುಮಾರ್ ಆಡಳಿತಾರೂಢ ಮೈತ್ರಿಕೂಟದಿಂದ ಜೆಡಿಯು ಹಿಂತೆಗೆದುಕೊಳ್ಳುವ ಸನ್ನಿವೇಶದಲ್ಲಿ, ಆರ್‌ಜೆಡಿ 122 ಅಂಕಗಳನ್ನು ತಲುಪಲು ಮತ್ತು ರಾಜ್ಯ ವಿಧಾನಸಭೆಯಲ್ಲಿ ತನ್ನ ಪ್ರಾಬಲ್ಯವನ್ನು ಕಾಪಾಡಿಕೊಳ್ಳಲು ಎಂಟು ಹೆಚ್ಚುವರಿ ಶಾಸಕರ ಅಗತ್ಯವಿದೆ.

ರಾಜಕೀಯ

ಗುವಾಹಟಿ: “ನನ್ನ ವಿರುದ್ಧ ಎಷ್ಟು ಪ್ರಕರಣಗಳು ಬೇಕಾದರು ದಾಖಲಿಸಿ; ನಾನು ಹೆದರುವುದಿಲ್ಲ” ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಜನವರಿ 14 ರಂದು ಮಣಿಪುರದಿಂದ ಮುಂಬೈಗೆ “ಭಾರತ್ ಜೋಡೋ ನ್ಯಾಯ ಯಾತ್ರೆ”ಯ ಎರಡನೇ ಹಂತವನ್ನು ಮಣಿಪುರದಲ್ಲಿ ಪ್ರಾರಂಭಿಸಿದರು. ಈ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಅಸ್ಸಾಂನ ಬಾರ್ಪೇಟಾ ಪ್ರದೇಶದಲ್ಲಿ 11ನೇ ದಿನದ ಯಾತ್ರೆ ಕೈಗೊಂಡಿದ್ದಾರೆ. ಆಗ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ” ದೇಶದಲ್ಲೇ ಭ್ರಷ್ಟ ಮುಖ್ಯಮಂತ್ರಿ ಯಾರು ಎಂದರೆ ಅದು ಅಸ್ಸಾಂ ಮುಖ್ಯಮಂತ್ರಿ” ಎಂದು ಟೀಕಿಸಿದರು.

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿಯಂತ್ರಿಸುತ್ತಿದ್ದಾರೆ. ಅಮಿತ್ ಶಾ ವಿರುದ್ಧ ಏನಾದರೂ ಹೇಳುವ ಧೈರ್ಯ ಮಾಡಿದರೆ ಅವರನ್ನು ಹೊರಹಾಕುತ್ತಾರೆ. ರಾಹುಲ್‌ಗೆ ಬೆದರಿಸೋಣ ಎಂಬ ಯೋಚನೆ ಎಲ್ಲಿಂದ ಬಂದಿತೋ ಗೊತ್ತಿಲ್ಲ.

ನನ್ನ ವಿರುದ್ಧ ಎಷ್ಟು ಪ್ರಕರಣಗಳು ಬೇಕಾದರು ದಾಖಲಿಸಿ; ನಾನು ಹೆದರುವುದಿಲ್ಲ. ಜಾತಿ, ಧರ್ಮ, ಭಾಷೆಯ ಆಧಾರದ ಮೇಲೆ ದೇಶವನ್ನು ಒಡೆಯಲು ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಿದ್ಧಾಂತ ಮಣಿಪುರವನ್ನು ಸುಟ್ಟು ಹಾಕಿದೆ. ಆದರೆ ದೇಶದ ಪ್ರಧಾನಿ ಇದುವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ.

ಮಣಿಪುರದಲ್ಲಿ ನಮ್ಮ “ಭಾರತ ಜೋಡೋ ನ್ಯಾಯ ಯಾತ್ರೆ” ಆರಂಭವಾಗಿದೆ; ಅದು ಮಹಾರಾಷ್ಟ್ರದವರೆಗೂ ಹೋಗುತ್ತದೆ. ಹಿಂಸೆ ಮತ್ತು ದ್ವೇಷದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ” ಎಂದು ಮಾತನಾಡಿದರು.

ರಾಜಕೀಯ

ಕೊಹಿಮಾ: ‘ಅಸ್ಸಾಂನಲ್ಲಿ ಭ್ರಷ್ಟ ಸರ್ಕಾರ ನಡೆಯುತ್ತಿದೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಆರೋಪಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಜನವರಿ 14 ರಂದು ಮಣಿಪುರದಿಂದ ಮುಂಬೈಗೆ “ಭಾರತ ಜೋಡೋ ನ್ಯಾಯ ಯಾತ್ರೆ”ಯ ಎರಡನೇ ಹಂತವನ್ನು ಮಣಿಪುರದಲ್ಲಿ ಪ್ರಾರಂಭಿಸಿದರು. 5ನೇ ದಿನವಾದ ಇಂದು (ಜ.18) ಅಸ್ಸಾಂ ರಾಜ್ಯದ ಶಿವಸಾಗರ ಜಿಲ್ಲೆಯಲ್ಲಿ ಪಾದಯಾತ್ರೆ ಕೈಗೊಂಡಿದ್ದಾರೆ.

ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ನಾವು ಭಾರತ ಜೋಡೋ ನ್ಯಾಯ ಯಾತ್ರೆಯನ್ನು ಮಣಿಪುರದಿಂದ ಪ್ರಾರಂಭಿಸಿದ್ದೇವೆ. ಈ ಯಾತ್ರೆಯು ಭಾರತದ ಎಲ್ಲಾ ಧರ್ಮಗಳು ಮತ್ತು ಜಾತಿಗಳನ್ನು ಒಂದುಗೂಡಿಸುವ ಗುರಿಯನ್ನು ಹೊಂದಿದೆ. ಬಿಜೆಪಿ ದೇಶದ ಜನತೆಗೆ ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಾಕಷ್ಟು ಅನ್ಯಾಯ ಮಾಡಿದೆ.

ನಾಟಕಕಾರ ಮತ್ತು ಸುಧಾರಕ ಶಂಕರದೇವ್ ಅವರು ಎಲ್ಲರನ್ನೂ ಒಟ್ಟಿಗೆ ಸೇರಿಸಲು ಪ್ರಯತ್ನಿಸಿದರು. ಭಾರತ ಜೋಡೋ ನ್ಯಾಯ ಯಾತ್ರೆಯ ಗುರಿಯೂ ಇದೇ ಆಗಿದೆ.

ಮಣಿಪುರವು ಅಂತರ್ಯುದ್ಧದ ಸ್ಥಿತಿಯಲ್ಲಿದೆ. ಆದರೆ ಪ್ರಧಾನಿ ಮೋದಿ ಮಣಿಪುರಕ್ಕೆ ಹೋಗಲಿಲ್ಲ. ನಾಗಾಲ್ಯಾಂಡ್‌ನಲ್ಲಿ ಪ್ರಧಾನಿ ಭರವಸೆ ಏನಾಯಿತು ಎಂದು ಜನರು ಕೇಳುತ್ತಿದ್ದಾರೆ. ಅಸ್ಸಾಂನಲ್ಲಿ ಭ್ರಷ್ಟ ಸರ್ಕಾರ ಆಡಳಿತ ನಡೆಸುತ್ತಿದೆ” ಎಂದು ರಾಹುಲ್ ಗಾಂಧಿ ಮಾತನಾಡಿದ್ದಾರೆ.