ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Rahul Gandhi Archives » Page 6 of 8 » Dynamic Leader
October 23, 2024
Home Posts tagged Rahul Gandhi (Page 6)
ರಾಜಕೀಯ

ಹೊಸದಿಲ್ಲಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕು ಎಂದು ಕಾಂಗ್ರೆಸ್‌ನ ಮಾಜಿ ಸಂಸದ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ಈಗಿನ ಸಂಸತ್ ಭವನವನ್ನು ಬ್ರಿಟಿಷರ ಆಳ್ವಿಕೆಯಲ್ಲಿ ನಿರ್ಮಿಸಲಾಗಿತ್ತು. ಸ್ಥಳಾವಕಾಶದ ಕೊರತೆಯಿಂದ ನೂತನ ಸಂಸತ್ ಭವನ ನಿರ್ಮಾಣ ಕಾರ್ಯ ಭರದಿಂದ ಸಾಗಿತ್ತು. ‘ಸೆಂಟ್ರಲ್ ವಿಸ್ಟಾ’ ಯೋಜನೆಯ ಭಾಗವಾಗಿ, ಹೊಸ ಸಂಸತ್ ಭವನದ ಕಟ್ಟಡವನ್ನು ನಿರ್ಮಿಸಲು, ಪ್ರಧಾನಿ ಮೋದಿ ಡಿಸೆಂಬರ್ 2020ರಲ್ಲಿ ಶಂಕುಸ್ಥಾಪನೆ ಮಾಡಿದರು.

ಈ ಹೊಸ ಕಟ್ಟಡಗಳು ಈಗ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿವೆ. ಮೇ 28 ರಂದು ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಸುದ್ದಿಯಾಗಿದೆ. ಜುಲೈನಲ್ಲಿ ನಡೆಯಲಿರುವ ಮಳೆಗಾಲದ ಅಧಿವೇಶನ ಕೂಡ ಈ ನೂತನ ಕಟ್ಟಡದಲ್ಲಿಯೇ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನಲೆಯಲ್ಲಿ ಇದರ ಬಗ್ಗೆ ಹೇಳಿಕೆ ನೀಡಿರುವ ರಾಹುಲ್ ಗಾಂಧಿ, “ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕು ಪ್ರಧಾನಿ ಉದ್ಘಾಟಿಸಬಾರದು” ಎಂದು ಹೇಳಿದ್ದಾರೆ.

ದೇಶ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ತಿಂಗಳ ಕೊನೆಯಲ್ಲಿ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಮೇ 31 ರಂದು ರಾಹುಲ್ ಗಾಂಧಿ ಅಮೆರಿಕಕ್ಕೆ ತೆರಳುತ್ತಿದ್ದು 10 ದಿನಗಳ ಕಾಲ ಅಲ್ಲಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದುಬಂದಿದೆ.

ಜೂನ್ 4 ರಂದು ನ್ಯೂಯಾರ್ಕ್ ನಗರದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯೊಂದರಲ್ಲಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ. ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ ನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಅಮೆರಿಕದಲ್ಲಿ ನೆಲೆಸಿರುವ ಸುಮಾರು 5000 ಅನಿವಾಸಿ ಭಾರತೀಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಲೋಕಸಭೆ ಸದಸ್ಯತ್ವ ಕಳೆದುಕೊಂಡ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡುತ್ತಿರುವುದು ಗಮನಾರ್ಹ.

ನ್ಯೂಯಾರ್ಕ್ ಅಲ್ಲದೆ, ರಾಹುಲ್ ಗಾಂಧಿ ಅಮೆರಿಕದ ರಾಜಧಾನಿ ವಾಷಿಂಗ್ಟನ್ ಮತ್ತು ಕ್ಯಾಲಿಫೋರ್ನಿಯಾಗೂ ಭೇಟಿ ನೀಡಲಿದ್ದಾರೆ. ರಾಹುಲ್ ಗಾಂಧಿ ಅಮೆರಿಕ ಪ್ರವಾಸದ ವೇಳೆ ಹಲವು ರಾಜಕೀಯ ಮುಖಂಡರು ಮತ್ತು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಿದ್ದು, ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

ಈ ಹಿಂದೆ ರಾಹುಲ್ ಗಾಂಧಿ ಅವರು ಲಂಡನ್ ಗೆ ಭೇಟಿ ನೀಡಿದಾಗ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮಾಡಿದ ಭಾಷಣ ವಿವಾದವಾಗಿತ್ತು. ರಾಹುಲ್ ಗಾಂಧಿ ಲಂಡನ್‌ನಲ್ಲಿ ಭಾರತೀಯ ಪ್ರಜಾಪ್ರಭುತ್ವವನ್ನು ಅವಮಾನಿಸುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿದ ಭಾರತೀಯ ಜನತಾ ಪಕ್ಷದ ನಾಯಕರು, ಬಜೆಟ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಕೂಡ ಮುಂದಿನ ತಿಂಗಳು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ.

ಅಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಪತ್ನಿ ಜಿಲ್ ಬೈಡನ್ ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಆತಿಥ್ಯ ನೀಡಲು ವ್ಯವಸ್ಥೆ ಮಾಡಿದ್ದಾರೆ. ಪ್ರಧಾನಿ ಮೋದಿ ಜೂನ್ 22 ರಂದು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಸುದ್ದಿಯಾಗಿದೆ.

ರಾಜಕೀಯ

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಹಗ್ಗಜಗ್ಗಾಟ ನಡುವೆ, ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸಂಜೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಇದಾದ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇಂದು ಸಂಜೆ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಕರ್ನಾಟಕದ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರವನ್ನು ನೀಡಿ, ಕರ್ನಾಟಕದಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರು ನಿರ್ಣಯವನ್ನು ಅಂಗೀಕರಿಸಿದ್ದರು. ನಿನ್ನೆ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರೆ, ಇಂದು ಬೆಳಗ್ಗೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.

ಸಾಂದರ್ಭಿಕ ಚಿತ್ರ

ನೂತನ ಮುಖ್ಯಮಂತ್ರಿ ಆಯ್ಕೆ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಕಾಂಗ್ರೆಸ್ ಮಾಜಿ ಸಂಸದ ರಾಹುಲ್ ಗಾಂಧಿ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

2014ರಲ್ಲಿ ಮೊಟ್ಟಮೊದಲ ಬಾರಿಗೆ ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕರಿಸಿದಾಗಿನಿಂದ ಪ್ರತಿ ತಿಂಗಳ ಕೊನೆಯ ಭಾನುವಾರದಂದು `ಮನ್ ಕಿ ಬಾತ್’ (ಮನಸ್ಸಿನ ಧ್ವನಿ) ಹೆಸರಿನಲ್ಲಿ ರೇಡಿಯೋ ಮೂಲಕ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ.

ಪ್ರಧಾನಿ ಮೋದಿಯವರು ರಾಷ್ಟ್ರವನ್ನುದ್ದೇಶಿಸಿ ತಮ್ಮ 100ನೇ ಮನ್ ಕಿ ಬಾತ್ ಭಾಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. 2014ರಲ್ಲಿ ಮೊಟ್ಟಮೊದಲ ಬಾರಿಗೆ ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕರಿಸಿದಾಗಿನಿಂದ ಪ್ರತಿ ತಿಂಗಳ ಕೊನೆಯ ಭಾನುವಾರದಂದು `ಮನ್ ಕಿ ಬಾತ್’ ಹೆಸರಿನಲ್ಲಿ ರೇಡಿಯೋ ಮೂಲಕ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಇದರ 100ನೇ ಭಾಷಣವನ್ನು ಏಪ್ರಿಲ್ 30 ರಂದು ವಿಶ್ವಸಂಸ್ಥೆಯಿಂದ ಹಿಡಿದು ಅಮೆರಿಕ, ಲಂಡನ್ ಮತ್ತು ಆಸ್ಟ್ರೇಲಿಯಾದವರೆಗೆ ಆಚರಿಸಲಾಯಿತು. ಭಾರತವೊಂದರಲ್ಲೇ ಪ್ರಧಾನಿ ಮೋದಿಯವರ 100ನೇ ಭಾಷಣ ಸಾವಿರಾರು ಸ್ಥಳಗಳಲ್ಲಿ ಪ್ರಸಾರವಾಯಿತು.

ಹೀಗಿರುವಾಗ ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ ಭಾಷಣದಿಂದ ಜನರಲ್ಲಿ ಆಗುವ ಪರಿಣಾಮಗಳೇನು? ಇದರಿಂದ ಪ್ರಧಾನಿ ಮೋದಿ ಏನನ್ನು ಸಾಧಿಸುತ್ತಿದ್ದಾರೆ? ಇದರ ಬಗ್ಗೆ ಕೆಲವು ಹಿರಿಯ ಬಿಜೆಪಿ ನಾಯಕರೊಂದಿಗೆ ಮಾತನಾಡಿದಾಗ,

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಅಮೆರಿಕಾದ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಮತ್ತು ಭಾರತೀಯ ಸಮುದಾಯದ ಸದಸ್ಯರು ಯುಎಸ್‌ನ ನ್ಯೂಜೆರ್ಸಿಯಲ್ಲಿ ಪ್ರಧಾನ ಮಂತ್ರಿಯವರ ‘ಮನ್ ಕಿ ಬಾತ್’ ನ 100 ನೇ ಸಂಚಿಕೆಯನ್ನು ಆಲಿಸಿದರು. ಪಿಟಿಐ

“ಈಶಾನ್ಯ ರಾಜ್ಯಗಳಿಂದ ಥಾರ್ ಮರುಭೂಮಿಯವರೆಗೆ, ಕಾರ್ಗಿಲ್ ಹಿಮ ಪ್ರದೇಶದಿಂದ ಕನ್ಯಾಕುಮಾರಿ ಸಮುದ್ರದ ಮೀನುಗಾರರವರೆಗೆ, ಪ್ರಧಾನಿ ಮೋದಿ ರೇಡಿಯೊ ಮೂಲಕ ಎಲ್ಲಾ ಪ್ರದೇಶಗಳ ಜನರನ್ನು ತಲುಪಿದ್ದಾರೆ. ಈ ಭಾಷಣದ ಮೂಲಕ ಸಮಾಜದ ಕಟ್ಟಕಡೆಯ ಜನರು ಮಾಡುವ ಒಳ್ಳೆಯ ಕೆಲಸಗಳನ್ನೂ ಸಾರ್ವಜನಿಕವಾಗಿ ಹೊಗಳಿದ್ದಾರೆ. ಸಾಮಾನ್ಯವಾಗಿ ನಾವು ರಾಷ್ಟ್ರದ ಹೆಮ್ಮೆಯನ್ನು ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವವರಿಗೆ ಹೋಲಿಕೆ ಮಾಡಿ ಹೆಚ್ಚು ಮಾತನಾಡುತ್ತೆವೆ. ಆದರೆ ಸಾಮಾಜಿಕವಾಗಿ ಕೆಳ ಹಂತದಲ್ಲಿರುವ ಜನರು ಹೇಗೆ ಅತ್ಯುತ್ತಮವಾಗಿದ್ದರೆ ಎಂಬುದರ ಕುರಿತು ಪ್ರಧಾನಿ ಮೋದಿ ಮಾತನಾಡುತ್ತಾರೆ.

ಕುಂಬಾರ, ಕ್ಷೌರಿಕ, ಮರವನ್ನು ನೆಟ್ಟ ಮುದುಕಿ, ಬಾಳೆಲೆಯಲ್ಲಿ ಕರಕುಶಲ ಮಾಡುವ ಮಹಿಳೆಯಂತೆ ಸರಳ ಜನರ ಬಗ್ಗೆ ಮಾತನಾಡುತ್ತಾರೆ. ಪ್ರಜಾಪ್ರಭುತ್ವದ ಅಭಿವೃದ್ಧಿ ಎಂದರೆ ತಪ್ಪು ಮಾಡಿದವರನ್ನು ಶಿಕ್ಷಿಸುವುದು ಮಾತ್ರವಲ್ಲ; ಒಳ್ಳೆಯವರನ್ನು ಪ್ರಶಂಶಿಸುವುದು ಕೂಡ. ಒಳ್ಳೆಯದನ್ನು ಮಾಡುವ ಸಾಮಾನ್ಯ ಜನರನ್ನು ಪ್ರಧಾನಿ ಮೋದಿ ಬಡಿದೆಬ್ಬಿಸುತ್ತಿದ್ದಾರೆ. ಇದು ಆ ಜನರಲ್ಲಿ ಭಾರೀ ಪ್ರಭಾವ ಮತ್ತು ಉತ್ಸಾಹವನ್ನು ಸೃಷ್ಟಿಸುತ್ತಿದೆ. ಪ್ರಧಾನಿಯವರ ವ್ಯಕ್ತಿತ್ವದ ಮೋಡಿ ಜನರನ್ನು ಆಕರ್ಷಿಸಿದೆ. ಇದೆಲ್ಲದಕ್ಕೂ ಮನ್ ಕಿ ಬಾತ್ ಭಾಷಣದ ಮೂಲಕ ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳುತ್ತಾರೆ.

ದೆಹಲಿಯಲ್ಲಿ ರೈತರ ಹೋರಾಟ

ಪ್ರಧಾನಿಯಾಗಿ ದೇಶದ ಜನರಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಹಾಗೂ ಒಳ್ಳೆಯ ವಿಷಯಗಳನ್ನು ಪ್ರಶಂಶಿಸಲು ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ಮೂಲಕ ರೇಡಿಯೋ ಭಾಷಣ ಮಾಡುತ್ತಿರುವುದು ಒಂದು ಸಾಧನೆಯೇ; ಅದರಲ್ಲಿ ಎರಡು ಮಾತಿಲ್ಲ. ಆದರೆ, ಅವರ ಮಾತಿಗೂ ನಡವಳಿಕೆಗೂ ಯಾವುದೇ ಸಂಬಂಧವಿಲ್ಲ. ಅವರು ಜನರಿಗಾಗಿ ಮಾತನಾಡುತ್ತಿದ್ದಾರೆ ಎಂದರೆ, ರೈತರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ದೆಹಲಿಯಲ್ಲಿ ಒಂದು ವರ್ಷಕ್ಕೂ ಮೇಲಾಗಿ ಹೋರಾಟ ನಡೆಸುತ್ತಿದ್ದಾಗ ಅವರನ್ನು ಭೇಟಿ ಮಾಡಲಿಲ್ಲ. ಅವರ ಸಮಸ್ಯೆಯನ್ನೂ ಕೇಳಲಿಲ್ಲ. ಕನಿಷ್ಠ ಕೃಷಿ ಸಚಿವರನ್ನಾದರೂ ಅಲ್ಲಿಗೆ ಕಳುಹಿಸಿಕೊಡುವ ಆಲೋಚನೆ ಮಾಡಲಿಲ್ಲ.

ಕುಸ್ತಿ ಪಟುಗಳೊಂದಿಗೆ ಪ್ರಿಯಾಂಕಾ ಗಾಂಧಿ

ಈಗಲೂ ದೆಹಲಿಯಲ್ಲಿ ಮಹಿಳಾ ಕುಸ್ತಿಪಟುಗಳು ಪರದಾಡುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಆಲಿಸಲು ಕೂಡ ಪ್ರಧಾನಿ ಮೋದಿ ಸಿದ್ಧರಿಲ್ಲ! ಆದರೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೇಳಿದರು. ಅವರ ಜೊತೆ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿ ಸಾಂತ್ವನ ಹೇಳಿದರು.

1977ರಲ್ಲಿ ಬಿಹಾರದ ಬೆಲ್ಚಿಯಲ್ಲಿ ಇಂದಿರಾಗಾಂಧಿ

1977ರಲ್ಲಿ ಬಿಹಾರದ ಬೆಲ್ಚಿಯಲ್ಲಿ 10ಕ್ಕೂ ಹೆಚ್ಚು ದಲಿತರನ್ನು ಜಾತಿ ಭೂಮಾಲೀಕರ ಗುಂಪು ಗುಂಡಿಕ್ಕಿ ಕೊಂದಿತು. ಅಂದು ಇಂದಿರಾಗಾಂಧಿಯವರು ಅತಿವೃಷ್ಟಿ, ನದಿಯಲ್ಲಿನ ಪ್ರವಾಹ, ಕೆಸರುಮಯವಾದ ರಸ್ತೆ ಹೀಗೆ ನಾನಾ ಅಡೆತಡೆಗಳನ್ನು ದಾಟಿ 10 ಕಿ.ಮೀ.ಗೂ ಹೆಚ್ಚು ದೂರ ಆನೆಯ ಮೇಲೆ ಕುಳಿತು ಸಂತ್ರಸ್ತರ ಕುಟುಂಬದವರನ್ನು ಖುದ್ದಾಗಿ ಭೇಟಿ ಮಾಡಿ ಸಾಂತ್ವನ ಹೇಳಿದರು! ಅವರು ಆ ಜನರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿದರು. ರಾಜೀವ್ ಗಾಂಧಿ ಕೂಡ ಅದನ್ನೇ ಮಾಡಿದರು.

ರಾಹುಲ್ ಗಾಂಧಿ

ಆ ಸಾಲಿನಲ್ಲಿ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯ ಮೂಲಕ ದೇಶದ ಜನರನ್ನು ಖುದ್ದು ಭೇಟಿಯಾದರು. ಜನರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. “ಎಲ್ಲೆಲ್ಲಿ ಜನರು ಸಂಕಷ್ಟಕ್ಕೆ ಒಳಗಾಗುತ್ತಾರೋ ಅಲ್ಲಲ್ಲೇ ಅವರ ಅಹವಾಲನ್ನು ಆಲಿಸಬೇಕು” ಎಂಬ ನೆಹರೂ ಕುಟುಂಬದ ಪರಂಪರೆಯೇ ಇದಕ್ಕೆಲ್ಲ ಮೂಲ ಕಾರಣ.

ಆದರೆ ಪ್ರಧಾನಿ ಮೋದಿಯವರು ಟಿವಿ ಮತ್ತು ಮನ್ ಕಿ ಬಾತ್ ರೇಡಿಯೊದಲ್ಲಿ ಮಾತ್ರ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಆದರೆ, ಅವರು ಜನರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಸಮಸ್ಯೆಯನ್ನು ಆಲಿಸಲು ಸಿದ್ಧರಿಲ್ಲ. ದೇಶದ ಚುನಾಯಿತ ಪ್ರಧಾನಿಗೆ ಪ್ರಜಾಪ್ರಭುತ್ವದ ಪ್ರಜ್ಞೆ ಇರಬೇಕು. ಸಂಸತ್ತಿನಲ್ಲಿ ಅಗತ್ಯಕ್ಕಿಂತ ಹೆಚ್ಚು ಸಂಸದರನ್ನು ಹೊಂದಿದ್ದಾರೆ. ಆದರೆ, ಅವರು ಸಂಸದೀಯ ಪ್ರಜಾಪ್ರಭುತ್ವವಾದಿಯಾಗಿಲ್ಲ! ಜನರಿಗೆ ಮೋದಿ ಮೇಲೆ ನಂಬಿಕೆ ಇಲ್ಲ. ಯಾಕೆಂದರೆ ಮೋದಿ ಪ್ರಜಾಪ್ರಭುತ್ವವಾದಿಯಲ್ಲ! ಜನರಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ವಾಧಿಕಾರಿ!

ರಾಜಕೀಯ

ತುಮಕೂರು: “ಕಳೆದ 3 ವರ್ಷಗಳಿಂದ ಬಿಜೆಪಿ ಮಾಡುತ್ತಿರುವ ಏಕೈಕ ಕೆಲಸವೆಂದರೆ ಅದು ಭ್ರಷ್ಟಾಚಾರ ಮಾತ್ರ. ಇದರಿಂದಾಗಿ ಕರ್ನಾಟಕದ ಜನತೆ ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಕರೆಯುತ್ತಾರೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ  .

ತುಮಕೂರುನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಪ್ರಧಾನಿ ಮೋದಿ ಕರ್ನಾಟಕಕ್ಕೆ ಬರುತ್ತಾರೆ, ಬಂದು ತಮ್ಮ ಬಗ್ಗೆ ಮಾತ್ರವೇ ಮಾತನಾಡುತ್ತಾರೆ. ಕರ್ನಾಟಕ ಚುನಾವಣೆ ತನ್ನ ಬಗ್ಗೆ ಅಲ್ಲ ಎಂಬುದನ್ನು ನರೇಂದ್ರ ಮೋದಿ ಅರ್ಥಮಾಡಿಕೊಳ್ಳಬೇಕು ಎಂದು ಲೇವಡಿ ಮಾಡಿದರು. ತಮ್ಮ ಬಗ್ಗೆ ಮಾತನಾಡುವ ಬದಲು ಬಿಜೆಪಿ ಸರ್ಕಾರದ ಕಾರ್ಯಗಳು ಮತ್ತು ಕರ್ನಾಟಕದ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ಮಾತನಾಡುವಂತೆ ಪ್ರಧಾನಿಯನ್ನು ಕೋರಿದ ಅವರು, ನೀವು ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಬಂದಿದ್ದೀರಿ, ಆದರೆ ಕರ್ನಾಟಕದ ಬಗ್ಗೆ ಮಾತನಾಡದೇ ನೀವು ನಿಮ್ಮ ಬಗ್ಗೆ ಮಾತ್ರವೇ ಮಾತನಾಡುತ್ತೀರಿ.

ಮುಂದಿನ ಐದು ವರ್ಷಗಳಲ್ಲಿ ನೀವು ಏನು ಮಾಡುತ್ತೀರಿ, ಯುವಕರು, ಶಿಕ್ಷಣ, ಆರೋಗ್ಯ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಏನು ಮಾಡುತ್ತೀರಿ ಎಂಬುದರ ಕುರಿತು ನಿಮ್ಮ ಭಾಷಣಗಳಲ್ಲಿ ನೀವು ಮಾತನಾಡಬೇಕು. ಈ ಚುನಾವಣೆ ನಿಮ್ಮದಲ್ಲ, ಕರ್ನಾಟಕದ ಜನರು ಮತ್ತು ಭವಿಷ್ಯದ ಬಗ್ಗೆ ಆಗಿದೆ. ಕಳೆದ ಮೂರು ವರ್ಷಗಳಿಂದ ಬಿಜೆಪಿಯವರು ಭ್ರಷ್ಟಾಚಾರ ಮಾತ್ರ ಮಾಡುತ್ತಿದ್ದಾರೆ. ಇದರ ಫಲವಾಗಿ ಕರ್ನಾಟಕದ ಜನ ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಕರೆಯುತ್ತಾರೆ. ಅಂದರೆ ಬಿಜೆಪಿಯವರು ಸಾರ್ವಜನಿಕರಿಗೆ ಮಾಡುವ ಎಲ್ಲಾ ಕೆಲಸಗಳಿಗೆ ಜನರಿಂದ ಶೇಕಡಾ 40 ಪರ್ಸೆಂಟ್ ಕಮಿಷನ್ ಪಡೆಯುತ್ತಾರೆ ಎಂಬುದಕ್ಕಾಗಿ. ಇದು ಪ್ರಧಾನಿಗೂ ಗೊತ್ತಿದೆ. ಆದರೆ ಅವರು ಏಕೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ?

ಕಾಂಗ್ರೆಸ್ 91 ಬಾರಿ ನಿಮ್ಮನ್ನು ನಿಂದಿಸಿದೆ ಎಂದು ನೀವು ಹೇಳುತ್ತೀರಿ, ಆದರೆ ನೀವು ಕರ್ನಾಟಕಕ್ಕಾಗಿ ಏನು ಮಾಡಿದ್ದೀರಿ ಎಂಬುದರ ಬಗ್ಗೆ ಮಾತನಾಡುವುದಿಲ್ಲ. ಮುಂದಿನ ಭಾಷಣದಲ್ಲಿ ನೀವು ಏನು ಮಾಡಿದ್ದೀರಿ ಮತ್ತು ಮುಂದಿನ ಐದು ವರ್ಷಗಳಲ್ಲಿ ನೀವು ಏನು ಮಾಡುತ್ತೀರಿ ಎಂಬುದರ ಕುರಿತು ಮಾತನಾಡಿ” ಎಂದು ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಕಿಡಿ ಕಾರಿದರು.

ರಾಜಕೀಯ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ನಾಯಕರು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಪ್ರಚಾರದಲ್ಲಿ ಮಾತನಾಡುತ್ತಾ, ಪ್ರಧಾನಿ ಮೋದಿಯನ್ನು ವಿಷ ಷರ್ಪ ಎಂದು ಮೂದಲಿಸಿದ್ದರು.

ಏತನ್ಮಧ್ಯೆ, ನಿನ್ನೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ, “ಕಾಂಗ್ರೆಸ್ ಪಕ್ಷದ ನಾಯಕರು ಇಲ್ಲಿಯವರೆಗೆ 91 ಬಾರಿ ತಮ್ಮನ್ನು ನಿಂದಿಸಿದ್ದಾರೆ” ಎಂದು ಹೇಳಿದರು.

ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಾಗಲಕೋಟೆ ಜಿಲ್ಲೆಯ ಜಮಕಂಡಿ ತಾಲೂಕಿನಲ್ಲಿ ಪ್ರಚಾರ ನಡೆಸಿದರು. ನಂತರ ಮಾತನಾಡಿದ ಅವರು, “ಪ್ರಧಾನಿ ಮೋದಿ ತಮ್ಮ ಬಗ್ಗೆ 91 ಬಾರಿ ದೂಷಣೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಆ ನಿಂದನೆಯ ದೂರುಗಳು ಒಂದೇ ಪುಟದಲ್ಲಿ ಅಡಗಿಬಿಡುತ್ತವೆ. ಆದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಹೇಳಿರುವ ಅಪಪ್ರಚಾರಗಳನ್ನು ಪಟ್ಟಿ ಮಾಡಿದರೆ ಪುಸ್ತಕಗಳಾಗಿ ಪ್ರಕಟಿಸಬಹುದು” ಎಂದು ಹೇಳಿದರು.

“ಸಾರ್ವಜನಿಕರನ್ನು ಭೇಟಿಯಾಗುವ ಪ್ರಧಾನ ಮಂತ್ರಿಗಳು ಜನರ ಸಮಸ್ಯೆಗಳನ್ನು ಆಲಿಸದೆ ತಮ್ಮ ಅಹವಾಲುಗಳನ್ನು ಮಾತ್ರ ಹೇಳಿಕೊಳ್ಳುತ್ತಾರೆ. ಮಾಜಿ ಪ್ರಧಾನಿಗಳಾದ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಗುಂಡೇಟು ಪಡೆದು ಮಡಿದಿದ್ದಾರೆ. ಪಿ.ವಿ.ನರಸಿಂಹರಾವ್, ಮನಮೋಹನ್ ಸಿಂಗ್ ಅವರಂತಹ ಪ್ರಧಾನಿಗಳು ದೇಶಕ್ಕಾಗಿ ಶ್ರಮಿಸಿದ್ದಾರೆ.

ಆದರೆ ಪ್ರಧಾನಿ ಮೋದಿ ಮಾತ್ರ ಜನರ ಮುಂದೆ ತಮ್ಮ ಬಗ್ಗೆ ಅಳುತ್ತಾರೆ. ನಿಮಗೆ ಧೈರ್ಯವಿದೆಯೇ? ನನ್ನ ಸಹೋದರ ರಾಹುಲ್ ಗಾಂಧಿಯಿಂದ ಕಲಿಯಿರಿ. ನನ್ನ ಸಹೋದರ ರಾಹುಲ್ ಗಾಂಧಿ ನೀವು ನೋವಿನಿಂದ ಮಾತನಾಡಿದರೂ, ಗುಂಡು ಹಾರಿಸಿದರೂ, ಇರಿದರೂ, ಸತ್ಯದ ಮಾರ್ಗವನ್ನು ಅನುಸರಿಸುತ್ತಾರೆ. ರಾಹುಲ್ ಗಾಂಧಿ ಈ ದೇಶಕ್ಕಾಗಿ ಪ್ರಾಣ ಕೊಡಲು ಸಿದ್ಧ” ಎಂದು ಹೇಳಿದರು.

ರಾಜಕೀಯ

ಕಮಲಹಾಸನ್‌ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಪ್ರಚಾರ ನಡೆಸಲಿದ್ದಾರೆ.

ಕೊಯಮತ್ತೂರು: ಕರ್ನಾಟಕ ಚುನಾವಣೆಗೆ ಬೆಂಬಲ ನೀಡುವಂತೆ ರಾಹುಲ್ ಗಾಂಧಿ ಅವರು ಕಮಲಹಾಸನ್‌ ಅವರನ್ನು ಕೇಳಿರುವುದರಿಂದ ಅವರು ಕರ್ನಾಟಕದಲ್ಲಿ ಪ್ರಚಾರಕ್ಕೆ ಬರಲಿದ್ದಾರೆ ಎಂದು ವರದಿಯಾಗಿದೆ.

ನಿನ್ನೆ (ಏಪ್ರಿಲ್ 28) ಮಧ್ಯಾಹ್ನ ಕೊಯಮತ್ತೂರಿನಲ್ಲಿ ಮಕ್ಕಳ್ ನೀದಿ ಮಯ್ಯಂ ಅಧ್ಯಕ್ಷ ಕಮಲಹಾಸನ್‌ ಅಧ್ಯಕ್ಷತೆಯಲ್ಲಿ ಸಂಸತ್ ಚುನಾವಣೆಯ ಸಿದ್ಧತೆ ಕುರಿತು ಸಮಾಲೋಚನಾ ಸಭೆ ನಡೆಯಿತು.

ಈ ಸಭೆಯಲ್ಲಿ ಪಕ್ಷದ ಆಡಳಿತ ಮಂಡಳಿ ಸದಸ್ಯರು, ಕಾರ್ಯಕಾರಿ ಸಮಿತಿ ಮತ್ತು ಕೊಯಮತ್ತೂರು ಹಾಗೂ ಸೇಲಂ ವಲಯದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಮಲಹಾಸನ್‌,

ರಾಹುಲ್ ಗಾಂಧಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಪ್ರಚಾರ ಮಾಡಲು ಕೇಳಿಕೊಂಡಿದ್ದಾರೆ. ಅದೇ ರೀತಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೂ ಆಹ್ವಾನ ಪತ್ರವನ್ನೂ ಕಳುಹಿಸಿದ್ದಾರೆ. ಶೀಘ್ರವೇ ತಮ್ಮ ನಿರ್ಧಾರವನ್ನು ಪ್ರಕಟಿಸುವುದಾಗಿ ತಿಳಿಸಿದರು.

ಸಂವಿಧಾನಕ್ಕೆ ಅಪಾಯ ಬಂದಾಗ ಪಕ್ಷಾತೀತವಾಗಿ ಅದನ್ನು ಉಳಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ಕಮಲಹಾಸನ್‌ ಹೇಳಿದರು. ಈಗಾಗಲೇ ರಾಹುಲ್ ಗಾಂಧಿಗೆ ಆಪ್ತರಾಗಿರುವ ಕಮಲಹಾಸನ್‌ ಈರೋಡ್ ಉಪ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇವಿಕೆಎಸ್ ಇಳಂಗೋವನ್ ಪರ ಪ್ರಚಾರ ನಡೆಸಿದ್ದರು. ಕರ್ನಾಟಕದ ತಮಿಳು ಪ್ರಾಬಲ್ಯದ ಪ್ರದೇಶಗಳಲ್ಲಿ ಕಮಲ್ ಹಾಸನ್ ಶೀಘ್ರದಲ್ಲೇ ಪ್ರಚಾರ ಮಾಡುವ ನಿರೀಕ್ಷೆಯಿದೆ.

ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ಹಾಸ್ಯ ಪ್ರಜ್ಞೆ ಎಲ್ಲರಿಗೂ ಅಗತ್ಯ; ಹಾಸ್ಯಕ್ಕೆ ಭಾವನೆಗಳನ್ನು ಪರಿವರ್ತಿಸುವ ಶಕ್ತಿ ಇದೆ. ಮಹಾತ್ಮ ಗಾಂಧೀಜಿಯವರು “ನನಗೆ ಹಾಸ್ಯ ಪ್ರಜ್ಞೆ ಇಲ್ಲದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ” ಎಂದು ಹೇಳಿದರಂತೆ.

ಆದರೆ ಪ್ರಧಾನಿ ನರೇಂದ್ರ ಮೋದಿಯವರು ಆತ್ಮಹತ್ಯೆಯನ್ನು ತಮಾಷೆ ಎಂಬ ಹೆಸರಿನಲ್ಲಿ ವ್ಯಾಖ್ಯಾನಿಸಿ, ಭಾರತದ ಯುವ ಪೀಳಿಗೆಗೆ ಅವಮಾನ ಮಾಡಿದ್ದಾರೆ. ಹಾಸ್ಯವು ಯಾರ ಹೃದಯವನ್ನೂ ನೋಯಿಸದಂತೆ ಇರಬೇಕು ಎಂಬುದು ಸಾಮಾನ್ಯ ನಿಯಮ.

ಬಿಜೆಪಿ ಪರಿವಾರವನ್ನು ಹೊಗಳುವುದು ಮತ್ತು ಇತರರನ್ನು ನಿಂದಿಸುವುದೇ ವೃತ್ತಿಯನ್ನಾಗಿ ಮಾಡಿಕೊಂಡಿರುವ ರಿಪಬ್ಲಿಕ್ ಟಿವಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಒಬ್ಬ ಪ್ರೊಫೆಸರ್ ಮಗಳು, ‘ನನಗೆ ಬದುಕಲು ಇಷ್ಟವಿಲ್ಲ ಮತ್ತು ನಾನು ಕಂಗಾರಿಯಾ ಸರೋವರಕ್ಕೆ ಹಾರಿ ಸಾಯುತ್ತೇನೆ’ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಳಂತೆ ಮರುದಿನ ಪ್ರಾಧ್ಯಾಪಕರು ಪತ್ರವನ್ನು ನೋಡಿ ಇಷ್ಟು ವರ್ಷ ಹೇಳಿದರೂ , ಅವಳು ಇನ್ನೂ ಕಂಗಾರಿಯಾ ಸರೋವರದ ಹೆಸರನ್ನು ತಪ್ಪಾಗಿಯೇ ಬರೆದಿದ್ದಾಳೆ’ ಎಂದು ಕೋಪಗೊಂಡರೆಂತೆ ಎಂದು ಹಾಸ್ಯ ಮಾಡಿದ್ದಾರೆ. ಈ ರೀತಿಯ ಕ್ರೂರ ಹಾಸ್ಯಕ್ಕೆ ಇದೀಗ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಕರ್ನಾಟಕದ ಕೋಲಾರದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಿರ್ದಿಷ್ಟ ವ್ಯಕ್ತಿಗಳ ಹೆಸರುಗಳು ಒಂದೇ ರೀತಿಯಲ್ಲಿ ಕೊನೆಗೊಳ್ಳುತ್ತದೆ ಎಂದು ಲೇವಡಿ ಮಾಡಿದ್ದ ಕಾರಣಕ್ಕೆ, ಅದನ್ನು ದೊಡ್ಡ ಸಮಸ್ಯೆಯನ್ನಾಗಿ ಮಾಡಿ; ಸೂರತ್‌ನಲ್ಲಿ ಪ್ರಕರಣ ದಾಖಲಿಸಿ; ತಕ್ಷಣ ತನಿಖೆ ನಡೆಸಿ; ಶಿಕ್ಷೆ ವಿಧಿಸಿ; ಅವರ ಸಂಸದ ಸ್ಥಾನವನ್ನೂ ರದ್ದುಪಡಿಸಿ, ಮನೆಯಿಂದ ಹೊರಹಾಕಲಾಯಿತು. ಅಷ್ಟರಮಟ್ಟಿಗೆ ಆಡಳಿತಗಾರರಿಗೆ ‘ಹಾಸ್ಯ ಪ್ರಜ್ಞೆ’ ಹೆಚ್ಚು.

ಭಾರತದಲ್ಲಿ ಯುವಕರ ಆತ್ಮಹತ್ಯೆ ಪ್ರಮಾಣ ಆತಂಕಕಾರಿಯಾಗಿದೆ. ಎನ್‌ಸಿಆರ್‌ಬಿ ಅಂಕಿ ಅಂಶಗಳ ಪ್ರಕಾರ, 2021ರಲ್ಲಿ 1 ಲಕ್ಷದ 64 ಸಾವಿರದ 33 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂದು ತಿಳಿದುಬಂದಿದೆ. 1990ರ ದಶಕದಲ್ಲಿ ಆಧುನಿಕ ಉದಾರೀಕರಣ ನೀತಿಗಳ ಅನುಷ್ಠಾನದ ನಂತರ, ಭಾರತದ ಜನರ ಜೀವನೋಪಾಯಕ್ಕೆ ತೀವ್ರ ತೊಂದರೆಯಾಗಿದೆ.

ಜೀವನದಲ್ಲಿ ಅಭದ್ರತೆ ಇದ್ದಂತೆ ಕಾಣುತ್ತದೆ ಎಂದು ಹದಿಹರೆಯದವರು ತಮ್ಮ ಭಾವನೆಗಳನ್ನು ದಾಖಲಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರ ಅನುಸರಿಸುತ್ತಿರುವ ಆರ್ಥಿಕ ನೀತಿಗಳಿಂದ ನಿರುದ್ಯೋಗ ಹೆಚ್ಚುತ್ತಿದೆ. ವರ್ಷಕ್ಕೆ 2 ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ಹೇಳಿದರು. ಈ ಬಗ್ಗೆ ಕೇಳಿದರೆ ಯುವಕರು ಪಕೋಡ ಮಾರಿ ಬದುಕಬಹುದು ಎಂದು ಸಲಹೆ ನೀಡುತ್ತಾರೆ.

ಭಾರತದಲ್ಲಿ ಯುವಕರು ಅದರಲ್ಲೂ ಯುವತಿಯರೇ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಿವಿಧ ಅಂಕಿ ಅಂಶಗಳು ತೋರಿಸುತ್ತಿರುವ ಹಿನ್ನಲೆಯಲ್ಲಿ, ಆತ್ಮಹತ್ಯೆ ಮಾಡಿಕೊಳ್ಳುವವರ ಸ್ಥಿತಿಯನ್ನು ತಮಾಷೆಯಾಗಿ ಪರಿವರ್ತಿಸುವುದು ವಿನೋದವಲ್ಲ. ಅದೊಂದು ಕ್ರೂರ ಹಾಸ್ಯ.

ರಾಜಕೀಯ

ಮಂಗಳೂರು: ಸಾರ್ವಜನಿಕ ಬಸ್‌ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವುದಾಗಿ ಕಾಂಗ್ರೆಸ್ ಪಕ್ಷವು ಇಂದು ಐದನೇ ಗ್ಯಾರಂಟಿಯನ್ನು ಘೋಷಣೆ ಮಾಡಿದೆ. ಮೊದಲ 4 ಗ್ಯಾರಂಟಿ ಯೋಜನೆಯನ್ನು ಸೇರಿ, ಈ ಐದೂ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡಲಾಗುವುದು ಎಂಬ ಭರವಸೆಯನ್ನು ಸಹ ನೀಡಿದೆ.

ಮಂಗಳೂರಿನಲ್ಲಿ ಗುರುವಾರ ನಡೆದ ಕಾಂಗ್ರೆಸ್‌ ಪ್ರಚಾರ ಸಮಾವೇಶದಲ್ಲಿ ರಾಹುಲ್‌ ಗಾಂಧಿ 5ನೇ ಗ್ಯಾರಂಟಿಯನ್ನು ಘೋಷಣೆ ಮಾಡಿದರು. ಬಳಿಕ ಮಾತನಾಡಿ ರಾಹುಲ್‌ ಗಾಂಧಿ, “ಮೋದಿ ಅವರೇ ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಹೇಳಿದ್ದೀರಿ. ಈ ಸಂದರ್ಭದಲ್ಲಿ ನಿಮಗೆ ಒಂದು ಸವಾಲು ಹಾಕುತ್ತಿದ್ದೇನೆ. ನಮ್ಮ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು, ನಾವು ನಮ್ಮ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ನಾವು ಈ ಯೋಜನೆಗಳನ್ನು ಜಾರಿ ಮಾಡಿದ ನಂತರ ನೀವು ದೇಶದಲ್ಲಿ ಈ ಯೋಜನೆಗಳನ್ನು ಜಾರಿ ಮಾಡಲು ಸಿದ್ಧರಿದ್ದೀರಾ”? ಎಂದು ಸವಾಲು ಹಾಕಿದರು.

ಸಾಂದರ್ಭಿಕ ಚಿತ್ರ

ಈ ಹಿಂದೆ ಕಾಂಗ್ರೆಸ್ಪಕ್ಷ ಘೋಷಿಸಿದ ನಾಲ್ಕು ಗ್ಯಾರಂಟಿಗಳು:
ಗ್ಯಾರಂಟಿ-1: ಭಾಗ್ಯಜ್ಯೋತಿ ಯೋಜನೆಯಲ್ಲಿ ರಾಜ್ಯದಲ್ಲಿ ಪ್ರತಿ ಮನೆಗೂ 200 ಯೂನಿಟ್‌ನಷ್ಟು ಉಚಿತವಾಗಿ ವಿದ್ಯುತ್‌ ನೀಡಲಾಗುವುದು.

ಗ್ಯಾರಂಟಿ-2: ಗೃಹಲಕ್ಷ್ಮೀ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಪ್ರತಿ ತಿಂಗಳು ರೂ.2 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು.
ಗ್ಯಾರಂಟಿ-3: ಬಿಪಿಎಲ್‌ ಕುಟುಂಬಗಳಿಗೆ ಪ್ರತಿ ತಿಂಗಳು ತಲಾ ಒಬ್ಬ ವ್ಯಕ್ತಿಗೆ 10 ಕೆ.ಜಿ ಅನ್ನಭಾಗ್ಯ ಅಕ್ಕಿ ನೀಡಲಾಗುವುದು.
ಗ್ಯಾರಂಟಿ-4: ಯುವ ನಿಧಿ ಯೋಜನೆಯಲ್ಲಿ ಪದವೀಧರ ನಿರುದ್ಯೋಗ ಯುವಜನರಿಗೆ ಪ್ರತಿ ತಿಂಗಳು 3 ಸಾವಿರ ಭತ್ಯೆ, ಡಿಪ್ಲೊಮೋ ಮುಗಿಸಿದವರಿಗೆ ಒಂದೂವರೆ ಸಾವಿರ ರೂಪಾಯಿ ಭತ್ಯೆ ನೀಡುವುದಾಗಿ ಭರವಸೆ ನೀಡಿದೆ.

“ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 150 ಸ್ಥಾನ ಗೆಲ್ಲುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. 40% ಕಮೀಷನ್ ಪಡೆಯುವ ಬಿಜೆಪಿಗೆ‌ 40 ಸೀಟ್ ಅಷ್ಟೇ ನೀಡಿ” ಎಂದರು.

“ಇಂದು ಯಾವ ಪರಿಸ್ಥಿತಿ ಇದೆ ಎಂದರೆ, ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ; ಏನೇ ಆದರೂ ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸಲು ಸಾಧ್ಯವಿಲ್ಲ. 40 ಕೋಟಿ ಜನ ಮತ್ತೆ ಬಡತನ ರೇಖೆಗಿಂತ ಕೆಳಗೆ ಹೋಗಿದ್ದಾರೆ. ದೇಶದ ಶೇ.1ರಷ್ಟು ಜನರ ಬಳಿ ದೇಶದ 40% ಸಂಪತ್ತು ಇದೆ. 90 ಲಕ್ಷ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಮುಚ್ಚಿವೆ ಇದು ಬಿಜೆಪಿಯ ವಿಕಾಸ. ಭ್ರಷ್ಟಾಚಾರ 40%, ನಿರುದ್ಯೋಗ, ಬೆಲೆ ಏರಿಕೆಯೆ ಬಿಜೆಪಿಯ ಸಾಧನೆ” ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಭಾರತದ ಉದ್ಯಮಿ ಅದಾನಿಯು ವಂಚನೆ ಮತ್ತು ಅವ್ಯವಹಾರದ ಆರೋಪಕ್ಕೆ ಒಳಗಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನಲೆಯಲ್ಲಿ ಎನ್‌ಸಿಪಿ ನಾಯಕ ಶರದ್ ಪವಾರ್ ಅವರನ್ನು ಏಕೆ ಭೇಟಿಯಾದರು?

‘ಇನ್ನು 15 ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಎರಡು ಬಾಂಬ್‌ಗಳು ಸ್ಫೋಟಗೊಳ್ಳಲಿದೆ’ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಪುತ್ರಿ ಹಾಗೂ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಉದ್ಯಮಿ ಅಧಾನಿ, ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ. ಗೌತಮ್ ಅದಾನಿಯು ಮುಂಬೈನಲ್ಲಿರುವ ಶರದ್ ಪವಾರ್ ಅವರ ‘ಸಿಲ್ವರ್ ಓಕ್’ ನಿವಾಸಕ್ಕೆ ಏಪ್ರಿಲ್ 20 ರಂದು ಭೇಟಿ ನೀಡಿದರು. ಅಲ್ಲಿ ಶರದ್ ಪವಾರ್ ಮತ್ತು ಅದಾನಿ ಭೇಟಿ ಸುಮಾರು ಎರಡು ಗಂಟೆಗಳ ಕಾಲ ನಡೆಯಿತು ಎಂದು ವರದಿಗಳು ಹೇಳುತ್ತವೆ.

ಸುಪ್ರಿಯಾ ಸುಳೆ

ಶರದ್ ಪವಾರ್ ಅವರ ಸಂಬಂಧಿ ಅಜಿತ್ ಪವಾರ್, ಬಿಜೆಪಿಯೊಂದಿಗೆ ಕೈಜೋಡಿಸುತ್ತಾರೆ ಎಂಬ ಊಹಾಪೋಹದ ಸುದ್ಧಿಗಳು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಈ ವೇಳೆಯಲ್ಲಿ, ಇಂತಹ ಭೇಟಿ ನಡೆದಿರುವುದು ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ. ಅಲ್ಲದೆ, ಈ ಭೇಟಿ ಹಲವು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ.

ಶರದ್ ಪವಾರ್ ಮತ್ತು ಅದಾನಿ

ಅದಾನಿ ಸಮೂಹವು ವಿವಿಧ ಅಕ್ರಮಗಳಲ್ಲಿ ಭಾಗಿಯಾಗಿದೆ ಎಂದು ಹಿಂಡೆನ್‌ಬರ್ಗ್ ವರದಿಯು ಪುರಾವೆಗಳೊಂದಿಗೆ ಆರೋಪಿಸಿತ್ತು. ಈ ವಿಚಾರವಾಗಿ ಕಾಂಗ್ರೆಸ್ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳು ಅದಾನಿಯನ್ನು ಕಟುವಾಗಿ ಟೀಕಿಸಿದವು. ಉದ್ಯಮಿ ಅದಾನಿ ಮತ್ತು ಪ್ರಧಾನಿ ಮೋದಿ ನಡುವಿನ ಸಂಪರ್ಕದ ಬಗ್ಗೆ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದರು. ಮೋದಿ ಮತ್ತು ಅದಾನಿ ಒಟ್ಟಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿರುವ ಫೋಟೋವನ್ನೂ ರಾಹುಲ್ ಗಾಂಧಿ ಸಂಸತ್ತಿನಲ್ಲಿ ತೋರಿಸಿದರು. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಅದಾನಿಯನ್ನು ತೀವ್ರವಾಗಿ ವಿರೋಧಿಸುತ್ತಿದ್ದರೂ ಶರದ್ ಪವಾರ್ ಅದಾನಿಯನ್ನು ಬೆಂಬಲಿಸಿಕೊಂಡು ಬಂದರು.

ರಾಹುಲ್ ಗಾಂಧಿ

ಅದಾನಿ ವಿಚಾರದಲ್ಲಿ ಜಂಟಿ ಸಂಸದೀಯ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂಬುದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಪ್ರಮುಖ ಬೇಡಿಕೆಯಾಗಿತ್ತು. ಆದರೆ ‘ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿರುವುದರಿಂದ ಸಂಸದೀಯ ಜಂಟಿ ಸಮಿತಿಯ ತನಿಖೆ ಅಗತ್ಯವಿಲ್ಲ’ ಎಂದು ಶರದ್ ಪವಾರ್ ಹೇಳಿದರು. ಮಹಾರಾಷ್ಟ್ರದಲ್ಲಿ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವು ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ಅವರ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಶರದ್ ಪವಾರ್ ಹಾಗೂ ಗೌತಮ್ ಅದಾನಿ ಭೇಟಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಮಹುವಾ ಮೊಯಿತ್ರಾ

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಅದಾನಿ ವಿಚಾರವನ್ನು ತೀವ್ರವಾಗಿ ಟೀಕಿಸಿಕೊಂಡು ಬರುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅವರು ನೀಡಿದ ಮಾಹಿತಿಯೊಂದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿತು. ಅದೇನೆಂದರೆ, ‘ಗೌತಮ್ ಅಧಾನಿ ನನ್ನನ್ನು ಮತ್ತು ಇತರ ಕೆಲವರನ್ನು ಸ್ನೇಹಿತರ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ’ ಎಂದು ಮಹುವಾ ಮೊಯಿತ್ರಾ ಹೇಳಿದರು.

ಆ ಕೆಲವರಲ್ಲಿ ಶರದ್ ಪವಾರ್ ಕೂಡ ಒಬ್ಬರು ಎಂಬುದು ಈ ಭೇಟಿಯ ಮೂಲಕ ಬಹಿರಂಗವಾಗಿದೆ. ಅವರ ಭೇಟಿಯ ನಂತರ ಪ್ರತಿಕ್ರಿಯಿಸಿದ ಮಹುವಾ ಮೊಯಿತ್ರಾ, ‘ಯಾವುದೇ ರಾಜಕಾರಣಿ ಉದ್ಯಮಿ ಅದಾನಿಯನ್ನು ಭೇಟಿ ಮಾಡಬಾರದು’ ಎಂದು ಹೇಳಿದರು. ‘ಅದಾನಿ ಜತೆ ಮುಖಾಮುಖಿಯಾಗಿ ಚರ್ಚಿಸಲು ಏನೂ ಇಲ್ಲ. ಹಿಂಡೆನ್‌ಬರ್ಗ್ ವರದಿಯ ಆರೋಪಗಳ ಆಧಾರದ ಮೇಲೆ ಸರ್ಕಾರ ಕ್ರಮ ಕೈಗೊಳ್ಳೂವ ತನಕ ಯಾವುದೇ ರಾಜಕಾರಣಿ ಅದಾನಿಯನ್ನು ಭೇಟಿ ಮಾಡಬಾರದು’ ಎಂದು ಮಹುವಾ ಮೊಯಿತ್ರಾ ಹೇಳುತ್ತಾರೆ. ಮತ್ತು ಶರದ್ ಪವಾರ್ ಅವರು ಅದಾನಿಯನ್ನು ಭೇಟಿಯಾಗಿರುವುದನ್ನೂ ಟೀಕಿಸಿದ್ದಾರೆ.

ಉದ್ಧವ್ ಠಾಕ್ರೆ

ನವೆಂಬರ್ 2019ರಲ್ಲಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾದರು. ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಸೇರಿದಂತೆ ಪಕ್ಷಗಳನ್ನು ಒಳಗೊಂಡ ಮಹಾ ವಿಕಾಸ್ ಅಗಾಡಿ ಸಮ್ಮಿಶ್ರ ಸರ್ಕಾರ ಅಲ್ಲಿ ನಡೆಯಿತು. ಇದ್ದಕ್ಕಿದ್ದಂತೆ ಶಿವಸೇನೆಯಿಂದ ಬೇರ್ಪಟ್ಟ ಏಕನಾಥ್ ಶಿಂಧೆ ರಾಜ್ಯದ ಮುಖ್ಯಮಂತ್ರಿಯಾದರು. ಆಡಳಿತ ಬದಲಾವಣೆಗೂ ಮುನ್ನ ಅದಾನಿ ಮತ್ತು ಶರದ್ ಪವಾರ್ ಭೇಟಿ ನಡೆಯಿತು ಎಂಬುದು ಗಮನಾರ್ಹ.

ಅಜಿತ್ ಪವಾರ್

ಪ್ರಸ್ತುತ ಉದ್ಧವ್ ಠಾಕ್ರೆ ಹೂಡಿರುವ ಪ್ರಕರಣದಲ್ಲಿ ಏಕನಾಥ್ ಶಿಂಧೆ ಬೆಂಬಲಿಗ ಶಾಸಕರು ಅನರ್ಹಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಮುಂದೆ ಯಾರು ಸರ್ಕಾರ ರಚಿಸುತ್ತಾರೆ ಎಂಬ ಪ್ರಶ್ನೆ ಎದ್ದಿದೆ. ಈ ಹಿನ್ನಲೆಯಲ್ಲೇ ಅಜಿತ್ ಪವಾರ್ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಲು ಮುಂದಾಗಿದ್ದಾರೆ ಎಂಬ ವರದಿಗಳು ಹೊರಬಿದ್ದಿದ್ದವು. ಈ ಹಿನ್ನೆಲೆಯಲ್ಲಿ ಅದಾನಿ ಹಾಗೂ ಶರದ್ ಪವಾರ್ ಭೇಟಿ ನಾನಾ ಊಹಾಪೋಹಗಳಿಗೆ ಕಾರಣವಾಗಿದೆ.

ಏಕನಾಥ್ ಶಿಂಧೆ

ಶರದ್ ಪವಾರ್ ಮತ್ತು ಅದಾನಿ ಭೇಟಿಗೂ ಮಹಾರಾಷ್ಟ್ರ ರಾಜಕಾರಣದ ಮುಂದಿನ ನಡೆಗಳಿಗೂ ಸಂಬಂಧ ಇರುವ ಸಾಧ್ಯತೆಗಳು ಇದೆ ಎಂದೂ ಹೇಳಲಾಗುತ್ತಿದೆ. ಮತ್ತು ಈ ಸಭೆಯಲ್ಲಿ ಹಿಂಡೆನ್‌ಬರ್ಗ್ ವರದಿಯಿಂದ ಉಂಟಾದ ಬಿಕ್ಕಟ್ಟು ಮತ್ತು ವಿರೋಧ ಪಕ್ಷಗಳ ಹೋರಾಟದಿಂದ ಅದಾನಿ ಸಮೂಹಕ್ಕೆ ಉದ್ಭವಿಸಿರುವ ಒತ್ತಡದ ಬಗ್ಗೆಯೂ ಅವರು ಖಂಡಿತವಾಗಿ ಚರ್ಚಿಸಿರುತ್ತಾರೆ ಎಂದು ಹೇಳಲಾಗುತ್ತಿದೆ.