ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Rajasthan Election Archives » Dynamic Leader
October 22, 2024
Home Posts tagged Rajasthan Election
ದೇಶ ರಾಜಕೀಯ

ಪಾಲಿ: ರಾಜಸ್ಥಾನದಲ್ಲಿ 500 ರೂಪಾಯಿಗೆ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದ್ದರೆ, ಬಿಜೆಪಿ ಸರ್ಕಾರ ರಚನೆಯಾದರೆ 450 ರೂ.ಗೆ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನವೆಂಬರ್ 25 ರಂದು ರಾಜಸ್ಥಾನದ ಎಲ್ಲಾ 200 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರಿಂದಾಗಿ ಅಲ್ಲಿ ಪ್ರಚಾರದ ಬಿಸಿ ತಟ್ಟಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು:

“ಚಂದ್ರಯಾನದ ಮೂಲಕ ನಮ್ಮ ಭಾರತದ ರಾಷ್ಟ್ರಧ್ವಜವನ್ನು ಚಂದ್ರನಿಗೆ ತಲುಪಿಸಿದವರು ಪ್ರಧಾನಿ ಮೋದಿ. ಹೊಸ ಸಂಸತ್ತಿನ ಕಟ್ಟಡವನ್ನು ನಿರ್ಮಿಸಿದರು; ಅವರು ಆರ್ಥಿಕತೆಯನ್ನು 11ನೇ ಸ್ಥಾನದಿಂದ 5 ನೇ ಸ್ಥಾನಕ್ಕೆ ಏರಿಸಿದರು.

ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ನಂತರ ಪ್ರಧಾನಮಂತ್ರಿ ಕಿಸಾನ್ ಸಮ್ಮನ್ ನಿಧಿಯನ್ನು ರೂ.6 ಸಾವಿರದಿಂದ ರೂ.12 ಸಾವಿರಕ್ಕೆ ಹೆಚ್ಚಿಸಲು ನಿರ್ಧರಿಸಿದ್ದೇವೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಕನಿಷ್ಠ ಬೆಂಬಲ ಬೆಲೆಗೆ ಕಿರುಧಾನ್ಯಗಳನ್ನು ಖರೀದಿಸುತ್ತೇವೆ. ರೂ.450ಕ್ಕೆ ಗ್ಯಾಸ್ ಸಿಲಿಂಡರ್ ನೀಡುತ್ತೇವೆ. ಪ್ರಧಾನಿ ಮೋದಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಸಾಧಿಸಿದ್ದಾರೆ” ಎಂದು ಹೇಳಿದರು.

ದೇಶ ರಾಜಕೀಯ

ರಾಜಸ್ಥಾನ: ರಾಜಸ್ಥಾನದ ವಲ್ಲಭನಗರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಮಾತನಾಡಿದರು: “ನಾವು ಬಡವರಿಗೆ ಸಹಾಯ ಮಾಡಿದಾಗ, ಬಿಜೆಪಿ ಪ್ರತಿ ಯೋಜನೆಯಲ್ಲಿ ಕೋಟ್ಯಾಧಿಪತಿಗಳಿಗೆ ಸಹಾಯ ಮಾಡುತ್ತಿದೆ. ಅವರು ಒಂದು ತಂಡವಾಗಿದ್ದಾರೆ. ಅದಾನಿ ಪಿಕ್ ಪಾಕೆಟ್ ಹೊಡೆಯುವಾಗ ಜನರ ದಿಕ್ಕು ತಪ್ಪಿಸುವುದು ಮೋದಿಯ ಕೆಲಸ” ಎಂದು ಹೇಳಿದ್ದಾರೆ.

“ಜಾತಿವಾರು ಜನಗಣತಿಯು ದೇಶದ ಎಕ್ಸ್-ರೇ ( ಕ್ಷ-ಕಿರಣ) ಆಗಿದೆ. ಅದನ್ನು ಮಾಡಬೇಕಾದ ಅವಶ್ಯಕತೆ ಇದೆ. ಕಾಂಗ್ರೆಸ್ ಪಕ್ಷ ಆದಿವಾಸಿಗಳ ಹಕ್ಕುಗಳನ್ನು ರಕ್ಷಿಸುತ್ತದೆ. ಪ್ರಧಾನಿ ಅವರನ್ನು ಒಬಿಸಿ ಎಂದು ಕರೆದುಕೊಳ್ಳುತ್ತಾರೆ. ಆದರೆ ನಾನು ಜಾತಿವಾರು ಜನಗಣತಿಯ ಬಗ್ಗೆ ಮಾತನಾಡುವಾಗ, ಭಾರತದಲ್ಲಿ ಬಡವರು ಎಂಬ ಒಂದೇ ಜಾತಿ ಇದೆ ಎಂದು ಹೇಳುತ್ತಾರೆ. ಆದರೆ ಅದಾನಿ, ಅಂಬಾನಿಯಂತಹ ಕೋಟ್ಯಾಧಿಪತಿಗಳ ಮತ್ತೊಂದು ಜಾತಿ ಅವರಲ್ಲಿದ್ದಾರೆ” ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ನವಂಬರ್ 25 ರಂದು ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣಾ ಪ್ರಚಾರಕ್ಕೆ ಇನ್ನು 3 ದಿನ ಮಾತ್ರ ಬಾಕಿ ಉಳಿದಿರುವ ಹಿನ್ನಲೆಯಲ್ಲಿ, ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಭರವಸೆಯನ್ನು ಇಂದು ಬಿಡುಗಡೆ ಮಾಡಿದೆ. ಅದರಲ್ಲಿ “ರೈತರಿಗೆ 2 ಲಕ್ಷ ರೂ ಬಡ್ಡಿ ರಹಿತ ಸಾಲವನ್ನು ನೀಡಲಾಗುವುದು. ಸ್ವಾಮಿನಾಥನ್ ವರದಿ ಪ್ರಕಾರ ಕನಿಷ್ಠ ಬೆಂಬಲ ಬೆಲೆ ನೀಡಲಾಗುವುದು. ಕಾಂಗ್ರೆಸ್ ಪಕ್ಷ 10 ಲಕ್ಷ ಉದ್ಯೋಗ ಸೃಷ್ಟಿಸಲಿದೆ. ಇದರಲ್ಲಿ 4 ಲಕ್ಷ ಉದ್ಯೋಗಗಳು ಸರ್ಕಾರಿ ವಲಯದಲ್ಲಿ ಸೃಷ್ಟಿಯಾಗಲಿವೆ.

ಪಂಚಾಯತಿ ಮಟ್ಟದ ನೇಮಕಾತಿ ಯೋಜನೆಯನ್ನು ಜಾರಿಗೆ ತರಲಾಗುವುದು. ಜಾತಿವಾರು ಜನಗಣತಿ ನಡೆಸಲಾಗುವುದು. ಈ ವರ್ಷದ ಅಂತ್ಯದ ವೇಳೆಗೆ ರಾಜಸ್ಥಾನದ ಆರ್ಥಿಕತೆ 15 ಸಾವಿರ ಕೋಟಿ ರೂ ಇರಲಿದೆ. ಇದನ್ನು 2030ರ ವೇಳೆಗೆ 30 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ” ಎಂದು ಹೇಳಿದರು.

ದೇಶ

ಜೈಪುರ: ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಹಸುವಿನ ಸಗಣಿ ಕೆಜಿ 2 ರೂಪಾಯಿಗೆ ಖರೀದಿಸಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ನವೆಂಬರ್ 25 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಅಲ್ಲಿ ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳಲು ಹಾಗೂ ಬಿಜೆಪಿ ಅಧಿಕಾರ ಹಿಡಿಯಲು ತೀವ್ರ ಪ್ರಚಾರದಲ್ಲಿ ತೊಡಗಿಕೊಂಡಿದೆ. ಈ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಏಳು ಭರವಸೆಗಳನ್ನು ಪ್ರಕಟಿಸಿದ್ದಾರೆ.

ಭರವಸೆಗಳು:
ಕುಟುಂಬದ ಮುಖ್ಯಸ್ಥರಿಗೆ ವಾರ್ಷಿಕವಾಗಿ ರೂ.10,000 ಪಾವತಿಸಲಾಗುವುದು.

ಹಸುವಿನ ಸಗಣಿ ಕೆಜಿ 2 ರೂಪಾಯಿಗೆ ಖರೀದಿಸಲಾಗುವುದು.

ಸರ್ಕಾರಿ ಕಾಲೇಜಿಗೆ ಸೇರುವ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅಥವಾ ಟ್ಯಾಬ್ಲೆಟ್ ನೀಡಲಾಗುವುದು.

ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳಿಗೆ 15 ಲಕ್ಷದವರೆಗೆ ಉಚಿತ ವಿಮೆಯನ್ನು ಒದಗಿಸಲಾಗುವುದು.

ಪ್ರತಿ ವಿದ್ಯಾರ್ಥಿಗೆ ಇಂಗ್ಲಿಷ್ ಮಾಧ್ಯಮದ ಶಿಕ್ಷಣದ ಭರವಸೆ ನೀಡಲಾಗುವುದು.

1 ಕೋಟಿ ಕುಟುಂಬಗಳಿಗೆ ರೂ.500 ದರದಲ್ಲಿ ಗ್ಯಾಸ್ ಸಿಲಿಂಡರ್ ನೀಡಲಾಗುವುದು.

ಹಳೆಯ ಪಿಂಚಣಿ ಯೋಜನೆ ಜಾರಿಯಾಗಲಿದೆ.