ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Religious Event Archives » Dynamic Leader
October 16, 2024
Home Posts tagged Religious Event
ದೇಶ

ಲಕ್ನೋ: ಉತ್ತರ ಪ್ರದೇಶದಲ್ಲಿ ಆಧ್ಯಾತ್ಮಿಕ ಉಪನ್ಯಾಸದಲ್ಲಿ ನೂಕುನುಗ್ಗಲು ಉಂಟಾಗಿ 100 ಮಂದಿ ಸಾವನ್ನಪ್ಪಿದ್ದಾರೆ!

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಶಿಕಂದರಾ ರಾವ್ ನಗರದಲ್ಲಿ ‘ಬೋಲೆ ಬಾಬಾ ಸತ್ಸಂಗ’ ಎಂಬ ಆಧ್ಯಾತ್ಮಿಕ ಪ್ರವಚನ ನಡೆಯಿತು. ಆ ವೇಳೆ ನಡೆದ ಜನಜಂಗುಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿ 100 ಮಂದಿ ಸಾವನ್ನಪ್ಪಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತರ ಶವಗಳನ್ನು ಹೊರತೆಗೆದಿದ್ದಾರೆ.

ಮೃತದೇಹಗಳ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಇನ್ನೂ ಹಲವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗುವಂತೆ ಅಗತ್ಯ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳುವಂತೆ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಂಸತ್ತಿನಲ್ಲಿ ನಡೆಯುತ್ತಿರುವ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ, ಅಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಉತ್ತರಪ್ರದೇಶದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ.