ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Reservation Archives » Page 2 of 2 » Dynamic Leader
October 23, 2024
Home Posts tagged Reservation (Page 2)
ಬೆಂಗಳೂರು ರಾಜಕೀಯ ರಾಜ್ಯ

ಮಂಜುಳಾ ರೆಡ್ಡಿ, ವರದಿಗಾರರು

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿಗಳಿಗೆ ಸಿಗುತ್ತಿರುವ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಹಿಂದುಳಿದ ಅಲೆಮಾರಿ ಬುಡುಕಟ್ಟುಗಳಿಗೂ ಒದಗಿಸಬೇಕೆಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ / ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಸಮುದಾಯಗಳ ಮಹಾ ಒಕ್ಕೂಟವು ಸರ್ಕಾರವನ್ನು ಒತ್ತಾಯಿಸಿದೆ.

ಇಂದು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಶಿವಾನಂದ ಲಕ್ಷ್ಮಣ ಪಾಚಂಗಿ ಹಾಗೂ ಟಿ.ವಿ.ಗೋಪಲಕೃಷ್ಣ ‘ಅಲೆಮಾರಿ / ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಸಮುದಾಯದವರು ಒಟ್ಟು 46 ಜಾತಿಗಳಿದ್ದು, ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಬಹಳ ಹಿಂದುಳಿದವರಾಗಿರುತ್ತಾರೆ. ಈ ಹಿಂದೆ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಮ್ಮ 46 ಜಾತಿಗಳು ಬರುತ್ತಿದ್ದವು. ತದನಂತರ ಸಮಾಜ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ  ವರ್ಗಾಯಿಸಲಾಯಿತು. ಸರ್ಕಾರದ ಆದೇಶ ಪ್ರಕಾರ ನಾವುಗಳು ಬುಡಕಟ್ಟು ಜನಾಂಗದವರಾಗಿದ್ದು, ಈಗ ಬುಡಕಟ್ಟು ಇಲಾಖೆ ಪ್ರತ್ಯೇಕವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ನಮ್ಮ 46 ಜಾತಿಗಳನ್ನು ಸರ್ಕಾರ ಬುಡಕಟ್ಟು ಕಲ್ಯಾಣ ಇಲಾಖೆಗೆ ವರ್ಗಾಯಿಸಬೇಕೆಂದು ಮನವಿ ಮಾಡಿದರು. ನಮ್ಮ 46 ಜಾತಿಗಳು ಎಲ್ಲಾ ರಂಗಗಳಲ್ಲಿಯೂ ಹಿಂದುಳಿದಿರುವ ಕಾರಣ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿಗಳಿಗೆ ಸಿಗುತ್ತಿರುವ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ನಮಗೂ ನೀಡಬೇಕೆಂದು ಒತ್ತಾಯಿಸಿದರು.

ಶಿವಾನಂದ ಲಕ್ಷ್ಮಣ ಪಾಚಂಗಿ ಮಾತನಾಡುತ್ತಾ ‘ಹಿಂದುಳಿದ ಅಲೆಮಾರಿ ಬುಡಕಟ್ಟುಗಳ ನಿಗಮಗಳಿಗೆ ಅಧ್ಯಕ್ಷರನ್ನಾಗಿ ಅಲೆಮಾರಿ ಬುಡಕಟ್ಟು ಸಮುದಾಯದವರನ್ನು ನೇಮಕ ಮಾಡುತ್ತಿಲ್ಲ. ಸರ್ಕಾರ ಮುಂದಿನ ದಿನಗಳಲ್ಲಿ ಈ ರೀತಿಯ ಅನ್ಯಾಯಗಳಾಗದಂತೆ ನ್ಯಾಯ ಒದಗಿಸಿಕೊಡಬೇಕೆಂದು ಬೇಸರ ವ್ಯಕ್ತಪಡಿಸಿದರು. ಅಲೆಮಾರಿ ನಿಗಮಕ್ಕೆ ಕೇವಲ ಆರು ಕೋಟಿ ಮಾತ್ರ ಬಿಡುಗಡೆಗೊಳಿಸಿದ್ದು, ಅಲೆಮಾರಿ ಬುಡಕಟ್ಟು ಸಮುದಾಯಗಳಿಗೆ ಇದರಿಂದ ಬಹಳ ತೊಂದರೆಯಾಗಿದೆ.

ಈ ಹಿಂದೆ ನೂರು ಕೋಟಿಗಳಷ್ಟು ಅನುದಾನ ಪಡೆಯುತ್ತಿದ್ದಾಗಲೂ ಹಿಂದುಳಿದ ಅಲೆಮಾರಿ ಬುಡಕಟ್ಟುಗಳಿಗೆ ಸರಿಯಾದಸೌಲಭ್ಯಗಳು ದೊರೆಯುತ್ತಿರಲಿಲ್ಲ. ಈ ಅನುದಾನವನ್ನು ಇನ್ನೂ ಹೆಚ್ಚು ಮಾಡದೆ, ಅನುದಾನವನ್ನು ಕಡಿತಗೊಳಿಸಿರುವುದು ಎಷ್ಟು ಸರಿ ಎಂದು ತಮ್ಮ ಅಳಲನ್ನು ತೋಡಿಕೊಂಡರು. ಇದರಿಂದ 46 ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಇದನ್ನು ಕೂಡಲೇ ಸರ್ಕಾರ ಸರಿಪಡಿಸಬೇಕೆಂದು ಒತ್ತಾಯ ಮಾಡಿದರು.

ಪತ್ರಿಕಾ ಘೋಷ್ಠಿಯಲ್ಲಿ ಟಿ.ವಿ.ಗೋಪಾಲಕೃಷ್ಣ, ಪಾಚಂಗಿ, ಆರ್.ರಂಗಪ್ಪ, ಶ್ರೀರಾಮಕೃಷ್ಣ, ಪ್ರಕಾಶ್ ಬೈಲಪತ್ತರ್, ಸುನಿಲ್ ಕಾಂತ ಹೇಳವರ್, ಚಿದಾನಂದಪ್ಪ, ಜಯಲಕ್ಷ್ಮಿ, ಗಿರಿಯಪ್ಪ ಜಿ.ಗೊಲ್ಲರ್ ಮುಂತಾದವರು ಉಪಸ್ಥಿತಿಯಿದ್ದರು