ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Russia Archives » Dynamic Leader
October 23, 2024
Home Posts tagged Russia
ವಿದೇಶ

ಕೀವ್: 22ನೇ ಭಾರತ-ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ರಷ್ಯಾಕ್ಕೆ ತೆರಳಿದ್ದಾರೆ. ಇಂದು ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ. ವಿವಿಧ ರಾಜಕೀಯ ಸನ್ನಿವೇಶಗಳಿಂದಾಗಿ ಈ ಮಾತುಕತೆ ಮಹತ್ವ ಪಡೆದುಕೊಂಡಿದೆ. ಉಭಯ ದೇಶಗಳ ನಾಯಕರ ಭೇಟಿಯ ಬಳಿಕ ಈ ಬಗ್ಗೆ ಸಂಪೂರ್ಣ ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.

ಈ ಹಿನ್ನೆಲೆಯಲ್ಲಿ, ಮೋದಿ ಮತ್ತು ಪುಟಿನ್ ಭೇಟಿಯ ಕುರಿತು ತಮ್ಮ ‘ಎಕ್ಸ್’ ಸೈಟ್‌ನಲ್ಲಿ ಪೋಸ್ಟ್ ಮಾಡಿರುವ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ, ರಷ್ಯಾದ ಕ್ಷಿಪಣಿ ದಾಳಿಯಿಂದ ಉಕ್ರೇನ್‌ನಲ್ಲಿ ಇಂದು 13 ಮಕ್ಕಳು ಸೇರಿದಂತೆ 37 ಜನರು ಸಾವನ್ನಪ್ಪಿದ್ದಾರೆ. ಯುವ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಮಕ್ಕಳ ಆಸ್ಪತ್ರೆಯ ಮೇಲೆ ರಷ್ಯಾ ಇಂದು ಕ್ಷಿಪಣಿ ದಾಳಿ ನಡೆಸಿದೆ. ಅವರಲ್ಲಿ ಹಲವರು ಅವಶೇಷಗಳಡಿ ಸಿಲುಕಿದ್ದಾರೆ.

ಇಂತಹ ಸನ್ನಿವೇಶದಲ್ಲಿ, ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ನಾಯಕರೊಬ್ಬರು, ಮಾಸ್ಕೋದಲ್ಲಿ ವಿಶ್ವದ ಅತ್ಯಂತ ಕೆಟ್ಟ ಅಪರಾಧಿಯನ್ನು ತಬ್ಬಿಕೊಂಡಿರುವುದು ಬಹಳ ನಿರಾಶೆಯನ್ನು ಮೂಡಿಸಿದೆ ಮತ್ತು ಶಾಂತಿಯ ಮೇಲಿನ ಹೊಡೆತದಂತಿದೆ ಎಂದು ಮೋದಿ-ಪುಟಿನ್ ಭೇಟಿಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ಜೂನ್ 14 ರಂದು ಇಟಲಿಯಲ್ಲಿ ನಡೆದ ಜಿ7 ಸಮ್ಮೇಳನದಲ್ಲಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದು ಗಮನಾರ್ಹ.

ಇದನ್ನೂ ಓದಿ:
“ಮೋದಿ ಮರು ಆಯ್ಕೆ ಆಕಸ್ಮಿಕವಲ್ಲ; ಅವರ ಹಲವು ವರ್ಷಗಳ ಪರಿಶ್ರಮದ ಫಲ” – ವ್ಲಾಡಿಮಿರ್ ಪುಟಿನ್ ಶ್ಲಾಘನೆ!

 

ವಿದೇಶ

ಮಾಸ್ಕೋ,
ಯುದ್ಧವನ್ನು ಕೊನೆಗೊಳಿಸಲು ಉಕ್ರೇನ್‌ನೊಂದಿಗೆ ಮಾತುಕತೆ ನಡೆಸಲು ರಷ್ಯಾ ಸಿದ್ಧವಾಗಿದೆ ಎಂದು ಅದರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. ಆದರೆ ಸಂಧಾನಕ್ಕೆ ನಿರಾಕರಿಸಿರುವ ಉಕ್ರೇನ್ ಮೌನ ವಹಿಸಿದೆ.

ಪೂರ್ವ ಯುರೋಪಿಯನ್ ದೇಶವಾದ ಉಕ್ರೇನ್ ವಿರುದ್ಧ ರಷ್ಯಾ ಯುದ್ಧವನ್ನು ಪ್ರಾರಂಭಿಸಿದೆ. ರಷ್ಯಾ ನಿರೀಕ್ಷಿಸದ ರೀತಿಯಲ್ಲಿ ಉಕ್ರೇನ್ ಪ್ರತಿದಾಳಿ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ, ರಾಯಿಟರ್ಸ್ ಸುದ್ದಿ ಸಂಸ್ಥೆ, “ಉಕ್ರೇನ್‌ನಲ್ಲಿ ಕದನ ವಿರಾಮ ಜಾರಿಗೆ ತರಲು ಅಧ್ಯಕ್ಷ ಪುಟಿನ್ ಸಿದ್ಧರಾಗಿದ್ದಾರೆ ಎಂದು ರಷ್ಯಾದ 4 ಅಧಿಕಾರಿಗಳು ತಿಳಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಶಾಂತಿ ಒಪ್ಪಂದದ ತೀರ್ಮಾನವನ್ನು ಕೆಲವು ಯುರೋಪಿಯನ್ ದೇಶಗಳು ತಡೆಯುತ್ತಿವೆ ಎಂದು ಪುಟಿನ್ ನಂಬಿದ್ದಾರೆ” ಎಂದು ಹೇಳಿದೆ.

ಈ ಕುರಿತು, ರಷ್ಯಾ ಅಧ್ಯಕ್ಷರ ಭವನದ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, “ಯುದ್ಧವನ್ನು ಕೊನೆಗೊಳಿಸಲು ಉಕ್ರೇನ್‌ನೊಂದಿಗೆ ಮಾತುಕತೆ ನಡೆಸಲು ರಷ್ಯಾ ಸಿದ್ಧವಾಗಿದೆ. ನಾವು ಯುದ್ಧವನ್ನು ಬಯಸುವುದಿಲ್ಲ” ಎಂದು ಅವರು ಉತ್ತರಿಸಿದರು.

ಉಕ್ರೇನಿಯನ್ ಅಧಿಕಾರಿಗಳು ರಷ್ಯಾದೊಂದಿಗೆ ಕದನ ವಿರಾಮದ ಮಾತುಕತೆಗೆ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಇಲ್ಲಿಯವರೆಗೆ ಉಕ್ರೇನ್ ಯಾವುದೇ ಅಭಿಪ್ರಾಯ ವ್ಯಕ್ತಪಡಿಸದೇ ಮೌನವಾಗಿದೆ.

ದೇಶ

ನವದೆಹಲಿ: ಉಕ್ರೇನ್ ವಿರುದ್ಧದ ಯುದ್ಧದ ನಂತರ ಯುರೋಪಿಯನ್ ರಾಷ್ಟ್ರಗಳು ರಷ್ಯಾದ ಕಚ್ಚಾ ತೈಲ ಆಮದನ್ನು ನಿಷೇಧಿಸಿತು. ಆದರೆ ಭಾರತದಲ್ಲಿ ಸಂಸ್ಕರಿಸಿದ ರಷ್ಯಾದ ಕಚ್ಚಾ ತೈಲವನ್ನು ಯುರೋಪಿಯನ್ ರಾಷ್ಟ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ವಿತರಿಸಲಾಗಿದೆ.

ಉಕ್ರೇನ್ ವಿರುದ್ಧದ ರಷ್ಯಾದ ಆಕ್ರಮಣಕ್ಕೆ ಪ್ರತಿಯಾಗಿ, ಕಳೆದ ವರ್ಷ ಡಿಸೆಂಬರ್‌ನಲ್ಲಿ ಯುರೋಪಿಯನ್ ರಾಷ್ಟ್ರಗಳು ಕಚ್ಚಾ ತೈಲ ಆಮದಿನ ಮೇಲೆ ನಿಷೇಧ ಹೇರಿದ್ದವು. ಆದರೆ, ನಿರ್ಬಂಧದ ಮೊದಲು ಯುರೋಪ್ ರಾಷ್ಟ್ರಗಳು ತೈಲ ಅಗತ್ಯತೆಯ ಶೇ.30ರಷ್ಟು ರಷ್ಯಾದಿಂದ ಖರೀದಿಸಿಕೊಂಡಿತ್ತು.

ಈ ಹಿನ್ನಲೆಯಲ್ಲಿ, ಭಾರತದಲ್ಲಿ ಸಂಸ್ಕರಿಸಿದ ರಷ್ಯಾದ ಕಚ್ಚಾ ತೈಲವನ್ನು ಯುರೋಪಿಯನ್ ರಾಷ್ಟ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ವಿತರಿಸಲಾಗಿದೆ. ಭಾರತವು ರಷ್ಯಾದೊಂದಿಗೆ ತಟಸ್ಥ ಸಂಬಂಧವನ್ನು ಹೊಂದಿದೆ. ಅಂತೆಯೇ ಭಾರತವು ಪಾಶ್ಚಿಮಾತ್ಯ ದೇಶಗಳೊಂದಿಗೆ ಉತ್ತಮ ಬಾಂಧವ್ಯವನ್ನು ಕಾಯ್ದುಕೊಳ್ಳುತ್ತಿದೆ.

ಪ್ರಸ್ತುತ, ಭಾರತವು ರಷ್ಯಾದಿಂದ ಕೈಗೆಟುಕುವ ಬೆಲೆಯಲ್ಲಿ ಕಚ್ಚಾ ತೈಲವನ್ನು ಖರೀದಿಸಿ, ಅದನ್ನು ದೇಶೀಯವಾಗಿ ಪರಿಷ್ಕರಿಸಿ, ಶೇ.115 ಕಿಂತಲೂ ಹೆಚ್ಚಿನದನ್ನು ಯುರೋಪಿಯನ್ ರಾಷ್ಟ್ರಗಳಿಗೆ ಅಭೂತಪೂರ್ವ ದರದಲ್ಲಿ ವಿತರಿಸಲಾಗುತ್ತಿದೆ.

ಆರ್ಥಿಕ ನಿರ್ಬಂಧಗಳಿಂದಾಗಿ ರಷ್ಯಾದ ಉತ್ಪನ್ನಗಳ ಕಚ್ಚಾ ತೈಲವು ಭಾರಿ ನಷ್ಟವನ್ನು ಅನುಭವಿಸುತ್ತಿದೆ ಎಂಬುದು ಗಮನಾರ್ಹ.