ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
SC ST Atrocities Archives » Dynamic Leader
October 23, 2024
Home Posts tagged SC ST Atrocities
ಕ್ರೈಂ ರಿಪೋರ್ಟ್ಸ್

ಪುದುಕೋಟ್ಟೈ: ಪುದುಕೋಟ್ಟೈ ಜಿಲ್ಲೆಯ ಆಯಪಟ್ಟಿಯ ಅಣ್ಣಾನಗರದ ಪರಿಶಿಷ್ಟ ಜಾತಿಯ ಯುವಕ ಪ್ರಕಾಶ್ ಅವರು ಪಟಾಕಿ ಖರೀದಿಸಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ, ಮೋಲುಡಯಾನ್ ಪಟ್ಟಿ, ನಾಲ್ಕು ರಸ್ತೆಯ ಹತ್ತಿರ ಕೀಳ್ ತೊಂಡೈಮಾನ್ ಗ್ರಾಮದ ಕಳ್ಳರ್ ಸಮುದಾಯಕ್ಕೆ ಸೇರಿದ ಸಾರಥಿ ಮತ್ತು ಆತನ ಸಹಚರು ಸೇರಿ, ಅಡ್ಡಗಟ್ಟಿ ಪ್ರಕಾಶ್ ಅವರನ್ನು ಜಾತಿ ನಿಂದನೆ ಮಾಡಿ, ಬಿಯರ್ ಬಾಟಲಿಯಿಂದ ತಲೆಗೆ 15 ಬಾರಿ ಬರ್ಬರವಾಗಿ ಹೊಡೆದು ಕೊಲೆ ಬೆದರಿಕೆ ಹಾಕಿದ್ದಾರೆ.

ಪುದುಕೊಟ್ಟೈ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಕಾಶ್ ಅವರನ್ನು ದಾಖಲಿಸಲಾಗಿದೆ. “ನೀಲಂ ಸಾಂಸ್ಕೃತಿಕ ಕೇಂದ್ರ”ದ ಸ್ಥಳೀಯ ಮುಖಂಡ ಮುರುಗಾನಂದನ್ ಅವರು ಕಾರ್ಯಕರ್ತರೊಂದಿಗೆ ಆಸ್ಪತ್ರೆಗೆ ಖುದ್ದು ತೆರಳಿ ಸಾಂತ್ವನ ಹೇಳಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರನ್ನೂ ಸಲ್ಲಿಸಲಾಗಿದೆ.

ಈ ಕುರಿತು ಮಾತನಾಡಿರುವ ಮುರುಗಾನಂದನ್, “ರಾಷ್ಟ್ರೀಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗದ ನಿರ್ದೇಶಕರಿಗೂ ಮಾಹಿತಿ ನೀಡಿದ್ದೇವೆ. ಜಾತಿ ಮನಸ್ಥಿತಿಯ ಅಪರಾಧಿಗಳನ್ನು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಿ ನ್ಯಾಯ ಒದಗಿಸಿಕೊಡಬೇಕು.

ತಮಿಳುನಾಡಿನ ದಕ್ಷಿಣದ ಜಿಲ್ಲೆಗಳಲ್ಲಿ ಪರಿಶಿಷ್ಟ ಜನರ ಮೇಲೆ ನಿರಂತರವಾಗಿ ನಡೆಯುತ್ತಿರುವ ಜಾತಿ ಅಸ್ಪೃಶ್ಯತೆ ಹಿಂಸಾಚಾರವನ್ನು ತಡೆಯಲು ತಮಿಳುನಾಡು ಸರ್ಕಾರ ಮತ್ತು ಮುಖ್ಯಮಂತ್ರಿ ಸ್ಟಾಲಿನ್ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

ದೇಶ

ದೇಶದ ಯಾವುದೇ ಭಾಗದಲ್ಲಿದ್ದರೂ, ಜಾತಿ ದೌರ್ಜನ್ಯಕ್ಕೆ ಒಳಗಾದ ಪರಿಶಿಷ್ಟ ಜನರು, ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ರಕ್ಷಣೆ ಪಡೆಯಬಹುದು ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ದೇಶಾದ್ಯಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ಹಿಂಸಾಚಾರವನ್ನು ತಡೆಗಟ್ಟಲು ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದರ ಅಡಿಯಲ್ಲಿ ದಾಖಲಾಗುವ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ಮತ್ತು ರಾಜ್ಯ ಹೈಕೋರ್ಟ್‌ಗಳೂ ವಿಚಾರಣೆ ಮಾಡುತ್ತವೆ.

ಈ ಹಿನ್ನಲೆಯಲ್ಲಿ, ಮಹಾರಾಷ್ಟ್ರದ ಬಾಂಬೆ ಹೈಕೋರ್ಟ್‌ನಲ್ಲಿ ಎಸ್‌ಸಿ ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ದೇಶದ ಎಲ್ಲಾ ಭಾಗಗಳಲ್ಲಿ ಸಂತ್ರಸ್ತರ ರಕ್ಷಣೆಗೆ ಸಂಬಂಧಿಸಿದ ಪ್ರಕರಣ ನಿನ್ನೆ ವಿಚಾರಣೆಗೆ ಬಂದಿತ್ತು. ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಂಡ ನ್ಯಾಯಮೂರ್ತಿಗಳಾದ ರೇವತಿ ಮೋಹಿತ್ ದೆರೆ, ಭಾರತಿ ದಾಂಗ್ರೆ ಮತ್ತು ಜಮಾದಾರ್ ಅವರನ್ನೊಳಗೊಂಡ ತ್ರೀಸದಸ್ಯ ಪೀಠವು,

“ಜಾತಿಯನ್ನು ರಾಜ್ಯದ ಗಡಿಯೊಳಗೆ ಮಾತ್ರ ವ್ಯಾಖ್ಯಾನಿಸಲಾಗಿದೆ ಎಂಬ ವಾದ ಸರಿಯಿಲ್ಲ. ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯಿದೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘನತೆಗೆ ರಕ್ಷಣೆಯ ಹಕ್ಕನ್ನು ನೀಡಿದೆ.

ಸಂಬಂಧಪಟ್ಟ ವ್ಯಕ್ತಿಯು ತಾನು ವಾಸಿಸುವ ರಾಜ್ಯದಲ್ಲಿ ಮಾತ್ರ ಈ ಕಾಯಿದೆಯಡಿ ರಕ್ಷಣೆಯನ್ನು ಪಡೆಯಬಹುದು ಎಂದು ಹೇಳಲಾಗದು. ಬಾಧಿತ ವ್ಯಕ್ತಿ, ಒಂದು ರಾಜ್ಯದಲ್ಲಿ ಎಸ್‌ಸಿ ಎಸ್‌ಟಿ ವರ್ಗಕ್ಕೆ ಸೇರಿದವರಾಗಿದ್ದು, ಅವರು ದೇಶದ ಇತರ ರಾಜ್ಯಗಳಲ್ಲಿ ಆ ವರ್ಗಕ್ಕೆ ಸೇರದಿದ್ದರೂ ಈ ಕಾಯ್ದೆಯಡಿ ರಕ್ಷಣೆ ಪಡೆಯಬಹುದು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಸಂವಿಧಾನದ ಅಡಿಯಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಿ, ಕಾನೂನು ರಕ್ಷಣೆಯನ್ನು ಕೋರಿದಾಗಲೆಲ್ಲಾ, ಅವರನ್ನು ಬೆದರಿಸಲಾಗುತ್ತದೆ ಮತ್ತು ಮೋಸ ಗೊಳಿಸಲಾಗುತ್ತದೆ ಎಂಬುದನ್ನು ಅರಿತುಕೊಂಡೆ ಈ ಕಾಯ್ದೆಯನ್ನು ಜಾರಿಮಾಡಲಾಗಿದೆ.

ಎಲ್ಲರನ್ನು ಸಮಾನವಾಗಿ ಕಾಣುವ ಜಾತಿ ರಹಿತ ಸಮಾಜ ನಿರ್ಮಾಣ ಮಾಡುವುದೇ ಸ್ವತಂತ್ರ ಭಾರತದ ಕನಸಾಗಿದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

ದೇಶ

ಉತ್ತರ ಪ್ರದೇಶ ರಾಜ್ಯದಲ್ಲಿ ಯುವಕನೊಬ್ಬನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ, ಆತನ ನಾಲಿಗೆಯಿಂದ ಚಪ್ಪಲಿಯನ್ನು ನೆಕ್ಕುವಂತೆ ಮಾಡಿರುವ ಅಮಾನುಷ ಘಟನೆಯೊಂದು ಭಾರೀ ಆಘಾತವನ್ನುಂಟು ಮಾಡಿದೆ. ಇದಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ವೀಡಿಯೊದಲ್ಲಿ, ಒಬ್ಬ ವ್ಯಕ್ತಿಯು ಮರದ ಹಾಸಿಗೆಯ ಮೇಲೆ ಕುಳಿತು, ತನ್ನ ಕಾಲುಗಳನ್ನು ಚಾಚುತ್ತಾನೆ; ಹದಿಹರೆಯದ ಯುವಕ ಆತನ ಚಪ್ಪಲಿಯನ್ನು ನಾಲಿಗೆಯಿಂದ ನೆಕ್ಕಿ ಸ್ವಚ್ಛಗೊಳಿಸುವ ದೃಶ್ಯ ಕಂಡುಬರುತ್ತಿದೆ. ಅಲ್ಲದೆ, ಯುವಕ ಕಿವಿ ಹಿಡಿದು ತಾನು ಮಾಡಿದ್ದು ತಪ್ಪು ಎಂದು ಬಸ್ಕಿ ಹೊಡೆಯುತ್ತಾನೆ. ಅದೇ ರೀತಿ ಮತ್ತೊಂದು ವೀಡಿಯೊದಲ್ಲಿ ಆ ವ್ಯಕ್ತಿ ಯುವಕನ ಕೈಯನ್ನು ತಿರುಚಿ, ಕೆಳಗೆ ತಳ್ಳಿ ಹಲ್ಲೆ ನಡೆಸುತ್ತಿರುವುದು ಕಂಡುಬರುತ್ತದೆ.

ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವೀಡಿಯೊ ವೈರಲ್ ಆದ ನಂತರ ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ತನಿಖೆಯಿಂದ ಆ ವ್ಯಕ್ತಿ ವಿದ್ಯುತ್ ಇಲಾಖೆಯ ಲೈನ್‌ಮ್ಯಾನ್ ತೇಜಪಾಲಿ ಸಿಂಗ್ ಎಂಬುದು ಗೊತ್ತಾಗಿದೆ. ಹಲ್ಲೆಗೊಳಗಾದ ವ್ಯಕ್ತಿ ದಲಿತ ಸಮುದಾಯಕ್ಕೆ ಸೇರಿದ ರಾಜೇಂದ್ರ ಎಂಬುದು ತಿಳಿದುಬಂದಿದೆ.

ತರುವಾಯ ತೇಜಪಾಲಿ ಸಿಂಗ್ ಮೇಲೆ ಎಸ್‌ಸಿ.ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ರಾಜೇಂದ್ರನ ಮಾವನ ಮನೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಈ ವಿಚಾರವಾಗಿ ಲೈನ್‌ಮ್ಯಾನ್ ತೇಜಪಾಲಿ ಸಿಂಗ್ ಜೋತೆ ವಾಗ್ವಾದ ಮಾಡಿದ ಕಾರಣಕ್ಕೆ ರಾಜೇಂದ್ರನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜಕೀಯ ರಾಜ್ಯ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಸ್ಟೆಲ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ಖಂಡಿಸಿ, ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಸ್ಟೆಲ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ, ಅಲ್ಲಿನ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಕಾರಣಕ್ಕೆ ಅವರನ್ನು ಹಾಸ್ಟೆಲ್ ನಿಂದ ಹೊರಹಾಕಲು ಸೂಚಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೆ, ಇದು ಸರ್ವಾಧಿಕಾರವಲ್ಲವೆ?

ಗುಣಮಟ್ಟದ ಆಹಾರ ಒದಗಿಸುವುದು ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತದ ಜವಾಬ್ದಾರಿ. ವಿದ್ಯಾರ್ಥಿಗಳ ಅಳಲನ್ನು ಕೇಳಿಸಿಕೊಳ್ಳದೆ, ಈ ಹೀನ ಕೆಲಸಕ್ಕೆ ಆದೇಶಿಸಿದ ಜಿಲ್ಲಾಧಿಕಾರಿ, ವಿದ್ಯಾರ್ಥಿಗಳಿಗೆ ಶಿಕ್ಷಿಸಿದ ಜಿಲ್ಲಾ ಇಲಾಖಾಧಿಕಾರಿಗಳು ಎಲ್ಲರನ್ನೂ ಕೂಡಲೇ ಅಮಾನತು ಮಾಡಬೇಕು. ಈ ಬಗ್ಗೆ ಅಗತ್ಯ ತನಿಖೆ ನಡೆಯಲೇಬೇಕು.

ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಈ ಸರ್ಕಾರದ ಆಡಳಿತದಲ್ಲಿ ಶೋಷಿತ ಸಮುದಾಯದ ವಿದ್ಯಾರ್ಥಿಗಳನ್ನು ನಡೆಸಿಕೊಳ್ಳುತ್ತಿರುವ ರೀತಿ ಹೇಸಿಗೆ ತರಿಸುತ್ತಿದೆ. ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರೆ, ವಿದ್ಯಾರ್ಥಿಗಳ ಪರ ನಿಲ್ಲದೆ, ಅವರ ವಿರುದ್ಧದ ಕ್ರಮಕ್ಕೆ ಸಾಥ್ ನೀಡಿರುವುದು ಎಷ್ಟು ಸರಿ? ನಿಮ್ಮ ಮುಖವಾಡ ಕಳಚಿದೆ.

ವಿದ್ಯಾರ್ಥಿಗಳ ಹಿತ ಕಾಪಾಡಬೇಕಿರುವ ಆಡಳಿತ ವರ್ಗ ಇಷ್ಟು ಅಪ್ರಜಾತಾಂತ್ರಿಕವಾಗಿ ನಡೆದುಕೊಳ್ಳುವುದು ಖಂಡನೀಯ. ಸಮಸ್ಯೆ ಪರಿಹರಿಸಿ, ವಿದ್ಯಾರ್ಥಿಗಳ ಮನಗೆಲ್ಲಬೇಕು. ಅದು ಬಿಟ್ಟು, ಇಂತಹ ಕೆಟ್ಟ ನಿರ್ಧಾರ ಸರಿಯಲ್ಲ. ಅಂಗೈ ಹುಣ್ಣಿಗೆ ಕನ್ನಡಿ ಯಾಕೆ ಎನ್ನುವ ಹಾಗೆ ಆಡಳಿತ ಎಷ್ಟು ಕುಸಿದಿದೆ ಎಂಬುದಕ್ಕೆ ದೊಡ್ಡ ಸಾಕ್ಷಿ ಏನು ಬೇಕು? ಎಂದು ಸರ್ಕಾರವನ್ನು ಕಾರವಾಗಿ ಪ್ರಶ್ನಿಸಿದೆ.