ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Sexual Assault Archives » Dynamic Leader
October 23, 2024
Home Posts tagged Sexual Assault
ಕ್ರೈಂ ರಿಪೋರ್ಟ್ಸ್

ಉತ್ತರ ಪ್ರದೇಶ: 17 ವರ್ಷದ ಬಾಲಕಿಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಬಂದ ವ್ಯಕ್ತಿ, ಮತ್ತೆ ಅದೇ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಮತ್ತೆ ಬಂಧನಕ್ಕೊಳಗಾಗಿರುವ ಘಟನೆ ಆಘಾತವನ್ನು ಉಂಟು ಮಾಡಿದೆ.

ವಿರನಾಥ್ ಪಾಂಡೆ, ಬಿಹಾರ ರಾಜ್ಯದ ಭೋಜ್‌ಪುರ ಜಿಲ್ಲೆಯವನು. ಉತ್ತರ ಪ್ರದೇಶದಲ್ಲಿ 17 ವರ್ಷದ ಬಾಲಕಿಯನ್ನು ಅಪಹರಿಸಿದ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿದವನು.

ಈ ಹಿನ್ನೆಲೆಯಲ್ಲಿ, ಸಂತ್ರಸ್ತೆಯ ತಂದೆ ಕಳೆದ ಮೇನಲ್ಲಿ ತನ್ನ ಮಗಳು ಮತ್ತೆ ಕಾಣೆಯಾಗಿದ್ದಾಳೆ ಎಂದು ಕೊಯ್ರಾವುನಾ (Koirauna) ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರ ನಂತರ ಪೊಲೀಸರು ಪ್ರಥಮ ಮಾಹಿತಿ ವರದಿ (FIR) ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಹೆಚ್ಚಿನ ತನಿಖೆಯಲ್ಲಿ ಬಾಲಕಿಯನ್ನು ರಕ್ಷಿಸಿದ್ದು, ಪಾಂಡೆಯನ್ನು ಜೈಲಿಗೆ ಕಳುಹಿಸಲಾಗಿದೆ.

ಈ ಕುರಿತು ಮಾತನಾಡಿದ ಕೊಯ್ರಾವುನಾ ಪೊಲೀಸ್ ಠಾಣೆಯ ಪ್ರಭಾರಿ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್, ‘ಪಾಂಡೆ ಜಾಮೀನಿನ ಮೇಲೆ ಹೊರಬಂದ ಕೆಲವು ದಿನಗಳ ನಂತರ ಅಂದರೆ, ಆಗಸ್ಟ್ 5 ರಂದು ಹುಡುಗಿಯನ್ನು ಅಪಹರಿಸಿ, ಒಂದು ತಿಂಗಳ ಕಾಲ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ನಂತರ ಸೆಪ್ಟೆಂಬರ್ 2 ರಂದು ಜಂಗಿಗಂಜ್ (Jangiganj) ರೈಲ್ವೆ ನಿಲ್ದಾಣದ ಬಳಿ ಬಾಲಕಿಯನ್ನು ಬಿಟ್ಟು ಪಾಂಡೆ ಪರಾರಿಯಾಗಿದ್ದಾನೆ. ಇದರ ನಂತರ ಸಂತ್ರಸ್ತೆ ಕಳೆದ ಒಂದು ತಿಂಗಳಿನಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದಳು.

ಪಾಂಡೆ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ, ಅಪಹರಣ ಮತ್ತು ಪೋಕ್ಸೋ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆ ಮಹಿಳೆಯ ವೈದ್ಯಕೀಯ ಪರೀಕ್ಷೆಯಲ್ಲಿ, ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ’ ಎಂದು ಅವರು ಹೇಳಿದರು.

ಪಾಂಡೆ ಅವರನ್ನು ನಿನ್ನೆ (ಸೆ.9) ಇಟಹರಾ ಚೌರಾಹಾ (Itahara Chaura)ದಲ್ಲಿ ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಲೇಖನ

ಡಿ.ಸಿ.ಪ್ರಕಾಶ್ ಸಂಪಾದಕರು

‘ಮೋದಿ ಕುಟುಂಬ, ಮೋದಿ ಕುಟುಂಬ’ ಎಂಬ ಘೋಷವಾಕ್ಯವನ್ನು ಮೋದಿ ಹೊರತುಪಡಿಸಿ ಉಳಿದೆಲ್ಲ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಮೋದಿಯವರ ಕುಟುಂಬದಲ್ಲಿ ಭ್ರಷ್ಟರನ್ನು ಮುಕ್ತಗೊಳಿಸುವುದು ಬಹಿರಂಗವಾದಂತೆ ಇದೀಗ ಲೈಂಗಿಕ ದೌರ್ಜನ್ಯ ಎಸಗಿದ ದುಷ್ಕರ್ಮಿಗಳು ಕೂಡಾ ಸ್ವಚ್ಛಂದವಾಗಿ ಓಡಾಡುತ್ತಿರುವುದು ಬಹಿರಂಗವಾಗಿದೆ! ಬಿಜೆಪಿ ಕೇವಲ ಪಕ್ಷಮಾತ್ರವಲ್ಲ, ಅಪರಾಧಗಳನ್ನು ತೊಳೆಯುವ (Washing Machine) ಯಂತ್ರವೂ ಹೌದು ಎಂದು ಕಾಂಗ್ರೆಸ್ ವ್ಯಂಗ್ಯವಾಡುತ್ತಿದೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಜಿಂದಾಲ್, ಸುವೇಂದು ಅಧಿಕಾರಿ ಮುಂತಾದ ಅಸಂಖ್ಯಾತರ ಮೇಲಿದ್ದ ಅಪರಾಧಗಳನ್ನು ಬಿಜೆಪಿ ಹೇಗೆ ತೆಗೆದುಹಾಕಿತು ಎಂಬುದನ್ನು ಇಂಡಿಯನ್ ಎಕ್ಸ್‌ಪ್ರೆಸ್ (Indian Express) ಗ್ರೂಪ್‌ನ ಮಾಹಿತಿ ದೃಢಪಡಿಸಿದೆ. ಅದರಲ್ಲಿ, ವಿರೋಧ ಪಕ್ಷದಿಂದ ಬಿಜೆಪಿಗೆ ಬಲವಂತವಾಗಿ ಎಳೆದ 25 ಜನರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ 3 ಪ್ರಕರಣಗಳನ್ನು ಶಿಕ್ಷೆಯಿಲ್ಲದೆ ಮುಚ್ಚಲಾಯಿತು ಮತ್ತು 20 ಪ್ರಕರಣಗಳನ್ನು ಕೇಂದ್ರ ಬಿಜೆಪಿ ಸರ್ಕಾರವು ಸ್ಥಗಿತಗೊಳಿಸಿದೆ ಎಂದು ಸ್ಪಷ್ಟಪಡಿಸಿದೆ.

ಈ ಹಿನ್ನಲೆಯಲ್ಲಿ, ಬಿಜೆಪಿ ಅಭ್ಯರ್ಥಿಗಳು, ಎನ್‌ಡಿಎ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹಾಗೂ ಕೇಂದ್ರ ಬಿಜೆಪಿಯಿಂದ ನೇಮಕಗೊಂಡಿರುವ ರಾಜ್ಯಪಾಲರ ದೌರ್ಜನ್ಯಗಳಿಂದ ಬಿಜೆಪಿ ಭ್ರಷ್ಟಾಚಾರ ಮಾತ್ರವಲ್ಲ ಲೈಂಗಿಕ ಅಪರಾಧಿಗಳ ಡೇರೆಯೂ ಆಗಿದೆ ಎಂಬ ಮಾಹಿತಿ ಬಯಲಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ವಿಷಯ ತಿಳಿದಿದ್ದರೂ ಮೋದಿ ಅವರ ಪರ ಮತ ಸಂಗ್ರಹಿಸಿದರು.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಬ್ರಿಜ್ ಭೂಷಣ್ ಪುತ್ರ ಕರಣ್ ಭೂಷಣ್‌ಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ. ಕರಣ್ ಭೂಷಣ್ ಮಾತ್ರವಲ್ಲ, ಬಿಜೆಪಿಯ ಸುಮಾರು 44 ಹಾಲಿ ಸಂಸದರ ಮೇಲೂ ಮಹಿಳೆಯರ ವಿರುದ್ಧ ಪ್ರಕರಣಗಳಿವೆ.

ಬಿಜೆಪಿ ಕಾರ್ಯಕಾರಿಣಿಗಳಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದಿಂದ ನಾಮನಿರ್ದೇಶನಗೊಂಡ ರಾಜ್ಯಪಾಲರುಗಳು ಕೂಡ ಲೈಂಗಿಕ ಅಪರಾಧಿಗಳಾಗಿದ್ದಾರೆ ಎಂಬುದಕ್ಕೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ರಾಜಭವನದ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವೇ ಸಾಕ್ಷಿಯಾಗಿದೆ. ಈ ಹಿನ್ನಲೆಯಲ್ಲಿ, ಬಿಜೆಪಿಯಿಂದ ಲೈಂಗಿಕ ವ್ಯಸನಿಗಳು ಅಧಿಕಾರದಲ್ಲಿದ್ದರೆ, ದೇಶದಲ್ಲೂ ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚಾಗುತ್ತವೆ ಎಂಬ ಅಂಶಕ್ಕೆ ಅನುಗುಣವಾಗಿ,

2022ರ ರಾಷ್ಟ್ರೀಯ ಅಪರಾಧ ಸೂಚ್ಯಂಕದ ಪ್ರಕಾರ, *2014ಕ್ಕೆ ಹೋಲಿಸಿದರೆ 2022ರಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಸುಮಾರು 31%ರಷ್ಟು ಹೆಚ್ಚಾಗಿದೆ. ಅಂದರೆ 2022ರಲ್ಲಿ ಕೇಂದ್ರ ಸಚಿವಾಲಯದ ಮಾಹಿತಿ ಪ್ರಕಾರ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದಂತೆ 4,45,256 ಪ್ರಕರಣಗಳು ದಾಖಲಾಗಿವೆ* ಎಂದು ತಿಳಿದು ಬಂದಿದೆ.

ಆದಾಗ್ಯೂ, ಇದನ್ನೆಲ್ಲ ನೋಡುತ್ತಿರುವ ಮೋದಿಯವರು ಇಂಥದ್ದೇನೂ ಆಗದಂತೆ ಮೌನವಾಗಿ ಇದ್ದಾರೆ. ಆದರೆ, ಅವರು ಮೌನ ಮುರಿಯುತ್ತಿರುವುದು ಕೇವಲ ಮುಸ್ಲಿಮರನ್ನು ದೂಷಿಸಲು ಮತ್ತು ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಹೊರಿಸಲು ಮಾತ್ರವೇ. ಇದು ಪ್ರಜಾಪ್ರಭುತ್ವಕ್ಕೆ ಮತ್ತೊಂದು ಅಪಾಯವಾಗಿದೆ.

ಈ ಹಿನ್ನಲೆಯಲ್ಲಿ, ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿರುವ ಬಿಜೆಪಿಗೆ ಅಪಾಯ ಎಂಬಂತೆ ‘ಇಂಡಿಯಾ’ ಮೈತ್ರಿಕೂಟ ಬಲಗೊಳ್ಳುತ್ತಿರುವುದು ಬಿಜೆಪಿಗೆ ಭಾರೀ ಹಿನ್ನಡೆ ತಂದಿದೆ. ಹೀಗಾಗಿ, ಅತಾಶೆಯಲ್ಲಿರುವ ಬಿಜೆಪಿ ಸೋಲಿನ ಭಯದಿಂದ, ನಾವು ಏನು ಮಾತನಾಡುತ್ತಿದ್ದೇವೆ ಎಂದು ತಿಳಿಯದೆ, ನಾವು ಯಾವ ರೀತಿಯ ಪೋಸ್ಟ್ ಮಾಡುತ್ತಿದ್ದೇವೆ ಎಂದು ಅರ್ಥೈಸಿಕೊಳ್ಳದೇ

ಮುಸ್ಲಿಮರನ್ನು ಶತ್ರುಗಳಂತೆ ಕಾಣುವ ಆರೆಸ್ಸೆಸ್-ಬಿಜೆಪಿ ಧಾರ್ಮಿಕ ಭಿನ್ನಾಭಿಪ್ರಾಯ ಸೃಷ್ಟಿಸುವ ದ್ವೇಷಪೂರಿತ ವಿಡಿಯೋಗಳನ್ನು ಅಂತರ್ಜಾಲದಲ್ಲಿ ಹಾಕುವುದು, ಮತ ಕಳೆದುಕೊಳ್ಳುವ ಭೀತಿಯಿಂದ ಮತ್ತೆ ಪೋಸ್ಟ್‌ಗಳನ್ನು ಅಳಿಸಿ ಹಾಕುವುದು ಇತ್ಯಾದಿಗಳನ್ನು ಮಾಡುತ್ತಿದ್ದಾರೆ. ಇದರಿಂದಾಗಿ 400 ಸೀಟು ವಶಪಡಿಸಿಕೊಳ್ಳುವ ಬಿಜೆಪಿಯ ಹಿಂದಿನ ಘೋಷಣೆ ಮಾಯವಾಗಿದೆ.

ದೇಶ

ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಯೊಬ್ಬರು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಹೋದಾಗ ನ್ಯಾಯಾಧೀಶರೇ ಲೈಂಗಿಕ ಕಿರುಕುಳ ನೀಡಿದ ಘಟನೆ ತೀವ್ರ ಆಘಾತವನ್ನುಂಟು ಮಾಡಿದೆ.!

ತ್ರಿಪುರಾ ರಾಜ್ಯದಲ್ಲಿ ನೆಲೆಸಿರುವ 26 ವರ್ಷದ ಯುವತಿಯೊಬ್ಬಳು ಮದುವೆಯಾಗಿ ತನ್ನ ಪತಿಯೊಂದಿಗೆ ವಾಸವಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ನಿಗೂಢ ವ್ಯಕ್ತಿಯೊಬ್ಬ ಆಕೆಯ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದನು. ಈ ಘಟನೆ ತೀವ್ರ ಆಘಾತವನ್ನುಂಟು ಮಾಡಿದ್ದರಿಂದ ಸಂತ್ರಸ್ತೆ ತನ್ನ ಪತಿಯ ಸಹಾಯದಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರುತ್ತಿದ್ದಂತೆ, ಫೆಬ್ರವರಿ 13 ರಂದು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಆ ಮಹಿಳೆ, ನ್ಯಾಯಾಧೀಶ ಬಿಶ್ವತೋಷ್ ಧರ್ (Bishwatosh Dhar) ಮುಂದೆ ಸಾಕ್ಷಿ ಹೇಳಲು ಹೋಗಿದ್ದಾರೆ. ಇದು ಲೈಂಗಿಕ ಪ್ರಕರಣವಾಗಿರುವುದರಿಂದ ನ್ಯಾಯಾಧೀಶರು ಪ್ರತ್ಯೇಕ ಕೊಠಡಿಯಲ್ಲಿ ಹೇಳಿಕೆ ತೆಗೆದುಕೊಳ್ಳುತ್ತಾರೆ. ಆ ಮೂಲಕ ನ್ಯಾಯಾಧೀಶರು ತಮ್ಮ ಖಾಸಗಿ ಕೋಣೆಯಲ್ಲಿ ಮಹಿಳೆಯಿಂದ ಹೇಳಿಕೆಯನ್ನು ಪಡೆಯಲು ಪ್ರಯತ್ನಿಸಿದ್ದಾರೆ.

ಬಳಿಕ ಕೊಠಡಿಯಲ್ಲಿದ್ದ ಭದ್ರತಾ ಸಿಬ್ಬಂದಿಯನ್ನು ಹೊರಗೆ ಕಳುಹಿಸಿದ ನ್ಯಾಯಾಧೀಶರು, ವಿಚಾರಣೆಯ ಹೆಸರಿನಲ್ಲಿ ಆಸನದಿಂದ ಎಂದು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ತನ್ನ ಪತಿಗೆ ಘಟನೆಯ ಬಗ್ಗೆ ತಿಳಿಸಿದ್ದಾಳೆ.

ನಂತರ ಸಂತ್ರಸ್ತೆಯ ಪತಿ ಈ ಘಟನೆಗೆ ಸಂಬಂಧಿಸಿದಂತೆ ವಕೀಲರ ಸಂಘಕ್ಕೆ ಲಿಖಿತ ಪತ್ರ ನೀಡಿದ್ದಾರೆ. ಪ್ರಸ್ತುತ ಈ ವಿಷಯವನ್ನು ತನಿಖೆ ಮಾಡಲಾಗುತ್ತಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಯೊಬ್ಬಳು ಹೇಳಿಕೆ ನೀಡಲು ಹೋದಾಗ, ನ್ಯಾಯಾಧೀಶರಿಂದಲೇ ಲೈಂಗಿಕ ಕಿರುಕುಳವನ್ನು ಅನುಭವಿಸಿದ ಘಟನೆ ಭಾರೀ ಆಘಾತವನ್ನುಂಟು ಮಾಡಿದೆ.

ಸಿನಿಮಾ

96ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 10 ರಂದು ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ನಡೆಯಲಿದೆ.

ಇದಕ್ಕಾಗಿ ಶಿಫಾರಸುಗಳ ಅಂತಿಮ ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ. ಇದರಲ್ಲಿ ಓಪೆನ್‌ಹೈಮರ್ (Oppenheimer) 13 ಪ್ರಶಸ್ತಿಗಳಿಗೆ, ಪೂವರ್ ಥಿಂಗ್ಸ್ (Poor Things) 11 ಪ್ರಶಸ್ತಿಗಳಿಗೆ, ಕಿಲ್ಲರ್ಸ್ ಆಫ್ ದಿ ಫ್ಲವರ್ ಮೂನ್ (Killers of the Flower Moon) 10 ಪ್ರಶಸ್ತಿಗಳಿಗೆ, ಬಾರ್ಬಿ (Barbie) 8 ಪ್ರಶಸ್ತಿಗಳಿಗೆ ಮತ್ತು ಮೆಸ್ಟ್ರೋ (Maestro) 7 ಪ್ರಶಸ್ತಿಗಳಿಗೆ ಆಯ್ಕೆಯಾಗಿದೆ. ಈ ಬಾರಿ ಭಾರತದ ಯಾವುದೇ ಸಿನಿಮಾ ಅಂತಿಮ ಹಂತಕ್ಕೆ ತಲುಪಿಲ್ಲ.

ಅದೇ ಸಂದರ್ಭದಲ್ಲಿ, ಭಾರತದ ಜಾರ್ಖಂಡ್‌ನಲ್ಲಿ 13 ವರ್ಷದ ಮಗುವಿನ ಲೈಂಗಿಕ ದೌರ್ಜನ್ಯವನ್ನು ಕೇಂದ್ರೀಕರಿಸುವ ಕೆನಡಾದ ಟು ಕಿಲ್ ಎ ಟೈಗರ್ (To Kill a Tiger) ಸಾಕ್ಷ್ಯಚಿತ್ರವು ಅತ್ಯುತ್ತಮ ಸಾಕ್ಷ್ಯಚಿತ್ರಕ್ಕೆ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಕೆನಡಾದ ಭಾರತೀಯ ಮೂಲದ ಮಹಿಳಾ ನಿರ್ದೇಶಕಿ ನಿಶಾ ಪಹುಜಾ ನಿರ್ದೇಶಿಸಿದ್ದಾರೆ.

ನಿಶಾ ಪಹುಜಾ

ಜಾರ್ಖಂಡ್‌ನ ಸಾಮಾನ್ಯ ರೈತನ 13 ವರ್ಷದ ಮಗಳು ಕ್ರೂರವಾದ ರೀತಿಯಲ್ಲಿ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಾಳೆ. ಹೀಗಾಗಿ ಈ ಭಾಗದ ಜನರು ಅತ್ಯಂತ ಭಯದಲ್ಲಿರುತ್ತಾರೆ. ಈ ಸಂದರ್ಭದಲ್ಲಿಯೂ ಸಹ ತಂದೆ ರಂಜಿತ್ 13 ವರ್ಷದ ಮಗಳ ಕ್ರೌರ್ಯಕ್ಕೆ ನ್ಯಾಯ ಕೇಳಿ ಹೋರಾಡುತ್ತಾರೆ.

ಈ ಹೃದಯ ವಿದ್ರಾವಕ ಸಾಕ್ಷ್ಯಚಿತ್ರವು ಕೆನಡಾದಲ್ಲಿ ನಡೆದ ‘Toronto International Film Festival’ ಮತ್ತು Lighthouse International Film Festival ನಲ್ಲಿ ಪ್ರದರ್ಶನಗೊಂಡು ಪ್ರಶಂಸೆಗಳನ್ನು ಮತ್ತು ಹಲವಾರು ಪ್ರಶಸ್ತಿಗಳನ್ನು ಗಳಿಸಿದೆ. ಈ ಹಿನ್ನಲೆಯಲ್ಲಿ 96ನೇ ಆಸ್ಕರ್ ನಾಮನಿರ್ದೇಶನ ಪಟ್ಟಿಯಲ್ಲಿ ಚಿತ್ರವೂ ಸೇರಿಕೊಂಡಿದೆ. ಈ ಸಾಕ್ಷ್ಯಚಿತ್ರವು ಆಸ್ಕರ್ ಪ್ರಶಸ್ತಿಯನ್ನು ಗೆಲ್ಲುತ್ತದೆಯೇ ಎಂದು ಕಾದು ನೋಡೋಣ.

ದೇಶ

ಉತ್ತರ ಪ್ರದೇಶ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ನಡೆಯುತ್ತಿದೆ. ಇಲ್ಲಿ ನಡೆಯುತ್ತಿರುವ ಆಘಾತಕಾರಿ ಘಟನೆಗಳು ಅವರ ಆಡಳಿತದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲ ಎಂಬುದನ್ನು ತೋರಿಸುತ್ತದೆ.

ಪ್ರತಿದಿನ ರಾಜ್ಯದ ಎಲ್ಲಾದರೊಂದು ಮೂಲೆಯಲ್ಲಿ ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ ಎಂದು ಅಂಕಿಅಂಶಗಳು ತೋರಿಸುತ್ತವೆ. ಸೆಪ್ಟೆಂಬರ್ 27 ರಂದು 5 ಜನರ ಗುಂಪು ಯುವತಿಯನ್ನು ಅಪಹರಿಸಿ ಮನೆಯೊಂದರಲ್ಲಿ ಇಟ್ಟುಕೊಂಡು 20 ದಿನಗಳಿಗೂ ಹೆಚ್ಚು ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ನಂತರ ಆ ಯುವತಿ ಸ್ಥಳೀಯ ಮಹಿಳೆಯರ ಸಹಾಯದಿಂದ ತಪ್ಪಿಸಿಕೊಂಡು ಮನೆಗೆ ಬಂದು ನಡೆದ ಘಟನೆಯನ್ನು ವಿವರಿಸಿದ್ದಾಳೆ. ಇದರಿಂದ ಗಾಬರಿಗೊಂಡ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು 7 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆದರೆ ಆರೋಪಿಗಳು ತಲೆಮರೆಸಿಕೊಂಡಿರುವುದರಿಂದ ಅವರನ್ನು ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸುತ್ತಿದ್ದಾರೆ. ಈ ಕ್ರೂರ ಘಟನೆಯ ಕೆಲವು ದಿನಗಳ ನಂತರ, ನೆನ್ನೆ ಮರುದಿನ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಮೇಲೆ ಆಸ್ಪತ್ರೆಯ ಉದ್ಯೋಗಿಯೇ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.

ಅದೇ ರೀತಿ ಮನೆಯಲ್ಲಿ ಒಬ್ಬಳೇ ಇದ್ದ ಮಹಿಳೆಯ ಮೇಲೆ ಡೆಲಿವರಿ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹೀಗೆ ಮಹಿಳೆಯರ ಮೇಲೆ ದಿನನಿತ್ಯ ಲೈಂಗಿಕ ದೌರ್ಜನ್ಯಗಳು ನಡೆಯುತ್ತಲೇ ಇವೆ. ಇದನ್ನು ತಡೆಯಲು ಉತ್ತರಪ್ರದೇಶದ ಯೋಗಿ ಸರಕಾರಕ್ಕೆ ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಾಮಾಜಿಕ ಕಾರ್ಯಕರ್ತರು ಟೀಕಿಸುತ್ತಿದ್ದಾರೆ.

ದೇಶ

ಡಿ.ಸಿ.ಪ್ರಕಾಶ್, ಸಂಪಾದಕರು

“ಮೋದಿಯವರೇ ಮಣಿಪುರ ಹೊತ್ತಿ ಉರಿಯುತ್ತಿದೆ; ಕೂಡಲೇ ಅಲ್ಲಿಗೆ ಹೋಗಿ” ಎಂದು ವಿರೋಧ ಪಕ್ಷಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಆದರೆ ಪ್ರಧಾನಿ ಮೋದಿಯವರು ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ತುಂಬಾ ಬ್ಯುಸಿಯಾಗಿದ್ದರು. ಒಂದು ರಾಜ್ಯ ಹಿಂಸಾಚಾರದಿಂದ ನಲುಗಿದಾಗ ಕೇಂದ್ರ ಗೃಹ ಕಾರ್ಯದರ್ಶಿ ಅಮಿತ್ ಶಾ ತಕ್ಷಣವೇ ಅಲ್ಲಿಗೆ ಹೋಗಬೇಕಿತ್ತು. ಆದರೆ, ಅವರೂ ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದರು.

“ಪ್ರಧಾನಿ.. ಮಣಿಪುರದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಹಿಂಸಾಚಾರ ನಡೆಯುತ್ತಿದೆ. ಅದರ ಬಗ್ಗೆ ಮಾತನಾಡದೆ ಬಾಯಿ ಮುಚ್ಚಿಕೊಂಡಿದ್ದೀರಾ?” ಎಂದು ವಿರೋಧ ಪಕ್ಷ ಸೇರಿದಂತೆ ಎಲ್ಲರೂ ಕಿಡಿಕಾರಿದರು. ದೆಹಲಿಯಲ್ಲಿ ಬ್ಯುಸಿಯಾಗಿದ್ದ ಪ್ರಧಾನಿಗೆ ಮಣಿಪುರದ ಹಿಂಸಾಚಾರದಿಂದ ಸಂತ್ರಸ್ತರಾದ ಜನರ ಕೂಗು ಕೇಳಿಸಲಿಲ್ಲವೇನೊ, ಹಾಗಾಗಿ ಮಣಿಪುರ ವಿಚಾರದಲ್ಲಿ ಪ್ರಧಾನಿ ಮಾತನಾಡಲೇ ಇಲ್ಲ.

ಮೇ 4 ರಂದು ಮಣಿಪುರದಲ್ಲಿ ಎರಡು ಜನಾಂಗೀಯ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಎರಡು ತಿಂಗಳಿಗೂ ಹೆಚ್ಚು ಕಾಲ ಸಮಸ್ಯೆ ಮುಂದುವರಿದಿದೆ. ಈ ಅವಧಿಯಲ್ಲಿ, ಅನೇಕ ಚರ್ಚುಗಳು ಮತ್ತು ದೇವಾಲಯಗಳನ್ನು ಸುಟ್ಟು ಬೂದಿ ಮಾಡಲಾಗಿದೆ. ಸಾವಿರಾರು ಮನೆಗಳು ಮತ್ತು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ, ಮತ್ತು ಬೆಂಕಿ ಹಚ್ಚಲಾಗಿದೆ. ಎರಡು ಕಡೆಯ ಘರ್ಷಣೆಯಲ್ಲಿ ಸುಮಾರು 150 ಜನರು ಸಾವನ್ನಪ್ಪಿದ್ದಾರೆ.

ಈ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಜಪಾನ್, ಆಸ್ಟ್ರೇಲಿಯಾ, ಪಪುವಾ ನ್ಯೂಗಿನಿಯಾ, ಅಮೆರಿಕ, ಫ್ರಾನ್ಸ್, ಯುನೈಟೆಡ್ ಅರಬ್ ಎಮಿರೇಟ್ಸ್ ಎಂದು ವಿಶ್ವದಾದ್ಯಂತ ಪ್ರವಾಸ ಮಾಡಿದ್ದಾರೆ. ಹಾಗಾಗಿ, ಮಣಿಪುರದ ಬಗ್ಗೆ ಯೋಚಿಸಲು ಅವರಿಗೆ ಸಮಯವಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಆದರೆ ಇದೀಗ ಮಣಿಪುರ ವಿಚಾರದಲ್ಲಿ ಮೌನ ಮುರಿದಿದ್ದಾರೆ.

ಮಣಿಪುರದಲ್ಲಿ ಕುಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಎಳೆದೊಯ್ದ ವಿಡಿಯೋ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇದೇ ಸಂದರ್ಭದಲ್ಲಿ ಮಣಿಪುರದ ಬಗ್ಗೆ ಪ್ರಧಾನಿ ಮೋದಿ ಮೊಟ್ಟಮೊದಲ ಬಾರಿಗೆ ಮಾತನಾಡಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ನಿನ್ನೆ (ಜುಲೈ 20) ಆರಂಭವಾಗಿದೆ. ಸಭೆ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಧಾನಿ ಮೋದಿ,

“ಮಣಿಪುರದಲ್ಲಿ ನಡೆದ ಘಟನೆಯ ಬಗ್ಗೆ ತಿಳಿದು ಆಘಾತವಾಯಿತು. ಯಾವ ಅಪರಾಧಿಯೂ ತಪ್ಪಿಸಿಕೊಳ್ಳುಲು ಬಿಡುವುದಿಲ್ಲ ಎಂದು ನಾನು ಈ ದೇಶಕ್ಕೆ ಭರವಸೆ ನೀಡುತ್ತೇನೆ. ಕಾನೂನು ತನ್ನ ಎಲ್ಲಾ ಶಕ್ತಿಯೊಂದಿಗೆ ನಿರ್ಧರಿಸುತ್ತದೆ. ಮಣಿಪುರದ ಹೆಣ್ಣುಮಕ್ಕಳಿಗೆ ನಡೆದಿರುವುದನ್ನು ನಾನು ಎಂದಿಗೂ ಕ್ಷಮಿಸುವುದಿಲ್ಲ. ಅಲ್ಲದೆ, ಮಹಿಳೆಯರ ರಕ್ಷಣೆಗೆ ಸಂಬಂಧಿಸಿದ ಕಾನೂನನ್ನು ಬಲಪಡಿಸುವಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

“38 ಪಕ್ಷಗಳೊಂದಿಗೆ ಮಾತನಾಡಲು ಸಮಯವಿದೆ. ಆದರೆ ಪ್ರಧಾನಿಗೆ ಮಣಿಪುರಕ್ಕೆ ಹೋಗಲು ಸಮಯವಿಲ್ಲ” ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. “ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಪ್ರಧಾನಿಗೆ ನಾಚಿಕೆಯಾಗಬೇಕು” ಎಂದು ಸಿಪಿಎಂ ನಾಯಕರಲ್ಲಿ ಒಬ್ಬರಾದ ಬೃಂದಾ ಕಾರಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸುಪ್ರೀಂ ಕೋರ್ಟ್ ಹಿಂಸಾಚಾರವನ್ನು ಖಂಡಿಸಿದ ನಂತರವೇ ಮೋದಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ” ಎಂದು ಸಂಸದ ಕಪಿಲ್ ಸಿಬಲ್ ಹೇಳಿದ್ದಾರೆ. ಮಣಿಪುರ ವಿಷಯ ಸಂಸತ್ತಿನಲ್ಲಿ ದಿನವಿಡೀ ಚರ್ಚೆಯಾಗಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.

ಮಣಿಪುರದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರ ಮೇಲಿನ ಕ್ರೌರ್ಯ, ಕಳೆದ ಮೇ ತಿಂಗಳಲ್ಲಿ ನಡೆದಿದ್ದು ಎನ್ನಲಾಗಿದೆ. ಆ ರಾಜ್ಯದಲ್ಲಿ ಇಂಟರ್‌ನೆಟ್ ಸೇವೆ ಸ್ಥಗಿತಗೊಂಡಿದ್ದರಿಂದ ತಕ್ಷಣ ಪತ್ತೆಯಾಗಿರಲಿಲ್ಲ. ಆ ದೌರ್ಜನ್ಯ ಬೆಳಕಿಗೆ ಬಂದ ನಂತರ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳುತ್ತಿದೆ ಅಲ್ಲಿನ ಅಧಿಕಾರ ವರ್ಗ. ಬಹುಶಃ ಅದು ಹೊರಬರದಿದ್ದರೆ, ಯಾವುದೇ ಕ್ರಮ ತೆಗೆದುಕೊಳ್ಳುತ್ತಿರಲಿಲ್ಲ. ಇಷ್ಟು ದೊಡ್ಡ ಘಟನೆ ನಡೆದಿದ್ದು, ಸರ್ಕಾರಕ್ಕೆ ಅದರ ಬಗ್ಗೆ ತಿಳಿಯದೇ ಇರಲು ಸಾಧ್ಯವೇ ಇಲ್ಲ. ಆಗ ಏಕೆ ಕ್ರಮ ಕೈಗೊಂಡಿಲ್ಲ?

ಮಣಿಪುರದಲ್ಲಿ ಅನೇಕ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದರು. ಅವರನ್ನು ಹತ್ತಿಕ್ಕಲು ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯದ ತಂತ್ರವನ್ನು ಅನುಸರಿಸಿದ್ದಾರೆ. ಗಲಭೆಗಳ ಸಮಯದಲ್ಲಿ, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವುದು ಒಂದು ಮಾದರಿ (Pattern) ಆಗಿದೆ. ಇದು ಗುಜರಾತ್ ಮತ್ತು ಮುಜಫರಾಬಾದ್‌ನಂತಹ ಎಲ್ಲೆಡೆ ನಡೆದಿದೆ.

ಮೇಲುಗೈ ಸಾಧಿಸಬಲ್ಲ ಗುಂಪು… ಅದು ಜಾತಿವಾದಿ ಗುಂಪು ಇರಬಹುದು, ಧಾರ್ಮಿಕ ಗುಂಪು ಇರಬಹುದು ಅಥವಾ ಜನಾಂಗೀಯ ಗುಂಪು ಇರಬಹುದು. ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವೆ ಸಮಸ್ಯೆಗಳು ಎದುರಾದಾಗ, ಬಹುಸಂಖ್ಯಾತರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ವಿಧಾನವನ್ನು ಅನುಸರಿಸುತ್ತಾರೆ. ಮಣಿಪುರದ ಇಬ್ಬರು ಬುಡಕಟ್ಟು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ವಿಡಿಯೋದಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಶಕ್ತಿಯನ್ನು ತೋರಿಸಲು ಪ್ರಯತ್ನಿಸಿದ್ದಾರೆ. ಅವರು ಅದನ್ನು ಅಧಿಕಾರವನ್ನು ಉಳಿಸಿಕೊಳ್ಳುವ ವಿಷಯವಾಗಿ ನೋಡುತ್ತಾರೆ.

ಮಣಿಪುರ ಘಟನೆಯನ್ನು ಪ್ರತ್ಯೇಕ ವಿಷಯವಾಗಿ ನೋಡಬಾರದು. ಮಹಿಳೆಯರ ವಿರುದ್ಧ ನಿರಂತರವಾಗಿ ನಡೆಯುತ್ತಿರುವ ಇಂತಹ ಸಮಸ್ಯೆಗಳ ಬಗ್ಗೆ ಮಾತನಾಡುವುದೇ ಇಲ್ಲ. ಮಣಿಪುರದಲ್ಲಿ ಕಳೆದ ಎರಡು ತಿಂಗಳಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ಇಂದಿನವರೆಗೂ ಚರ್ಚೆಯ ವಿಷಯವಾಗಿರಲಿಲ್ಲ. ಮಣಿಪುರದ ಆಚೆಗಿನ ಮಾಧ್ಯಮಗಳೂ ಅದಕ್ಕೆ ಪ್ರಾಮುಖ್ಯತೆ ನೀಡಲಿಲ್ಲ. ಆದರೆ ಈ ವಿಡಿಯೋ ಬಹಿರಂಗವಾದ ನಂತರ ಈ ಬಗ್ಗೆ ಮಾತನಾಡುತ್ತಿದ್ದಾರೆ. ಆದ್ದರಿಂದ, ನಾವು ನಮ್ಮ ಮೌನವನ್ನು ಪ್ರಶ್ನಿಸುವ ಸಮಯ ಎಂದು ಇದನ್ನು ನೋಡಬೇಕು.

ಮಣಿಪುರ ಹೊತ್ತಿ ಉರಿಯುತ್ತಿರುವ ಈ ಹೊತ್ತಿನಲ್ಲಿ ಪ್ರಧಾನಿ ವಿಶ್ವ ಪರ್ಯಟನೆ ಮಾಡುತ್ತಿದ್ದಾರೆ. ಅವುಕ್ಕೆಲ್ಲ ಅವರಿಗೆ ಸಮಯವಿದೆ. ವೀಡಿಯೊ ಬಿಡುಗಡೆಯಾಗಿ ದೇಶವೇ ಅಲ್ಲೋಲಕಲ್ಲೋಲವಾದ ಬಳಿಕವೇ ಮಣಿಪುರದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. “ಹೃದಯ ಭಾರವಾಗಿದೆ” ಎಂದು ಪ್ರಧಾನಿ ಹೇಳುತ್ತಾರೆ. ಅಧಿಕಾರವಿಲ್ಲದ ಸಾಮಾನ್ಯ ಜನರು ಹಾಗೆ ಹೇಳಬಹುದು. ಆದರೆ ದೇಶದ ಪ್ರಜೆಗಳ ರಕ್ಷಣೆಯ ಹೊಣೆ ಹೊತ್ತಿರುವ ಮತ್ತು ಎಲ್ಲ ಅಧಿಕಾರ ಹೊಂದಿರುವ ಪ್ರಧಾನಿ ಸಾಮಾನ್ಯರಂತೆ ಮಾತನಾಡುತ್ತಿದ್ದಾರೆ.

ಮಣಿಪುರದಲ್ಲಿ ಶಾಂತಿ ಮರಳಿದೆ ಎಂದು ಅವರು ಹೇಳುತ್ತಾರೆ. ಆದರೆ, ಮನೆಗಳಿಂದ ಹೊರಹಾಕಲ್ಪಟ್ಟ ಸುಮಾರು 50,000 ಜನರು ಇನ್ನೂ ತಮ್ಮ ಮನೆಗಳಿಗೆ ಮರಳಿಲ್ಲ. ಎರಡು ತಿಂಗಳಿಂದ ಸಮಸ್ಯೆ ನಡೆಯುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರ ಯಾವುದೇ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ. ಗೃಹ ಸಚಿವ ಅಮಿತ್ ಶಾ ಅವರು ಕಾಳಜಿ ವಹಿಸುತ್ತಿದ್ದಾರೆ ಎಂದು ಹೇಳುತ್ತಲೇ ಇದ್ದಾರೆ. ಅವರು ನಿಜವಾಗಿಯೂ ಸೂಕ್ತ ಕ್ರಮ ಕೈಗೊಂಡಿದ್ದರೆ ಹಿಂಸಾಚಾರ ನಿಯಂತ್ರಣಕ್ಕೆ ಬರುತ್ತಿತ್ತು.

ಡಬಲ್ ಇಂಜಿನ್ ಸರ್ಕಾರ (ಕೇಂದ್ರ ಮತ್ತು ರಾಜ್ಯದಲ್ಲಿ ಒಂದು ಪಕ್ಷದ ಆಡಳಿತ) ಇದ್ದರೆ ಯಾವುದೇ ಸಮಸ್ಯೆ ಇಲ್ಲ ಎಂದು ಮೋದಿ ಪ್ರಚಾರ ವೇದಿಕೆಗಳಲ್ಲಿ ಮಾತನಾಡುತ್ತಿದ್ದರು. ‘ಡಬಲ್ ಇಂಜಿನ್ ಸರ್ಕಾರ್’ ಇದ್ದರೂ ಮಣಿಪುರದಲ್ಲಿ ಏಕೆ ಇಷ್ಟೊಂದು ದೌರ್ಜನ್ಯಗಳು ನಡೆಯುತ್ತಿವೆ? ಇದಕ್ಕೆ ಪ್ರಧಾನಿ ಉತ್ತರಿಸುವರೇ?!