ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Smriti Irani Archives » Dynamic Leader
October 23, 2024
Home Posts tagged Smriti Irani
ರಾಜಕೀಯ

ನವದೆಹಲಿ: ‘ರಾಹುಲ್ ಹೆಡ್‌ಲೈನ್ಸ್‌ (Headlines)ನಲ್ಲಿ ಸ್ಥಾನ ಪಡೆಯಲು ರಣತಂತ್ರ ರೂಪಿಸಿ ಮಾತನಾಡುತ್ತಿದ್ದಾರೆ’ ಎಂದು ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

ಇಂಗ್ಲಿಷ್ ಸುದ್ದಿ ವಾಹಿನಿಯೊಂದಕ್ಕೆ ಸ್ಮೃತಿ ಇರಾನಿ ನೀಡಿದ ಸಂದರ್ಶನ: ಚುನಾವಣೆ ಸಂದರ್ಭದಲ್ಲಿ ಜನರ ಮನಸ್ಸಿನಲ್ಲಿ ಸ್ಥಾನ ಪಡೆಯಲು ರಾಹುಲ್ ಆಗಾಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದರು. ಅದೊಂದು ಪ್ರಹಸನವಾಯಿತು. ಆ ತಂತ್ರ ಫಲಿಸದ ಕಾರಣ ಈಗ ಜಾತಿ ಸಮಸ್ಯೆ ಬಗ್ಗೆ ಮಾತನಾಡಲು ಶುರು ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲುವಿನ ರುಚಿ ಕಂಡಿದ್ದೇವೆ ಎಂದು ಭಾವಿಸಿರುವ ರಾಹುಲ್ ಈಗ ವಿಭಿನ್ನ ರಾಜಕೀಯ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ.

ಮಿಸ್ ಇಂಡಿಯಾ:
ಅವರು ಜಾತಿ ಗಣತಿ ಬಗ್ಗೆ ಮಾತನಾಡುತ್ತಾರೆ. ರಾಹುಲ್ ಅವರ ಜಾತಿ ರಾಜಕಾರಣ ಹೊಸ ತಂತ್ರ. ಮಿಸ್ ಇಂಡಿಯಾ ಸ್ಪರ್ಧೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರಿಗೆ ತಿಳಿದಿದೆ. ಆದರೂ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಮಾತುಗಳನ್ನು ಹೇಳುತ್ತಿದ್ದಾರೆ. ಏಕೆಂದರೆ ಇದು ಮುಖ್ಯಾಂಶಗಳನ್ನು (Headlines) ಪಡೆಯುತ್ತದೆ. ಇದೆಲ್ಲ ಗೊತ್ತಿದ್ದರೂ ಪ್ಲಾನ್ ಮಾಡಿ ಮಾಡುತ್ತಿದ್ದಾರೆ. ಈ ರೀತಿ ಸ್ಮೃತಿ ಇರಾನಿ ಹೇಳಿದ್ದಾರೆ.

ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ವಿರುದ್ಧ ಸ್ಮೃತಿ ಇರಾನಿ ಸೋತಿದ್ದರು. ಇದರಿಂದ ಮತ್ತೊಮ್ಮೆ ಸಚಿವೆಯಾಗುವ ಅವಕಾಶವನ್ನು ಕಳೆದುಕೊಂಡರು. 2019ರ ಚುನಾವಣೆಯಲ್ಲಿ ಸ್ಮೃತಿ ಇರಾನಿ ರಾಹುಲ್‌ ಗಾಂಧಿಯನ್ನು ಸೋಲಿಸಿ, ಜಯಗಳಿಸುವುದರ ಮೂಲಕ ಕೇಂದ್ರ ಸಚಿವೆಯಾದವರು ಎಂಬುದು ಗಮನಾರ್ಹ.

ರಾಜಕೀಯ

ನವದೆಹಲಿ: ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲು ರಾಹುಲ್‌ಗೆ ಭಯೋತ್ಪಾದಕ ಸಂಘಟನೆ ಪಿಎಫ್‌ಐ ಬೆಂಬಲ ಸಿಕ್ಕಿದೆ ಎಂಬ ಮಾಹಿತಿ ನಮಗೆ ಬಂದಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸ್ಮೃತಿ ಇರಾನಿ, ಐತಿಹಾಸಿಕವಾಗಿ ಕಾಂಗ್ರೆಸ್‌ಗೆ ಸಂಬಂಧಿಸಿದ ಕ್ಷೇತ್ರವಾದ ಅಮೇಠಿಯ ನಿವಾಸಿಗಳ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅಮೇಠಿಯ ಜನರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಶೀರ್ವದಿಸುತ್ತಾರೆ.

ಅಮೇಠಿಯಲ್ಲಿ ಗಾಂಧಿ ಕುಟುಂಬ ಸ್ಪರ್ಧಿಸುವುದು ನಮಗೆ ಗೊತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೇಠಿ ಕ್ಷೇತ್ರದಲ್ಲಿ 19 ಲಕ್ಷ ಜನರಿಗೆ ಪಡಿತರ ಪದಾರ್ಥಗಳನ್ನು ವಿತರಿಸುತ್ತಿದ್ದಾರೆ.

ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲು ರಾಹುಲ್‌ಗೆ ಭಯೋತ್ಪಾದಕ ಸಂಘಟನೆ ಪಿಎಫ್‌ಐ ಬೆಂಬಲ ಸಿಕ್ಕಿದೆ ಎಂಬ ಮಾಹಿತಿ ನಮಗೆ ಬಂದಿದೆ” ಎಂದು ಹೇಳಿದ್ದಾರೆ.

ದೇಶ

ನವದೆಹಲಿ: ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ವೇತನ ಸಹಿತ ರಜೆ ಅಗತ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ಮುಟ್ಟು ಮತ್ತು ಋತುಚಕ್ರವು ದೋಷವಲ್ಲ, ಮಹಿಳೆಯರ ಜೀವನದಲ್ಲಿ ಇದು ಸಹಜ. ಮುಟ್ಟನ್ನು ಎದುರಿಸುವ ಮಹಿಳೆಯಾಗಿ ನಾನು ಇದನ್ನು ಹೇಳುತ್ತಿದ್ದೇನೆ.

ಕಡಿಮೆ ಪ್ರಮಾಣದ ಮಹಿಳೆಯರೇ ತೀವ್ರ ಮುಟ್ಟಿನ ನೋವಿಗೆ ಒಳಗಾಗುತ್ತಾರೆ. ಇವು ಸಾಮಾನ್ಯವಾಗಿ ಔಷಧಿಗಳ ಮೂಲಕ ಸರಿ ಮಾಡಬಹುದಾದವುಗಳು. ಆದ್ದರಿಂದ, ಮಹಿಳೆಯರಿಗೆ ವೇತನ ನೀಡುವುದರೊಂದಿಗೆ ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವುದು ಅನಿವಾರ್ಯವಲ್ಲ” ಎಂದು ಹೇಳಿದ್ದಾರೆ. ಹೀಗೆ ಸ್ಮೃತಿ ಇರಾನಿ ಮಾತನಾಡಿದ್ದು ವಿವಾದವನ್ನು ಸೃಷ್ಟಿಸಿದೆ.

ದೇಶ

ಚೆನ್ನೈ: ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ನಡೆದ ಉದ್ಯಮ ಒಕ್ಕೂಟದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ, ಭಾರತದ ವಾಸ್ತವ ಸ್ಥಿತಿ ತಿಳಿಯದೆ ಜಾಗತಿಕ ಹಸಿವು ಸೂಚ್ಯಂಕ ಪಟ್ಟಿ ಪ್ರಕಟಿಸಲಾಗಿದೆ ಎಂದರು. 140 ಕೋಟಿ ಜನರಲ್ಲಿ ಕೇವಲ 3000 ಜನರ ಅಭಿಪ್ರಾಯ ಪಡೆದು ಪ್ರಕಟಿಸಿರುವ ಪಟ್ಟಿಯಿಂದ ನೈಜ ಸ್ಥಿತಿ ತಿಳಿಯುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಸಂಸ್ಮರಣ ದಿನಾಚರಣೆ: ಹುತಾತ್ಮ ಪೊಲೀಸರಿಗೆ ಪುಷ್ಪ ನಮನದ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಈ ಹಿನ್ನಲೆಯಲ್ಲಿ, ಸ್ಮೃತಿ ಇರಾನಿ ಅವರ ಅಭಿಪ್ರಾಯವನ್ನು ಟೀಕಿಸಿರುವ ಡಿಎಂಕೆ ಸಂಸದೆ ಕನಿಮೊಳಿ ಅವರು, ತಮ್ಮ ‘ಎಕ್ಸ್’ ಸಾಮಾಜಿಕ ಮಾಧ್ಯಮ ಪುಟದಲ್ಲಿ ಪ್ರಕಟಿಸಿರುವ ಪೋಸ್ಟ್‌ನಲ್ಲಿ, ಜಾಗತಿಕ ಹಸಿವು ಸೂಚ್ಯಂಕವನ್ನು ಯಾವ ವಿಧಾನದಿಂದ ಸಿದ್ಧಪಡಿಸಲಾಗಿದೆ ಎಂದು ತಿಳಿಯದೆ, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಟೀಕೆ ಮಾಡಿರುವುದು ನೋವಿನ ಸಂಗತಿ ಎಂದಿದ್ದಾರೆ.

ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿ 28 ದಿನಗಳವರೆಗೆ ನೀರು ಹರಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ!

ಅಪೌಷ್ಟಿಕತೆ, ಆಹಾರದ ಕೊರತೆ, ಮಕ್ಕಳ ಮರಣ ಸೇರಿದಂತೆ ಪ್ರಮುಖ ವಿಷಯಗಳಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ಸಾಮರ್ಥ್ಯ ಏನು ಎಂಬುದನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಭಾಷಣದ ಮೂಲಕ ಬಯಲಾಗಿದೆ ಎಂದು ಸಂಸದೆ ಕನಿಮೊಳಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ಜಾತಿವಾರು ಜನಗಣತಿ ನಡೆಸಬೇಕು: ಪ್ರಧಾನಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪತ್ರ!

ಜಾಗತಿಕ ಹಸಿವು ಸೂಚ್ಯಂಕ 2023ರಲ್ಲಿ ಭಾರತದ ಶ್ರೇಯಾಂಕವು 125 ದೇಶಗಳಲ್ಲಿ 111 (2022 ರ ಸೂಚ್ಯಂಕ 107 ರಿಂದ ಜಾರಿಯಾಗಿದೆ) ಆಗಿದೆ. ಪ್ರತಿ ಅಕ್ಟೋಬರ್‌ನಲ್ಲಿ ಕನ್ಸರ್ನ್ ವರ್ಲ್ಡ್‌ವೈಡ್ ಮತ್ತು ವೆಲ್ತುಂಗರ್‌ಹಿಲ್ಫ್ ಜಂಟಿಯಾಗಿ ಸೂಚ್ಯಂಕವನ್ನು ಬಿಡುಗಡೆ ಮಾಡುತ್ತವೆ. ಹಸಿವು ಸೂಚ್ಯಂಕವು ನಾಲ್ಕು ಘಟಕ ಸೂಚಕಗಳ ಮೇಲೆ ದೇಶಗಳ ಕಾರ್ಯಕ್ಷಮತೆಯನ್ನು ಅಳೆಯುತ್ತದೆ.

ದೇಶ ವಿದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

‘ಭಾರತದಂತಹ ದೇಶಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಪಡಿಸಲು ಹಂಗೇರಿ-ಅಮೆರಿಕನ್ ಉದ್ಯಮಿ ಜಾರ್ಜ್ ಸೋರೋಸ್ 100 ಬಿಲಿಯನ್ ಡಾಲರ್ ನಿಧಿಯನ್ನು ರಚಿಸಿದ್ದಾರೆ’ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

ಭಾರತೀಯ ಉದ್ಯಮಿ ಗೌತಮ್ ಅದಾನಿ ಅವರ ಅದಾನಿ ಸಮೂಹವನ್ನು ಅಮೆರಿಕ ಸಂಸ್ಥೆ ಹಿಂಡೆನ್‌ಬರ್ಗ್ ಆರ್ಥಿಕ ಅಕ್ರಮಗಳ ಆರೋಪ ಮಾಡಿತ್ತು. ಇದರಿಂದ ಅದಾನಿ ಸಮೂಹದ ಮೌಲ್ಯ 100 ಶತಕೋಟಿ ಡಾಲರ್ ನಷ್ಟು ಕುಸಿತಾವನ್ನು ಖಂಡಿತು. ಈ ಹಿನ್ನಲೆಯಲ್ಲಿ ಹಂಗೇರಿಯ ಅಮೆರಿಕದ ಉದ್ಯಮಿ ಜಾರ್ಜ್ ಸೋರೋಸ್ ಅವರ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ಅಂತರರಾಷ್ಟ್ರೀಯ ಬಿಲಿಯನೇರ್ ಹೂಡಿಕೆದಾರ ಜಾರ್ಜ್ ಸೋರೋಸ್, ಇತ್ತೀಚಿನ ಅದಾನಿ ಸಮೂಹದ ಬಿಕ್ಕಟ್ಟನ್ನು ಪ್ರಸ್ತಾಪ ಮಾಡಿದ ಅವರು, ‘ಬಹುಕೋಟ್ಯಾಧಿಪತಿ ಕಂಪನಿಗಳ ವಿರುದ್ಧ ವಂಚನೆ ಮತ್ತು ಷೇರು ವಂಚನೆ ಆರೋಪಗಳ ಕುರಿತು ವಿದೇಶಿ ಹೂಡಿಕೆದಾರರು ಮತ್ತು ಸಂಸತ್ತಿನ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಬೇಕು’ ಎಂದು ಹೇಳಿದರು.

‘ಅದಾನಿಯ ವ್ಯಾಪಾರ ಸಾಮ್ರಾಜ್ಯದಲ್ಲಿನ ಗೊಂದಲವು, ಹೂಡಿಕೆಗೆ ಭಾರತ ಉತ್ತಮ ಸ್ಥಳವಾಗಿದೆ ಎಂಬ ವಿಶ್ವಾಸವನ್ನು ಅಲುಗಾಡಿಸಿದೆ ಮತ್ತು ಇದು ಭಾರತದಲ್ಲಿ ಪ್ರಜಾಸತ್ತಾತ್ಮಕ ಪುನರುಜ್ಜೀವನಕ್ಕೆ ಅವಕಾಶವನ್ನು ಸೃಷ್ಟಿಸುತ್ತದೆ’ ಎಂದು ಹಂಗೇರಿಯಲ್ಲಿ ವಾಸಿಸುವ ಅಮೇರಿಕನ್ ಉದ್ಯಮಿ ಜಾರ್ಜ್ ಸೋರೋಸ್ ಹೇಳಿದ್ದಾರೆ.

ಇದನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿಯ ಹಿರಿಯ ನಾಯಕಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ, ‘ಜಾರ್ಜ್ ಸೋರೋಸ್ ಪ್ರಧಾನಿ ನರೇಂದ್ರ ಮೋದಿಯನ್ನು ಮಾತ್ರ ದೂಷಿಸಿಲ್ಲ, ಅವರು ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದೂಷಿಸಿದ್ದಾರೆ. ಭಾರತದಂತಹ ದೇಶಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಮಾಡಲು 100 ಬಿಲಿಯನ್ ಡಾಲರ್‌ಗಳ ನಿಧಿಯನ್ನು ಅವರು ರಚಿಸಿದ್ದಾರೆ’ ಎಂದು ಆಪಾದಿಸಿದ ಸ್ಮೃತಿ ಇರಾನಿ,

‘ಅಂತಾರಾಷ್ಟ್ರೀಯ ಉದ್ಯಮಿ ಜಾರ್ಜ್ ಸೋರೋಸ್ ಭಾರತದ ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಮಧ್ಯಪ್ರವೇಶಿಸುವ ತನ್ನ ಉದ್ದೇಶವನ್ನು ಪ್ರಕಟಿಸಿದ್ದಾರೆ. ಪ್ರಧಾನಿ ಮೋದಿಯಂತಹ ನಾಯಕರನ್ನು ಗುರಿಯಾಗಿಸಲು ಅವರು ಶತಕೋಟಿ ಡಾಲರ್‌ಗೂ ಹೆಚ್ಚು ಹಣವನ್ನು ನೀಡಿದ್ದಾರೆ ಎಂಬುದು ಅವರ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಪ್ರಧಾನಿ ಮೋದಿಯನ್ನು ಹಲವು ಬಾರಿ ಟೀಕಿಸಬಹುದು, ಆದರೆ ಭಾರತದ ಮೇಲಿನ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ’ ಎಂದರು.

ಅದೇ ರೀತಿ, ಸೊರೊಸ್ ಅವರ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, ಪ್ರಧಾನಿ-ಸಂಬಂಧಿತ ಅದಾನಿ ಹಗರಣವು ಭಾರತದಲ್ಲಿ ಪ್ರಜಾಸತ್ತಾತ್ಮಕ ಪುನರುಜ್ಜೀವನವನ್ನು ಉಂಟುಮಾಡುತ್ತದೆಯೇ ಎಂಬುದು ಸಂಪೂರ್ಣವಾಗಿ ಕಾಂಗ್ರೆಸ್, ಪ್ರತಿಪಕ್ಷಗಳು ಮತ್ತು ನಮ್ಮ ಚುನಾವಣಾ ಪ್ರಕ್ರಿಯೆಯ ಮೇಲೆ ಅವಲಂಬಿತವಾಗಿದೆ. ಜಾರ್ಜ್ ಸೋರೋಸ್ ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಸೋರೋಸ್ ಅವರಂತಹವರು ನಮ್ಮ ಚುನಾವಣಾ ಫಲಿತಾಂಶಗಳನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂಬುದನ್ನೂ ನಮ್ಮ ನೆಹರೂವಿನ ಪರಂಪರೆ ಖಾತ್ರಿಪಡಿಸುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.