ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Srilanka Archives » Dynamic Leader
October 23, 2024
Home Posts tagged Srilanka
ವಿದೇಶ

ಕೊಲಂಬೊ: ಶ್ರೀಲಂಕಾದ 9ನೇ ಅಧ್ಯಕ್ಷರಾಗಿ ಅನುರ ಕುಮಾರ ದಿಸ್ಸನಾಯಕೆ (Anura Kumara Dissanayake) ಪ್ರಮಾಣ ವಚನ ಸ್ವೀಕರಿಸಿದರು. ಕೊಲಂಬೊದ ಅಧ್ಯಕ್ಷೀಯ ಸಚಿವಾಲಯದಲ್ಲಿ ನಡೆದ ಸಮಾರಂಭದಲ್ಲಿ ಶ್ರೀಲಂಕಾದ ಮುಖ್ಯ ನ್ಯಾಯಮೂರ್ತಿ ಜಯಂತ್ ಸೂರ್ಯ ಅವರು ಅನುರ ಕುಮಾರ ದಿಸ್ಸನಾಯಕೆ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ “ರಾಷ್ಟ್ರೀಯ ಜನ ಶಕ್ತಿ” ನಾಯಕ ಅನುರ ಕುಮಾರ ದಿಸ್ಸನಾಯಕೆ 55.89% ಮತಗಳೊಂದಿಗೆ ಗೆದ್ದು, “ಆಡಳಿತ ಬದಲಾವಣೆ ಮಾತ್ರವಲ್ಲ ಆರ್ಥಿಕ ಅಭಿವೃದ್ಧಿಯೂ ಅಗತ್ಯ” ಎಂಬ ಘೋಷಣೆಯೊಂದಿಗೆ ಅಧ್ಯಕ್ಷರಾಗಿದ್ದಾರೆ. ಅಧ್ಯಕ್ಷರಾದ ಅವರನ್ನು ಬೌದ್ಧ ಸನ್ಯಾಸಿಗಳು ಕೈಗೆ ದಾರ ಕಟ್ಟಿ ಅಭಿನಂದಿಸಿದರು. ನೂತನ ಅಧ್ಯಕ್ಷರ ಜೊತೆಗೆ 15 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ಬಳಿಕ ಜನರನ್ನುದ್ದೇಶಿಸಿ ಮಾತನಾಡಿದ ಅವರು, “ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಶ್ರೀಲಂಕಾವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ಅಗತ್ಯವಾಗಿದೆ. ಸಿಂಹಳೀಯರು, ತಮಿಳರು ಮತ್ತು ಮುಸ್ಲಿಮರ ಐಕ್ಯತೆಯು ಹೊಸ ಆರಂಭದ ಬುನಾದಿಯಾಗಿದೆ. ಐಕ್ಯತೆಯಿಂದ ಭವಿಷ್ಯವನ್ನು ರೂಪಿಸಿಕೊಳ್ಳೋಣ” ಎಂದು ದಿಸ್ಸನಾಯಕೆ ಹೇಳಿದರು.

ಏತನ್ಮಧ್ಯೆ, ಶ್ರೀಲಂಕಾದ ಅಧಿಕಾರವು ಮೊದಲ ಬಾರಿಗೆ ಕಮ್ಯುನಿಸ್ಟರ ಪಾಲಾಗಿರುವುದರಿಂದ, ಶ್ರೀಲಂಕಾ – ಭಾರತದ ಸಂಬಂಧ ಏನಾಗಬಹುದು? ಅನುರ ಕುಮಾರ ದಿಸ್ಸನಾಯಕೆ ಅವರು ಚೀನಾದ ಪರವಾದ ನಿಲುವು ತಳೆಯುತ್ತಾರೆಯೇ? ಚೀನಾ ಪ್ರಾಬಲ್ಯ ಹೊಂದಿರುವುದರಿಂದ ಭಾರತವನ್ನು ಬೆಂಬಲಿಸುವ ನಿಲುವು ತೆಗೆದುಕೊಳ್ಳುತ್ತಾರೆಯೇ? ಶ್ರೀಲಂಕಾದ ತಮಿಳರು ಮತ್ತು ಮುಸ್ಲಿಮರ ಜೀವನದಲ್ಲಿ ಪುನರುಜ್ಜೀವನ ಉಂಟಾಗಲಿದೆಯೇ? ಎಂಬ ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ.

ದೇಶ

ನವದೆಹಲಿ: ಎಲ್‌ಟಿಟಿಇ ಮೇಲಿನ ನಿಷೇಧವನ್ನು ಇನ್ನೂ 5 ವರ್ಷಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರ.

ಶ್ರೀಲಂಕಾದಲ್ಲಿ ಪ್ರತ್ಯೇಕ ದೇಶಕ್ಕಾಗಿ ಸಶಸ್ತ್ರ ಹೋರಾಟ ನಡೆಸುತ್ತಿದ್ದ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (LTTE), 1991ರಲ್ಲಿ  ನಮ್ಮ ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ತಮಿಳುನಾಡಿನ ಶ್ರೀಪೆರುಂಬುದೂರ್ ನಲ್ಲಿ ಹತ್ಯೆ ಮಾಡಿತ್ತು. ಆ ನಂತರ ನಮ್ಮ ದೇಶದಲ್ಲಿ ಎಲ್‌ಟಿಟಿಇ ಸಂಘಟನೆಯನ್ನು ನಿಷೇಧಿಸಲಾಯಿತು.

2009ರಲ್ಲಿ ಎಲ್‌ಟಿಟಿಇ ನಾಯಕ ಪ್ರಭಾಕರನ್ ಅವರು ಶ್ರೀಲಂಕಾ ಸೇನೆಯಿಂದ ಹತ್ಯೆಯಾದ ಬಳಿಕ, ಶ್ರೀಲಂಕಾದಲ್ಲಿ ಅವರ ಚಟುವಟಿಕೆಗಳು ಅಂತ್ಯಗೊಂಡವು. ಆದರೂ ಭಾರತದಲ್ಲಿ ಎಲ್‌ಟಿಟಿಇ ಮೇಲಿನ ನಿಷೇಧವು ಮುಂದುವರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಎಲ್‌ಟಿಟಿಇ ಮೇಲಿನ ನಿಷೇಧವನ್ನು ಇನ್ನೂ 5 ವರ್ಷಗಳ ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಪ್ರಕಟಣೆಯಲ್ಲಿ, ‘ವಿದೇಶದಲ್ಲಿ ನೆಲೆಸಿರುವ ಎಲ್‌ಟಿಟಿಇ ಬೆಂಬಲಿಗರು ಭಾರತದ ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ. ಅವರು ಭಾರತದ ಸಂವಿಧಾನದ ವಿರುದ್ಧ ದ್ವೇಷವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ನಿಷೇಧವನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯ

ಬೆಂಗಳೂರು: ಶತಮಾನದ ಶ್ರೇಷ್ಠ ಸುಳ್ಳುಗಾರ ಪ್ರಧಾನಿ ಮೋದಿಯವರ ಬಾಯಲಿ ಬರುವ ಸುಳ್ಳುಗಳು‌ ಒಂದೇ ಎರಡೇ.? ಸುಳ್ಳನ್ನೇ ಹಾಸು ಹೊದ್ದು‌ ಮಲಗಿರುವ ಮೋದಿಯವರು ‘ಕಚ್ಚತೀವು’ ದ್ವೀಪವನ್ನು ಕಾಂಗ್ರೆಸ್ ಶ್ರೀಲಂಕಾಕ್ಕೆ ಬಿಟ್ಟುಕೊಟ್ಟಿದೆ ಎಂಬ ಹಸಿ ಸುಳ್ಳು ಹೇಳಿ ನಗೆಪಾಟಲಿಗೀಡಾಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಪರ್ಯಾಸವೆಂದರೆ ಪ್ರಧಾನಿಯವರು ಕಚ್ಚತೀವು ದ್ವೀಪದ ಬಗ್ಗೆ ಸುಳ್ಳು ಹೇಳಿಕೊಂಡು ಅಲೆದಾಡುತ್ತಿದ್ದರೆ, ಅತ್ತ ಚೀನಾ ಅರುಣಾಚಲ ಪ್ರದೇಶದ 30 ಊರುಗಳಿಗೆ ತನ್ನ ಹೆಸರು ನಾಮಕರಣ ಮಾಡಿಕೊಂಡಿದೆ. ಈ ಮೂಲಕ ಭಾರತದ ಸಾರ್ವಭೌಮತ್ವವನ್ನೇ ಪ್ರಶ್ನಿಸುತ್ತಿದೆ. ಸುಳ್ಳಿನ ಸರದಾರರು ಈ ಬಗ್ಗೆ ಏನು ಹೇಳುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಚುನಾವಣೆಯ ಹೊತ್ತಿನಲ್ಲಿ ‘ಕಚ್ಚತೀವು’ ದ್ವೀಪದ ಪ್ರಸ್ತಾಪ ಮಾಡುತ್ತಿರುವ ಮೋದಿಯವರು, ಚೀನಾ ನಮ್ಮ ದೇಶದ ಭೂ ಭಾಗವನ್ನು ಅಕ್ರಮಿಸುತ್ತಿರುವ ಬಗ್ಗೆ ಎಂದಾದರೂ ಬಾಯಿ ಬಿಟ್ಟಿದಾರೆಯೇ.? ಕಳೆದ ಹತ್ತು‌ ವರ್ಷಗಳಿಂದ ಗಡಿ ವಿಚಾರದಲ್ಲಿ‌ ಚೀನಾ ಪದೇ ಪದೇ ಕ್ಯಾತೆ ತೆಗೆಯುತ್ತಿದೆ ಎಂದು ಹೇಳಿದ್ದಾರೆ.

ಆದರೆ ಚೀನಾದ ತಗಾದೆ ವಿರುದ್ಧ ಅಂಧಭಕ್ತರ ಪಾಲಿನ 56 ಇಂಚಿನ ಎದೆಯ ಶೂರ ಒಮ್ಮೆಯಾದರೂ ಮಾತನಾಡುವ ಧೈರ್ಯ ತೋರಿಸಿದ್ದಾರೆಯೇ? ಉತ್ತರ ಕುಮಾರನಂತೆ ವಿಪಕ್ಷಗಳ ಎದುರು ಪೌರುಷ ತೋರಿಸುವ ಮೋದಿಯವರು ಚೀನಾದ ವಿಚಾರದಲ್ಲಿ ‘ಡರ್‌ಪೋಕ್‌’ ಆಗುವುದ್ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಚೀನಾದ ವಿರುದ್ಧ ಪೌರುಷ ತೋರಿಸಲು‌ ಮೋದಿಯವರ 56 ಇಂಚಿನ ಎದೆಯಲ್ಲಿ ಧಮ್ ಇಲ್ಲವೆ? ಕೇಳಿದ್ದಾರೆ.

ಸಿನಿಮಾ

ಓಂ ರಾವತ್ ನಿರ್ದೇಶನದ ಆದಿಪುರುಷ ಸಿನಿಮಾ ರಾಮಾಯಣ ಕಥೆಯನ್ನಾಧರಿಸಿ ತೆರೆಕಂಡಿದೆ. ಇದರಲ್ಲಿ ರಾಮನಾಗಿ ಪ್ರಭಾಸ್, ರಾವಣನಾಗಿ ಸೈಫ್ ಅಲಿ ಖಾನ್ ಮತ್ತು ಸೀತೆಯಾಗಿ ಕೀರ್ತಿ ಸನನ್ ನಟಿಸಿದ್ದಾರೆ. ಅದ್ಧೂರಿ ಚಿತ್ರವನ್ನು ಡಿ ಸಿರೀಸ್ ಮತ್ತು ರೆಟ್ರೋ ಪೈಲ್ಸ್ ಜಂಟಿಯಾಗಿ ನಿರ್ಮಿಸಿವೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಇತರ ಭಾಷೆಗಳಲ್ಲಿ 3ಡಿ ತಂತ್ರಜ್ಞಾನದಲ್ಲಿ ಆದಿಪುರುಷ ಚಿತ್ರ ನಿನ್ನೆ (ಜೂನ್ 16) ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ.

ಭಾರೀ ನಿರೀಕ್ಷೆಗಳ ನಡುವೆ ತೆರೆಕಂಡಿರುವ ಆದಿಪುರುಷ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರಭಾಸ್ ಅಭಿಮಾನಿಗಳಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆಯಾದರೂ, ಚಿತ್ರವಾಗಿ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂಬ ನೆಗೆಟಿವ್ ವಿಮರ್ಶೆಗಳೂ ಬಂದಿವೆ.

ಸುಮಾರು ರೂ.500 ಕೋಟಿ ಬಜೆಟ್ ನಲ್ಲಿ ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದೊಂದಿಗೆ ತಯಾರಾಗಿರುವ ಚಿತ್ರದ ಅನಿಮೇಷನ್ ದೃಶ್ಯಗಳನ್ನು ನೆಟ್ಟಿಗರು ಟೀಕಿಸುತ್ತಿದ್ದಾರೆ. VFX ದೃಶ್ಯಗಳು ಇನ್ನೂ ಚೆನ್ನಾಗಿರಬಹುದಿತ್ತು ಎಂಬುದು ಹೆಚ್ಚಿನ ಅಭಿಮಾನಿಗಳ ಸಾಮಾನ್ಯ ಅಭಿಪ್ರಾಯವಾಗಿದೆ.

ಈ ಹಿನ್ನಲೆಯಲ್ಲಿ ಹಿಂದೂಸೇನಾ ಸಂಘಟನೆಯು ಆದಿಪುರುಷ ಚಿತ್ರದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ರಾಮಾಯಣ ಕಥೆಯಾಧಾರಿತ ಆದಿಪುರುಷ ಸಿನಿಮಾದಲ್ಲಿ ವಿವಾದಾತ್ಮಕ ದೃಶ್ಯಗಳಿದ್ದು, ಅದನ್ನು ತೆಗೆಯಬೇಕು ಎಂದು ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ರಾಮ, ರಾಮಾಯಣ, ಹಿಂದೂ ಸಂಸ್ಕೃತಿಯನ್ನು ಗೇಲಿ ಮಾಡಲಿಕ್ಕಾಗಿ ಆದಿಪುರುಷ ಸಿನಿಮಾ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಹಿಂದೆ, ಆದಿಪುರುಷ ಚಿತ್ರದಲ್ಲಿ, ಸೀತೆಯನ್ನು ಭಾರತದ ಮಗಳು ಎಂದು ಉಲ್ಲೇಖಿಸಿದ್ದಕ್ಕಾಗಿ ನೇಪಾಳದಲ್ಲಿ ತೀವ್ರ ಪ್ರತಿಭಟನೆಯನ್ನು ಹುಟ್ಟುಹಾಕಿತ್ತು. ರಾಮಾಯಣದ ಪ್ರಕಾರ ಸೀತೆ ನೇಪಾಳದಲ್ಲಿ ಜನಿಸಿದವಳು. ರಾಮ ಬಂದು ಸೀತೆಯನ್ನು ಮದುವೆಯಾಗುತ್ತಾರೆ.

ಇದಾದ ನಂತರ ನೇಪಾಳದ ಕಠ್ಮಂಡುವಿನ ಮೇಯರ್ ಬಲೇನ್ ಶಾ ಟ್ವೀಟ್ ಮಾಡಿ, “ಸೀತೆ ಭಾರತದ ಮಗಳು ಎಂಬ ವಿವಾದಾತ್ಮಕ ದೃಶ್ಯವನ್ನು ತೆಗೆದುಹಾಕದಿದ್ದರೆ ನೇಪಾಳದಲ್ಲಿ ಆದಿಪುರುಷ ಚಿತ್ರವನ್ನು ಬಿಡುಗಡೆ ಮಾಡುವುದಿಲ್ಲ” ಎಂದು ಹೇಳಿದ್ದಾರೆ. ಆ ನಂತರ ಆದಿಪುರುಷ ಚಿತ್ರತಂಡ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ಆ ಸಂಭಾಷಣೆಯನ್ನು ತೆಗೆದು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ದೇಶ ವಿದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ತಂಜಾವೂರು: ತಂಜೂರು ಮುಲ್ಲಿವಾಯ್ಕಾಲ್ ಸ್ಮಾರಕ ಭವನದಲ್ಲಿ ಇಂದು ವಿಶ್ವ ತಮಿಳರ ಒಕ್ಕೂಟದ ಅಧ್ಯಕ್ಷ ಪಳ ನೆಡುಮಾರನ್ ತುರ್ತು ಪತ್ರಿಕಾ ಘೋಷ್ಟಿ ನಡೆಸಿ, ಎಲ್‌ಟಿಟಿಇ ನಾಯಕ ಪ್ರಭಾಕರನ್ ಜೀವಂತವಾಗಿದ್ದಾರೆ ಎಂಬ ಸುದ್ಧಿಯನ್ನು ಕೊಟ್ಟು ಎಲ್ಲರನ್ನು ಆಶ್ಚರ್ಯ ಪಡೆವಂತೆ ಮಾಡಿದರು.

ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಎಲ್‌ಟಿಟಿಇ ನಾಯಕ ಪ್ರಭಾಕರನ್ ಜೀವಂತವಾಗಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ. ಅವರು ಶೀಘ್ರದಲ್ಲೇ ಹೊರಬರಲಿದ್ದಾರೆ ಎಂದು ನಾನು ಪ್ರಪಂಚದಾದ್ಯಂತ ಇರುವ ತಮಿಳರಿಗೆ ಇದರ ಮೂಲಕ ತಿಳಿಯಪಡಿಸಲು ಬಯಸುತ್ತೇನೆ’. ಎಂದು ವಿಶ್ವ ತಮಿಳರ ಒಕ್ಕೂಟದ ಅಧ್ಯಕ್ಷ ಪಳ ನೆಡುಮಾರನ್ ಘೋಷಣೆ ಮಾಡಿದರು.

‘ಎಲ್‌ಟಿಟಿಇ ನಾಯಕ ಪ್ರಭಾಕರನ್ ಜೀವಂತವಾಗಿದ್ದಾರೆ. ಪ್ರಭಾಕರನ್ ಆರೋಗ್ಯವಾಗಿರುವುದು ಶ್ರೀಲಂಕಾ (ಈಳಂ) ತಮಿಳರಿಗೆ ಆತ್ಮವಿಶ್ವಾಸವನ್ನು ನೀಡುತ್ತದೆ. ಪ್ರಭಾಕರನ್ ಬಗ್ಗೆ ಅಂದಿನ ರಾಜಪಕ್ಸೆ ಸರ್ಕಾರ ಹಾಗೂ ಇತರರಿಂದ ತಪ್ಪು ಮಾಹಿತಿಯನ್ನು ಹಬ್ಬಿಸಲಾಯಿತು. ಅವರು ಶೀಘ್ರದಲ್ಲೇ ಪ್ರತ್ಯೇಕ ತಮಿಳು ರಾಷ್ಟ್ರಕ್ಕಾದ ಸಮಗ್ರ ಯೋಜನೆಯನ್ನು ಘೋಷಿಸಲಿದ್ದಾರೆ. ಜಗತ್ತಿನಾದ್ಯಂತ ಇರುವ ತಮಿಳರು ಇದನ್ನು ಬೆಂಬಲಿಸಬೇಕು.

ಪ್ರಭಾಕರನ್ ಕುಟುಂಬದೊಂದಿಗೆ ನಾನು ಸಂಪರ್ಕದಲ್ಲಿ ದ್ದೇನೆ. ಅವರ ಅನುಮತಿಯ ಮೇರೆಗೆ, ಅವರ ಮೂಲಕ ತಿಳಿದ ವಿಷಯಗಳನ್ನು ಇಲ್ಲಿ ತಿಳಿಸುತ್ತಿದ್ದೇನೆ.

ಅವರು ಎಲ್ಲಿದ್ದಾರೆ, ಯಾವಾಗ ಬರುತ್ತಾರೆ ಎಂಬ ಕುತೂಹಲ ನಿಮಗಷ್ಟೇ ಅಲ್ಲ, ನನಗೂ ಮತ್ತು ಪ್ರಪಂಚದಾದ್ಯಂತ ಇರುವ ತಮಿಳರಿಗೂ ಇದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ ಶೀಘ್ರದಲ್ಲೇ ಅವರು ಹೊರಹೊಮ್ಮುತ್ತಾರೆ. ಪ್ರಭಾಕರನ್ ಪತ್ನಿ ಹಾಗೂ ಪುತ್ರಿ ಕೂಡ ಸುರಕ್ಷಿತವಾಗಿದ್ದಾರೆ. ಸರಿಯಾದ ಸಮಯಕ್ಕೆ ಜನರ ಮುಂದೆ ಬರುತ್ತಾರೆ. ಪ್ರಭಾಕರನ್ ಎಲ್ಲಿದ್ದಾರೆ ಎಂಬುದನ್ನು ಸದ್ಯಕ್ಕೆ ಪ್ರಕಟಿಸಲು ಸಾಧ್ಯವಿಲ್ಲ. ತಮಿಳುನಾಡು ಸರ್ಕಾರ ಮತ್ತು ಜನರು ಪ್ರಭಾಕರನ್ ಅವರಿಗೆ ಬೆಂಬಲವಾಗಿರಬೇಕು. ಶ್ರೀಲಂಕಾದಲ್ಲಿ ರಾಜಪಕ್ಸೆ ಆಡಳಿತ ಅಂತ್ಯಗೊಂಡಿರುವುದರಿಂದ ನಾವು ಈ ಘೋಷಣೆ ಮಾಡುತ್ತಿದ್ದೇವೆ.

ರಾಜಪಕ್ಸೆಯನ್ನು ಅಧಿಕಾರಕ್ಕೆ ತಂದ ಅದೇ ಸಿಂಹಳೀಯರು ಈಗ ಅವರನ್ನು ದೇಶದಿಂದ ಓಡಿಸುತ್ತಿದ್ದಾರೆ. ಇದಕ್ಕಿಂತ ಉತ್ತಮ ವಾತಾಕಾರಣ ಬೇರೊಂದು ಇರಲು ಸಾದ್ಯವಿಲ್ಲ. ಚೀನಾ ಶ್ರೀಲಂಕಾದಲ್ಲಿ ಆಳವಾಗಿ ನೆಲೆಯೂರುವ ಮೂಲಕ ಭಾರತದ ವಿರುದ್ಧ ಕೆಲಸ ಮಾಡುತ್ತಿದೆ ಇದನ್ನು ತಡೆಯಬೇಕಾಗಿದೆ.’ ಅದಕ್ಕೆ ಶ್ರೀಲಂಕಾದಲ್ಲಿ ಪ್ರತ್ಯೇಕವಾದ ತಮಿಳು ರಾಷ್ಟ್ರ ರಚನೆ ಆಗಬೇಕು. ಇಂದಿನ ಸನ್ನಿವೇಶದಲ್ಲಿ ಇದು ಅನಿವಾರ್ಯವೂ ಆಗಿದೆ.’ ಎಂದರು.  

ವಿದೇಶ

ಶ್ರೀಲಂಕಾ: ಶ್ರೀಲಂಕಾ ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಮತ್ತು ಇತರರಿಗೆ ಈಸ್ಟರ್ ಭಾನುವಾರದ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶಿಸಿದೆ.

ಶ್ರೀಲಂಕಾದಲ್ಲಿ ಏಪ್ರಿಲ್ 21, 2019 ರಂದು ನಡೆದ ಭಯೋತ್ಪಾದಕ ಬಾಂಬ್ ದಾಳಿಯಲ್ಲಿ 269 ಜನರು ಸಾವನ್ನಪ್ಪಿದರು ಮತ್ತು 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

2019ರ ಏಪ್ರಿಲ್ 21ರಂದು ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಸಾಕಷ್ಟು ಗುಪ್ತಚರ ಮಾಹಿತಿ ಲಭ್ಯವಿದ್ದರೂ ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಮೂಲಭೂತ ಹಕ್ಕುಗಳ ಅರ್ಜಿಗಳ ತೀರ್ಪು ಇಂದು ಪ್ರಕಟವಾಯಿತು.

ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಹಾಗೂ ಇತರರ ವಿರುದ್ಧ ಸಲ್ಲಿಕೆಯಾಗಿದ್ದ ಮೂಲಭೂತ ಹಕ್ಕುಗಳ ಅರ್ಜಿಗಳ ತೀರ್ಪನ್ನು ಇಂದು ಪ್ರಕಟಿಸುವುದಾಗಿ ಹೈಕೋರ್ಟ್ ಇದೇ ಜನವರಿ 5ರಂದು ಪ್ರಕಟಿಸಿತ್ತು. ಅದರಂತೆ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಪ್ಳಗೊಂಡ ವಿಭಾಗೀಯ ನ್ಯಾಯಪೀಠವು ಇಂದು ತೀರ್ಪು ಪ್ರಕಟಿಸಿತು.

ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ಮಾಜಿ ರಕ್ಷಣಾ ಕಾರ್ಯದರ್ಶಿ ಹೇಮಸಿರಿ ಫರ್ನಾಂಡೋ, ಮಾಜಿ ಪೊಲೀಸ್ ಮಹಾನಿರೀಕ್ಷಕ ಪೂಜಿತ್ ಜಯಸುಂದರ, ರಾಷ್ಟ್ರೀಯ ಗುಪ್ತಚರ ವಿಭಾಗದ ಮಾಜಿ ನಿರ್ದೇಶಕ ಸಿಸಿರ ಮೆಂಡಿಸ್ ಮತ್ತು ರಾಜ್ಯ ಗುಪ್ತಚರ ವಿಭಾಗದ ಮಾಜಿ ನಿರ್ದೇಶಕ ನಿಲಂತ ಜಯವರ್ಧನ ಅವರು ಈಸ್ಟರ್ ಭಾನುವಾರದ ದಾಳಿಯನ್ನು ತಡೆಯಲು ವಿಫಲರಾಗಿ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದ್ದಾರೆ ಎಂದು ತೀರ್ಪು ನೀಡಲಾಗಿದೆ. ಅಲ್ಲದೆ ಸಂತ್ರಸ್ತರಿಗೆ ಪರಿಹಾರವನ್ನು ನೀಡುವಂತೆಯೂ ನ್ಯಾಯಾಲಯ ತಮ್ಮ ಆದೇಶದಲ್ಲಿ ಸೂಚಿಸಿದೆ.

ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರಿಗೆ 100 ಮಿಲಿಯನ್, ಮಾಜಿ ರಕ್ಷಣಾ ಕಾರ್ಯದರ್ಶಿ ಹೇಮಸಿರಿ ಫರ್ನಾಂಡೋಗೆ 50 ಮಿಲಿಯನ್, ಮಾಜಿ ಪೊಲೀಸ್ ಮಹಾನಿರೀಕ್ಷಕ ಪೂಜಿತ್ ಜಯಸುಂದರ ಮತ್ತು ರಾಷ್ಟ್ರೀಯ ಗುಪ್ತಚರ ಸೇವೆಯ ಮಾಜಿ ಮುಖ್ಯಸ್ಥ ನೀಲಂತ ಜಯವರ್ಧನ ಅವರಿಗೆ 75 ಮಿಲಿಯನ್ ರೂಪಾಯಿಗಳನ್ನು ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಸಿಸಿರ ಮೆಂಡಿಸ್ ಸಂತ್ರಸ್ತರಿಗೆ 10 ಮಿಲಿಯನ್ ರೂಪಾಯಿ ಪರಿಹಾರ ನೀಡಬೇಕೆಂದು ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

ವಿದೇಶ

ಡಿ.ಸಿ.ಪ್ರಕಾಶ್, ಸಂಪಾದಕರು

ಎಲ್‌ಟಿಟಿಇ ವಿರುದ್ಧ ಶ್ರೀಲಂಕಾ ಸರ್ಕಾರ ನಡೆಸಿದ ಯುದ್ಧದ ಸಂದರ್ಭದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮಹಿಂದ ರಾಜಪಕ್ಸೆ ಸೇರಿದಂತೆ ನಾಲ್ವರು ಕೆನಡಾ ಪ್ರವೇಶಿಸುವುದನ್ನು ಕೆನಡಾ ಸರ್ಕಾರ ನಿಷೇಧಿಸಿದೆ. 1983 ರಿಂದ 2009 ರವರೆಗೆ ಎಲ್‌ಟಿಟಿಇ ಮತ್ತು ಶ್ರೀಲಂಕಾ ಸರ್ಕಾರದ ನಡುವೆ ಸಶಸ್ತ್ರ ಯುದ್ಧ ನಡೆದಿತ್ತು. 2009ರಲ್ಲಿ ಶ್ರೀಲಂಕಾ ಸರ್ಕಾರವು ಎಲ್‌ಟಿಟಿಇ ನಾಯಕ ಪ್ರಭಾಕರನ್ ಯುದ್ಧದ ಉತ್ತುಂಗದ ಸಮಯದಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟರು ಎಂದು ಘೋಷಿಸಿತು.

‘ಯುದ್ಧದ ಸಮಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ಮಹಿಂದ ರಾಜಪಕ್ಸೆ ಭಾಗಿಯಾಗಿದ್ದಾರೆ ಎಂದು ಅನೇಕ ಮಾನವ ಹಕ್ಕುಗಳ ಆಯೋಗಗಳು ಶ್ರೀಲಂಕಾ ಸರ್ಕಾರವನ್ನು ಆರೋಪಿಸಿತ್ತು. ಈ ಹಿನ್ನಲೆಯಲ್ಲಿ ಕೆನಡಾದ ವಿಶೇಷ ಆರ್ಥಿಕ ಕ್ರಮಗಳ ಕಾಯ್ದೆಯಡಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ಭಾಗಿಯಾಗಿರುವ ಮಹಿಂದ ರಾಜಪಕ್ಸೆ ಸೇರಿದಂತೆ ನಾಲ್ವರ ಪ್ರವೇಶಕ್ಕೆ ಕೆನಡಾ ಸರ್ಕಾರ ನಿರ್ಬಂಧಗಳನ್ನು ವಿಧಿಸಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಮೆಲಾನಿ ಜೋಲಿ ನಿನ್ನೆ ಘೋಷಿಸಿದ್ದಾರೆ.

Melanie Joly, Minister of Foreign Affairs, Canada

‘ಮತ್ತು ವಿಶೇಷ ಆರ್ಥಿಕ ಕ್ರಮಗಳ ಕಾಯಿದೆಯಡಿ, ಅವರ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು. ಮತ್ತು ಪೌರತ್ವ ಹಾಗೂ ನಿರಾಶ್ರಿತರ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಕೆನಡಾಕ್ಕೆ ಪ್ರವೇಶಿಸದಂತೆ ಅವರನ್ನು ನಿರ್ಬಂಧಿಸಬಹುದು’ ಎಂದು ಮೆಲಾನಿ ಜೋಲಿ ಹೇಳಿದರು.

ಶ್ರೀಲಂಕಾದಲ್ಲಿ ಪ್ರಸ್ತುತ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಜನರು ನರಳುತ್ತಿರುವುದನ್ನು ಮತ್ತು ಆಡಳಿತಗಾರರು ಪಲಾಯನ ಮಾಡುತ್ತಿರುವುದನ್ನು ಈ ಜಗತ್ತೆ ವಿಶ್ಮಯದಿಂದ ನೋಡಿದೆ. ಈ ಪರಿಸ್ಥಿತಿಯಲ್ಲಿ ಕೆನಡಾ ಸರ್ಕಾರದ ಈ ಘೋಷಣೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ.

‘ಕೆನಡಾ ಸರ್ಕಾರವು ಶ್ರೀಲಂಕಾವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಕಳೆದ ನಾಲ್ಕು ದಶಕಗಳಿಂದಲೂ ಶ್ರೀಲಂಕಾದ ಜನರು ಸಶಸ್ತ್ರ ಸಂಘರ್ಷಗಳು, ಆರ್ಥಿಕ ಮತ್ತು ರಾಜಕೀಯ ಅಸ್ಥಿರತೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯಿಂದಾಗಿ ಅಪಾರವಾಗಿ ಬಳಲುತ್ತಿದ್ದಾರೆ. ಶ್ರೀಲಂಕಾದಲ್ಲಿ ಶಾಂತಿ, ಸೌಹಾರ್ದತೆ ಮತ್ತು ನ್ಯಾಯವನ್ನು ಕಾಪಾಡಲು ಕೆನಡಾ ಬದ್ಧವಾಗಿದೆ’.

‘ಅಂತರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸುವವರ ವಿರುದ್ಧ ಅಂತಾರಾಷ್ಟ್ರೀಯ ಶಿಕ್ಷೆಯನ್ನು ತರಲು ಕೆನಡಾ ಇಂದು ನಿರ್ಣಾಯಕ ಕ್ರಮ ಕೈಗೊಂಡಿದೆ. ದೇಶೀಯ ಬಿಕ್ಕಟ್ಟನ್ನು ಪರಿಹರಿಸಲು ಅಂತಾರಾಷ್ಟ್ರೀಯ ನೆರವಿನ ಮೂಲಕ ಶಾಂತಿ ಮತ್ತು ಅಭಿವೃದ್ಧಿಗೆ ಶ್ರೀಲಂಕಾದ ಮಾರ್ಗವನ್ನು ಬೆಂಬಲಿಸಲು ಕೆನಡಾ ಸಿದ್ಧವಾಗಿದೆ’. ಎಂದು ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಹೇಳಿದ್ದಾರೆ.