ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Terror Archives » Dynamic Leader
October 23, 2024
Home Posts tagged Terror
ಸಿನಿಮಾ

ವರದಿ: ಅರುಣ್ ಜಿ.,

ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ ನಿರ್ದೇಶಕ – ನಿರ್ಮಾಪಕ ಆರ್.ಚಂದ್ರು

ನಟ ಆದಿತ್ಯ ಅಭಿನಯದ ‘ಟೆರರ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ನಾಯಕ ಆದಿತ್ಯ ಅವರ ಹುಟ್ಟುಹಬ್ಬದ ಸಲುವಾಗಿ ಚಿತ್ರತಂಡ ವಿಶೇಷ ಟೀಸರ್ ಬಿಡುಗಡೆ ಮಾಡಿದೆ‌. ನಿರ್ದೇಶಕ – ನಿರ್ಮಾಪಕ ಆರ್.ಚಂದ್ರು ‘ಟೆರರ್’ ಚಿತ್ರದ ಟೀಸರ್ ಬಿಡುಗಡೆಗೊಳಿಸಿದರು. 

“ಟೆರರ್’ ಸಿನಿಮಾದ ಹೆಸರಿನಲ್ಲೆ ಒಂದು ಫೈಯರ್ ಇದೆ. ಟೀಸರಿನಲ್ಲಿ ಕಾಣುವ ಪ್ರತಿಯೊಂದು ಸನ್ನಿವೇಶಗಳು ಗಮನ ಸೆಳೆಯುತ್ತದೆ. ಟೀಸರ್‌ನಲ್ಲಿಯೇ ‘ಟೆರರ್’ ದೊಡ್ಡ ಹಿಟ್ ಆಗುವ ಲಕ್ಷಣಗಳು ಕಾಣುತ್ತಿದೆ” ಎಂದು ಆರ್.ಚಂದ್ರು ಹಾರೈಸಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ಮಾಪಕರಾದ ದೇವೇಂದ್ರ ರೆಡ್ಡಿ,  ರಮೇಶ್ ರೆಡ್ಡಿ, ಪ್ರಕಾಶ್, ಶ್ರೀನಗರ ಕಿಟ್ಟಿ ಮುಂತಾದವರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಆದಿತ್ಯ ಅವರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಕೋರಿದರು.

“ಈ ಕಥೆ ಕೇಳಿದ ಕೂಡಲೇ ನಿರ್ಮಾಪಕ ಸಿಲ್ಕ್ ಮಂಜು, ಈ ಸಿನಿಮಾ ಮಾಡಲು ಒಪ್ಪಿಕೊಂಡರು. ಅವರ ಸಹಕಾರದಿಂದಲೇ ಈ ಸಿನಿಮಾ ಮಾಡಲು ಸಾಧ್ಯವಾಯಿತು.  ಸಿನಿಮಾದಲ್ಲಿ ಆದಿತ್ಯ ನಾಯಕರಾಗಿ ನಟಿಸುತ್ತಿದ್ದಾರೆ. ಶ್ರೀನಗರ ಕಿಟ್ಟಿ ಕೂಡ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಕೋಟೆ ಪ್ರಭಾಕರ್, ಧರ್ಮ ಮೊದಲಾದವರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ 30% ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ” ಎಂದು ನಿರ್ದೇಶಕ ರಂಜನ್ ಶಿವರಾಮ್ ಗೌಡ ಹೇಳಿದರು.

“ಕನ್ನಡ ಚಿತ್ರರಂಗಕ್ಕೆ “A” ಎಂಬ ಉತ್ತಮ ಚಿತ್ರಕೊಟ್ಟ ನಿರ್ಮಾಪಕ ಸಿಲ್ಕ್ ಮಂಜು ಅವರ ನಿರ್ಮಾಣದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರಂಜನ್ ಅವರು ಹೇಳಿದ ಕಥೆ ಇಷ್ಟವಾಯಿತು. ನನ್ನ ಹುಟ್ಟುಹಬ್ಬಕ್ಕಾಗಿ ವಿಶೇಷ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡಕ್ಕೆ ಇಲ್ಲಿ ಆಗಮಿಸಿರುವ ಪ್ರತಿಯೊಬ್ಬರಿಗೂ ನನ್ನ ಧನ್ಯವಾದ” ಎಂದರು ನಾಯಕ ಆದಿತ್ಯ. 

“ಎ ಸಿನಿಮಾ ಬಿಡುಗಡೆಯಾಗಿ 25 ವರ್ಷ ಆದ ಮೇಲೆ ಮತ್ತೊಂದು ನಿರೀಕ್ಷಿತ ಸಿನಿಮಾ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ” ಎಂದರು ನಿರ್ಮಾಪಕ ಸಿಲ್ಕ್ ಮಂಜು.