ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Vatal Nagaraj Archives » Dynamic Leader
October 23, 2024
Home Posts tagged Vatal Nagaraj
ಬೆಂಗಳೂರು

ಬೆಂಗಳೂರು: ಬೆಂಗಳೂರು ಬಂದ್ ವೇಳೆಯಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ವಹಿವಾಟುಗಳಿಗೆ ಯಾರಿಂದಲೂ ತೊಂದರೆಯಾಗಿಲ್ಲ. ಒಟ್ಟು 771 ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಬೆಂಗಳೂರು ನಗರಾದ್ಯಂತ ಈ ದಿನ (ಸೆ.26) ಕಾವೇರಿ ನದಿ ನೀರಿನ ಹಂಚಿಕೆ ವಿಚಾರವಾಗಿ ಕೆಲವು ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದವು. ಈ ಹಿನ್ನಲೆಯಲ್ಲಿ, ನಗರಾದ್ಯಂತ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಡಲಾಗಿತ್ತು. ಎಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆದಿರುವುದಿಲ್ಲ. ವಾಹನ ಸಂಚಾರ ಮತ್ತು ಸಾರ್ವಜನಿಕ ವಹಿವಾಟುಗಳಿಗೆ ಯಾರಿಂದಲೂ ದಕ್ಕೆ ಆಗದಂತೆ ನೋಡಿಕೊಳ್ಳಲಾಗಿತ್ತು.

ಇದನ್ನೂ ಓದಿ: ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು! – ಸಿದ್ದರಾಮಯ್ಯ

ಬಂದ್ ಅಂಗವಾಗಿ ಕೆಲವು ಸಂಘಟನೆಗಳು ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಮತ್ತು ಮೆರೆವಣಿಗೆ ಮಾಡಲು ಯತ್ನಿಸಿದ್ದು, ಅವರನ್ನು ಪೊಲೀಸರು ಮುಂಜಾಗ್ರತ ಕ್ರಮವಾಗಿ ಬಂಧಿಸಿ, ನಂತರ ಬಿಡುಗಡೆ ಮಾಡಿರುತ್ತಾರೆ. ಈ ರೀತಿ ಒಟ್ಟು 771 ಪ್ರತಿಭಟನಾಕಾರರನ್ನು ಬಂಧಿಸಲಾಗಿರುತ್ತದೆ. ಆಟೋರಿಕ್ಷ ಸಂಚಾರ ಸೇರಿದಂತೆ ಸಾರಿಗೆ ವ್ಯವಸ್ಥೆ ಸಾಮಾನ್ಯವಾಗಿದ್ದು, ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್‌ಗಳು ಸಾಮಾನ್ಯವಾಗಿ ತೆರೆದಿದ್ದವು.

ಇದನ್ನೂ ಓದಿ: ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನ: ಹೆಚ್.ಡಿ.ಕುಮಾರಸ್ವಾಮಿ

ಇದೇ ಅಂಗವಾಗಿ ಸುಮಾರು ಒಂದು ಸಾವಿರ ಜನರು ಪೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡು, ಈ ಸಮಯದಲ್ಲಿ ವಿವಿಧ ಸಂಘಟನೆ ಮುಖಂಡರು ಸರ್ಕಾರದ ದೋರೆಣೆಯ ವಿರುದ್ಧ ಪ್ರತಿಭಟಿಸಿರುತ್ತಾರೆ. ನಂತರ ರಾಜ್ಯದ ಮಂತ್ರಿಗಳಾದ ಆರ್.ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿ ತೆರಳಿರುತ್ತಾರೆ. ಒಟ್ಟಾರೆ, ಜನ-ಸಾಮಾನ್ಯರಿಗೆ ಯಾವುದೇ ತೊಂದರೆ ಆಗದೇ ಬಂದ್ ಶಾಂತಿಯುತವಾಗಿ ಮುಕ್ತಾಯಗೊಂಡಿರುತ್ತದೆ” ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ ನಾನು ನಿಮಗೆ ನೀಡಿದ ಉಡುಗರೆ: ಪ್ರಧಾನಿ ಮೋದಿ

ರಾಜ್ಯ

ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಜುಲೈ 14, 2023 ರಂದು ಭಾರತದ ಆಂಧ್ರಪ್ರದೇಶದ ಶ್ರೀಹರಿಕೋಟಾ ವ್ಯಾಪ್ತಿಯಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡು ಆಗಸ್ಟ್ 23, 2023 ರಂದು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಬಳಿ ಯಶಸ್ವಿಯಾಗಿ ಇಳಿಯಿತು.

ಚಂದ್ರಯಾನ-3 ಯೋಜನೆಯಲ್ಲಿ ಪಾಲ್ಗೊಂಡಿದ್ದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಮೊನ್ನೆ ಪ್ರಧಾನಿ ನರೇಂದ್ರ ಮೊದಿಯವರು ಗ್ರೀಸ್ ದೇಶದಿಂದ ನೇರವಾಗಿ ಬೆಂಗಳೂರಿಗೆ ಬಂದಿದ್ದರು. ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಿಗಳು, “ಆಗಸ್ಟ್‌ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು” ಎಂದು ಘೋಷಿಸಿದರು. ಮತ್ತು ಪ್ರಗ್ಯಾನ್ ಇಳಿದ ಸ್ಥಳವನ್ನು “ಶಿವಶಕ್ತಿ ಪಾಯಿಂಟ್” ಎಂದು ಕರೆಯಲಾಗುವುದು ಎಂದೂ ಘೋಶಿಸಿದರು.

ಈ ಹಿನ್ನಲೆಯಲ್ಲಿ ಕನ್ನಡ ಚಳವಳಿ ವಾಟಾಲ್ ಪಕ್ಷದ ಅಧ್ಯಕ್ಷ ವಾಟಾಲ್ ನಾಗರಾಜ್ ಅವರು, ‘ಕನ್ನಡ ಚಂದ್ರಯಾನ-3’ ಎಂದು ಮರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ನೆನ್ನೆ ಮಧ್ಯಾಹ್ನ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಮಲಗಿ ಸತ್ಯಾಗ್ರಹ ನಡೆಸಿದರು.

“ಕರ್ನಾಟಕ, ಕನ್ನಡ, ಕನ್ನಡದ ನೆಲ, ಕನ್ನಡದ ಶಕ್ತಿ ಇವುಗಳಲ್ಲಿ ಚಂದ್ರಯಾನ-3ರಲ್ಲಿ ಕನ್ನಡ ಭಾಷೆ ಬರಲಿಲ್ಲ. ಎಲ್ಲಾದರೂ ಒಂದು ಕಡೆ ಕನ್ನಡ ಪದ ಬರಬೇಕಾಗಿತ್ತು. ಕನ್ನಡದ ಹೆಸರು ಇಟ್ಟಿದ್ದರೆ ಇಡೀ ಭಾರತಕ್ಕೆ ಗೌರವ ಬರುತ್ತಿತ್ತು. ಕರ್ನಾಟಕ ‘ಭಾರತ ಜನನಿಯ ತನುಜಾತೆ’ ಸಂಸ್ಕೃತ ಸ್ಲೋಕ ಹೇಳಿ ಶಿವಶಕ್ತಿ ಹೆಸರನಿಟ್ಟ ಪ್ರಧಾನಿಯವರು ಕನ್ನಡ ಶಕ್ತಿ, ಕನ್ನಡ ನಾಡು, ಕನ್ನಡ ಭೂಮಿ, ಜ್ಞಾಪಕಕ್ಕೆ ಬರಲಿಲ್ಲ.

ಇಸ್ರೋ ಇರುವುದು ಕನ್ನಡ ನಾಡಿನಲ್ಲಿ; ಕನ್ನಡ ಭೂಮಿಯಲ್ಲಿ. ಶಿವಶಕ್ತಿ ಇಟ್ಟಿದ್ದೂ ಆಯಿತು. ತಿರಂಗ ಇಟ್ಟಿದ್ದೂ ಆಯಿತು. “ಕನ್ನಡ ಚಂದ್ರಯಾನ-3” ಎಂದು ಹೆಸರಿಡಬೇಕಾಗಿತ್ತು. ಚಂದ್ರಯಾನ ಇಸ್ರೋ ಪ್ರತಿಷ್ಠೆಯ ಹೆಗ್ಗಳಿಕೆ. ಪ್ರಧಾನ ಮಂತ್ರಿಯವರು ಬಂದಾಗಲೆಲ್ಲಾ ತಪ್ಪು ತಪ್ಪಾದರೂ ಕನ್ನಡದಲ್ಲಿ ಮಾತನಾಡುತ್ತಿದ್ದರು. ಈ ದಿನ ಅವರಿಗೆ ಕನ್ನಡ ಕಾಣಲಿಲ್ಲ. ಕರ್ನಾಟಕವೂ ಕಾಣಲಿಲ್ಲ. ಇಸ್ರೋ ಇರುವುದು ಕರ್ನಾಟಕದಲ್ಲಿ ಎಂದು ಅವರು ಭಾವಿಸಲಿಲ್ಲ.

ರಾಷ್ಟ್ರಕವಿ ಕುವೆಂಪುರವರು ಕರ್ನಾಟಕವನ್ನು ಕರ್ನಾಟಕದ ಮಾತೆ ಎಂದು ಕರೆದಿದ್ದಾರೆ. ಕರ್ನಾಟಕದ ಜನತೆಗೆ ಗೌರವ ಕೊಟ್ಟು ಚಂದ್ರಯಾನಕ್ಕೆ ಕನ್ನಡದ ಹೆಸರನ್ನು ನಾಮಕರಣ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.