ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Wayanad By Election Archives » Dynamic Leader
October 23, 2024
Home Posts tagged Wayanad By Election
ರಾಜಕೀಯ

ಡಿ.ಸಿ.ಪ್ರಕಾಶ್ 

ದೇಶಾದ್ಯಂತ 7 ಹಂತಗಳಲ್ಲಿ ನಡೆದ 18ನೇ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಏಕ ಬಹುಮತದೊಂದಿಗೆ ಸರ್ಕಾರ ರಚಿಸುವ ಶಕ್ತಿ ಕಂಡುಬಂದಿಲ್ಲ. ಆದರೂ ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಸೇರಿ ಸತತ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದೆ.ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ, ಕೇರಳದ ವಯನಾಡು ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಿದ್ದರು. ಮತದಾನ ಮುಗಿದ ನಂತರ ಅವರು ಕಾಂಗ್ರೆಸ್ ಭದ್ರಕೋಟೆಯಾದ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲೂ ನಾಮಪತ್ರ ಸಲ್ಲಿಸಿದರು.

ಇದಾದ ಬಳಿಕ, ನಡೆದ ಮತ ಎಣಿಕೆ ವೇಳೆ ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಗೆಲುವು ಸಾಧಿಸಿ ಅಚ್ಚರಿ ಮೂಡಿಸಿದರು. ವಯನಾಡಿನಲ್ಲಿ ರಾಹುಲ್ ಗಾಂಧಿ 6,47,445 ಮತಗಳನ್ನು ಪಡೆದು ಆನಿ ರಾಜಾ ಅವರನ್ನು 3,64,422 ಮತಗಳ ಅಂತರದಿಂದ ಸೋಲಿಸಿದರು. ಅದೇ ರೀತಿ ಉತ್ತರಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ 6,87,649 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿಯನ್ನು 3,90,030 ಮತಗಳ ಅಂತರದಿಂದ ಸೋಲಿಸಿದ್ದು ಗಮನಾರ್ಹ.

ಈ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿ ಸ್ಪರ್ದಿಸಿ ಗೆದ್ದ ಎರಡು ಕ್ಷೇತ್ರಗಳ ಪೈಕಿ, ಒಂದರಲ್ಲಿ ರಾಜೀನಾಮೆ ನೀಡಬೇಕಾಗಿದೆ. ಅಂದರೆ, 2 ಕ್ಷೇತ್ರಗಳಲ್ಲಿ ಸ್ಪರ್ದಿಸಿ ಗೆಲುವು ಸಾದಿಸಿದ ಒಬ್ಬ ಅಭ್ಯರ್ಥಿ, 14 ದಿನಗಳೊಳಗೆ ಯಾವುದಾದರೊಂದು ಕಡೆ ಸಂಸದ ಅಥವಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬುದು ನಿಯಮ. ಇದನ್ನು ಆಧರಿಸಿ, ಇಂದು ರಾಹುಲ್ ಗಾಂಧಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಅಲ್ಲದೇ ಆ ಕ್ಷೇತ್ರದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ಸಹೋದರಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪರ್ದಿಸಲಿದ್ದಾರೆ ಎಂದೂ ಅವರು ಹೇಳಿದ್ದಾರೆ.

2019ರಲ್ಲಿ ವಯನಾಡು ಕ್ಷೇತ್ರದಿಂದ ಆಯ್ಕೆಯಾದ ರಾಹುಲ್ ಗಾಂಧಿ ಅದೇ ವರ್ಷ ಕಾಂಗ್ರೆಸ್ ಭದ್ರಕೋಟೆಯಾದ ಅಮೇಥಿಯಲ್ಲೂ ಸ್ಪರ್ದೆಗಿಳಿದರು. ಆದರೆ, ಅಲ್ಲಿ ಸ್ಮೃತಿ ಇರಾನಿ ಎದುರು ಸೋತರು. ತರುವಾಯ, ಅವರು ವಯನಾಡ್ ಕ್ಷೇತ್ರದ ಸಂಸದರಾಗಿ ಮುಂದುವರೆದರು. ಈ ಬಾರಿಯೂ ವಯನಾಡ್‌ನಲ್ಲಿ ಸ್ಪರ್ದೆಗಿಳಿದ ಅವರು ಅಮೇಥಿಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್‌ನ ಹಿರಿಯ ನಾಯಕರ ಒತ್ತಾಯದ ಹೊರತಾಗಿಯೂ ಅವರು ಸ್ಪರ್ಧಿಸಲಿಲ್ಲ. ಏತನ್ಮಧ್ಯೆ, ಕಾಂಗ್ರೆಸ್ ಭದ್ರಕೋಟೆಯಾದ ರಾಯ್ ಬರೇಲಿಯ ಸಂಸದೆ ಸೋನಿಯಾ ಗಾಂಧಿ, ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಆ ಕ್ಷೇತ್ರದಲ್ಲಿ ರಾಹುಲ್ ಅವರನ್ನು ಕಣಕ್ಕಿಳಿಸಲಾಯಿತು. ಈಗ ಅವರು ರಾಯ್ ಬರೇಲಿಯ ಸಂಸದರಾಗಿ ಆಯ್ಕೆಯಾಗಿದ್ದಾರೆ.

ರಾಜಕೀಯಕ್ಕೆ ಬರಲು ನನಗೆ ಯಾವುದೇ ಹಿಂಜರಿಕೆ ಇಲ್ಲ – ಪ್ರಿಯಾಂಕಾ ಗಾಂಧಿ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ವಯನಾಡಿನ ಜನತೆಗೆ ನನ್ನ ಧನ್ಯವಾದಗಳು; ವಯನಾಡಿಗೆ ಭೇಟಿ ನೀಡುವುದನ್ನು ಮುಂದುವರಿಸಲಾಗುವುದು. ಕಳೆದ 5 ವರ್ಷಗಳಿಂದ ವಯನಾಡಿನ ಜನರು ನನಗೆ ನೀಡಿದ ಬೆಂಬಲ ಮತ್ತು ಪ್ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ. ನಾನು ಯಾವಾಗಲೂ ವಯನಾಡಿನ ಜನರ ಪರವಾಗಿ ನಿಲ್ಲುತ್ತೇನೆ. ಪ್ರಿಯಾಂಕಾ ಗಾಂಧಿ ಖಂಡಿತಾ ಇಲ್ಲಿ ಗೆಲ್ಲುತ್ತಾರೆ. ನಾನು ಮತ್ತು ನನ್ನ ಸಹೋದರಿ ವಯನಾಡಿನ ಜನರನ್ನು ಪ್ರತಿನಿಧಿಸಲಿದ್ದೇವೆ” ಎಂದು ಹೇಳಿದರು.

“ನಂತರ ಮಾತನಾದಿಡ ಪ್ರಿಯಾಂಕಾ ಗಾಂಧಿ “ವಯನಾಡಿನಲ್ಲಿ ಸ್ಪರ್ಧಿಸುವುದು ಬಹಳ ಖುಷಿ ತಂದಿದೆ; ಮತ ರಾಜಕೀಯಕ್ಕೆ ಬರಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ? ರಾಹುಲ್ ಗಾಂಧಿ ಚೆಕ್ ಮೇಟ್?

ರಾಜಕೀಯ

ಕಾಂಗ್ರೆಸ್ ಪಕ್ಷದ ಮಾಜಿ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದ ಸಂಸದರಾಗಿದ್ದರು. ಚುನಾವಣೆ ವೇಳೆ ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಕ್ಕೆ ಗುಜರಾತ್ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತು. ತರುವಾಯ, ಚುನಾವಣಾ ನೀತಿ ನಿಯಮಗಳ ಅಡಿಯಲ್ಲಿ, ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹ ಗೊಳಿಸಲಾಯಿತು. ಮತ್ತು ರಾಹುಲ್ ಗಾಂಧಿ ಸ್ಪರ್ಧಿಸಿದ್ದ ವಯನಾಡು ಕ್ಷೇತ್ರವು ಖಾಲಿಯಾಗಿದೆ ಎಂದೂ ಘೋಷಿಸಲಾಯಿತು.

ಮುಂದಿನ ವರ್ಷ ಮೇ ತಿಂಗಳಲ್ಲಿ ಸಂಸತ್ತಿಗೆ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ತೆರವಾಗಿರುವ ವಯನಾಡು ಕ್ಷೇತ್ರಕ್ಕೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿದೆ. ಅದರಂತೆ ವಯನಾಡು ಕ್ಷೇತ್ರಕ್ಕೆ ಬೇಕಾದ ವಿದ್ಯುನ್ಮಾನ ಮತಯಂತ್ರಗಳನ್ನು ಕೋಳಿಕ್ಕೋಡ್, ವಯನಾಡ್ ಮತ್ತು ಮಲಪ್ಪುರಂ ಕಲೆಕ್ಟರ್ ಕಚೇರಿಗಳಲ್ಲಿ ಇರಿಸಲಾಗಿದೆ. ಕೋಳಿಕ್ಕೋಡ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇರಿಸಲಾಗಿದ್ದ ವಿದ್ಯುನ್ಮಾನ ಮತಯಂತ್ರಗಳನ್ನು ನಿನ್ನೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ ಮಾದರಿ ಮತದಾನವನ್ನೂ ನಡೆಸಲಾಯಿತು. ಪಕ್ಷದ ಎಲ್ಲ ಮುಖಂಡರು ಪಾಲ್ಗೊಂಡಿದ್ದರು.

ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಅಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಯಾರು ಸ್ಪರ್ಧಿಸುತ್ತಾರೆ ಎಂಬ ನಿರೀಕ್ಷೆ ಮೂಡಿದೆ. ರಾಹುಲ್ ಗಾಂಧಿ ಇಲ್ಲಿ ಸ್ಪರ್ಧಿಸಿದಾಗ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರ ಪರ ಪ್ರಚಾರ ಮಾಡಿದ್ದರು. ಅವರನ್ನು ಸಂಸದ ಸ್ಥಾನದಿಂದ ಅನರ್ಹ ಗೊಳಿಸಿದ ನಂತರ ನಡೆದ ಕಾಂಗ್ರೆಸ್ ಸಭೆಯಲ್ಲೂ ಭಾಗವಹಿಸಿದ್ದರು. ಅವರು ನಿಯಮಿತವಾಗಿ ವಯನಾಡು ಕ್ಷೇತ್ರದ ಜನರನ್ನು ಭೇಟಿಯಾಗುತ್ತಾ ಪಕ್ಷದ ಪರವಾಗಿ ಪ್ರಚಾರವನ್ನೂ ಮಾಡಿದರು. ಇದರಿಂದಾಗಿ ಈ ಬಾರಿಯ ಉಪಚುನಾವಣೆಯಲ್ಲಿ ಅವರು ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಬಹುದು ಎನ್ನಲಾಗಿದೆ. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಡ ಕಾತರದಿಂದ ಕಾಯುತ್ತಿದ್ದಾರೆ.

ರಾಜಕೀಯ

ರಾಹುಲ್ ಗಾಂಧಿ ಸ್ಪರ್ಧಿಸಲು ಸಾಧ್ಯವಾಗದ ಪರಿಸ್ಥಿತಿ ಎದುರಾದರೆ, ಅವರ ವಯನಾಡ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಹೋದರಿ ಪ್ರಿಯಾಂಕಾ ಅವರನ್ನು ಕಣಕ್ಕೆ ಇಳಿಸಲು ಕೇರಳ ರಾಜ್ಯ ಕಾಂಗ್ರೆಸ್ ಯೋಜನೆ ರೂಪಿಸಿದೆ.

ಮೋದಿಯ ಮಾನಹಾನಿ ಪ್ರಕರಣದಲ್ಲಿ, ರಾಹುಲ್‌ಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಗುಜರಾತ್‌ನ ಸೂರತ್ ಕೋರ್ಟ್ ನೀಡಿದ ತೀರ್ಪಿನ ನಂತರ, ರಾಹುಲ್ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಗೊಳಿಸಲಾಯಿತು. ಈ ಪರಿಣಾಮದಿಂದ ಅವರ ಕೇರಳದ ವಯನಾಡ್ ಲೋಕಸಭಾ ಸ್ಥಾನವು ಖಾಲಿಯಾಗಿದೆ.

ಪಂಜಾಬ್ ರಾಜ್ಯದ ಜಲಂಧರ್ ಕ್ಷೇತ್ರದ ಕಾಂಗ್ರೆಸ್ ಸಂಸದ ಚಂದೋಕ್ ಸಿಂಗ್ ಚೌಧರಿ ನಿಧನ, ಲಕ್ಷದ್ವೀಪ ರಾಷ್ಟ್ರೀಯವಾದಿ ಕಾಂಗ್ರೆಸ್ ಸಂಸದ ಮೊಹಮ್ಮದ್ ಫೈಸಲ್ ಅವರಿಗೆ 10 ವರ್ಷಗಳ ಜೈಲು ಶಿಕ್ಷೆಯ ಸಮಸ್ಯೆಯಿಂದಾಗಿ ಎರಡೂ ಕ್ಷೇತ್ರಗಳು ಖಾಲಿಯಾಗಿವೆ. ಖಾಲಿಯಾಗಿರುವ ಕ್ಷೇತ್ರಗಳಿಗೆ 90 ದಿನದೊಳಗೆ ಚುನಾವಣೆ ನಡೆಸ ಬೇಕಿರುವುದರಿಂದ, ಮೂರೂ ಲೋಕಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಸಲು ಚುನಾವಣೆ ಆಯೋಗದಿಂದ ದಿನಾಂಕ ಘೋಷಣೆಯಾಗುವ ನಿರೀಕ್ಷೆಯಿದೆ.

ಈ ಹಿನ್ನಲೆಯಲ್ಲಿ ಅನರ್ಹತೆಯ ವಿರುದ್ಧದ ಕಾನೂನು ಹೋರಾಟದಲ್ಲಿ ರಾಹುಲ್ ಗಾಂಧಿಗೆ ಹಿನ್ನಡೆಯಾದರೆ, ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸಲು ಕೇರಳ ರಾಜ್ಯ ಕಾಂಗ್ರೆಸ್ ಯೋಜನೆ ರೂಪಿಸಿದೆ. Wayanad going to bypoll soon? What EC’s Lakshadweep move signals.