ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಅವಹೇಳನ ಭಾಷಣ Archives » Dynamic Leader
October 22, 2024
Home Posts tagged ಅವಹೇಳನ ಭಾಷಣ
ದೇಶ

ಡಿ.ಸಿ.ಪ್ರಕಾಶ್

ತಮಿಳುನಾಡಿನಲ್ಲಿ ‘ಚಂಡಾಲ’ ಎಂಬ ಜಾತಿ ಹೆಸರನ್ನು ಬಳಸಬಾರದು ಎಂದು  ತಮಿಳುನಾಡು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ವಿಕ್ರವಾಂಡಿ ಉಪಚುನಾವಣೆ ವೇಳೆ ‘ನಾಮ್ ತಮಿಳರ್’ ಪಕ್ಷದ ಸಾಟ್ಟೈ ದುರೈಮುರುಗನ್ (Sattai Durai Murugan), ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಬಗ್ಗೆ ವಿವಾದಾತ್ಮಕ ಹಾಡನ್ನು ಹಾಡುವ ಮೂಲಕ ಪ್ರಚಾರ ನಡೆಸಿದ್ದರು. ಆ ಹಾಡಿನಲ್ಲಿ ಕಾಣಿಸಿಕೊಂಡ ‘ಚಂಡಾಲ’ (Sandalar) ಪದವು ಅಸ್ಪೃಶ್ಯರನ್ನು ಉಲ್ಲೇಖಿಸಲು ಬಳಸಲಾಗುತ್ತದೆ. ಈ ಪದವನ್ನು ಬಳಸಿದ್ದಕ್ಕಾಗಿ ಸಾಟ್ಟೈ ದುರೈಮುರುಗನ್ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ ‘ನಾಮ್ ತಮಿಳರ್’ ಪಕ್ಷದ ಸಂಯೋಜಕ ಸೀಮಾನ್ (Seeman), “ಚಂಡಾಲ ಎಂಬ ಪದವು ಚಲನಚಿತ್ರ ಹಾಡುಗಳಲ್ಲಿ ಕಂಡುಬರುತ್ತದೆ. ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರು ಕೂಡಾ ಈ ಪದವನ್ನು ಹೆಚ್ಚಾಗಿ ಬಳಸಿದ್ದಾರೆ. ಎಐಎಡಿಎಂಕೆ ಪಕ್ಷದ ಹಾಡನ್ನು ಹಾಡಿದ ಸಾಟ್ಟೈ ದುರೈಮುರುಗನ್ ವಿರುದ್ಧ ಬಂಧನ ಕ್ರಮ ಕೈಗೊಂಡವರು, ಎಐಎಡಿಎಂಕೆ ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ? ‘ಚಂಡಾಲ’ ಎಂಬ ಸಮುದಾಯವಿದೆ ಎಂದು ನನಗೆ ತಿಳಿದಿರಲಿಲ್ಲ.

ನಾನು ಇದನ್ನು ಹಾಡು ಭಾಷೆಯಾಗಿ ಮಾತನಾಡಿದ್ದೆ. ಈ ಪದವು ಸ್ಕಂದ ಷಷ್ಠಿ ಕವಚದಲ್ಲಿರುವುದರಿಂದ ಇದನ್ನು ಬರೆದವರ ವಿರುದ್ಧವೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ. ಈ ಸಮಸ್ಯೆಯನ್ನು ಕೊನೆಗೊಳಿಸಲು, ತಮಿಳುನಾಡು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ‘ಚಂಡಾಲ’ ಎಂಬ ಜಾತಿ ಹೆಸರನ್ನು ಬಳಸದಂತೆ ಸಲಹೆ ನೀಡಿದೆ.

ಈ ಕುರಿತು ಪ್ರಕಟವಾಗಿರುವ ಪತ್ರಿಕಾ ಪ್ರಕಟಣೆಯಲ್ಲಿ, “ಮಾನವನ ಉಳಿವಿಗೆ ಅಗತ್ಯವಾದ ಮೂಲಭೂತ ವಸ್ತುಗಳನ್ನು ಉತ್ಪಾದಿಸುವುದು ಮತ್ತು ಶವಗಳನ್ನು ಹೂಳುವುದು ಮುಂತಾದ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವ ಸಮಾಜದ ಬಾಂಧವರನ್ನು ಅವಹೇಳನಕಾರಿ ಹೆಸರುಗಳಿಂದ ಕರೆಯುವುದು, ರಾಜಕೀಯ ವೇದಿಕೆಗಳನ್ನು ಬಳಸಿಕೊಂಡು ಇತರರನ್ನು ದೂಷಿಸುವುದು, ಕಲಾ ಸಾಹಿತ್ಯದಲ್ಲೂ, ಚಲನಚಿತ್ರ ಹಾಸ್ಯ ದೃಶ್ಯಗಳು ಮತ್ತು ಹಾಡುಗಳಲ್ಲಿ ಕೂಡ ಜಾತಿಯ ಅಡ್ಡಹೆಸರುಗಳನ್ನು ಬಳಕೆ ಮಾಡುವುದು ವ್ಯಾಪಕವಾಗಿ ಹರಡಿವೆ.

ಇದು ಆ ಹೆಸರುಗಳಲ್ಲಿರುವ ಜನರನ್ನು ಹಾಗೂ ಅವರಂತಹವರಿಗೆ ನೋವುಂಟು ಮಾಡುವ ಕೃತ್ಯವಾಗಿದೆ. ಇದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ ಎಂಬ ಕಲ್ಪನೆ ಸಾಮಾನ್ಯ ಸಮಾಜಕ್ಕೆ ಇಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ, 1989ರ ಪ್ರಕಾರ, ಸಾರ್ವಜನಿಕವಾಗಿ ಪರಿಶಿಷ್ಟ ಜಾತಿಯ ಹೆಸರನ್ನು ಅವಹೇಳನಕಾರಿಯಾಗಿ ಬಳಸುವುದು ಶಿಕ್ಷಾರ್ಹ ಅಪರಾಧವಾಗಿದೆ. ತಮಿಳುನಾಡಿನ ಕೆಲವು ಭಾಗಗಳಲ್ಲಿ ಮತ್ತು ಭಾರತದಲ್ಲಿ ‘ಚಂಡಾಲ’ ಎಂಬ ಹೆಸರಿನ ಜನರಿದ್ದಾರೆ.

ಇದು ತಮಿಳುನಾಡಿನ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ 48ನೇ ಸ್ಥಾನದಲ್ಲಿದೆ. ಇತ್ತೀಚೆಗೆ ಈ ಹೆಸರನ್ನು ಸಾರ್ವಜನಿಕವಾಗಿ ಇತರರನ್ನು ಅವಹೇಳನ ಮಾಡಲು ಬಳಸಲಾಗುತ್ತಿದೆ. ಆದ್ದರಿಂದ ಇನ್ನು ಮುಂದೆ ‘ಚಂಡಾಲ’ ಎಂಬ ಪದವನ್ನು ಬಳಸಬಾರದು ಎಂದು ತಮಿಳುನಾಡು ರಾಜ್ಯ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನಾಂಗಗಳ ಆಯೋಗ ಸಲಹೆ ನೀಡಿದೆ. ಉಲ್ಲಂಘನೆಯಾದಲ್ಲಿ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ರಾಜಕೀಯ

ಬೆಂಗಳೂರು: ಮುಸ್ಲಿಂ ಸಮುದಾಯದ ವಿರುದ್ಧ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ದ್ವೇಷ ಭಾಷಣ ಅವರ ಹತಾಶ ಮನಸ್ಥಿತಿಯನ್ನು ತೋರಿಸುತ್ತಿದೆ. ಇದು ಅತ್ಯಂತ ಖಂಡನೀಯ ಎಂದು ‘ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ’ ಇದರ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

ಮೊದಲ ಹಂತದ ಮತದಾನದ ಬಳಿಕ ಪ್ರಧಾನಿಗಳಿಗೆ ಸೋಲಿನ ವಾಸನೆ ಬಡಿದಿರಬಹುದು. ಸುಳ್ಳು ಹೇಳಿ ಜನರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಪ್ರಧಾನಿಗಳ ಬಗ್ಗೆ ಜನರಿಗೆ ಅರಿವಾಗತೊಡಗಿದೆ. ಬೇರೆ ದಾರಿ ಕಾಣದೆ ಚುನಾವಣಾ ಪ್ರಚಾರ ಸಭೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸತೊಡಗಿದ್ದಾರೆ.

ಮುಸ್ಲಿಮರು ನುಸುಳುಕೋರರು ಅವರು ಹೆಚ್ಚು ಮಕ್ಕಳನ್ನು ಹುಟ್ಟಿಸುವವರು ಅವರಿಗೆ ದೇಶದ ವೈಯಕ್ತಿಕ ಸಂಪತ್ತನ್ನು ಕಾಂಗ್ರೆಸ್ ಹಂಚುತ್ತಿದೆ ಎಂಬ ರೀತಿಯ ಕೀಳು ಮಟ್ಟದ ಹೇಳಿಕೆ ನೀಡಿ ಪ್ರಧಾನಿ ಹುದ್ದೆಯ ಘನತೆಗೆ ದಕ್ಕೆ ತಂದಿದ್ದಾರೆ. ಇದೆಂತಹಾ ಸಬ್ಕಾ ಸಾತ್ ಸಬ್ ಕಾ ವಿಕಾಸ್? ಎಂದು ಕಿಡಿಕಾರಿದ್ದಾರೆ.

ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಜರಗಿಸಬೇಕು. ಚುನಾವಣಾ ಆಯೋಗವು ನ್ಯಾಯೋಚಿತ ರೀತಿಯಲ್ಲಿ ವರ್ತಿಸಬೇಕು. ದೇಶದ ಸ್ವಾಸ್ಥ್ಯ ಕೆಡಿಸುವ  ಪ್ರಧಾನಿಗಳ ಶ್ರಮ ಅಪಾಯಕಾರಿ. ಅಲ್ಪಸಂಖ್ಯಾತ ಸಮುದಾಯದ ಜನರನ್ನು ನಿಂಧಿಸಿ ಬಹುಸಂಖ್ಯಾತ ಸಮುದಾಯವನ್ನು ಎತ್ತಿ ಕಟ್ಟುವ ಈ ಪ್ರಧಾನಿಗಳಿಂದ ದೇಶ ಹೇಗೆ ಉದ್ದಾರವಾದೀತು? ಮತದಾರರು ಚುನಾವಣೆಯಲ್ಲಿ ತಕ್ಕ ಪ್ರತ್ಯುತ್ತರ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.