ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಎನ್‌ಸಿಪಿ Archives » Dynamic Leader
October 17, 2024
Home Posts tagged ಎನ್‌ಸಿಪಿ
ರಾಜಕೀಯ

ಅಜಿತ್ ಪವಾರ್ ಅವರು ತಮ್ಮ ತಂಡಕ್ಕೆ ಬಹುಪಾಲು ಶಾಸಕರ ಬೆಂಬಲ ಇರುವುದರಿಂದ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ನೀಡಬೇಕು ಎಂದು ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.

ಶರದ್ ಪವಾರ್ ಅವರ ಅಣ್ಣನ ಮಗ ಅಜಿತ್ ಪವಾರ್ ಸೇರಿದಂತೆ 40 ಶಾಸಕರನ್ನು ಅನರ್ಹ ಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುವ ಮೂಲಕ ಶರದ್ ಪವಾರ್ ಕೇವಲ 13 ಶಾಸಕರನ್ನು ಮಾತ್ರ ಹೊಂದಿದ್ದಾರೆ ಎಂಬುದು ಇದೀಗ ಬಹಿರಂಗವಾಗಿದೆ.

ಮಹಾರಾಷ್ಟ್ರದಲ್ಲಿ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ, ಕಳೆದ ಜುಲೈ ಆರಂಭದಲ್ಲಿ ಇಂದಿನ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದಲ್ಲಿ ಇಬ್ಬಾಗವಾಯಿತು. ಜುಲೈ 2 ರಂದು ಸಂಜೆ ಅಜಿತ್ ಪವಾರ್ ಮತ್ತು ಅವರ 8 ಬೆಂಬಲಿಗರು ಇದ್ದಕ್ಕಿದ್ದಂತೆ ಏಕ್ ನಾಥ್ ಸಿಂಧೆ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಜಿತ್ ಪವಾರ್ ತಮ್ಮ ತಂಡಕ್ಕೆ ಬಹುಪಾಲು ಶಾಸಕರ ಬೆಂಬಲ ಇರುವುದರಿಂದ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ನೀಡಬೇಕು ಎಂದು ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಅಜಿತ್ ಪವಾರ್ ಮತ್ತು ಶರದ್ ಪವಾರ್ ಇಬ್ಬರಿಗೂ ನೋಟಿಸ್ ಕಳುಹಿಸಿದೆ.

ತಮ್ಮ ತಂಡಕ್ಕೆ 40 ಶಾಸಕರ ಬೆಂಬಲವಿದೆ ಎಂದು ಅಜಿತ್ ಪವಾರ್ ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದಾರೆ. ಆದರೆ ಶರದ್ ಪವಾರ್ ತಮ್ಮ ತಂಡದಲ್ಲಿ ಎಷ್ಟು ಶಾಸಕರಿದ್ದಾರೆ ಎಂಬ ವಿವರವನ್ನು ಸ್ಪಷ್ಟವಾಗಿ ಹೇಳಲು ನಿರಾಕರಿಸುತ್ತಿದ್ದರು. ಇದೀಗ ಶರದ್ ಪವಾರ್ ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ, ಅಜಿತ್ ಪವಾರ್ ಸೇರಿದಂತೆ 9 ಸಚಿವರು ಮತ್ತು 31 ಶಾಸಕರ ಸ್ಥಾನವನ್ನು ಅನರ್ಹಗೊಳಿಸಬೇಕು ಎಂದು ಅವರು ಪ್ರಸ್ತಾಪಿಸಿದ್ದಾರೆ.

ಶರದ್ ಪವಾರ್ ತಂಡವು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಕಾರಣ 10ನೇ ವಿಧಿಯ ಅಡಿಯಲ್ಲಿ ಎಲ್ಲಾ 40 ಜನ ಶಾಸಕರನ್ನು ಅವರ ಹುದ್ದೆಯಿಂದ ಅನರ್ಹಗೊಳಿಸಬೇಕು ಎಂದು ಉಲ್ಲೇಖಿಸಲಾಗಿದೆ.

ಕಳೆದ ಜೂನ್ 30 ರಂದು ಅಜಿತ್ ಪವಾರ್ ಚುನಾವಣಾ ಆಯೋಗಕ್ಕೆ ಕಳುಹಿಸಿರುವ ಪತ್ರದಲ್ಲಿ, ಪಕ್ಷದ ಸಭೆಯಲ್ಲಿ ಶರದ್ ಪವಾರ್ ಬದಲಿಗೆ ಅಜಿತ್ ಪವಾರ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಆದ್ದರಿಂದ ಅವರನ್ನು ಪಕ್ಷದ ಅಧ್ಯಕ್ಷರು ಎಂದು ಘೋಷಿಸಿ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ನಿಗದಿಪಡಿಸಬೇಕು ಎಂದು ಸೂಚಿಸಿದ್ದಾರೆ.

ಶರದ್ ಪವಾರ್ ಅವರ ತಂಡ ಇದೀಗ 500 ಪುಟಗಳ ಉತ್ತರವನ್ನು ಚುನಾವಣೆ ಆಯೋಗಕ್ಕೆ ಕಳುಹಿಸಿದೆ. ಅದರಲ್ಲಿ, 40 ಶಾಸಕರ ಸ್ಥಾನವನ್ನು ಅನರ್ಹಗೊಳಿಸಬೇಕು ಎಂದು ಶರದ್ ಪವಾರ್ ಹೇಳಿದ್ದಾರೆ. ಅಜಿತ್ ಪವಾರ್ ಚಿಹ್ನೆಯ ಬಗ್ಗೆ ಮೊದಲೇ ಸಮಸ್ಯೆ ಇತ್ತು ಎಂಬುದನ್ನು ಸಾಬೀತುಪಡಿಸಿಲ್ಲ, ಅದೇ ವೇಳೆಯಲ್ಲಿ ಚುನಾವಣಾ ಆಯೋಗ ಯಾವುದೇ ರೀತಿಯ ಸಮಸ್ಯೆ ಇದೆ ಎಂದೂ ತೀರ್ಮಾನ ಮಾಡಿಲ್ಲ. ಹಾಗಾಗಿ ಅಜಿತ್ ಪವಾರ್ ತಂಡ ಸಲ್ಲಿಸಿರುವ ದಾಖಲೆಗಳನ್ನು ತಿರಸ್ಕರಿಸಬೇಕು ಎಂದು ಶರದ್ ಪವಾರ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಪುಣೆಯಲ್ಲಿ ರಾಜ್ಯ ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಜಯಂತ್ ಪಾಟೀಲ್ ನೀಡಿದ ಸಂದರ್ಶನದಲ್ಲಿ, “ಪಕ್ಷದ ಹೆಸರು ಮತ್ತು ಚಿಹ್ನೆ ಅಜಿತ್ ಪವಾರ್ ಗೆ ಹೋಗಬಹುದು. ನಮ್ಮಿಂದ ತಂಡ ಬೇರ್ಪಟ್ಟರೆ ಪಕ್ಷದ ಚಿಹ್ನೆ ಮತ್ತು ಹೆಸರು ಸಿಗುತ್ತದೆ ಎಂಬ ಖಾತರಿ ಅವರಿಗೆ ಸಿಕ್ಕಿರಬಹುದು ಎಂದು ಭಾವಿಸಲಾಗಿದೆ. ಈ ವಿಚಾರದಲ್ಲಿ ಚುನಾವಣಾ ಆಯೋಗ ಈಗಾಗಲೇ ನಿರ್ಧರಿಸಿದ್ದರೆ, ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ.

ಶಿವಸೇನೆಗೆ ಏನಾಗಿದೆಯೋ ಅದೇ ನಮಗೂ ಆಗಿದೆ. ಹಾಗಾಗಿ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಅವರು ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. 30 ರಂದು ನಮ್ಮ ತಂಡಕ್ಕೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಚಿಹ್ನೆ ಮತ್ತು ಹೆಸರು ಸಿಗಲಿದೆ ಎಂದು ಕೇಂದ್ರದ ಮಾಜಿ ಸಚಿವ ಪ್ರಬುಲ್ ಪಟೇಲ್ ಈಗಾಗಲೇ ವಿಶ್ವಾಸ ವ್ಯಕ್ತಪಡಿಸಿದ್ದಾರೆ,” ಎಂದರು.

ರಾಜಕೀಯ

ಮುಂಬೈ: ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ಅವರು ಇಂದು ಜಂಟಿಯಾಗಿ ಸುದ್ದಿಗಾರರಿಗೆ ಸಂದರ್ಶನ ನೀಡಿ, “ಭಾರತವನ್ನು ರಕ್ಷಿಸಲಿಕ್ಕಾಗಿ ವಿರೋಧ ಪಕ್ಷಗಳು ಒಟ್ಟಾಗಿವೆ; ಹೊಸದಾಗಿ ಎರಡು ಪಕ್ಷಗಳು ಇಂಡಿಯಾ ಮೈತ್ರಿ ಕೂಟಕ್ಕೆ ಬರಲಿವೆ” ಎಂದು ಹೇಳಿದರು.

ನಾಳೆಯಿಂದ (ಆಗಸ್ಟ್ 31) 2 ದಿನಗಳ ಕಾಲ ಮುಂಬೈನಲ್ಲಿ ಇಂಡಿಯಾ ಮೈತ್ರಿಕೂಟದ 3ನೇ ಸಮಾಲೋಚನಾ ಸಭೆ ನಡೆಯಲಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಅಧ್ಯಕ್ಷ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ಜಂಟಿಯಾಗಿ ಸುದ್ದಿಗಾರರನ್ನು ಭೇಟಿಯಾಗಿ ಸಭೆಯ ಸಿದ್ಧತೆಗಳ ಕುರಿತು ಸಂದರ್ಶನ ನೀಡಿದರು.

ಇದನ್ನೂ ಓದಿ: ಅಡುಗೆ ಸಿಲಿಂಡರ್ ಬೆಲೆ: ಸಂಕಷ್ಟದಲ್ಲಿರುವ ನಾಡಿನ ಜನರ ಕೋಪವನ್ನು ರೂ.200 ಸಬ್ಸಿಡಿಯಿಂದ ಕಡಿಮೆ ಮಾಡಲು ಸಾಧ್ಯವಿಲ್ಲ; ಇದು ಚುನಾವಣೆ ಲಾಲಿಪಾಪ್!

ಸಂದರ್ಶನದ ಸಮಯದಲ್ಲಿ ಮಾತನಾಡಿದ ಅವರು, “ಇಂಡಿಯಾ ಮೈತ್ರಿಕೂಟದ ಬೆಳವಣಿಗೆಗೆ ಹೆದರಿ ಬಿಜೆಪಿ ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿಯೂ ಕೊಡುತ್ತದೆ. ಇಂಡಿಯಾ ಮೈತ್ರಿಯ ಉದ್ದೇಶವು ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸುವುದಾಗಿದೆ. ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ 28 ಪಕ್ಷಗಳ 63 ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಭಾರತವನ್ನು ರಕ್ಷಿಸಲಿಕ್ಕಾಗಿಯೇ ಪ್ರತಿಪಕ್ಷಗಳು ಒಂದಾಗಿವೆ. ಮತ್ತು ಹೊಸದಾಗಿ ಎರಡು ಪಕ್ಷಗಳು ಇಂಡಿಯಾ ಮೈತ್ರಿ ಕೂಟಕ್ಕೆ ಬರಲಿವೆ. ನಮ್ಮ ಸಿದ್ಧಾಂತಗಳು ವಿಭಿನ್ನವಾಗಿರಬಹುದು ಆದರೆ ಪ್ರಜಾಪ್ರಭುತ್ವವನ್ನು ರಕ್ಷಿಸುವುದು ಗುರಿಯಾಗಿದೆ. ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಆಧುನಿಕ ಗೂಢಚಾರಿಕೆ ಉಪಕರಣಗಳ ಮೂಲಕ ಭಾರತದ 140 ಕೋಟಿ ಜನರನ್ನೂ ಮೋದಿ ಸರ್ಕಾರ ನಿಗಾ ಇಡುತ್ತಿದೆ.!?

ಎನ್‌ಸಿಪಿ ತೊರೆದವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ. ನಮ್ಮಲ್ಲಿ ಪ್ರಧಾನಿ ಅಭ್ಯರ್ಥಿಗಳಿಗೆ ಹಲವು ಆಯ್ಕೆಗಳಿವೆ. ಆದರೆ ಬಿಜೆಪಿಗೆ ಒಂದನ್ನು ಬಿಟ್ಟರೆ ಬೇರೆ ಯಾವ ಆಯ್ಕೆ ಇದೆ? ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಗೆಲ್ಲಬಹುದು” ಎಂದು ಹೇಳಿದರು.