ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಕಾವೇರಿ Archives » Page 2 of 2 » Dynamic Leader
October 16, 2024
Home Posts tagged ಕಾವೇರಿ (Page 2)
ರಾಜಕೀಯ

ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಇದನ್ನು ಸಿಡಬ್ಲುಎಂಎದಲ್ಲಿ ಪ್ರತಿಭಟಿಸದೇ ಮತ್ತು ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

“ರಾಜ್ಯದ ರೈತರಿಗೆ ಈ ಮೊದಲು ನೀರು ಬಿಡದೇ ನಮ್ಮ ರಾಜ್ಯದ ರೈತರ ಪಾಲನ್ನು ಡ್ಯಾಂನಲ್ಲಿ ಸ್ಟೋರೇಜ್ ಮಾಡಿ, ರಾಜ್ಯದ ರೈತರಿಗೆ ನೀರು ಕೊಡುವ ತೀರ್ಮಾನ ವಿಳಂಬ ಮಾಡಿ ಈಗ ನಮ್ಮ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸುವ ಸ್ಥಿತಿ ನೀವು ತಂದೊಡ್ಡಿದ್ದೀರಿ.

ಇದನ್ನೂ ಓದಿ: ಹುಟ್ಟಿನಿಂದ ಮನುಷ್ಯರು ಎಲ್ಲರೂ ಸಮಾನರು; ಜನರ ನಡುವೆ ತಾರತಮ್ಯ ಮಾಡುವುದು ಅವಮಾನಕರ! – ನಟ ಕಮಲಹಾಸನ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಟ್ಟಿರುವುದು, ರಾಜ್ಯದಲ್ಲಿ ಕಾವೇರಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ ಹಾಗೂ ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ.

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು” ಎಂದು ಹೇಳಿದ್ದಾರೆ.

ದೇಶ

ಡಿ.ಸಿ.ಪ್ರಕಾಶ್

ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬಾರದು ಎಂಬುದೇ ತಮಿಳುನಾಡು ಭಾರತೀಯ ಜನತಾ ಪಕ್ಷದ ನಿಲುವು ಎಂದು ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಪುನರುಚ್ಚರಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಇದೇ ಅಣ್ಣಾಮಲೈ “ತಮಿಳುನಾಡು ಮುಖ್ಯಮಂತ್ರಿ ಏನಾದರೂ ಕರ್ನಾಟಕಕ್ಕೆ ಹೋಗಿ, ಕಾಂಗ್ರೆಸ್ ಕರೆದಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಿದರೆ, ತಮಿಳುನಾಡಿನಲ್ಲಿ ಸ್ಟಾಲಿನ್ ಅವರಿಗೆ ಪ್ರವೇಶ ನೀಡುವುದಿಲ್ಲ” ಎಂದು ಭಹಿರಂಗ ಹೇಳಿಕೆ ನೀಡಿದ್ದರು.

ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನೀಡಬೇಕಿದ್ದ ಜೂನ್ ತಿಂಗಳ ನೀರನ್ನು ಕೊಡಲು ಸಾಧ್ಯವಿಲ್ಲ ಎಂದು ಹೇಳಿರುವುದಕ್ಕೆ ಅಣ್ಣಾಮಲೈ ಪ್ರತಿಕ್ರಿಯೆ ಇದಾಗಿತ್ತು. ಈಗ ಮುಂದುವರೆದು “ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬಾರದು ಎಂಬುದೇ ತಮಿಳುನಾಡು ಭಾರತೀಯ ಜನತಾ ಪಕ್ಷದ ನಿಲುವು ಎಂದು ಪುನರುಚ್ಚರಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಈತನನ್ನು ಕರ್ನಾಟಕ ಚುನಾವಣೆ ಸಹ ಉಸ್ತುವಾರಿಯಾಗಿ ಬಿಜೆಪಿ ಪಕ್ಷ ನೇಮಕ ಮಾಡಿತ್ತು. ಅದೂ ಅಲ್ಲದೇ ಈ ಆಸಾಮಿ ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಯಾಗಿದ್ದಾಗ, ನಮ್ಮ ಕನ್ನಡಿಗರು ಇವರನ್ನು “ರಿಯಲ್ ಸಿಂಗಂ” ಎಂದೆಲ್ಲಾ ಕರೆದು ಕೊಂಡಾಡಿದ್ದರು. ಆದರೆ ಇವರು ಮೇಕೆದಾಟುವಿನಲ್ಲಿ ಅಣೆಕಟ್ಟುವುದಕ್ಕೆ ತೀವ್ರ ರೀತಿಯ ವಿರೋಧವನ್ನು ವ್ಯಕ್ತಪಡಿಸಿ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ.

ನೀರು ಕೊಡದ ಕರ್ನಾಟಕಕ್ಕೆ ಹೋದರೆ, ತಮಿಳುನಾಡಿಗೆ ವಾಪಸ್ಸ್ ಬರಲು ಅವಕಾಶ ನೀಡುವುದಿಲ್ಲ ಮತ್ತು ಗೋ ಬ್ಯಾಕ್ ಸ್ಟಾಲಿನ್ ಎಂದು ಬ್ಯಾನರ್ಗಳೊಂದಿಗೆ ಕಪ್ಪು ಬಲೂನ್ ಹಾರಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಧಮ್ಕಿ ಹಾಕಿದ ಅಣ್ಣಾಮಲೈ, ಈಗ ಮೇಕೆದಾಟು ಅಣೆಕಟ್ಟಿಗೆ ತೀವ್ರ ರೀತಿಯ ವಿರೋಧವನ್ನು ವ್ಯಕ್ತಪಡಿಸಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಇದರ ಬಗ್ಗೆ ಕೆಲವು ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳ ಬಳಿ ಮಾತನಾಡಿದಾಗ, “ಮೇಕೆದಾಟು ಅಣೆಕಟ್ಟು ವಿರೋಧಿ, ಕನ್ನಡ ದ್ರೋಹಿ ಅಣ್ಣಾಮಲೈ ಕರ್ನಾಟಕಕ್ಕೆ ಪ್ರವೇಶ ಮಾಡಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ. “ನಮ್ಮ ನೀರನ್ನು ಕುಡಿದು, ನಮ್ಮಲ್ಲಿ ಬೆಳದ ಆತನಿಗಿ ಎಷ್ಟು ಅಹಂಕಾರ ಇರಬಹುದು” ಎಂದು ಹೇಳಿಕೊಂಡಿದ್ದಾರೆ.

ರಾಜಕೀಯ

ಬೆಂಗಳೂರು: “ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ. ಆದರೆ, ಖರ್ಚು ಮಾಡಿಲ್ಲ. ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ. ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ. ಅವರೂ ನಮ್ಮ ಅಣ್ಣತಮ್ಮಂದಿರಂತೆ.

ಕರ್ನಾಟದಲ್ಲಿ ನೆಲೆಸಿರುವ ತಮಿಳಿಗರು ಹಾಗೂ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಕಾವೇರಿ ನೀರು ಕುಡಿಯುತ್ತಿದ್ದಾರೆ. ಕೋರ್ಟು, ಕಚೇರಿ ಅಲೆದದ್ದು ಸಾಕು. ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಕಾವೇರಿ ಪಾತ್ರದಲ್ಲಿರುವ ರೈತರಿಗೆ ನೀರಾವರಿ ಹಾಗೂ ಶ್ರೀಸಾಮಾನ್ಯರಿಗೆ ಕುಡಿಯುವ ನೀರು ಎರಡೂ ಲಭಿಸಲಿದೆ.

ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ. ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ; ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ; ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ದೇಶ ಬೆಂಗಳೂರು ರಾಜ್ಯ

ಡಿ.ಸಿ.ಪ್ರಕಾಶ್, ಸಂಪಾದಕರು

ಬೆಂಗಳೂರು: ಭಾರತದಲ್ಲಿ 3700 ಅಣೆಕಟ್ಟುಗಳು ಅಪಾಯದಲ್ಲಿದೆ ಎಂದು ವಿಶ್ವಸಂಸ್ಥೆ ಎಚ್ಚರಿಕೆ ನೀಡಿದ್ದು ಸಂಚಲನ ಮೂಡಿಸಿದೆ.

2050 ರ ವೇಳೆಗೆ ಭಾರತದ 3,700 ಅಣೆಕಟ್ಟುಗಳು ತಮ್ಮ ನೀರಿನ ಸಂಗ್ರಹಣಾ ಸಾಮರ್ಥ್ಯದಲ್ಲಿ ಶೇ.25 ರಷ್ಟನ್ನು ಕಳೆದುಕೊಳ್ಳುವ ಸಾದ್ಯತೆಯಿದೆ. ಮತ್ತು ಹೂಳು ತುಂಬುವುದರಿಂದ ಈ ಅಪಾಯ ಬರುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆ ಎಚ್ಚರಿಕೆ ನೀಡಿದೆ.

50 ವರ್ಷಕ್ಕಿಂತ ಹಳೆಯದಾದ ಅಣೆಕಟ್ಟುಗಳು ತಮ್ಮ ನೀರಿನ ಸಂಗ್ರಹಣಾ ಸಾಮರ್ಥ್ಯದಲ್ಲಿ ಶೇ.30 ರಷ್ಟನ್ನು ಕಳೆದುಕೊಳ್ಳುತ್ತವೆ ಮತ್ತು ಪ್ರಪಂಚದಾದ್ಯಂತದ ಸುಮಾರು 50,000 ಅಣೆಕಟ್ಟುಗಳು ಹೂಳು ತುಂಬುವಿಕೆಯಿಂದಾಗಿ ತಮ್ಮ ನೀರಿನ ಸಂಗ್ರಹಣಾ ಸಾಮರ್ಥ್ಯದಲ್ಲಿ ಶೇ.13 ರಿಂದ ಶೇ.19 ರಷ್ಟು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ವಿಶ್ವಸಂಸ್ಥೆಯ ಸಹಯೋಗದೊಂದಿಗೆ ಪರಿಸರ ಮತ್ತು ಆರೋಗ್ಯ ಕೇಂದ್ರ ವಿಶ್ವವಿದ್ಯಾನಿಲಯ ವಿಶ್ವಾದ್ಯಂತ ಅಸ್ತಿತ್ವದಲ್ಲಿರುವ ಅಣೆಕಟ್ಟುಗಳ ಭವಿಷ್ಯವನ್ನು ಪರಿಶೀಲಿಸಿ ಅಧ್ಯಯನವುನ್ನು ನಡೆಸಿದೆ. ದೊಡ್ಡ ಅಣೆಕಟ್ಟುಗಳು ಮತ್ತು ಜಲಾಶಯಗಳು ವಿದ್ಯುತ್ ಮತ್ತು ಕುಡಿಯುವ ನೀರನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಮತ್ತು ಈ ಜಲಾಶಯಗಳೆಲ್ಲವೂ ಏಕಕಾಲದಲ್ಲಿ ಪರಿಣಾಮ ಬೀರುತ್ತವೆ ಎಂದೂ ಅಧ್ಯಯನವು ಬಹಿರಂಗಪಡಿಸಿದೆ.

ಹೂಳುಗಳ ಶೇಖರಣೆಯಿಂದಾಗಿ ಭಾರತದಲ್ಲಿರುವ 3,700 ಅಣೆಕಟ್ಟುಗಳು 2050ರ ವೇಳೆಗೆ ಒಟ್ಟು ಸಂಗ್ರಹಣೆಯಲ್ಲಿ ಶೇ.26 ರಷ್ಟುನ್ನು ಕಳೆದುಕೊಳ್ಳುತ್ತವೆ. ಇದು ಭವಿಷ್ಯದ ನೀರಿನ ಭದ್ರತೆ, ನೀರಾವರಿ ಮತ್ತು ವಿದ್ಯುತ್ ಉತ್ಪಾದನೆಯನ್ನು ದುರ್ಬಲಗೊಳಿಸುವಂತೆ ಮಾಡುತ್ತದೆ ಎಂದು ವಿಶ್ವಸಂಸ್ಥೆಯ ಹೊಸ ಅಧ್ಯಯನವು ಎಚ್ಚರಿಕೆಯನ್ನು ನೀಡಿದೆ.

ನೀರು, ಪರಿಸರ ಮತ್ತು ಆರೋಗ್ಯದ ಕುರಿತು ವಿಶ್ವಸಂಸ್ಥೆಯ ವಿಶ್ವವಿದ್ಯಾಲಯವು ನಡೆಸಿದ ಅಧ್ಯಯನದ ಪ್ರಕಾರ, 150 ದೇಶಗಳಲ್ಲಿನ 47,403 ದೊಡ್ಡ ಅಣೆಕಟ್ಟುಗಳಲ್ಲಿ 6,316 ಶತಕೋಟಿ ಘನ ಮೀಟರ್ ನೀರಿನ ಸಂಗ್ರಹವು ಕಡಿಮೆಯಾಗುತ್ತದೆ. ಮತ್ತು 2050ರ ವೇಳೆಗೆ 4,665 ಶತಕೋಟಿ ಘನ ಮೀಟರ್ ನೀರಿನ ಸಂಗ್ರದಲ್ಲಿ ಶೇ.26ರಷ್ಟು ನೀರಿನ ಸಂಗ್ರಹವು ನಷ್ಟವಾಗುತ್ತದೆ ಎಂದು ಅದು ಅಂದಾಜಿಸಿದೆ.

ಭಾರತ ಮಾತ್ರವಲ್ಲದೆ ಚೀನಾ, ಇಂಡೋನೇಷ್ಯಾ, ಫ್ರಾನ್ಸ್ ಮತ್ತು ಕೆನಡಾ ಸೇರಿದಂತೆ ಇತರ ದೇಶಗಳಲ್ಲಿ ಅಣೆಕಟ್ಟುಗಳ ಜಲಾಶಯದ ಸಾಮರ್ಥ್ಯ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಅಧ್ಯಯನ ತಿಳಿಸಿದೆ.

2022 ರ ಹೊತ್ತಿಗೆ, ಏಷ್ಯಾ-ಪೆಸಿಫಿಕ್ ಪ್ರದೇಶ ಮತ್ತು ಪ್ರಪಂಚವು ತಮ್ಮ ಹೆಚ್ಚುವರಿ ಶೇಖರಣಾ ಸಾಮರ್ಥ್ಯದಲ್ಲಿ ಶೇ.13 ರಷ್ಟನ್ನು ಕಳೆದುಕೊಂಡಿದೆ ಎಂದು ಅಂದಾಜಿಸಲಾಗಿದೆ. ವಿಶ್ವದಲ್ಲಿನ ಈ ಭೂಭಾಗದ ಜನಸಂಖ್ಯೆ ಶೇ.60ರಷ್ಟು ಇರುವುದರಿಂದ ನೀರು ಮತ್ತು ಆಹಾರ ಭದ್ರತೆಯನ್ನು ಉಳಿಸಿಕೊಳ್ಳಲು ನೀರಿನ ಸಂರಕ್ಷಣೆ ನಿರ್ಣಾಯಕವಾಗಿದೆ ಎಂದು ಅಧ್ಯಯನವು ಸ್ಪಷ್ಟಪಡಿಸಿದೆ.

ಭಾರತದ 3,700 ಪ್ರಮುಖ ಅಣೆಕಟ್ಟುಗಳು 2050 ರ ವೇಳೆಗೆ ತಮ್ಮ ಆರಂಭಿಕ ಒಟ್ಟು ಸಂಗ್ರಹಣೆಯಲ್ಲಿ ಸರಾಸರಿಯಾಗಿ ಶೇ.26ರಷ್ಟು ಕಳೆದುಕೊಳ್ಳುತ್ತವೆ ಎಂದು ವಿಶ್ವಸಂಸ್ಥೆ ಹೇಳಿದೆ. ಭಾರತ ಮಾತ್ರವಲ್ಲದೆ ವಿಶ್ವದ ಅತ್ಯಂತ ಅಣೆಕಟ್ಟುಗಳನ್ನು ಹೊಂದಿರುವ ಚೀನಾ ರಾಷ್ಟ್ರದ ಅಣೆಕಟ್ಟುಗಳು ಕೂಡ 2050ರ ಹೊತ್ತಿಗೆ ತಮ್ಮ ಸಂಗ್ರಹದ ಶೇ.10ರಷ್ಟನ್ನು ಕಳೆದುಕೊಳ್ಳುತ್ತದೆ.

ನೀರಿನ ಸಂಗ್ರಹಣೆಯ ಮೂಲಸೌಕರ್ಯವು ಅಭಿವೃದ್ಧಿಗೆ ನಿರ್ಣಾಯಕವಾಗಿರುವುದರಿಂದ, ಪ್ರಮುಖ ಅಣೆಕಟ್ಟುಗಳು ಮತ್ತು ಜಲಾಶಯಗಳನ್ನು ಜಲವಿದ್ಯುತ್, ಪ್ರವಾಹ ನಿಯಂತ್ರಣ ಮತ್ತು ನೀರಾವರಿ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ದುರಸ್ತಿ ಮಾಡಬೇಕು. ನಿರ್ದಿಷ್ಟವಾಗಿ ಹೇಳುವುದಾದರೆ, ಹೂಳು ಸಂಗ್ರಹವಾಗುವುದನ್ನು ತಡೆಯಲು ಪ್ರಯತ್ನಿಸಬೇಕು ಎಂದು ಅಧ್ಯಯನದ ಫಲಿತಾಂಶಗಳು ಸೂಚಿಸುತ್ತವೆ.