ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಕೇಂದ್ರ ರೈಲ್ವೆ ಇಲಾಖೆ Archives » Dynamic Leader
October 23, 2024
Home Posts tagged ಕೇಂದ್ರ ರೈಲ್ವೆ ಇಲಾಖೆ
ದೇಶ

“ಸತ್ಯ ನುಡಿದಿದ್ದಕ್ಕಾಗಿ ರಾಜನು ಶಿಕ್ಷೆಯೊಂದಿಗೆ ಉಡುಗೊರೆ ನೀಡುತ್ತಿದ್ದಾರೆ” ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಲೇವಡಿ!

ಕೇಂದ್ರ ರೈಲ್ವೆ ಇಲಾಖೆಯು ಮುಂಬೈ, ಪುಶಾವಲ್, ನಾಗ್ಪುರ, ಪುಣೆ ಮತ್ತು ಸೊಲ್ಲಾಪುರದ ಐದು ವಲಯಗಳಲ್ಲಿ ಸುಮಾರು 50 ರೈಲು ನಿಲ್ದಾಣಗಳಲ್ಲಿ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಿದೆ. ಈ 50 ನಿಲ್ದಾಣಗಳಲ್ಲಿ 30 ಸ್ಥಳಗಳಲ್ಲಿ ತಾತ್ಕಾಲಿಕ ಸೆಲ್ಫಿ ಪಾಯಿಂಟ್‌ಗಳನ್ನು ಮತ್ತು 20 ನಿಲ್ದಾಣಗಳಲ್ಲಿ ಶಾಶ್ವತ ಸೆಲ್ಫಿ ಪಾಯಿಂಟ್‌ಗಳನ್ನು ಇರಿಸಲಾಗಿದೆ.

ಮಹಾರಾಷ್ಟ್ರದ ಅಜಯ್ ಬಸುದೇವ್ ಬೋಸ್ ಅವರು ಕೇಂದ್ರ ರೈಲ್ವೆ ವ್ಯಾಪ್ತಿಯ ವಿವಿಧ ರೈಲು ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ 3ಡಿ ಸೆಲ್ಫಿ ಬೂತ್‌ಗಳ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಪ್ರಶ್ನೆಗಳನ್ನು ಎತ್ತಿದ್ದರು.

ಅಜಯ್ ಬಸುದೇವ್ ಅವರ ಅರ್ಜಿಗೆ ಕಳೆದ ವರ್ಷ ಡಿಸೆಂಬರ್ 21 ರಂದು ಉತ್ತರ ನೀಡಲಾಗಿತ್ತು. ಅದರಲ್ಲಿ ಸೆಂಟ್ರಲ್ ರೈಲ್ವೆ ಅಡಿಯಲ್ಲಿ ಸ್ಥಾಪಿಸಲಾಗಿರುವ ಸೆಲ್ಫಿ ಬೂತ್‌ಗಳಲ್ಲಿ ತಾತ್ಕಾಲಿಕ ಬೂತ್‌ಗಳಿಗೆ ತಲಾ 1 ಲಕ್ಷ 25 ಸಾವಿರ ಹಾಗೂ ಶಾಶ್ವತ ಸೆಲ್ಫಿ ಪಾಯಿಂಟ್ ಗಳಿಗೆ ತಲಾ 6 ಲಕ್ಷ 25 ಸಾವಿರ ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಲಾಗಿತ್ತು.

ಈ ಬಗ್ಗೆ ಮಾಹಿತಿ ಹೊರಬಿದ್ದ ಬೆನ್ನಲ್ಲೇ “ಬಿಜೆಪಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ” ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.

ಈ ಕುರಿತು ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, “ಮೋದಿ ಸರ್ಕಾರದ ಸ್ವಯಂ ಪ್ರಚಾರಕ್ಕೆ ಮಿತಿಯೇ ಇಲ್ಲದಂತಾಗಿದೆ. ಬರ ಮತ್ತು ಪ್ರವಾಹದಿಂದ ಹಾನಿಗೊಳಗಾದ ರಾಜ್ಯಗಳಿಗೆ ಯಾವುದೇ ಪರಿಹಾರವನ್ನು ನೀಡಲಾಗಿಲ್ಲ. ವಿರೋಧ ರಾಜ್ಯಗಳ ನಿಧಿಯೂ ಬಾಕಿ ಇದೆ. ಆದರೆ ಈ ರೀತಿಯ ಅನವಶ್ಯಕ ವಿಷಯಗಳಿಗೆ ಹಣ ಖರ್ಚು ಮಾಡುತ್ತಿದೆ. ಚುನಾವಣಾ ಲಾಭಕ್ಕಾಗಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಶಶಿ ತರೂರ್, “ಪ್ರಾಮಾಣಿಕ ತೆರಿಗೆ ಪಾವತಿದಾರರ ಹಣದಲ್ಲಿ ಪ್ರಧಾನಿ ಮತ್ತು ಆಡಳಿತಾರೂಢ ಸರ್ಕಾರ ಸ್ವಯಂ ಪ್ರಚಾರ ನಡೆಸುತ್ತಿರುವುದು ಘೋರ ದುರ್ಬಳಕೆಯಾಗಿದೆ” ಎಂದು ಹೇಳಿದರು.

ಈ ಹಿನ್ನಲೆಯಲ್ಲಿ, ವಿರೋಧ ಪಕ್ಷಗಳು ಈ ಬಗ್ಗೆ ಪ್ರಶ್ನೆ ಎತ್ತಿದ್ದು, ಸಂಬಂಧಪಟ್ಟ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಕಾರ್ಯಾಚರಣೆಯ ಕಾರಣಕ್ಕಾಗಿ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ, “ಸತ್ಯ ನುಡಿದಿದ್ದಕ್ಕಾಗಿ ರಾಜನು ಶಿಕ್ಷೆಯೊಂದಿಗೆ ಉಡುಗೊರೆ ನೀಡುತ್ತಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ, ರೈಲ್ವೆ ಇಲಾಖೆ ಆರ್‌ಟಿಐ ಅಡಿಯಲ್ಲಿ ಮಾಹಿತಿ ಬಹಿರಂಗಪಡಿಸುವ ನಿಯಮಗಳನ್ನು ಬಿಗಿಗೊಳಿಸಿದೆ. ಹೊಸ ನಿಯಮಗಳ ಪ್ರಕಾರ, ಎಲ್ಲಾ ಪ್ರತಿಕ್ರಿಯೆಗಳನ್ನು ವಲಯ ರೈಲ್ವೆ ಮುಖ್ಯ ವ್ಯವಸ್ಥಾಪಕರು ಅಥವಾ ವಲಯ ರೈಲ್ವೆ ವ್ಯವಸ್ಥಾಪಕರು ಅನುಮೋದಿಸಬೇಕು ಎಂದು ಹೇಳಲಾಗಿದೆ.

ರೈಲ್ವೆ ಮಂಡಳಿಯು ಮುಖ್ಯ ವ್ಯವಸ್ಥಾಪಕರುಗಳಿಗೆ ಸೂಚಿಸಿರುವ ಸಲಹೆಯಲ್ಲಿ, “ವಲಯ ರೈಲ್ವೆ ಮತ್ತು ಇತರ ಇಲಾಖೆಗಳು ನಿರ್ವಹಿಸುವ ಆರ್‌ಟಿಐ ಅರ್ಜಿಗಳ ಪ್ರತಿಕ್ರಿಯೆಗಳ ಗುಣಮಟ್ಟ ಇತ್ತೀಚೆಗೆ ಹದಗೆಟ್ಟಿದೆ” ಎಂದು “ಹಿಂದೂ” ಪತ್ರಿಕೆ ವರದಿ ಮಾಡಿದೆ.

ಎಲ್ಲಾ ಪ್ರತಿಕ್ರಿಯೆಗಳನ್ನು ವಲಯ ರೈಲ್ವೆ ಮುಖ್ಯ ವ್ಯವಸ್ಥಾಪಕರು ಅಥವಾ ವಲಯ ರೈಲ್ವೆ ವ್ಯವಸ್ಥಾಪಕರು ಅನುಮೋದಿಸಬೇಕು ಎಂದು ಹೇಳಲಾಗಿದೆ. ಆದರೆ, ಆರ್‌ಟಿಐ ಮಾಹಿತಿ ಬಿಡುಗಡೆಗೂ ನಿಯಮಾವಳಿ ಬಿಗಿಗೂ ಯಾವುದೇ ಸಂಬಂಧವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.