ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಗಡಿ Archives » Dynamic Leader
October 16, 2024
Home Posts tagged ಗಡಿ
ಬೆಂಗಳೂರು ರಾಜಕೀಯ ರಾಜ್ಯ

ಡಿ.ಸಿ.ಪ್ರಕಾಶ್, ಸಂಪಾದಕರು

ಬೆಂಗಳೂರು: ಜೆ.ಪಿ.ಭವನದಿಂದ ನೂರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದ ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್, ಕಾರ್ಯಾಧ್ಯಕ್ಷ ಕೆ.ವಿ.ನಾರಾಯಣ ಸ್ವಾಮಿ ಮತ್ತಿತರರು ಕೃಷ್ಣ ಫ್ಲೋರ್ ಮಿಲ್ ವೃತ್ತದಲ್ಲಿ ಪ್ರತಿಭಟನೆ ನಡಿಸಿದರು. ಪ್ರತಿಭಟನಾ ನಿರತರು ರಸ್ತೆಯನ್ನು ತಡೆಯಲು ಮುಂದಾದಾಗ ಅವರನ್ನು ಅಡ್ಡಗಟ್ಟಿದ ಪೊಲೀಸರು ವಶಕ್ಕೆ ಪಡೆದರು.

ಕರ್ನಾಟಕದ ಬೆಳಗಾವಿ, ಕಾರವಾರ, ಬೀದರ್, ನಿಪ್ಪಾಣಿ ಮತ್ತು ಭಾಲ್ಕಿ ಸೇರಿದಂತೆ ಮೂರು ಜಿಲ್ಲೆಗಳ 865 ಗ್ರಾಮಗಳು ಮತ್ತು ಕರ್ನಾಟಕದ ನಗರಗಳ ಮೇಲೆ ರಾಜ್ಯದ ಹಕ್ಕು ಪುನರುಚ್ಚರಿಸುವ ನಿರ್ಣಯವನ್ನು ಮಹಾರಾಷ್ಟ್ರ ವಿಧಾನಸಭೆ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿತು. ಇದು ಎರಡು ರಾಜ್ಯಗಳ ನಡುವಿನ ಜಗಳವನ್ನು ಮತ್ತಷ್ಟು ಹೆಚ್ಚಿಸಿದೆ. ಡಿಸೆಂಬರ್ 22 ರಂದು ಕರ್ನಾಟಕ ವಿಧಾನಸಭೆಯು ಮಹಾರಾಷ್ಟ್ರಕ್ಕೆ “ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ” ಎಂದು ಪ್ರತಿಜ್ಞೆ ಮಾಡಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡುವ ಉದ್ದೇಶದಿಂದ ಮಹಾರಾಷ್ಟ್ರ ಸರಕಾರವು ಇಂತಹ ನಿರ್ಣಯವನ್ನು ಕೈಗೊಂಡಿದೆ.

ಸುಪ್ರೀಂ ಕೋರ್ಟ್‌ನಲ್ಲಿ ವಿವಾದಿತ ಪ್ರದೇಶಗಳಿಗಾಗಿ ಕಾನೂನು ಹೋರಾಟವನ್ನು ಮುಂದುವರಿಸುವುದಾಗಿ ಮತ್ತು ಈ ಪ್ರದೇಶಗಳಲ್ಲಿ ವಾಸಿಸುವ ಮಹಾರಾಷ್ಟ್ರೀಯರಿಗೆ ಸಾಧ್ಯವಿರುವ ಎಲ್ಲಾ ರೀತಿಯ ಬೆಂಬಲವನ್ನೂ ಕೊಡುವುದಾಗಿ ಮಹಾರಾಷ್ಟ್ರ ಸರ್ಕಾರ ಮಂಗಳವಾರ ಹೇಳಿಕೊಂಡಿದೆ. ಡಿಸೆಂಬರ್ 14 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇಬ್ಬರು ಮುಖ್ಯಮಂತ್ರಿಗಳ ನಡುವೆ ನಡೆದ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕೆಂದೂ ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.

“ಎರಡೂ ರಾಜ್ಯಗಳು ಒಪ್ಪಿಕೊಂಡಿರುವ ನಿರ್ಣಯದ ಮೇಲೆ ಕಾರ್ಯನಿರ್ವಹಿಸಲು ಕೇಂದ್ರವು ಕರ್ನಾಟಕಕ್ಕೆ ನಿರ್ದೇಶಿಸಬೇಕು ಮತ್ತು ವಿವಾದಿತ ಪ್ರದೇಶಗಳಲ್ಲಿ ಮರಾಠಿ ಮಾತನಾಡುವ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನೆರೆಯ ರಾಜ್ಯವನ್ನು ಕೇಳಬೇಕು. ಪೊಲೀಸರು ಪ್ರತಿಭಟನಾಕಾರರ ಮೇಲೆ ಕ್ರೂರವಾಗಿ ದಾಳಿ ಮಾಡುತ್ತಾರೆ, ಮಹಾರಾಷ್ಟ್ರ ನಂಬರ್ ಪ್ಲೇಟ್ ಹೊಂದಿರುವ ವಾಹನಗಳ ಮೇಲೆ ದಾಳಿ ಮಾಡಲಾಗುತ್ತದೆ, ಮರಾಠಿ ಮಾತನಾಡುವ ಜನರ ಒಡೆತನದ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಉಭಯ ರಾಜ್ಯಗಳ ನಡುವೆ ಉತ್ತಮ ಸಮನ್ವಯಕ್ಕಾಗಿ ರಾಜ್ಯ ಸರ್ಕಾರ ನೇಮಿಸಿದ ಸಚಿವರು, ವಿವಾದಿತ ಪ್ರದೇಶಕ್ಕೆ ಪ್ರವೇಶಿಸಲು ಅವಕಾಶವಿಲ್ಲದಂತಾಗಿದೆ. ಇದೆಲ್ಲವೂ ಅಲ್ಲಿ ವಾಸಿಸುವ ನಮ್ಮ ಜನರ ಮೇಲೆ ದಬ್ಬಾಳಿಕೆ ನಡೆಸಲು ಕರ್ನಾಟಕ ಸರಕಾರವು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದೆ” ಎಂದು ನಿರ್ಣಯದಲ್ಲಿ ಹೇಳಲಾಗಿತ್ತು.

ಇದನ್ನು ಖಂಡಿಸಿ ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷವು ಇಂದು ಮೆರವಣಿಗೆ ಮತ್ತು ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.

ಇಂದು ಮಧ್ಯಾಹ್ನ ಪಕ್ಷದ ಕಚೇರಿ ಜೆ.ಪಿ.ಭವನದಿಂದ ನೂರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದ ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್, ಕಾರ್ಯಾಧ್ಯಕ್ಷ ಕೆ.ವಿ.ನಾರಾಯಣ ಸ್ವಾಮಿ ಮತ್ತಿತರರು ಕೃಷ್ಣ ಫ್ಲೋರ್ ಮಿಲ್ ವೃತ್ತದಲ್ಲಿ ಪ್ರತಿಭಟನೆ ನಡಿಸಿದರು. ಪ್ರತಿಭಟನಾ ನಿರತರು ರಸ್ತೆಯನ್ನು ತಡೆಯಲು ಮುಂದಾದಾಗ ಅವರನ್ನು ಅಡ್ಡಗಟ್ಟಿದ ಪೊಲೀಸರು ವಶಕ್ಕೆ ಪಡೆದರು. ನಂತರ ಎಲ್ಲರನ್ನು ಬಿಡುಗಡೆ ಮಾಡಲಾಯಿತು.