ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಜಗದೀಶ್‌ ಶೆಟ್ಟರ್‌ Archives » Dynamic Leader
October 16, 2024
Home Posts tagged ಜಗದೀಶ್‌ ಶೆಟ್ಟರ್‌
ರಾಜಕೀಯ

ಬೆಂಗಳೂರು: ಜಗದೀಶ್ ಶೆಟ್ಟರ್ BJPಯಿಂದ ಅವಮಾನಿತರಾಗಿ ರಾಜಕೀಯ ಆಶ್ರಯ ಅರಸಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರು. ನಮ್ಮ ಪಕ್ಷ ಅವರಿಗೆ ವಿಧಾನಸಭಾ ಟಿಕೆಟ್ ನೀಡಿತ್ತು. ಚುನಾವಣೆಯಲ್ಲಿ ಸೋತರೂ ವಿಧಾನ ಪರಿಷತ್‌ಗೆ ಆಯ್ಕೆ ಮಾಡಿತ್ತು‌. ಇದಕ್ಕಿಂತ ಹೆಚ್ಚಿನ ಗೌರವ ಕೊಡಲು ಇನ್ನೇನು ಸಾಧ್ಯ.? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈಗ ಅವಮಾನ ಮಾಡಿದ ಪಕ್ಷಕ್ಕೇ‌ ಮರಳಿ ಹೋಗಿದ್ದಾರೆ‌. ಶೆಟ್ಟರ್‌ ಆತ್ಮಗೌರವ ಕಳೆದುಕೊಂಡು BJPಗೆ ಮರಳಿ ಹೋಗುವ ದುಸ್ಥಿತಿ ಬರಬಾರದಿತ್ತು. ಜಗದೀಶ್ ಶೆಟ್ಟರ್ BJP ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವ ನಷ್ಟವೂ ಇಲ್ಲ. ಶೆಟ್ಟರ್‌ರಂತಹ ಸಾವಿರಾರು ನಾಯಕರನ್ನು ಸೃಷ್ಟಿಸುವ ತಾಕತ್ತು ಕಾಂಗ್ರೆಸ್‌ಗಿದೆ ಎಂದು ಹೇಳಿದ್ದಾರೆ.

ಶೆಟ್ಟರ್ ಹಿರಿಯ ರಾಜಕಾರಣಿ. ಆದರೆ ರಾಜಕೀಯ ಸಂದ್ಯಾಕಾಲದಲ್ಲಿ ತಮ್ಮನ್ನು ಅವಮಾನಿಸಿದ ಪಕ್ಷಕ್ಕೆ ಮರಳಿ ಸೇರಿಕೊಳ್ಳುವ ಮೂಲಕ ಶೆಟ್ಟರ್ ರಾಜಕೀಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ನಾಯಕರಾಗಿದ್ದ ಮತ್ತು ಎಬಿವಿಪಿ ಹಾಗೂ ಆರ್‌ಎಸ್‌ಎಸ್ ಹಿನ್ನಲೆಯುಳ್ಳ ಜಗದೀಶ್ ಶೆಟ್ಟರ್ ಅವರಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡದೆ, ಕೊನೆಯವರೆಗೂ ಸತಾಯಿಸಿ ಮಹೇಶ ಟೆಂಗಿನಕಾಯಿ ಅವರಿಗೆ ಟಿಕೆಟ್ ನೀಡಲಾಯಿತು. ಸ್ವಪಕ್ಷದಿಂದಲೇ ಅವಮಾನಿತರಾಗಿ ಸ್ವಾಭಿಮಾನದಿಂದ ಹೊರನಡೆದ ಶೆಟ್ಟರ್, ಮತ್ತೊಂದು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌ನಲ್ಲಿ ಟಿಕೆಟ್ ಪಡೆದು ಚುನಾಚಣೆಯಲ್ಲಿ ಸ್ಪರ್ದಿಸಿದರು.

ಶೆಟ್ಟರ್ ಅವರನ್ನು ಸೋಲಿಸಲೇ ಬೇಕು ಎಂಬ ಹಟಕ್ಕೆ ಬಿದ್ದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮುಂತಾದ ಗಟಾನುಗಟಿ ನಾಯಕರೆಲ್ಲರೂ ಒಂದೆಡೆ ಸೇರಿ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಡುವಿಲ್ಲದ ಪ್ರಚಾರವನ್ನು ಮಾಡಿ, ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವಂತೆ ಮಾಡಿದರು. ಇವರನ್ನು ಸೋಲಿಸುವ ಜವಾಬ್ದಾರಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಹಿಸಿಕೊಂಡು ಅದಕ್ಕಾಗಿ ಹಗಲಿರಳು ಶ್ರಮಿಸಿದರು. ಬಿಜೆಪಿ ಪಕ್ಷವು ಒಬ್ಬ ಹಿರಿಯ ಲಿಂಗಾಯಿತ ರಾಜಕಾರಣಿಯನ್ನು ಸೋಲಿಸಲು ಇನ್ನೊಬ್ಬ ಹಿರಿಯ ಲಿಂಗಾಯಿತ ರಾಜಕಾರಣಿಯನ್ನು ಕಣಕ್ಕಿಳಿಸಿ ತಮ್ಮ ಸೇಡನ್ನು ತೀರಿಸಿಕೊಂಡಿತು.  

“ಕೊನೆಯ ಬಾರಿಗೆ ಅವಕಾಶ ನೀಡಿ, ಶಾಸಕನಾಗಿ ಎರಡು ತಿಂಗಳು ಇದ್ದು, ನಂತರ ರಾಜೀನಾಮೆ ಕೊಟ್ಟು ಹೊರನಡೆಯುತ್ತೇನೆ; ನನಗೆ ಯಾವ ಸ್ಥಾನಮಾನವು ಬೇಡ; ಸ್ವಾಭೀಮಾನದ ಬೀಳ್ಕೊಡುಗೆ ಒಂದೇ ಸಾಕು” ಎಂದು ಬಿಜೆಪಿ ವರಿಷ್ಟರಲ್ಲಿ ಪರಿಪರಿಯಾಗಿ ಬೇಡಿಕೊಂಡರೂ ಮನವೆರಗಳಿಲ್ಲ. ಕೊನೆಯದಾಗಿ, ಸ್ವಾಭಿಮಾನಕ್ಕಾಗಿ; ಕ್ಷೇತ್ರದಲ್ಲಿ ಮಾಡಬೇಕಾದ ಅಭಿವೃದ್ಧಿಯ ಕೆಲಸ ಕಾರ್ಯಗಳಿಗಾಗಿ; ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಆದರೂ ಮತದಾರರು ಅವರಿಗೆ ಆಶೀರ್ವಾದ ಮಾಡಲಿಲ್ಲ. ಬಿಜೆಪಿ ನಾಯಕರ ಬಣ್ಣದ ಮಾತುಗಳಿಗೆ ಮಾರುಹೋಗಿ ಮಹೇಶ ಟೆಂಗಿನಕಾಯಿ ಅವರಿಗೆ ಆಶೀರ್ವಾದ ಮಾಡಿದರು.

ಟೆಂಗಿನಕಾಯಿ ಅವರು ಶಾಸಕರಾಗಿರುವ ಈ ವೇಳೆಯಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತದೊಂದಿದೆ ಅಧಿಕಾರಕ್ಕೆ ಬಂದಿದೆ. ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ (ಅನುದಾನ) ಸಹಾಯಬೇಕು. ಸಹಾಯ ಬೇಕಾದರೆ ಇಂದು ಕಾಂಗ್ರೆಸ್ ಪಕ್ಷದಲ್ಲಿ ಪ್ರಭಾವಿ ನಾಯಕರಾಗಿರುವ ಶೆಟ್ಟರ್ ಅವರ ಸಹಾಯ ಬೇಕು. ಶೆಟ್ಟರ್ ಅವರನ್ನು ದಾಟಿಹೋಗಿ ಸರ್ಕಾರದಲ್ಲಿ ಏನನ್ನೂ ಮಾಡಲು ಮಹೇಶ ಟೆಂಗಿನಕಾಯಿಗೆ ಸಾಧ್ಯವಾಗುವುದಿಲ್ಲ; ಇದು ವಾಸ್ತವದ ಸಂಗತಿ. ಮಹೇಶ ಟೆಂಗಿನಕಾಯಿ ಗೆದ್ದಿದ್ದರೂ ಸೋತಂತೆ; ಜಗದೀಶ್ ಶೆಟ್ಟರ್ ಸೋತರೂ ಗೆದ್ದಂತೆಯೇ.      

ಸಂಘಪರಿವಾರದ ಗರಡಿಯಲ್ಲಿ ಪಳಗಿ, ಬಿಜೆಪಿಯ ಕಟ್ಟಾಳುಗಳಲ್ಲಿ ಪ್ರಮುಖರೂ ಆಗಿದ್ದ ಜಗದೀಶ್ ಶೆಟ್ಟರ್, ಸ್ವಾಭಿಮಾನಕ್ಕಾಗಿ ಅವರೆಲ್ಲರ ಸಂಗಾತ್ಯವನ್ನು ತೊರೆದು. ಇಂದು ಕಾಂಗ್ರೆಸ್ ಪಕ್ಷದಲ್ಲಿ ಸ್ವಾಭಿಮಾನದಿಂದ ಮೆರೆಯುತ್ತಿದ್ದಾರೆ. ಜಗದೀಶ್ ಶೆಟ್ಟರ್ ಅವರು ಬಿಜೆಪಿಯನ್ನು ತೊರೆಯುವುದಾಗಿ ಘೋಷಿಸಿದ ಕೂಡಲೇ ಕೇಂದ್ರ ಸಚಿವರು ಹಾಗೂ ಚುನಾವಣೆ ಉಸ್ತುವಾರಿಯೂ ಆದ ಧರ್ಮೇಂದ್ರ ಪ್ರಧಾನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮುಂತಾದವರೆಲ್ಲರೂ ಅವರ ನಿವಾಸಕ್ಕೆ ತೆರಳಿ, ಕೇಂದ್ರ ಸರ್ಕಾರದಲ್ಲಿ ಉನ್ನತ ಸ್ಥಾನವನ್ನು ನೀಡುವುದಾಗಿ ಆಶ್ವಾಸನೆ ನೀಡಿದರು. ಆದರೆ, ಅದಕ್ಕೆ ಒಪ್ಪದ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡರು.

ಹಾಗಾಗಿ ಶೆಟ್ಟರ್ ಅವರಿಗೆ ಇದೇ ಸರ್ಕಾರದಲ್ಲಿ ಸೂಕ್ತವಾದ ಜವಾಬ್ದಾರಿಯನ್ನು ನೀಡಿ, ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗದಂತೆ ನೋಡಿಕೊಳ್ಳುವುದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆದ್ಯ ಕರ್ತವ್ಯವಾಗಿರುತ್ತದೆ. ಶೆಟ್ಟರ್ ವಿರೋಧಿ ಬಣಗಳಿಗೆ ಅಚ್ಚರಿಯನ್ನು ತರುವ ಹಾಗೆ ಅವರನ್ನು ಈ ಸರ್ವಜನರ ಸರ್ಕಾರವು ನಡೆಸಿಕೊಳ್ಳಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ… ವಿಧಾನಸಭೆಯ ಸಭಾಧ್ಯಕ್ಷರಾಗಿ … ಮುಖ್ಯಮಂತ್ರಿಯಾಗಿ… ಸಚಿವರಾಗಿ ಕೆಲಸ ಮಾಡಿದ ಜಗದೀಶ್ ಶೆಟ್ಟರ್, ಒಟ್ಟು 6 ಬಾರಿ ಶಾಸಕರಾಗಿ ಹುಬ್ಬಳ್ಳಿ-ಧಾರವಾಡದ ಜನತೆಗೆ ಮಾತ್ರವಲ್ಲದೇ ಇಡೀ ರಾಜ್ಯಕ್ಕೆ ತಮ್ಮಿಂದಾದ ಕೊಡುಗೆಯನ್ನು ನೀಡಿದ್ದಾರೆ. ವೃತ್ತಿಯಲ್ಲಿ ವಕೀಲರೂ ಆಗಿರುವ ಜಗದೀಶ್ ಶೆಟ್ಟರ್, ವಿಧಾನಸಭೆಯಲ್ಲಿ ಎಲ್ಲಾ ರೀತಿಯ ಜವಾಬ್ದಾರಿಗಳನ್ನು ನಿರ್ವಹಿಸಿದ ಅನುಭವಿಯಾಗಿದ್ದಾರೆ.

ಜಗದೀಶ್ ಶೆಟ್ಟರ್ ಅವರಿಗೆ ಈ ಸರ್ಕಾರವು ಸಭಾಧ್ಯಕ್ಷರ ಸ್ಥಾನವನ್ನು ನೀಡಿ, ಗೌರವಿಸಿದರೆ ಅದು ಉತ್ತಮವಾದ ಆಯ್ಕೆಯಾಗಿರುತ್ತದೆ ಎಂಬುದು ನಮ್ಮ ಅನಿಸಿಕೆ. ಸಭಾಧ್ಯಕ್ಷರ ಸ್ಥಾನವನ್ನು ಈ ಹಿಂದೆ ಅಲಂಕರಿಸಿದ ಅನುಭವವೂ ಅವರಿಗಿದೆ. ಮತ್ತು ವಿರೋಧ ಪಕ್ಷದ ಸಾಲಿನಲ್ಲಿ ಕೂರುವ ಬಿಜೆಪಿಯವರನ್ನು ಗದರಿಸಿ ಕೂರಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಿಕೊಡುವುದೇ ಈ ಸಂದರ್ಭದಲ್ಲಿ ಸೂಕ್ತವಾದ ನಿರ್ಧಾರವಾಗಿರುತ್ತದೆ. ಅವರನ್ನು ಸೋಲಿಸಲು ಟೊಂಕ ಕಟ್ಟಿ ನಿಂತ ಬಿಜೆಪಿಯ ಸದಸ್ಯರು, ವಿಧಾನಸಭೆಯಲ್ಲಿ  ಎದ್ದು ನಿಂತು “ಮಾನ್ಯ ಅಧ್ಯಕ್ಷರೇ” ಎಂದು ಅವರನ್ನು ಕರೆಯುಂವತೆ ಈ ಸರ್ಕಾರ ಮಾಡುವುದಾದರೆ, ಅದು ಈ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುಕೂಲವನ್ನು ತಂದು ಕೊಡುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.

ರಾಜಕೀಯ

“ಕಳಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ! ಮುನಿಯಬೇಡ ಅನ್ಯರಿಗೆ ಅಸಹ್ಯ ಪಡಬೇಡ! ತನ್ನ ಬಣ್ಣಿಸಬೇಡ ಇದಿರ ಹಳಿಯಲು ಬೇಡ! ಇದೇ ಅಂತರಂಗ ಶುದ್ದಿ ಇದೇ ಬಹಿರಂಗ ಶುದ್ದಿ! – ನರೇಂದ್ರ ಮೋದಿ ಅವರೇ ನಿಮ್ಮ ಇಂದಿನ ಭಾಷಣ ಕೇಳಿ ಬಸವಣ್ಣನವರ ಈ ವಚನ ನೆನಪಾಯಿತು. ಇದು ನಿಮ್ಮ ನಡೆ-ನುಡಿಗೆ ಹೇಳಿ ಮಾಡಿಸಿದಂತಿದೆ”. ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸರಣಿ ಟ್ವೀಟ್‌ಗಳನ್ನು ಹಾಕಿ ಪ್ರಧಾನಿ ನರೇಂದ್ರ ಮೋದಿಗೆ ಸರಿಯಾದ ಟಕ್ಕರ್ ನೀಡಿದ್ದಾರೆ.

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಕಾಲ, ಬಿಜೆಪಿ ಎಂದರೆ ಅಮೃತ ಕಾಲ ಎನ್ನುವ ಮೊದಲು ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ, ಅಲ್ಲಿರುವ ಅದಾನಿ, ಅಂಬಾನಿಗಳು ಕಾಣಲಿಲ್ಲವೇ? ನಿಮ್ಮ ಅಕ್ಕಪಕ್ಕದಲ್ಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಭ್ರಷ್ಟ ಮುಖಗಳೂ ಕಾಣಲಿಲ್ಲವೇ ನರೇಂದ್ರ ಮೋದಿ?

ಅದಾನಿ

ರಾಜ್ಯದ ಬಿಜೆಪಿ ಸಚಿವರ 40% ಕಮಿಷನ್ ಕಿರುಕಳದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ನಿಮ್ಮ ಕಾರ್ಯಾಲಯಕ್ಕೆ ಬರೆದ ಪತ್ರವೂ ನಿಮಗೆ ನೆನಪಾಗಲಿಲ್ಲವೇ? ನಿಮ್ಮದೇ ಸಚಿವರ ಕಿರುಕಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದ ನೆನಪೂ ನಿಮಗೆ ಆಗಲಿಲ್ಲವೇ? ಕಳೆದ ಮೂರುವರೆ ವರ್ಷಗಳಲ್ಲಿ ಒಂದೂವರೆ ಲಕ್ಷ ಕೋಟಿ ರೂಪಾಯಿಗಳನ್ನು ಲೂಟಿ ಹೊಡೆದಿರುವ ರಾಜ್ಯದ ಬಿಜೆಪಿ ಸಚಿವರಿಗೆ ಖಂಡಿತ ಇದು ಅಮೃತ ಕಾಲ. ಆದರೆ ನಿಮ್ಮಂತಹ ಭ್ರಷ್ಟರ ಸರ್ಕಾರ ಪಡೆದ ರಾಜ್ಯದ ಜನತೆಗೆ ಇದು ವಿಷಕಾಲ ನರೆಂದ್ರ ಮೋದಿ ಅವರೇ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ರಾಜ್ಯದ ಲಿಂಗಾಯತ ನಾಯಕರನ್ನು ಬಳಸಿ ಬಿಸಾಡುವ ನಿಮ್ಮ ಕುತಂತ್ರಿ ಬುದ್ದಿಯನ್ನು ರಾಜ್ಯದ ಲಿಂಗಾಯತರು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೆ. ನಿಮ್ಮ ಇಡೀ ಭಾಷದಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿ.ಎಸ್.ಯಡಿಯೂರಪ್ಪನವರ ಹೆಸರನ್ನು ಒಮ್ಮೆಯೂ ಎತ್ತಲಿಲ್ಲ ಯಾಕೆ? ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಕಾಲದಲ್ಲಿಯೇ ಬಿ.ಎಸ್.ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದಿರಿ, ಅವರನ್ನು ಎರಡೆರಡು ಬಾರಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದಿರಿ, ಅವರ ಮಗನಿಗೆ ಕನಿಷ್ಠ ಶಾಸಕನನ್ನಾಗಿ ಮಾಡಲಿಲ್ಲ, ಸಚಿವರನ್ನಾಗಿ ಮಾಡಲಿಲ್ಲ. ಈಗ ಐಟಿ, ಇಡಿ, ಸಿಬಿಐ ಮೂಲಕ ಬಾಯಿಮುಚ್ಚಿಸಿ ಕೂರಿಸಿರುವವರು ನೀವೇ ಅಲ್ಲವೇ ನರೇಂದ್ರ ಮೋದಿ ಅವರೇ?

ಬಿ.ಎಸ್.ಯಡಿಯೂರಪ್ಪ

ಲಿಂಗಾಯತ ಸಮುದಾಯದಲ್ಲಿ ಎರಡನೇ ತಲೆಮಾರಿನ ನಾಯಕರೇ ಇರಬಾರದೆಂದು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಸಂಜಯ ಪಾಟೀಲ್, ಸೊಗಡು ಶಿವಣ್ಣ ಹೀಗೆ ಸಾಲು ಸಾಲು ನಾಯಕರಿಗೆ ಈ ಬಾರಿ ಟಿಕೆಟ್ ನೀಡದೆ ಅವರ ರಾಜಕೀಯ ಜೀವನವನ್ನೇ ಮುಗಿಸುವ ಹುನ್ನಾರ ಮಾಡಿರುವವರು ನೀವೇ ಅಲ್ಲವೇ ನರೇಂದ್ರ ಮೋದಿ ಜೀ?

ಲಕ್ಷ್ಮಣ ಸವದಿ

ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಲಿಂಗಾಯತರ ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಯಾವ ಕಾರಣಕ್ಕೆ ಈ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದಿರಿ? ಅವರ ಮೇಲೆ ಭ್ರಷ್ಟಾಚಾರದ ಆರೋಪಗಳಿತ್ತಾ? ಸಿಡಿ ಹಗರಣ ಇತ್ತೇ? ಅವರು ಒಳ್ಳೆಯ ಆಡಳಿತಗಾರರರಾಗಿರಲಿಲ್ಲವೇ? ಯಾಕೆ ಅವರನ್ನು ಮೂಲೆಗೆ ತಳ್ಳಿದ್ದೀರಿ? ಅವರ ಈ ಪ್ರಶ್ನೆಗಳು ರಾಜ್ಯದ ಲಿಂಗಾಯತರ ಪ್ರಶ್ನೆಯೂ ಹೌದು. ಧಮ್-ತಾಕತ್ ಇದ್ದರೆ ಇದಕ್ಕೆ ಉತ್ತರ ಕೊಡಿ ನರೇಂದ್ರ ಮೋದಿ ಜೀ.

ಜಗದೀಶ್ ಶೆಟ್ಟರ್

ಬಂಜಾರ ಸಮುದಾಯ ಮತ್ತು ಕಾಂಗ್ರೆಸ್ ಸಂಬಂಧಕ್ಕೆ ಹುಳಿ ಹಿಂಡುವ ನಿಮ್ಮ ಕುತಂತ್ರ ಫಲ ನೀಡಲಾರದು. ಬಂಜಾರರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಿದ್ದು ಕಾಂಗ್ರೆಸ್ ಪಕ್ಷ. ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಭೂ ಸುಧಾರಣೆ ಕಾಯ್ದೆಗೆ ಕ್ರಾಂತಿಕಾರಿ ತಿದ್ದುಪಡಿಯನ್ನು ತಂದಿರುವುದು ರಾಜ್ಯದ ಕಾಂಗ್ರೆಸ್ ಸರ್ಕಾರ ಎನ್ನುವುದು ನಿಮಗೆ ತಿಳಿದಿಲ್ಲವೇ ನರೇಂದ್ರ ಮೋದಿ ಅವರೇ?

ಲಂಬಾಣಿ ತಾಂಡಾ

ನರೇಂದ್ರ ಮೋದಿಯವರೇ ನಿಮ್ಮ ಇಡೀ ರಾಜಕೀಯ ಬದುಕೇ ಒಂದು ಸುಳ್ಳಿನ ಕೋಟೆ. ಅದು ಮುರಿದು ಬೀಳುವ ಕಾಲ ಬಂದಿದೆ. ಕಾಂಗ್ರೆಸ್ ನಿಮ್ಮನ್ನು 91 ಬಾರಿ ನಿಂದಿಸಿದೆ ಎನ್ನುವುದು ನಿಮ್ಮ ಇತ್ತೀಚಿನ ಸುಳ್ಳು. ನಮ್ಮ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ನಿಂದಿಸುವುದೇ ನಿಮ್ಮ ಮತ್ತು ನಿಮ್ಮ ಪಕ್ಷದ ನಾಯಕರ ದಿನಚರಿ ಅಲ್ಲವೇ ನರೇಂದ್ರ ಮೋದಿ ಜೀ?

ಸೋನಿಯಾ ಗಾಂಧಿಯವರನ್ನು ಜರ್ಸಿ ಕೌ, ಬಾರ್ ಡಾನ್ಸರ್, ಕಾಂಗ್ರೆಸ್ ಕಿ ವಿಧವಾ ಇನ್ನೂ ಏನೇನೋ ಅಂದವರು ನೀವೇ ಅಲ್ಲವೇ? ನಿಮ್ಮದೇ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಿನ್ನೆ ತಾನೆ ಸೋನಿಯಾಗಾಂಧಿಯವರನ್ನು ವಿಷಕನ್ಯೆ ಎಂದು ಹೇಳಿಲ್ಲವೇ? ನಿಮ್ಮ ರಕ್ತದ ಕಣಕಣದಲ್ಲಿಯೂ ದ್ವೇಷಾಸೂಯ ವಿಷ ಇಲ್ಲವೇ ನರೇಂದ್ರ ಮೋದಿ?

ಸೋನಿಯಾ ಗಾಂಧಿ

ರಾಜ್ಯದ ಬಿಜೆಪಿ ಸರ್ಕಾರ 9 ಲಕ್ಷ ಮನೆಗಳನ್ನು ಕಟ್ಟಿದೆ ಎಂಬ ಹಸಿ ಹಸಿ ಸುಳ್ಳು ಹೇಳಿದ್ದಿರಲ್ಲಾ, ನಾವು ಕಟ್ಟಿರುವ ಮನೆಗಳ ಲೆಕ್ಕವನ್ನು ನಿಮಗೆ ಕೊಟ್ಟು ನಿಮ್ಮಿಂದ ಸುಳ್ಳು ಹೇಳಿಸಿದ ವಸತಿ ಸಚಿವರನ್ನು ಒಮ್ಮೆ ಜನರ ಮಧ್ಯೆ ಬಹಿರಂಗ ಚರ್ಚೆಗೆ ಕರೆತನ್ನಿ. ಇದು ನನ್ನ ಸವಾಲು ನರೇಂದ್ರ ಮೋದಿ.

2013-18ರ ಅವಧಿಯಲ್ಲಿ ರೈತರಿಗೆ ಕೊಟ್ಟ ಮಾತಿನಂತೆ 50 ಸಾವಿರ ಕೋಟಿಗೂ ಹೆಚ್ಚು ಹಣವನ್ನು ನೀರಾವರಿಗೆ ಖರ್ಚು ಮಾಡಿ ರೈತರ ಹೊಲಕ್ಕೆ ನೀರು ಹರಿಸಿದ ಹೆಮ್ಮೆ ನಮ್ಮದು. ಮೇಕೆದಾಟು, ಕಳಸ-ಬಂಡೂರಿ ಮತ್ತು ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳೆರಡೂ ನಿರ್ಲಕ್ಷಿಸುತ್ತಾ ಬಂದಿದೆ ಎನ್ನುವುದನ್ನು ರಾಜ್ಯದ ರೈತರಿಗೆ ಗೊತ್ತಿದೆ ನರೇಂದ್ರ ಮೋದಿ.

ಕಳಸ-ಬಂಡೂರಿ

ಕಮಿಷನ್ ನುಂಗುವ ಕರ್ನಾಟಕ ಬಿಜೆಪಿ ಸರ್ಕಾರದ ಚಾಳಿ ಮಠ-ಮಂದಿರಗಳನ್ನೂ ಬಿಟ್ಟಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತರ ಕರ್ನಾಟಕದ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದರೆ ಅದು ತಲುಪುವಾಗ ಕಡ್ಡಿ ಮಾತ್ರ ಉಳಿಯುತ್ತದೆ ಎಂದು ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿಗಳ ಆಕ್ರೋಶ ನಿಮಗೆ ಕೇಳಿಸಿಲ್ಲವೇ ನರೇಂದ್ರ ಮೋದಿ?

ವಿರೂಪಾಕ್ಷಪ್ಪ ಮಾಡಾಳ್

ನಿಮ್ಮದೇ ಪಕ್ಷದ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಮತ್ತು ಅವರ ಮಗ ಈಗ ಜೈಲಲ್ಲಿರುವುದು ಯಾವ ದೇಶ ಸೇವೆ ಮಾಡಿದ್ದಕ್ಕಾಗಿ ಮೋದಿಯವರೇ? ಪ್ರತಿಷ್ಠಿತ ಕೆಎಸ್ ಡಿಸಿಎಎಲ್ ಕಚೇರಿಯಲ್ಲಿಯೇ ಈ ಶಾಸಕರ ಮಗ ಲಂಚ ತಿನ್ನುವಾಗ ಲೋಕಾಯುಕ್ತರ ಕೈಗೆ ಸಿಕ್ಕಿ ಬಿದ್ದಿದ್ದನ್ನಲ್ಲಾ? ವಿರೂಪಾಕ್ಷಪ್ಪ ಮಾಡಾಳ್ ಮನೆಯಲ್ಲಿ ಎಂಟುವರೆ ಕೋಟಿ ಹಣವನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದರಲ್ಲಾ ಅದೇನು ಅವರು ಬೆಳೆದ ಅಡಿಕೆ ಮಾರಾಟದ ದುಡ್ಡೇ ಮೋದಿ? ಎಂದು ಪ್ರಶ್ನೆಗಳನ್ನು ಕೇಳುವ ಮೂಲಕ ಬಿಜೆಪಿಯ ಭ್ರಷ್ಟಾಚಾರ, ಆಡಳಿತ ವೈಫಲ್ಯ, ದ್ವೇಷಾಸೂಯ ರಾಜಕಾರಣದ ಬಗ್ಗೆ ಕಿಡಿ ಕಾರಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

‘ನಾನು ನಿನಗೆ ಫೋನ್ ಮಾಡುತ್ತೇನೆ, ನೀನು ನನ್ನ ಜೊತೆ ಮಾತನಾಡುವುದನ್ನು ಪಕ್ಕದಿಂದ ವಿಡಿಯೋ ಮಾಡಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡು’ ಎಂದು ಹೇಳಿ ಮಾಡಿಸಿದಂಗಿದೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನ ‘ಫೋನ್ ಕಾಲ್ ಸ್ಕ್ರಿಫ್ಟ್’. ಒಬ್ಬ ಮಾಜಿ ಸಚಿವರಿಗೆ ದೇಶದ ಪ್ರಧಾನಿಗಳು ಫೋನ್ ಮಾಡಿ ಮಾತನಾಡುವುದು ಸಂತೋಷ. ಆದರೆ ಅದನ್ನು ವಿಡಿಯೋ ಮಾಡಿಸಿ ಪ್ರಚಾರಕ್ಕೆ ಬಳಸುತ್ತಿರುವುದು ವಿವಾದಕ್ಕೆ ಎಡೆಮಾಡಿಕೊಡುತ್ತಿದೆ.

‘ಎಷ್ಟು ಹೋಡೆದರೂ ಈಶ್ವರಪ್ಪ ಸಹಿಸಿಕೊಳ್ಳುತ್ತಾನೆ; ಆತ ತುಂಬ ಒಳ್ಳೆಯವ ಎಂಬುದಕ್ಕಾಗಿಯೇ ಪ್ರಧಾನಿಗಳು ಈಶ್ವರಪ್ಪನಿಗೆ ಫೋನ್ ಮಾಡಿ ಸಮಾದಾನ ಮಾಡುತ್ತಿದ್ದಾರೆ’ ಎಂದು ವಿರೋಧ ಪಕ್ಷದ ಕಾರ್ಯಕರ್ತರು ಬೀದಿಗಳಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಅದುಮಾತ್ರವಲ್ಲ, ‘ಸಂತೋಷ್ ಪಾಟೀಲ ಆತ್ಮಹತ್ಯೆ ವಿಚಾರದಲ್ಲಿ ಕಮಿಷನ್ ಆರೋಪ ಹೊತ್ತಿರುವ ಈಶ್ವರಪ್ಪಗೆ ಪ್ರಧಾನಿ ಮೋದಿ ಕರೆ ಮಾಡಿ ಶ್ಲಾಗಿಸಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿ ಆರೋಪಿಸಿದೆ.

ಮುಂದಿನ ದಿನಗಳಲ್ಲಿ ಪಕ್ಷವು ಈಶ್ವರಪ್ಪ ಅವರಿಗೆ ಉನ್ನತ ಸ್ಥಾನಗಳನ್ನು ನೀಡಲಿದೆಯಂತೆ. ಈ ಬಾರಿ ಪಕ್ಷವು ಅವರಿಗೆ ಟಿಕೆಟ್ ನೀಡಲಿಲ್ಲ; ಅದಕ್ಕೆ ಎರಡು ಕಾರಣಗಳಿವೆ. ಒಂದು ವಯಸ್ಸು ಮತ್ತೊಂದು ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ್ದು. ಇದನ್ನು ಮೊದಲೇ ಊಹಿಸಿದ್ದ ಅನುಭವಿ ಈಶ್ವರಪ್ಪ, ಟಿಕೆಟ್ ಘೋಷಣೆಯ ಒಂದು ದಿನದ ಮೊದಲೇ ನಿವೃತ್ತಿಯ ಘೋಷಣೆ ಮಾಡಿ, ಜಾನ್ಮೆಯನ್ನು ಪ್ರದರ್ಶಿಸಿದರು. ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು ಮುಂದಿನ ತಲೆಮಾರುಗಳಿಗೆ ಅವಕಾಶ ಮಾಡಿಕೊಟ್ಟ ಈಶ್ವರಪ್ಪ ಅವರನ್ನು ಮಾದರಿ ನಾಯಕರೆಂದು ಬಿಜೆಪಿ ವರಿಷ್ಠರು ಹಾಡಿ ಹೊಗಳಿದರು.

ಲಕ್ಷ್ಮಣ ಸವದಿ

ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಹಿರಿಯ ನಾಯಕರು, ಬಿಜೆಪಿಯ ವಿರುದ್ಧ ಬಂಡಾಯ ಏಳಲಿದ್ದಾರೆ ಎಂಬುದನ್ನು ಮೊದಲೇ ತಿಳಿದುಕೊಂಡಿದ್ದ ಬಿಜೆಪಿಯವರನ್ನು ಈಶ್ವರಪ್ಪನ ನಿವೃತ್ತಿಯ ಘೋಷಣೆ ಹಾದಿ ತಪ್ಪಿಸುವಂತೆ ಮಾಡಿತು. ಇವರಂತೆಯೇ ಎಲ್ಲರೂ ನಿವೃತ್ತಿಯನ್ನು ಘೋಷಣೆ ಮಾಡುತ್ತಾರೆ ಅಥವಾ ಬಂಡಾಯ ಏಳದೆ ಸುಮ್ಮನಿರುತ್ತಾರೆ ಎಂದು ತಪ್ಪಾಗಿ ಅರ್ಥೈಸಿಕೊಂಡ ಕಮಲದ ವರಿಷ್ಠರು, ಹಿರಿಯ ನಾಯಕರಿಗೆ ಟಿಕೆಟ್ ನಿರಾಕರಿಸಿ ಪಟ್ಟಿಗಳನ್ನು ಬಿಡುಗಡೆ ಮಾಡುತ್ತಾ ಹೋದಂತೆ ಬಂಡಾಯದ ಬಿಸಿ ಕಮಲ ಪಕ್ಷದ ಅಸ್ತಿತ್ವನ್ನೇ ಅಲುಗಾಡಿಸುವಂತೆ ಮಾಡಿತು. ದೊಡ್ಡಮಟ್ಟದ ಬಂಡಾಯವನ್ನು ಸ್ವಲ್ಪವೂ ನಿರೀಕ್ಷಿಸದ ಬಿಜೆಪಿಗರಿಗೆ, ಈಶ್ವರಪ್ಪನ ನಿವೃತ್ತಿ ಘೋಷಣೆಯೇ ದಾರಿ ತಪ್ಪಿಸುವಂತೆ ಮಾಡಿದ್ದು. ಇಲ್ಲದಿದ್ದರೆ ಮೊದಲೇ ಹಿರಿಯ ನಾಯಕರ ಬಂಡಾಯಕ್ಕೆ ತೇಪೆ ಹಚ್ಚಿ ಶಮನಗೊಳಿಸುತ್ತಿದ್ದರು. ಬಂಡಾಯವು ಇಷ್ಟರಮಟ್ಟಿಗೆ ತೀವ್ರತೆಯನ್ನು ಪಡೆಯುತ್ತಿರಲಿಲ್ಲ. ಪ್ರಧಾನಿ ಮೋದಿಯವರು, ಈಶ್ವರಪ್ಪಗೆ ಫೋನ್ ಮಾಡಿ ಮಾತನಾಡಿದಂತೆ, ಸಮಯ ಕೊಟ್ಟು ಕಾಯುತ್ತಿದ್ದ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಮುಂತಾದ ಹಿರಿಯ ನಾಯಕರ ಜೊತೆಯಲ್ಲಿ ಮೊದಲೇ ಮಾತನಾಡಿದ್ದರೆ ಇಂತಹ ಬಂಡಾಯವನ್ನು ತಡೆಯಬಹುದಿತ್ತು.

ಜಗದೀಶ್ ಶೆಟ್ಟರ್

ಮಾಜಿ ಸಚಿವ ಈಶ್ವರಪ್ಪ ಅವರ ನಿವೃತ್ತಿ ಘೋಷಣೆಯು ತ್ಯಾಗವೇನಲ್ಲ. ಅವರ ನಿವೃತ್ತಿ ಘೋಷಣೆಯಲ್ಲಿ ಸ್ವಾರ್ಥವೂ ಅಡಗಿದೆ. ಅದು ತನ್ನ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಪಡೆಯುವುದು. ‘ಎಷ್ಟು ಹೋಡೆದರೂ ಈಶ್ವರಪ್ಪ ಸಹಿಸಿಕೊಳ್ಳುತ್ತಾನೆ’ ಎಂಬ ಗುಟ್ಟನ್ನು ತಿಳಿದುಕೊಂಡ ಬಿಜೆಪಿ ವರಿಷ್ಠರು ಕೊನೆ ಗಳಿಗೆಯಲ್ಲಿ ಅವರ ಪುತ್ರನಿಗೂ ಟಿಕೆಟ್ ಕೊಡದೆ, ಚನ್ನಬಸಪ್ಪ ಅವರಿಗೆ ಟಿಕೆಟ್ ಘೋಷಣೆ ಮಾಡಿದರು. ಇದರಿಂದ ಈಶ್ವರಪ್ಪ ಮತ್ತು ಆತನ ಪುತ್ರ ಕಾಂತೇಶ್ ಅವರ ಭವಿಷ್ಯಕ್ಕೆ ದಿಕ್ಕು ಇಲ್ಲದಂತೆ ಆಯಿತು. ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯು ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಜೀವನ್ಮರಣ ಹೋರಾಟವಾಗಿದೆ. ಕರ್ನಾಟಕದಲ್ಲಿ ಸೋಲು ಗೆಲುವನ್ನು ನೋಡಿಕೊಂಡು ಮುಂದೆ ನಡೆಯಲಿರುವ ನಾಲ್ಕು ರಾಜ್ಯಗಳ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಕಾರ್ಯಕ್ಕೆ ಬಿಜೆಪಿ ವರಿಷ್ಠರು ಮುಂದಾಗಬೇಕು. ಅದಾದನಂತರ 2024ರ ಸಂಸತ್ ಚುನಾವಣೆಯನ್ನು ಎದುರಿಸಬೇಕು. ಇದರ ಮಧ್ಯೆ ಬಿಜೆಪಿ ಪಕ್ಷವು ಈಶ್ವರಪ್ಪನನ್ನು ನೆನೆಪು ಮಾಡಿಕೊಳ್ಳುವುದು ಹೇಗೆ?

ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಸಚಿವ ಈಶ್ವರಪ್ಪಗೆ ಕಾಲ್ ಮಾಡಿ ಮಾತನಾಡಿರುವುದು ಎಲ್ಲಡೆ ಸುದ್ಧಿಯಾಗಿದೆ. ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿಗಳು ಈಶ್ವರಪ್ಪಗೆ ಫೋನ್ ಮಾಡಿ ಮಾತನಾಡಿರುವುದು ಎರಡು ಸೂಚನೆಗಳನ್ನು ನೀಡುತ್ತದೆ. ಮೊದಲನೆಯದು ಪಕ್ಷದಲ್ಲಿ ಏನೇ ತೀರ್ಮಾನವಾದರೂ ಅದನ್ನು ಅರಗಿಸಿಕೊಂಡು, ಸ್ವಾಭಿಮಾನದ ಬಗ್ಗೆ ತಲೆಕೆಡೆಸಿಕೊಳ್ಳದೇ ಹಿಂದುಳಿದ ವರ್ಗಗಳ ನಾಯಕರುಗಳು ತಮ್ಮ ಇತಿಮಿತಿಯಲ್ಲಿ ಯೋಚಿಸಿ ಸುಮ್ಮನಿದ್ದರೆ ಇಲ್ಲಿ (ಬಿಜೆಪಿಯಲ್ಲಿ) ಅಧಿಕಾರ ಸಿಗುತ್ತದೆ. ಪ್ರತಿಷ್ಠೆಯ ಚುನಾವಣೆ ಇದಾಗಿರುವುದರಿಂದ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಮತ್ತೆ ಬಂಡಾಯವೆದ್ದು ಪಕ್ಷಾಂತರ ಮಾಡಿ, ಇರಿಸುಮುರಿಸು ಮಾಡಲು ಯೋಚಿಸುತ್ತಿರುವ ಮತ್ತೊಂದು ಹಂತದ ನಾಯಕರುಗಳಿಗೆ ಅಧಿಕಾರದ ಆಸೆಯನ್ನು ತೋರಿಸಿ, ಅವರನ್ನು ಪಕ್ಷದಲ್ಲೇ ಕಟ್ಟಿಹಾಕುವುದು ಇವರ ಎರಡನೆಯ ಉದ್ದೇಶವಾಗಿದೆ.

ರಾಜಕೀಯ

ಬೆಂಗಳೂರು: ಪುದುಚೇರಿ ಒಳಗೊಂಡಂತೆ 6 ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಮುಖ್ಯಮಂತ್ರಿಯಿರುವ ಏಕೈಕ ರಾಜ್ಯವೆಂದರೆ ಅದು ಕರ್ನಾಟಕ. ಬಹುಶಃ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಸೋತರೆ ಆ ಪಕ್ಷಕ್ಕೆ ದಕ್ಷಿಣ ಭಾರತದ ಬಾಗಿಲು ಸಂಪೂರ್ಣವಾಗಿ ಮುಚ್ಚಲಿದೆ. ಒಂದು ದೇಶವನ್ನು ಆಳುವ ಪಕ್ಷ; ವಿಶ್ವದ ಅತಿ ದೊಡ್ಡ ಸದಸ್ಯತ್ವ ಹೊಂದಿರುವ ಪಕ್ಷ; ದೇಶದ ಒಂದು ದೊಡ್ಡ ಭೂಪ್ರದೇಶದಲ್ಲಿ ಪ್ರಾತಿನಿಧ್ಯವನ್ನು ಕಳೆದುಕೊಳ್ಳುವುದು ಆ ಪಕ್ಷಕ್ಕೆ ಕಹಿ ದುಃಸ್ವಪ್ನವಾಗಿ ಇರುತ್ತದೆ.

ಲಿಂಗಾಯತ ಸೇರಿದಂತೆ ಪ್ರಮುಖ ವೋಟ್ ಬ್ಯಾಂಕ್ ಸಮುದಾಯಗಳು ಬಿಜೆಪಿಯಿಂದ ದೂರ ಸರಿಯುತ್ತಿರುವುದು, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೇರಿದಂತೆ ಪ್ರಮುಖ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುತ್ತಿರುವುದು, ನಂದಿನಿ ಹಾಲಿನ ವಿಚಾರ, ಮುಸ್ಲಿಮರಿಗೆ ಶೇಕಡಾ 4% ಮೀಸಲಾತಿ ರದ್ದು ಮುಂತಾದ ವಿಷಯಗಳು ಬಿಜೆಪಿಗೆ ಚುನಾವಣೆಯ ಸಂದರ್ಭದಲ್ಲಿ ಬಾರಿ ಬಿಕ್ಕಟ್ಟನ್ನು ನೀಡುತ್ತವೆ ಎಂದು ನಿರೀಕ್ಷೆ ಮಾಡುತ್ತಿರುವ ಸಂದರ್ಭದಲ್ಲಿ, ಇವುಗಳನ್ನು ಹತ್ತಿಕ್ಕಲು ಬಿಜೆಪಿಯೂ ಪರ್ಯಾಯ ಚಿಂತನೆಗಳನ್ನು ಮುಂದಿಟ್ಟಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಸರಿ ಒಂದುವೇಳೆ ಚುನಾವಣೆಯಲ್ಲಿ ಸೋತರೆ ಕೆಲವು ಕ್ರಿಯಾಶೀಲ ನಿರ್ಧಾರಗಳನ್ನು ತೆಗೆದುಕೊಳ್ಳಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ದೆಹಲಿ ಬಿಜೆಪಿ ಮೂಲಗಳು ಹೇಳುತ್ತವೆ. ಒಟ್ಟಾರೆಯಾಗಿ ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯು ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಜೀವನ್ಮರಣ ಪರಿಸ್ಥಿತಿಯೇ?