ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಜಯರಾಮ್ ರಮೇಶ್ Archives » Dynamic Leader
October 16, 2024
Home Posts tagged ಜಯರಾಮ್ ರಮೇಶ್
ರಾಜಕೀಯ

ಹರಿಯಾಣ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ; ಇದು ಒಳಸಂಚಿಗೆ ಸಂದ ಜಯ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ನವದೆಹಲಿ: ಹರಿಯಾಣದಲ್ಲಿ ಒಂದೇ ಹಂತದಲ್ಲಿ ಕಳೆದ 5 ರಂದು ನಡೆದ ಚುನಾವಣೆಯ ಮತಗಳನ್ನು ಇಂದು ಎಣಿಕೆ ಮಾಡಲಾಗುತ್ತಿದೆ. ಅಲ್ಲಿನ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್‌ಗೆ ಸರ್ಕಾರ ರಚಿಸಲು ಹೆಚ್ಚಿನ ಅವಕಾಶವಿದೆ ಎಂದು ಹೇಳಿತ್ತು. ಆದರೆ, ಈಗ ಅಲ್ಲಿನ ದೃಶ್ಯಗಳು ಬದಲಾಗಿವೆ.

90 ಕ್ಷೇತ್ರಗಳನ್ನು ಹೊಂದಿರುವ ಹರಿಯಾಣದಲ್ಲಿ ಸರ್ಕಾರ ರಚಿಸಲು 46 ಕ್ಷೇತ್ರಗಳ ಅಗತ್ಯವಿದೆ. ಪ್ರಸ್ತುತ ಅಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ, 37 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಬಹುತೇಕ ಬಿಜೆಪಿ ಹರಿಯಾಣದಲ್ಲಿ ಸರ್ಕಾರ ರಚನೆ ಖಚಿತ ಎಂದು ಆ ಪಕ್ಷದವರು ಹೇಳುತ್ತಿದ್ದಾರೆ.

ಈ ಬಾರಿ ಬಿಜೆಪಿ ಹರಿಯಾಣದಲ್ಲಿ ಸರ್ಕಾರ ರಚಿಸಿದರೆ ಅದು ಐತಿಹಾಸಿಕ ಸಾಧನೆಯಾಗಲಿದೆ. ಇದರ ಪ್ರಕಾರ ಬಿಜೆಪಿ ಸತತ ಮೂರನೇ ಬಾರಿಗೆ ಸರ್ಕಾರ ರಚಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ, “ಹರಿಯಾಣ ಚುನಾವಣಾ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ; ಇದು ಒಳಸಂಚಿಗೆ ಸಂದ ಜಯ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹರಿಯಾಣ ಚುನಾವಣಾ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇದು ಒಳಸಂಚಿಗೆ ಸಂದ ಜಯ. ಇದು ಮೂಲಭೂತ ವಾಸ್ತವಕ್ಕೆ ವಿರುದ್ಧವಾಗಿದೆ. ಚುನಾವಣಾ ಫಲಿತಾಂಶ ರಾಜ್ಯದ ಜನತೆಯ ಇಚ್ಛೆಗೆ ವಿರುದ್ಧವಾಗಿದೆ. ಹರಿಯಾಣದ 3 ಜಿಲ್ಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ದೂರುಗಳು ಬಂದಿವೆ. ಇದು ಪಾರದರ್ಶಕ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳ ವೈಫಲ್ಯ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ರಾಜಕೀಯ

ನವದೆಹಲಿ: ಜೂನ್ 4ರ ನಂತರ ಮೋದಿ ಮಾಜಿ ಪ್ರಧಾನಿಯಾಗಲಿದ್ದಾರೆ. ಜನರು ಅವರನ್ನು ಅಧಿಕಾರದಿಂದ ಹೊರಹಾಕುತ್ತಾರೆ ಎಂಬುದು ಅವರಿಗೂ (ಮೋದಿ) ತಿಳಿದಿದೆ. 1984 ರಿಂದ ನಾವು ಗೆಲ್ಲದ ಕ್ಷೇತ್ರದಲ್ಲೂ ಬಿಜೆಪಿ ಹೆಣಗಾಡುತ್ತಿದೆ ಎಂದು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಈ ಸಂಬಂಧ ಜೈರಾಮ್ ರಮೇಶ್ ಅವರು ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ, ಲೋಕಸಭೆ ಚುನಾವಣೆಯ ಮೊದಲ ಹಂತದ ನಂತರ, ಇಂಡಿಯಾ ಮೈತ್ರಿಕೂಟವು ಬಹುಮತದ ಸ್ಥಾನಗಳನ್ನು ಪಡೆಯುತ್ತದೆ ಎಂಬುದು ಸ್ಪಷ್ಟವಾಯಿತು. ಇಂದು ನಡೆಯುತ್ತಿರುವ 3ನೇ ಹಂತದ ಚುನಾವಣೆಯ ನಂತರವೂ ಇದೇ ಪರಿಸ್ಥಿತಿ ಇರಲಿದೆ.

1984ರ ನಂತರ ನಾವು ಗುಜರಾತ್‌ನ ಸೂರತ್‌ ಕ್ಷೇತ್ರದಿಂದ ಗೆದ್ದಿಲ್ಲ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆದರಿಕೆ ಹಾಕಿ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರವನ್ನೂ ಹಿಂಪಡೆಯಲಾಗಿದೆ. 1984 ರಿಂದ ನಾವು ಗೆಲ್ಲದಿದ್ದರೂ ಅವರು ಗೆಲ್ಲಲು ಹೆಣಗಾಡುತ್ತಿದ್ದಾರೆ; ಅದಕ್ಕೆ ಈ ಅಡ್ಡದಾರಿಯನ್ನು ಆಯ್ಕೆಮಾಡಿಕೊಂಡರು. ಇದುವೇ ಅಲ್ಲಿನ ವಾಸ್ಥವಾಂಶ.

ಜೂನ್ 4ರ ನಂತರ ಮೋದಿ ಮಾಜಿ ಪ್ರಧಾನಿಯಾಗಲಿದ್ದಾರೆ. ಜನರು ಅವರನ್ನು ಅಧಿಕಾರದಿಂದ ಹೊರಹಾಕುತ್ತಾರೆ ಎಂಬುದು ಅವರಿಗೂ (ಮೋದಿ) ತಿಳಿದಿದೆ. ಜೂನ್ 4ರ ನಂತರ ಅವರು ಪ್ರಧಾನಿಯಾಗುವುದಿಲ್ಲವಾದ್ದರಿಂದ, ಈಗ ಅವರು ಆರಾಮವಾಗಿ ಕಚೇರಿಯಲ್ಲಿ ಕುಳಿತುಕೊಳ್ಳಲಿ ಎಂದು ಅವರು ಹೇಳಿದ್ದಾರೆ.

ದೇಶ ವಿದೇಶ

ಡಿ.ಸಿ.ಪ್ರಕಾಶ್, ಸಂಪಾದಕರು

ಮುಂದಿನ ವರ್ಷ ನಡೆಯಲಿರುವ ಸಂಸತ್ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಸಕ್ರಿಯವಾಗಿ ಕೆಲಸ ಮಾಡುತ್ತಿವೆ. ಅದರ ಭಾಗವಾಗಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ, ಸಂಸದ ರಾಹುಲ್‌ಗಾಂಧಿ ಅವರು ಭಾರತ್ ಜೋಡೊ ಯಾತ್ರೆಯ ಹೆಸರಿನಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಕೈಗೊಂಡು ದೇಶದ ಜನರನ್ನು ಭೇಟಿ ಮಾಡಿ ಅವರ ಅಹವಾಲು ಆಲಿಸಿದರು. ಈ ಏಕತಾ ಯಾತ್ರೆಗೆ ಜನ ಅದ್ಧೂರಿ ಸ್ವಾಗತ ನೀಡಿದ್ದರು.

ಏಕತಾ ಯಾತ್ರೆ ಮುಗಿಸಿ ಇಂಗ್ಲೆಂಡ್ ರಾಜಧಾನಿ ಲಂಡನ್ ಗೆ ತೆರಳಿದ ರಾಹುಲ್ ಗಾಂಧಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಹಾಗೂ ಅಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ರಾಹುಲ್ ಭಾಗವಹಿಸುತ್ತಿದ್ದಾರೆ. ಲಂಡನ್ ನಲ್ಲಿ ಮಾತನಾಡಿದ ರಾಹುಲ್ ಗಾಂಧಿ, ‘ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ. ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷ ನಾಯಕರ ಮೇಲೆ ನಿಗಾ ಇಡಲಾಗುತ್ತಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಿದೆ. ಇದೇ ವೇಳೆ ಬೆಲೆಯೂ ಏರಿಕೆಯಾಗಿದೆ. ಭಾರತದ ಸಂಪೂರ್ಣ ಆರ್ಥಿಕತೆಯನ್ನು ಒಬ್ಬರು ಅಥವಾ ಇಬ್ಬರು ನಿಯಂತ್ರಿಸುತ್ತಿದ್ದಾರೆ. ಹಾಗಾಗಿ ಜನರು ತಮ್ಮ ಆರ್ಥಿಕತೆಯನ್ನು ಕಳೆದುಕೊಂಡಿದ್ದಾರೆ. ಅಮೆರಿಕ, ಭಾರತದಂತಹ ಪ್ರಜಾಸತ್ತಾತ್ಮಕ ರಾಷ್ಟ್ರಗಳ ಉತ್ಪಾದನೆ ಕುಸಿದು ಚೀನಾಕ್ಕೆ ಸ್ಥಳಾಂತರವಾಗುತ್ತಿದೆ’ ಎಂದು ಹಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

Kiran Rijiju

ಇದರಿಂದ ಕೆಂಡಾಮಂಡಲರಾದ ಬಿಜೆಪಿ ಸದಸ್ಯರು ‘ರಾಹುಲ್ ಗಾಂಧಿ ವಿಶ್ವಮಟ್ಟದಲ್ಲಿ ಭಾರತದ ಕೀರ್ತಿಯನ್ನು ಕೆಡಿಸಿದ್ದಾರೆ’ ಎಂದು ತೀವ್ರ ಟೀಕೆ ಮಾಡುತ್ತಿದ್ದಾರೆ. ಈ ಸಂಬಂಧ ಕೇಂದ್ರ ಕಾನೂನು ಸಚಿವ ರಿಜಿಜು ಮಾತನಾಡಿ, ರಾಹುಲ್ ಗಾಂಧಿಯ ಹೆಸರು ಹೇಳದೆ, ‘ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರತಿಷ್ಠೆಗೆ ಮಸಿ ಬಳಿಯುವ ಉದ್ದೇಶದಿಂದ ಕೆಲವರು ದೇಶದ ಪ್ರಜಾಪ್ರಭುತ್ವದ ಬಗ್ಗೆ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಆದರೆ ಈ ಪ್ರಯತ್ನ ಎಂದಿಗೂ ಯಶಸ್ವಿಯಾಗುವುದಿಲ್ಲ. ಅಮೆರಿಕ ಬಹುಶಃ ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವವಾಗಿದೆ. ಆದರೆ ಭಾರತವು ಪ್ರಜಾಪ್ರಭುತ್ವದ ತಾಯಿನಾಡು. ನ್ಯಾಯಾಲಯಗಳು ವಿರೋಧ ಪಕ್ಷಗಳಂತೆ ವರ್ತಿಸಬೇಕು ಎಂದು ಅವರು ಭಾವಿಸುತ್ತಿದ್ದಾರೆ. ಅವರು ಸರ್ಕಾರದ ವಿರುದ್ಧ ಮತ್ತು ಅವರ ಪರವಾಗಿ ತೀರ್ಪುಗಳನ್ನು ಬಯಸುತ್ತಿದ್ದಾರೆ. ಆದರೆ ಅದು ಆಗದ ಕಾರಣದಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿರುದ್ಧ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ’ ಎಂದು ತೀವ್ರವಾಗಿ ಟೀಕಿಸಿದ್ದರು.

Jayaram Ramesh

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಯರಾಮ್ ರಮೇಶ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಇದಕ್ಕೆ ವಿವರಣೆ ನೀಡಿದ್ದಾರೆ: ‘ರಾಹುಲ್ ಗಾಂಧಿ ಅವರು ಚೀನಾದಂತಹ ರಾಜ್ಯ-ನಿಯಂತ್ರಿತ ಉದ್ಯಮ ವ್ಯವಸ್ಥೆಯ ನಡುವಿನ ಪ್ರಮುಖ ವ್ಯತ್ಯಾಸಗಳನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ ಮತ್ತು ಭಾರತದಂತಹ ಪ್ರಜಾಪ್ರಭುತ್ವ ದೇಶಗಳಲ್ಲಿ ಉತ್ಪಾದನಾ ಸಾಧನಗಳನ್ನು ಗರಿಷ್ಠಗೊಳಿಸಲು ಒತ್ತು ನೀಡುವ ಅವಶ್ಯಕತೆಯಿದೆ. ಬಿಜೆಪಿಯವರಿಗೆ ಆ ಮಾತಿನ ಸೂಕ್ಷ್ಮತೆ ಅರ್ಥವಾಗುತ್ತಿಲ್ಲ’ ಎಂದರು. ಇದೇ ವೇಳೆ ರಾಹುಲ್ ಭಾಷಣಕ್ಕೆ ಹಲವರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

Anyone who tries to discredit India will never succeed: Kiren Rijiju
The comments come in wake of the ruling BJP attacking Congress leader Rahul Gandhi and accusing him of attempting to defame and denigrate India on foreign soil after the latter’s speech at Cambridge. Union minister of law Kiren Rijiju on Monday said that anyone who attempts to discredit India and its institution will never succeed.