ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಡೈನಾಮಿಕ್ ಲೀಡರ್ Archives » Dynamic Leader
October 23, 2024
Home Posts tagged ಡೈನಾಮಿಕ್ ಲೀಡರ್
ರಾಜಕೀಯ

ನವದೆಹಲಿ: “ಬಿಜೆಪಿಯ ಕ್ಷಣಗಣನೆ ಆರಂಭವಾಗಿದೆ. ಎಲ್ಲ ರಾಜ್ಯಗಳ ಚುನಾವಣೆಯಲ್ಲೂ ಸೋಲು ಕಾಣಲಿದೆ” ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯೋಗವು ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕವನ್ನು ಮರು ನಿಗದಿಪಡಿಸಿದೆ. ಅದರಂತೆ ಅಕ್ಟೋಬರ್ 1ರ ಬದಲಾಗಿ ಅಕ್ಟೋಬರ್ 5 ರಂದು ಅಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಆಮ್ ಆದ್ಮಿ ಪಕ್ಷವು ಹರಿಯಾಣದ ಎಲ್ಲಾ ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿದೆ.

ಈ ಹಿನ್ನೆಲೆಯಲ್ಲಿ, ಪಕ್ಷದ ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿದ್ದಾರೆ. “ಬಿಜೆಪಿಯ ಕ್ಷಣಗಣನೆ ಶುರುವಾಗಿದೆ. ಘೋಷಿಸಿದ ಎಲ್ಲಾ ಚುನಾವಣೆಗಳಲ್ಲೂ ಸೋಲುತ್ತದೆ. ಜನರು ತಮ್ಮನ್ನು ತಿರಸ್ಕರಿಸುತ್ತಿದ್ದಾರೆ ಎಂಬುದನ್ನು ಲೋಕಸಭೆ ಚುನಾವಣೆ ಫಲಿತಾಂಶದಿಂದ ಬಿಜೆಪಿಗೆ ಗೊತ್ತಾಗಿದೆ.

ಮುಂದಿನ ದಿನಗಳಲ್ಲಿ ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ನವದೆಹಲಿ ಚುನಾವಣೆಗಳಲ್ಲಿ ಬಿಜೆಪಿ ಸೋಲುವುದು ಖಚಿತ. ಚುನಾವಣಾ ದಿನಾಂಕಗಳನ್ನು ಬದಲಾಯಿಸುವ ಮೂಲಕ ಗೆಲ್ಲಲು ಸಾಧ್ಯವಿಲ್ಲ. ದೇಶದಾದ್ಯಂತ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಹರಿಯಾಣದಲ್ಲಿ ಪ್ರಚಾರ ನಡೆಸಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ರಾಜಕೀಯ

ನವದೆಹಲಿ: ‘ರಾಹುಲ್ ಹೆಡ್‌ಲೈನ್ಸ್‌ (Headlines)ನಲ್ಲಿ ಸ್ಥಾನ ಪಡೆಯಲು ರಣತಂತ್ರ ರೂಪಿಸಿ ಮಾತನಾಡುತ್ತಿದ್ದಾರೆ’ ಎಂದು ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

ಇಂಗ್ಲಿಷ್ ಸುದ್ದಿ ವಾಹಿನಿಯೊಂದಕ್ಕೆ ಸ್ಮೃತಿ ಇರಾನಿ ನೀಡಿದ ಸಂದರ್ಶನ: ಚುನಾವಣೆ ಸಂದರ್ಭದಲ್ಲಿ ಜನರ ಮನಸ್ಸಿನಲ್ಲಿ ಸ್ಥಾನ ಪಡೆಯಲು ರಾಹುಲ್ ಆಗಾಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದರು. ಅದೊಂದು ಪ್ರಹಸನವಾಯಿತು. ಆ ತಂತ್ರ ಫಲಿಸದ ಕಾರಣ ಈಗ ಜಾತಿ ಸಮಸ್ಯೆ ಬಗ್ಗೆ ಮಾತನಾಡಲು ಶುರು ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲುವಿನ ರುಚಿ ಕಂಡಿದ್ದೇವೆ ಎಂದು ಭಾವಿಸಿರುವ ರಾಹುಲ್ ಈಗ ವಿಭಿನ್ನ ರಾಜಕೀಯ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ.

ಮಿಸ್ ಇಂಡಿಯಾ:
ಅವರು ಜಾತಿ ಗಣತಿ ಬಗ್ಗೆ ಮಾತನಾಡುತ್ತಾರೆ. ರಾಹುಲ್ ಅವರ ಜಾತಿ ರಾಜಕಾರಣ ಹೊಸ ತಂತ್ರ. ಮಿಸ್ ಇಂಡಿಯಾ ಸ್ಪರ್ಧೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರಿಗೆ ತಿಳಿದಿದೆ. ಆದರೂ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಮಾತುಗಳನ್ನು ಹೇಳುತ್ತಿದ್ದಾರೆ. ಏಕೆಂದರೆ ಇದು ಮುಖ್ಯಾಂಶಗಳನ್ನು (Headlines) ಪಡೆಯುತ್ತದೆ. ಇದೆಲ್ಲ ಗೊತ್ತಿದ್ದರೂ ಪ್ಲಾನ್ ಮಾಡಿ ಮಾಡುತ್ತಿದ್ದಾರೆ. ಈ ರೀತಿ ಸ್ಮೃತಿ ಇರಾನಿ ಹೇಳಿದ್ದಾರೆ.

ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ವಿರುದ್ಧ ಸ್ಮೃತಿ ಇರಾನಿ ಸೋತಿದ್ದರು. ಇದರಿಂದ ಮತ್ತೊಮ್ಮೆ ಸಚಿವೆಯಾಗುವ ಅವಕಾಶವನ್ನು ಕಳೆದುಕೊಂಡರು. 2019ರ ಚುನಾವಣೆಯಲ್ಲಿ ಸ್ಮೃತಿ ಇರಾನಿ ರಾಹುಲ್‌ ಗಾಂಧಿಯನ್ನು ಸೋಲಿಸಿ, ಜಯಗಳಿಸುವುದರ ಮೂಲಕ ಕೇಂದ್ರ ಸಚಿವೆಯಾದವರು ಎಂಬುದು ಗಮನಾರ್ಹ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಬಿಜೆಪಿ ಗೆಲ್ಲಬಹುದಾದ ಸ್ಥಾನಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಲಿದೆ; ಹಾಗಾಗಿ “ಇಂಡಿಯಾ” ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಇದೆ. ಆದರೆ, ಯಾರೇ ಅಧಿಕಾರಕ್ಕೆ ಬಂದರೂ ಕೊಟ್ಟ ಭರವಸೆಗಳನ್ನು ಈಡೇರಿಸಬೇಕು; ಮರೆಯಬಾರದು.

ಅಖಿಲ ಕಾಂಗ್ರೆಸ್ ಸಮಿತಿಯು ಚುನಾವಣಾ ಭರವಸೆಗಳನ್ನು ಸಿದ್ಧಪಡಿಸಲು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ದೇಶದೆಲ್ಲೆಡೆ ಸಂಚರಿಸಿ ಹಲವರಿಂದ ಸಲಹೆ ಪಡೆಯಲಾಯಿತು. ವೆಬ್‌ಸೈಟ್ ಮೂಲಕವೂ ಪ್ರತಿಕ್ರಿಯೆಗಳನ್ನು ಪಡೆಯಲಾಯಿತು. ಅದರ ಆಧಾರದ ಮೇಲೆ ಭರವಸೆಗಳನ್ನು ಸಿದ್ಧಪಡಿಸಿ ಮೊನ್ನೆ ಪ್ರಕಟಿಸಲಾಯಿತು.

ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಆಗ ಮಾತನಾಡಿದ ಪಿ.ಚಿದಂಬರಂ, “ಕಳೆದ 10 ವರ್ಷಗಳಲ್ಲಿ ಯಾರನೆಲ್ಲ ಹೊರಗಿಡಲಾಯಿತೋ ಅಂತಹವರಿಗೆಲ್ಲ ನ್ಯಾಯ ಕೊಡಿಸಲು ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ” ಎಂದರು.

ಪ್ರಣಾಳಿಕೆಯಲ್ಲಿ, ದೇಶಾದ್ಯಂತ ಸಾಮಾಜಿಕ-ಆರ್ಥಿಕ ಮತ್ತು ಜಾತಿವಾರು ಸಮೀಕ್ಷೆ ನಡೆಸಲಾಗುವುದು. ರಾಜ್ಯ ಸರ್ಕಾರಗಳು ಬಯಸಿದಲ್ಲಿ NEET, CUET ನಂತಹ ಪರೀಕ್ಷೆಗಳನ್ನು ನಡೆಸಿಕೊಳ್ಳಬಹುದು. ಪ್ರತಿ ಕುಟುಂಬದಲ್ಲಿ ಒಬ್ಬ ಮಹಿಳೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ ನೀಡಲಾಗುವುದು. ಎಲ್ಲ ಜಾತಿಗಳಿಗೂ ಶೇ.10ರಷ್ಟು ಮೀಸಲಾತಿಯನ್ನು ವಿಸ್ತರಿಸಲಾಗುವುದು. ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರಲಾಗುವುದು.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸಿದ ನಂತರವೇ ಜಾರಿಗೆ ತರಲಾಗುವುದು. 12ನೇ ತರಗತಿವರೆಗೆ ಕಡ್ಡಾಯ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು. ಒಂದು ದೇಶ, ಒಂದು ಚುನಾವಣಾ ವ್ಯವಸ್ಥೆಯನ್ನು ತರುವುದಿಲ್ಲ. ಚುನಾವಣಾ ಪತ್ರಗಳ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು. ಎಂ.ಎಸ್.ಸ್ವಾಮಿನಾಥನ್ ಅವರ ಶಿಫಾರಸ್ಸು ಜಾರಿಗೆ ತರಲಾಗುವುದು. ಸರ್ಕಾರಿ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಮನ್ನಾ ಮಾಡಲಾಗುವುದು.

ಪಾಂಡಿಚೇರಿಗೆ ರಾಜ್ಯ ಸ್ಥಾನಮಾನ ನೀಡಲಾಗುವುದು. ಮಾಧ್ಯಮ ಸ್ವಾತಂತ್ರ್ಯವನ್ನು ಮರುಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. 10 ವರ್ಷಗಳಲ್ಲಿ ಯಾವುದೇ ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಬಿಜೆಪಿ ಜಾರಿಗೊಳಿಸಿದ ಕಾನೂನುಗಳನ್ನು ವಿಶ್ಲೇಷಿಸಿ ಬದಲಾವಣೆಗಳನ್ನು ಮಾಡಲಾಗುವುದು. ನೋಟು ಅಮಾನ್ಯೀಕರಣ, ರಫೇಲ್ ಡೀಲ್, ಪೆಗಾಸಸ್ ಬೇಹುಗಾರಿಕೆ, ಚುನಾವಣಾ ಬಾಂಡ್ ಯೋಜನೆ ಕುರಿತು ತನಿಖೆ ನಡೆಸಲಾಗುವುದು. ಬಿಜೆಪಿ ಸೇರುವ ಮೂಲಕ ಕ್ರಿಮಿನಲ್ ಪ್ರಕರಣಗಳಿಂದ ಪಾರಾದವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲಾಗುವುದು.

ಜನರ ಆಹಾರ, ಉಡುಗೆ, ಪ್ರೇಮ ವಿವಾಹ ಮತ್ತು ಭಾರತದ ಯಾವುದೇ ಭಾಗದಲ್ಲಿ ಪ್ರಯಾಣ ಬೆಳಸಿ ವಾಸಿಸುವಂತಹ ಜನರ ವೈಯಕ್ತಿಕ ಸ್ವಾತಂತ್ರ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಸೇನಾ ನೇಮಕಾತಿಗಾಗಿ ‘ಅಗ್ನಿಪತ್’ ಯೋಜನೆಯನ್ನು ರದ್ದುಗೊಳಿಸಲಾಗುವುದು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ನೀಡಲಾಗುವ ವೇತನವನ್ನು ರೂ.400ಕ್ಕೆ ಹೆಚ್ಚಿಸಲಾಗುವುದು. ಚೀನಾ ಆಕ್ರಮಿಸಿಕೊಂಡಿರುವ ನಮ್ಮ ನೆಲದ ಭಾಗವನ್ನು ಪುನಃಸ್ಥಾಪಿಸಲು ಕ್ರಮ. ಜಮ್ಮು ಮತ್ತು ಕಾಶ್ಮೀರಕ್ಕೆ ತಕ್ಷಣವೇ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡಲಾಗುವುದು. ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು.

ಕಳೆದೆರಡು ಚುನಾವಣೆಗಳಲ್ಲಿ ಸೋತಿರುವ ಕಾಂಗ್ರೆಸ್‌ಗೆ ಈ ಭರವಸೆಗಳು ಫಲ ನೀಡುತ್ತವೆಯೇ?
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ, ಬಯಸಿರುವ ರಾಜ್ಯಗಳಲ್ಲಿ ಮಾತ್ರ ನೀಟ್ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದೆ. ಇದು ದೇಶಾದ್ಯಂತ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ದಕ್ಷಿಣದ ರಾಜ್ಯಗಳಲ್ಲಿ ಮಾತ್ರ ಕಟ್ಟುನಿಟ್ಟಿನ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಉತ್ತರ ಭಾರತದಲ್ಲಿ ಹಾಗಲ್ಲ; ಶಾಲೆಗಳಲ್ಲಿ ನಡೆಯುವ ಪರೀಕ್ಷೆಗಳಲ್ಲಿ ಕೂಡ ಅಕ್ರಮ ನಡೆಸಲಾಗುತ್ತದೆ. ಇದನ್ನು ಸಾಕ್ಷರ ಕುಟುಂಬಗಳು ಸ್ವಾಗತಿಸಿವೆ. ಜನರ ಆಹಾರ, ಉಡುಗೆ, ಪ್ರೇಮ ವಿವಾಹ ಮತ್ತು ಭಾರತದ ಯಾವುದೇ ಭಾಗದಲ್ಲಿ ಪ್ರಯಾಣ ಬೆಳಸಿ ವಾಸಿಸುವಂತಹ ಜನರ ವೈಯಕ್ತಿಕ ಸ್ವಾತಂತ್ರ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಹಾಗಾಗಿ ಇದು ಎಲ್ಲಾ ವರ್ಗದ ಜನರನ್ನು ಆಕರ್ಷಿಸಲಿದೆ. ಅದೇ ರೀತಿ ಒಂದು ಭಾಷಾ ನೀತಿಯನ್ನು ಜಾರಿಗೆ ತರಲು ಬಿಜೆಪಿ ಯೋಜಿಸಿದೆ. ಅದನ್ನು ತಡೆಯಲಿಕ್ಕಾಗಿ ಒಂದು ದೇಶ ಒಂದು ಚುನಾವಣೆಯನ್ನು ತರುವುದಿಲ್ಲ ಎಂದು ಹೇಳಲಾಗಿದೆ. ಕರ್ನಾಟಕದಂತಹ ರಾಜ್ಯಗಳಿಂದ ಹೆಚ್ಚಿನ ಯುವಕರು ಸೇನೆಗೆ ಸೇರುತ್ತಿದ್ದರು. ಅವರನ್ನು ತಡೆಯಲಿಕ್ಕಾಗಿಯೇ ‘ಅಗ್ನಿಪತ್’ ಯೋಜನೆಯನ್ನು ಜಾರಿಗೆ ತರಲಾಯಿತು.

ಅದನ್ನು ರದ್ದುಪಡಿಸುವುದಾಗಿ ಹೇಳಿರುವುದು ಸ್ವಾಗತಾರ್ಹ. ಒಂದು ತಿಂಗಳ ಹಿಂದೆ ಪ್ರಕಟವಾದ ಸಮೀಕ್ಷೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ಹೇಳಲಾಗಿತ್ತು. ಆಗ ಕಾಂಗ್ರೆಸ್ ಬ್ಯಾಂಕ್ ಖಾತೆ ಸ್ಥಗಿತ, ಕೇಜ್ರಿವಾಲ್ ಬಂಧನದಂತಹ ಸಮಸ್ಯೆಗಳಿರಲಿಲ್ಲ. ಹಾಗಾಗಿ ಈಗ ಬಿಜೆಪಿ ಗೆಲ್ಲಬಹುದಾದ ಸ್ಥಾನಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಲಿದೆ; ಹಾಗಾಗಿ “ಇಂಡಿಯಾ” ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಇದೆ. ಆದರೆ ಯಾರೇ ಅಧಿಕಾರಕ್ಕೆ ಬಂದರೂ ಕೊಟ್ಟ ಭರವಸೆಗಳನ್ನು ಈಡೇರಿಸಬೇಕು; ಮರೆಯಬಾರದು.

ರಾಜ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎನ್‌.ಡಿ.ಆರ್‌.ಎಫ್. ನಿಂದ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.

ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು. ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ 12,577 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಬರದಿಂದ ಸಂಕಷ್ಟದಲ್ಲಿರು ಕರ್ನಾಟಕದ ರೈತರ ಹಿತರಕ್ಷಣೆಯ ದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಕೋರಲಾಗಿದೆ.