ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ದಸರಾ Archives » Dynamic Leader
October 16, 2024
Home Posts tagged ದಸರಾ
ದೇಶ

ನವದೆಹಲಿ: ಭಗವಾನ್ ಶ್ರೀರಾಮನ ಸಿದ್ಧಾಂತಗಳು ಭ್ರಷ್ಟಾಚಾರ ಮತ್ತು ಭಯೋತ್ಪಾದನೆಯ ದುಷ್ಟ ಶಕ್ತಿಗಳನ್ನು ತೊಡೆದುಹಾಕಲು ನಮಗೆ ಸಹಾಯ ಮಾಡುತ್ತವೆ ಎಂದು ರಾಷ್ಟ್ರಪತಿಗಳು ದಸರಾ ಸಂದರ್ಭದಲ್ಲಿ ಮಾತನಾಡಿದರು.

ನವರಾತ್ರಿಯ ಪ್ರಯುಕ್ತ ಧಾರ್ವಿುಕ ಲೀಲಾ ಸಮಿತಿಯು ಆಯೋಜಿಸಿದ್ದ ದಸರಾ ಉತ್ಸವವು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಿತು. ಇದರಲ್ಲಿ ಭಾಗವಹಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, “ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ಇಂದಿಗೂ ದೇಶಕ್ಕೆ ದೊಡ್ಡ ಸವಾಲಾಗಿದೆ. ಇವುಗಳನ್ನು ನಾವು ಎದುರಿಸುತ್ತಿದ್ದೇವೆ. ಈ ದುಷ್ಟ ಶಕ್ತಿಗಳನ್ನು ತೊಲಗಿಸಲು ಶ್ರೀರಾಮನ ವಿಚಾರಧಾರೆಗಳು ಸಹಕಾರಿಯಾಗಲಿವೆ” ಎಂದು ಹೇಳಿದರು.

ದಸರಾ ಉತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಂತಾದವರು ಭಾಗವಹಿಸಿದ್ದರು.

ದೇಶ

ಅಹಮದಾಬಾದ್: ನವರಾತ್ರಿ ಉತ್ಸವದ ಸಮಯದಲ್ಲಿ ದೈವತ್ವದ ಸ್ತ್ರೀ ರೂಪವಾದ ದುರ್ಗಾ ದೇವಿಯನ್ನು ಕೇಂದ್ರೀಕ್ರಿಸಿ, 9 ಶಕ್ತಿ  ರೂಪದ ದೇವತೆಗಳನ್ನು ಆರಾಧಿಸುವ ಸಲುವಾಗಿ ಗರ್ಬಾ ಹಾಡುಗಳನ್ನು ಹಾಡಲಾಗುತ್ತದೆ. ಗಾರ್ಬಾ ನೃತ್ಯವನ್ನು ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಪುರುಷರು ಮತ್ತು ಮಹಿಳೆಯರು ಮುಂಜಾನೆ ತನಕ ಸಂಗೀತಕ್ಕೆ ತಕ್ಕಂತೆ ನೃತ್ಯ ಮಾಡುತ್ತಾರೆ.

ಈ ಹಿನ್ನಲೆಯಲ್ಲಿ ಗುಜರಾತ್‌ನಲ್ಲಿ ನವರಾತ್ರಿ ಆಚರಣೆ ವೇಳೆ ಕಳೆದ 24 ಗಂಟೆಗಳಲ್ಲಿ ಗರ್ಬಾ ನೃತ್ಯ ಮಾಡಿದ 10 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರೆಲ್ಲರೂ ಯುವಕರು ಮತ್ತು ಮಧ್ಯವಯಸ್ಕರು ಎಂದು ವೈದ್ಯರು ಹೇಳಿದ್ದಾರೆ. ಬರೋಡಾದ 13 ವರ್ಷದ ಬಾಲಕ ಗರ್ಬಾ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಅದೇ ರೀತಿ ಅಹಮದಾಬಾದ್‌ನ 24 ವರ್ಷದ ಯುವಕ ಕೂಡ ಗರ್ಬಾ ನೃತ್ಯ ಮಾಡುವಾಗ ಸಾವನ್ನಪ್ಪಿದ್ದಾನೆ. ಅದೇ ರೀತಿ ಗುಜರಾತ್‌ನಲ್ಲಿ ಇನ್ನೂ 8 ಸಾವುಗಳು ವರದಿಯಾಗಿವೆ.

ಇದನ್ನೂ ಓದಿ: ಡೋಂಗೀ ಸಮಾಜವಾದಿ, ಪುಲ್ ಟೈಂ ಮೀರುಸಾದಿಕವಾದಿಗೆ ವೆಸ್ಟ್ ಎಂಡ್ ಸೋಂಕು ಮತ್ತೆ ತಗುಲಿದೆ!

ನವರಾತ್ರಿಯ ಮೊದಲ 6 ದಿನಗಳಲ್ಲಿ ಗರ್ಬಾ ನೃತ್ಯ ಪ್ರದರ್ಶಿಸಿದ 609 ಮಂದಿಗೆ ಉಸಿರುಗಟ್ಟಿದೆ. ಅದೇ ರೀತಿ ಸಂಜೆ 6 ರಿಂದ ಬೆಳಗಿನ ಜಾವ 2 ರವರೆಗೆ 108 ಆ್ಯಂಬುಲೆನ್ಸ್‌ಗೆ ಹೃದಯಾಘಾತಕ್ಕೆ ಸಂಬಂಧಿಸಿದಂತೆ 521 ಕರೆಗಳು ಬಂದಿವೆ. ಅದರಂತೆ, ಗರ್ಬಾ ನೃತ್ಯ ನಡೆಯುವ ಸ್ಥಳಗಳ ಸಮೀಪದ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಿದ್ಧವಾಗಿರಬೇಕು ಎಂದು ಗುಜರಾತ್ ಸರ್ಕಾರ ಸೂಚನೆ ನೀಡಿದೆ.

ಅಲ್ಲದೆ, ಗಾರ್ಬಾ ನೃತ್ಯ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ವೈದ್ಯರು ಮತ್ತು ಆಂಬ್ಯುಲೆನ್ಸ್‌ಗಳನ್ನು ನಿಲ್ಲಿಸುವ ಮೂಲಕ ಗರ್ಬಾ ಸಂಘಟಕರು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಕೊರೋನಾ ನಂತರ ವಿವಿಧ ಘಟನೆಗಳಲ್ಲಿ ಯುವಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕಕಾರಿಯಾಗಿದೆ.