ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ನೀಟ್ ಸ್ನಾತಕೋತ್ತರ ಪರೀಕ್ಷೆ Archives » Dynamic Leader
October 23, 2024
Home Posts tagged ನೀಟ್ ಸ್ನಾತಕೋತ್ತರ ಪರೀಕ್ಷೆ
ದೇಶ

ನವದೆಹಲಿ: ಎನ್‌ಡಿಎ ಸರ್ಕಾರದ ಮೊದಲ 15 ದಿನಗಳಲ್ಲಿ ನೀಟ್ ಮತ್ತು ನೆಟ್ ಪರೀಕ್ಷೆಯ ಅವ್ಯವಹಾರ, ರೈಲು ಅಪಘಾತ ಸೇರಿದಂತೆ 10 ಅಹಿತಕರ ಘಟನೆಗಳು ನಡೆದಿದ್ದು, ಸರ್ಕಾರವನ್ನು ಉಳಿಸುವತ್ತ ಪ್ರಧಾನಿ ಗಮನ ಹರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸಮ್ಮಿಶ್ರ ಸರ್ಕಾರದ ಮೊದಲ 15 ದಿನಗಳಲ್ಲಿ 10 ಅಹಿತಕರ ಘಟನೆಗಳು ನಡೆದಿವೆ ಎಂದು ತಿಳಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಅದರಲ್ಲಿ ರೈಲು ಅಪಘಾತ, ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿ, ನೀಟ್ ಅವ್ಯವಹಾರ, ನೀಟ್ ಸ್ನಾತಕೋತ್ತರ ಪರೀಕ್ಷೆ ರದ್ದತಿ, ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನೀರಿನ ಕೊರತೆ, ಶಾಖ ಅಲೆಗಳ ವಿಚಾರದಲ್ಲಿ ಸುರಕ್ಷತಾ ಕ್ರಮಗಳ ಕೊರತೆಯಿಂದ ಪ್ರಾಣಹಾನಿ, ಹಾಲು, ಬೇಳೆಕಾಳುಗಳು, ಗ್ಯಾಸ್ ಮತ್ತು ಟೋಲ್ ದರ ಹೆಚ್ಚಲ ಮುಂತಾದ ಎಲ್ಲವನ್ನೂ ಪಟ್ಟಿ ಮಾಡಿದ್ದಾರೆ.

ನರೇಂದ್ರ ಮೋದಿ ಅವರು ಮಾನಸಿಕವಾಗಿ ಕುಗ್ಗಿದಂತೆ ಕಾಣುತ್ತಿದ್ದು, ಸರ್ಕಾರವನ್ನು ಉಳಿಸುವಲ್ಲಿ ನಿರತರಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನದ ಮೇಲಿನ ಮೋದಿ ಮತ್ತು ಅವರ ಸರ್ಕಾರದ ದಾಳಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಮತ್ತು ಯಾವುದೇ ಸಂದರ್ಭದಲ್ಲಿ ಅವಕಾಶ ನೀಡುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಭಾರತದ ಪ್ರಬಲ ವಿರೋಧ ಪಕ್ಷವಾಗಿ ಜನರ ಧ್ವನಿಯಾಗುತ್ತೇವೆ ಎಂದಿರುವ ರಾಹುಲ್ ಗಾಂಧಿ, ಪ್ರಧಾನಿಯನ್ನು ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಶಿಕ್ಷಣ

ಡಿ.ಸಿ.ಪ್ರಕಾಶ್

ದೇಶಾದ್ಯಂತ ವೈದ್ಯಕೀಯ ಕೋರ್ಸ್‌ಗಳಿಗೆ ನಡೆಸಲಾಗುವ ನೀಟ್ ಪರೀಕ್ಷೆ 2017 ರಿಂದ ನಡೆಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ವೈದ್ಯಕೀಯ ಕೋರ್ಸ್‌ಗಳಿಗೆ ಸೇರಲು ಅನುವು ಮಾಡಿಕೊಡಲು ನೀಟ್ ಪರೀಕ್ಷೆಯನ್ನು ಪರಿಚಯಿಸಲಾಗಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ವಿವರಿಸಿದೆ. ಆದರೆ, ಗ್ರಾಮೀಣ ಬಡ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಶಾಲೆಯಲ್ಲಿ ಓದಿದವರು ವೈದ್ಯರಾಗುವ ಅವಕಾಶ ಕಳೆದುಕೊಳ್ಳುತ್ತಾರೆ ಎಂದು ತಮಿಳುನಾಡು ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ, ಈ ವರ್ಷ ನಡೆದ ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ವಿಚಾರ ದೇಶಾದ್ಯಂತ ಸಂಚಲನ ಮೂಡಿಸಿದೆ. ಕಳೆದ ಮೇನಲ್ಲಿ ನೀಟ್ ಪರೀಕ್ಷೆ ನಡೆದಾಗ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಫಲಿತಾಂಶ ಪ್ರಕಟವಾದ ನಂತರ 67 ವಿದ್ಯಾರ್ಥಿಗಳು ಹಿಂದೆಂದೂ ಕಾಣದ ರೀತಿಯಲ್ಲಿ ಪೂರ್ಣ ಅಂಕಗಳನ್ನು ಪಡೆದಿದ್ದರು, ಅದೇ ಕೇಂದ್ರದಲ್ಲಿ ಸತತವಾಗಿ ಹಾಜರಾದ ವಿದ್ಯಾರ್ಥಿಗಳೂ ಪೂರ್ಣ ಅಂಕಗಳನ್ನು ಪಡೆದರು, ನಿರ್ದಿಷ್ಟ ವಿದ್ಯಾರ್ಥಿಗಳಿಗೆ ಮಾತ್ರ ಕೃಪಾಂಕ ನೀಡಲಾಗಿದೆ.

ಇವೆಲ್ಲವೂ ವಿವಾದಕ್ಕೆ ಎಡೆಮಾಡಿಕೊಟ್ಟು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣಗಳು ದಾಖಲಾದವು. ಆದರೆ ಆರಂಭದಿಂದಲೂ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ನಿರಾಕರಿಸಿತ್ತು. ಬಿಹಾರದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ಇತ್ತೀಚೆಗೆ ಬೆಳಕಿಗೆ ಬಂದಿದ್ದು ಆಘಾತವನ್ನು ಉಂಟುಮಾಡಿತ್ತು.

ಇದರಿಂದ ನೀಟ್ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥರನ್ನು ಬದಲಿಸುವುದನ್ನು ಬಿಟ್ಟು ಬಿಜೆಪಿಗೆ ಬೇರೆ ದಾರಿಯೇ ಇರಲಿಲ್ಲ. ಅಲ್ಲದೆ, ನೀಟ್ ಪರೀಕ್ಷಾ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೂ ಆದೇಶಿಸಿದೆ. ಜೊತೆಗೆ ಇಂದು ನಡೆಯಬೇಕಿದ್ದ ಸ್ನಾತಕೋತ್ತರ ನೀಟ್ ಪರೀಕ್ಷೆಯನ್ನೂ ಕೇಂದ್ರ ಸರ್ಕಾರ ಮುಂದೂಡಿದೆ.

ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ, “ಸದ್ಯ ನೀಟ್‌ ಸ್ನಾತಕೋತ್ತರ ಪರೀಕ್ಷೆಯನ್ನೂ ಮುಂದೂಡಲಾಗಿದೆ. ನರೇಂದ್ರ ಮೋದಿ ಆಡಳಿತದಲ್ಲಿ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಇದು ಮತ್ತೊಂದು ಕೆಟ್ಟ ಉದಾಹರಣೆಯಾಗಿದೆ. ಬಿಜೆಪಿ ಆಡಳಿತದಲ್ಲಿ ವಿದ್ಯಾರ್ಥಿಗಳನ್ನು ಓದುವಂತೆ ಒತ್ತಾಯಿಸದೆ ತಮ್ಮ ಭವಿಷ್ಯವನ್ನು ಉಳಿಸಲು, ಸರಕಾರದೊಂದಿಗೆ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ” ಎಂದು ಕಿಡಿಕಾರಿದ್ದಾರೆ.

ಅಲ್ಲದೆ, “ಪ್ರತಿ ಬಾರಿಯೂ ಈ ಘಟನೆಗಳನ್ನು ಮೌನವಾಗಿ ನೋಡುತ್ತಿದ್ದ ಮೋದಿ, ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಮತ್ತು ಶಿಕ್ಷಣ ಮಾಫಿಯಾದ ಮುಂದೆ ಸಂಪೂರ್ಣವಾಗಿ ನಿಷ್ಕ್ರಿಯರಾಗಿದ್ದಾರೆ ಎಂಬುದು ಈಗ ಸ್ಪಷ್ಟವಾಗಿದೆ. ಮೋದಿಯವರ ಅಸಮರ್ಥ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯಕ್ಕೆ ದೊಡ್ಡ ಗಂಡಾಂತರವಾಗಿದೆ. ಅದರಿಂದ ದೇಶದ ಭವಿಷ್ಯವನ್ನು ನಾವು ಉಳಿಸಬೇಕಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.