ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಬಾಂಗ್ಲಾದೇಶ Archives » Dynamic Leader
October 19, 2024
Home Posts tagged ಬಾಂಗ್ಲಾದೇಶ
ರಾಜಕೀಯ

ಪಾಲಕ್ಕಾಡ್: ಆರ್‌ಎಸ್‌ಎಸ್‌ನ 3 ದಿನಗಳ ಸಮಾವೇಶ ನಿನ್ನೆ ಕೇರಳದಲ್ಲಿ ಆರಂಭವಾಗಿದೆ. ಇದರಲ್ಲಿ ಸಮಾಜ ಸುಧಾರಣೆ, ಬಾಂಗ್ಲಾದೇಶ ಸಮಸ್ಯೆ ಕುರಿತು ಚರ್ಚಿಸಲು ಯೋಜಿಸಲಾಗಿದೆ.

ನಿನ್ನೆ ಕೇರಳದ ಪಾಲಕ್ಕಾಡ್ (Palakkad)ನಲ್ಲಿ ಆರ್‌ಎಸ್‌ಎಸ್‌ನ (RSS) ಅಖಿಲ ಭಾರತ ಸಮನ್ವಯ ಸಭೆ ಆರಂಭವಾಗಿದೆ. ರಾಷ್ಟ್ರೀಯ ಮಟ್ಟದ ವಾರ್ಷಿಕ ಸಭೆ ಕೇರಳದಲ್ಲಿ ನಡೆಯುತ್ತಿರುವುದು ಇದೇ ಮೊದಲು. 3 ದಿನಗಳ ಕಾಲ ನಡೆಯುವ ಈ ಸಭೆಯಲ್ಲಿ ಆರ್‌ಎಸ್‌ಎಸ್‌ನ ಸಹಬಾಗಿ ಸಂಘಟನೆಗಳಾದ 32 ಸಂಘ / ಸಂಸ್ಥೆಗಳ 320 ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಆರ್‌ಎಸ್‌ಎಸ್ ಅಧ್ಯಕ್ಷ ಮೋಹನ್ ಭಾಗವತ್ (Mohan Bhagwat) ಮತ್ತು 6 ಜಂಟಿ ಪ್ರಧಾನ ಕಾರ್ಯದರ್ಶಿಗಳೂ ಇದರಲ್ಲಿ ಭಾಗವಹಿಸುತ್ತಿದ್ದಾರೆ.

ಈ ಸಭೆಯ ಆರಂಭದಲ್ಲಿ ವಯನಾಡು ಭೂಕುಸಿತದ ವಿವರಗಳು ಮತ್ತು ಆರ್‌ಎಸ್‌ಎಸ್ ಸ್ವಯಂಸೇವಕರು ಮಾಡಿದ ಸಹಾಯದ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.

ಶತಮಾನೋತ್ಸವ (Centenary) ಆಚರಣೆ: ಆರ್‌ಎಸ್‌ಎಸ್ ಸಂಘಟನೆಯ ಶತಮಾನೋತ್ಸವ ಸಮಾರಂಭ ಮುಂದಿನ ವರ್ಷ ಸೆಪ್ಟೆಂಬರ್ ನಲ್ಲಿ ನಡೆಯಲಿದ್ದು, ಮುಂದಿನ ಒಂದು ವರ್ಷಕ್ಕೆ ಸಮಾಜ ಸುಧಾರಣೆ ಮತ್ತು ದೇಶ ನಿರ್ಮಾಣಕ್ಕೆ ಸಂಬಂಧಿಸಿದ 5 ಪ್ರಮುಖ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ.

ಶೇಖ್ ಹಸೀನಾ (Sheikh Hasina) ಅವರನ್ನು ಬಾಂಗ್ಲಾದೇಶದ ಪ್ರಧಾನಿ ಹುದ್ದೆಯಿಂದ ಹೊರಹಾಕಿದ ನಂತರ, ಆ ದೇಶದಲ್ಲಿ ವಾಸಿಸುತ್ತಿರುವ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಮೇಲಿನ ಹಲ್ಲೆ ಹಾಗೂ ಅಲ್ಲಿನ ದೇವಾಲಯಗಳ ಮೇಲಿನ ದಾಳಿ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ (BJP) 240 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಇದರಿಂದ ಸರಳ ಬಹುಮತ ಸಿಗಲಿಲ್ಲ. ಆದಾಗ್ಯೂ, ಸಮ್ಮಿಶ್ರ ಪಕ್ಷಗಳ ಬೆಂಬಲದೊಂದಿಗೆ ಸತತ 3ನೇ ಅವಧಿಗೆ ಸರ್ಕಾರ ರಚಿಸಿದೆ. ಕಳೆದ 2 ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿ ಕಡಿಮೆ ಸ್ಥಾನ ಗಳಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವಿನ ಸಂಘರ್ಷವೇ ಕಾರಣ ಎಂದೂ ಹೇಳಲಾಗುತ್ತಿದೆ. ಈ ಸನ್ನಿವೇಶದಲ್ಲಿ ಈ ಸಭೆ ನಡೆಯುತ್ತಿದೆ.

ದೇಶ

ಡಿ.ಸಿ.ಪ್ರಕಾಶ್

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ನೇತೃತ್ವದ ಪ್ರಸ್ತುತ ಸರ್ಕಾರವನ್ನು ಉರುಳಿಸಲಾಗಿದ್ದು, ಸೇನೆಯ ಬೆಂಬಲದೊಂದಿಗೆ ವಿರೋಧ ಪಕ್ಷವಾದ ರಾಷ್ಟ್ರೀಯವಾದಿ ಪಕ್ಷ ಸರ್ಕಾರ ರಚಿಸಲಿದೆ ಎಂದು ಘೋಷಿಸಲಾಗಿದೆ. ಆದರೆ, ಅಲ್ಲಿ ಪ್ರತಿಭಟನೆ ಮುಂದುವರಿದಿದೆ. ಅಲ್ಲದೆ, ಅಲ್ಲಿ ಹಿಂದೂಗಳ ಮೇಲಿನ ದಾಳಿಗಳ ಬಗ್ಗೆ ವಿವಿಧ ನಕಲಿ ಸುದ್ದಿಗಳು ಮತ್ತು ವಿಡಿಯೊಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿವೆ.

ರಿಪಬ್ಲಿಕ್ ಟಿವಿ ಇಂತಹ ಸುದ್ದಿಯನ್ನು ಪ್ರಕಟಿಸಿದ ನಂತರ, ಬಾಂಗ್ಲಾದೇಶದ ರಾಷ್ಟ್ರೀಯ ಹಿಂದೂ ಮಹಾಜೋತ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಗೋಬಿಂದ ಪ್ರಮಾಣಿಕ್ ಅವರು ‘ಹಿಂದೂಗಳ ಮೇಲೆ ದಾಳಿ ನದೆದಿಲ್ಲ, ಬದಲಿಗೆ ಅವರನ್ನು ಮತ್ತು ದೇವಾಲಯಗಳನ್ನು ರಕ್ಷಿಸಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ, ಬಿಜೆಪಿ ಮತ್ತು ಹಿಂದುತ್ವ ಗ್ಯಾಂಗ್‌ಗಳು ನಿರಂತರವಾಗಿ ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರಲ್ಲಿ ಒಡಕು ಮೂಡಿಸಲು ಯತ್ನಿಸುತ್ತಿವೆ.

ಈ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಈ ನಕಲಿ ಸುದ್ದಿಗೆ ಪ್ರತಿಯಾಗಿ ಹಿಂದುತ್ವದ ಗ್ಯಾಂಗ್‌ಗಳು ಭಾರತದಲ್ಲಿ ಮುಸ್ಲಿಮರ ಮೇಲೆ ದಾಳಿ ಮಾಡುವ ಮೂಲಕ ಅರಾಜಕತೆಯಲ್ಲಿ ತೊಡಗಿವೆ. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದ ಗಾಜಿಯಾಬಾದ್ ಪ್ರದೇಶದಲ್ಲಿ ಹಿಂದೂ ಗುಂಪು ಭಾರತೀಯ ಮುಸ್ಲಿಂ ಕೊಳೆಗೇರಿ ನಿವಾಸಿಗಳ ಮೇಲೆ ಹಿಂಸಾತ್ಮಕವಾಗಿ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಪಿಂಕಿ ಚೌಧರಿ ನೇತೃತ್ವದ ಹಿಂದೂ ರಕ್ಷಾ ದಳ ಮತ್ತು ಅವರ ಸಹಚರರು, ಅಲ್ಲಿನ ನಿವಾಸಿಗಳ ಹೆಸರುಗಳನ್ನು ಕೇಳಿ, ಅದು ಇಸ್ಲಾಮಿಕ್ ಹೆಸರಾಗಿದ್ದರೆ ಅವರ ಮೇಲೆ ದಾಳಿ ಮಾಡಿ, ಅವರ ಗುಡಿಸಲುಗಳನ್ನು ಧ್ವಂಸಗೊಳಿಸಿ, ‘ಬಾಂಗ್ಲಾದೇಶಿ’ ಎಂದು ಕಿರುಚಾಡುತ್ತಾ ಅವರ ಮೇಲೆ ದಾಳಿ ನಡೆಸಿದ್ದಾರೆ.

ಇದು ಭಾರೀ ಸಂಚಲನ ಮೂಡಿಸಿರುವಾಗಲೇ, ದೆಹಲಿಯಲ್ಲಿ ಬಾಂಗ್ಲಾದೇಶಿಯರ ಮೇಲೆ ದಾಳಿ ನಡೆಸಿದ ತನ್ನ ಸಹಚರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಪಿಂಕಿ ಚೌಧರಿ ವಿಡಿಯೋ ಮೂಲಕ ಪೊಲೀಸರಿಗೆ ಎಚ್ಚರಿಕೆಯನ್ನೂ ನೀಡಿದ್ದಾನೆ. ಅಲ್ಲದೇ “ಭಾರತದಲ್ಲಿರುವ ಯಾವ ಬಾಂಗ್ಲಾದೇಶಿಯನ್ನೂ ಬಿಡುವುದಿಲ್ಲ, 24 ಗಂಟೆಗಳ ಒಳಗೆ ನಾನು ಯಾರನ್ನೂ ಬಿಡುವುದಿಲ್ಲ, ಅವರು ಉಳಿದುಕೊಂಡಿರುವ ಸ್ಥಳಗಳೆಲ್ಲವೂ ನನಗೆ ಗೊತ್ತಿದೆ” ಎಂದು ಬೆದರಿಕೆ ಹಾಕಿದ್ದಾನೆ.

ಹಿಂದೂ ರಕ್ಷಾ ದಳದ ಪಿಂಕಿ ಚೌಧರಿ ಮತ್ತು ಆತನ ಸಹಚರರು ಅಮಾಯಕ ಮುಸ್ಲಿಮರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಖಂಡನೆ ವ್ಯಕ್ತವಾಗುತ್ತಿದೆ. ಪಿಂಕಿ ಚೌಧರಿ ದಾಳಿ ನಡೆಸಿದ ಜಾಗದಲ್ಲಿ, ಬಾಂಗ್ಲಾದೇಶಿಗರು ಯಾರೂ ಇಲ್ಲ ಎಂದು ಪೊಲೀಸರು ಈಗಾಗಲೆ ವಿವರಣೆ ನೀಡಿದ್ದಾರೆ. ಪೊಲೀಸರು ಅವರ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಕುರಿತು ತನಿಖೆ ನಡೆಯುತ್ತಿದೆ.

ವಿದೇಶ

ಢಾಕಾ: “ದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿ ಕ್ರೂರವಾಗಿದೆ. ವಿದ್ಯಾರ್ಥಿಗಳ ಕಾರ್ಯಗಳು ಎಲ್ಲಾ ಧರ್ಮದ ಜನರನ್ನು ರಕ್ಷಿಸುವಂತಿರಬೇಕು” ಎಂದು ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಅಧ್ಯಕ್ಷ ಮುಹಮ್ಮದ್ ಯೂನಸ್ (Muhammad Yunus) ಹೇಳಿದ್ದಾರೆ.

ಮೀಸಲಾತಿಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾಚಾರದಲ್ಲಿ ಕೊನೆಗೊಂಡಿದೆ. ಶೇಖ್ ಹಸೀನಾ (Sheikh Hasina) ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶವನ್ನು ತೊರೆದರು. ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನಸ್ (84), ನೇತೃತ್ವದಲ್ಲಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಅಧಿಕಾರ ವಹಿಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ವಿಶ್ವವಿದ್ಯಾನಿಲಯವೊಂದರಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಹಮ್ಮದ್ ಯೂನಸ್, “ದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿ ಕ್ರೂರವಾಗಿದೆ. ವಿದ್ಯಾರ್ಥಿಗಳು ಹಿಂದೂ, ಕ್ರೈಸ್ತ, ಬೌದ್ಧ ಧರ್ಮ ಸೇರಿದಂತೆ ಎಲ್ಲ ಧರ್ಮದ ಜನರನ್ನು ರಕ್ಷಿಸಬೇಕು.

ಅನೇಕ ಜನರು ನಿಮ್ಮ ಪ್ರಯತ್ನಗಳನ್ನು ವ್ಯರ್ಥ ಮಾಡಲು ಯೋಜಿಸುತ್ತಾರೆ. ಈ ಬಾರಿ ವಿಫಲರಾಗಬೇಡಿ. ಬಾಂಗ್ಲಾದೇಶವನ್ನು ಅಭಿವೃದ್ಧಿಪಡಿಸುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ನಾವೆಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು” ಎಂದರು.

ವಿದೇಶ

• ಡಿ.ಸಿ.ಪ್ರಕಾಶ್ 

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದಂತೆಯೇ ಬಾಂಗ್ಲಾದೇಶದಲ್ಲಿ ಮುಸ್ಲಿಂ ಸಂಪ್ರದಾಯವಾದಿ ಆಡಳಿತವನ್ನು ಸ್ಥಾಪಿಸಲು ಪಾಕಿಸ್ತಾನದ ಐಎಸ್‌ಐ ಸಕ್ರಿಯವಾಗಿ ಪ್ರಯತ್ನಿಸುತ್ತಿದೆ!

ಹಿಂದೂ ಮಹಾಸಾಗರವು ವಿಶ್ವದ 3ನೇ ಅತಿದೊಡ್ಡ ಸಾಗರವಾಗಿದೆ. ಅಂತರರಾಷ್ಟ್ರೀಯ ಕಚ್ಚಾ ತೈಲ ವ್ಯಾಪಾರದಲ್ಲಿ ಶೇ.80ರಷ್ಟು ಮತ್ತು ಅಂತಾರಾಷ್ಟ್ರೀಯ ಸರಕು ವ್ಯಾಪಾರದಲ್ಲಿ ಶೇ.40ರಷ್ಟು  ಈ ಕಡಲ ಪ್ರದೇಶದ ಮೂಲಕವೇ ನಡೆಯುತ್ತದೆ. ಪ್ರಸ್ತುತ ಈ ಪ್ರದೇಶದಲ್ಲಿ ಭಾರತ ಪ್ರಾಬಲ್ಯ ಹೊಂದಿದೆ.

ಇದಕ್ಕೆ ಸವಾಲೆಸೆಯಲು ಚೀನಾ ‘ಒಂದು ರಸ್ತೆ, ಒಂದು ವಲಯ’ ಉಪಕ್ರಮದ ಅಡಿಯಲ್ಲಿ ಭಾರತದ ನೆರೆಯ ರಾಷ್ಟ್ರಗಳನ್ನು ತನ್ನ ಮಿತ್ರರಾಷ್ಟ್ರಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ. ಇದರ ಭಾಗವಾಗಿ, ಬಾಂಗ್ಲಾದೇಶದ ಬಂದರುಗಳು ಮತ್ತು ಮೂಲಸೌಕರ್ಯ ಯೋಜನೆಗಳಲ್ಲಿ ಚೀನಾ ಭಾರಿ ಹೂಡಿಕೆ ಮಾಡಿಕೊಂಡು ಬರುತ್ತಿದೆ. ಆದರೂ, ಆ ದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೇ ಆಧ್ಯತೆ ನೀಡುತ್ತಿದ್ದರು.

ಇದರಿಂದಾಗಿ ಬಾಂಗ್ಲಾದೇಶದ ವ್ಯಾಪಾರದಲ್ಲಿ ಭಾರತದ ಕೈ ಮೇಲಾಗಿದೆ. ಬಾಂಗ್ಲಾದೇಶದಲ್ಲಿ ಸುಮಾರು 350ಕ್ಕೂ ಹೆಚ್ಚು ಭಾರತೀಯ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. 19,000ಕ್ಕೂ ಹೆಚ್ಚು ಭಾರತೀಯರು ಬಾಂಗ್ಲಾದಲ್ಲಿ ಕೆಲಸ ಮಾಡುತ್ತಿದ್ದಾರೆ.

ಶೇಖ್ ಹಸೀನಾ ಇತ್ತೀಚೆಗೆ ಹೇಳಿದಂತೆ, “ಬಾಂಗ್ಲಾದೇಶದ ತೀಸ್ತಾ ನದಿ ಅಭಿವೃದ್ಧಿ ಯೋಜನೆಯನ್ನು ಕಾರ್ಯಗತಗೊಳಿಸಲು ಚೀನಾ ಉತ್ಸುಕವಾಗಿದೆ. ಆದರೆ, ಈ ಯೋಜನೆಯನ್ನು ಭಾರತಕ್ಕೆ ಹಸ್ತಾಂತರಿಸಲಾಗುವುದು” ಎಂದು ಹೇಳಿದರು.

ಸತತವಾಗಿ ಭಾರತದ ಪರವಾಗಿದ್ದ ಶೇಖ್ ಹಸೀನಾ ಆಡಳಿತವನ್ನು ಕಿತ್ತೊಗೆಯಲು ಚೀನಾ ನಿರ್ಧರಿಸಿತು. ಇದಕ್ಕಾಗಿ ಆ ದೇಶವು ಪಾಕಿಸ್ತಾನದ ಐಎಸ್‌ಐ ಜೊತೆ ರಹಸ್ಯವಾಗಿ ಕೈ ಜೋಡಿಸಿದೆ. ಬಾಂಗ್ಲಾದೇಶಕ್ಕೆ ನುಸುಳಲು ಮತ್ತು ಗಲಭೆಗಳನ್ನು ಎಬ್ಬಿಸಲು ಐಎಸ್‌ಐ ಗೂಢಚಾರರಿಗೆ ಚೀನಾ ಉದಾರವಾಗಿ ಹಣವನ್ನು ನೀಡಿದೆ ಎಂದು ವರದಿಗಳಾಗಿದೆ.

ಈ ಕುರಿತು ಹೇಳುತ್ತಿರುವ ಭಾರತೀಯ ಗುಪ್ತಚರ ಮೂಲಗಳು, ‘ಜಮಾತ್-ಎ-ಇಸ್ಲಾಮಿ ಎಂಬ ಸಂಪ್ರದಾಯವಾದಿ ಸಂಘಟನೆ ಬಾಂಗ್ಲಾದೇಶದಲ್ಲಿ ಕಾರ್ಯನಿರ್ವಹಿಸುತ್ತಿದೆ. ಅದರ ವಿದ್ಯಾರ್ಥಿ ಸಂಘಕ್ಕೆ ಸೇರಿದ ಇಸ್ಲಾಮಿ ಛತ್ರ ಶಿಬಿರ್ (Islami Chhatra Shibir) ವಿದ್ಯಾರ್ಥಿಗಳಿಗೆ ಪಾಕಿಸ್ತಾನದ ಐಎಸ್‌ಐ (ISI) ಕಳೆದ ಕೆಲವು ವರ್ಷಗಳಿಂದ ವಿಶೇಷ ತರಬೇತಿ ನೀಡುತ್ತಿದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಶಿಬಿರಗಳಲ್ಲಿ ಅವರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗುತ್ತಿದೆ.

ಐಎಸ್‌ಐ ಮೂಲಕ ತರಬೇತಿ ಪಡೆದ ಇವರು, ಬಾಂಗ್ಲಾದೇಶ ವಿದ್ಯಾರ್ಥಿ ಸಂಘದ ಪ್ರತಿಭಟನೆಯನ್ನು ಗಲಭೆಯಾಗಿ ಪರಿವರ್ತಿಸಿ ಅಪಾರ ಪ್ರಮಾಣದ ಪ್ರಾಣಹಾನಿ ಮಾಡಿದ್ದಾರೆ. ಇದಕ್ಕಾಗಿ ಚೀನಾ ಐಎಸ್‌ಐಗೆ ಭಾರಿ ಮೊತ್ತದ ಹಣ ನೀಡಿದೆ.

ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ: ಬಾಂಗ್ಲಾದೇಶದ ಪ್ರಮುಖ ವಿರೋಧ ಪಕ್ಷವಾದ ಬಿಎನ್‌ಪಿಯ (Bangladesh Nationalist Party) ನಾಯಕ ತಾರಿಕ್ ರೆಹಮಾನ್ (Tarique Rahman) ಅವರು ಬ್ರಿಟನ್ ರಾಜಧಾನಿ ಲಂಡನ್‌ನಲ್ಲಿ ವಾಸಿಸುತ್ತಿದ್ದಾರೆ. ಅವರು ಮತ್ತು ಹಿರಿಯ ಐಎಸ್‌ಐ ಮುಖ್ಯಸ್ಥ ಜಾವಿದ್ ಇತ್ತೀಚೆಗೆ ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಭೇಟಿಯಾಗಿದ್ದರು. ಆಗ ಶೇಖ್ ಹಸೀನಾ ಅವರ ಆಡಳಿತವನ್ನು ಕಿತ್ತೊಗೆಯಲು ಸಂಚು ರೂಪಿಸಲಾಗಿದೆ.

ಬಿಎನ್‌ಪಿ ಮುಖ್ಯಸ್ಥ ತಾರಿಕ್ ರೆಹಮಾನ್, ಮುಂಬೈನ ಭೂಗತ ಲೋಕ ಪಾತಕಿ ದಾವೂದ್ ಇಬ್ರಾಹಿಂ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ. ದುಬೈನಲ್ಲಿರುವ ದಾವೂದ್ ಇಬ್ರಾಹಿಂ ಆಸ್ತಿಯನ್ನು ತಾರಿಕ್ ರೆಹಮಾನ್ ಖರೀದಿಸಿದ್ದಾರೆ.

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಇತ್ತೀಚೆಗೆ 10 ಟ್ರಕ್‌ಗಳಲ್ಲಿ ಸಾಗಿಸಲಾಗಿದ್ದ ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಶಸ್ತ್ರಾಸ್ತ್ರಗಳನ್ನು ಇಸ್ಲಾಮಿ ಛತ್ರ ಶಿಬಿರ್ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳಿಗೆ ಕಳುಹಿಸಲಾಗಿತ್ತು.

ಇದರ ಹಿಂದೆ ತಾರಿಕ್ ರೆಹಮಾನ್ ಮತ್ತು ದಾವೂದ್ ಇಬ್ರಾಹಿಂ ಇದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದಂತೆಯೇ ಬಾಂಗ್ಲಾದೇಶದಲ್ಲಿ ಮುಸ್ಲಿಂ ಸಂಪ್ರದಾಯವಾದಿ ಆಡಳಿತವನ್ನು ಸ್ಥಾಪಿಸಲು ಪಾಕಿಸ್ತಾನದ ಐಎಸ್‌ಐ ಸಕ್ರಿಯವಾಗಿ ಪ್ರಯತ್ನಿಸುತ್ತಿದೆ’ ಎಂದು ಭಾರತೀಯ ಗುಪ್ತಚರ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.

ದೇಶ

ನವದೆಹಲಿ: ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಲ್ಲಿ ನೆಲೆಸಿರುವ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು ನೀಡಲು ಒಂಬತ್ತು ರಾಜ್ಯಗಳ 31 ಜಿಲ್ಲಾಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್, ‘ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಂತಹ ದೇಶಗಳಲ್ಲಿ ವಾಸಿಸುವ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹೊರತುಪಡಿಸಿ, ಪೌರತ್ವ ಕಾಯಿದೆ 1955ರ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗುತ್ತಿದೆ.

ಪೌರತ್ವಕ್ಕಾಗಿ ಬಂದಿರುವ ಅರ್ಜಿಗಳ ಮೇಲೆ ಶೀಗ್ರದಲ್ಲಿ ಕ್ರಮ ಕೈಗೊಂಡು ಕೂಡಲೇ ಪೌರತ್ವ ನೀಡಲು, ಒಂಬತ್ತು ರಾಜ್ಯಗಳ 31 ಜಿಲ್ಲಾಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ.

ಅದರಂತೆ ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಹಾಗೂ ನವದೆಹಲಿಯ 31 ಕಲೆಕ್ಟರ್‌ಗಳಿಗೆ ಪೌರತ್ವ ನೀಡುವ ಸಂಬಂಧ ನಿರ್ಧಾರಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ’ ಎಂದು ಹೇಳಿದರು.