ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಮುಂಗಾರು ಮಳೆ Archives » Dynamic Leader
October 16, 2024
Home Posts tagged ಮುಂಗಾರು ಮಳೆ
ದೇಶ

ಕೇರಳದ ವಯನಾಡು ಜಿಲ್ಲೆಯಲ್ಲಿ ಉಂಟಾಗಿರುವ ಭೂಕುಸಿತಕ್ಕೆ ತಾಪಮಾನವೇ ಪ್ರಮುಖ ಕಾರಣ ಎಂಬ ಅಂಶ ಬಯಲಾಗಿದೆ!

“ಅರಬ್ಬೀ ಸಮುದ್ರದ ತಾಪಮಾನದಿಂದ ದಟ್ಟವಾದ ಮೋಡಗಳು ನಿರ್ಮಾಣಗೊಂಡು ಅಲ್ಪಾವಧಿಯಲ್ಲಿಯೇ ಭಾರಿ ಮಳೆಯಾಗಲು ಕಾರಣವಾಯಿತು” ಎಂದು ಋತುಮಾನಗಳ ಕುರಿತು ಅಧ್ಯಯನ ನಡೆಸುತ್ತಿರುವ ಹಿರಿಯ ವಿಜ್ಞಾನಿ ಅಭಿಲೇಶ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಾಯುಮಂಡಲದ ರಾಡಾರ್ ಸಂಶೋಧನಾ ಕೇಂದ್ರದ ನಿರ್ದೇಶಕ ಅಭಿಲೇಶ್, “ಇಡೀ ಕೊಂಕಣ ಪ್ರದೇಶದಲ್ಲಿ ಕಳೆದ ಎರಡು ವಾರಗಳಿಂದ ಮುಂಗಾರು ಮಳೆ ಚುರುಕುಗೊಂಡಿರುವುದೇ ಭೂಕುಸಿತಕ್ಕೆ ಕಾರಣ.

ಈ ಕಾರಣದಿಂದಾಗಿ ಕಾಸರಗೋಡು, ಕಣ್ಣೂರು, ವಯನಾಡು, ಕೋಳಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ.

ಎರಡು ವಾರಗಳಿಂದ ಬೀಳುತ್ತಿರುವ ಮಳೆಯಿಂದಾಗಿ ಮಣ್ಣು ತುಂಬಾ ತೇವವಾಗಿತ್ತು. ಈ ಹಿನ್ನೆಲೆಯಲ್ಲಿ, ಅತಿಯಾದ ಕಪ್ಪು ಮೋಡಗಳು ಅರೇಬ್ಬೀ ಸಮುದ್ರದ ಕರಾವಳಿ ಪ್ರದೇಶಗಳಲ್ಲಿ ಸುತ್ತುವರಿದು, ಭಾರೀ ಮಳೆಯಾದ ಕಾರಣ, ಸಡಿಲವಾದ ಮಣ್ಣು ದುರ್ಬಲಗೊಂಡು ಭೂಕುಸಿತ ಸಂಭವಿಸಿದೆ.

ಅಂದರೆ, 2019 ರಲ್ಲಿ ಕೇರಳದಲ್ಲಿ ಪ್ರವಾಹ ಬಂದಾಗ ಮೋಡಗಳು ಎಷ್ಟು ದಟ್ಟವಾಗಿತ್ತೋ ಅದೇ ಮಟ್ಟಿಗೆ ಈಗಲೂ ಮೋಡಗಳು ದಟ್ಟವಾಗಿ ಸುತ್ತುವರಿದಿದೆ. ಇದಲ್ಲದೆ, ಆಗ್ನೇಯ ಅರಬ್ಬೀ ಸಮುದ್ರದ ಪ್ರದೇಶದಲ್ಲಿ ಏರಿಕೆಯಾಗುತ್ತಿರುವ ತಾಪಮಾನದಿಂದ ಅಲ್ಲೊಂದು ವಾಯುಮಂಡಲ ನಿರ್ಮಾಣವಾಗಿತ್ತು. ಇದಕ್ಕೂ ಹವಾಮಾನದ ತಾಪಮಾನಕ್ಕೂ ಸಂಬಂಧ ಇದೆ” ಎಂದು ಹೇಳಿದ್ದಾರೆ.

ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ದೇಶವು ನೈಋತ್ಯ ಮುಂಗಾರಿನಿಂದಲೇ ಹೆಚ್ಚಿನ ಮಳೆಯನ್ನು ಪಡೆಯುತ್ತದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಪ್ರಾರಂಭವಾಗುವ ಈ ಮುಂಗಾರು, ದಕ್ಷಿಣ ಭಾರತದಲ್ಲಿ ಪಶ್ಚಿಮ ಘಟ್ಟಗಳ ಗಡಿ ಪ್ರದೇಶಗಳ ಮೂಲಕ, ಉತ್ತರ ರಾಜ್ಯಗಳು ಮತ್ತು ಈಶಾನ್ಯ ರಾಜ್ಯಗಳ ಮೇಲೆ ಹಂತ ಹಂತವಾಗಿ ಮುಂದುವರಿದು ಮಳೆಯನ್ನು ನೀಡುತ್ತದೆ.

ಈ ನೈಋತ್ಯ ಮುಂಗಾರು ದೇಶದ ಹೆಚ್ಚಿನ ನೀರಿನ ಅಗತ್ಯಗಳನ್ನು ಪೂರೈಸುವ ಮಳೆಯಾಗಿದೆ. ಮುಂಗಾರು ಸಮಯದಲ್ಲಿ ಮಳೆಯಾಗದ ಪ್ರದೇಶಗಳು ಸಹ ನದಿಗಳಿಂದ ನೀರನ್ನು ಪಡೆಯುತ್ತವೆ. ಹೀಗಾಗಿ ನೈಋತ್ಯ ಮುಂಗಾರು ಮೇಲಿನ ನಿರೀಕ್ಷೆ ಸದಾ ಹೆಚ್ಚಾಗಿರುತ್ತದೆ.

ಸಾಮಾನ್ಯವಾಗಿ ನೈಋತ್ಯ ಮುಂಗಾರು ಜೂನ್ ತಿಂಗಳಲ್ಲಿ ಪ್ರಾರಂಭವಾಗಿ ಸೆಪ್ಟೆಂಬರ್ ವರೆಗೆ ಇರುತ್ತದೆ. ಈ ಹಿನ್ನಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ, ಈ ವರ್ಷ ಜೂನ್ 1 ರಂದು ಆರಂಭವಾಗಬೇಕಿದ್ದ ಮುಂಗಾರು, ಒಂದೆರಡು ದಿನ ತಡವಾಗಿ ಜೂನ್ ಮೊದಲ ವಾರದಲ್ಲಿ ಆರಂಭವಾಗಲಿದೆ ಎಂದು ಪ್ರಕಟಿಸಿತು. ತಡವಾಗಿ ಆರಂಭವಾದರೂ ಮಳೆಯ ಪ್ರಮಾಣ ಕಡಿಮೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ಹೇಳಿತ್ತು.

ಈ ಹಿನ್ನಲೆಯಲ್ಲಿ, ನೈರುತ್ಯ ಮುಂಗಾರು ಈ ವರ್ಷ ಅಭೂತಪೂರ್ವವಾಗಿರಲಿದ್ದು, ಕೇರಳ ಮತ್ತು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಯುರೋಪಿಯನ್ ಹವಾಮಾನ ಕೇಂದ್ರ ಹೇಳಿದೆ. ಇದರ ಬಗ್ಗೆ ವೆಸ್ಟ್ ಕೋಸ್ಟ್ ವೆದರ್‌ಮ್ಯಾನ್ ಎಂಬ ಖಾಸಗಿ ಹವಾಮಾನ ಶಾಸ್ತ್ರಜ್ಞರು ತಮ್ಮ ಸಾಮಾಜಿಕ ಮಾಧ್ಯಮ ಪುಟದಲ್ಲಿ ಸಾಕ್ಷ್ಯಾಧಾರವನ್ನು ಪೋಸ್ಟ್ ಮಾಡಿದ್ದಾರೆ.

ಯುರೋಪಿಯನ್ ಹವಾಮಾನ ಕೇಂದ್ರದ (ECMWF) ಸಾಪ್ತಾಹಿಕ ಮುನ್ಸೂಚನೆಯಲ್ಲಿ, ಜೂನ್ ತಿಂಗಳ ಉದ್ದಕ್ಕೂ ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಬಲವಾದ ಮತ್ತು ಶಕ್ತಿಯುತ ಮುಂಗಾರು ಮಳೆಯಾಗುತ್ತದೆ ಎಂದು ಹೇಳಲಾಗಿದೆ” ಎಂದರು. ಮುಂದಿನ ತಿಂಗಳು ಅಂದರೆ ಜೂನ್ ತಿಂಗಳ ಮಳೆ ಈಗಾಗಲೇ ದಾಖಲಾಗಿರುವ ಹಲವು ದಾಖಲೆಗಳನ್ನು ಮುರಿಯಲಿದೆ ಎಂದು ವೆಸ್ಟ್ ಕೋಸ್ಟ್ ವೆದರ್‌ಮ್ಯಾನ್ ಹೇಳಿದ್ದಾರೆ.

ಪಶ್ಚಿಮದಿಂದ ಬೀಸುತ್ತಿರುವ ಗಾಳಿ ಕೇರಳದಲ್ಲಿ ತೀವ್ರಗೊಂಡಿದೆ. ಹೀಗಾಗಿ ಕೇರಳದಲ್ಲಿ ಮೊದಲ ಬೇಸಿಗೆ ಕಾಲ ಅಧಿಕೃತವಾಗಿ ಅಂತ್ಯಗೊಂಡಿದೆ ಎಂದು ಅವರು ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೆಸ್ಟ್ ಕೋಸ್ಟ್ ವೆದರ್‌ಮ್ಯಾನ್‌ನ ಈ ಪೋಸ್ಟ್ ಭಯವನ್ನು ಹುಟ್ಟುಹಾಕಿದೆ. ಏತನ್ಮಧ್ಯೆ, ಪೆಸಿಫಿಕ್ ಸಾಗರದಲ್ಲಿ 7 ವರ್ಷಗಳಿಗೊಮ್ಮೆ ಸಂಭವಿಸುವ ಎಲ್ ನಿನೋ ಈ ವರ್ಷ ಜೂನ್‌ನಲ್ಲಿ ಸಂಭವಿಸುವ ನಿರೀಕ್ಷೆಯಿರುವುದರಿಂದ, ಇದು ನೈರುತ್ಯ ಮುಂಗಾರಿನ ಮೇಲೆ ಪರಿಣಾಮ ಬೀರಲಿದೆ ಎಂದೂ ಹೇಳಲಾಗಿದೆ.

ರಾಜಕೀಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ರಾಜ್ಯದ ಕೆಲವು ಭಾಗದಲ್ಲಿ ಮಳೆ, ಬಿತ್ತನೆ, ಜೂನ್‌ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ, ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.

ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು.

ಮಳೆ ಬಂದು ಮರಗಳು ಬಿದ್ದುಹೋದರೆ ಕೂಡಲೇ ತೆರವುಗೊಳಿಸಬೇಕು. ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ.

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ. ಯಾವುದೇ ಕಾರಣಕ್ಕೂ ಕರ್ತವ್ಯಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇನೆ. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಲೋಪ ಆಗಬಾರದು.

ಜಿಲ್ಲಾಧಿಕಾರಿಗಳು, ಸಿಇಓಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಬೇಕು. ಕಾರಣ, ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು.

ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ-ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಿನಿಮಾ

ವರದಿ: ಅರುಣ್ ಜಿ.,

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಹೃದಯಶಿವ ನಿರ್ದೇಶನ.

ಮಂಡ್ಯ, ಮುಂಗಾರು ಮಳೆ, ಗಾಳಿಪಟ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಹಾಡು‌ ಬರೆದಿರುವ ಸಾಹಿತಿ ಹೃದಯಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಇದೇ ಏಪ್ರಿಲ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು.

“ಕನ್ನಡ ಚಿತ್ರರಂಗದೊಂದಿಗೆ ನನಗೆ ಎರಡು ದಶಕಗಳ ನಂಟು. ಕನ್ನಡದ ಹಲವು ಚಿತ್ರಗಳಿಗೆ ಹಾಡು ಬರೆದಿದ್ದೇನೆ. ಕನ್ನಡದಲ್ಲಿ ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಚಿತ್ರವಿದು. ಒಂದೇ ಸರಕಾರದಡಿ ಕಾರ್ಯ ನಿರ್ವಹಿಸುವ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದೆ ಹೋದಾಗ ಕಾಡಂಚಿನ ರೈತನ ಪಾಡು ಏನಾಗುತ್ತದೆ ಎಂಬುದೇ ಕಥಾಹಂದರ. ಇಮ್ತಿಯಾಜ್ ಸುಲ್ತಾನ್ ಸಂಗೀತ ನಿರ್ದೇಶನದಲ್ಲಿ ಮೂರು ಹಾಡುಗಳು ಹಾಗೂ ಮೂರು ಬಿಟ್ಸ್ ಗಳು ಸುಮಧುರವಾಗಿ ಮೂಡಿಬಂದಿವೆ. ಅನೂಪ್ ಸೀಳಿನ್, ರವೀಂದ್ರ ಸೊರಗಾವಿ, ಇಮ್ತಿಯಾಜ್ ಸುಲ್ತಾನ್ ಹಾಡಿದ್ದಾರೆ.

ಸಂಪತ್ ಮೈತ್ರೇಯ, ಸುನೀತಾ, ಕರಿಸುಬ್ಬು, ಮಳವಳ್ಳಿ ಸಾಯಿಕೃಷ್ಣ, ವಿಕ್ಟರಿ ವಾಸು, ಜೊಸೈಮನ್ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರ ಇದೇ ಏಪ್ರಿಲ್ 21 ರಂದು ಬಿಡುಗಡೆಯಾಗಲಿದೆ ನೋಡಿ ಹಾರೈಸಿ” ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಹೃದಯಶಿವ ತಿಳಿಸಿದರು.

ತುಂಬಾ ಒಳ್ಳೆಯ ಪಾತ್ರ ನಿರ್ವಹಿಸಿರುವ ತೃಪ್ತಿ ಇದೆ ಎಂದರು ನಟ ಸಂಪತ್ ಮೈತ್ರೇಯ.

ಚಿತ್ರದಲ್ಲಿ ನಟಿಸಿರುವ ಸುನೀತಾ, ಕರಿಸುಬ್ಬು, ಜೊಸೈಮನ್, ವಿಕ್ಟರಿ ವಾಸು, ವೆಂಕಟೇಶ್, ಭಾಸ್ಕರ್ ಸೂರ್ಯ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಛಾಯಾಗ್ರಹಕ ನಾಗಾರ್ಜುನ್.ಡಿ ಹಾಗೂ ಸಂಕಲನಕಾರ ಬಿ.ಎಸ್.ಕೆಂಪರಾಜು “ಬಿಸಿಲು ಕುದುರೆ” ಬಗ್ಗೆ ಮಾತನಾಡಿದರು.