ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಮೈಸೂರು Archives » Dynamic Leader
October 17, 2024
Home Posts tagged ಮೈಸೂರು
ರಾಜಕೀಯ

ಮೈಸೂರು: ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ ಮತ್ತು ಅಧಿಕಾರ ದುರ್ಬಳಕೆ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್ ನ ಜನತಂತ್ರ ವಿರೋಧಿ ನಡೆಯನ್ನು ವಿರೋಧಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

“ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ. ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ದೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ” ಎಂದು ಹೇಳಿದರು.

“ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ. ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ.

ಜೆಡಿಎಸ್ ನ ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ‘ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು’ ಎಂದು ದೇವೇಗೌಡರು ಹೇಳಿದ್ದರು. ‘ನರೇಂದ್ರ ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ’ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ” ಎಂದು ಕಿಡಿಕಾರಿದರು.

“ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ.

ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು. ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ.

ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಲುಗಾಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

“ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ.

ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ವಿಶೇಷ ತನಿಖಾ ದಳ ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು ಎಸ್‌ಐಟಿ ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ ಎಸ್‌ಐಟಿ ಯವರು ತನಿಖೆ ನಡೆಸಿದ್ದಾರೆ. ಆದರೂ, ಇಡಿಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು.

ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ” ಎಂದರು.

“ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು? ಸುಪ್ರೀಂಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ?

ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ”? ಎಂದು ಆಕ್ರೋಶ ವ್ಯಕ್ತಪಡಿಸಿದರು.

“15 ಬಜೆಟ್ ಮಂಡಿಸಿದ್ದೇನೆ. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ, ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ” ಎಂದು ಸವಾಲೆಸದರು.

ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ. ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮದ್ರೋಹ ಅಲ್ಲವೇ?” ಎಂದು ಕಿಡಿಕಾರಿದರು.  

“ಮುಡಾ ವಿಚಾರದಲ್ಲಿ ನನ್ನ ತಪ್ಪು ಎಲ್ಲಿದೆ? ಮುಡಾದ ಯಾವ ಸದಸ್ಯರಿಗೂ ನಾನು ಕರೆ ಮಾಡಿಲ್ಲ, ಬೇಡಿಕೆ ಇಟ್ಟಿಲ್ಲ, ಶಿಫಾರಸ್ಸು ಮಾಡಿಲ್ಲ. ನಾನು ಯಾವುದಕ್ಕೂ ಸಹಿ ಹಾಕಿಲ್ಲ. ಹೀಗಿದ್ದಾಗ ಇದರಲ್ಲಿ ನನ್ನ ಪಾತ್ರ ಏನಿದೆ?

ನಮ್ಮ ಜಮೀನು ಅಕ್ರಮವಾಗಿ ವಶಕ್ಕೆ ಪಡೆದು ಸೈಟು, ಪಾರ್ಕ್, ರಸ್ತೆ ಮಾಡಿ ಹಂಚಿಬಿಟ್ಟರು. ಇಲ್ಲಿ ತಪ್ಪು ಮಾಡಿರುವುದು ಮುಡಾ. ತಪ್ಪು ಒಪ್ಪಿಕೊಂಡು ನಂತರ ನನ್ನ ಕುಟುಂಬಕ್ಕೆ ಬದಲಿ ನಿವೇಶನ ನೀಡಿದ್ದಾರೆ. ನನ್ನ ಪತ್ನಿ ಬದಲಿ ಜಮೀನು ಕೊಡಿ ಎಂದು ಅರ್ಜಿ ಹಾಕಿದ್ದರೇ ವಿನಃ ಯಾವುದೇ ನಿರ್ಧಿಷ್ಟ ಜಾಗದಲ್ಲಿ ನಿವೇಶನ ಕೊಡಿ ಎಂದು ಕೇಳಿರಲಿಲ್ಲ.

ನಿವೇಶನ ಕೊಟ್ಟವರು ಜಿಜೆಪಿ ಸರ್ಕಾರದವರು. ಈಗ ಹಗರಣ ನಡೆದಿದೆ ಎನ್ನುತ್ತಿರುವವರು ಅವರೇ. ಇದರಲ್ಲೇ ಅವರ ಉದ್ದೇಶ ಏನಿದೆ ಎಂಬುದನ್ನು ರಾಜ್ಯದ ಜನ ಅರ್ಥಮಾಡಿಕೊಳ್ಳಬೇಕು” ಎಂದು ಮನವಿ ಮಾಡಿದರು.

ರಾಜಕೀಯ

ಮೈಸೂರು: ಇಂದು ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಹೇಳಿದರು.

“ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ” ಎಂದು ಹೇಳಿದರು.

“ಮುಡಾ ಅಕ್ರಮವಾಗಿ ನಮ್ಮ ಜಮೀನನ್ನು ಸ್ವಾಧೀನ ಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ 2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ” ಎಂದು ಹೇಳಿದರು.

“ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ” ಎಂದು ಕಿಡಿಕಾರಿದರು.

“ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ” ಎಂದು ಹೇಳಿದರು.

“ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ” ಎಂದು ಗುಡುಗಿದರು.

ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂಬ ವಿಶ್ವಾಸವಿದೆ” ಎಂದು ಹೇಳಿದರು.

ರಾಜ್ಯ

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಐತಿಹಾಸಿಕ, ಪಾರಂಪರಿಕ ಮಹತ್ವವುಳ್ಳ ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಸಂಕಲ್ಪ ಮಾಡಿರುವುದು ನನಗೆ ಅತೀವ ಸಂತಸ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.  

ರೂ.20.93 ಕೋಟಿ ವೆಚ್ಚದಲ್ಲಿ ಚನ್ನಪಟ್ಟಣ ರೈಲು ನಿಲ್ದಾಣ, ರೂ.20.96 ಕೋಟಿ ವೆಚ್ಚದಲ್ಲಿ ರಾಮನಗರ ರೈಲು ನಿಲ್ದಾಣವನ್ನು ಸ್ಥಳೀಯ ಸಾಂಸ್ಕೃತಿಕ ಸೊಗಡಿನ ಮಾದರಿಯಲ್ಲಿಯೇ ಉನ್ನತೀಕರಿಸುತ್ತಿರುವುದು ಈ ಭಾಗದ ಜನರ ಆಶೋತ್ತರಗಳನ್ನು ಈಡೇರಿಸುವ ಬೃಹತ್ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

ನಿತ್ಯವೂ ಉದ್ಯೋಗ, ವ್ಯವಹಾರಕ್ಕಾಗಿ ಎರಡೂ ನಗರಗಳ ನಡುವೆ ಸಂಚರಿಸುವ ಜಿಲ್ಲೆಯ ಅಸಂಖ್ಯಾತ ಜನರಿಗೆ ಅನುಕೂಲವೂ ಆಗಲಿದೆ. ಈ ಕಾರಣಕ್ಕಾಗಿ ನಾನು ಮಾನ್ಯ ಪ್ರಧಾನಿಗಳು ಹಾಗೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಶ್ನವ್ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರು

ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ರಾಮಮೂರ್ತಿ ನಗರ ವ್ಯಾಪ್ತಿಯ ಕುವೆಂಪು ನಗರದಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಎಂದಿನಂತೆ ಈ ವರ್ಷವೂ ಅದ್ದೂರಿಯಾಗಿ ಆಚರಿಸಲಾಯಿತು. ಅದೂ ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಈ ವಿಶೇಷ ಸಂದರ್ಭದ ಹಿನ್ನೆಲೆಯಲ್ಲಿ ಬಡಾವಣೆಯ ನಿವಾಸಿಗಳೆಲ್ಲರೂ ಒಂದೆಡೆ ಸೇರಿ ಸಂಭ್ರಮಿಸಿ, ಸಿಹಿ ಹಂಚುವ ಮೂಲಕ ಸಾಂಸ್ಕೃತಿಕವಾಗಿ ಕೊಂಡಾಡಿದ್ದು ವಿಶೇಷವೆನಿಸಿತು.

ಕನ್ನಡ ಧ್ವಜದ ಸುತ್ತಲೂ ಮಕ್ಕಳೆಲ್ಲರೂ ನಿಂತು ದೇಶ ಭಕ್ತಿ ಗೀತೆಗಳನ್ನು ಮತ್ತು ನಾಡ ಗೀತೆಗಳನ್ನು ಮಧುರವಾದ ಧ್ವನಿಯಲ್ಲಿ ಹಾಡಿದ್ದು ಮನಸೆಳೆಯಿತು. ಕುವೆಂಪುನಗರ ಹೌಸ್ ಓನರ್ಸ್ ವೆಲ್ಫೇರ್ ಅಸೋಸಿಯೇಷನ್ ವತಿಯೊಂದ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರುಗಳು ಮತ್ತು ಬಡಾವಣೆಯ ನಿವಾಸಿಗಳೆಲ್ಲರೂ ಭಾಗವಹಿಸಿದ್ದರು.

ಇದನ್ನೂ ಓದಿ: ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!

ರಾಜಕೀಯ

ಮೈಸೂರು: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ಸ್ವಂತ ಲಾಭಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಅಲ್ಲ ಎಂದು ಇಂದು (ಸೆ.26) ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಹೇಳಿದರು.  

ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು ಎಂದು ಹೇಳಿದರು.

ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಮತ್ತು ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದ ಹಾಗೂ ಜನತೆಯ ಹಿತದೃಷ್ಟಿಯಿಂದ ಆದೇಶ ಮಾಡಲಾಗಿದೆ. ಬಿಜೆಪಿಯವರನ್ನು ಮೊದಲು ಚಡ್ಡಿಗಳು ಎಂದೇ ಕರೆಯಲಾಗುತ್ತಿತ್ತು, ಈಗ ಚಡ್ಡಿ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ನೆಲ, ಜಲ, ಭಾಷೆಯ ವಿಷಯವನ್ನು ರಾಜಕಾರಣ ಮಾಡಬಾರದು ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಡಿಎಂಕೆ ‘ಬಿ ಟೀಮ್’ ಎಂಬ ಬಿಜೆಪಿ ಆರೋಪ ರಾಜಕೀಯಪ್ರೇರಿತವಾದುದ್ದು. ಡಿಎಂಕೆ ತಮಿಳುನಾಡಿನವರು. ಬಿಜೆಪಿ ಪಕ್ಷ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಅವರನ್ನು ಏನೆಂದು ಹೇಳಬೇಕು? ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿಗಳಿಗೆ ಪತ್ರ ಬರೆದಿರುವುದು ಸಂತೋಷದ ವಿಷಯ. ಅದನ್ನು ನಾನು ಸ್ವಾಗತಿಸಿದ್ದೇನೆ. ಆದರೆ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ಸುಳ್ಳು ಎಂದರು.

ಇದನ್ನೂ ಓದಿ: ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನ: ಹೆಚ್.ಡಿ.ಕುಮಾರಸ್ವಾಮಿ

ರಾಜ್ಯ ಸರ್ಕಾರ ಈ ರಾಜ್ಯದ ರೈತರ ಹಾಗೂ ರಾಜ್ಯದ ಹಿತರಕ್ಷಣೆಗೆ ಯಾವತ್ತೂ ಹಿಂದೆ ಬಿದ್ದಿಲ್ಲ; ಬೀಳುವುದೂ ಇಲ್ಲ. ನಮಗೆ ಅಧಿಕಾರ ಮುಖ್ಯವಲ್ಲ; ರಾಜ್ಯದ ಜನರ ಹಿತ ಮುಖ್ಯ. ಇದರಲ್ಲಿ ನಾವು ಬಲವಾದ ನಂಬಿಕೆ ಇಟ್ಟುಕೊಂಡಿರುವವರು. ಜನರು ಬಂದ್ ಮಾಡುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಬಂದ್, ಮೆರವಣಿಗೆ, ಪ್ರತಿಭಟನೆ ಮಾಡಬಾರದು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ಮಾಡಿದೆ. ಪ್ರತಿಭಟನೆ ಮಾಡುವವರು ಇದನ್ನು ಕೂಡ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಂದೆ ಸಂಕಷ್ಟ ಸೂತ್ರ ರೂಪಿಸಲು ನಾವು ಒತ್ತಡ ಹೇರುತ್ತಿದ್ದೇವೆ. ಏಕೆಂದರೆ, ಮಳೆ ಕೈಕೊಟ್ಟ ಸಂದರ್ಭದಲ್ಲಿ ಎರಡೂ ಕಡೆ ಸಂಕಷ್ಟ ಶುರುವಾಗುತ್ತದೆ. ಅಂಥ ಸಂದರ್ಭದಲ್ಲಿ ನಾವು ಸಂಕಷ್ಟ ಹಂಚಿಕೊಳ್ಳಬೇಕು. ಇಂತಹ ಸನ್ನಿವೇಶದಲ್ಲಿ ನೀರು ಹಂಚಿಕೆಯ ವಿಚಾರದಲ್ಲಿ ಸಂಕಷ್ಟ ಸೂತ್ರವಿರಬೇಕು. ಮತ್ತೊಂದು ಪರಿಹಾರವೆಂದರೆ, ಮೇಕೆದಾಟು ಯೋಜನೆ ಅನುಷ್ಠಾನ. ಈ ಜಲಾಶಯವಿದ್ದಿದ್ದರೆ 67 ಟಿಎಂಸಿ ನೀರು ಇರುತ್ತಿದ್ದು, ಅಲ್ಲಿ ನೀರಿದ್ದರೆ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತಿತ್ತು. ಈ ಜಲಾಶಯದಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗುತ್ತಿತ್ತು ಎಂಬುದನ್ನು ಒತ್ತಿ ಹೇಳಿದರು.

ಕೇಂದ್ರದ ತಜ್ಞರು ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆಯನ್ನು ವಾಸ್ತವವಾಗಿ ಪರಿಶೀಲಿಸುವ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಜನತಾದಳದ ವರಿಷ್ಠರಾದ ದೇವೇಗೌಡರು, ಈ ಬಗ್ಗೆ ಭೇಟಿಯಾಗಿದ್ದು, ಕೇಂದ್ರದೊಂದಿಗೆ ಅವರ ಹೊಸ ಸ್ನೇಹದಿಂದ ಪರಿಹಾರ ದೊರೆಯಬಹುದೇ ನೋಡಬೇಕಿದೆ. ರಾಜ್ಯ ಸರ್ಕಾರ ಪರಿಹಾರ ಸೂತ್ರ ಕೋರಿ ಬರೆದಿರುವ ಪತ್ರಕ್ಕೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ, ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು ಎಂದು ಒತ್ತಾಯಿಸಿದರು.

ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾದ ಪ್ರಮಾಣದ ಬಗ್ಗೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ ಸಂಕಷ್ಟದ ಸಮಯದಲ್ಲಿ ಆ ರಾಜ್ಯಕ್ಕೆ ನೀರು ಬಿಡುವ ಪ್ರಮಾಣ ತಿಳಿಸುವ ಸಂಕಷ್ಟ ಸೂತ್ರ ಇನ್ನೂ ನಿರ್ಧಾರವಾಗಿಲ್ಲ. ಇಂತಹ ಸಂದರ್ಭದಲ್ಲಿ ಒಂದು ಸೌಹಾರ್ದ ಇತ್ಯರ್ಥಕ್ಕೆ ಬರುವುದೇ ಉತ್ತಮ. ಆದ್ದರಿಂದ ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು. ಕಾವೇರಿ ವಿಷಯದ ವಾದಮಂಡನೆಗೆ ಮೊದಲಿನಿಂದಲೂ ಇರುವ ಕಾನೂನೂ ತಂಡವೇ ಈಗಲೂ ಇದ್ದು, ಎಲ್ಲ ಪಕ್ಷದ ಸರ್ಕಾರದ ಅವಧಿಯಲ್ಲಿ ಇದ್ದ ತಂಡವೇ ಆಗಿದೆ ಎಂದು ಪ್ರತಿಕ್ರಿಯಿಸಿದರು.

ರಾಜಕೀಯ

ಮೈಸೂರು: ಇಂದು ವರುಣಾ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ಕೃತಜ್ಞತಾ ಸಮರ್ಪಣಾ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕಾರಣಕ್ಕಾಗಿ ನಾಡಿನ ಜನತೆಗೆ ನಾನು ಕೃತಜ್ಞ.

ಇದು ನನ್ನ ಕೊನೆಯ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ. 2013ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ.

ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು, ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದಿದ್ದೆ. ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ, ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ ಎಂಬುದು ನನ್ನ ಭಾವನೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಗ್ಯಾರಂಟಿಗಳು ಜಾರಿ ಆಗುವುದಿಲ್ಲ, ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ನಾವು ಈಗ ಐದನ್ನೂ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಬಡವರ-ಮಧ್ಯಮ ವರ್ಗದವರ ಪರವಾದ ಯೋಜನೆ ಘೋಷಿಸಿದಾಗ ಪ್ರಧಾನ ಮಂತ್ರಿ ಮೋದಿಯವರು ಜನರಿಗೆ ಅನುಕೂಲ ಮಾಡುವ ನಮ್ಮ ಯೋಜನೆಗೆ ತಮ್ಮ ಸಹಕಾರ ನೀಡಬೇಕಿತ್ತು. ಆದರೆ ಮೋದಿ ಅವರಿಗೆ ಬಡವರ-ಮಧ್ಯಮ ವರ್ಗದವರ ಪ್ರಗತಿ, ಅಭಿವೃದ್ಧಿ ಬೇಕಾಗಿಲ್ಲ. ಅದಕ್ಕೇ ಬಿಜೆಪಿಯವರು ಜನರಲ್ಲಿ ತಮ್ಮ ಸಂಪ್ರದಾಯದಂತೆ ಸುಳ್ಳುಗಳನ್ನು ಎರಚಾಡುತ್ತಾ ಗೊಂದಲ ಸೃಷ್ಟಿಸುತ್ತಿದ್ದಾರೆ” ಎಂದರು.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಮೈಸೂರು (ಮಾ.26): ಕುಮಾರಸ್ವಾಮಿ ಹಮ್ಮಿಕೊಂಡಿದ್ದ ಪಂಚರತ್ನ ಯಾತ್ರೆಯಲ್ಲಿ ಒಮ್ಮೆಯಾದರೂ ಭಾಗವಹಿಸಲು ಅವಕಾಶ ಮಾಡಿಕೊಡುವಂತೆ ಭಗವಂತನಲ್ಲಿ ನಾನು ಬೇಡಿಕೊಂಡಿದ್ದೆನು. ಈಗ ಆ ಮಹದಾಸೆ ಈಡೇರಿದೆ ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಹೇಳಿದರು. ಮೈಸೂರು ನಗರದ ರಿಂಗ್ ರಸ್ತೆಯ ಉತ್ತನಹಳ್ಳಿ ಬಳಿಯ ಮೈದಾನದಲ್ಲಿ ಇಂದು ಪಂಚರತ್ನ ರಥಯಾತ್ರೆಯ ಬೃಹತ್ ಸಮಾರೋಪ ಸಮಾವೇಶ ನಡೆಯಿತು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಹೆಚ್.ಡಿ.ದೇವೇಗೌಡರು, ‘ರಾಜ್ಯದಲ್ಲಿ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭವನ್ನು ನೀವು ರೂಪಿಸಿದ್ದೀರಿ. ಕುಮಾರಸ್ವಾಮಿ ತಮ್ಮ ಆರೋಗ್ಯ ಲೆಕ್ಕಿಸದೇ ರಾಜ್ಯ ಸಂಚಾರ ಮಾಡಿದ್ದಾರೆ. ಅವರು ರಾಜ್ಯ ಸುತ್ತಾಡಿದ್ದನ್ನು ನೊಡಿ ಕಣ್ಣು ತುಂಬಿಕೊಂಡಿದ್ದೇನೆ. ನನ್ನ ಆರೋಗ್ಯ ಸರಿಯಾಗಿದ್ದರೆ ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದೆನು. ಭಗವಂತನು ಈ ಕಾರ್ಯಕ್ರಮದಲ್ಲಿ ಒಮ್ಮೆಯಾದರೂ ಭಾಗಿಯಾಗುವಂತೆ ಮಾಡಪ್ಪಾ ಎಂದು ಬೇಡಿಕೊಂಡಿದ್ದೆನು’ ಎಂದರು.

ಮೈಸೂರಿನ ಕೃಷ್ಣರಾಜೇಂದ್ರ ಒಡೆಯರು, ಸರ್.ಎಂ.ವಿಶ್ವೇಶ್ವರಯ್ಯ, ಟಿಪ್ಪು ಸುಲ್ತಾನ್, ಕುವೆಂಪು ಅವರಂತಹ ವಿಶ್ವಮಾನ್ಯ ನಾಯಕರು ಹುಟ್ಟಿದ ಕನ್ನಡ ನಾಡಿನಲ್ಲಿ ಜನಿಸಿದ ಹೆಮ್ಮೆ ನನಗಿದೆ. ನಾನೊಬ್ಬ ಕನ್ನಡಿಗನಾಗಿ ದೇಶದ ಅಭಿವೃದ್ಧಿಗೆ ಪ್ರಧಾನಮಂತ್ರಿಯಾಗಿ ಮಾಡಿದ ಕೆಲಸವು ಇಂದಿಗೂ ಮಾತನಾಡುತ್ತಿದೆ. ನಾಡಿನಲ್ಲಿ ಜಗತ್ತಿನ ಏಳಿಗೆಗಾಗಿ ಒಂದು ಸಣ್ಣ ದೀಪವನ್ನು ಹಚ್ಚಿದ್ದೇನೆ ಎಂಬ ತೃಪ್ತಿಯಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಹೇಳುತ್ತಾ ಜನಸಂದಣಿ ನೋಡಿ ಗದ್ಗದಿತರಾದರು. ತಾವು ಪ್ರಧಾನಮಂತ್ರಿ ಆಗಿದ್ದಾಗ, ರೈತನ ಮಗನಾಗಿ ರೈತರ ಹಕ್ಕುಗಳ ರಕ್ಷಣೆಗೆ ಮಾಡಿದ ಕಾರ್ಯಗಳನ್ನು ಬಿಚ್ಚಿಟ್ಟರು. ಪಂಜಾಬಿನ ರೈತರು ಒಂದು ಭತ್ತದ ತಳಿಗೆ ದೇವೇಗೌಡರ ಹೆಸರನ್ನು ಇಟ್ಟಿರುವ ಬಗ್ಗೆ ನನೆಪಿಸಿಕೊಂಡರು. ಇನ್ನು ಪ್ರಧಾನಮಂತ್ರಿಯಾಗಿ ಆಡಳಿತ ನಡೆಸಿದ ಇಷ್ಟು ವರ್ಷಗಳ ನಂತರವೂ ದೇಶ, ವಿದೇಶದ ಜನರು ಸ್ಮರಿಸುತ್ತಾರೆ. ಹಲವು ಮಹನೀಯರು ಹುಟ್ಟಿದ ನಾಡಿನಲ್ಲಿ ಜಗತ್ತಿನ ಏಳಿಗೆಗಾಗಿ ಒಂದು ಸಣ್ಣ ದೀಪವನ್ನು ಹಚ್ಚಿದ್ದೇನೆ ಎಂಬ ತೃಪ್ತಿಯಿದೆ ಎಂದು ಭಾವುಕರಾದರು.

ಜಾತಿ, ಮತ ಆಧಾರದ ಮೇಲೆ ಅಧಿಕಾರ ಹಿಡಿಯುವುದು ನಿಂತಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಹಾಗೂ ರೈತರ ಹಕ್ಕುಗಳಿಗೆ ನ್ಯಾಯ ಒದಗಿಸಿದ್ದೇನೆ. ರೈತರ ಹಕ್ಕಿಗಾಗಿ, ಕಾವೇರಿ, ಗಂಗೆ, ಕೃಷ್ಣೆ ಸೇರಿ ಹಲವು ನೀರಾವರಿ ಯೋಜನೆಗಳಿಗೆ ಮಾಡಿದ್ದೇನೆ. ನಾನು ಮಹಿಳೆಯರಿಗೆ ರಾಜಕೀಯ ಮೀಸಲಾತಿ ನಿಡಲು ಶ್ರಮಿಸಿದ್ದೇನೆ. ನಾನು ಪ್ರಧಾನಮಂತ್ರಿ ಆಗಿದ್ದಾಗ ಕಾನೂನು ರೂಪಿಸಲು ಮುಂದಾದಾಗ ಅಧಿಕಾರ ಕಳೆದುಕೊಂಡೆನು. ನಂತರ ಅಧಿಕಾರಕ್ಕೆ ಬಂದವರು ಕಾನೂನು ರೂಪಿಸಿದರೂ, ಅದಕ್ಕೆ ಯೋಜನೆ ಹಾಕಿದ್ದ ನನ್ನ ಹೆಸರು ಹೇಳುವುದನ್ನೇ ಮರೆತುಬಿಟ್ಟರು ಎಂದು ಹೇಳಿದರು. ರಾಜ್ಯದಲ್ಲಿ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ದೊರಕಬೇಕಾದರೆ ನಾನು ಪ್ರಧಾನಮಂತ್ರಿ ಚಂದ್ರಶೇಖರ್‌ ಅವರೊಂದಿಗೆ ಹೋರಾಟ ಮಾಡಿದ ಪರಿಪಾಟಲು ನನಗೆ ಗೊತ್ತು. ಬೆಂಗಳೂರು ಅಭಿವೃದ್ಧಿಗೆ ಈ ರೈತನ ಮಗನಾಗಿ ದುಡಿದಿದ್ದೇನೆ. ನಾನು ಏನು ಮಾಡಿದ್ದೇನೆ ಎಂಬುದು ಭಗವಂತನಿಗೆ ಮತ್ತು ನಿಮಗೆ ತಿಳಿದಿದೆ. ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದಾಗ ಬೆಂಗಳೂರು – ಮೈಸೂರು ಹೆದ್ದಾರಿ ಅಭಿವೃದ್ಧಿಗೆ ಏನು ತೀರ್ಮಾನ ಕೈಗೊಂಡಿದ್ದೇನೆ ಎಂಬುದು ಗೊತ್ತಿದೆ. ಅದರೆ, ನಾನು ಪ್ರಚಾರವನ್ನು ಪಡೆಯುವುದಿಲ್ಲ ಎಂದರು.

ನನ್ನ 70 ವರ್ಷಗಳ ಅಧಿಕಾರದಲ್ಲಿ ಎಂದಿಗೂ ಕೊಟ್ಟ ಭರವಸೆ ಈಡೇರಿಸಲು ವಿಫಲವಾಗಿಲ್ಲ. ಒಂದು ವೇಳೆ ನಾನು ಕೊಟ್ಟ ಭರವಸೆ ಈಡೇರಿಸಲಿದ್ದಾಗ ರಾಜಿನಾಮೆ ಕೊಟ್ಟಿದ್ದೇನೆ. ನಾನು ಎಲ್ಲ ಕಾಲಕ್ಕೂ ಅಭಿವೃದ್ಧಿ ಮಂತ್ರ ಜಪಿಸಿದ್ದೇನೆ. ನಾನು ಬೆರಳೆಣಿಕೆ ವರ್ಷಗಳಷ್ಟು ಮಾತ್ರ ಅಧಿಕಾರದಲ್ಲಿ ಇದ್ದು, ದೇವರಾಣೆಗೂ ನಾನು ಜನರ ಅಭಿವೃದ್ಧಿಗೆ ದುಡಿದಿದ್ದೇನೆ. ನನ್ನ ಮಕ್ಕಳು, ಮೊಮ್ಮಕ್ಕಳಿಗೂ ಜನರಿಗೋಸ್ಕರ ದುಡಿಯುವಂತೆ ಹೇಳಿದ್ದೇನೆ. ಅವರೂ ಕೂಡ ನಾನು ಸಾಗಿದ ದುಡಿಮೆ ಹಾದಿಯಲ್ಲಿಯೇ ನಡೆಯುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭವನ್ನು ನೀವು ರೂಪಿಸಿದ್ದೀರಿ. ಕುಮಾರಸ್ವಾಮಿ ತಮ್ಮ ಆರೋಗ್ಯ ಲೆಕ್ಕಿಸದೇ ರಾಜ್ಯ ಸಂಚಾರ ಮಾಡಿದ್ದಾರೆ. ಅವರು ರಾಜ್ಯ ಸುತ್ತಾಡಿದ್ದನ್ನು ನೊಡಿ ಕಣ್ಣು ತುಂಬಿಕೊಂಡಿದ್ದೇನೆ. ನನ್ನ ಆರೋಗ್ಯ ಸರಿಯಾಗಿದ್ದರೆ ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದೆನು. ಭಗವಂತನು ಈ ಕಾರ್ಯಕ್ರಮದಲ್ಲಿ ಒಮ್ಮೆಯಾದರೂ ಭಾಗಿಯಾಗುವಂತೆ ಮಾಡಪ್ಪಾ ಎಂದು ಬೇಡಿಕೊಂಡಿದ್ದೆನು. ನನ್ನ ಆಸೆಯನ್ನು ಕೇಳಿಕೊಂಡ ಭಗವಂತ ನನ್ನನ್ನು ನಿಮ್ಮಮುಂದೆ ನಿಲ್ಲಿಸಿದ್ದಾನೆ. ನಾನು ಭಗವಂತನ ಆಶೀರ್ವಾದದ ಭಾಗವಾಗಿದ್ದೇನೆ. ಆದರೆ, ನನ್ನ ಶಕ್ತಿ ನೀವು ಆಗಿದ್ದೀರಿ ಎಂದರು.

ಸಮಾರೋಪ ಸಮಾರಂಭವನ್ನು ಉದ್ದೇಶಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನನ್ನ ರಾಜಕೀಯ ಜೀವನದ ಅವಿಸ್ಮರಣೀಯ ಕ್ಷಣವಿದು. ನನ್ನ ಪೂಜ್ಯ ತಂದೆಯವರು, ಮಾಜಿ ಪ್ರಧಾನಮಂತ್ರಿಗಳು ಆದ ಶ್ರೀ.ಹೆಚ್.ಡಿ.ದೇವೇಗೌಡ ಪಂಚರತ್ನ ರಥಯಾತ್ರೆ ಸಮಾರೋಪ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅವರ ಸಾನ್ನಿಧ್ಯದಲ್ಲಿ ನಡೆದ ಜೆಡಿಎಸ್ ಹಬ್ಬ ನನ್ನ ರಾಜಕೀಯ ಜೀವನದ ಮಹೋನ್ನತ ಮೈಲುಗಲ್ಲು. ಮೈಸೂರಿನ ಶ್ರೀ.ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನಡೆದ ಪಂಚರತ್ನ ರಥಯಾತ್ರೆಯ ಐತಿಹಾಸಿಕ ಸಮಾವೇಶಕ್ಕೆ ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಹರಿದುಬಂದಿದ್ದ ಜನಸಾಗರಕ್ಕೆ ನನ್ನ ಅನಂತ ಧನ್ಯವಾದಗಳು ಎಂದರು.

ಪಂಚರತ್ನ ಯಾತ್ರೆ ಸಮಾರೋಪದಲ್ಲಿ ದೇವೇಗೌಡರು ಭಾಷಣ ಮಾಡುತ್ತಿದಾಗ ಕಣ್ಣೀರು ಹಾಕಿದ ಕುಮಾರಸ್ವಾಮಿ ಮತ್ತು ರೇವಣ್ಣ. ಹತ್ತು ಲಕ್ಷಕ್ಕೂ ಹೆಚ್ಚು ಜನರು ಈ ಐತಿಹಾಸಿಕ ಸಮಾವೇಶದಲ್ಲಿ ಸೇರಿರುವ ನಿರೀಕ್ಷೆ ಇದೆ, ರಾಜ್ಯದ ದಶದಿಕ್ಕುಗಳಿಂದ ಆಗಮಿಸುವ ಪ್ರತಿಯೊಬ್ಬರಿಗೂ ಆಸನ ಹಾಗೂ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು.

ರಾಜಕೀಯ ರಾಜ್ಯ

ಡಿ.ಸಿ.ಪ್ರಕಾಶ್ ಸಂಪಾದಕರು

ತಮಿಳುನಾಡಿನ ವಿರುದುನಗರ ಜಿಲ್ಲೆಯ ನರಿಕುಡಿ ಬಳಿಯ ಮುಕ್ಕುಳಂ ಗ್ರಾಮದಲ್ಲಿ ವಾಸಿಸುತ್ತಿದ್ದ ಮೊಕ್ಕ ಪಳನಿಯಪ್ಪನ್ ಅಲಿಯಾಸ್ ಉಡಯಾರ್ (ಒಡೆಯರ್) ಸೇರ್ವೈ ಮತ್ತು ಅವರ ಪತ್ನಿ ಆನಂದಾಯಿ ಅಲಿಯಾಸ್ ಪೊನ್ನತ್ತಾಳ್ ದಂಪತಿಗಳಿಗೆ ಡಿಸೆಂಬರ್ 15, 1748 ರಂದು ಜನಿಸಿದವರು ಪೆರಿಯ (ದೊಡ್ಡ) ಮರುದು ಪಾಂಡ್ಯರ್. ಐದು ವರ್ಷಗಳ ನಂತರ 1753 ರಲ್ಲಿ ಚಿನ್ನ (ಚಿಕ್ಕ) ಮರುದು ಪಾಂಡ್ಯರ್ ಜನಿಸಿದರು. ಇಬ್ಬರೂ ಶಿವಗಂಗೈ ಸೀಮೆಯ (ಪ್ರದೇಶದ) ಅರಸನಾದ ಮುತ್ತು ವಡುಗನಾಥನ್ ಸೇನೆಯಲ್ಲಿ ಸಾಮಾನ್ಯ ಸೈನಿಕರಾಗಿ ಸೇರಿಕೊಂಡು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಇವರ ಪರಾಕ್ರಮವನ್ನು ನೋಡಿ ಹೊಗಳಿದ ರಾಜ ಮುತ್ತು ವಡುಗನಾಥರು ಮರುದು ಸಹೋದರರನ್ನು ತನ್ನ ಸೈನ್ಯದ ಪ್ರಮುಖ ಸ್ಥಾನಗಳಿಗೆ ನೇಮಿಸಿದರು.

ಮರುದು ಸಹೋದರರು 1779ರಲ್ಲಿ ತಮ್ಮ ದಂಗೆಯನ್ನು ಪ್ರಾರಂಭಿಸಿ, ಆರ್ಕಾಟ್ ನವಾಬ್, ತೊಂಡೈಮಾನ್ ಮತ್ತು ಕುಂಬಿನಿಯ ಪಡೆಗಳನ್ನು ಸೋಲಿಸಿ, 1780ರಲ್ಲಿ ಶಿವಗಂಗೈ ಪ್ರದೇಶವನ್ನು ವಶಪಡಿಸಿಕೊಂಡು ವೇಲು ನಾಚಿಯಾರ್ ಅವರನ್ನು ಮತ್ತೆ ಸಿಂಹಾಸನಕ್ಕೆ ಮರುಸ್ಥಾಪಿಸುತ್ತಾರೆ.

ಆರ್ಕಾಟ್ ನವಾಬನ ತೆರಿಗೆ ಸಂಗ್ರಹವನ್ನು ಬ್ರಿಟಿಷರೊಂದಿಗೆ ಹಂಚಿಕೊಳ್ಳಲು ಒಪ್ಪಂದವನ್ನು ಮಾಡಿಕೊಂಡ ಜೋಸೆಫ್ ಸ್ಮಿತ್ ನೇತೃತ್ವದ ಬ್ರಿಟಿಷ್ ಕಂಪನಿ ಪಡೆ 1772ರಲ್ಲಿ ರಾಮನಾಥಪುರವನ್ನು ವಶಪಡಿಸಿಕೊಂಡ ನಂತರ, ಶಿವಗಂಗೆಯ ಮೇಲೆ ಯುದ್ಧವನ್ನು ಪ್ರಾರಂಭಿಸಿತು. ಈ ಹಠಾತ್ ದಾಳಿಯನ್ನು ನಿರೀಕ್ಷಿಸದ ರಾಜ ಮುತ್ತು ವಡುಗನಾಥರು ಕಾಳೈಯಾರ್ ಕೋವಿಲ್ ಯುದ್ಧದಲ್ಲಿ ಕೊಲ್ಲಲ್ಪಡುತ್ತಾರೆ. ಇದರಿಂದ ರಾಣಿ ವೇಲುನಾಚಿಯಾರ್, ಮಗಳು ವೆಳ್ಳಚ್ಚಿ, ಮಂತ್ರಿ ತಾಂಡವರಾಯನ್ ಪಿಳ್ಳೈ ಮತ್ತು ಮರುದು ಸಹೋದರರು ದಿಂಡಿಗಲ್ ಬಳಿಯ ವಿರುಪಾಕ್ಷಿ ಅರಣ್ಯಕ್ಕೆ ಓಡಿ ತಪ್ಪಿಸಿಕೊಳ್ಳುತ್ತಾರೆ. 1772ರ ನಂತರ, ಕಾಡಿನಲ್ಲಿ ಮರೆಯಾಗಿ ವಾಸಿಸುತ್ತಿದ್ದ ಮರುದು ಸಹೋದರರು 1779ರಲ್ಲಿ ತಮ್ಮ ದಂಗೆಯನ್ನು ಪ್ರಾರಂಭಿಸಿ, ಆರ್ಕಾಟ್ ನವಾಬ್, ತೊಂಡೈಮಾನ್ ಮತ್ತು ಕುಂಬಿನಿಯ ಪಡೆಗಳನ್ನು ಸೋಲಿಸಿ, 1780ರಲ್ಲಿ ಶಿವಗಂಗೈ ಪ್ರದೇಶವನ್ನು ವಶಪಡಿಸಿಕೊಂಡು ವೇಲು ನಾಚಿಯಾರ್ ಅವರನ್ನು ಮತ್ತೆ ಸಿಂಹಾಸನಕ್ಕೆ ಮರುಸ್ಥಾಪಿಸುತ್ತಾರೆ. ಈ ಯುದ್ಧವು ಚೋಳವಂದಾನ್ ಪ್ರದೇಶದಲ್ಲಿ ಪ್ರಾರಂಭವಾಗಿ ಸಿಲೈಮಾನ್, ಮಣಲೂರು, ತಿರುಪ್ಪುವನಂ, ಮುತ್ತನೇಂದಲ್ ವರೆಗೆ ಸಾಗಿ ಅಂತಿಮವಾಗಿ ಮಾನಾಮದುರೈನಲ್ಲಿ ಯಾವುದೇ ಮಿಲಿಟರಿ ತರಬೇತಿಯಿಲ್ಲದ ಸ್ವಾತಂತ್ರ್ಯದ ಕಿಚ್ಚಿನಿಂದ ಬೀದಿಗಿಳಿದು ಹೋರಾಡಿದ ಜನರ ಸಹಾಯದಿಂದ ಆ ಯುದ್ಧವನ್ನು ಗೆಲ್ಲುತ್ತಾರೆ. ಪಶ್ಚಿಮ ದಿಂಡಿಗಲ್ ನಿಂದ ಹೈದರ್ ಅಲಿಯ ಪಡೆಗಳು ಸಮಯೋಚಿತವಾಗಿ ಆಗಮಿಸಿ ಸಹಾಯಕ್ಕೆ ನಿಂತಿದ್ದು ಕೂಡ ಇವರ ಗೆಲುವಿಗೆ ನೆರವಾಗುತ್ತದೆ. ವೇಲು ನಾಚಿಯಾರ್ ಅವರನ್ನು ಮರುದು ಪಾಂಡ್ಯರ್ ಸಹೋದರರು ಮತ್ತೆ ಅಧಿಕಾರಕ್ಕೆ ತರುತ್ತಾರೆ.

ಜಂಬೂ ದ್ವೀಪ ಘೋಷಣೆ

ಮರುದು ಸಹೋದರರ ಆಳ್ವಿಕೆಯು ಧಾರ್ಮಿಕ ಏಕತೆ ಮತ್ತು ಸಾಮರಸ್ಯಕ್ಕೆ ಗಮನಾರ್ಹವಾಗಿದೆ. ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಅವರು ಕಾಳೈಯಾರ್ ಕೋವಿಲ್ ವಾಲಯದ ಗೋಪುರವನ್ನು ನಿರ್ಮಿಸಿ ಕೊಟ್ಟಿದ್ದೂ ಅಲ್ಲದೇ ಕುಂಡ್ರಕ್ಕುಡಿ ಮತ್ತು ತಿರುಮೋಗೂರು ದೇವಾಲಯಗಳನ್ನು ದುರಸ್ತಿ ಮಾಡಿಕೊಟ್ಟಿದ್ದಾರೆ. ಮಾನಾಮದುರೈ ಸೋಮೇಶ್ವರ ದೇವಾಲಯದ ಗೋಪುರ ಮತ್ತು ರಥವನ್ನೂ ಸಹ ನಿರ್ಮಿಸಿಕೊಟ್ಟಿದ್ದಾರೆ. ಶಿವಗಂಗೈ ಕವಿ ವೇದಾಂತ ಸುಬ್ರಮಣ್ಯಂ ಅವರ ವಾನರ ವೀರ ಮಧುರೈ ಪುರಾಣದಲ್ಲಿನ ಅಂತಿಮ ಸ್ತೋತ್ರವು ಮರುದು ಸಹೋದರರನ್ನು ‘ಯದುಕುಲ ಮರುದು ಭೂಪನ ಮೈಂದರ್ಗಳ್’ (ಸಹೋದರರು) ಎಂದು ಉಲ್ಲೇಖಿಸಿರುತ್ತದೆ. ಕಿರಿಯವನಾದ ಚಿನ್ನ ಮರುದು ರಾಜಕೀಯ ತಂತ್ರಗಾರಿಕೆಯಲ್ಲಿ ನಿಪುಣನಾಗಿದ್ದನು. ಇವರು ತಂಜಾವೂರಿನಿಂದ ತಿರುನಲ್ವೇಲಿಯವರೆಗೆ ದೊಡ್ಡ ರಾಜಕೀಯ ಮೈತ್ರಿಯನ್ನು ಪ್ರಾರಂಭಿಸಿ ಬ್ರಿಟಿಷರ ವಿರುದ್ಧ ಹೋರಾಟಕ್ಕೆ ಚಾಲನೆ ನೀಡಿದ ಮೊದಲಿಗರು. ಮರುದು ಸಹೋದರರು, ಪಾಂಚಾಲಂಕುರುಚ್ಚಿ ಊಮದುರೈ, ಸಿವತ್ತೈಯ ತಂಬಿ, ಮೀನಂಗುಡಿ ಮುತ್ತುಕರುಪ್ಪ ತೇವರ್, ಚಿತ್ರಂಗುಡಿ ಮಾಯಿಲಪ್ಪನ್ ಸೇರ್ವೈ, ವಿರುಪಾಕ್ಷಿ ಗೋಪಾಲರ್, ತೇಳಿ ಯಾದುಲರ್, ಪಳಸಿ ಕೇರಳ ವರ್ಮ ಮತ್ತು ದಿವಂಗತ ಟಿಪ್ಪುವಿನ ಸೇನಾಪತಿಯಾಗಿದ್ದ ಧೊಂಡಿಯ ವಾಘ್ ಅವರೊಂದಿಗೆ ಸೇರಿಕೋಂಡು ಬ್ರಿಟಿಷರ ವಿರುದ್ಧ ದಕ್ಷಿಣ ಭಾರತದ ಒಕ್ಕೂಟವನ್ನು ರಚಿಸಿದರು. ಜೂನ್ 12, 1801 ರಂದು ಚಿನ್ನ ಮರುದು ತಿರುಚ್ಚಿ ತಿರುವರಂಗಂ ಮುಂತಾದ ಸ್ಥಳಗಳಲ್ಲಿ ಪ್ರಕಟಿಸಿದ ಹೇಳಿಕೆಗಳನ್ನು ‘ಜಂಬೂ ದ್ವೀಪ ಘೋಷಣೆ’ ಎಂದು ಕರೆಯಲಾಗುತ್ತದೆ. ಆ ಪ್ರಕಟಣೆಯಲ್ಲಿ ಎಲ್ಲ ಜನಾಂಗದವರೂ ದೇಶಭಕ್ತಿಯ ಕೆಲಸಗಳಲ್ಲಿ ತೊಡಗಿಸಿಕೊಳ್ಳುಬೇಕು ಮತ್ತು ಬ್ರಿಟಿಷರ ವಿರುದ್ಧ ಸಮರ ಸಾರಬೇಕೆಂದು ಕರೆ ನೀಡಲಾಗಿತ್ತು.

ಮರಣದಂಡನೆ:
ಮೇ 28, 1801 ರಂದು ಬ್ರಿಟಿಷರು ವೀರಪಾಂಡಿಯ ಕಟ್ಟಬೊಮ್ಮನ್ ಅವರ ಕಿರಿಯ ಸಹೋದರ ಊಮೈದುರೈಗೆ ಆಶ್ರಯ ನೀಡಿದರು ಎಂಬ ಕಾರಣವನ್ನು ಮುಂದಿಟ್ಟು ಯುದ್ಧವನ್ನು ಪ್ರಾರಂಭಿಸಿದರು. ಈ ಯುದ್ಧವು ಅಡೆತಡೆಯಿಲ್ಲದೆ 150 ದಿನಗಳವರೆಗೆ ನಡೆಯಿತು. ಗೆರಿಲ್ಲಾ ಯುದ್ಧವು ಕಾಳೈಯಾರ್ ಕೋವಿಲ್ ಕಾಡುಗಳಲ್ಲಿ ನಡೆಯಿತು. ಪುದುಕೊಟ್ಟೈನ ತೊಂಡೈಮಾನ್ ಬ್ರಿಟಿಷರಿಗೆ ಸಹಾಯ ಮಾಡಲು ಸೈನ್ಯವನ್ನು ಕಳುಹಿಸಿದನು. ಮರುದು ಸಹೋದರರು ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಸೆರೆಹಿಡಿದವರಿಗೆ ಬಹುಮಾನವನ್ನು ಘೋಷಿಸಲಾಯಿತು. ಕಾಳೈಯಾರ್ ಕೋವಿಲ್ ಅರಣ್ಯವನ್ನು ನಾಶಪಡಿಸುವವರಿಗೆ ನಾಶವಾದ ಭೂಮಿಯನ್ನು 20 ವರ್ಷಗಳವರೆಗೆ ಉಚಿತ ಗುತ್ತಿಗೆ ನೀಡಲಾಗುವುದು ಎಂದು ಬ್ರಿಟಿಷ್ ಸರ್ಕಾರ ಘೋಷಿಸಿತು. ಕ್ಲೊನಾಲ್ ಆಗ್ನ್ಯೂ ಮರುದು ಸಹೋದರರನ್ನು ಕಾಳೈಯಾರ್ ಕೋವಿಲ್ ನಲ್ಲಿ ಬಂಧಿಸಿದನು. ನಂತರ ಗೌರಿವಲ್ಲಭ ಪೆರಿಯ ಉಡಯ ದೇವರನ್ನು ಶಿವಗಂಗೈಯ ಇಸ್ತಿಮಿರ್ ಆಗಿ ನೇಮಿಸಿದನು. ಶಿವಗಂಗೈನ ಸ್ವತಂತ್ರ ಆಳ್ವಿಕೆ ಅಲ್ಲಿಗೆ ಕೊನೆಗೊಂಡಿತು. 

ಮರುದು ಸಹೋದರರು 24-10-1801 ರಂದು ತಿರುಪತ್ತೂರ್ ಕೋಟೆಯಲ್ಲಿ ಗಲ್ಲಿಗೇರಿಸಿ ವೀರ ಮರಣವನ್ನಪ್ಪಿದರು.

ಮರುದು ಸಹೋದರರು 24-10-1801 ರಂದು ತಿರುಪತ್ತೂರ್ ಕೋಟೆಯಲ್ಲಿ ಗಲ್ಲಿಗೇರಿಸಿ ವೀರ ಮರಣವನ್ನಪ್ಪಿದರು. ಮರುದುವಿನೊಂದಿಗೆ ಅವರ ಎಲ್ಲಾ ಪುರುಷ ಉತ್ತರಾಧಿಕಾರಿಗಳನ್ನೂ (ಚಿಕ್ಕ ಮರುದುವಿನ ಒಬ್ಬನೇ ಮಗನಾದ ದುರೈಸ್ವಾಮಿಯನ್ನು ಹೊರತುಪಡಿಸಿ) ಗಲ್ಲಿಗೇರಿಸಲಾಯಿತು. ಇದೇ ಸಂದರ್ಭದಲ್ಲಿ 500ಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರನ್ನು ವಿಚಾರಣೆಯಿಲ್ಲದೆಯೇ ಗಲ್ಲಿಗೇರಿಸಲಾಯಿತು. ಮರುದು ಸಹೋದರರ ಅಪೇಕ್ಷೆಯಂತೆ ಅವರ ತಲೆಗಳನ್ನು ಕಾಲೈಯಾರ್ ಕೋವಿಲ್ ದೇವಸ್ಥಾನದ ಮುಂದೆ ಹೂಳಲಾಯಿತು ಎಂದು ನಂಬಲಾಗುತ್ತಿದೆ. ಚಿನ್ನ ಮರುದುವಿನ ಮಗ ದುರೈಸ್ವಾಮಿ ಮತ್ತು ಮರುದುವಿನ ಸೇನಾಪತಿಗಳು ಬಿಳಿಯರಿಂದ ಸೆರೆಹಿಡಿಯಲ್ಪಟ್ಟು ಪ್ರಿನ್ಸ್ ಆಫ್ ವೇಲ್ಸ್ (ಇಂದಿನ ಪೆನಾಂಗ್) ಗೆ ಗಡಿಪಾರು ಮಾಡಲಾಯಿತು. ಮರುದು ಸಹೋದರರ ಶೌರ್ಯ ಮತ್ತು ತ್ಯಾಗವನ್ನು ಗೌರವಿಸುವ ಸಲುವಾಗಿ ಮರುದು ಸಹೋದರರ ಸ್ಮರಣಾರ್ಥ ಅಂಚೆ ಚೀಟಿಯನ್ನು ಭಾರತೀಯ ಅಂಚೆ ಇಲಾಖೆಯು ಅಕ್ಟೋಬರ್ 23, 2004 ರಂದು ಮಧುರೈ ಮತ್ತು ಚೆನ್ನೈನಲ್ಲಿ ಬಿಡುಗಡೆ ಮಾಡಿತು.

ಮರುದು ಸಹೋದರರ ಸ್ಮರಣಾರ್ಥ ಅಂಚೆ ಚೀಟಿಯನ್ನು ಭಾರತೀಯ ಅಂಚೆ ಇಲಾಖೆಯು ಅಕ್ಟೋಬರ್ 23, 2004 ರಂದು ಮಧುರೈ ಮತ್ತು ಚೆನ್ನೈನಲ್ಲಿ ಬಿಡುಗಡೆ ಮಾಡಿರುತ್ತದೆ.

ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಮರುದು ಸಹೋದರರ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸದೇ ಅವರ ಚಿತ್ರವನ್ನು ತೋರಿಸಿ ಮೈಸೂರು ಹುಲಿ ಟಿಪ್ಪು ಸುಲ್ತಾನನನ್ನು ಕೊಂದ ಉರಿಗೌಡ ಮತ್ತು ನಂಜೇಗೌಡ ಇವರೇ ಎಂದು ಸುಳ್ಳು ಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಯದುಕುಲದ (ಯಾದವರ) ಮರುದು ಸಹೋದರರ ಚಿತ್ರವನ್ನು ಬಳಸಿಕೊಂಡು ಒಕ್ಕಲಿಗ ಸಮುದಾಯವನ್ನು ಪಾಪದ ಕೂಪಕ್ಕೆ ತಳ್ಳುವ ಬಿಜೆಪಿಯ ಓಟ್ ಬ್ಯಾಂಕ್ ರಾಜಕಾರಣವನ್ನು ಯಾರೂ ಮೆಚ್ಚುವುದಿಲ್ಲ. ಸರ್ಕಾರ ಇದನ್ನು ಕೂಡಲೇ ತಡೆಯಬೇಕು. ಒಕ್ಕಲಿಗರನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಬಹುದೊಡ್ಡ ಹುನ್ನಾರವನ್ನು ಸಂಘ ಪರಿವಾರವು ಬಹಳ ವ್ಯವಸ್ಥಿತವಾಗಿ ಮಾಡುತ್ತಿದೆ. ಇದರಿಂದ ಒಕ್ಕಲಿಗ ಸಮುದಾಯವು ಬಹಳ ಎಚ್ಚರಿಕೆಯಿಂದ ಇರಬೇಕು. ಇತಿಹಾಸವನ್ನು ತಿರುಚುವ ಮತ್ತು ಅದನ್ನು ನಂಬಿಸುವ ಕೆಲಸವನ್ನು ಮನುವಾದಿಗಳು ಬಹಳ ಅಚ್ಚುಕಟ್ಟಾಗಿ ಮಾಡುತ್ತಾರೆ. ತಮಿಳುನಾಡು ಬಿಜೆಪಿ ಉಸ್ತುವಾರಿಯಾಗಿರುವ ಸಿ.ಟಿ.ರವಿಯೇ ಇದರ ಸೃಷ್ಟಿಕರ್ತ ಎಂಬ ವಿಚಾರ ಇನ್ನು ತಮಿಳುನಾಡಿನ ದ್ರಾವಿಡ ಪಕ್ಷಗಳಿಗೆ ಮತ್ತು ಅಲ್ಲಿನ ಯಾದವ ಸಮುದಾಯಕ್ಕೆ ತಿಳಿದಿಲ್ಲವೆಂದು ಅನ್ನಿಸುತ್ತಿದೆ. ಇಲ್ಲಿನ ಬಿಜೆಪಿಯವರು ಎಚ್ಚೆತ್ತುಕೊಂಡರೆ ಸರಿ; ಇಲ್ಲದಿದ್ದರೆ ನಡೆಯಲಿರುವ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಇದುವೆ ಮುಳುವಾದರೂ ಆಗಬಹುದು.

ಸಿ.ಟಿ.ರವಿ ಮತ್ತು ಮರುದು ಸಹೋದರರು

ಬಿಜೆಪಿ ಸೃಷ್ಟಿಸಿದ ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳು ಒಂದುವೇಳೆ ನಿಜವೇ ಆಗಿದ್ದರೇ ಈಗ ಬಿಜೆಪಿಗೆ ಅದರಿಂದ ಆಗಬೇಕಿರುವುದಾದರೂ ಏನು? ಟಿಪ್ಪುವನ್ನು ಕೊಂದಿದ್ದಕ್ಕಾಗಿ ಒಕ್ಕಲಿಗರು ಪಶ್ಚಾತಾಪ ಪಡಬೇಕೆ? ಅಥವಾ ಇನ್ನುಳಿದ ಮುಸ್ಲಿಮರನೆಲ್ಲ ಒಕ್ಕಲಿಗರು ಕೊಲ್ಲಬೇಕೆ? ಎಂಬುದನ್ನು ಬಿಜಿಪಿ ಸ್ಪಷ್ಟಪಡಿಸಬೇಕು. ಅಭಿವೃದ್ಧಿಯ ಹೆಸರಿನಲ್ಲಿ ಮತ ಕೇಳಲು ವಿಫಲವಾಗಿರುವ ಕರ್ನಾಟಕ ಬಿಜೆಪಿ, ಒಕ್ಕಲಿಗರು ಮತ್ತು ಮುಸ್ಲಿಮರ ಮಧ್ಯೆ ಕೋಮು ದ್ವೇಶವನ್ನು ಬಿತ್ತಿ, ಹಳೇ ಮೈಸೂರು ಭಾಗದಲ್ಲಿ ತಮ್ಮ ನೆಲೆಯನ್ನು ವಿಸ್ತರಿಸಿಕೊಳ್ಳಲು ಪ್ರಯತ್ನಿಸುವುದು ಸೂಕ್ತವಲ್ಲ. ರಾಜಕೀಯ ಏನೇ ಇರಲಿ ಕೋಮು ಭಾವನೆ ಬೇಡ. ಕುವೆಂಪು ರವರ ಸರ್ವ ಜನಾಂಗದ ತೋಟದಲ್ಲಿ ಕಮಲಕ್ಕೂ ಜಾಗವಿದೆ. ಆದರೆ, ಅದನ್ನು ಪ್ರಜಾಪ್ರಭುತ್ವದ ಅಡಿಯಲ್ಲಿ ನಿಂತು ಶಾಂತಿ, ಪ್ರೀತಿ, ಸಮಾನತೆಯೆಂಬ ಗೊಬ್ಬರವನ್ನು ಹಾಕಿ ಬೆಳೆಸಬೇಕು. ಆಗ ಅದು ಉತ್ತಮವಾದ ಬೆಳೆಯನ್ನು ಕೊಡುತ್ತದೆ.

ಉದಯ ಪೆರುಮಾಳ್ ಗೌಂಡರ್ (ಗೌಡರು) ‘ತುಪ್ಪಾಕಿ ಗೌಂಡರ್’

ಉದಯ ಪೆರುಮಾಳ್ ಗೌಂಡರ್:
ಮರುದು ಸಹೋದರರ ನೇತೃತ್ವದಲ್ಲಿ ರೈಫಲ್ ಬ್ರಿಗೇಡನ್ನು ರಚಿಸಿ ಅದರ ಕಮಾಂಡರ್ ಆಗಿದ್ದವರು ಉದಯ ಪೆರುಮಾಳ್ ಗೌಂಡರ್. ಇವರನ್ನು ಮರುದು ಸಹೋದರರು ತಿರುಪ್ಪಾಚೇತಿ ಪಟ್ಟಣದ ಮುಖ್ಯಸ್ಥರನ್ನಾಗಿ ನೇಮಿಸಿದ್ದರು. ಇವರ ಮೂಲ ಹೆಸರು ಉದಯ ಪೆರುಮಾಳ್ ಗೌಂಡರ್ (ಗೌಡರು) ಇವರನ್ನು ‘ತುಪ್ಪಾಕಿ ಗೌಂಡರ್’ ಎಂಬ ಅಡ್ಡ ಹೆಸರಿನಿಂದ ಜನ ಪ್ರೀತಿಯಿಂದ ಕರೆಯುತ್ತಿದ್ದರು. ಅಕ್ಟೋಬರ್ 1, 1801 ರಂದು, ಕಾಳೈಯಾರ್ ಕೋವಿಲ್ ನಲ್ಲಿ ಬ್ರಿಟಿಷರಿಗೂ ಮತ್ತು ಶಿವಗಂಗೈ ಪ್ರದೇಶದ ಪಡೆಗಳಿಗೂ ನಡೆದ ಯುದ್ಧದಲ್ಲಿ ಇವರು ವೀರ ಮರಣವನ್ನು ಹೊಂದಿದರು.  ಬಿಜೆಪಿಯವರು ತಮಿಳುನಾಡಿನ ಉದಯ (ಪೆರುಮಾಳ್) ಗೌಡರನ್ನು ಇಲ್ಲಿಗೆ ತಂದು, ತಿರುಚಿ ಉರಿಗೌಡ ಎಂದು ಬಿಂಬಿಸುತ್ತಿದ್ದಾರೆಯೇ ಎಂಬ ಅನುಮಾನವಿದೆ. ಇತಿಹಾಸ ತಜ್ಞರೇ ಇದನ್ನು ಬಿಡಿಸಬೇಕು.