ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಮೋದಿ Archives » Page 6 of 7 » Dynamic Leader
October 23, 2024
Home Posts tagged ಮೋದಿ (Page 6)
ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಎಲ್‌.ಕೆ.ಅಡ್ವಾಣಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರನ್ನು 75 ವಯಸ್ಸಿನ ನಂತರ ” ಮಾರ್ಗದರ್ಶಕ್ ಮಂಡಲ್ ” ಎಂದು ಕರೆಯಲ್ಪಡುವ ಸ್ಟೀರಿಂಗ್ ಸಮಿತಿಗೆ ನೇಮಿಸಲಾಗಿತ್ತು. ಈ ನಿಯಮದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ವಿನಾಯಿತಿ ಸಿಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಈಗ 73 ವರ್ಷ ವಯಸ್ಸಾಗಿದೆ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಪ್ರಧಾನಿಯಾದಾಗ, ಮೋದಿ ಅವರು 78 ವರ್ಷ ವಯಸ್ಸಿನವರೆಗೆ ಅಧಿಕಾರದಲ್ಲಿ ಉಳಿಯಬೇಕಾಗುತ್ತಾದೆ. ಹಾಗಾಗಿ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರಂತೆ 75 ವರ್ಷ ವಯಸ್ಸಿನ ನಂತರ ನಿವೃತ್ತಿಯಾಗಬೇಕು ಎಂದು ಬಲವಂತಮಾಡದೇ ಮೋದಿಯೇ ಪೂರ್ಣಾವಧಿಯವರೆಗೆ ಪ್ರಧಾನಿಯಾಗಿ ಮುಂದುವರಿಯಲು ಬಿಜೆಪಿ ತನ್ನ ನಿಲುವನ್ನು ಬದಲಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಪ್ರಧಾನಿ ಮೋದಿಯವರ ಹೆಸರಿನಲ್ಲಿ ಬಿಜೆಪಿ ದೇಶಾದ್ಯಂತ ಮತಗಳನ್ನು ಸಂಗ್ರಹಿಸುತ್ತಿದ್ದು, ಅವರು ನೇತೃತ್ವ ವಹಿಸಿಕೊಂಡ ನಂತರವೇ ವಿವಿಧ ಚುನಾವಣೆಗಳಲ್ಲಿ ಪಕ್ಷವು ಗೆಲುವು ಸಾಧಿಸುತ್ತಿದೆ ಎಂದು ಬಿಜೆಪಿ ನಾಯಕರು ಗಮನಸೆಳೆದಿದ್ದಾರೆ. ಆದ್ದರಿಂದ ಅವರಿಗೆ 75 ವಯಸ್ಸಿನ ನಿಯಮದಿಂದ ವಿನಾಯಿತಿ ಕಡ್ಡಾಯವೆಂದು ಪರಿಗಣಿಸಲಾಗಿದೆ.

ಇದೇ ವೇಳೆ, ಮೋದಿ ಅವರು ಸ್ಟೀರಿಂಗ್ ಕಮಿಟಿಗೆ ಹೋಗಬೇಕು ಎಂದು ಹಿರಿಯ ನಾಯಕರು ಒಮ್ಮತದ ಅಭಿಪ್ರಾಯ ಮಂಡಿಸಿದರೆ ಅರ್ಧದಷ್ಟು ಅವಧಿಗೆ ಮತ್ತೊಂದು ಪ್ರಧಾನಿಯನ್ನು ನೇಮಿಸಬಹುದು ಎಂದೂ ಹೇಳಲಾಗುತ್ತಿದೆ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆಗೆ ಅವಕಾಶವಿಲ್ಲ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ನರೇಂದ್ರ ಮೋದಿಯಷ್ಟೇ ಅಲ್ಲ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ವಯಸ್ಸು ಏರಿದ್ದರೂ ಮತ್ತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ. 72 ವರ್ಷದ ರಾಜನಾಥ್ ಸಿಂಗ್ ಅವರು ಲಕ್ನೋದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಘೋಷಿಸಿದೆ.

ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಸಚಿವರಾದರೆ 77ರ ತನಕ ಅಧಿಕಾರದಲ್ಲಿ ಮುಂದುವರಿಯಬಹುದು. ಇದನ್ನು ಇತರ ಭಾರತೀಯ ಜನತಾ ಪಕ್ಷದ ನಾಯಕರು ಒಪ್ಪಿಕೊಳ್ಳುತ್ತಾರೆಯೇ ಎಂಬ ಪ್ರಶ್ನೆಯೂ ಮೋದಿ ಮತ್ತು ರಾಜನಾಥ್ ಸಿಂಗ್ ಅವರ ಆಯ್ಕೆಯಿಂದಾಗಿ ಉದ್ಭವಿಸಿದೆ.

ಈ ಹಿಂದೆ ಕಲ್‍ರಾಜ್ ಮಿಶ್ರಾ ಅವರಂತಹ ಕೇಂದ್ರ ಸಚಿವರು ತಮ್ಮ 75ನೇ ವಯಸ್ಸಿನಲ್ಲಿ ರಾಜೀನಾಮೆ ನೀಡಿದ್ದರು ಎಂದು ಬಿಜೆಪಿಗರು ಗಮನಸೆಳೆದಿದ್ದಾರೆ. ಅದೇ ರೀತಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ವಯಸ್ಸು 75 ದಾಟುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿಯಬೇಕಾಯಿತು. ಗುಜರಾತ್ ಮುಖ್ಯಮಂತ್ರಿಯಾಗಿದ್ದ ಆನಂದಿಬೆನ್ ಪಟೇಲ್ ಕೂಡ ಇದೇ ರೀತಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ನಂತರ ರಾಜ್ಯಪಾಲರಾಗಿ ನೇಮಕವಾದರು.

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಮಾತ್ರ ಹೊರಬಿದ್ದಿದ್ದು, ಮುಂದಿನ ಪಟ್ಟಿಗಳಲ್ಲಿ 70 ದಾಟಿದ ಹಿರಿಯ ನಾಯಕರಿಗೆ ಮತ್ತೆ ಚುನಾವಣೆಯಲ್ಲಿ ಸ್ಪರ್ದಿಸಲು ಬಿಜೆಪಿ ಅವಕಾಶ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕು. ಮತ್ತು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಅಧಿಕಾರಕ್ಕೆ ಬಂದು, ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ, ಪೂರ್ಣಾವಧಿಯವರೆಗೂ ಅಧಿಕಾರದಲ್ಲಿ ಮುಂದುವರಿಯುತ್ತಾರೆಯೇ ಎಂಬುದು ಅನುಮಾನವೇ ಎಂದು ಬಿಜೆಪಿಯಲ್ಲೇ ಗುಸುಗುಸು ಮಾತನಾಡಿಕೊಳ್ಳುತ್ತಿದ್ದಾರೆ.

ದೇಶ

ಹಿರಿಯ ನಾಯಕರೊಬ್ಬರು ನನ್ನ ಬಳಿಗೆ ಬಂದು, ‘ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದೀರಿ; ಸ್ವಲ್ಪ ವಿಶ್ರಾಂತಿ ಪಡೆದುಕೊಳ್ಳಿ’ ಎಂದು ಕೇಳಿಕೊಂಡರು.

ಲೋಕಸಭೆ ಚುನಾವಣೆಗೆ ಎಲ್ಲ ಪಕ್ಷಗಳು ಬಹಳ ಗಂಭೀರವಾಗಿ ಸಿದ್ಧತೆಗಳನ್ನು ಮಾಡಿಕೊಂಡು ಬರುತ್ತಿವೆ. ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಮೂರನೇ ಅವಧಿಗೆ ಅಧಿಕಾರ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿವೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಪ್ರತಿ ಮಂಗಳವಾರದಂದು ಸಮಾಲೋಚನಾ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಚುನಾವಣೆ ಗೆಲುವಿನ ತಂತ್ರಗಳನ್ನು ರೂಪಿಸಲು ಆರಂಭಿಸಿದ್ದಾರೆ.

ಈ ಸಮಾಲೋಚನಾ ಸಭೆಗಳಲ್ಲಿ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಭಾಗವಹಿಸಿ, ಮೊದಲ ಬಾರಿ ಮತ ಚಲಾಯಿಸಲಿರುವ ಹೊಸ ಮತದಾರರು, ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳು, ಹಿಂದುಳಿದ ವರ್ಗಗಳ ಮತದಾರರು, ಯುವಕರು ಮತ್ತು ಮಹಿಳೆಯರು ಹೀಗೆ ಪ್ರತಿಯೊಂದು ವಿಭಾಗವನ್ನು ಗುರಿಯಾಗಿಟ್ಟುಕೊಂಡು ಯೋಜನೆ ರೂಪಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಭಾರತ್ ಮಂಟಪದಲ್ಲಿ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, “ಮುಂದಿನ 100 ದಿನಗಳಲ್ಲಿ ನಾವೆಲ್ಲರೂ ಪ್ರತಿಯೊಬ್ಬ ಹೊಸ ಮತದಾರರನ್ನು, ಪ್ರತಿಯೊಬ್ಬ ಫಲಾನುಭವಿಯನ್ನು, ಪ್ರತಿ ಸಮುದಾಯವನ್ನು ತಲುಪಬೇಕಾಗಿದೆ. ಎಲ್ಲರ ವಿಶ್ವಾಸವನ್ನು ಗಳಿಸಬೇಕು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) 400 ಕ್ಷೇತ್ರಗಳಲ್ಲಿ ಗೆಲುವನ್ನು ಸಾದಿಸಲು ಶ್ರಮಿಸಬೇಕು. ಅದರಲ್ಲಿ ಬಿಜೆಪಿ 370 ಸ್ಥಾನಗಳಲ್ಲಿ ಗೆಲ್ಲಬೇಕು. ಇದು ಎಲ್ಲವನ್ನು ನಾನು ಮೂರನೇ ಬಾರಿಗೆ ಆಡಳಿತವನ್ನು ಆನಂದಿಸಲಿಕ್ಕಾಗಿ ಕೇಳುತ್ತಿಲ್ಲ. ನಾನು ಇನ್ನೂ ಈ ದೇಶಕ್ಕಾಗಿ ಕೆಲಸ ಮಾಡಲು ಬಯಸುತ್ತಿದ್ದೇನೆ.

ನನ್ನ ಮನೆಯ ಬಗ್ಗೆ ಮಾತ್ರ ಯೋಚಿಸಿದ್ದರೆ ಕೋಟಿಗಟ್ಟಲೆ ಜನರಿಗೆ ಮನೆ ಕಟ್ಟಲು ಸಾಧ್ಯವಾಗುತ್ತಿರಲಿಲ್ಲ. 10 ವರ್ಷಗಳ ಸಮತೋಲಿನ ಆಡಳಿತ ಮತ್ತು 25 ಕೋಟಿ ಜನರನ್ನು ಬಡತನದಿಂದ ಮೇಲಕ್ಕೆತ್ತಿರುವುದು ದೊಡ್ಡ ಸಾಧನೆಯಾಗಿದೆ. ಹಿರಿಯ ನಾಯಕರೊಬ್ಬರು ನನ್ನ ಬಳಿಗೆ ಬಂದು, ‘ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದೀರಿ; ಸ್ವಲ್ಪ ವಿಶ್ರಾಂತಿ ಪಡೆದುಕೊಳ್ಳಿ’ ಎಂದು ಕೇಳಿಕೊಂಡರು. ಆದರೆ ಈಗಲೂ ನಾನು ರಾಜನೀತಿಗಾಗಿ ಅಲ್ಲ ರಾಷ್ಟ್ರನೀತಿಗಾಗಿ ಕಾರ್ಯನಿರ್ವಹಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.

ದೇಶ

ಚುನಾವಣಾ ಬಾಂಡ್ ಯೋಜನೆಯು ಸಮಾನತೆ, ನ್ಯಾಯಸಮ್ಮತತೆ ಮತ್ತು ಪ್ರಜಾಪ್ರಭುತ್ವದ ತತ್ವಗಳನ್ನು ಉಲ್ಲಂಘಿಸಿದೆ. ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪು ಚುನಾವಣೆಯಲ್ಲಿ ಪಾರದರ್ಶಕತೆ, ಮಾಹಿತಿ ಹಕ್ಕು ಮತ್ತು ಸಮಾನತೆ ಮುಂತಾದವುಗಳಿಗೆ ಸಿಕ್ಕಿದ ಜಯವಾಗಿದೆ.

ರಾಜಕೀಯ ಪಕ್ಷಗಳು ದೇಣಿಗೆ ಪಡೆಯುವ ಚುನಾವಣಾ ಬಾಂಡ್ ಯೋಜನೆ ಅಸಿಂಧು ಎಂದು ಸುಪ್ರೀಂ ಕೋರ್ಟ್ ನಿನ್ನೆ ತೀರ್ಪು ನೀಡಿದೆ. ದೇಣಿಗೆಗಳ ವಿವರವನ್ನು ಚುನಾವಣಾ ಆಯೋಗಕ್ಕೆ ನೀಡುವಂತೆಯೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಆದೇಶಿಸಿದೆ.

ಹೀಗಾಗಿ ಕಾರ್ಪೊರೇಟ್ ಕಂಪನಿಗಳು ಮತ್ತು ದೊಡ್ಡ ಉದ್ಯಮಿಗಳಿಂದ ಪ್ರತಿ ಪಕ್ಷಗಳು ಎಷ್ಟು ಹಣ ಪಡೆದಿವೆ ಎಂಬ ವಿವರವನ್ನು ಮಾರ್ಚ್ 31 ರೊಳಗೆ ಭಾರತೀಯ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ.

ಈ ಹಿನ್ನಲೆಯಲ್ಲಿ, ಸುಪ್ರೀಂ ಕೋರ್ಟ್ನ ಈ ತೀರ್ಪನ್ನು ಮಾಜಿ ಹಣಕಾಸು ಸಚಿವ ಹಾಗೂ ರಾಜ್ಯಸಭಾ ಸದಸ್ಯ ಪಿ.ಚಿದಂಬರಂ ಸ್ವಾಗತಿಸಿದ್ದಾರೆ. ಮತ್ತು ಈ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ್ದಾರೆ.

‘ಚುನಾವಣಾ ಬಾಂಡ್ ಯೋಜನೆಯು ಸಮಾನತೆ, ನ್ಯಾಯಸಮ್ಮತತೆ ಮತ್ತು ಪ್ರಜಾಪ್ರಭುತ್ವದ ತತ್ವಗಳನ್ನು ಉಲ್ಲಂಘಿಸಿದೆ. ಮತ್ತು  ಸುಪ್ರೀಂ ಕೋರ್ಟ್‌ನ ತೀರ್ಪು ಚುನಾವಣೆಯಲ್ಲಿ ಪಾರದರ್ಶಕತೆ, ಮಾಹಿತಿ ಹಕ್ಕು ಮತ್ತು ಸಮಾನತೆ ಮುಂತಾದವುಗಳಿಗೆ ಸಿಕ್ಕಿದ ಜಯವಾಗಿದೆ’ ಎಂದು ಹೇಳಿದ್ದಾರೆ.

‘ಪ್ರಸ್ತುತ ದೊಡ್ಡ ಕಾರ್ಪೊರೇಟ್‌ಗಳಿಂದ ಮತ್ತು ದೊಡ್ಡ ದೊಡ್ಡ ಬಂಡವಾಳಶಾಹಿಗಳಿಂದ ಬಿಜೆಪಿ ಪಡೆದ ದೇಣಿಗೆಯಲ್ಲಿ ಶೇಕಡಾ 90ರಷ್ಟು ಬಹಿರಂಗಗೊಳ್ಳಲಿದೆ.

ಹಣ ಕೊಟ್ಟವರು ಯಾರು? ಅವರು ಹಣ ಪಾವತಿಸಿದಾಗ, ಅದಕ್ಕೆ ಪ್ರತಿಯಾಗಿ ಪಕ್ಷ ಅವರಿಗೆ ನೀಡಿದ್ದು ಏನು? ಎಂಬುದನ್ನು ಜಗತ್ತೇ ತಿಳಿಯಲಿದೆ. ರಾಜಕೀಯ ಪಕ್ಷಗಳಿಗೆ ಹಣ ಏಕೆ ಕೊಡಲಾಯಿತು ಎಂದು ಜನ ಪ್ರಶ್ನಿಸುತ್ತಾರೆ. ಆಗ ಜನರು ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ’ ಎಂದು ಚಿದಂಬರಂ ಹೇಳಿದ್ದಾರೆ.  

ದೇಶ

ಪ್ರಧಾನಿ ನರೇಂದ್ರ ಮೋದಿ ಅವರು ಇತರ ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಅವರು ಜನವರಿ 14 ರಂದು ಮಣಿಪುರದಿಂದ ಮಹಾರಾಷ್ಟ್ರಕ್ಕೆ ಭಾರತ್ ಜೋಡೋ ನ್ಯಾಯ ಯಾತ್ರೆಯ ಎರಡನೇ ಹಂತವನ್ನು ಪ್ರಾರಂಭಿಸಿದರು.

ಯಾತ್ರೆಯು ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ 15 ರಾಜ್ಯಗಳನ್ನು ಒಳಗೊಂಡಿದೆ. ಒಟ್ಟು 66 ದಿನಗಳಲ್ಲಿ 110 ಜಿಲ್ಲೆಗಳಲ್ಲಿ ಸುಮಾರು 6700 ಕಿ.ಮೀ. ಪ್ರಯಾಣಿಸುವ ಸಲುವಾಗಿ ಈ ನಡಿಗೆ ನಡೆಯಲಿದೆ.

ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಬಿಹಾರ ಮತ್ತು ಪಶ್ಚಿಮ ಬಂಗಾಳದ ನಂತರ ಇದೀಗ ಒಡಿಶಾದಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ ನಡೆತ್ತಿದ್ದಾರೆ. ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಪ್ರಧಾನಿ ಮೋದಿ ಇತರ ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ವಾಸ್ತವವಾಗಿ ಮೋದಿ ಸಾಮಾನ್ಯ ಜಾತಿ ಕುಟುಂಬದಲ್ಲಿ ಜನಿಸಿದವರು.

ಇವರು “ತೆಲಿ” ಜಾತಿಗೆ ಸೇರಿದವರು. 2000 ರಲ್ಲಿ, ಗುಜರಾತ್‌ನ ಬಿಜೆಪಿ ಸರ್ಕಾರವು ತೆಲಿ ವರ್ಗವನ್ನು ಇತರ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿಕೊಂಡಿತ್ತು. ಈ ಕಾರಣಕ್ಕಾಗಿ, ತಮ್ಮ ಜೀವನ ಪರ್ಯಂತ ಅವರು ಜಾತಿವಾರು ಜನಗಣತಿ ನಡೆಸಲು ಅನುಮತಿ ಕೊಡುವುದಿಲ್ಲ” ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿಯವರ ಈ ಹೇಳಿಕೆ ಭಾರತದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಮೋದಿಯವರ ಶಿಕ್ಷಣದ ವಿವರಗಳನ್ನು ಬಹಿರಂಗಪಡಿಸದೇ ಇರುವ ಹಿನ್ನಲೆಯಲ್ಲಿ, ಈಗ ಅವರ ಜಾತಿಯ ಪ್ರಶ್ನೆಯೂ ಉದ್ಭವಿಸಿದೆ. ಪ್ರಧಾನಿ ಮೋದಿವಿವಿಧ ವೇದಿಕೆಗಳಲ್ಲಿ ತಾನು ಇತರೆ ಹಿಂದುಳಿದ ವರ್ಗಕ್ಕೆ ಸೇರಿದವನು ಎಂದು ಹೇಳಿಕೊಂಡು ಮತ ಸಂಗ್ರಹಿಸಿರುವುದು ಗಮನಾರ್ಹ.

ದೇಶ

“ಜಮ್ಮು ಮತ್ತು ಕಾಶ್ಮೀರ ರಾಜ್ಯವು ಕೇಂದ್ರ ಸರ್ಕಾರದ ಅಧೀನದಲ್ಲಿದ್ದಾಗ, ಮೂಲಸೌಕರ್ಯ ಯೋಜನೆಗಳಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ”

ಹಣಕಾಸು ವಿಚಾರ ಸಂಕಿರಣವೊಂದರಲ್ಲಿ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಮಣ್ಯಂ ಅವರು ಸಾರ್ವಜನಿಕವಾಗಿ ವ್ಯಕ್ತಪಡಿಸಿರುವ ಅಭಿಪ್ರಾಯಗಳ ಕುರಿತು ಅಲ್ಜಜೀರಾ (alzazeera) ಸುದ್ದಿ ಸಂಸ್ಥೆ ವರದಿಯೊಂದನ್ನು ಪ್ರಕಟಿಸಿದೆ. ಅದರಲ್ಲಿ ಕಾಣಿಸಿಕೊಂಡಿರುವ ಮುಖ್ಯ ವಿಷಯಗಳ ಕುರಿತು ವಿವರವಾಗಿ ನೋಡೋಣ.

ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಕೇಂದ್ರ ಎಂದು ಕರೆಯಲ್ಪಡುವ ಸರ್ಕಾರೇತರ ಚಿಂತಕರ ಚಾವಡಿ ಆಯೋಜಿಸಿದ್ದ ಭಾರತದ ಆರ್ಥಿಕ ಪರಿಸ್ಥಿತಿ ಕುರಿತ ವಿಚಾರ ಸಂಕಿರಣದಲ್ಲಿ, ನೀತಿ ಆಯೋಗ್ ಸಿಇಒ ಬಿವಿಆರ್ ಸುಬ್ರಮಣ್ಯಂ ಅವರು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಅದರಲ್ಲಿ “ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರಕಾರದ ಶೇ.50ರಷ್ಟು ತೆರಿಗೆ ರಾಜ್ಯ ಸರಕಾರಕ್ಕೆ ಬರಬೇಕೆಂಬ ಷರತ್ತು ಇತ್ತು” ಆದರೆ ಮೋದಿ ಪ್ರಧಾನಿಯಾದ ನಂತರ ಅವರ ಆಲೋಚನಾ ಕ್ರಮದಲ್ಲಿ ಬದಲಾವಣೆಯಾಗಿದೆ.

2014ರಲ್ಲಿ ಕೇಂದ್ರ ಸರ್ಕಾರದ ಶೇ.42ರಷ್ಟು ತೆರಿಗೆ ರಾಜ್ಯಗಳಿಗೆ ಸೇರಬೇಕು. ಆದರೆ ಅದನ್ನು ಶೇ.33ಕ್ಕೆ ಇಳಿಸುವಂತೆ ಪ್ರಧಾನಿ ಒತ್ತಾಯಿಸಿದರು. ಆದರೆ ಅಂದಿನ ನೀತಿ ಆಯೋಗದ ಅಧ್ಯಕ್ಷ ವೈ.ವಿ.ರೆಡ್ಡಿ ಇದಕ್ಕೆ ಒಪ್ಪಿರಲಿಲ್ಲ. ಇದನ್ನು ಅವರು ನಿರಾಕರಿಸಿದರು.

ನಾನು ಪ್ರಧಾನಿ ಕಾರ್ಯಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ಮೂವರ ನಡುವೆ ನಡೆದ ಸಮಾಲೋಚನೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ.

ಸರ್ಕಾರದ ಲೆಕ್ಕಪತ್ರಗಳು ಪಾರದರ್ಶಕವಾಗಿಲ್ಲದಿದ್ದರೆ ಅವುಗಳನ್ನು ಹಿಂಡನ್‌ಬರ್ಗ್‌ನಂತಹ ವರದಿಗಳ ಮೂಲಕ ಬಹಿರಂಗಪಡಿಸಬಹುದು. ಅಲ್ಲದೆ, ಜಮ್ಮು ಮತ್ತು ಕಾಶ್ಮೀರ ರಾಜ್ಯವು ಕೇಂದ್ರ ಸರ್ಕಾರದ ಅಧೀನದಲ್ಲಿದ್ದಾಗ, ಮೂಲಸೌಕರ್ಯ ಯೋಜನೆಗಳಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ” ಎಂದು ಹೇಳಿದ್ದಾರೆ.

ಸರ್ಕಾರಿ ಅಧಿಕಾರಿಯೊಬ್ಬರ ಈ ಬಹಿರಂಗ ಹೇಳಿಕೆ ಹಲವು ಚರ್ಚೆಗಳನ್ನು ಮುನ್ನೆಲೆಗೆ ತಂದಿದೆ. ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಮಣ್ಯಂ ಅವರ ಈ ಮುಕ್ತ ಭಾಷಣವನ್ನು ಯೂಟ್ಯೂಬ್‌ನಿಂದ ತೆಗೆದುಹಾಕಲಾಗಿದೆ ಎಂದು ಅಲ್ಜಜೀರಾ (alzazeera) ವರದಿ ಮಾಡಿದೆ.

ಕ್ರೀಡೆ ದೇಶ

ಚೆನ್ನೈ: ವಿಶ್ವ ಕಪ್ ಕ್ರಿಕೆಟ್‌ನ ಬಹು ನಿರೀಕ್ಷಿತ ಭಾರತ-ಪಾಕಿಸ್ತಾನ ಲೀಗ್ ಪಂದ್ಯವು ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು.

ಭಾರತ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪಾಕಿಸ್ತಾನ ತಂಡವು 42.5 ಓವರ್‌ಗಳಲ್ಲಿ 191 ರನ್‌ಗಳಿಸಿ ಎಲ್ಲ ವಿಕೆಟ್ ಕಳೆದುಕೊಂಡಿತು. ಪಾಕಿಸ್ತಾನ ತಂಡದ ಅಬ್ದುಲ್ಲಾ ಶಫೀಕ್ ಮತ್ತು ಇಮಾಮ್ ಉಲ್ ಹಕ್ ಉತ್ತಮ ಆರಂಭ ನೀಡಿದರು. ಪಂದ್ಯದ ವೇಳೆ ಅಭಿಮಾನಿಗಳು ಹಲವು ಬಾರಿ ಜಯಶ್ರೀರಾಮ್ ಘೋಷಣೆ ಕೂಗಿದರು.

ಮತ್ತು ಪಾಕಿಸ್ತಾನದ ಪ್ರಮುಖ ಆಟಗಾರ ‘ರಿಜ್ವಾನ್’ 49 ರನ್‌ಗಳಿಗೆ ಔಟಾಗಿ ಪೆವಿಲಿಯನ್‌ಗೆ ಮರಳಿದಾಗ ‘ಜಯಶ್ರೀರಾಮ್’ ಘೋಷಣೆಗಳು ಮೊಳಗಿದವು. ಇದನ್ನು ಹಲವರು ಟೀಕಿಸಿದ್ದಾರೆ. ಆಟವನ್ನು ಆಟವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ವೀಡಿಯೋವೊಂದನ್ನು ಹಂಚಿಕೊಂಡಿರುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, “ಆತಿಥ್ಯಕ್ಕೆ ಹೆಸರುವಾಸಿಯಾದ ಭಾರತದಲ್ಲಿ ಪಾಕಿಸ್ತಾನಿ ಆಟಗಾರರ ವಿರುದ್ಧ ಘೋಷಣೆಗಳು ಸ್ವೀಕಾರಾರ್ಹವಲ್ಲ. ಕ್ರೀಡೆ ಎಂಬುದು ರಾಷ್ಟ್ರಗಳ ನಡುವೆ ಒಗ್ಗೂಡಿಸುವ ಶಕ್ತಿಯಾಗಬೇಕು.

ಕ್ರೀಡೆಗಳು ಯಾವಾಗಲೂ ನಿಜವಾದ ಸಹೋದರತ್ವವನ್ನು ಬೆಳೆಸಬೇಕು. ದ್ವೇಷ ಹರಡಲು ಕ್ರೀಡೆಯನ್ನು ಸಾಧನವಾಗಿ ಬಳಸಿಕೊಳ್ಳುತ್ತಿರುವುದು ಖಂಡನೀಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶ

ಗಂಗಾಜಲದ ಮೇಲೆ ಶೇ.18ರಷ್ಟು ಜಿಎಸ್‌ಟಿ ವಿಧಿಸಿರುವ ಬಿಜೆಪಿ ಸರಕಾರವನ್ನು ಕಾಂಗ್ರೆಸ್ ಪಕ್ಷ ಖಂಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಪ್ರವಾಸವಾಗಿ ಇಂದು ಉತ್ತರಾಖಂಡಕ್ಕೆ ತೆರಳಿದ್ದರು. ಅಲ್ಲಿ ಅವರು ಸಾಂಪ್ರದಾಯಿಕ ಬಿಳಿ ಬಟ್ಟೆಗಳನ್ನು ಧರಿಸಿ ಪವಿತ್ರ ಜೋಲಿಂಗ್‌ಕಾಂಗ್‌ ಪರ್ವತದ ಮುಂದೆ ಧ್ಯಾನ ಮಾಡಿದರು.

ಮತ್ತು ಗುಂಜಿ ಗ್ರಾಮಕ್ಕೆ ತೆರಳಿ ಜನರನ್ನು ಉದ್ದೇಶಿಸಿ ಮಾತನಾಡಿದರು. ಜತೆಗೆ 4,200 ಕೋಟಿ ರೂ.ಗಳ ಕಲ್ಯಾಣ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ಪ್ರಧಾನಿ ಮೋದಿ ಉತ್ತರಾಖಂಡ್ ನಲ್ಲಿದ್ದಾಗ ಗಂಗಾಜಲದ ಮೇಲೆ ಶೇ.18ರಷ್ಟು ಜಿಎಸ್‌ಟಿ ತೆರಿಗೆ ವಿಧಿಸಿರುವುದನ್ನು ಕಾಂಗ್ರೆಸ್ ಸೇರಿದಂತೆ ಪಕ್ಷಗಳು ತೀವ್ರವಾಗಿ ಖಂಡಿಸಿವೆ.

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ x ಜಾಲತಾಣದಲ್ಲಿ ಪ್ರಕಟಿಸಿರುವ ಪೋಸ್ಟ್‌ನಲ್ಲಿ, “ನೀವು ಇಂದು ಉತ್ತರಾಖಂಡದಲ್ಲಿ ಇರುವುದು ಉತ್ತಮ. ನಿಮ್ಮ ಸರ್ಕಾರ ಗಂಗಾಜಲಕ್ಕೆ 18% ಜಿಎಸ್‌ಟಿ ವಿಧಿಸಿದೆ. ಮನೆಯಿಂದ ಗಂಗಾಜಲವನ್ನು ಖರೀದಿಸುವವರಿಗೆ ಇದು ಎಂತಹ ಹೊರೆ ಎಂದು ಯೋಚಿಸಲೂ ನನಗೆ ಸಾಧ್ಯವಾಗುತ್ತಿಲ್ಲ.

ಇದು ಜನ ಸಾಮಾನ್ಯರ ಬಗ್ಗೆ ಯೋಚಿಸದ ಬಿಜೆಪಿ ಸರ್ಕಾರದ ಕಪಟತನದ ಪರಮಾವಧಿ” ಎಂದು ಟೀಕಿಸಿದ್ದಾರೆ. ಅಲ್ಲದೆ ಗಂಗಾಜಲದ ಮೇಲಿನ ಜಿಎಸ್‌ಟಿ ತೆರಿಗೆಯನ್ನು ಹಲವು ರಾಜಕೀಯ ಪಕ್ಷಗಳು ತೀವ್ರವಾಗಿ ವಿರೋಧಿಸುತ್ತಿವೆ.

ರಾಜಕೀಯ

“ಗೇಮ್ ಚೇಂಜರ್ಸ್” ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ! ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.

2014ರ ಮೊದಲು ಅಮೇರಿಕಾ, ಬ್ರಿಟನ್, ರಷ್ಯಾಗಳಂತಹ ಮುಂದುವರೆದ ದೇಶಗಳೊಂದಿಗೆ ಭಾರತದ ಸ್ಪರ್ಧೆ ಇತ್ತು. ಈಗ ಗುಜರಾತ್ ಮಾಡೆಲ್, ಯುಪಿ ಮಾಡೆಲ್ ಹೆಸರಲ್ಲಿ ಜಾತಿ ಜನಾಂಗಗಳ ನಡುವೆ ದ್ವೇಷ ಬಿತ್ತಿ “ಮಣಿಪುರ್ ಮಾಡೆಲ್” ಸೃಷ್ಟಿಸಿದ್ದಾರೆ.

ಇದನ್ನೂ ಓದಿ: ಒಂದು ಕೋಟಿ ಗೋವಿಂದ ನಾಮ ಬರೆಯುವವರಿಗೆ ವಿಐಪಿ ದರ್ಶನ: ತಿರುಪತಿಯಲ್ಲಿ ಆಫರ್!

ಯಕಶ್ಚಿತ್ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾಗಳೊಂದಿಗೆ ಭಾರತವನ್ನು ತುಲನೆ ಮಾಡಿಕೊಂಡು ಬೆನ್ನುತಟ್ಟಿಕೊಳ್ಳುವ ಪರಿಸ್ಥಿತಿಗೆ ತಂದಿಟ್ಟಿರುವ ಬಿಜೆಪಿಯಿಂದ ಹೆಸರುಗಳ ಬದಲಾವಣೆಗಳನ್ನಲ್ಲದೆ ಬೇರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಸಮರ್ಥ ಆಡಳಿತಗಾರರು ಭಾರತದಲ್ಲಿ ಬದಲಾವಣೆ ತರುತ್ತಾರೆಯೇ ಹೊರತು ಭಾರತದ ಹೆಸರಿನ ಬದಲಾವಣೆಯನ್ನಲ್ಲ!” ಎಂದು ಹೇಳಿದ್ದಾರೆ.

ದೇಶ

ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಯು ಉತ್ತರ ಪ್ರದೇಶದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಬಿಜೆಪಿಯನ್ನು ಅಳಿಸಿಹಾಕಲಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, “ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಯನ್ನು ಕಂಡು ಬಿಜೆಪಿ ಆತಂಕಕ್ಕೆ ಒಳಗಾಗಿದೆ. 2014ರಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯನ್ನು 2024ರಲ್ಲಿ ಕಿತ್ತೊಗೆಯಲಾಗುವುದು. ಬಿಜೆಪಿ ಉತ್ತರ ಪ್ರದೇಶದಲ್ಲಿ ಮಾತ್ರವಲ್ಲದೆ ಇಡೀ ದೇಶದಿಂದಲೇ ಕಿತ್ತೊಗೆಯಲಾಗುವುದು. ಹೀಗಾಗಿ ಸಂವಿಧಾನವನ್ನು ಹಾಳುಗೆಡವಲು ಪ್ರಯತ್ನಿಸಿದವರು ಹೆದರುತ್ತಿದ್ದಾರೆ.

ಆರ್‌ಎಸ್‌ಎಸ್‌ ಹರಡಿದ ದ್ವೇಷ ಮತ್ತು ಬಿಜೆಪಿಯ ವೋಟ್ ಬ್ಯಾಂಕ್ ರಾಜಕಾರಣವೇ ಮಣಿಪುರದ ಇಂದಿನ ಪರಿಸ್ಥಿತಿಗೆ ಕಾರಣ. ಗುಪ್ತಚರ ಸಂಸ್ಥೆಗಳಿಗೆ ಇದೆಲ್ಲ ತಿಳಿಯದೇ ಇರಲು ಸಾಧ್ಯವಿಲ್ಲ. ಅಲ್ಲಿ ಏನು ನಡೆಯುತ್ತಿದೆ ಎಂದು ಅವರಿಗೆ ತಿಳಿದಿರಬೇಕು.

ಸರ್ಕಾರ ಇದನ್ನೆಲ್ಲ ಸುಮ್ಮನೆ ನೋಡುತ್ತಿರುವುದಾದರೆ, ಅವರು ಅಧಿಕಾರದಲ್ಲಿ ಮುಂದುವರಿಯಬಾರದು. ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಯ ಬಗ್ಗೆ ಮಾತನಾಡುವ ಮೊದಲು, ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿದ ಬಗ್ಗೆ ಬಿಜೆಪಿ ಮಾತನಾಡಬೇಕು” ಎಂದು ಹೇಳಿದ್ದಾರೆ.

ದೇಶ ರಾಜಕೀಯ

ನವದೆಹಲಿ: ಭಾರತದ 100ಕ್ಕೂ ಹೆಚ್ಚು ಹಿಂದುಳಿದ ಜಿಲ್ಲೆಗಳಲ್ಲಿ ಜನರ ಜೀವನವನ್ನು ಸುಧಾರಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ವಾರಣಾಸಿಯಲ್ಲಿ ನಡೆಯುತ್ತಿರುವ ಜಿ20 ಸಚಿವರ ಸಭೆಯನ್ನು ಉದ್ದೇಶಿಸಿ ವಿಡಿಯೋ ಮೂಲಕ ಮಾತನಾಡಿದ ಪ್ರಧಾನಿ ಮೋದಿ ಈ ವಿಷಯವನ್ನು ಪ್ರಸ್ತಾಪಿಸಿದರು.

ಜಿ20 ಸಚಿವರ ಸಮಾವೇಶ ನಿನ್ನೆ (ಜೂನ್ 11) ಉತ್ತರಪ್ರದೇಶದ ವಾರಣಾಸಿಯಲ್ಲಿ ಆರಂಭವಾಗಿದೆ. ವಿದೇಶಾಂಗ ಸಚಿವ ಜೈಶಂಕರ್ ಮತ್ತು ಜಿ20 ರಾಷ್ಟ್ರಗಳ ವಿದೇಶಾಂಗ ಸಚಿವರು ಇದರಲ್ಲಿ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು (ಜೂನ್ 12) ಜಿ20 ಸಚಿವರ ಸಭೆಯಲ್ಲಿ ಪ್ರಧಾನಿ ಮೋದಿ ವಿಡಿಯೋ ಮೂಲಕ ಮಾತನಾಡಿದರು.

“ಭಾರತದಲ್ಲಿ, ಡಿಜಿಟಲೀಕರಣವು ಕ್ರಾಂತಿಕಾರಿ ಬದಲಾವಣೆಯನ್ನು ತಂದಿದೆ. ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸಲು ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣವು ಮುಖ್ಯವಾಗಿದೆ.

ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ವಿಳಂಬ ಮಾಡದೆ ಇರುವುದು ನಮ್ಮ ಜವಾಬ್ದಾರಿ ಎಂದು ನಾನು ದೃಢವಾಗಿ ನಂಬುತ್ತೇನೆ. ಭಾರತದ 100ಕ್ಕೂ ಹೆಚ್ಚು ಹಿಂದುಳಿದ ಜಿಲ್ಲೆಗಳಲ್ಲಿ ಜನರ ಜೀವನವನ್ನು ಸುಧಾರಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ತಂತ್ರಜ್ಞಾನವನ್ನು ಪ್ರಜಾಪ್ರಭುತ್ವೀಕರಣ ಮಾಡುವುದು ಮುಖ್ಯವಾಗಿದೆ.

ನಮ್ಮ ಪ್ರಯತ್ನಗಳು ಸಮಗ್ರ, ನ್ಯಾಯೋಚಿತ ಮತ್ತು ಸಮರ್ಥನೀಯವಾಗಿರಬೇಕು. ಪಾಲುದಾರ ರಾಷ್ಟ್ರಗಳೊಂದಿಗೆ ತನ್ನ ಅನುಭವವನ್ನು ಹಂಚಿಕೊಳ್ಳಲು ಭಾರತ ಸಿದ್ಧವಾಗಿದೆ” ಎಂದು ಹೇಳಿದರು.

ಆಗ ಕಾಶಿಯ ಮಹತ್ವವನ್ನು ಸಭೆಗೆ ತಿಳಿಸಿದ ಪ್ರಧಾನಿ, “ಇದು ಶತಮಾನಗಳಿಂದ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಿದೆ. ಗಂಗಾ ಮತ್ತು ಸಾರನಾಥಕ್ಕೆ ನೀಡಿರುವ ನಿಮ್ಮ ಭೇಟಿಯು, ನಿಮಗೆ ಅಪೇಕ್ಷಿತ ಫಲಿತಾಂಶಗಳನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದರು.