ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ರಾಜಕೀಯ Archives » Dynamic Leader
October 17, 2024
Home Posts tagged ರಾಜಕೀಯ
ರಾಜಕೀಯ

ನವದೆಹಲಿ: ರೈತರು, ಯುವಕರು ಮತ್ತು ಕಾರ್ಮಿಕರು ಎಲ್ಲರೂ ಇಂಡಿಯಾ ಮೈತ್ರಿಕೂಟದ ಪರವಾಗಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

7 ರಾಜ್ಯಗಳ 13 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ 10 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಕುರಿತು ರಾಹುಲ್ ಗಾಂಧಿಯವರು ತಮ್ಮ ಅಧಿಕೃತ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್‌ನಲ್ಲಿ, “ಬಿಜೆಪಿ ಸೃಷ್ಟಿಸಿದ್ದ ‘ಭಯ ಮತ್ತು ಗೊಂದಲ’ದ ಜಾಲ ಮುರಿದು ಬಿದ್ದಿರುವುದನ್ನು 7 ರಾಜ್ಯಗಳ ಉಪಚುನಾವಣೆ ಫಲಿತಾಂಶ ತೋರಿಸಿದೆ.

ರೈತರು, ಯುವಕರು, ಕಾರ್ಮಿಕರು, ಕೈಗಾರಿಕೋದ್ಯಮಿಗಳು, ಉದ್ಯೋಗಿಗಳು ಹೀಗೆ ಪ್ರತಿಯೊಂದು ವರ್ಗವೂ ಸರ್ವಾಧಿಕಾರವನ್ನು ನಾಶಮಾಡಿ ನ್ಯಾಯದ ಆಡಳಿತವನ್ನು ಸ್ಥಾಪಿಸಲು ಬಯಸುತ್ತಿದ್ದಾರೆ. ಈ ದೇಶದ ನಾಗರಿಕರು ತಮ್ಮ ಜೀವನದ ಸುಧಾರಣೆಗಾಗಿ ಮತ್ತು ಸಂವಿಧಾನದ ರಕ್ಷಣೆಗಾಗಿ ‘ಇಂಡಿಯಾ’ ಮೈತ್ರಿಕೂಟದೊಂದಿಗೆ ಸಂಪೂರ್ಣವಾಗಿ ನಿಂತಿದ್ದಾರೆ. ಎಂದು ಹೇಳಿದ್ದಾರೆ.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ನವದೆಹಲಿ: ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ, 33 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ, 30 ವರ್ಷಗಳಿಗೂ ಹೆಚ್ಚು ಕಾಲ ವಿಳಂಬವಾಗಿದ್ದು, ಪ್ರಸ್ತುತ ಈಡೇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಸಕ್ತ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗಿದೆ. ಮಸೂದೆ ಕಾನೂನಾದರೂ ಮುಂದಿನ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಇದು ಜಾರಿಗೆ ಬರುವುದಿಲ್ಲ.

ನಿನ್ನೆ ಸಂಸತ್ತಿನಲ್ಲಿ ಮಂಡಿಸಲಾದ ಆರು ಪುಟಗಳ ಮಹಿಳಾ ಮೀಸಲಾತಿ ಮಸೂದೆ 2023ರ ಮುಖ್ಯಾಂಶಗಳು:
ಲೋಕಸಭೆ ಮತ್ತು ವಿಧಾನಸಭೆಗಳಿಗೆ ನೇರ ಚುನಾವಣೆಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿರುತ್ತವೆ. ಅದೇ ಸಮಯದಲ್ಲಿ ಇದು ರಾಜ್ಯಸಭೆ ಮತ್ತು ವಿಧಾನ ಪರಿಷತ್ತಿಗೆ ಅನ್ವಯಿಸುವುದಿಲ್ಲ. ಈ ಮೀಸಲಾತಿಯಲ್ಲಿ ಎಸ್.ಸಿ. ಎಸ್.ಟಿ. ಸಮುದಾಯಕ್ಕೆ ಮೂರನೇ ಒಂದು ಭಾಗವನ್ನು ಒಳಮೀಸಲಾತಿಯಾಗಿ ನೀಡಲಾಗುವುದು.

ಇತರೆ ಹಿಂದುಳಿದ ವರ್ಗಗಳಿಗೆ ಅಸೆಂಬ್ಲಿಗಳಲ್ಲಿ ಯಾವುದೇ ಕೋಟಾ ಇರುವುದಿಲ್ಲ. ಹೀಗಾಗಿ, ಈ ಒಳಮೀಸಲಾತಿಯಲ್ಲಿ ಈ ವರ್ಗಗಳನ್ನು ಸೇರಿಸಲಾಗಿಲ್ಲ. ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಜನತಾ ದಳದಂತಹ ಪಕ್ಷಗಳು ಈ ಕಾರಣಕ್ಕಾಗಿಯೇ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದವು.

ಈ ಹಿಂದೆ 2010ರಲ್ಲಿ ಸಲ್ಲಿಸಲಾಗಿದ್ದ ಮಸೂದೆಯಲ್ಲಿದ್ದ ಆಂಗ್ಲೋ-ಇಂಡಿಯನ್ನರ ಮೀಸಲಾತಿಯನ್ನು ಪ್ರಸ್ತುತ ಮಸೂದೆಯಲ್ಲಿ ತೆಗೆದುಹಾಕಲಾಗಿದೆ. ಮಹಿಳಯರಿಗೆ ಮೀಸಲಾದ ಕ್ಷೇತ್ರಗಳು, ಪ್ರತಿ ಕ್ಷೇತ್ರಗಳ ಮರು ವಿಂಗಡಣೆಯ ಸಮಯದಲ್ಲಿ, ಆವರ್ತಕ ರೀತಿಯಲ್ಲಿ ಬದಲಾಯಿಸಲಾಗುವುದು.

ಪ್ರಸ್ತುತ ಸ್ಥಿತಿಯಲ್ಲಿ 15 ವರ್ಷಗಳು ಈ ಮಸೂದೆ ಜಾರಿಯಲ್ಲಿರುತ್ತದೆ. ಅದರ ನಂತರ ಮತ್ತೆ ವಿಸ್ತರಿಸಬೇಕು. ಸಂವಿಧಾನದ 82ನೇ ವಿಧಿ, 2002ರಲ್ಲಿ ತಿದ್ದುಪಡಿ ಮಾಡಲಾಗಿದೆ. ಇದರ ಪ್ರಕಾರ, 2026ರ ನಂತರದ ಜನಗಣತಿಯ ಆಧಾರದ ಮೇಲೆ ದೇಶಾದ್ಯಂತ ಕ್ಷೇತ್ರಗಳ ಮರು ವಿಂಗಡಣೆ ನಡೆಸಬೇಕು. ಇದರ ಪ್ರಕಾರ 2031ರ ಜನಗಣತಿ ನಂತರವೇ ಮೀಸಲಾತಿ ಜಾರಿಗೆ ಬರಬೇಕು.

ಆದರೆ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಕೊರೊನಾ ಕಾರಣದಿಂದ ಮುಂದೂಡಲಾಗಿತ್ತು. ಪ್ರಸ್ತುತ ಮುಂದಿನ ಜನಗಣತಿ 2027ರಲ್ಲಿ ನಡೆಯಲಿದೆ. ಆ ನಂತರ ಕ್ಷೇತ್ರಗಳ ಮರು ವಿಂಗಡಣೆ ಕಾರ್ಯ ಮುಗಿದು, 2029ರಿಂದ ಮಹಿಳಾ ಮೀಸಲಾತಿ ಜಾರಿಗೆ ಬರುವ ಸಾಧ್ಯತೆ ಇದೆ.

ದೇಶ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ತಿಂಗಳ ಕೊನೆಯಲ್ಲಿ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಮೇ 31 ರಂದು ರಾಹುಲ್ ಗಾಂಧಿ ಅಮೆರಿಕಕ್ಕೆ ತೆರಳುತ್ತಿದ್ದು 10 ದಿನಗಳ ಕಾಲ ಅಲ್ಲಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದುಬಂದಿದೆ.

ಜೂನ್ 4 ರಂದು ನ್ಯೂಯಾರ್ಕ್ ನಗರದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯೊಂದರಲ್ಲಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ. ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ ನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಅಮೆರಿಕದಲ್ಲಿ ನೆಲೆಸಿರುವ ಸುಮಾರು 5000 ಅನಿವಾಸಿ ಭಾರತೀಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಲೋಕಸಭೆ ಸದಸ್ಯತ್ವ ಕಳೆದುಕೊಂಡ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡುತ್ತಿರುವುದು ಗಮನಾರ್ಹ.

ನ್ಯೂಯಾರ್ಕ್ ಅಲ್ಲದೆ, ರಾಹುಲ್ ಗಾಂಧಿ ಅಮೆರಿಕದ ರಾಜಧಾನಿ ವಾಷಿಂಗ್ಟನ್ ಮತ್ತು ಕ್ಯಾಲಿಫೋರ್ನಿಯಾಗೂ ಭೇಟಿ ನೀಡಲಿದ್ದಾರೆ. ರಾಹುಲ್ ಗಾಂಧಿ ಅಮೆರಿಕ ಪ್ರವಾಸದ ವೇಳೆ ಹಲವು ರಾಜಕೀಯ ಮುಖಂಡರು ಮತ್ತು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಿದ್ದು, ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

ಈ ಹಿಂದೆ ರಾಹುಲ್ ಗಾಂಧಿ ಅವರು ಲಂಡನ್ ಗೆ ಭೇಟಿ ನೀಡಿದಾಗ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮಾಡಿದ ಭಾಷಣ ವಿವಾದವಾಗಿತ್ತು. ರಾಹುಲ್ ಗಾಂಧಿ ಲಂಡನ್‌ನಲ್ಲಿ ಭಾರತೀಯ ಪ್ರಜಾಪ್ರಭುತ್ವವನ್ನು ಅವಮಾನಿಸುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿದ ಭಾರತೀಯ ಜನತಾ ಪಕ್ಷದ ನಾಯಕರು, ಬಜೆಟ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಕೂಡ ಮುಂದಿನ ತಿಂಗಳು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ.

ಅಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಪತ್ನಿ ಜಿಲ್ ಬೈಡನ್ ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಆತಿಥ್ಯ ನೀಡಲು ವ್ಯವಸ್ಥೆ ಮಾಡಿದ್ದಾರೆ. ಪ್ರಧಾನಿ ಮೋದಿ ಜೂನ್ 22 ರಂದು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಸುದ್ದಿಯಾಗಿದೆ.