ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ರಾಮ ದೇವಸ್ಥಾನ Archives » Dynamic Leader
October 19, 2024
Home Posts tagged ರಾಮ ದೇವಸ್ಥಾನ
ರಾಜಕೀಯ

ಹೈದರಾಬಾದ್: ದೇವರ ಚಿತ್ರ ತೋರಿಸಿ ಬಡವರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ; ಜನರು ಮೋದಿ ಬಗ್ಗೆ ಎಚ್ಚರದಿಂದಿರಬೇಕು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ಕಳೆದ 22 ರಂದು ಪ್ರಧಾನಿ ಮೋದಿ ಸಮ್ಮುಖದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಕುಂಭಾಭಿಷೇಕ ನಡೆಯಿತು.

ದೇವರ ಚಿತ್ರಗಳನ್ನು ತೋರಿಸಿ ಬಡವರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ದೇಶದಲ್ಲಿ ಹಣದುಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅನೇಕ ಜನರು ನಿರುದ್ಯೋಗಿಗಳಾಗಿದ್ದಾರೆ. ಬಿಕ್ಕಟ್ಟುಗಳು ಬಂದಾಗ, ಮೋದಿ ಪಾಕಿಸ್ತಾನ, ಚೀನಾ ಮತ್ತು ದೇವರುಗಳ ಹೆಸರುಗಳನ್ನು ಬಳಸಿಕೊಂಡು ನೆಪ ಹೇಳುತ್ತಾ ಬರುತ್ತಾರೆ.

ಈ ಹಿಂದೆ ಹಲವು ಆಶ್ವಾಸನೆಗಳನ್ನು ನೀಡಿದ್ದ ಮೋದಿ ಇನ್ನೂ ಈಡೇರಿಸಿಲ್ಲ. ಹಾಗಾಗಿ ಯಾರೂ ಮೋದಿ ಬಲೆಗೆ ಬೀಳಬೇಡಿ” ಎಂದು ಎಚ್ಚರಿಸಿದರು.

ದೇಶ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯನ್ನು ಸೂಚಿಸುವಂತಹ 6 ಸ್ಮರಣಾರ್ಥ ಅಂಚೆ ಚೀಟಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಡುಗಡೆ ಮಾಡಿದರು.

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದ ಕುಂಭಾಭಿಷೇಕ ಇದೇ 22 ರಂದು ನಡೆಯಲಿದೆ. ಅಂದು ಶ್ರೀರಾಮ ಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು.  ಇದೇ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ಉದ್ಘಾಟನೆಯನ್ನು ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಮುಖ ನಾಯಕರು ಮತ್ತು ಗಣ್ಯರನ್ನು ಆಹ್ವಾನಿಸಲಾಗುತ್ತಿದೆ.

ಈ ಹಿನ್ನಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು. ಅವರು ರಾಮಮಂದಿರ, ಸೂರ್ಯ, ಸರಯೂ ನದಿ ಮತ್ತು ದೇವಾಲಯದ ಶಿಲ್ಪಗಳ ಚಿತ್ರಗಳೊಂದಿಗೆ ಅಂಚೆ ಚೀಟಿಗಳನ್ನು ಪರಿಚಯಿಸಿದರು. ಅವರು ಪ್ರಪಂಚದಾದ್ಯಂತದ ಭಗವಾನ್ ರಾಮನ ಅಂಚೆ ಚೀಟಿಗಳ ಆಲ್ಬಂ ಅನ್ನು ಸಹ ಪ್ರಕಟಿಸಿದರು.

ನಂತರ ಈ ಸಂಬಂಧ ಮಾತನಾಡಿದ ಪ್ರಧಾನಿ ಮೋದಿ, ‘ರಾಮ ಮಂದಿರದ ಶಂಕುಸ್ಥಾಪನೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಮತ್ತೊಂದು ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಇಂದು ನನಗೆ ಸಿಕ್ಕಿದೆ. ರಾಮ ಮಂದಿರವನ್ನು ಸೂಚಿಸುವ 6 ಸ್ಮರಣಾರ್ಥ ಅಂಚೆ ಚೀಟಿಗಳು ಮತ್ತು ಪ್ರಪಂಚದಾದ್ಯಂತದ ಭಗವಾನ್ ರಾಮನ ಅಂಚೆ ಚೀಟಿಗಳ ಆಲ್ಬಂ ಅನ್ನು ಬಿಡುಗಡೆ ಮಾಡಲಾಯಿತು. ದೇಶದ ಜನತೆಗೆ ಮತ್ತು ಜಗತ್ತಿನಾದ್ಯಂತ ಇರುವ ರಾಮನ ಭಕ್ತರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ’ ಎಂದು ಹೇಳಿದ್ದಾರೆ.

ರಾಜಕೀಯ

ನವದೆಹಲಿ: (ಪಿಟಿಐ) ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ರಾಮ ಮಂದಿರದ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ “ಆರ್‌ಎಸ್‌ಎಸ್-ಬಿಜೆಪಿ ಕಾರ್ಯಕ್ರಮ” ಎಂದಿರುವ ಕಾಂಗ್ರೆಸ್, ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಅಯೋಧ್ಯೆ ಮಂದಿರವನ್ನು ರಾಜಕೀಯ ಯೋಜನೆಯಾಗಿ ಬಳಸಿಕೊಳ್ಳುತ್ತಿದೆ ಎಂದು ಬುಧವಾರ ಹೇಳಿದೆ.

ಲೋಕಸಭೆ ಚುನಾವಣಾ ಲಾಭಕ್ಕಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಅಯೋಧ್ಯೆಯ ಅಪೂರ್ಣ ದೇವಾಲಯವನ್ನು ಉದ್ಘಾಟನೆ ಮಾಡಲಾಗುತ್ತಿದೆ. ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿತ್ತು.

ಜನವರಿ 22 ರಂದು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ದೇಶ

‘ನಮ್ಮ ದೇಶ ಅಭಿವೃದ್ಧಿ ಹೊಂದಲು, ಕಳೆದುಹೋದ ಸಂಪತ್ತನ್ನು ಮರಳಿ ಪಡೆಯಲು ಎಲ್ಲಾ ಹಿಂದೂಗಳು ಮುಂದಾಗಬೇಕು’ ಎಂದು ಪ್ರವೀಣ್ ತೊಗಾಡಿಯಾ ಮಾತನಾಡಿದ್ದಾರೆ.

ಅಮೇಥಿ: ಉತ್ತರ ಪ್ರದೇಶದ ಅಮೇಥಿಯ ಪುರೇರಾಮದೀನ್ ಗ್ರಾಮದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ, ‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಆದರೆ ಬರಬೇಕಾದ ರಾಮರಾಜ್ಯ ಎಲ್ಲೂ ಕಾಣಲಿಲ್ಲ.

ನಮ್ಮ ದೇಶದ ಹತ್ತಾರು ಸಾವಿರ ಹಿಂದೂಗಳು ಮನೆಗಳನ್ನು ಪಡೆಯಬೇಕು, ಅವರ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಬೇಕು, ಯುವಕರು ಉದ್ಯೋಗವನ್ನು ಪಡೆಯಬೇಕು ಮತ್ತು ರೈತರು ತಮ್ಮ ಉತ್ಪನ್ನಗಳಿಗೆ ಉತ್ತಮ ಬೆಲೆಯನ್ನು ಪಡೆಯಬೇಕೆಂದು ನಾನು ಬಯಸುತ್ತೇನೆ.

ನಮ್ಮ ದೇಶವು ಅಭಿವೃದ್ಧಿ ಹೊಂದಲು, ಕಳೆದುಹೋದ ಸಂಪತ್ತನ್ನು ಮರಳಿ ಪಡೆಯಲು ಎಲ್ಲಾ ಹಿಂದೂಗಳು ಮುಂದಾಗಬೇಕು.’ ಎಂದು ಹೇಳಿದ್ದರು.