ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ರೈತರ ಪ್ರತಿಭಟನೆ Archives » Dynamic Leader
October 23, 2024
Home Posts tagged ರೈತರ ಪ್ರತಿಭಟನೆ
ದೇಶ

“ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ; ನಮ್ಮ ಹಕ್ಕುಗಳಿಗಾಗಿ ನಾವು ನಿಲ್ಲಬೇಕು. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳದೆ ಮನೆಗೆ ಹಿಂತಿರುಗುವುದು ಬೇಡ” – ವಿನೇಶ್ ಫೋಗಟ್

ಹರಿಯಾಣದ ರೈತರು ಶಂಭು ಗ್ರಾಮದ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ 200 ದಿನಗಳನ್ನು ತಲುಪಿದ್ದು, ಇಂದು (ಶನಿವಾರ) ದೊಡ್ಡ ಪ್ರಮಾಣದ ಪ್ರತಿಭಟನೆಯನ್ನು ಕೈಗೊಂಡಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ರೈತರೊಂದಿಗೆ ಸೇರಿಕೊಂಡಿದ್ದಾರೆ. “ನಿಮ್ಮ ಮಗಳು ನಿಮ್ಮೊಂದಿಗೆ ನಿಂತಿದ್ದಾಳೆ” ಎಂದು ಮಾತನಾಡಿ, ತಮ್ಮ ದೃಢವಾದ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ಫೆಬ್ರವರಿ 13 ರಿಂದ ಹರಿಯಾಣ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನಾತ್ಮಕ ಖಾತ್ರಿ ಸೇರಿದಂತೆ ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧರಣಿ ಆರಂಭಿಸಿದ್ದಾರೆ. ಹರಿಯಾಣದ ಗಡಿಭಾಗದ ಶಂಭು ಪ್ರದೇಶದಲ್ಲಿ ರೈತರು ದೆಹಲಿಗೆ ತೆರಳದಂತೆ ಅಧಿಕಾರಿಗಳು ತಡೆದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯುತ್ತಿದೆ.

ರೈತರನ್ನು ಉದ್ದೇಶಿಸಿ ಮಾತನಾಡಿದ ವಿನೇಶ್ ಫೋಗಟ್, “ಕೃಷಿಕ ಕುಟುಂಬದಲ್ಲಿ ಹುಟ್ಟಿದ್ದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ನಾವು ನಿಲ್ಲಬೇಕು, ಯಾರೂ ನಮಗಾಗಿ ಬರುವುದಿಲ್ಲ. ನಮ್ಮ ಕೋರಿಕೆಗಳು ಈಡೇರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳದೆ ಮನೆಗೆ ಹಿಂತಿರುಗುವುದು ಬೇಡ” ಎಂದು ಹೇಳಿದ್ದಾರೆ.

ಅಲ್ಲದೆ, “ರೈತರು ತಮ್ಮ ಹಕ್ಕುಗಳಿಗಾಗಿ ಬಹಳ ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅವರ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ. 200 ದಿನ ಕಳೆದರೂ ಅವರ ಬೇಡಿಕೆ ಈಡೇರದಿರುವುದು ಬೇಸರದ ಸಂಗತಿಯಾಗಿದೆ. ಅವರು ತಮ್ಮ ಹಕ್ಕುಗಳಿಗೆ ಧ್ವನಿಗೂಡಿಸುವುದನ್ನು ನೋಡಿದಾಗ ನಾವು ಹೆಚ್ಚುವರಿ ಶಕ್ತಿಯನ್ನು ಪಡೆಯುತ್ತೇವೆ” ಎಂದೂ ಹೇಳಿದ್ದಾರೆ.

2021ರ ಮುಷ್ಕರವನ್ನು ದೂಷಿಸಿದ ಸಂಸದೆ ಕಂಗನಾ ರಣಾವತ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಟ ನಿರತ ರೈತರು ಒತ್ತಾಯಿಸಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿಯನ್ನು ಆಗ್ರಹಿಸಿದ್ದಾರೆ. ಅಕ್ಟೋಬರ್‌ನಲ್ಲಿ ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆ ಮೇಲೆ ಪ್ರಭಾವ ಬೀರಲು ರೈತರು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ರೈತರ ಚುನಾವಣಾ ತಂತ್ರಗಾರಿಕೆ ಬಗ್ಗೆ ಯಾವುದೆ ಸ್ಪಷ್ಟ ಅಭಿಪ್ರಾಯಗಳಿಲ್ಲ!

ದೇಶ

ಪಂಜಾಬ್: ರೈತರ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ, ದೆಹಲಿಯತ್ತ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್ ರೈತರನ್ನು ರಾಜ್ಯದ ಗಡಿಯಲ್ಲಿರುವ ಖನೌರಿ ಗಡಿಯಲ್ಲಿ ತಡೆದು ನಿಲ್ಲಿಸಲಾಗಿದೆ. ನಿನ್ನೆ, ರೈತರು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದಾಗ, ಹರಿಯಾಣ ಪೊಲೀಸರು ರಬ್ಬರ್ ಬುಲೆಟ್‌ಗಳನ್ನು ಹಾರಿಸಿ ಪ್ರತಿಭಟನಾಕಾರರನ್ನು ಚದುರಿಸಿದರು. ಆ ಸಮಯದಲ್ಲಿ ಪಂಜಾಬ್‌ನ 21 ವರ್ಷದ ರೈತ ಶುಭ ಕರಣ್ ಸಿಂಗ್ ಮೃತನಾದನು.

ಈ ಹಿನ್ನೆಲೆಯಲ್ಲಿ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು, ಮೃತ ರೈತ ಶುಭ ಕರಣ್ ಸಿಂಗ್ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಮತ್ತು ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ದೇಶ

ನವದೆಹಲಿ: ರೈತರ ಪ್ರತಿಭಟನೆ ಕುರಿತು ಪೋಸ್ಟ್ ಮಾಡಿದ್ದ 177 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ನಿರ್ಬಂಧಿಸಿದೆ.

ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಕನಿಷ್ಠ ಬೆಂಬಲ ಬೆಲೆ, ಸಾಲ ಮನ್ನಾ, ರೈತರ ಮೇಲಿನ ಮೊಕದ್ದಮೆ ಹಿಂಪಡೆಯುವುದು ಸೇರಿದಂತೆ ನಾನಾ ಬೇಡಿಕೆಗಳಿಗೆ ಒತ್ತು ನೀಡಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ರಾಜ್ಯಗಳ ರೈತರು ದೆಹಲಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.

ತರುವಾಯ ಕೇಂದ್ರ ಸರ್ಕಾರ ಹಾಗೂ ರೈತರೊಂದಿಗೆ ನಡೆಸಿದ ಮಾತುಕತೆಯಲ್ಲಿ ಯಾವುದೇ ಪ್ರಗತಿ ಕಾಣಲಿಲ್ಲ. ನಾಳೆ (ಫೆಬ್ರವರಿ 21) ದೆಹಲಿ ಕಡೆಗೆ ರ‍್ಯಾಲಿಯನ್ನು ಪ್ರಾರಂಭಿಸುವುದಾಗಿ ರೈತ ಸಂಘಟನೆಗಳು ಘೋಷಿಸಿವೆ.

ಈ ಹಿನ್ನಲೆಯಲ್ಲಿ, ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ 42 ‘ಎಕ್ಸ್’ ಸಾಮಾಜಿಕ ಮಾಧ್ಯಮ ಖಾತೆಗಳಗಳು, 35 ಫೇಸ್‌ಬುಕ್‌ ಖಾತೆಗಳು ಮತ್ತು 14 ಇನ್‌ಸ್ಟಾಗ್ರಾಮ್ ಖಾತೆಗಳು ಸೇರಿದಂತೆ 177 ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂದಿಸಲಾಗಿದೆ.

ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿಯೂ ಈ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

ದೇಶ

ಅಂಬಲಾ ಬಳಿಯ ಶಂಭು ಗಡಿಯಲ್ಲಿ ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದರಿಂದ ಉದ್ವಿಗ್ನತೆ ಹೆಚ್ಚಿದೆ.

ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ರಾಜ್ಯಗಳ ರೈತ ಸಂಘಟನೆಗಳು, 2021ರಲ್ಲಿ ದಿಲ್ಲಿಯಲ್ಲಿ ನಡೆಸಿದ ಬೃಹತ್ ಪ್ರತಿಭಟನೆಯನ್ನು ಅಂತ್ಯಗೊಳಿಸಲು ರೈತರ ಬೇಡಿಕೆಯನ್ನು ಈಡೇರಿಸಲು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಸಮ್ಮತಿಸಿತು.

ಆದರೆ ಎರಡು ವರ್ಷ ಕಳೆದರೂ ಬೇಡಿಕೆ ಈಡೇರದ ಕಾರಣ, ಹರಿಯಾಣ ಮತ್ತು ದೆಹಲಿಯ ಗಡಿಯಲ್ಲಿ ನಿನ್ನೆಯಿಂದ ರೈತರು ಪ್ರತಿಭಟನೆಯನ್ನು ಮುನ್ನಡೆಸುತ್ತಿದ್ದಾರೆ. ಶಂಭು ಗಡಿಯಲ್ಲಿ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ನಡೆದಿದೆ. ಅಂಬಲಾ ಬಳಿಯ ಶಂಭು ಗಡಿಯಲ್ಲಿ ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದರಿಂದ ಉದ್ವಿಗ್ನತೆ ಹೆಚ್ಚಿದೆ.

ಈ ಹಿನ್ನಲೆಯಲ್ಲಿ, ರೈತರು ಅಶ್ರುವಾಯು ಎದುರಿಸಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅಶ್ರುವಾಯು ಪ್ರಭಾವವನ್ನು ಕಡಿಮೆ ಮಾಡಲು ಅವರು ನೀರಿನ ಬಾಟಲಿಗಳು, ಒದ್ದೆಯಾದ ಬಟ್ಟೆಗಳು ಮತ್ತು ರಕ್ಷಣಾ ಸಾಧನಗಳೊಂದಿಗೆ ತಮ್ಮನ್ನು ತಾವು ಸಿದ್ಧಪಡಿಸಿಕೊಂಡಿದ್ದಾರೆ. ಅಲ್ಲದೆ, ಅಶ್ರುವಾಯು ಸಾಗಿಸುವ ಡ್ರೋನ್‌ಗಳನ್ನು ನಿಷ್ಕ್ರಿಯಗೊಳಿಸಲು ಗಾಳಿಪಟಗಳನ್ನು ಹಾರಿಸುತ್ತಿದ್ದಾರೆ.

ಈ ಕುರಿತು ಮಾತನಾಡುವ ರೈತರು, ‘ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನೈತಿಕವಾಗಿ ಹೋರಾಟ ಮಾಡುತ್ತಿದ್ದೇವೆ. ನಾವು ಯಾವುದೋ ಭಯೋತ್ಪಾದಕರನ್ನು ಎದುರಿಸುತ್ತಿದ್ದೇವೆ ಎಂಬಂತೆ ಸರಕಾರಿ ಯಂತ್ರಗಳು ನಮ್ಮನ್ನು ನಡೆಸಿಕೊಳ್ಳುತ್ತಿದೆ. ಡ್ರೋನ್‌ಗಳ ಮೂಲಕ ಅಶ್ರುವಾಯು ಪ್ರಯೋಗಿಸಿ ನಮ್ಮನ್ನು ಚದುರಿಸಲು ಪ್ರಯತ್ನಿಸುತ್ತಿದ್ದಾರೆ. ಅದನ್ನು ಎದುರಿಸಲು ನಾವು ಈ ರೀತಿ ಗಾಳಿಪಟವನ್ನು ಹಾರಿಸುತ್ತಿದ್ದೇವೆ’ ಎಂದು ಹೇಳಿದರು.