ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಲಕ್ಷ್ಮಿ ಹೆಬ್ಬಾಳ್ಕರ್ Archives » Dynamic Leader
October 16, 2024
Home Posts tagged ಲಕ್ಷ್ಮಿ ಹೆಬ್ಬಾಳ್ಕರ್
Uncategorized

ಬೆಳಗಾವಿ: ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾರರಲ್ಲಿ ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯೇತರ ಪಕ್ಷಗಳು ದಲಿತರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದೆ ಎಂದು ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಎಂದಿಗೂ ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡದೇ, ಸಾಮಾಜಿಕ ನ್ಯಾಯದ ಪರವಾಗಿದೆ ಎನ್ನುವುದು ಇಡೀ ವಿಶ್ವಕ್ಕೆ ಗೊತ್ತಿದೆ. ಮೋದಿಯವರ ಮಾತು ನಂಬಲು ಜನ ಮೂರ್ಖರಲ್ಲ ಎಂದು ಹೇಳಿದರು.

ನಾವು ಸರ್ಕಾರಿ ನೌಕರರ ಸಂಬಳವನ್ನು ಎಂದಿಗೂ ನಿಲ್ಲಿಸಿಲ್ಲ. ಅಭಿವೃದ್ಧಿ ಜೊತೆಗೆ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿಗಳಿಗೆ ರೂ.52,009 ಕೋಟಿ, ರೂ.1,20,000 ಕೋಟಿ ಅಭಿವೃದ್ಧಿಗೆ ನೀಡಲಾಗಿದೆ. ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಗ್ಯಾರಂಟಿಗಳನ್ನು ಜನರಿಗೆ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಸಂಬಳ ಕೊಡಲು ದುಡ್ಡಿಲ್ಲ. ಕರ್ನಾಟಕ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬುದು ಅಪ್ಪಟ ಸುಳ್ಳು ಎಂದು ಹೇಳಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಗಳನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು. 25 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು. ಸಾಮಾಜಿಕ ನ್ಯಾಯ ತರಲು ದೇಶದಾದ್ಯಂತ ಜಾತಿ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು. ಆದ್ದರಿಂದ ಜನರಿಗೆ ಅನುಕೂಲ ಮಾಡಿಕೊಡುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೇ? ಅಥವಾ ಸುಳ್ಳು ಹೇಳುವ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರಬೇಕೇ? ಎಂಬುದನ್ನು ಯೋಚಿಸಿ ನಿರ್ಧರಿಸಿ ಎಂದು ಹೇಳಿದರು.

ಚುನಾವಣೆಯ ಮೂಲಕ ಜನತೆ ಕೊಡುವ ತೀರ್ಪು ದೇಶದ ಭವಿಷ್ಯವನ್ನು ರೂಪಿಸಲಿದೆ. ಯಾವ ಪಕ್ಷ ಅಧಿಕಾರದಲಿದ್ದರೆ ಈ ದೇಶದ ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ ಅಭಿವೃದ್ಧಿಯಾಗುತ್ತದೆ? ದೇಶದ ಸರ್ವತೋಮುಖ ಅಭಿವೃದ್ಧಿಗೆ ಯಾರು ಅಧಿಕಾರದಲ್ಲಿರಬೇಕೆಂದು ಜನರು ತೀರ್ಮಾನ ಮಾಡಬೇಕಾಗುತ್ತದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡಿ ದೇಶದ ರೈತರ ಸಾಲ ಮನ್ನಾ ಮಾಡಿದ್ದರು. ಅವರು ಈ ದೇಶದ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆಯನ್ನು, ಉದ್ಯೋಗ ಖಾತ್ರಿ ಅಧಿನಿಯಮ, ಮಾಹಿತಿ ಹಕ್ಕು ಅಧಿನಿಯಮ, ಶಿಕ್ಷಣದ ಹಕ್ಕು ಇವುಗಳನ್ನು ಜಾರಿಗೆ ತಂದವರು ಮನಮೋಹನ್ ಸಿಂಗ್ ಅವರು. ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸುವ ಕಾನೂನುಗಳು ಇವು ಎಂದು ಅರ್ಥ ಮಡಿಕೊಳ್ಳಬೇಕು. ಆಹಾರ ಭದ್ರತಾ ಕಾಯ್ದೆ ಇಲ್ಲದೇ ಹೋಗಿದ್ದರೆ ಬಡವರಿಗೆ ಉಚಿತ ಅಕ್ಕಿ ಕೊಡಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಜಾರಿ ಮಾಡಿದ್ದು ನರೇಂದ್ರ ಮೋದಿ ಅಲ್ಲ. ಅದರ ಶ್ರೇಯಸನ್ನು ಪಡೆಯಲು ಮೋದಿ ಅವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಡುಪಿಯಲ್ಲಿ ಆಯೋಜಿಸಿದ್ದ “ವಿಶ್ವ ಬಂಟರ ಸಮ್ಮೇಳನ”ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಾಜಿ ಸಚಿವ ರಮಾನಾಥ ರೈ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಶಾಸಕರುಗಳಾದ ಅಶೋಕ್ ಕುಮಾರ್ ರೈ, ಯಶಪಾಲ್ ಸುವರ್ಣ, ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಡಾ.ಪಿ.ವಿ.ಶೆಟ್ಟಿ, ಸಂತೋಷ್ ಗುರು, ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ, ಅಭಯ ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.

ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ. ಬಂಟ ಸಮಯದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿದ್ದಾರೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಂಟ ಸಮುದಾಯ ವಿಶಿಷ್ಠ ಸಂಸ್ಕೃತಿ, ಪರಂಪರೆ ಹೊಂದಿದೆ. ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ. ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಬಂಟರು ಉದ್ಯಮ ಸಾಹಸಿಗಳಾಗಿದ್ದಾರೆ. ವಿಶ್ವದ ಎಲ್ಲಾ ಕಡೆ ಹರಿಡಿದ್ದು ತಾವು ಹೋಗುವ ಕಡೆ ಎಲ್ಲರ ಜತೆಗೂ ಬೆರೆತು, ಸಹೃದಯತೆಯಿಂದ ಬೆರೆಯುತ್ತಾರೆ.

ಇದು ಬಂಟರ ಸಮುದಾಯದ ಹೆಗ್ಗಳಿಕೆ. ಕ್ರೀಡೆ, ಸಿನಿಮಾ, ಶಿಕ್ಷಣ, ಹೋಟೆಲ್ ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಚಾಪು ಮೂಡಿಸಿದ್ದಾರೆ. ಎಲ್ಲೇ ಹೋದರು ತಮ್ಮ ಭಾಷೆ, ಸಂಸ್ಕೃತಿಯನ್ನು ಪಸರಿಸುತ್ತಾರೆ. ತುಳು ಮೇಲಿನ ನಿಮ್ಮಗಳ ಪ್ರೇಮ ಮತ್ತು ಅಕ್ಕರೆ ಅನುಕರಣೀಯ. ಇದು ಹೆಮ್ಮೆಯ ವಿಚಾರ. ಪ್ರತಿಯೊಬ್ಬರು ಅವರವರ ಮಾತೃಭಾಷೆಗೆ ಗೌರವ ಕೊಡುವುದರಿಂದ ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಹೆಚ್ಚಿಸುತ್ತದೆ. ಬಂಟ ಸಮಾಜ ಜಾತ್ಯತೀತ ಸಮುದಾಯ. ಸರ್ವರನ್ನೂ ಸಮಾನ ಪ್ರೀತಿಯಿಂದ ಕಾಣುವ ಮಾನವೀಯ ಮೌಲ್ಯವನ್ನು ಆಚರಿಸುತ್ತಿದೆ. ಇದು ಹೆಮ್ಮೆಯ ಸಂಗತಿ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ಇದು ಅತ್ಯಂತ ಶ್ಲಾಘನೀಯ ಎಂದು ಬಣ್ಣಿಸಿದ್ದಾರೆ.

ರಾಜ್ಯ

ಬೆಂಗಳೂರು: ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್‌ನಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಉದ್ಘಾಟಿಸಿ, ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು.

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು. ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ ಶ್ರೀ.ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂಬ ಭಾವನೆ ನನ್ನದು ಎಂದರು.

ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.