ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಲೋಕಾಯುಕ್ತ Archives » Dynamic Leader
October 19, 2024
Home Posts tagged ಲೋಕಾಯುಕ್ತ
ರಾಜ್ಯ

ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಿಸಲಾದ 36,789 ಮನೆಗಳನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬೆಂಗಳೂರು ನಗರದ ಕೆ.ಆರ್.ಪುರಂನಲ್ಲಿರುವ ನಗರೇಶ್ವರ ನಾಗೇನಹಳ್ಳಿಯಲ್ಲಿ ಉದ್ಘಾಟಸಿ, ಫಲಾನುಭವಿಗಳಿಗೆ ಸ್ವಾಧೀನ ಪತ್ರ ವಿತರಿಸಿದರು.

ಇದನ್ನೂ ಓದಿ: ಕೊಳಗೇರಿ ಜನರ ಮನೆಗಳನ್ನು ಶಾಸಕ ಬೈರತಿ ಬಸವರಾಜ್ ಹಿಂಬಾಲಕರಿಗೆ ಹಂಚಿಕೆ ಮಾಡುತ್ತಿರುವ ಕೊಳಗೇರಿ ಮಂಡಳಿಯ ಭ್ರಷ್ಟ ಅಧಿಕಾರಿಗಳು!

ನಗರೇಶ್ವರ ನಾಗೇನಹಳ್ಳಿಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ನಿರ್ಮಿಸಿರುವ ಒಟ್ಟು 768+294=1062 ಮನೆಗಳ ಕಾಮಗಾರಿ ಇನ್ನು ಪೂರ್ಣಗೊಂಡಿಲ್ಲ. ನಿರ್ಮಾಣ ಹಂತದಲ್ಲಿರುವ ಸದರಿ ಮನೆಗಳ ಫಲಾನುಭವಿಗಳು ಯಾರು ಕೂಡ ಘೋಷಿತ ಕೊಳಗೇರಿ ನಿವಾಸಿಗಳಾಗಿರುವುದಿಲ್ಲ. ಅಪೂರ್ಣ ಸ್ಥಿತಿಯಲ್ಲಿರುವ ಕೊಳಗೇರಿ ಜನರ ಮನೆಗಳಿಗೆ ಬಣ್ಣ ಬಳಿದು ಉದ್ಘಾಟಸಿದ್ದೂ ಅಲ್ಲದೇ ಇತರ ವರ್ಗದವರಿಗೆ ಸ್ವಾಧೀನ ಪತ್ರಗಳನ್ನು ಸಹ ವಿತರಿಸಲಾಗಿದೆ.

ಇದನ್ನೂ ಓದಿ: ಮನೆಗಳ ಹಂಚಿಕೆಯಲ್ಲಿ ಅಕ್ರಮ: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ವಿರುದ್ಧ ಲೋಕಾಯುಕ್ತರಲ್ಲಿ ದೂರು! 

ಸದರಿ ಮನೆಗಳ ಫಲಾನುಭವಿಗಳೆಲ್ಲರೂ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಅವರ ಹಿಂಬಾಲಕರು, ಅವರ ಪಕ್ಷದ (ಬಿಜೆಪಿ) ಕಾರ್ಯಕರ್ತರು ಮತ್ತು ಅನುಕೂಲಸ್ಥ ವರ್ಗದ ಜನರಾಗಿದ್ದಾರೆ. ಇಂತಹವರಿಗೆ ಕೊಳಗೇರಿ ಜನರ ಮನೆಗಳನ್ನು ಹಂಚಿಕೆ ಮಾಡಲು ಮಂಡಳಿಯ ನಿಯಮಗಳಲ್ಲಿ ಅವಕಾಶವಿಲ್ಲ. ಇದರ ಬಗ್ಗೆ ಈಗಾಗಲೇ ಲೋಕಾಯುಕ್ತರಲ್ಲಿ ದೂರು ದಾಖಲಾಗಿದೆ. ಆದರೂ ಸದರಿ ಮನೆಗಳನ್ನು ಮುಖ್ಯಮಂತ್ರಿಗಳಿಂದ ಉದ್ಘಾಟನೆ ಮಾಡಲಾಗಿದೆ.

ಬೆಂಗಳೂರು

ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಬೈರತಿ ಬಸವರಾಜ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತರಾದ ಬಿ.ವೆಂಕಟೇಶ್ ಹಾಗೂ ನಂ.2ನೇ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಚರಣ್ ರಾಜ್ ಮುಂತಾದವರ ವಿರುದ್ಧ ಇಂದು ಮಾನ್ಯ ಲೋಕಾಯುಕ್ತ ಕಛೇರಿಯಲ್ಲಿ ದೂರು ದಾಖಲಾಗಿದೆ.

ಲೋಕಾಯುಕ್ತ ಕಛೇರಿಯಲ್ಲಿ ದೂರು ದಾಖಲಿಸಿರುವ ಜನಶಕ್ತಿ ವೇದಿಕೆಯ ಅಧ್ಯಕ್ಷ ಹಾಗೂ “ಡೈನಾಮಿಕ್ ಲೀಡರ್” ಪತ್ರಿಕೆಯ ಸಂಪಾದಕ ಡಿ.ಸಿ.ಪ್ರಕಾಶ್ ಅವರು ಬಿಡುಗಡೆಗೊಳಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ,

“ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ, ನಗರೇಶ್ವರ ನಾಗೇನಹಳ್ಳಿ, ಸರ್ವೆ ನಂ.13ರಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ PAMY (HFA)-Phase-3 ಯೋಜನೆಯಡಿ ನಿರ್ಮಿಸುತ್ತಿರುವ 768 (ಜಿ+3) ಮನೆಗಳನ್ನು ಕರ್ನಾಟಕ ಕೊಳಚೆ ಪ್ರದೇಶಗಳ (ಅಭಿವೃದ್ಧಿ ಮತ್ತು ನಿರ್ಮೂಲನಾ) (ತಿದ್ದುಪಡಿ) ನಿಯಮಗಳು, 2004. ನಿಯಮ 8(i), (ii) ಮತ್ತು (iii)ಕ್ಕೆ ಮತ್ತು ಸರ್ಕಾರದ ಆದೇಶ ಸಂಖ್ಯೆ: ವಇ 115 ಕೊಮಂಇ 2023 (1) ಹಾಗೂ ವಇ 115 ಕೊಮಂಇ ೨೦೧೩ (2)ರ ಪ್ರಕಾರ ಘೋಷಿತ ಕೊಳಗೇರಿ ನಿವಾಸಿಗಳಿಗೆ ಹಂಚಿಕೆ ಮಾಡದೆ, ಅಧಿಕಾರ ದುರುಪಯೋಗ ಪಡಿಸಿಕೊಂಡು, ರಚಿತವಾಗದ ಆಶ್ರಯ ಸಮಿತಿಯ ಹೆಸರಿನಲ್ಲಿ ಅಕ್ರಮವಾಗಿ ಮನೆಗಳನ್ನು ಇತರ ಅನುಕೂಲಸ್ಥ ವರ್ಗದವರಿಗೆ ಹಂಚಿಕೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ನಗರೇಶ್ವರ ನಾಗೇನಹಳ್ಳಿ, ಸರ್ವೆ ನಂ.13ರಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ PAMY (HFA)-Phase-3 ಯೋಜನೆಯಡಿ ನಿರ್ಮಿಸುತ್ತಿರುವ 768 (ಜಿ+3) ಮನೆಗಳು

“ಕೊಳಗೇರಿ ಜನರ ಮನೆಗಳನ್ನು ಬೈರತಿ ಬಸವರಾಜ್ ಹಿಂಬಾಲಕರಿಗೆ ಅವರ ಪಕ್ಷದ ಕಾರ್ಯಕರ್ತರಿಗೆ ಹಾಗೂ ಅನುಕೂಲಸ್ಥ ವರ್ಗದ ಜನರಿಗೆ ಹಂಚಿಕೆ ಮಾಡಲು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ವಂಚನೆಯಲ್ಲಿ ಭಾಗಿಯಾಗಿರುವ ಬೈರತಿ ಬಸವರಾಜ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತರಾದ ಬಿ.ವೆಂಕಟೇಶ್ ಹಾಗೂ ನಂ.2ನೇ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಚರಣ್ ರಾಜ್ ಮುಂತಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಕೋರಿದೆ” ಎಂದು ಹೇಳಿದ್ದಾರೆ.

ಬೈರತಿ ಬಸವರಾಜ್ ಅವರೊಂದಿಗೆ ಸೇರಿಕೊಂಡು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಜಂಟಿಯಾಗಿ ತಯಾರಿಸಿದ 768 ಫಲಾನುಭವಿಗಳ ಪಟ್ಟಿಯಲ್ಲಿರುವವರಿಗೆ ಸದರಿ ಮನೆಗಳನ್ನು ಹಂಚಿಕೆ ಮಾಡುತ್ತಿರುವುದನ್ನು ಕೂಡಲೆ ತಡೆಗಟ್ಟಿ, ಮಂಡಳಿಯ ನಿಯಮಗಳಂತೆ ನಿಜವಾದ ಘೋಷಿತ ಕೊಳಗೇರಿ ಬಡಜನರಿಗೆ ಸದರಿ ಮನೆಗಳು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಕೋರಲಾಗಿದೆ ಎಂದು ಡಿ.ಸಿ.ಪ್ರಕಾಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೊಳಗೇರಿ ಜನರ ಮನೆಗಳನ್ನು ಶಾಸಕ ಬೈರತಿ ಬಸವರಾಜ್ ಹಿಂಬಾಲಕರಿಗೆ ಹಂಚಿಕೆ ಮಾಡುತ್ತಿರುವ ಕೊಳಗೇರಿ ಮಂಡಳಿಯ ಭ್ರಷ್ಟ ಅಧಿಕಾರಿಗಳು!

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ವಿಶಾಲ್ ಪಾಟೀಲ್ ಎಂಬುವವನು ತಾನು ಕರ್ನಾಟಕ ಲೋಕಾಯುಕ್ತ ಡಿವೈಎಸ್‌ಪಿ ಎಂದು ಸರ್ಕಾರಿ ನೌಕರರುಗಳಿಗೆ ಕರೆ ಮಾಡಿ, ನಿಮ್ಮ ವಿರುದ್ದ ಆದಾಯಕ್ಕೂ ಮೀರಿದ ಆಸ್ತಿಗಳಿಗೆ ಸಂಬಂಧಪಟ್ಟ ಮಾಹಿತಿಗಳುಳ್ಳ ಕೇಸಿನ ಕಡತ ನನ್ನ ಬಳಿ ಇದೆ ಎಂದು ಬೆದರಿಕೆ ಹಾಕಿ, ಕೇಸನ್ನು ಮುಕ್ತಾಯ ಮಾಡಲು ಹಣ ನೀಡಬೇಕು ಇಲ್ಲದಿದ್ದರೆ, ನಿಮ್ಮ ವಿರುದ್ದ ಕರ್ನಾಟಕ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳುತ್ತೇನೆಂದು ಸುಳ್ಳು ಹೇಳಿ ಹಣಕ್ಕೆ ಒತ್ತಾಯ ಮಾಡುತ್ತಿದ್ದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾರ್ಯೋನ್ಮುಖರಾದ ವಿಧಾನಸೌಧ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿ, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆತನು ಸರ್ಕಾರಿ ನೌಕರರ ಬಳಿ ಹೋಗಿ ಹೆದರಿಸಿ, ಹಣವನ್ನು ಪಡೆದುಕೊಂಡು ಬರುತ್ತಿದ್ದಾಗಿ, ತನಿಖಾ ಸಮಯದಲ್ಲಿ ಕಂಡು ಬಂದಿರುತ್ತದೆ. ಲೋಕಾಯುಕ್ತ ಡಿವೈಎಸ್‌ಪಿ ಎಂದು ಕರೆ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯು ತಲೆ ಮಾರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿರುತ್ತದೆ.

ಇದನ್ನೂ ಓದಿ: ಜಾತಿ ತಾರತಮ್ಯದ ವಿರುದ್ಧ ಕಾನೂನು ರೂಪಿಸಿದ ಕ್ಯಾಲಿಫೋರ್ನಿಯಾ; ಕರಾಳ ದಿನವೆಂದ ಅಮೆರಿಕಾ ಹಿಂದೂ ಒಕ್ಕೂಟ!

ಈ ಯಶಸ್ವಿ ಕಾರ್ಯಚರಣೆಯನ್ನು ಶ್ರೀನಿವಾಸಗೌಡ ಆರ್, ಉಪ ಪೊಲೀಸ್ ಆಯುಕ್ತರು, ಕೇಂದ್ರ ವಿಭಾಗ, ಬೆಂಗಳೂರು ನಗರ ಅವರ ಮಾರ್ಗದರ್ಶನದಲ್ಲಿ ಸಿ.ಬಾಲಕೃಷ್ಣ, ಸಹಾಯಕ ಪೊಲೀಸ್ ಆಯುಕ್ತರು, ಕಬ್ಬನ್ ಪಾರ್ಕ್ ಉಪ ವಿಭಾಗ ರವರ ನೇತೃತ್ವದಲ್ಲಿ ಎಸ್.ಪಿ.ಕುಮಾರಸ್ವಾಮಿ, ಪೊಲೀಸ್ ಇನ್ಸ್​ಪೆಕ್ಟರ್ ಹಾಗೂ ಸಿಬ್ಬಂದಿರವರ ತಂಡ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿರುತ್ತದೆ.

ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.

ರಾಜಕೀಯ

ಚಿತ್ರದುರ್ಗ: ಕಾಂಗ್ರೆಸ್ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪವನ್ನು ತಳ್ಳಿಹಾಕಿರುವ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ನನ್ನ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದರೆ ಈ ವರೆಗೆ ಬಿಜೆಪಿಯವರು ಯಾಕೆ ಕಣ್ಮುಚ್ಚಿ ಕುಳಿತಿದ್ದರು ಎಂದು ಪ್ರಶ್ನಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಸಿಎಂ ಹೇಳುತ್ತಿದ್ದಾರೆ. ನಮ್ಮ ಅಧಿಯಲ್ಲಿ ಆಗಿದ್ದರೆ ತನಿಖೆ ನಡೆಸಬೇಕಿತ್ತು. ಯಾಕೆ ಸುಮ್ಮನಿದ್ದೀರಿ? ನಾನೇನಾದರೂ ಭ್ರಷ್ಟಾಚಾರದ ಹಗರಣಗಳಲ್ಲಿ ಭಾಗಿಯಾಗಿದ್ದರೆ ನಾಲ್ಕು ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಯಾಕೆ ತನಿಖೆ ಮಾಡಿಸಿಲ್ಲ? ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಬಾಯಿಯಲ್ಲಿ ಕಡುಬು ಹಾಕಿಕೊಂಡು ಕೂತಿದ್ದಿರಾ’? ಎಂದು ಆಕ್ರೋಶವನ್ನು ವ್ಯಕ್ತಪಡಿಸಿದರು.

ಡಿ.ಕೆ.ರವಿ

ಇದರ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಬಿಜೆಪಿ ನಾಯಕರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ತಪ್ಪಿಸಿಕೊಳ್ಳಲಿಕ್ಕಾಗಿ ಈಗ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ, ಪ್ರತಿ ಬಾರಿ ಸರ್ಕಾರದ ವಿರುದ್ಧ ಆರೋಪ ಮಾಡಿದಾಗ ನಮ್ಮತ್ತ ಬೆರಳು ತೋರಿಸುವುದು ಅವರಿಗೆ ಚಾಳಿಯಾಗಿದೆ. ನಮ್ಮ ಸರ್ಕಾರದ ವಿರುದ್ಧ ಆರೋಪಗಳು ಕೇಳಿಬಂದಾಗೆಲ್ಲ ಅದಕ್ಕೆ ಆಧಾರಗಳು ಇಲ್ಲದೆ ಇದ್ದರೂ ತಕ್ಷಣ ತನಿಖೆಗೆ ಆದೇಶ ನೀಡುತ್ತಿದ್ದೆ. ಐಎಎಸ್ ಅಧಿಕಾರಿ ಡಿ.ಕೆ.ರವಿ ಮತ್ತು ಡಿವೈಎಸ್‌ಪಿ ಗಣಪತಿಯವರ ಆತ್ಮಹತ್ಯೆ, ಅಕ್ರಮ ಲಾಟರಿ ಪ್ರಕರಣ, ಪರೇಶ್ ಮೇಸ್ತಾ ಸಾವು, ಸೌಜನ್ಯ ಕೊಲೆ ಪ್ರಕರಣವೂ ಹೀಗೆ 8 ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದೆ. ಡಿ.ಕೆ.ರವಿ, ಗಣಪತಿ, ಪರೇಶ್ ಮೇಸ್ತಾ ಸೇರಿದಂತೆ ಹೆಚ್ಚಿನ ಪ್ರಕರಣಗಳಲ್ಲಿ ಸಿಬಿಐ ‘ಬಿ ರಿಪೋರ್ಟ್’ ನೀಡಿದೆ. ಒಂದೇ ಒಂದು ಪ್ರಕರಣದಲ್ಲಿಯೂ ನಮ್ಮನ್ನು ದೋಷಿ ಮಾಡಿಲ್ಲ.

Justice H.S. Kempanna

ಅರ್ಕಾವತಿ ಬಡಾವಣೆಯಲ್ಲಿ ರೀ ಡೂ ಮಾಡಲಾಗಿದೆ ಎಂಬ ಆರೋಪ ಕೇಳಿಬಂದ ಕೂಡಲೇ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಅವರ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿ ಮಾಡಿದ್ದೆ. ನನ್ನಿಂದ ಒಂದು ಗುಂಟೆ ಜಾಗ ಕೂಡಾ ಡಿನೋಟಿಫಿಕೇಶನ್ ಆಗಿಲ್ಲ ಎಂದು ಕೆಂಪಣ್ಣ ಅವರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ರೀ ಡೂ ಮಾಡಲು ಹೇಳಿದ್ದು ರಾಜ್ಯ ಹೈಕೋರ್ಟ್. ನ್ಯಾಯಾಲಯದ ಆದೇಶವನ್ನಷ್ಟೇ ನಮ್ಮ ಸರ್ಕಾರ ಪಾಲಿಸಿದೆ. ಎಲ್ಲಿಯೂ ಡಿನೋಟಿಫಿಕೇಷನ್ ನಡೆದಿಲ್ಲ. ನ್ಯಾಯಮೂರ್ತಿ ಕೆಂಪಣ್ಣನವರೇ ಇದನ್ನು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ಕೆಂಪಣ್ಣನವರ ವರದಿಯ ಅಧ್ಯಯನ ಮಾಡಲು ಐಎಎಸ್ ಅಧಿಕಾರಿ ವಿಜಯಭಾಸ್ಕರ್ ನೇತೃತ್ವದಲ್ಲಿ ಸಮಿತಿ ನೇಮಕ ಮಾಡಿದ್ದೆ. ಆ ಸಮಿತಿ ವರದಿ ನೀಡುವ ಸಮಯದಲ್ಲಿ ಚುನಾವಣೆ ಎದುರಾದ ಕಾರಣ ಆ ವರದಿಯ ಮೇಲೆ ಕ್ರಮಕೈಗೊಳ್ಳಲಾಗಲಿಲ್ಲ. ಈಗ ರೀಡೂ ಮಾಡಲಾಗಿದೆ ಎಂದು ಆರೋಪ ಮಾಡುವವರು ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಮತ್ತು ವಿಜಯಭಾಸ್ಕರ್ ಸಮಿತಿ ನೀಡಿರುವ ವರದಿಯ ಮೇಲೆ ಯಾಕೆ ಕ್ರಮಕೈಗೊಂಡಿಲ್ಲ? ನಾಲ್ಕು ವರ್ಷಗಳಿಂದ ಬಾಯಿ ಮುಚ್ಚಿಕೊಂಡು ಕೂತವರು ಈಗ ರಾಜಕೀಯ ದುರುದ್ದೇಶದಿಂದ ಆರೋಪ ಮಾಡುತ್ತಿದ್ದಾರೆ.

ನ್ಯಾಯಮೂರ್ತಿ ಕೆಂಪಣ್ಣ ಹಾಗೂ ವಿಜಯಭಾಸ್ಕರ್ ಅವರ ಸಮಿತಿ ನೀಡಿರುವ ವರದಿಗಳು ಸರ್ಕಾರದ ಕೈಯಲ್ಲಿದೆ. ನಾನು ತಪ್ಪು ಮಾಡಿದ್ದರೆ ಶಿಕ್ಷೆ ವಿಧಿಸಿ. ನಿಮ್ಮ ಅಕ್ರಮಗಳನ್ನು ಮುಚ್ಚಿಹಾಕಲು ಸುಳ್ಳು ಆರೋಪಗಳನ್ನು ಮಾಡಬೇಡಿ. ಎಸಿಬಿ ರಚನೆ ಮಾಡಿ ಲೋಕಾಯುಕ್ತವನ್ನು ದುರ್ಬಲಗೊಳಿಸಿದ್ದೇವೆ ಎಂಬ ಆರೋಪ ಸತ್ಯಕ್ಕೆ ದೂರವಾದುದು. ಆಗಿನ ಲೋಕಾಯುಕ್ತರಾಗಿದ್ದ ಭಾಸ್ಕರ್ ರಾವ್ ಅವರ ಮಗ ಮನೆಯಲ್ಲಿಯೇ ಕೂತು ಆರೋಪಿ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ ಎಂಬ ಆರೋಪ ಇತ್ತು. ಲೋಕಾಯುಕ್ತರ ವಿರುದ್ಧವೇ ಆರೋಪ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತದ ಕಾರ್ಯದ ಮೇಲೆ ಕಣ್ಣಿಡಲು ಎಸಿಬಿ ರಚನೆ ಮಾಡಿದ್ದೇವೆಯೇ ಹೊರತು ಅದರಲ್ಲಿ ಯಾವುದೇ ದುರುದ್ದೇಶ ಇರಲಿಲ್ಲ. ಎಸಿಬಿ ಅಸ್ತಿತ್ವದಲ್ಲಿರುವುದು ಕೇವಲ ಕರ್ನಾಟಕದಲ್ಲಿ ಅಲ್ಲ, ಬಿಜೆಪಿ ಆಡಳಿತ ಇರುವ ಗುಜರಾತ್, ಮಧ್ಯಪ್ರದೇಶ, ಹರ್ಯಾಣ ಮೊದಲಾದ ರಾಜ್ಯಗಳಲ್ಲಿ ಇವೆ. ಅಲ್ಲಿ ಯಾಕೆ ಬಿಜೆಪಿ ಎಸಿಬಿಗೆ ವಿರುದ್ಧವಾಗಿ ಮಾತನಾಡುವುದಿಲ್ಲ? ಇಲ್ಲಿ ಎಸಿಬಿಯನ್ನು ಮುಚ್ಚಿ ಲೋಕಾಯುಕ್ತಕ್ಕೆ ಪೂರ್ಣ ಅಧಿಕಾರ ನೀಡಲು ಕಾರಣ ಹೈಕೋರ್ಟ್ ಆದೇಶವೇ ಹೊರತು, ಬಿಜೆಪಿ ಅಲ್ಲ” ಎಂದು ಕಿಡಿಕಾರಿದ್ದಾರೆ.