ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಶ್ರೀರಾಮ Archives » Dynamic Leader
October 16, 2024
Home Posts tagged ಶ್ರೀರಾಮ
ದೇಶ

ಅರಿಯಲೂರು: “ರಾಮನಿಗೆ 3 ಸಾವಿರ ವರ್ಷಗಳ ಇತಿಹಾಸವಿದೆ ಎಂದು ಹೇಳಲಾಗುತ್ತದೆ. ಆದರೆ ಶ್ರೀರಾಮನಿಗೆ ಇತಿಹಾಸವೇ ಇಲ್ಲ: ಎಂದು ತಮಿಳುನಾಡು ಸಾರಿಗೆ ಸಚಿವ ಶಿವಶಂಕರ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ಕೆಲವು ದಿನಗಳ ಹಿಂದೆ ಪುದುಕೊಟ್ಟೈ ‘ಕಂಬನ್ ಕಳಗಂ’ ಆಯೋಜಿಸಿದ್ದ ಕಂಬನ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ತಮಿಳುನಾಡು ಕಾನೂನು ಸಚಿವ ರಘುಪತಿ, “ರಾಮನ ಆಡಳಿತ ದ್ರಾವಿಡ ಮಾದರಿಯ ಆಡಳಿತಕ್ಕೆ ನಾಂದಿಯಾಗಿದ್ದು, ಇವಿ ರಾಮಸಾಮಿ, ಅಣ್ಣಾದೊರೈ, ಕರುಣಾನಿಧಿ ಹಾಗೂ ಸ್ಟಾಲಿನ್‌ಗೆ ಪೂರ್ವಭಾವಿಯಾಗಿ ರಾಮನನ್ನು ಕಾಣುತ್ತೇವೆ” ಎಂದು ಹೇಳಿದ್ದರು. ಈ ಮಾತು ಅಂದು ಸಂಚಲನ ಮೂಡಿಸಿತ್ತು.

ಈ ಹಿನ್ನೆಲೆಯಲ್ಲಿ, ಸಚಿವ ರಘುಪತಿ ಮಾತಿಗೆ ವ್ಯತಿರಿಕ್ತವಾಗಿ ಸಾರಿಗೆ ಸಚಿವ ಶಿವಶಂಕರ್ ಬಾಯಿಬಿಟ್ಟಿದ್ದಾರೆ. ಅರಿಯಲೂರಿನಲ್ಲಿ ರಾಜೇಂದ್ರ ಚೋಳರ ಜನ್ಮದಿನವನ್ನು ರಾಜ್ಯೋತ್ಸವವಾಗಿ ಆಚರಿಸುವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿರುವ ಸಚಿವ ಶಿವಶಂಕರ್, “ಶ್ರೀರಾಮನಿಗೆ 3 ಸಾವಿರ ವರ್ಷಗಳ ಇತಿಹಾಸವಿದೆ ಎಂದು ಹೇಳಲಾಗುತ್ತದೆ. ಆದರೆ ರಾಮನಿಗೆ ಇತಿಹಾಸವೇ ಇಲ್ಲ.

ದೇವಾಲಯಗಳು, ಶಾಸನಗಳು ಮತ್ತು ತಾಮ್ರ ಫಲಕದ ಶಾಸನಗಳು ರಾಜೇಂದ್ರ ಚೋಳನ ಆಳ್ವಿಕೆಗೆ ಸಾಕ್ಷಿಯಾಗಿದೆ. ರಾಜೇಂದ್ರ ಚೋಳನನ್ನು ಆಚರಿಸದಿದ್ದರೆ ಇತಿಹಾಸ ಇಲ್ಲದವರನ್ನು ನಮ್ಮ ತಲೆಗೆ ಕಟ್ಟಿಬಿಡುತ್ತಾರೆ” ಎಂದು ಹೇಳಿದ್ದಾರೆ. ಈ ಮಾತು ಡಿಎಂಕೆ ಸರ್ಕಾರಕ್ಕೆ ಮುಜುಗರವನ್ನು ಉಂಟುಮಾಡಿದೆ.

ದೇಶ

ಶ್ರೀರಾಮ ನವಮಿ ದಿನವಾದ ಇಂದು (ಏಪ್ರಿಲ್ 17) ಅಯೋಧ್ಯೆಯ ರಾಮ ಮಂದಿರದಲ್ಲಿ ಸೂರ್ಯನ ಕಿರಣಗಳು ನೇರವಾಗಿ ರಾಮನ ಹಣೆಗೆ ತಿಲಕದಂತೆ ಅಪ್ಪಳಿಸಿದ್ದು ಭಕ್ತರನ್ನು ಪುಳಕಿತಗೊಳಿಸಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಕುಂಭಾಭಿಷೇಕ ಸಮಾರಂಭ ಕಳೆದ ಜನವರಿ 22 ರಂದು ನಡೆಯಿತು. ಸಮಾರಂಭ ಮುಗಿದ ಮರುದಿನದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು. ತದನಂತರ, ಹೊರ ರಾಜ್ಯಗಳಲ್ಲದೆ ಹೊರ ಡೇಶಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ, ಶ್ರೀರಾಮನವಮಿಯ ಹಬ್ಬವಾದ ಇಂದು (ಏಪ್ರಿಲ್ 17), ಗರ್ಭಗುಡಿಯಲ್ಲಿರುವ ರಾಮನ ಪ್ರತಿಮೆಯ ಹಣೆಯ ಮೇಲೆ ಸೂರ್ಯನ ಬೆಳಕು ಬೀಳುವ ಅಪರೂಪದ ವಿದ್ಯಮಾನವು ಅಯೋಧ್ಯೆ ರಾಮಮಂದಿರದಲ್ಲಿ ಸರಿಯಾಗಿ ಮಧ್ಯಾಹ್ನ 12.16 ಕ್ಕೆ ನಡೆದಿದೆ. ಸೂರ್ಯನ ಕಿರಣಗಳು ನೇರವಾಗಿ ರಾಮನ ಹಣೆಗೆ ತಿಲಕದಂತೆ ಅಪ್ಪಳಿಸಿದ್ದು ಭಕ್ತರನ್ನು ಪುಳಕಿತಗೊಳಿಸಿದೆ.

ಈ ಘಟನೆ ಸುಮಾರು 5 ನಿಮಿಷಗಳ ಕಾಲ ನಡೆಯಿತು. ಈ ಅಪರೂಪದ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ರಾಮಮಂದಿರಕ್ಕೆ ಆಗಮಿಸಿದ್ದರು. ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿ ರಾಮನ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದರು. ಸೂರ್ಯನ ಬೆಳಕು ನೇರವಾಗಿ ರಾಮನ ಹಣೆಯ ಮೇಲೆ ಬೀಳುವ ರೀತಿಯಲ್ಲಿ ರಾಮಮಂದಿರವನ್ನು ವಿನ್ಯಾಸ ಮಾಡಿರುವುದು ಗಮನಾರ್ಹ.

ಅಯೋಧ್ಯೆಯಲ್ಲಿ ಶ್ರೀರಾಮನ ಹಣೆಯ ಮೇಲೆ ಸೂರ್ಯನ ಬೆಳಕು ಬೀಳುವ ಈ ವೀಡಿಯೋವನ್ನು ಪ್ರಧಾನಿ ಮೋದಿಯವರು ತಮ್ಮ ಹಾರಾಟದ ಸಮಯದಲ್ಲಿ ‘ಟೇಪ್’ನಲ್ಲಿ ವೀಕ್ಷಿಸಿದರು. ಈ ಫೋಟೋವನ್ನು ಪ್ರಧಾನಿ ಮೋದಿ ಎಕ್ಸ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲದೆ, “ಅಯೋಧ್ಯೆಯಲ್ಲಿ ರಾಮನ ಹಣೆಯ ಮೇಲೆ ಬೀಳುವ ಸೂರ್ಯನ ಬೆಳಕನ್ನು ನೋಡುವ ಭಾಗ್ಯ ನನಗೆ ಸಿಕ್ಕಿದೆ. ಲಕ್ಷಾಂತರ ಭಾರತೀಯರಂತೆ ನನಗೂ ಇದು ಅತ್ಯಂತ ಭಾವನಾತ್ಮಕ ಕ್ಷಣವಾಗಿದೆ. “ಈ ಸೂರ್ಯ ತಿಲಕವು ಅಭಿವೃದ್ಧಿ ಹೊಂದಿದ ಭಾರತದ ಪ್ರತಿಯೊಂದು ಸಂಕಲ್ಪವನ್ನು ತನ್ನ ದೈವಿಕ ಶಕ್ತಿಯಿಂದ ಬೆಳಗಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಜ್ಯ

ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯಲಿರುವ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮಲಾಲ್ ಅವರು ಹಾಗೂ ಇತರರು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಆಹ್ವಾನ ಪತ್ರಿಕೆಯನ್ನು ತುಂಬು ಹೃದಯದಿಂದ ಸ್ವೀಕರಿಸಿಕೊಂಡ ಹೆಚ್.ಡಿ.ಕುಮಾರಸ್ವಾಮಿ ಅವರು “ನನ್ನನ್ನು ಆಹ್ವಾನಿಸಿದ ಅವರೆಲ್ಲರಿಗೂ (ಸ್ವಯಂ ಸೇವಕ ಸಂಘ-RSS) ಧನ್ಯವಾದಗಳು. ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಹಾಗೂ ಶ್ರೀರಾಮ ಸೇವಾ ಕೈಂಕರ್ಯದಲ್ಲಿ ಕುಟುಂಬ ಸಮೇತವಾಗಿ ಸಂತೋಷದಿಂದ ಭಾಗಿಯಾಗುತ್ತೇನೆ” ಎಂದು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಗಮನಾರ್ಹ.

ದೇಶ

ಲೆಪ್ಚಾ: 2014 ರಿಂದ ಪ್ರತಿ ವರ್ಷವೂ ಸೈನಿಕರೊಂದಿಗೆ ದೀಪಾವಳಿ ಆಚರಿಸುತ್ತಿದ್ದ ಪ್ರಧಾನಿ ಮೋದಿ, ಈ ವರ್ಷ ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಸೇನಾ ಯೋಧರೊಂದಿಗೆ ದೀಪಾವಳಿ ಆಚರಿಸಿದರು. ಯೋಧರ ನಡುವೆ ಮಾತನಾಡಿದ ಮೋದಿ ಅವರು,

“ರಾಮ ಇರುವ ಸ್ಥಳ ಅಯೋಧ್ಯೆ” ಎಂದು ಹೇಳಲಾಗುತ್ತದೆ. ಆದರೆ, ನನ್ನ ಪ್ರಕಾರ ಸೈನಿಕರು ಎಲ್ಲಿದ್ದಾರೋ ಆ ಸ್ಥಳವೇ ನನಗೆ ಅಯೋಧ್ಯೆ” ಎಂದು ಹೇಳಿದ್ದಾರೆ.

ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ನನಗೆ ಹೆಮ್ಮೆ ಇದೆ. ಯಾವುದೇ ಸವಾಲನ್ನು ಎದುರಿಸಲು ಯೋಧರು ಸಿದ್ಧರಾಗಿದ್ದಾರೆ. ನಮ್ಮ ಯೋಧರು ಎಲ್ಲದರಲ್ಲೂ ಮುಂದಿದ್ದಾರೆ. ದೇಶವು ತನ್ನ ಸೈನಿಕರಿಗೆ ಋಣಿಯಾಗಿದೆ. ಸ್ವಾವಲಂಬನೆಯ ಭಾರತ ಎಂಬ ಗುರಿಯತ್ತ ನಮ್ಮ ದೇಶ ಸಾಗುತ್ತಿದೆ. ಭಾರತದಲ್ಲಿ ಭದ್ರತಾ ಉಪಕರಣಗಳ ಉತ್ಪಾದನೆ 1 ಲಕ್ಷ ಕೋಟಿ ದಾಟಿದೆ. 140 ಕೋಟಿ ಜನ ನಿಮ್ಮೊಂದಿಗಿದ್ದಾರೆ. ಪ್ರತಿಯೊಬ್ಬ ಭಾರತೀಯನೂ ನಿಮಗಾಗಿ ಪ್ರಾರ್ಥಿಸುತ್ತಿದ್ದಾನೆ.

ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸುತ್ತಿದ್ದೇನೆ. ಇಲ್ಲಿಂದ ನಾಡಿನ ಜನರಿಗೆ ಶುಭಾಶಯಗಳನ್ನು ಹೇಳುವುದು  ವಿಷೇಶವಾಗಿರುತ್ತದೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ರಾಮ ಇರುವ ಸ್ಥಳ ಅಯೋಧ್ಯೆ ಎಂದು ಹೇಳಲಾಗುತ್ತದೆ. ಆದರೆ, ನನ್ನ ಪ್ರಕಾರ ಸೈನಿಕರು ಎಲ್ಲಿದ್ದಾರೋ ಆ ಸ್ಥಳವೇ ನನಗೆ ಅಯೋಧ್ಯೆ”

ಪ್ರಸ್ತುತ ಜಗತ್ತು ಎದುರಿಸುತ್ತಿರುವ ಸಮಸ್ಯೆಗಳ ನಡುವೆ ಭಾರತದ ಮೇಲಿನ ನಿರೀಕ್ಷೆ ಹೆಚ್ಚುತ್ತಲೇ ಇದೆ. ಇಂತಹ ಸಂದರ್ಭಗಳಲ್ಲಿ ಭಾರತದ ಗಡಿ ಪ್ರದೇಶಗಳು ಸುರಕ್ಷಿತವಾಗಿರುವುದು ಮುಖ್ಯ. ದೇಶದಲ್ಲಿ ಶಾಂತಿಯುತ ವಾತಾವರಣ ನಿರ್ಮಿಸುತ್ತಿದ್ದೇವೆ. ಅದರಲ್ಲಿ ನಿಮಗೆ ಮಹತ್ವದ ಪಾತ್ರವಿದೆ. ಗಡಿಯಲ್ಲಿ ಯೋಧರು ಹಿಮಾಲಯದಂತೆ ಗಟ್ಟಿಯಾಗಿ ನಿಂತಿರುವುದರಿಂದ ನಮ್ಮ ದೇಶ ಸುರಕ್ಷಿತವಾಗಿದೆ. ಎಂದು ಮೋದಿ ಹಾಳಿದ್ದಾರೆ.

ದೇಶ

ನವದೆಹಲಿ: ಭಗವಾನ್ ಶ್ರೀರಾಮನ ಸಿದ್ಧಾಂತಗಳು ಭ್ರಷ್ಟಾಚಾರ ಮತ್ತು ಭಯೋತ್ಪಾದನೆಯ ದುಷ್ಟ ಶಕ್ತಿಗಳನ್ನು ತೊಡೆದುಹಾಕಲು ನಮಗೆ ಸಹಾಯ ಮಾಡುತ್ತವೆ ಎಂದು ರಾಷ್ಟ್ರಪತಿಗಳು ದಸರಾ ಸಂದರ್ಭದಲ್ಲಿ ಮಾತನಾಡಿದರು.

ನವರಾತ್ರಿಯ ಪ್ರಯುಕ್ತ ಧಾರ್ವಿುಕ ಲೀಲಾ ಸಮಿತಿಯು ಆಯೋಜಿಸಿದ್ದ ದಸರಾ ಉತ್ಸವವು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಿತು. ಇದರಲ್ಲಿ ಭಾಗವಹಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, “ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ಇಂದಿಗೂ ದೇಶಕ್ಕೆ ದೊಡ್ಡ ಸವಾಲಾಗಿದೆ. ಇವುಗಳನ್ನು ನಾವು ಎದುರಿಸುತ್ತಿದ್ದೇವೆ. ಈ ದುಷ್ಟ ಶಕ್ತಿಗಳನ್ನು ತೊಲಗಿಸಲು ಶ್ರೀರಾಮನ ವಿಚಾರಧಾರೆಗಳು ಸಹಕಾರಿಯಾಗಲಿವೆ” ಎಂದು ಹೇಳಿದರು.

ದಸರಾ ಉತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಂತಾದವರು ಭಾಗವಹಿಸಿದ್ದರು.

ಸಿನಿಮಾ

ಓಂ ರಾವತ್ ನಿರ್ದೇಶನದ ಆದಿಪುರುಷ ಸಿನಿಮಾ ರಾಮಾಯಣ ಕಥೆಯನ್ನಾಧರಿಸಿ ತೆರೆಕಂಡಿದೆ. ಇದರಲ್ಲಿ ರಾಮನಾಗಿ ಪ್ರಭಾಸ್, ರಾವಣನಾಗಿ ಸೈಫ್ ಅಲಿ ಖಾನ್ ಮತ್ತು ಸೀತೆಯಾಗಿ ಕೀರ್ತಿ ಸನನ್ ನಟಿಸಿದ್ದಾರೆ. ಅದ್ಧೂರಿ ಚಿತ್ರವನ್ನು ಡಿ ಸಿರೀಸ್ ಮತ್ತು ರೆಟ್ರೋ ಪೈಲ್ಸ್ ಜಂಟಿಯಾಗಿ ನಿರ್ಮಿಸಿವೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಇತರ ಭಾಷೆಗಳಲ್ಲಿ 3ಡಿ ತಂತ್ರಜ್ಞಾನದಲ್ಲಿ ಆದಿಪುರುಷ ಚಿತ್ರ ನಿನ್ನೆ (ಜೂನ್ 16) ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ.

ಭಾರೀ ನಿರೀಕ್ಷೆಗಳ ನಡುವೆ ತೆರೆಕಂಡಿರುವ ಆದಿಪುರುಷ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರಭಾಸ್ ಅಭಿಮಾನಿಗಳಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆಯಾದರೂ, ಚಿತ್ರವಾಗಿ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂಬ ನೆಗೆಟಿವ್ ವಿಮರ್ಶೆಗಳೂ ಬಂದಿವೆ.

ಸುಮಾರು ರೂ.500 ಕೋಟಿ ಬಜೆಟ್ ನಲ್ಲಿ ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದೊಂದಿಗೆ ತಯಾರಾಗಿರುವ ಚಿತ್ರದ ಅನಿಮೇಷನ್ ದೃಶ್ಯಗಳನ್ನು ನೆಟ್ಟಿಗರು ಟೀಕಿಸುತ್ತಿದ್ದಾರೆ. VFX ದೃಶ್ಯಗಳು ಇನ್ನೂ ಚೆನ್ನಾಗಿರಬಹುದಿತ್ತು ಎಂಬುದು ಹೆಚ್ಚಿನ ಅಭಿಮಾನಿಗಳ ಸಾಮಾನ್ಯ ಅಭಿಪ್ರಾಯವಾಗಿದೆ.

ಈ ಹಿನ್ನಲೆಯಲ್ಲಿ ಹಿಂದೂಸೇನಾ ಸಂಘಟನೆಯು ಆದಿಪುರುಷ ಚಿತ್ರದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ರಾಮಾಯಣ ಕಥೆಯಾಧಾರಿತ ಆದಿಪುರುಷ ಸಿನಿಮಾದಲ್ಲಿ ವಿವಾದಾತ್ಮಕ ದೃಶ್ಯಗಳಿದ್ದು, ಅದನ್ನು ತೆಗೆಯಬೇಕು ಎಂದು ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ರಾಮ, ರಾಮಾಯಣ, ಹಿಂದೂ ಸಂಸ್ಕೃತಿಯನ್ನು ಗೇಲಿ ಮಾಡಲಿಕ್ಕಾಗಿ ಆದಿಪುರುಷ ಸಿನಿಮಾ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಹಿಂದೆ, ಆದಿಪುರುಷ ಚಿತ್ರದಲ್ಲಿ, ಸೀತೆಯನ್ನು ಭಾರತದ ಮಗಳು ಎಂದು ಉಲ್ಲೇಖಿಸಿದ್ದಕ್ಕಾಗಿ ನೇಪಾಳದಲ್ಲಿ ತೀವ್ರ ಪ್ರತಿಭಟನೆಯನ್ನು ಹುಟ್ಟುಹಾಕಿತ್ತು. ರಾಮಾಯಣದ ಪ್ರಕಾರ ಸೀತೆ ನೇಪಾಳದಲ್ಲಿ ಜನಿಸಿದವಳು. ರಾಮ ಬಂದು ಸೀತೆಯನ್ನು ಮದುವೆಯಾಗುತ್ತಾರೆ.

ಇದಾದ ನಂತರ ನೇಪಾಳದ ಕಠ್ಮಂಡುವಿನ ಮೇಯರ್ ಬಲೇನ್ ಶಾ ಟ್ವೀಟ್ ಮಾಡಿ, “ಸೀತೆ ಭಾರತದ ಮಗಳು ಎಂಬ ವಿವಾದಾತ್ಮಕ ದೃಶ್ಯವನ್ನು ತೆಗೆದುಹಾಕದಿದ್ದರೆ ನೇಪಾಳದಲ್ಲಿ ಆದಿಪುರುಷ ಚಿತ್ರವನ್ನು ಬಿಡುಗಡೆ ಮಾಡುವುದಿಲ್ಲ” ಎಂದು ಹೇಳಿದ್ದಾರೆ. ಆ ನಂತರ ಆದಿಪುರುಷ ಚಿತ್ರತಂಡ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ಆ ಸಂಭಾಷಣೆಯನ್ನು ತೆಗೆದು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ದೇಶ

ಏಪ್ರಿಲ್ 23 ರಂದು ಪಾಕಿಸ್ತಾನದ ರಾವಿ ನದಿ ನೀರು ಸೇರಿದಂತೆ 155 ದೇಶಗಳ ನದಿಗಳಿಂದ ಸ್ವೀಕರಿಸಲಾದ ನೀರಿನಿಂದ ಶ್ರೀರಾಮನ ಜಲಾಭಿಷೇಕ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಪಾಕಿಸ್ತಾನದ ರಾವಿ ನದಿಯಿಂದ ಕಲಶದಲ್ಲಿ ತಂದ ನೀರನ್ನು ಸ್ವೀಕರಿಸಿಕೊಂಡ ಹಿಂದೂಗಳ ಮುಖಾಂತರ ಅದನ್ನು ದುಬೈಗೆ ಕಳುಹಿಸಿ ಅಲ್ಲಿಂದ ದೆಹಲಿಗೆ ತರಲಾಗಿದೆ.

ಅದೇ ರೀತಿ 155 ದೇಶಗಳ ನದಿಗಳ ಪವಿತ್ರ ನೀರನ್ನು ತಂದು ಕಲಶದಲ್ಲಿ ಸಂಗ್ರಹಿಸಿಡಲಾಗಿದೆ ಎಂದು ಹೇಳಲಾಗುತ್ತಿದೆ.