ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಷೇರು ಮಾರುಕಟ್ಟೆ Archives » Dynamic Leader
October 19, 2024
Home Posts tagged ಷೇರು ಮಾರುಕಟ್ಟೆ
ದೇಶ

ನವದೆಹಲಿ: ಷೇರು ಮಾರುಕಟ್ಟೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದರಿಂದ ಜನ ಸಾಮಾನ್ಯರಿಗೆ 38 ಲಕ್ಷ ಕೋಟಿ ರೂ.ನಷ್ಟವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೆಹಲಿಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ, “ಷೇರು ಮಾರುಕಟ್ಟೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳನ್ನು ವ್ಯವಸ್ಥಿತವಾಗಿ ತಿರುಚಲಾಗಿದೆ. ಷೇರು ಮಾರುಕಟ್ಟೆಯಲ್ಲಿ ಲಾಭ ಗಳಿಸಲು ಸಮೀಕ್ಷೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಜೂನ್ 4ರೊಳಗೆ ಷೇರುಗಳನ್ನು ಖರೀದಿಸುವಂತೆ ಮೇ 14ರಂದು ಅಮಿತ್ ಶಾ ಹೇಳಿದ್ದಾರೆ.

38 ಲಕ್ಷ ಕೋಟಿ ನಷ್ಟ:
ನಿರ್ದಿಷ್ಟ 5 ಕೋಟಿ ಕುಟುಂಬಗಳು ಷೇರು ಮಾರುಕಟ್ಟೆಯಲ್ಲಿ ನಿರ್ದಿಷ್ಟ ಸಮಯದಲ್ಲಿ ಹೂಡಿಕೆ ಮಾಡುವಂತೆ ಅಮಿತ್ ಶಾ ಕೇಳಿದ್ದು ಏಕೆ? ಷೇರು ಮಾರುಕಟ್ಟೆ ಅಕ್ರಮಗಳ ಬಗ್ಗೆ ಸೆಬಿ ತನಿಖೆ ನಡೆಸಬೇಕು. ಷೇರು ಮಾರುಕಟ್ಟೆಯಲ್ಲಿ 38 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ಇದರಿಂದ ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಕೆಲವರು ಹಣ ಸಂಪಾದಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಾಯ ಮಾಡಿದ್ದಾರೆ. ಬಿಜೆಪಿಯ ಸಮೀಕ್ಷೆಯಿಂದ ಷೇರುಗಳು ಗಣನೀಯವಾಗಿ ಏರಿಕೆ ಕಂಡಿತ್ತು.

ನಕಲಿ ಸಮೀಕ್ಷೆಗಳು:
ದುಬಾರಿ ಬೆಲೆಯ ಲಾಭ ಪಡೆದು ಬಿಜೆಪಿ ಹಣ ಗಳಿಸಿದೆ. ನಕಲಿ ಸಮೀಕ್ಷೆ ನಡೆಸಿದವರ ವಿರುದ್ಧ ತನಿಖೆ ನಡೆಸಬೇಕು. ಚುನಾವಣಾ ಮತದಾನಕ್ಕೂ ಮುನ್ನ ಮೇ 30 ಮತ್ತು 31 ರಂದು ಷೇರುಪೇಟೆಯಲ್ಲಿ ಹೂಡಿಕೆಯ ಸಂಗ್ರಹವು ಹೆಚ್ಚಾಗಿತ್ತು. ಚುನಾವಣೆ ನಂತರ ಷೇರುಪೇಟೆ ಕುಸಿತದಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿರ್ದಿಷ್ಟ ಕೆಲವೇ ಕುಟುಂಬಗಳು ಹಣ ಗಳಿಸಲು ಸಂಚು ನಡೆದಿದೆ.

ಸಂಸದೀಯ ಜಂಟಿ ಸಮಿತಿ:
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕು. ಸೆಬಿ ತನಿಖೆಯನ್ನು ಎದುರಿಸುತ್ತಿರುವ ಮಾಧ್ಯಮ ಕಂಪನಿಯೊಂದಕ್ಕೆ ಷೇರು ಮಾರುಕಟ್ಟೆ ಕುರಿತು ಅಮಿತ್ ಶಾ ಸಂದರ್ಶನ ನೀಡಿದ್ದು ಏಕೆ? ಪ್ರಧಾನಿ ಮೋದಿ ಕೂಡ ಷೇರು ಮಾರುಕಟ್ಟೆಯ ಬಗ್ಗೆ ಮಾತನಾಡಿದ್ದಾರೆ. ಷೇರು ಮಾರುಕಟ್ಟೆ ಏರಿಕೆಯ ಬಗ್ಗೆ ಮೋದಿ ಏಕೆ ಬಹಿರಂಗವಾಗಿ ಮಾತನಾಡಬೇಕು? ಜೂನ್ 4 ರಂದು ಷೇರು ಮಾರುಕಟ್ಟೆಯಲ್ಲಿ ದೊಡ್ಡ ಬದಲಾವಣೆ ಇರುತ್ತದೆ ಎಂದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಸಲಹೆ ನೀಡಿದ್ದು ಕಾನೂನು ಬಾಹಿರ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಮತ್ತು ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ (BSE) ಅದಾನಿ ಸಮೂಹವು ತನ್ನ ಸಾಲವನ್ನು ಇನ್ನೂ ಪೂರ್ಣವಾಗಿ ಇತ್ಯರ್ಥಪಡಿಸಿಲ್ಲ ಎಂಬ ವರದಿಗಳ ಕುರಿತು ಅದಾನಿಯಿಂದ ವಿವರಣೆ ಕೇಳಿದೆ.

ಅದಾನಿ ಗ್ರೂಪ್ ಕಂಪನಿಗಳು ಲೆಕ್ಕಪತ್ರ ವಂಚನೆ, ತೆರಿಗೆ ವಂಚನೆ ಮತ್ತು ಅಕ್ರಮ ಹಣ ರವಾನೆಯಲ್ಲಿ ತೊಡಗಿವೆ ಎಂದು ಹೆಸರಾಂತ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಎಲ್‌ಎಲ್‌ಸಿ ಆರೋಪಿಸಿತ್ತು. ಅದಾನಿ ಗ್ರೂಪ್ ಷೇರು ಮಾರುಕಟ್ಟೆಯಲ್ಲಿ ಅಕ್ರಮ ಎಸಗುವ ಮೂಲಕ ತನ್ನ ಕಂಪನಿಯ ಷೇರು ಬೆಲೆಯನ್ನು ಹೆಚ್ಚಿಸಿಕೊಂಡಿದೆ ಎಂದು ತನ್ನ ವರದಿಯಲ್ಲಿ ಆರೋಪಿಸಿತ್ತು.

ಈ ವರದಿಯ ನಂತರ, ಅದಾನಿ ಕಂಪನಿಗಳ ಷೇರು ಮೌಲ್ಯಗಳು ತೀವ್ರ ಕುಸಿತವನ್ನು ಅನುಭವಿಸಿದವು. ಇದರಿಂದಾಗಿ ಅದಾನಿ ಕಂಪನಿಯ ಮೌಲ್ಯವು ಹಲವು ಕೋಟಿ ರೂಪಾಯಿಗಳ ಕುಸಿತವನ್ನು ಕಂಡಿತು. ಇದರಿಂದಾಗಿ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದ ಅದಾನಿ 28ನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರ ಆಸ್ತಿ ಮೌಲ್ಯ ಲಕ್ಷ ಕೋಟಿಗಳಷ್ಟು ಕುಸಿದಿದೆ ಎಂದು ವರದಿಯಾಗಿದೆ.

ಅದಾನಿ ಷೇರುಗಳ ಈ ಕುಸಿತದಿಂದ ಅದಾನಿಯಲ್ಲಿ ಹೂಡಿಕೆ ಮಾಡಿದ್ದ LIC ಸೇರಿದಂತೆ ಸಾರ್ವಜನಿಕ ವಲಯದ ಕಂಪನಿಗಳು ಭಾರಿ ನಷ್ಟವನ್ನು ಅನುಭವಿಸಿವೆ. ಎಲ್ಐಸಿ ಸಂಸ್ಥೆಯು ಅದಾನಿಯ ಕಂಪನಿಗಳಲ್ಲಿ ರೂ.30,127 ಕೋಟಿಯಷ್ಟು ಹಣವನ್ನು ಹೂಡಿಕೆ ಮಾಡಿತ್ತು. ಜನವರಿ 24 ರಂದು ಇದರ ಮೌಲ್ಯ 72,193.87 ಕೋಟಿ ರೂಪಾಯಿಯಾಗಿತ್ತು. ಆದರೆ ಈಗ ಅದಾನಿ ಕಂಪನಿಗಳ ಷೇರು ಮೌಲ್ಯವು ಕಡಿಮೆಯಾಗುತ್ತಿರುವುದರಿಂದ ಈಗ ಅದರ ಮೌಲ್ಯವು ರೂ.26,861.88 ಕೋಟಿಗೆ ಕುಸಿದಿದೆ ಎಂದು ವರದಿಯಾಗಿದೆ.

ಆ ನಂತರ ಭಾರತದಲ್ಲಿ ಉದ್ಯೋಗಿಗಳ PF ಹಣದ ಮೌಲ್ಯವೂ ಅದಾನಿಯಿಂದ ಕಡಿಮೆಯಾಗಿದೆ ಎಂಬ ಅಘಾತಕಾರಿ ಸುದ್ಧಿಯೂ ಈಗ ಹೊರಬರುತ್ತಿದೆ. ಅದಾನಿ ಕಂಪನಿಗಳಾದ ಅದಾನಿ ಎಂಟರ್‌ಪ್ರೈಸ್ ಮತ್ತು ಅದಾನಿ ಪೋರ್ಟ್‌ನ ಷೇರುಗಳಲ್ಲಿ EPFO ಗಣನೀಯ ಪ್ರಮಾಣದ PF ಹಣವನ್ನು ಹೂಡಿಕೆ ಮಾಡಿದೆ. ಇದೀಗ ಅದಾನಿ ಕಂಪನಿಗಳಲ್ಲಿನ ನಷ್ಟದಿಂದಾಗಿ ಈ ಪಿಎಫ್ ಹಣವೂ ಮೌಲ್ಯ ಕಳೆದುಕೊಂಡಿದೆ. ಇದರ ಬೆನ್ನಲ್ಲೇ ಅದಾನಿ ಕಂಪನಿಗಳಲ್ಲಿ ಹೂಡಿರುವ ಪಿಎಫ್ ಹಣವನ್ನು ವಾಪಸ್ ನೀಡುವಂತೆ ವ್ಯಾಪಕ ಬೇಡಿಕೆ ವ್ಯಕ್ತವಾಗಿದೆ.

ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಮತ್ತು ಮುಂಬೈ ಷೇರುಪೇಟೆ (BSE) ಅದಾನಿ ಸಮೂಹವು ತನ್ನ ಸಾಲವನ್ನು ಸಂಪೂರ್ಣವಾಗಿ ಇತ್ಯರ್ಥಗೊಳಿಸಿಲ್ಲ ಎಂಬ ಮಾಹಿತಿಗೆ ಸಂಬಂಧಿಸಿದಂತೆ ಅದಾನಿಯಿಂದ ವಿವರಣೆ ಕೇಳಿದೆ. ಅದಾನಿ ಷೇರುಗಳು ಕುಸಿದಿರುವ ಹಿನ್ನಲೆಯಲ್ಲಿಯೇ ಕಂಪನಿಯು ಅವರ ಸಾಲವನ್ನು ತೀರಿಸಲು ಮುಂದಾಯಿತು.

ಆ ನಂತರ ಅದಾನಿ ಕಂಪನಿ ಸಾಲ ಮರುಪಾವತಿಯಾಗಿದೆ ಎಂದು ಹೇಳಿಕೊಂಡಿದ್ದರೂ ಅದಾನಿ ಸಂಪೂರ್ಣವಾಗಿ ಸಾಲ ಮರುಪಾವತಿ ಮಾಡಿಲ್ಲ ಎಂದು ‘ದಿ ಕೆನ್’ (The Ken) ಕಂಪನಿ ತಿಳಿಸಿದೆ. ಅದಾನಿ ಗ್ರೂಪ್ ಇದುವರೆಗೆ ತನ್ನ ಅರ್ಧದಷ್ಟು ಸಾಲವನ್ನು ಮಾತ್ರ ಮರುಪಾವತಿ ಮಾಡಿದೆ. ಆದ್ದರಿಂದಲೇ ಆ ಕಂಪನಿಯ ಷೇರುಗಳನ್ನು ಇನ್ನೂ ಸಂಪೂರ್ಣವಾಗಿ ಬಿಡುಗಡೆ ಮಾಡಲಾಗಿಲ್ಲ ಎಂದು ‘ದಿ ಕೆನ್’ ನಡೆಸಿದ ಸಂಶೋಧನೆಯಲ್ಲಿ ತಿಳಿದು ಬಂದಿದೆ.

ಈ ಹಿನ್ನಲೆಯಲ್ಲೇ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಮತ್ತು ಮುಂಬೈ ಷೇರುಪೇಟೆ (BSE) ಅದಾನಿ ಅವರಿಂದ ವಿವರಣೆ ಕೇಳಿವೆ. ಅದಾನಿ ಗ್ರೂಪ್ ತನ್ನ ಷೇರುಗಳನ್ನು ಅಡಮಾನವಿಟ್ಟು ಪಡೆದ 21.5 ಬಿಲ್ಲಿಯನ್ ಡಾಲರ್ ಸಾಲವನ್ನು ಪಾವತಿಸಿದೆ ಎಂದು ಈಗಾಗಲೇ ಹೇಳಿಕೊಂಡಿದ್ದ ಹಿನ್ನಲೆಯಲ್ಲಿ, ಈಗ ಈ ವರದಿ ಹೊರಬಂದು ಕಂಪನಿಯ ನಿಜವಾದ ಸ್ಥಿತಿಯನ್ನು ಬಹಿರಂಗಪಡಿಸಿದೆ.  

ದೇಶ

ಅದಾನಿ ವಿಚಾರ ಮುಜುಗರಕ್ಕೆ ಕಾರಣವಾಗುವುದರಿಂದ ಕೇಂದ್ರ ಸರ್ಕಾರ ಚರ್ಚೆಗೆ ಅವಹಾಶ ನೀಡುತ್ತಿಲ್ಲ ಎಂದು ಸಂಸದ ಶಶಿ ತರೂರ್ ಆರೋಪ ಮಾಡಿದ್ದಾರೆ.

ನವದೆಹಲಿ: ಅಮೇರಿಕ ಮೂಲದ ಹಿಂಡೆನ್‌ಬರ್ಗ್ ಮಾರ್ಕೆಟ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಇತ್ತೀಚೆಗೆ ಅದಾನಿ ಕಂಪನಿಗಳ ವಂಚನೆಯ ಆರೋಪಗಳೊಂದಿಗೆ ವರದಿಯನ್ನು ಪ್ರಕಟಿಸಿತು. ಇದು ದೇಶವನ್ನು ಆಘಾತಕ್ಕೆ ತಳ್ಳಿದೆ.

ಈ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಧ್ವನಿ ಎತ್ತುತ್ತಿವೆ. ಇದನ್ನು ಕೇಂದ್ರ ಸರ್ಕಾರ ಒಪ್ಪದ ಕಾರಣ ನಿನ್ನೆಯೂ ಸಂಸತ್ತಿನ ಉಭಯ ಸದನಗಳು ಸತತ 2ನೇ ದಿನವೂ ಕಲಾಪ ನಡೆಸಲು ಸಾಧ್ಯವಾಗದೆ ಸ್ತಬ್ಧಗೊಂಡಿತು.

ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕರಲ್ಲಿ ಒಬ್ಬರಾದ ಸಂಸದ ಶಶಿ ತರೂರ್ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ: ‘ದೇಶ ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಲು ಸಂಸತ್ತು ವೇದಿಕೆಯಾಗಿದೆ. ಈ ಮೂಲಕ ಸಂಸದರ ಕಳಕಳಿ, ಸಂಸದರು ಯಾವ ವಿಷಯದ ಮೇಲೆ ಗಮನಹರಿಸುತ್ತಿದ್ದಾರೆ ಎಂಬುದನ್ನು ದೇಶದ ಜನತೆ ತಿಳಿಯಬಹುದಾಗಿದೆ.

ಆದರೆ ದುರದೃಷ್ಟವಶಾತ್ ಕೇಂದ್ರ ಸರಕಾರಕ್ಕೆ ಇದರ ಪ್ರಯೋಜನ ಕಾನುತ್ತಿಲ್ಲ. ಅದಕ್ಕಾಗಿಯೇ ಅವರು (ಸರ್ಕಾರದಲ್ಲಿರುವವರು) ಚರ್ಚೆಗಳನ್ನು ತಡೆಯುತ್ತಾರೆ. ಇದರಿಂದಾಗಿ 2 ದಿನಗಳ ಸಂಸತ್ತನ್ನು ಕಳೆದುಕೊಂಡಿದ್ದೇವೆ.

ಅದಾನಿ ಕಂಪೆನಿಯ ವಿಷಯವು ಅತ್ಯಂತ ಮಹತ್ವದ್ದಾಗಿರುವುದರಿಂದ ಮತ್ತು ದೇಶದ ಜನರ ಮೇಲೆ ಪರಿಣಾಮ ಬೀರುವುದರಿಂದ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಚರ್ಚಿಸಲು ಬಯಸುತ್ತಿವೆ. ಇದು ಸಾಕಷ್ಟು ಪ್ರಾಮುಖ್ಯತೆಯ ವಿಷಯವಾಗಿದ್ದು, ಇದನ್ನು ಚರ್ಚಿಸಲು ಸರ್ಕಾರ ಅವಕಾಶ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯ ಮಾಡುತ್ತಿವೆ.

ಬೆಂಗಳೂರು

ಬೆಂಗಳೂರು: ಅದಾನಿ ಸಮೂಹದ ನಿವ್ವಳ ಮೌಲ್ಯವು ಕಳೆದ ಕೆಲವು ವರ್ಷಗಳಿಂದ ದೈತ್ಯಾಕಾರವಾಗಿ ಬೆಳೆದಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದಾನಿ ಆಸ್ತಿ ಮೌಲ್ಯ ಗಣನೀಯವಾಗಿ ಏರಿಕೆಯಾಗಿದೆ ಎಂದು ಹಲವರು ಆರೋಪಿಸುತ್ತಿದ್ದಾರೆ. ಆದಾಗ್ಯೂ, ಅದಾನಿ ಗ್ರೂಪ್‌ನ ಆಸ್ತಿ ಹೆಚ್ಚಿದ ನಂತರ ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದರು. ಕಳೆದ ಕೆಲವು ದಿನಗಳಿಂದ ಅದಾನಿ ಗ್ರೂಪ್ ಷೇರುಗಳು ಕುಸಿತ ಕಂಡಿದ್ದು, ಅಲ್ಪ ಅಂತರದಿಂದ ಎರಡನೇ ಸ್ಥಾನದಲ್ಲಿದ್ದ ಅದಾನಿ ಗ್ರೂಪ್ ಈಗ ಮೂರನೇ ಸ್ಥಾನಕ್ಕೆ ಬಂದಿಳಿದಿದೆ.

ಈ ಹಿನ್ನಲೆಯಲ್ಲಿ ಅಮೆರಿಕದ ಪ್ರಸಿದ್ಧ ಸಂಶೋಧನಾ ಸಂಸ್ಥೆಯಾದ ಹಿಂಡೆನ್‌ಬರ್ಗ್ (Hindenburg) 106 ಪುಟಗಳ ವರದಿಯನ್ನು ಪ್ರಕಟಿಸಿ, ‘ಭಾರತದ ಅದಾನಿ ಗ್ರೂಪ್ ಷೇರು ಮಾರುಕಟ್ಟೆಯಲ್ಲಿ ಹಲವಾರು ವಂಚನೆಗಳನ್ನು ಮಾಡಿದೆ ಮತ್ತು ಸಮೂಹವು ಭಾರಿ ಸಾಲದಲ್ಲಿದೆ’ ಎಂದು ಆರೋಪಿಸಿತು. ವರದಿ ಬಿಡುಗಡೆಯಾದ ನಂತರ ಅದಾನಿ ಸಮೂಹದ ಷೇರುಗಳು ತೀವ್ರ ಕುಸಿತ ಕಂಡಿತು. ಜನವರಿ 25 ರಂದು ಮಾತ್ರ ಅದಾನಿ ಸಮೂಹವು ಒಂದು ಲಕ್ಷ ಕೋಟಿ ಮಾರುಕಟ್ಟೆ ಬಂಡವಾಳವನ್ನು ಕಳೆದುಕೊಂಡಿತು.

ಅದಾನಿ ಗ್ರೂಪ್ ಕಂಪನಿಗಳ ಷೇರುಗಳು ಸತತ ಮೂರನೇ ದಿನವೂ ನಿನ್ನೆ ಕುಸಿತವನ್ನು ಕಂಡವು. ಅದಾನಿ ಟೋಟಲ್ ಗ್ಯಾಸ್, ಅದಾನಿ ಗ್ರೀನ್ ಎನರ್ಜಿ, ಅದಾನಿ ಪವರ್, ಅದಾನಿ ಟ್ರಾನ್ಸ್‌ಮಿಷನ್, ಅದಾನಿ ವಿಲ್ಮರ್ ಮುಂತಾದವುಗಳ ಷೇರುಗಳ ಬೆಲೆ ವಿಪರೀತ ಕುಸಿತವನ್ನು ಕಂಡಿತು.

ಈ ಹಿನ್ನಲೆಯಲ್ಲಿ ಅದಾನಿಗೆ ಆರ್‌ಎಸ್‌ಎಸ್‌ನ ಆರ್ಥಿಕ ವಿಭಾಗ ಬೆಂಬಲ ನೀಡಿದೆ. ಆರ್‌ಎಸ್‌ಎಸ್‌ನ ಆರ್ಥಿಕ ವಿಭಾಗವಾದ ಸ್ವದೇಶಿ ಜಾಗರಣ ಮಂಚ್‌ ನೀಡಿರುವ ಹೇಳಿಕೆಯಲ್ಲಿ ‘ಅದಾನಿ ಹಣವನ್ನು ನಾಶ ಮಾಡುತ್ತಿಲ್ಲ, ಅವರು ಭಾರತದ ಮೂಲಸೌಕರ್ಯಗಳನ್ನು ನಿರ್ಮಿಸುತ್ತಿದ್ದಾರೆ; ಹಿಂಡೆನ್‌ಬರ್ಗ್ ವರದಿಯಿಂದ ಅಂತರಾಷ್ಟ್ರೀಯ ರಂಗದಲ್ಲಿ ಭಾರತದ ಹೆಸರಿಗೆ ಧಕ್ಕೆಯಾಗುವುದಿಲ್ಲ’ ಎಂದು ಹೇಳಿದೆ.