ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸಂವಿಧಾನ Archives » Dynamic Leader
October 16, 2024
Home Posts tagged ಸಂವಿಧಾನ
ಬೆಂಗಳೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

“ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19 ರವರೆಗೆ ಏರ್ಪಡಿಸಲಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಲಾಗಿದೆ” ಎಂದು ಹೇಳಿದರು.

“ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ರವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ. ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ” ಎಂದು ಹೇಳಿದರು.

“ಯಾವುದೇ ಜಾತಿ, ಧರ್ಮ, ಭಾಷೆ, ಪ್ರದೇಶಗಳಿಗೆ ಸೇರಿದ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರು ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ” ಎಂದು ಹೇಳಿದರು.

ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ.

 

ರಾಜ್ಯ

ಬೆಂಗಳೂರು: ವಾಲ್ಮಿಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಕುರಿತಾದ ನಿಯಮ‌ 69ರ ಅಡಿಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.  

“ವಾಲ್ಮಿಕಿ ನಿಗಮದ ಪ್ರಕರಣದಲ್ಲಿ ಆರ್.ಅಶೋಕ್, ವಿಜಯೇಂದ್ರ ನನ್ನ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಮಾಜಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ವಿಶೇಷ ತನಿಖಾ ತಂಡವನ್ನು ಹಿಂದಕ್ಕೆ ಪಡೆಯಿರಿ ಎಂದು ಹೇಳಿದ್ದಾರೆ. ನೀವು ಗೃಹ ಮಂತ್ರಿ ಆಗಿದ್ದಾಗಲೂ ಎಸ್.ಐ.ಟಿ ಬಗ್ಗೆ ಹೀಗೆ ಹೇಳಿದ್ದೀರಾ? ಎಂಬುದನ್ನು ಅವರಲ್ಲಿ ಕೇಳಬಯಸುತ್ತೇನೆ” ಎಂದು ಹೇಳಿದರು.

“ಮೇ 26 ರಂದು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡರು. ಇವರು ತಮಿಳುನಾಡಿನ ಬೋವಿ ಸಮುದಾಯದವರು. ವಿರೋಧ ಪಕ್ಷದವರು ಸಾವಿರ ಸಾರಿ ದಲಿತ, ದಲಿತ ಎಂದು ಮಾತನಾಡಿದ್ದಾರೆ” ಎಂದರು.

“ಸಂವಿಧಾನದಲ್ಲಿ ಪರಿಶಿಷ್ಟ ಜಾತಿ/ವರ್ಗ ಎನ್ನುವ ಉಲ್ಲೇಖ ಇದೆ. ಇಬ್ಬರೂ ಸೇರಿ 24.1% ಜನಸಂಖ್ಯೆ ಇದ್ದಾರೆ. ಇವರ ಅಭಿವೃದ್ಧಿ ಆದರೆ ಮಾತ್ರ ಸಮ ಸಮಾಜದ ಆಶಯ ಈಡೇರುತ್ತದೆ. ಈ ಸಮುದಾಯಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಬರುತ್ತದೆ. ಅಸಮಾನತೆ ಇರುವವರೆಗೂ ಸಮಾನತೆ ಸಾಧ್ಯವಿಲ್ಲ. ಸಂವಿಧಾನ ಬಂದು 70 ವರ್ಷ ಆದರೂ ಸಮಾನತೆ ಸಿಕ್ಕಿಲ್ಲ. ಇದನ್ನು ಸರಿಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ವಾಲ್ಮಿಕಿ, ಬೋವಿ, ಆದಿಜಾಂಭವ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಸೇರಿ ಹಲವು ಅಭಿವೃದ್ಧಿ ನಿಗಮಗಳನ್ನು ಆರಂಭಿಸಲಾಗಿದೆ. ಈ ಎಲ್ಲಾ ನಿಗಮಗಳ ಉದ್ದೇಶ ಆಯಾ ಸಮುದಾಯಗಳನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿಸುವುದೇ ಆಗಿದೆ” ಎಂದು ಹೇಳಿದರು.

“2013ರ ಡಿಸೆಂಬರ್ ನಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆ ಜಾರಿಗೆ ಕೊಟ್ಟಿದ್ದು ನಮ್ಮ‌ ಸರ್ಕಾರ. ಬಜೆಟ್‌ನ 24.1% ಅಭಿವೃದ್ಧಿ ಹಣ ಈ ಸಮುದಾಯದ ಅಭಿವೃದ್ಧಿಗೆ ಮೀಸಲಿಡಬೇಕು ಎಂದು ಕಡ್ಡಾಯ ಮಾಡಿದ್ದು ನಾನು. ವಿಪಕ್ಷಗಳು ಬರೀ ಮೊಸಳೆ ಕಣ್ಣೀರು ಹರಿಸುತ್ತಿವೆ” ಎಂದು ಹೇಳಿದರು.

“1949ರ ನವೆಂಬರ್ 25 ರಂದು ಸಂವಿಧಾನ ಸಭೆಯಲ್ಲಿ ಮಾಡಿದ ಭಾಷಣದಲ್ಲಿ, ‘ಜನವರಿ 26-1950ಕ್ಕೆ ಸಂವಿಧಾನ ಜಾರಿಗೆ ಬರುತ್ತಿದೆ. ನಾವೆಲ್ಲರೂ ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ’ ಎಂದು ಚರಿತ್ರಾರ್ಹವಾದ ಭಾಷಣದಲ್ಲಿ ಹೇಳಿದ್ದರು. ನಾವು ಪ್ರಜಾಪ್ರಭುತ್ವ ಒಪ್ಪಿಕೊಂಡಿದ್ದೇವೆ. ಇಲ್ಲಿ ಇನ್ನೂ ಆರ್ಥಿಕವಾಗಿ, ಸಾಮಾಜಿಕವಾಗಿ ಅಸಮಾನತೆ ಉಳಿದುಕೊಂಡಿರುವುದರಿಂದ ಅದನ್ನು ನಿವಾರಣೆ ಮಾಡದಿದ್ದರೆ ಜನರೇ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆಂಬ ಎಚ್ಚರಿಕೆ ಕೊಟ್ಟಿದ್ದರು” ಎಂದು ಹೇಳಿದರು.

“ಇಡೀ ದೇಶದಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆ ತಂದವರು ನಾವು. ಪರಿಶಿಷ್ಠ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ ಈ ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ? ಇಡೀ ದೇಶದಲ್ಲಿ ನಾವು ಮಾತ್ರ ಇಂಥಾ ಪರಿಣಾಮಕಾರಿ ಕಾಯ್ದೆಯನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳಿಗಾಗಿ ಜಾರಿ ಮಾಡಿದ್ದೇವೆ.

ಗುತ್ತಿಗೆಯಲ್ಲೂ ಎಸ್.ಸಿ / ಎಸ್.ಟಿ ಸಮುದಾಯಗಳಿಗೆ ಮೀಸಲಾತಿ ಜಾರಿ ಮಾಡಿರುವುದು ನಾವು ಮಾತ್ರ. ಇಂಥದ್ದನ್ನು ಬಿಜೆಪಿಯವರು ಇದುವರೆಗೂ ಏಕೆ ಜಾರಿ ಮಾಡಿಲ್ಲ?” ಎಂದು ಪ್ರಶ್ನಿಸಿದರು.

“ಎಸ್.ಸಿ / ಎಸ್.ಟಿ ಉದ್ದಿಮೆಗಳಿಗೆ / ಉದ್ಯಮಗಳಿಗೆ ವಿಶೇಷ ಸಾಲದ ಸವಲತ್ತು , KIADB ಭೂಮಿ ವಿಚಾರದಲ್ಲಿ ಈ ಸಮುದಾಯಗಳಿಗೆ ಅನುಕೂಲ ಮಾಡಿ ಕಾನೂನು ತಂದವರು ನಾವು. ನಾವು ಎಸ್.ಸಿ / ಎಸ್.ಟಿ ಸಮುದಾಯದವರ ವಿರೋಧಿಯಾಗಿದ್ದರೆ ಇಷ್ಟೆಲ್ಲವನ್ನೂ ಜಾರಿ ಮಾಡುತ್ತಿದ್ದೆವಾ?

ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ಧರು. ವಿಪಕ್ಷಗಳಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ” ಎಂದು ಕಿಡಿಕಾರಿದರು.

ದೇಶ

Leaders View

ಡಿ.ಸಿ.ಪ್ರಕಾಶ್

ನವದೆಹಲಿ: “ಬಿಜೆಪಿಯ ಹಿಂದೂಗಳು ಹಿಂಸಾತ್ಮಕರು; ನಿಜವಾದ ಹಿಂದೂಗಳಲ್ಲ” ಎಂದು ಹೇಳಿದ ರಾಹುಲ್‌ ಗಾಂಧಿಗೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಸಂಸದರು ವಿರೋಧ ವ್ಯಕ್ತಪಡಿಸಿದರು. ರಾಹುಲ್ ಕ್ಷಮೆಯಾಚಿಸುವಂತೆ ಒತ್ತಾಯಿಸುತ್ತಿದ್ದಂತೆ ಲೋಕಸಭೆಯಲ್ಲಿ ಕೋಲಾಹಲ ಉಂಟಾಯಿತು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶಿವ, ಯೇಸು ಮತ್ತು ಗುರುನಾನಕ್ ಮುಂತಾದವರ ಭಾವಚಿತ್ರಗಳನ್ನು ತೋರಿಸಿ ಮಾತನಾಡಿದರು. ಸದನದ ನಿಯಮಗಳ ಪ್ರಕಾರ ಯಾವುದೇ ಧಾರ್ಮಿಕ ದೇವರ ಚಿತ್ರಗಳನ್ನು ತೋರಿಸಬಾರದು ಎಂದು ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿದರು.

ಮುಂದುವರಿದು ಮಾತನಾಡಿದ ರಾಹುಲ್ ಗಾಂಧಿ, “ಪ್ರಧಾನಿ ಮೋದಿ ಅವರು ಶಿವನೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ. ನಾವೆಲ್ಲರೂ ಹುಟ್ಟುತ್ತೇವೆ ಮತ್ತು ಸಾಯುತ್ತೇವೆ. ಆದರೆ ಪ್ರಧಾನಿ ಮೋದಿ ಜೈವಿಕವಾಗಿ ಹುಟ್ಟಿದವರಲ್ಲ. ಪ್ರಧಾನಿ ಮೋದಿ ಇಡೀ ಹಿಂದೂ ಧರ್ಮದ ಪ್ರತಿನಿಧಿಯಲ್ಲ. ಒಂದು ನಿರ್ದಿಷ್ಟ ಧರ್ಮ ಮಾತ್ರವಲ್ಲ, ನಮ್ಮಲ್ಲಿರುವ ಎಲ್ಲಾ ಧರ್ಮಗಳು ಧೈರ್ಯ ಮತ್ತು ಅಹಿಂಸೆಯ ಬಗ್ಗೆ ಮಾತನಾಡುತ್ತವೆ.

ಬಿಜೆಪಿಯ ಹಿಂದೂಗಳು ಹಿಂಸಾತ್ಮಕರು; ನಿಜವಾದ ಹಿಂದೂಗಳಲ್ಲ. ಹಿಂದೂ ಧರ್ಮವು ಭಯ, ದ್ವೇಷ ಮತ್ತು ಸುಳ್ಳಿನ ಧರ್ಮವಲ್ಲ. ಬಿಜೆಪಿಯವರು ದಿನದ 24 ಗಂಟೆಯೂ ಹಿಂಸಾಚಾರ ಮತ್ತು ದ್ವೇಷದ ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದೂ ಧರ್ಮವು ಅಹಿಂಸೆಯನ್ನು ಕಲಿಸುತ್ತದೆ; ದ್ವೇಷವನಲ್ಲ” ಎಂದು ಮಾತನಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ, “ರಾಹುಲ್ ಭಾಷಣ ಎಲ್ಲಾ ಹಿಂದೂಗಳ ಮೇಲಿನ ದಾಳಿಯಾಗಿದೆ. ರಾಹುಲ್ ಹಿಂದೂಗಳನ್ನು ಹಿಂಸಾತ್ಮಕ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ” ಎಂದು ಖಂಡಿಸಿದರು. ಲೋಕಸಭೆಯಲ್ಲಿ ಮಾತನಾಡುವಾಗ ಪ್ರಧಾನಿ ಮೋದಿಯವರು ಅಡ್ಡಿಪಡಿಸಿ ಮಾತನಾಡಿದ್ದು ಇದೇ ಮೊದಲು ಎಂಬುದು ಗಮಾರ್ಹ.

ಪ್ರಧಾನಿಯ ನಂತರ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ದೇಶದ ಕೋಟ್ಯಾಂತರ ಜನರು ತಮ್ಮನ್ನು ತಾವು ಹಿಂದೂ ಎಂದು ಹೆಮ್ಮೆಯಿಂದ ಕರೆದುಕೊಳ್ಳುತ್ತಾರೆ. ರಾಹುಲ್ ಅವರ ಭಾಷಣಕ್ಕೆ ಈ ಸದನದಲ್ಲಿ ಮಾತ್ರವಲ್ಲ ಇಡೀ ರಾಷ್ಟ್ರದ ಕ್ಷಮೆಯಾಚಿಸಬೇಕು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇಡೀ ದೇಶವನ್ನೇ ಬಂಧಿಸಿದವರು ಸುರಕ್ಷತೆಯ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ.

ಕಾಂಗ್ರೆಸ್ ಆಳ್ವಿಕೆಯಲ್ಲಿ ದೆಹಲಿಯಲ್ಲಿ ಸಾವಿರಾರು ಸಿಖ್ಖರನ್ನು ಕಗ್ಗೊಲೆ ಮಾಡಲಾಯಿತು. ಸದನವನ್ನು ಈ ರೀತಿ ನಡೆಸುವಂತಿಲ್ಲ, ರಾಹುಲ್‌ಗೆ ನಿಯಮ ಗೊತ್ತಿಲ್ಲದಿದ್ದರೆ ನಿಯಮದ ಬಗ್ಗೆ ಪಾಠ ಹೇಳಿ. ಭಾವಚಿತ್ರ ತೋರಿಸಬೇಡಿ ಎಂದು ಹೇಳಿದರೂ ಮತ್ತೆ ಮತ್ತೆ ಈ ರೀತಿ ಮಾಡುವುದನ್ನು ಒಪ್ಪುವುದಿಲ್ಲ” ಎಂದರು.

ಆಡಳಿತ ಪಕ್ಷದ ಸಂಸದರು ಭಾರತೀಯ ಸಂವಿಧಾನದವನ್ನು ಎತ್ತಿಹಿಡಿದು ರಾಹುಲ್ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದರು. ಆ ಸಮಯದಲ್ಲಿ ಶಿವನ ಚಿತ್ರವನ್ನು ಮತ್ತೊಮ್ಮೆ ತೋರಿಸಿದ ರಾಹುಲ್, ಅಯೋಧ್ಯೆ ವ್ಯಾಪ್ತಿಯ ಕ್ಷೇತ್ರವನ್ನು ಗೆದ್ದ ಸಮಾಜವಾದಿ ಪಕ್ಷದ ಸಂಸದರನ್ನು ಅಭಿನಂದಿಸಿ, “ರಾಮನ ಜನ್ಮಭೂಮಿಯಾದ ಅಯೋಧ್ಯೆಯಲ್ಲೇ ಬಿಜೆಪಿಗೆ ತಕ್ಕ ಪಾಠ ಕಲಿಸಲಾಗಿದೆ” ಎಂದರು.

ಫೈಜಾಬಾದ್ (ಅಯೋಧ್ಯೆ) ಸಮಾಜವಾದಿ ಸಂಸದ ಅವಧೇಶ್ ಪ್ರಸಾದ್

ರಾಹುಲ್ ಭಾಷಣದ ವೇಳೆ ಮಧ್ಯಂತರದಲ್ಲಿ ಮೈಕ್ ಸ್ವಿಚ್ ಆಫ್ ಆಗುತ್ತಿದ್ದಂತೆ, “ಮೈಕ್ ನಿಯಂತ್ರಣ ಯಾರ ಬಳಿ ಇದೆ? ಅಯೋಧ್ಯೆ ಹೆಸರು ಹೇಳಿದ ತಕ್ಷಣ ನನ್ನ ಮೈಕ್ ಸ್ವಿಚ್ ಆಫ್ ಮಾಡಲಾಗುತ್ತದೆ” ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಭಾಧ್ಯಕ್ಷರು, “ನೀವು ಮಾತನಾಡಲು ಎದ್ದು ನಿಂತಾಗ ನಿಮ್ಮ ಮೈಕ್ ಎಂದಿಗೂ ಆಫ್ ಆಗುವುದಿಲ್ಲ. ಹಳೆಯ ಸಂಸತ್ತಿನಲ್ಲೂ ಸರೀ, ಹೊಸ ಸಂಸತ್ತಿನಲ್ಲೂ ಸರೀ ಇದೇ ಪದ್ಧತಿಯನ್ನು ಮುಂದುವರಿಸಿಕೊಂಡು ಬಂದಿರುತ್ತೇವೆ” ಎಂದರು.

ಮುಂದುವರಿದು ಮಾತನಾಡಿದ ರಾಹುಲ್ ಗಾಂಧಿ, “ಅಯೋಧ್ಯೆ ಕ್ಷೇತ್ರದಿಂದ ಸ್ಪರ್ಧಿಸಲು ಮೋದಿ ಎರಡು ಬಾರಿ ಪ್ರಯತ್ನಿಸಿದ್ದರು. ಆದರೆ, ‘ಅಯೋಧ್ಯೆಯಲ್ಲಿ ಸ್ಪರ್ಧಿಸಬೇಡಿ, ಜನ ಸೋಲಿಸುತ್ತಾರೆ’ ಎಂದು ವಿಶ್ಲೇಷಕರು ಎಚ್ಚರಿಸಿದರು. ಪ್ರಧಾನಿ ಮೋದಿ ಅವರು ಬಿಜೆಪಿ ಸಂಸದರನ್ನು ಹೆದರಿಸುವ ರೀತಿಯಲ್ಲಿ ಇದ್ದಾರೆ.

ರಾಮಮಂದಿರ ಉದ್ಘಾಟನೆಯಾದಾಗ ಅಂಬಾನಿ ಮತ್ತು ಅದಾನಿ ಮಾತ್ರ ಅಲ್ಲಿದ್ದರು; ಸಣ್ಣ ವ್ಯಾಪಾರಿಗಳನ್ನು ಬೀದಿಗೆ ಎಸೆದರು. ಅಯೋಧ್ಯೆ ಜನರ ಭೂಮಿಯನ್ನು ಕಸಿದುಕೊಂಡರು; ಮನೆಗಳನ್ನು ಕೆಡವಲಾಯಿತು. ದೇವಸ್ಥಾನದ ಉದ್ಘಾಟನಾ ಸಮಾರಂಭಕ್ಕೆ ಸ್ಥಳೀಯರು ಯಾರುಕೂಡ ಬಂದಿರಲಿಲ್ಲ. ಹಾಗಾಗಿಯೇ ಅಯೋಧ್ಯೆಯ ಜನತೆ ಬಿಜೆಪಿಗೆ ಉತ್ತಮ ತೀರ್ಪು ನೀಡಿದ್ದಾರೆ” ಎಂದರು.

ಆಗ ಮತ್ತೊಮ್ಮೆ ಎದ್ದು ನಿಂತ ಪ್ರಧಾನಿ ಮೋದಿ, “ಸಂವಿಧಾನ ಏನು ಹೇಳುತ್ತದೋ ಅದನ್ನು ಪಾಲಿಸುತ್ತೇನೆ” ಎಂದರು. “ವಿರೋಧ ಪಕ್ಷದ ನಾಯಕನನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬುದನ್ನು ಪ್ರಜಾಪ್ರಭುತ್ವ ಮತ್ತು ಸಂವಿಧಾನ ನನಗೆ ಕಲಿಸಿದೆ. ರಾಹುಲ್‌ಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಕಲಿಸಬೇಕು” ಎಂದರು.

ಮತ್ತೇ ಎದ್ದು ನಿಂತು ಮಾತನಾಡಿದ ರಾಹುಲ್ ಗಾಂಧಿ, “ನೀಟ್ ಪರೀಕ್ಷೆ ಶ್ರೀಮಂತರ ಆಯ್ಕೆಯಾಗಿದೆ. ನೀಟ್ ಪರೀಕ್ಷೆಯ ಮೂಲಕ ವೈದ್ಯಕೀಯ ಶಿಕ್ಷಣ ವ್ಯಾಪಾರವಾಗಿದೆ. ನೀವು ಎಲ್ಲಾ ವೃತ್ತಿಪರ ಪರೀಕ್ಷೆಗಳನ್ನು ವಾಣಿಜ್ಯ ಮಾದರಿ ಪರೀಕ್ಷೆಗಳನ್ನಾಗಿ ಮಾಡಿದ್ದೀರಿ.

7 ವರ್ಷಗಳಲ್ಲಿ 70 ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಕಾಂಗ್ರೆಸ್‌ಗೆ ನಿಮ್ಮನ್ನು ಕಂಡು ಹೆದರಿಕೆಯಿಲ್ಲ. ಆದರೆ ನೀವು ಕಾಂಗ್ರೆಸ್‌ಗೆ ಹೆದರುತ್ತಿದ್ದೀರಿ. ನೀಟ್‌ ಪರೀಕ್ಷೆಯಲ್ಲಿ ಒಬ್ಬರು ‘ಟಾಪರ್’ ಆಗಬಹುದು. ಆದರೆ, ಅವರಲ್ಲಿ ಹಣವಿಲ್ಲದಿದ್ದರೆ ವೈದ್ಯಕೀಯ ಶಿಕ್ಷಣ ಓದಲು ಸಾಧ್ಯವಿಲ್ಲ.

ಇದನ್ನು ಶ್ರೀಮಂತ ಮಕ್ಕಳಿಗಾಗಿ ತರಲಾಗಿದೆ. ಈ ಪರೀಕ್ಷೆಯ ಮೂಲಕ ನೀವು ಸಾವಿರಾರು ಕೋಟಿ ಗಳಿಸಿದ್ದೀರಿ. ನೀಟ್ ಪರೀಕ್ಷೆಯ ಬಗ್ಗೆ ರಾಷ್ಟ್ರಪತಿಗಳ ಭಾಷಣದಲ್ಲಿ ಒಂದೇ ಒಂದು ಮಾತು ಇರಲಿಲ್ಲ. ನೀಟ್ ಬಗ್ಗೆ ಒಂದು ದಿನದ ಚರ್ಚೆ ನಡೆಯಬೇಕು.

ನೀಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಇಡೀ ವರ್ಷ ತಯಾರಿ ನಡೆಸುತ್ತಾರೆ. ವಿದ್ಯಾರ್ಥಿಗಳಿಗೆ, ಕುಟುಂಬಗಳು ಆರ್ಥಿಕವಾಗಿ ಮತ್ತು ಭಾವನಾತ್ಮಕವಾಗಿ ಅಗತ್ಯ ಬೆಂಬಲವನ್ನು ನೀಡುತ್ತವೆ. ಆದರೆ ಇಂದು ನೀಟ್ ಪರೀಕ್ಷೆಯನ್ನೇ ನಂಬದ ವಾತಾವರಣ ನಿರ್ಮಾಣವಾಗಿದೆ.

ಈ ಪರೀಕ್ಷೆಯನ್ನು ಶ್ರೀಮಂತ ವಿದ್ಯಾರ್ಥಿಗಳಿಗಾಗಿಯೇ ಸಿದ್ಧಪಡಿಸಲಾಗಿದೆ. ನಾನು ವಿರೋಧ ಪಕ್ಷದ ನಾಯಕನಾದ ನಂತರ ನನಗೆ ಹಿಂದೆಂದೂ ಅನಿಸದ ಸಂಗತಿಯೊಂದು ಅರಿವಾಯಿತು. ಕಾಂಗ್ರೆಸ್ ಪಕ್ಷವನ್ನು ಮಾತ್ರವಲ್ಲ, ನಾನು ಇಲ್ಲಿರುವ ಪ್ರತಿ ವಿರೋಧ ಪಕ್ಷಗಳನ್ನೂ ಪ್ರತಿನಿಧಿಸುತ್ತೇನೆ. ಪ್ರತಿಪಕ್ಷಗಳ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯವನ್ನು ನಿಯೋಜಿಸಿದಾಗಲೂ ಅವರನ್ನು ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ.

ನೀವು ಸಭಾಧ್ಯಕ್ಷರ ಆಸನದಲ್ಲಿ ಕುಳಿತಾಗ ಪ್ರಧಾನಿ ಮತ್ತು ನಾನು ಕೈಕುಲುಕಿದೆವು. ನಾನು ಕೈಕುಲುಕಿದಾಗ ನೀವು ಗಂಭೀರವಾಗಿ ಕುಳಿತು ಕೈಕುಲುಕಿದ್ದೀರಿ, ಆದರೆ ಪ್ರಧಾನಿ ಕೈಕುಲುಕಿದಾಗ ನೀವು ನಮಸ್ಕರಿಸಿ ಕೈಕುಲುಕ್ಕುತ್ತೀರಿ. ಸಭಾಧ್ಯಕ್ಷರು ಯಾರಿಗೂ ತಲೆಬಾಗಬಾರದು. ಈ ಸದನದಲ್ಲಿ ಸ್ಪೀಕರ್‌ಗಿಂತ ದೊಡ್ಡವರು ಯಾರೂ ಇಲ್ಲ” ಎಂದು ಮಾತನಾಡಿದರು.

ದೇಶ

ನವದೆಹಲಿ: ಸಂವಿಧಾನದ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

25 ಜೂನ್ 1975 ರಂದು ಭಾರತದಲ್ಲಿ ಮೊದಲ ಬಾರಿಗೆ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಈ ಕುರಿತು ಪ್ರಧಾನಿ ಮೋದಿ ಅವರು ತಮ್ಮ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, “ಇಂದು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಎಲ್ಲರನ್ನೂ ಗೌರವಿಸುವ ದಿನವಾಗಿದೆ. ಕಾಂಗ್ರೆಸ್ ಸರ್ಕಾರ ಹೇರಿದ ತುರ್ತು ಪರಿಸ್ಥಿತಿಯು ಅವರು ಭಾರತದ ಸಂವಿಧಾನವನ್ನು ಹೇಗೆ ಸಂಪೂರ್ಣವಾಗಿ ಬುಡಮೇಲು ಮಾಡಿದರು ಎಂಬುದನ್ನು ನೆನಪಿಸುತ್ತದೆ.

ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ಗೆ ನಮ್ಮ ಸಂವಿಧಾನದ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕು ಇಲ್ಲ. ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಿದವರು ಮತ್ತು ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದವರು ಇವರು. ತುರ್ತು ಪರಿಸ್ಥಿತಿ ಹೇರಲು ಕಾರಣವಾದ ಭಾವನೆ ಅವರ ಪಕ್ಷದ ಸದಸ್ಯರಲ್ಲಿ ಜೀವಂತವಾಗಿದೆ.

ಅಧಿಕಾರ ಉಳಿಸಿಕೊಳ್ಳಲು ಅಂದಿನ ಕಾಂಗ್ರೆಸ್ ಸರಕಾರ ಪ್ರಜಾಪ್ರಭುತ್ವದ ತತ್ವವನ್ನು ಕಡೆಗಣಿಸಿತು. ಕಾಂಗ್ರೆಸ್ ಪಕ್ಷಕ್ಕೆ ಮಣಿಯದವರನ್ನು ಹಿಂಸಿಸಲಾಯಿತು. ದುರ್ಬಲ ವರ್ಗಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕವಾಗಿ ಪ್ರತಿಗಾಮಿ ನೀತಿಗಳನ್ನು ಅನಾವರಣಗೊಳಿಸಲಾಯಿತು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೇಶ

“ನನ್ನಂತಹ ಬಡ ಮತ್ತು ಹಿಂದುಳಿದ ಕುಟುಂಬದಲ್ಲಿ ಹುಟ್ಟಿದ ವ್ಯಕ್ತಿ ಈ ದೇಶಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುವುದಾದರೇ ಅದಕ್ಕೆ ಈ ಸಂವಿಧಾನವೇ ಕಾರಣ” – ನರೇಂದ್ರ ಮೋದಿ

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಚುನಾವಣೆಯಲ್ಲಿ 292 ಸ್ಥಾನಗಳನ್ನು ಗೆದ್ದು ಅಧಿಕಾರವನ್ನು ಉಳಿಸಿಕೊಂಡಿದೆ. ತರುವಾಯ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ನಾಯಕರಾಗಿ ಪುನರಾಯ್ಕೆಯಾದ ಮೋದಿ, ತಮ್ಮನ್ನು ಬೆಂಬಲಿಸುವ ಸಂಸದರ ಪಟ್ಟಿಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚಿಸುವ ಹಕ್ಕನ್ನು ಪಡೆದರು. ಅದರಂತೆ ಜೂನ್ 9 ರಂದು ಸಂಜೆ 6 ಗಂಟೆಗೆ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ.

ಏತನ್ಮಧ್ಯೆ, ಹೊಸ ಸಂಸತ್ತಿನಲ್ಲಿ ಎನ್‌ಡಿಎ ಮೈತ್ರಿಕೂಟದ ಸಂಸದರು ಮತ್ತು ಪಕ್ಷದ ನಾಯಕರು ಭಾಗವಹಿಸಿದ ಸಭೆ ನಡೆಯಿತು. ಇದರಲ್ಲಿ ಭಾಗವಹಿಸಿದ ಮೋದಿ, ತಲೆಯ ಮೇಲೆ ಭಾರತೀಯ ಸಂವಿಧಾನದ ಪುಸ್ತಕವನ್ನು ಮುಟ್ಟಿ ನಮನ ಸಲ್ಲಿಸಿದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು.

ಈ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ಸಾಮಾಜಿಕ ಮಾಧ್ಯಮ ಪುಟದಲ್ಲಿ ಸಂವಿಧಾನ ಪುಸ್ತಕಕ್ಕೆ ನಮಸ್ಕರಿಸುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿ, “ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿದ ಉದಾತ್ತ ಮೌಲ್ಯಗಳನ್ನು ಎತ್ತಿಹಿಡಿಯಲು ನನ್ನ ಜೀವನದ ಪ್ರತಿ ಕ್ಷಣವನ್ನೂ ಮೀಸಲಿಡಲಾಗಿದೆ.

ನನ್ನಂತಹ ಬಡ ಮತ್ತು ಹಿಂದುಳಿದ ಕುಟುಂಬದಲ್ಲಿ ಹುಟ್ಟಿದ ವ್ಯಕ್ತಿ ಈ ದೇಶಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುವುದಾದರೇ ಅದಕ್ಕೆ ಈ ಸಂವಿಧಾನವೇ ಕಾರಣ. ಇದು ದೇಶದ ಕೋಟ್ಯಾಂತರ ಜನರಿಗೆ ಆತ್ಮವಿಶ್ವಾಸ, ಶಕ್ತಿ ಮತ್ತು ಘನತೆಯನ್ನು ನೀಡುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ರಾಜಕೀಯ

7 ಹಂತದ ಲೋಕಸಭೆ ಚುನಾವಣೆಯ ಮೊದಲ ಎರಡು ಹಂತಗಳು ಮುಗಿದಿವೆ. ಮೂರನೇ ಹಂತದ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಸಂಸತ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು.

ಆಗ ಮಾತನಾಡಿದ ರಾಹುಲ್ ಗಾಂಧಿ, “ಮೀಸಲಾತಿಯನ್ನು ತೆಗೆದುಹಾಕಲು ಮತ್ತು ಸಂವಿಧಾನವನ್ನು ಬದಲಾಯಿಸಲು ಬಯಸುತ್ತಿರುವ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಯಸುತ್ತಿದೆ. ಆದರೆ ಅವರಿಗೆ 150 ಸೀಟುಗಳೂ ಸಿಗುವುದಿಲ್ಲ.

ಇಂಡಿಯಾ ಮೈತ್ರಿಕೂಟ ಸರ್ಕಾರದ ನಂತರ ನಾವು ಮೀಸಲಾತಿಯನ್ನು ರಕ್ಷಿಸುವುದಲ್ಲದೆ ಜನರಿಗೆ ಅಗತ್ಯ ಮೀಸಲಾತಿಯನ್ನು ನೀಡುತ್ತೇವೆ. ಸಂವಿಧಾನ, ಜನರ ಹಕ್ಕು, ಮೀಸಲಾತಿ ಇತ್ಯಾದಿಗಳನ್ನು ಉಳಿಸಲು ಈ ಚುನಾವಣೆಯಲ್ಲಿ ಹೋರಾಟ ನಡೆಸುತ್ತಿದ್ದೇವೆ.

ಆದಿವಾಸಿಗಳು, ದಲಿತರು ಮತ್ತು ಹಿಂದುಳಿದವರಂತಹ ದೇಶದ ಜನರಿಗೆ ಏನೆಲ್ಲಾ ಹಕ್ಕುಗಳು ಸಿಕ್ಕಿವೆಯೋ ಅದು ಸಂವಿಧಾನದ ಮೂಲಕ ಮಾತ್ರ. ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ಪ್ರಧಾನಿ ಮೋದಿ ವಿಫಲರಾಗಿದ್ದಾರೆ. ಇದರಿಂದ ದೇಶದಲ್ಲಿ ನಿರುದ್ಯೋಗ ಪ್ರಮಾಣ 45 ವರ್ಷಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದೆ” ಎಂದರು.

ರಾಜ್ಯ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಕಲಬುರಗಿ ಕೋಟನೂರ್ ಪ್ರದೇಶದಲ್ಲಿ ಅವಮಾನ ಮಾಡಿದ ಕೃತ್ಯ ಖಂಡನಾರ್ಹ. ಅವಮಾನಿಸಿ ಪಟಾಕಿ ಸಿಡಿಸಿ ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕದ ಅಧ್ಯಕ್ಷರಾದ ಅಡ್ವಕೇಟ್ ತಾಹೇರ್ ಹುಸೇನ್ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಸಂವಿಧಾನಕ್ಕೆ ಅಪಚಾರಗೈದಂತೆ. ಇತ್ತೀಚೆಗೆ ಇಂತಹಾ ಕಿಡಿಗೇಡಿ ಕೃತ್ಯಗಳು ವ್ಯಾಪಕವಾಗುತ್ತಿದೆ. ಆಡಳಿತದ ಬಗ್ಗೆ ಮತ್ತೆ ಕಾನೂನಿನ ಬಗ್ಗೆ ಭಯವಿಲ್ಲದಿರುವುದೇ ಇಂತಹ ದುಷ್ಕೃತ್ಯ ಮರುಕಳಿಸಲು ಕಾರಣವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಮುಂದುವರಿಯಬೇಕು.

ದಲಿತರ ಪರ ಹಕ್ಕುಗಳಿಗಾಗಿ ಹೋರಾಡಿ, ದೇಶಕ್ಕೆ ಸಂವಿಧಾನವನ್ನು ರಚಿಸಿದ ಓರ್ವ ಮಹಾನ್ ವ್ಯಕ್ತಿಯನ್ನು ಅವಮಾನಿಸಿ ಅದೇನು ಸಾಧಿಸಿತ್ತಾರೆ?  ಜನರ ಭಾವನೆ ಕೆರಳಿಸಿ ಸಮಾಜದ ಶಾಂತಿ, ನೆಮ್ಮದಿ ಕೆಡಿಸುವುದೇ ಇಂತಹವರ ಗುರಿಯಾಗಿದೆ. ಅಪರಾಧಿಗಳನ್ನು ಬಂಧಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಲು ಸರಕಾರ ಹಿಂಜರಿಯಬಾರದು.

ಇಂತಹ ಸಮಾಜಘಾತುಕ ಶಕ್ತಿಗಳನ್ನು ಕೂಡಲೇ ಜಿಲ್ಲೆಯಿಂದ ಗಡಿಪಾರು ಮಾಡಬೇಕಾಗಿದೆ. ಇಂತಹ ಕುಕೃತ್ಯಗಳು ಕಡಿಮೆಯಾಗಳು ಸರ್ಕಾರ ಎಲ್ಲಾ ಆಯಮಗಳಲ್ಲೂ ಚಿಂತಿಸಬೇಕು ಎಂದು ತಾಹೇರ್ ಹುಸೇನ್ ಆಗ್ರಹಿಸಿದ್ದಾರೆ.

ಸಂಪಾದಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕೆಂಬುದು ಮೂಲಭೂತವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ; ಮತ್ತು ಇದು ಸಂವಿಧಾನದಲ್ಲಿ ಒದಗಿಸಲಾದ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯವನ್ನು ಹಾಳುಮಾಡುವ ಕ್ರಮವಾಗಿದೆ.

ಸಂವಿಧಾನ ಏನು ಹೇಳುತ್ತದೆ?
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆಸುವುದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕ್ರಮವಾಗಿ ಸಂಸತ್ತು/ವಿಧಾನಸಭೆಗೆ ಉತ್ತರದಾಯಿಗಳಾಗಿರಬೇಕು ಎಂಬ ಸಾಂವಿಧಾನಿಕ ನಿಬಂಧನೆಯನ್ನು ಉಲ್ಲಂಘಿಸುತ್ತದೆ. ಸಂವಿಧಾನದ 75(3)ನೇ ವಿಧಿಯು ಸಂಸತ್ತಿಗೆ/ಶಾಸಕಾಂಗಕ್ಕೆ ಉತ್ತರಿಸಲು ಮಂತ್ರಿಗಳು ಸಾಮೂಹಿಕವಾಗಿ ಜವಾಬ್ದಾರರಾಗಿರುತ್ತಾರೆ ಎಂದು ಹೇಳುತ್ತದೆ. ಅದೇ ರೀತಿ 164(1)ನೇ ವಿಧಿಯು ರಾಜ್ಯಗಳಲ್ಲಿ ಆಡಳಿತ ನಡೆಸುವ ಮಂತ್ರಿಗಳು ರಾಜ್ಯ ಶಾಸಕಾಂಗಗಳಿಗೆ ಉತ್ತರಿಸಲು ಸಾಮೂಹಿಕವಾಗಿ ಜವಾಬ್ದಾರರಾಗಿರುತ್ತಾರೆ.

ಸಂವಿಧಾನದ ಪ್ರಕಾರ, ಸಂಸತ್ತು/ವಿಧಾನಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಿ ಅಂಗೀಕಾರವಾದರೆ ಮತ್ತು ಸಂಸತ್ತು/ವಿಧಾನಸಭೆಯಲ್ಲಿ ವಿಶ್ವಾಸ ಕಳೆದುಕೊಂಡರೆ ಅಥವಾ ಹಣಕಾಸು ಮಸೂದೆ ಸೋತರೆ ಸರ್ಕಾರವು ರಾಜೀನಾಮೆ ನೀಡಲು ಬದ್ಧವಾಗಿರುತ್ತದೆ. ಬದಲಿ ಸರ್ಕಾರ ರಚಿಸಲು ಸಾಧ್ಯವಾಗದಿದ್ದರೆ ಲೋಕಸಭೆ/ವಿಧಾನಸಭೆ ವಿಸರ್ಜಿಸಿ ಉಪಚುನಾವಣೆ ನಡೆಸಬೇಕು.

ಅಧಿಕಾರಾವಧಿಯನ್ನು ವಿಸ್ತರಿಸುವುದು ಕಾನೂನು ಬಾಹಿರ:
ಲೋಕಸಭೆ ಅಥವಾ ರಾಜ್ಯ ವಿಧಾನಸಭೆಗಳಿಗೆ ಯಾವುದೇ ನಿಗದಿತ ಅಧಿಕಾರಾವಧಿ ಇರುವುದಿಲ್ಲ. ಸಂವಿಧಾನದ 83(2) ಮತ್ತು 172(1) ಲೋಕಸಭೆ ಅಥವಾ ರಾಜ್ಯ ವಿಧಾನಸಭೆಗಳ ಅಧಿಕಾರಾವಧಿಯು ಯಾವ ಕಾರಣಕ್ಕಾದರೂ ಅವುಗಳನ್ನು ಮೊದಲೇ ವಿಸರ್ಜಿಸದಿದ್ದರೆ ಐದು ವರ್ಷ ಆಗಲಿದೆ ಎಂದು ತಿಳಿಸಲಾಗಿದೆ.

ಲೋಕಸಭೆ ಅಥವಾ ರಾಜ್ಯ ವಿಧಾನಸಭೆಗಳ ಅಧಿಕಾರಾವಧಿಯನ್ನು ವಿಸ್ತರಿಸುವ ಯಾವುದೇ ಪ್ರಯತ್ನವು ಸಂವಿಧಾನ ವಿರೋಧಿ ಮಾತ್ರವಲ್ಲದೆ ಪ್ರಜಾಪ್ರಭುತ್ವ ವಿರೋಧಿಯೂ ಆಗಿದೆ. ಜನಪ್ರತಿನಿಧಿಗಳ ಮೂಲಕ ಜನರ ಹಿತ ಸದಾ ಮೇಲುಗೈ ಸಾಧಿಸಬೇಕು.

ರಾಷ್ಟ್ರಪತಿ ಆಳ್ವಿಕೆಗೆ ಪ್ರಯತ್ನ:
ಏಕಕಾಲಕ್ಕೆ ಚುನಾವಣೆ ನಡೆಸುವ ಉದ್ದೇಶದಿಂದ ಸಂವಿಧಾನಕ್ಕೆ ತಿದ್ದುಪಡಿ ತರಲು ವಿವಿಧ ಸಲಹೆಗಳನ್ನು ಮುಂದಿಡಲಾಗಿದೆ. ಈ ನಿಟ್ಟಿನಲ್ಲಿ ನೀತಿ ಆಯೋಗವು, ಲೋಕಸಭೆಯ ವಿಸರ್ಜನೆ ಅನಿವಾರ್ಯವಾದರೆ, ಉಳಿದ ಲೋಕಸಭೆಯು ಕಡಿಮೆ ಅವಧಿಯನ್ನು ಹೊಂದಿದ್ದರೆ, ಆ ಅವಧಿಗೆ ದೇಶದಾದ್ಯಂತ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೆ ತರಲು ಸೂಕ್ತವಾದ ಒಂದು ಷರತ್ತನ್ನು ರಚಿಸಬಹುದು ಎಂದು ಸಲಹೆ ನೀಡಿದೆ. ಅಂದರೆ ಮುಂದಿನ ಚುನಾವಣೆ ನಡೆದು ಹೊಸ ಸರ್ಕಾರ ರಚನೆಯಾಗುವವರೆಗೆ ಅವರೇ ನೇಮಿಸುವ ಸಚಿವ ಸಂಪುಟವೇ ದೇಶದ ಆಡಳಿತ ನಡೆಸಬೇಕು ಎಂಬ ಪ್ರಸ್ತಾಪವು ರಾಷ್ಟ್ರಪತಿಯನ್ನು ಆಡಳಿತಗಾರನನ್ನಾಗಿ ಮಾಡುತ್ತದೆ. ಇದು ಹಿತ್ತಲಿನ ಮೂಲಕ ರಾಷ್ಟ್ರಪತಿ ಆಳ್ವಿಕೆಯನ್ನು ತರುವ ಕ್ರಮವಾಗಿದೆ.

ವಿಧಾನಸಭಾ ಸದಸ್ಯರನ್ನು ಆಯ್ಕೆ ಮಾಡುವ ಹಕ್ಕಿನ ಮೇಲೆ ದಾಳಿ:
ವಿಧಾನಸಭೆ ವಿಸರ್ಜನೆಯ ಸಮಯದಲ್ಲಿ, ಉಳಿದ ಅವಧಿಯು ದೀರ್ಘವಾಗಿದ್ದರೆ, ಹೊಸದಾಗಿ ಚುನಾವಣೆಗಳನ್ನು ನಡೆಸಬೇಕು ಮತ್ತು ಅವು ಉಳಿದ ಅವಧಿಗೆ ಮಾತ್ರ ಇರುತ್ತವೆ. ಅಂದರೆ, ಎರಡು ವರ್ಷಗಳ ಅಧಿಕಾರಾವಧಿಯ ನಂತರ ವಿಸರ್ಜಿಸಲ್ಪಟ್ಟರೆ, ಮುಂದಿನ ಚುನಾವಣೆಯು ಮೂರು ವರ್ಷಗಳ ಅವಧಿಗೆ ಮಾತ್ರ ಮಾನ್ಯವಾಗಿರುತ್ತದೆ.

ಈ ಕಾರಣಕ್ಕಾಗಿಯೇ ಏಕಕಾಲಕ್ಕೆ ಚುನಾವಣೆ ನಡೆಸಬೇಕು ಎಂದು ಸಮರ್ಥಿಸಿಕೊಳ್ಳಲಾಗುತ್ತಿದೆ. ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಯತ್ನವು ಪ್ರಜಾಪ್ರಭುತ್ವದ ಮೇಲೆ ನಡೆಸುವ ದಾಳಿಯಾಗಿದೆ. 2015ರ ಸಂಸದೀಯ ಸ್ಥಾಯಿ ಸಮಿತಿಯ 79ನೇ ವರದಿ ಮತ್ತು ಹಣಕಾಸು ಆಯೋಗ ಜಾರಿಗೊಳಿಸಿರುವ ಪ್ರಸ್ತಾವನೆಯಲ್ಲಿ, ‘ಕೆಲವು ಶಾಸಕಾಂಗಗಳ ಅಧಿಕಾರಾವಧಿಯನ್ನು ವಿಸ್ತರಿಸುವುದು,ಅಥವಾ ಕೆಲವು ಶಾಸಕಾಂಗಗಳ ಅಧಿಕಾರಾವಧಿಯನ್ನು ಕಡಿತಗೊಳಿಸುವುದು’ ಎಂದು ಸೂಚಿಸಿದೆ. ಈ ರೀತಿ ಶಾಸಕಾಂಗದ ಅಧಿಕಾರಾವಧಿಯನ್ನು ವಿಸ್ತರಿಸುವುದು ಅಥವಾ ಮೊಟಕುಗೊಳಿಸುವುದು ರಾಜ್ಯಗಳ ಹಕ್ಕುಗಳ ಮೇಲಿನ ದಾಳಿಯಾಗಿದೆ. ಇದು ರಾಜ್ಯದ ಜನರು ತಮ್ಮ ಶಾಸಕರನ್ನು ಆಯ್ಕೆ ಮಾಡುವ ಹಕ್ಕಿನ ಮೇಲಿನ ದಾಳಿಯಾಗಿದೆ.

ರಾಜ್ಯ ಶಾಸಕಾಂಗಗಳಿಗೆ ಸಂಬಂಧಿಸಿದಂತೆ ಮತ್ತೊಂದು ಸಲಹೆಯನ್ನೂ ಮುಂದಿಡಲಾಗಿದೆ. ‘ರಾಜ್ಯ ವಿಧಾನಸಭೆಯು ಅದರ ಅವಧಿಯ ಅಂತ್ಯದ ಮೊದಲೇ ವಿಸರ್ಜಿಸಲ್ಪಟ್ಟರೆ, ರಾಜ್ಯದ ರಾಜ್ಯಪಾಲರು ಅದರ ಉಳಿದ ಅವಧಿಗೆ ರಾಜ್ಯವನ್ನು ಆಳುವುದು’ ಎಂದು ಹೇಳಿದೆ. ಇದರರ್ಥ ಕೇಂದ್ರ ಸರ್ಕಾರದ ಆಡಳಿತವನ್ನು ರಾಜ್ಯಗಳ ಮೇಲೆ ನೇರವಾಗಿ ತರುವುದನ್ನು ಬಿಟ್ಟರೆ ಬೇರೇನೂ ಅಲ್ಲ!

ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಸ್ತಾಪಗಳು:
ಸಂಸತ್ತು/ಶಾಸಕಾಂಗಗಳ ಜವಾಬ್ದಾರಿಯನ್ನು ನಿರಾಕರಿಸುವ ಮತ್ತು ಆಡಳಿತಗಾರರ ಅಧಿಕಾರಾವಧಿಯನ್ನು ವಿಸ್ತರಿಸುವ ಅಸಂಖ್ಯಾತ ಪ್ರಸ್ತಾಪಗಳನ್ನು ಮುಂದಿಡಲಾಗಿದೆ. ಭಾರತದ ಕಾನೂನು ಆಯೋಗದ ಕರಡು, ವರ್ಕಿಂಗ್ ಪೇಪರ್ ಸೇರಿದಂತೆ ಸದನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಯಾದಾಗ ಸದನಕ್ಕೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ನಿರ್ಣಯವನ್ನು ಲಗತ್ತಿಸಬೇಕು ಎಂದು ಪ್ರಸ್ತಾಪಿಸಲಾಗಿದೆ. ಇದರರ್ಥ ಹೊಸ ಸರ್ಕಾರವನ್ನು ಆಯ್ಕೆ ಮಾಡುವ ಷರತ್ತಿನೊಂದಿಗೆ ಸದಸ್ಯರು ಹಾಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬಹುದು ಎಂಬುದಾಗಿದೆ. ಚುನಾಯಿತ ಶಾಸಕರು ಮತ್ತು ಲೋಕಸಭೆಯ ಸದಸ್ಯರು ಯಾವುದೇ ಸರ್ಕಾರಕ್ಕೆ ಮತ ಚಲಾಯಿಸುವ ಹಕ್ಕನ್ನು ಮೊಟಕುಗೊಳಿಸಲಾಗದು. ಅಥವಾ ಸದನದಲ್ಲಿ ನಿಶ್ಚಿತ ಬಹುಮತ ಹೊಂದಿರುವ ಆಡಳಿತ ಪಕ್ಷವು ಸದನವನ್ನು ವಿಸರ್ಜಿಸುವ ಮತ್ತು ಅವಧಿಪೂರ್ವ ಚುನಾವಣೆಗೆ ಶಿಫಾರಸು ಮಾಡುವ ಹಕ್ಕನ್ನು ಮೊಟಕುಗೊಳಿಸಲಾಗದು ಎಂದಿದೆ.

ರಾಜ್ಯ ಸರ್ಕಾರಗಳ ವಿಸರ್ಜನೆಯೇ ಸಮಸ್ಯೆ:
ಲೋಕಸಭೆ ಚುನಾವಣೆಯೊಂದಿಗೆ ರಾಜ್ಯ ವಿಧಾನಸಭೆಗಳಿಗೂ ಚುನಾವಣೆ ನಡೆಸುವ ಎಲ್ಲಾ ಪ್ರಸ್ತಾಪಗಳು ಒಕ್ಕೂಟ ತತ್ವ ಮತ್ತು ರಾಜ್ಯಗಳ ಹಕ್ಕುಗಳನ್ನು ಗೌರವಿಸದ ಪ್ರವೃತ್ತಿಯನ್ನು ಸಹ ತೋರಿಸುತ್ತದೆ. ಮೊದಲನೆಯದಾಗಿ, ಕೇಂದ್ರ ಸರ್ಕಾರವು ಸಂವಿಧಾನದ 356ನೇ ವಿಧಿಯನ್ನು ನಿರಂಕುಶವಾಗಿ ದುರುಪಯೋಗಪಡಿಸಿಕೊಂಡಿದ್ದು, ಜನರಿಂದ ಆಯ್ಕೆಯಾದ ಹಲವಾರು ರಾಜ್ಯ ಸರ್ಕಾರಗಳನ್ನು ವಿಸರ್ಜಿಸಿದ ಪರಿಣಾಮ ಲೋಕಸಭೆ ಮತ್ತು ಹಲವಾರು ರಾಜ್ಯಗಳ ವಿಧಾನಸಭೆಗಳಿಗೆ ಒಂದೇ ಸಮಯದಲ್ಲಿ ಚುನಾವಣೆಗಳನ್ನು ನಡೆಸುವುದು ಅಸಾಧ್ಯವಾಯಿತು.

1959ರಲ್ಲಿ ಕೇರಳದಲ್ಲಿ ಕಮ್ಯುನಿಸ್ಟ್ ಸರ್ಕಾರದ ವಿಸರ್ಜನೆಯೊಂದಿಗೆ ಈ ಪ್ರಕ್ರಿಯೆ ಪ್ರಾರಂಭವಾಯಿತು. ಏಕಕಾಲಕ್ಕೆ ಚುನಾವಣೆ ನಡೆಸುವ ಹೆಸರಿನಲ್ಲಿ ಮುಂದಿಡುವ ಎಲ್ಲ ಪ್ರಸ್ತಾಪಗಳು ರಾಜ್ಯಪಾಲರ ಒಳಗೊಳ್ಳುವಿಕೆ ಮತ್ತು ಆ ಮೂಲಕ ಕೇಂದ್ರ ಸರ್ಕಾರದ ಹಸ್ತಕ್ಷೇಪವನ್ನು ಹೆಚ್ಚಿಸುತ್ತವೆ.

ಭಾರತವು ಅಸಂಖ್ಯಾತ ವೈವಿಧ್ಯತೆಯನ್ನು ಹೊಂದಿರುವ ವಿಶಾಲ ದೇಶವಾಗಿದೆ. ಆದ್ದರಿಂದ ಸಂಯುಕ್ತ ವ್ಯವಸ್ಥೆ (ಫೆಡರಲಿಸಂ) ಆಧಾರಿತ ರಾಜಕೀಯ ಪ್ರಜಾಪ್ರಭುತ್ವ ವ್ಯವಸ್ಥೆ ಮಾತ್ರ ಇಲ್ಲಿ ಉಳಿಯಲು ಸಾಧ್ಯ. ರಾಜ್ಯಗಳಿಗೆ ವಿವಿಧ ಹಂತಗಳಲ್ಲಿ ಚುನಾವಣೆಗಳು ನಡೆಸುವುದು ಒಕ್ಕೂಟ ವ್ಯವಸ್ಥೆಯಲ್ಲಿ ಒಂದು ವೈಶಿಷ್ಟ್ಯವಾಗಿದೆ. ಆದ್ದರಿಂದ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಯಾವುದೇ ಕೃತಕ ಪ್ರಯತ್ನವನ್ನು ಸಂಪೂರ್ಣವಾಗಿ ವಿರೋಧಿಸಲಾಗುವುದು. ಏಕಕಾಲದಲ್ಲಿ ಚುನಾವಣೆ ನಡೆಸುವುದು ಸಂವಿಧಾನದ ಆಧಾರದ ಮೇಲೆ ಪ್ರಸ್ತುತವಾಗಿರುವ ಸಂಸದೀಯ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ.

ದೇಶ ರಾಜಕೀಯ

ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿರುವ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಕಾನೂನಿನ ಸೆಕ್ಷನ್ ಯಾವುದು? ಅದನ್ನು ಹೇಗೆ ರದ್ದುಗೊಳಿಸಲಾಯಿತು ಎಂಬ ಡಿಟೇಲ್ಸ್ ಇಲ್ಲಿದೆ.

ಆರ್ಟಿಕಲ್ 370ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಲಾಗಿತ್ತು. ಆದರೆ, 2019ರಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆ ಸೆಕ್ಷನ್ ಅನ್ನು ಹಿಂತೆಗೆದುಕೊಂಡಿತು. ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವುದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಗಳ ಕುರಿತು ನ್ಯಾಯಾಲಯವು ಡಿಸೆಂಬರ್ 11 ರಂದು (ಸೋಮವಾರ) ತೀರ್ಪು ನೀಡಲಿದೆ.

ನ್ಯಾಯಾಲಯವು ಈ ವರ್ಷದ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಅರ್ಜಿದಾರರು ಮತ್ತು ಸರ್ಕಾರದ ವಿಚಾರಣೆಯನ್ನು ಆಲಿಸಿತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ 5 ನ್ಯಾಯಾಧೀಶರ ಸಂವಿಧಾನ ಪೀಠ ಈ ತೀರ್ಪು ನೀಡಲಿದೆ. ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಈ ಪೀಠದ ಇತರ ನ್ಯಾಯಾಧೀಶರು.

ಆರ್ಟಿಕಲ್ 370 ರದ್ದತಿ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಏಕೆ ಮೊಕದ್ದಮೆ ಹೂಡಲಾಯಿತು?
ಆಗಸ್ಟ್ 5, 2019 ರಂದು ಕೇಂದ್ರ ಸರ್ಕಾರವು ಭಾರತದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲು ನಿರ್ಧರಿಸಿತು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಸಂವಿಧಾನದ ಸುಗ್ರೀವಾಜ್ಞೆ 272 ಅನ್ನು ಹೊರಡಿಸಿದರು. ಇದು 367ನೇ ವಿಧಿಗೆ ಕೆಲವು ಬದಲಾವಣೆಗಳನ್ನು ಮಾಡಿತು; ಇದು 370ನೇ ವಿಧಿಯನ್ನು ಹೇಗೆ ಓದುತ್ತದೆ ಎಂಬುದರ ಮೇಲೆ ಪರಿಣಾಮ ಬೀರುತ್ತದೆ. ಇದು ಸ್ವತಃ 370ನೇ ವಿಧಿಗೆ ತಿದ್ದುಪಡಿಗಳನ್ನು ಮಾಡಲು ಅವಕಾಶ ಮಾಡಿಕೊಡುತ್ತದೆ.

ಕೆಲವೇ ಗಂಟೆಗಳಲ್ಲಿ, ಕಾನೂನಿನ ಈ ಕಾಯಿದೆಯ ಸೆಕ್ಷನ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಬೇಕೆಂದು ರಾಜ್ಯಸಭೆಯು ಶಿಫಾರಸು ಮಾಡಿತು. ಮರುದಿನ, ರಾಷ್ಟ್ರಪತಿಗಳು ಈ ಶಿಫಾರಸನ್ನು ಔಪಚಾರಿಕಗೊಳಿಸಲು ಸಂವಿಧಾನದ ಆದೇಶ 273 ಅನ್ನು ಹೊರಡಿಸಿದರು. ಇದು 370ನೇ ವಿಧಿಯ ರದ್ದತಿಯನ್ನು ದೃಢಪಡಿಸಿತು. ಆಗಸ್ಟ್ 9 ರಂದು ಸಂಸತ್ತು ಜಮ್ಮು ಮತ್ತು ಕಾಶ್ಮೀರ ಪುನರ್ನಿರ್ಮಾಣ ಕಾಯ್ದೆಯನ್ನು ಅಂಗೀಕರಿಸಿತು. ಇದು ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.

ವಿಚಾರಣೆಯ ಸಮಯದಲ್ಲಿ, 1957ರಲ್ಲಿ ಜಮ್ಮು ಮತ್ತು ಕಾಶ್ಮೀರ ಸಂವಿಧಾನ ಸಭೆಯ ಅವಧಿ ಮುಗಿದ ನಂತರ, ಸಂವಿಧಾನದಲ್ಲಿ ತಾತ್ಕಾಲಿಕವಾಗಿ ಉಲ್ಲೇಖಿಸಲಾದ 370ನೇ ವಿಧಿ ಹೇಗೆ ಶಾಶ್ವತವಾಯಿತು ಎಂದು ಸುಪ್ರೀಂ ಕೋರ್ಟ್ ಕೇಳಿತು. ಕೆಲವು ಅರ್ಜಿದಾರರು ಜಮ್ಮು ಮತ್ತು ಕಾಶ್ಮೀರ ಸಂವಿಧಾನ ಸಭೆಯ ಅವಧಿಯು 1957 ರಲ್ಲಿ ಕೊನೆಗೊಂಡಿದ್ದರಿಂದ, ಅದು ಹಿಂದಿನ ರಾಜ್ಯದ ಸಂವಿಧಾನವನ್ನು ರೂಪಿಸಿದ ನಂತರ, ಈ ವಿಧಿಯನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ವಾದಿಸಿದರು.

ಅಂತಹ ಕ್ರಮವನ್ನು ತೆಗೆದುಕೊಳ್ಳುವ ಮೊದಲು ಅದರ ಒಪ್ಪಿಗೆ ಅಗತ್ಯವಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನ ಸಭೆಯ ಅನುಪಸ್ಥಿತಿಯಲ್ಲಿ, 370ನೇ ವಿಧಿಯನ್ನು ರದ್ದುಗೊಳಿಸಲು ಯಾರು ಶಿಫಾರಸು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಕೇಳಿತು. ಈ ವಿಧಿಯನ್ನು ರದ್ದುಪಡಿಸುವಲ್ಲಿ ಯಾವುದೇ “ಸಾಂವಿಧಾನಿಕ ವಂಚನೆ” ಇಲ್ಲ ಎಂದು ಕೇಂದ್ರವು ವಾದಿಸಿತು.

ಸೆಕ್ಷನ್ 370 ಎಂದರೇನು?
ಸಂವಿಧಾನದ 370ನೇ ವಿಧಿಯು ಭಾರತದ ಒಕ್ಕೂಟದೊಳಗೆ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದೆ. ಸಾಂವಿಧಾನಿಕ ಕಾನೂನು ತಜ್ಞ ಮತ್ತು ಹೈದರಾಬಾದ್‌ನ NALSAR ಕಾನೂನು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಫೈಸನ್ ಮುಸ್ತಫಾ ಅವರು, “ಅಕ್ಟೋಬರ್ 17, 1949 ರಂದು ಸಂವಿಧಾನಕ್ಕೆ ಸೇರಿಸಲಾಯಿತು, ಆರ್ಟಿಕಲ್ 370 ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತದ ಸಂವಿಧಾನದಿಂದ ವಿನಾಯಿತಿ ನೀಡುತ್ತದೆ (ಆರ್ಟಿಕಲ್ 1 ಮತ್ತು ಆರ್ಟಿಕಲ್ 370 ಹೊರತುಪಡಿಸಿ) ಮತ್ತು ರಾಜ್ಯವು ತನ್ನದೇ ಆದ ಸಂವಿಧಾನವನ್ನು ರೂಪಿಸಲು ಅನುಮತಿಸುತ್ತದೆ.

ಇದು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಸಂಬಂಧಿಸಿದಂತೆ ಸಂಸತ್ತಿನ ಶಾಸಕಾಂಗ ಅಧಿಕಾರಗಳನ್ನು ನಿರ್ಬಂಧಿಸುತ್ತದೆ. ಇನ್‌ಸ್ಟ್ರುಮೆಂಟ್ ಆಫ್ ಆಕ್ಸೆಸ್ (IoA) ನಲ್ಲಿ ಒಳಗೊಂಡಿರುವ ವಿಷಯಗಳಿಗೆ ಕೇಂದ್ರ ಕಾಯಿದೆಯನ್ನು ವಿಸ್ತರಿಸಲು ರಾಜ್ಯ ಸರ್ಕಾರದೊಂದಿಗೆ ಕೇವಲ “ಸಮಾಲೋಚನೆ” ಮಾತ್ರ ಅಗತ್ಯವಿದೆ. ಆದರೆ ಅದನ್ನು ಇತರ ವಿಷಯಗಳಿಗೆ ವಿಸ್ತರಿಸಲು ರಾಜ್ಯ ಸರ್ಕಾರದ “ಸಹಕಾರ” ಅತ್ಯಗತ್ಯವಿದೆ. 1947ರ ಭಾರತೀಯ ಸ್ವಾತಂತ್ರ್ಯ ಕಾಯಿದೆಯು ಬ್ರಿಟಿಷ್ ಭಾರತವನ್ನು ಭಾರತ ಮತ್ತು ಪಾಕಿಸ್ತಾನ ಎಂದು ವಿಭಜಿಸಿದಾಗ IoA ಜಾರಿಗೆ ಬಂದಿತು.

1947ರಲ್ಲಿ ಉಪಖಂಡದಲ್ಲಿ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ಅಂತ್ಯದ ನಂತರ, ಸ್ವತಂತ್ರ ಪ್ರಾಂತ್ಯಗಳನ್ನು ಭಾರತದ ಒಕ್ಕೂಟದ ಅಡಿಯಲ್ಲಿ ತರುವ ಪ್ರಯತ್ನಗಳನ್ನು ಅದು ಅನುಸರಿಸಿತು. ಕೆಲವು ಇತರ ರಾಜ್ಯಗಳು (ಮಿಜೋರಾಂ, ನಾಗಾಲ್ಯಾಂಡ್, ಮಹಾರಾಷ್ಟ್ರ, ಗುಜರಾತ್ ಇತ್ಯಾದಿ) ಸಹ 371A ನಿಂದ 371I ಅನ್ನು ಹೊಂದಿವೆ. 371ನೇ ವಿಧಿಯ ಅಡಿಯಲ್ಲಿ ವಿಶೇಷ ಸ್ಥಾನಮಾನವನ್ನು ಅನುಭವಿಸುತ್ತಿದೆ. 1948ರಲ್ಲಿ ಜಮ್ಮು ಮತ್ತು ಕಾಶ್ಮೀರ ಕುರಿತು ಭಾರತ ಸರ್ಕಾರದ ಶ್ವೇತಪತ್ರದಲ್ಲಿ ಹೇಳಿರುವಂತೆ ಭಾರತದ ಸೇರ್ಪಡೆಯನ್ನು ಸಂಪೂರ್ಣವಾಗಿ ತಾತ್ಕಾಲಿಕವೆಂದು ಪರಿಗಣಿಸುತ್ತದೆ ಎಂದು ತಿಳಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

370ನೇ ವಿಧಿಯನ್ನು ಏಕೆ ರದ್ದುಗೊಳಿಸಲಾಯಿತು?
370ನೇ ವಿಧಿ ರದ್ದತಿ ಹಲವು ವರ್ಷಗಳಿಂದ ಬಿಜೆಪಿ ಪ್ರಣಾಳಿಕೆಯಲ್ಲಿದೆ. ಇದು ಬಿಜೆಪಿಯ ಮಾತೃ ಘಟಕ ಆರ್‌ಎಸ್‌ಎಸ್‌ನ ಮೂಲ ಉದ್ದೇಶಗಳಲ್ಲಿ ಒಂದಾಗಿದೆ.

1953 ರಲ್ಲಿಯೇ ಜನಸಂಘದ ನಾಯಕ ಬಲರಾಜ್ ಮಧೋಕ್ ಅವರಿಂದ ಸ್ಥಾಪಿಸಲ್ಪಟ್ಟ ಜಮ್ಮು ಮತ್ತು ಕಾಶ್ಮೀರ ಪ್ರಜಾ ಪರಿಷತ್, “ಸಂಪೂರ್ಣ ಏಕೀಕರಣ” ಕ್ಕಾಗಿ ಚಳುವಳಿಯನ್ನು ಪ್ರಾರಂಭಿಸಿತು. ಭಾರತೀಯ ಜನಸಂಘದ (ನಂತರ ಬಿಜೆಪಿ) ಸಂಸ್ಥಾಪಕ ನಾಯಕ ಶ್ಯಾಮ ಪ್ರಸಾದ್ ಮುಖರ್ಜಿ, “ಏಕ್ ದೇಶ್ ಮೇ ದೋ ವಿಧಾನ್, ದೋ ಪ್ರಧಾನ್, ದೋ ನಿಶಾನ್, ನಹೀ ಚಲೇಗಾ, ನಹೀ ಚಲೇಗಾ (ಒಂದು ದೇಶದಲ್ಲಿ ಎರಡು ಸಂವಿಧಾನಗಳು, ಎರಡು ಪ್ರಧಾನ ಮಂತ್ರಿಗಳು ಮತ್ತು ಎರಡು ಧ್ವಜಗಳು ಇರಲು ಸಾಧ್ಯವಿಲ್ಲ) ಎಂದು ಆಕ್ರೋಶ ವ್ಯಕ್ತಪಡಿಸಿದರು.

2019ರಲ್ಲಿ ಸಂಸತ್ತಿನಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ ಅವರು “370ನೇ ವಿಧಿ ರಾಷ್ಟ್ರದ ಏಕತೆಗೆ ಹಾನಿಕಾರಕ” ಎಂದು ಹೇಳಿದರು. “370ನೇ ವಿಧಿ ಕಾಶ್ಮೀರಿ ಸಂಸ್ಕೃತಿಯನ್ನು ದೇಶದ ಭೌಗೋಳಿಕ ಮೂಲೆಗೆ ಸೀಮಿತಗೊಳಿಸಿದೆ ಮತ್ತು ಇದನ್ನು ತೆಗೆದುಹಾಕಿದರೆ ರಾಜ್ಯದ ಸಂಸ್ಕೃತಿ ದೇಶದ ಇತರ ಭಾಗಗಳಿಗೆ ಹರಡುತ್ತದೆ” ಎಂದು ಅವರು ಹೇಳಿದರು.

ಕಾಶ್ಮೀರದ ಕಾರಣವನ್ನು ಕೈಗೆತ್ತಿಕೊಳ್ಳುವ ನೆಹರೂ ಅವರ ನಿರ್ಧಾರವನ್ನೂ ಶಾ ಟೀಕಿಸಿದರು. ಅದರ ಬಗ್ಗೆ ಪಾಕಿಸ್ತಾನವೂ ವಿಶ್ವಸಂಸ್ಥೆಗೆ ಹಕ್ಕು ಮಂಡಿಸಿತು. ನೆಹರೂ ಏಕೆ ಹಾಗೆ ಮಾಡಿದರು ಎಂಬುದರ ಕುರಿತು ಇಲ್ಲಿ ಇನ್ನಷ್ಟು ಓದಬೇಕಾಗಿದೆ. ಗೃಹ ಸಚಿವರು ಇತ್ತೀಚೆಗೆ ಸಂಸತ್ತಿನಲ್ಲಿ 370ನೇ ವಿಧಿಯು ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದ ಮತ್ತು ಭಯೋತ್ಪಾದನೆಯ “ಮೂಲ ಕಾರಣ” ಎಂದು ಹೇಳಿದರು. ನೆಹರೂ ಅವರ “ತಪ್ಪುಗಳಿಂದ” ಈ ಪ್ರದೇಶವು ಹಾನಿಗೊಳಗಾಗಿದೆ ಎಂದು ಅವರು ಹೇಳಿದರು.

Source: indianexpress.com

ರಾಜಕೀಯ

ಚೆನ್ನೈ: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಎಸ್.ಸಿ.ಮೀಸಲಾತಿಯನ್ನು ಮುಂದುವರಿಸಲು ಕೇಂದ್ರ ಸರ್ಕಾರ ಕಾನೂನಿನಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಇಂದು ವಿಧಾನಸಭೆಯಲ್ಲಿ ಸರ್ಕಾರದ ಪ್ರತ್ಯೇಕ ನಿರ್ಣಯವನ್ನು ಮಂಡಿಸಲಿದ್ದಾರೆ.

ಭಾರತದ ಸಂವಿಧಾನದಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳಿಗೆ ಒದಗಿಸಲಾದ ಶಾಸನಬದ್ಧ ರಕ್ಷಣೆ, ಹಕ್ಕುಗಳು ಮತ್ತು ಮೀಸಲಾತಿ ಸೇರಿದಂತೆ ಸವಲತ್ತುಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೂ ವಿಸ್ತರಿಸಿ, ಅವರು ಎಲ್ಲಾ ರೀತಿಯಲ್ಲೂ ಸಾಮಾಜಿಕ ನ್ಯಾಯದ ಪ್ರಯೋಜನಗಳನ್ನು ಪಡೆಯಲು ಸಂವಿಧಾನದಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಇಂದು ವಿಧಾನಸಭೆಯಲ್ಲಿ ಸರ್ಕಾರದ ಪ್ರತ್ಯೇಕ ನಿರ್ಣಯವನ್ನು ಮಂಡಿಸಲಿದ್ದಾರೆ.