ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸಂಸದರು Archives » Dynamic Leader
October 17, 2024
Home Posts tagged ಸಂಸದರು
ದೇಶ

ನವದೆಹಲಿ: ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿದೆ. ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಬಗ್ಗೆ ವಿಚಾರಣಾ ನ್ಯಾಯಾಲಯಗಳಿಗೆ ಏಕರೂಪದ ಮಾರ್ಗಸೂಚಿಗಳನ್ನು ರೂಪಿಸುವುದು ಕಷ್ಟಕರವಾಗಿರುವುದರಿಂದ ಈ ವಿಚಾರವನ್ನು ನಾವು ಉಚ್ಚ ನ್ಯಾಯಾಲಯಗಳಿಗೆ ಬಿಡುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಂಸದರು ಮತ್ತು ಶಾಸಕರನ್ನು ಒಳಗೊಂಡ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಿ ತೀರ್ಪು ನೀಡಲು ಸ್ವಯಂ ಪ್ರೇರಣೆಯಿಂದ ಪ್ರಕರಣಗಳನ್ನು ದಾಖಲಿಸಲು ಹೈಕೋರ್ಟ್‌ಗಳನ್ನು ಸುಪ್ರೀಂ ಕೋರ್ಟ್ ಒತ್ತಾಯಿಸಿದೆ.

ಅಲ್ಲದೇ ಸಂಸದರು ಮತ್ತು ಶಾಸಕರ ವಿರುದ್ಧವಾಗಿ ತಡೆಯಾಜ್ಞೆ ನೀಡಿರುವ ಪ್ರಕರಣಗಳನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಿಚಾರಣೆಗೆ ಪಟ್ಟಿ ಮಾಡಬೇಕು ಮತ್ತು ವಿಶೇಷ ನ್ಯಾಯಾಲಯಗಳ ಮೂಲಸೌಕರ್ಯಗಳನ್ನು

ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಧೀಶರು ದೃಢೀಕರಿಸಬೇಕು ಹಾಗೂ ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳ ಸ್ಥಿತಿಗತಿ ತಿಳಿಯಲು ಹೈಕೋರ್ಟ್ ವೆಬ್ ಸೈಟ್ ನಲ್ಲಿ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಲಾಗಿದೆ.

ಪ್ರಸ್ತುತ ಕ್ರಿಮಿನಲ್ ಪ್ರಕರಣಗಳಲ್ಲಿ 2 ವರ್ಷ ಶಿಕ್ಷೆಯಾಗಿದ್ದರೆ  6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಲಾಗುತ್ತದೆ. ಅದನ್ನು ಆಯಸ್ಸು ಕಾಲದವರೆಗೂ ವಿಸ್ತರಿಸುವಂತೆ ಕೋರಿ ಮತ್ತು ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳ ವಿಚಾರಣೆಗೆ ಸಾಕಷ್ಟು ನ್ಯಾಯಾಲಯಗಳನ್ನು ಸ್ಥಾಪಿಸಲು ನಡೆಯುತ್ತಿರುವ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈ ಆದೇಶವನ್ನು ನೀಡಿದೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಮಧ್ಯಪ್ರದೇಶದಲ್ಲಿ ಸೋಲನ್ನು ತಪ್ಪಿಸಲು ಬಿಜೆಪಿಯಿಂದ ಕೇಂದ್ರ ಸಚಿವರಿಗೆ ಶಾಸಕ ಟಿಕೆಟ್ ನೀಡಲಾಗಿದೆ. ಮಧ್ಯಪ್ರದೇಶದಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 230 ಸ್ಥಳಗಳಲ್ಲಿ ಕಾಂಗ್ರೆಸ್ ಪಕ್ಷ 114 ಸ್ಥಾನಗಳನ್ನು ಗೆದ್ದುಕೊಂಡಿತು. ಆ ನಂತರ ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು.

ಆದರೆ ಕಳೆದ 2020ರಲ್ಲಿ 6 ಸಚಿವರು ಸೇರಿದಂತೆ 22 ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದರು. ಇದರಿಂದ ಕಾಂಗ್ರೆಸ್ ಸರ್ಕಾರ ಉರುಳಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿತು. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಲ್ಲಿ ಅಸಮಾಧಾನದ ಅಲೆ ಎದ್ದಿದೆ.

ಸದ್ಯದಲ್ಲೇ ಅಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಕಾಂಗ್ರೆಸ್ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಇತ್ತೀಚಿನ ಸಮೀಕ್ಷೆಗಳು ಬಹಿರಂಗಪಡಿಸಿವೆ. ಇದರಿಂದ ಬಿಜೆಪಿ ನಾಯಕತ್ವ ತೀವ್ರ ಆಘಾತಕ್ಕೊಳಗಾಗಿದೆ.

ಈ ಹಿನ್ನಲೆಯಲ್ಲಿ, ಮಧ್ಯಪ್ರದೇಶದಲ್ಲಿ ಸೋಲು ತಪ್ಪಿಸಲು ಬಿಜೆಪಿಯಿಂದ ಕೇಂದ್ರ ಸಚಿವರಿಗೆ ವಿಧಾನಸಭೆಗೆ ಟಿಕೆಟ್ ನೀಡಲಾಗಿದೆ. ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಫಗನ್ ಸಿಂಗ್ ಕುಲಸ್ತೆ ಸೇರಿದಂತೆ 7 ಸಂಸದರನ್ನು ಬಿಜೆಪಿ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.

ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸುವ ಮೂಲಕ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ಈಗಾಗಲೇ ಅಲ್ಲಿ ಬಿಜೆಪಿ ವರ್ಚಸ್ಸು ಕುಸಿದಿದ್ದು, ಜನರಿಗೆ ಒಂದಷ್ಟು ಪರಿಚಿತ ಮುಖಗಳನ್ನು ಬಳಸಿಕೊಂಡರೆ ಅಲ್ಲಿ ಆಗಿರುವ ಹಾನಿಯನ್ನು ಸ್ವಲ್ಪ ಕಡಿಮೆ ಮಾಡಬಹುದು ಎಂದು ಬಿಜೆಪಿ ಭಾವಿಸಿದೆ ಎನ್ನಲಾಗಿದೆ.