ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸನಾತನ ಧರ್ಮ ಸಂರಕ್ಷಣಾ ಮಂಡಳಿ Archives » Dynamic Leader
October 23, 2024
Home Posts tagged ಸನಾತನ ಧರ್ಮ ಸಂರಕ್ಷಣಾ ಮಂಡಳಿ
ರಾಜಕೀಯ ಸಿನಿಮಾ

ಡಿಯರ್ ಪವನ್ ಕಲ್ಯಾಣ್, ನಾನು ನಿಮ್ಮ ಪತ್ರಿಕಾಗೋಷ್ಠಿಯನ್ನು ನೋಡಿದೆ. ನಾನು ಹೇಳಿದ್ದನ್ನು ನೀವು ತಪ್ಪಾಗಿ ಅರ್ಥೈಸಿಕೋಂಡು ಮಾತನಾಡಿರುವುದು ಆಶ್ಚರ್ಯಕರವಾಗಿದೆ – ನಟ ಪ್ರಕಾಶ್ ರಾಜ್

ತಿರುಪತಿ ಲಡ್ಡು ವಿಚಾರದಲ್ಲಿ ‘ಸನಾತನ ಧರ್ಮ ಸಂರಕ್ಷಣಾ ಮಂಡಳಿ’ ಸ್ಥಾಪಿಸಬೇಕು ಎಂದು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿರುವುದಕ್ಕೆ ನಟ ಪ್ರಕಾಶ್ ರಾಜ್, “ನೀವು ಉಪಮುಖ್ಯಮಂತ್ರಿಯಾಗಿರುವ ರಾಜ್ಯದಲ್ಲೇ ಈ ಘಟನೆ ನಡೆದಿದೆ.

ದಯವಿಟ್ಟು ವಿಚಾರಿಸಿ, ತಪ್ಪಿತಸ್ಥರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಿ. ಈ ಸಮಸ್ಯೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಬೃಹದಾಕಾರವಾಗಿ ಬಿಂಬಿಸಿ ಏಕೆ ಭಯವನ್ನು ಹರಡುತ್ತಿದ್ದೀರಿ? ದೇಶವು ಈಗಾಗಲೇ ಸಾಕಷ್ಟು ಹಿಂಸಾತ್ಮಕ ಉದ್ವಿಗ್ನತೆಯನ್ನು ಹೊಂದಿದೆ. ಕೇಂದ್ರದಲ್ಲಿರುವ ನಿಮ್ಮ ಸ್ನೇಹಿತರಿಗೆ ಧನ್ಯವಾದಗಳು” ಎಂದು ಹೇಳಿದ್ದರು.

ಇದಕ್ಕಾಗಿ ನಟ ಪ್ರಕಾಶ್ ರಾಜ್ ಅವರನ್ನು ಪವನ್ ಕಲ್ಯಾಣ್ ತೀವ್ರವಾಗಿ ಟೀಕಿಸಿದ್ದರು. “ನಮ್ಮ ಭಾವನೆಗಳನ್ನು ಗೇಲಿ ಮಾಡಬೇಡಿ. ಈ ಘಟನೆ ನಿಮಗೆ ತಮಾಷೆಯಾಗಿ ಕಾಣಿಸಬಹುದು. ಆದರೆ ನಮಗೆ ಹಾಗಲ್ಲ. ಇದು ಆಳವಾದ ನೋವನ್ನು ಉಂಟುಮಾಡಿದೆ. ಸನಾತನ ಧರ್ಮದ ಬಗ್ಗೆ ಮಾತನಾಡುವ ಮುನ್ನ 100 ಬಾರಿ ಯೋಚಿಸಿ” ಎಂದು ಹೇಳಿದ್ದರು.

ಇದಕ್ಕೆ ತಮ್ಮ ‘ಎಕ್ಸ್’ ಪೇಜ್ ನಲ್ಲಿ ಪ್ರತಿಕ್ರಿಯೆ ನೀಡಿರುವ ನಟ ಪ್ರಕಾಶ್ ರಾಜ್, “ಡಿಯರ್ ಪವನ್ ಕಲ್ಯಾಣ್, ನಾನು ನಿಮ್ಮ ಪತ್ರಿಕಾಗೋಷ್ಠಿಯನ್ನು ನೋಡಿದೆ. ನಾನು ಹೇಳಿದ್ದನ್ನು ನೀವು ತಪ್ಪಾಗಿ ಅರ್ಥೈಸಿಕೋಂಡು ಮಾತನಾಡಿರುವುದು ಆಶ್ಚರ್ಯಕರವಾಗಿದೆ.

ವಿದೇಶದಲ್ಲಿ ಶೂಟಿಂಗ್ ನಲ್ಲಿ ಇದ್ದೇನೆ. ಅದನ್ನು ಮುಗಿಸಿಕೊಂಡು 30ನೇ ತಾರೀಖಿನ ನಂತರ ನಿಮ್ಮ ಪ್ರತಿಯೊಂದು ಪ್ರಶ್ನೆಗೂ ಉತ್ತರ ಕೊಡುತ್ತೇನೆ. ಅಷ್ಟರೊಳಗೆ ನನ್ನ ಹಳೆಯ ಪೋಸ್ಟ್‌ಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ ಎಂದು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.