ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸಮಾಜ ಸುಧಾರಣೆ Archives » Dynamic Leader
October 22, 2024
Home Posts tagged ಸಮಾಜ ಸುಧಾರಣೆ
ರಾಜಕೀಯ

ಪಾಲಕ್ಕಾಡ್: ಆರ್‌ಎಸ್‌ಎಸ್‌ನ 3 ದಿನಗಳ ಸಮಾವೇಶ ನಿನ್ನೆ ಕೇರಳದಲ್ಲಿ ಆರಂಭವಾಗಿದೆ. ಇದರಲ್ಲಿ ಸಮಾಜ ಸುಧಾರಣೆ, ಬಾಂಗ್ಲಾದೇಶ ಸಮಸ್ಯೆ ಕುರಿತು ಚರ್ಚಿಸಲು ಯೋಜಿಸಲಾಗಿದೆ.

ನಿನ್ನೆ ಕೇರಳದ ಪಾಲಕ್ಕಾಡ್ (Palakkad)ನಲ್ಲಿ ಆರ್‌ಎಸ್‌ಎಸ್‌ನ (RSS) ಅಖಿಲ ಭಾರತ ಸಮನ್ವಯ ಸಭೆ ಆರಂಭವಾಗಿದೆ. ರಾಷ್ಟ್ರೀಯ ಮಟ್ಟದ ವಾರ್ಷಿಕ ಸಭೆ ಕೇರಳದಲ್ಲಿ ನಡೆಯುತ್ತಿರುವುದು ಇದೇ ಮೊದಲು. 3 ದಿನಗಳ ಕಾಲ ನಡೆಯುವ ಈ ಸಭೆಯಲ್ಲಿ ಆರ್‌ಎಸ್‌ಎಸ್‌ನ ಸಹಬಾಗಿ ಸಂಘಟನೆಗಳಾದ 32 ಸಂಘ / ಸಂಸ್ಥೆಗಳ 320 ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಆರ್‌ಎಸ್‌ಎಸ್ ಅಧ್ಯಕ್ಷ ಮೋಹನ್ ಭಾಗವತ್ (Mohan Bhagwat) ಮತ್ತು 6 ಜಂಟಿ ಪ್ರಧಾನ ಕಾರ್ಯದರ್ಶಿಗಳೂ ಇದರಲ್ಲಿ ಭಾಗವಹಿಸುತ್ತಿದ್ದಾರೆ.

ಈ ಸಭೆಯ ಆರಂಭದಲ್ಲಿ ವಯನಾಡು ಭೂಕುಸಿತದ ವಿವರಗಳು ಮತ್ತು ಆರ್‌ಎಸ್‌ಎಸ್ ಸ್ವಯಂಸೇವಕರು ಮಾಡಿದ ಸಹಾಯದ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.

ಶತಮಾನೋತ್ಸವ (Centenary) ಆಚರಣೆ: ಆರ್‌ಎಸ್‌ಎಸ್ ಸಂಘಟನೆಯ ಶತಮಾನೋತ್ಸವ ಸಮಾರಂಭ ಮುಂದಿನ ವರ್ಷ ಸೆಪ್ಟೆಂಬರ್ ನಲ್ಲಿ ನಡೆಯಲಿದ್ದು, ಮುಂದಿನ ಒಂದು ವರ್ಷಕ್ಕೆ ಸಮಾಜ ಸುಧಾರಣೆ ಮತ್ತು ದೇಶ ನಿರ್ಮಾಣಕ್ಕೆ ಸಂಬಂಧಿಸಿದ 5 ಪ್ರಮುಖ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ.

ಶೇಖ್ ಹಸೀನಾ (Sheikh Hasina) ಅವರನ್ನು ಬಾಂಗ್ಲಾದೇಶದ ಪ್ರಧಾನಿ ಹುದ್ದೆಯಿಂದ ಹೊರಹಾಕಿದ ನಂತರ, ಆ ದೇಶದಲ್ಲಿ ವಾಸಿಸುತ್ತಿರುವ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಮೇಲಿನ ಹಲ್ಲೆ ಹಾಗೂ ಅಲ್ಲಿನ ದೇವಾಲಯಗಳ ಮೇಲಿನ ದಾಳಿ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ (BJP) 240 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಇದರಿಂದ ಸರಳ ಬಹುಮತ ಸಿಗಲಿಲ್ಲ. ಆದಾಗ್ಯೂ, ಸಮ್ಮಿಶ್ರ ಪಕ್ಷಗಳ ಬೆಂಬಲದೊಂದಿಗೆ ಸತತ 3ನೇ ಅವಧಿಗೆ ಸರ್ಕಾರ ರಚಿಸಿದೆ. ಕಳೆದ 2 ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿ ಕಡಿಮೆ ಸ್ಥಾನ ಗಳಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವಿನ ಸಂಘರ್ಷವೇ ಕಾರಣ ಎಂದೂ ಹೇಳಲಾಗುತ್ತಿದೆ. ಈ ಸನ್ನಿವೇಶದಲ್ಲಿ ಈ ಸಭೆ ನಡೆಯುತ್ತಿದೆ.