ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸ್ಮೋಕ್ ಬಾಂಬ್ Archives » Dynamic Leader
October 23, 2024
Home Posts tagged ಸ್ಮೋಕ್ ಬಾಂಬ್
ದೇಶ

ದೆಹಲಿ: ಕಳೆದ ವರ್ಷ ಡಿಸಂಬರ್ 13 ರಂದು ಸಂಸತ್ತಿನ ಲೋಕಸಭೆಯ ಸಭಾಂಗಣದಲ್ಲಿ ಇಬ್ಬರು ವ್ಯಕ್ತಿಗಳು ಇದ್ದಕ್ಕಿದ್ದಂತೆ ಸಂಸದರು ಕುಳಿತುಕೊಳ್ಳುವ ಸ್ಥಳಕ್ಕೆ ಜಿಗಿದು ಬಣ್ಣದ ಹೊಗೆ ಬಾಂಬ್ ಸಿಡಿಸಿದ್ದು ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು. ಇದರಿಂದಾಗಿ ಇಡೀ ಲೋಕಸಭೆಯ ಸಭಾಂಗಣ ಹೊಗೆ ವಲಯದಂತಿತ್ತು. ಆಗ ಸಂಸದರು ಲೋಕಸಭೆಯ ಭದ್ರತಾ ಸಿಬ್ಬಂದಿಯೊಂದಿಗೆ ಸೇರಿ ಅವರನ್ನು ಅಡ್ಡಗಟ್ಟಿ ಹಿಡಿದರು. ಇದೇ ವೇಳೆ ಮತ್ತಿಬ್ಬರು ಕೂಡ ಇದೇ ರೀತಿಯಲ್ಲಿ ಸಂಸತ್ ಆವರಣದ ಮೇಲೆ ದಾಳಿ ನಡೆಸಿದ್ದರು.

ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಸದರಿ ಪ್ರಕರಣದಲ್ಲಿ ಇನ್ನಿಬ್ಬರನ್ನೂ ಬಂಧಿಸಲಾಗಿತ್ತು. ದೆಹಲಿ ಪೊಲೀಸರು ಉಪಾ (ಯುಪಿಎ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಬಂಧಿತರೆಲ್ಲರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಅವರನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಹಾರ್ದಿಕ್ ಕೌರ್ ಮುಂದೆ ಇಂದು ಹಾಜರುಪಡಿಸಲಾಯಿತು. ಬಂಧಿತರಲ್ಲಿ ಐವರು (6ನೇ ಆರೋಪಿ ನೀಲಂ ಆಜಾದ್ ಹೊರತುಪಡಿಸಿ) ಮನೋರಂಜನ್, ಸಾಗರ್ ಶರ್ಮಾ, ಲಲಿತ್ ಝಾ, ಅಮೋಲ್ ಶಿಂಧೆ, ಮಹೇಶ್ ಕ್ವಾಟ್ ಮುಂತಾದವರು “ನಮ್ಮಿಂದ 70 ಖಾಲಿ ಪೇಪರ್‌ಗಳಿಗೆ ಬಲವಂತವಾಗಿ ಸಹಿ ಪಡೆಯಲಾಗಿದ್ದು, ವಿರೋಧ ಪಕ್ಷಗಳೊಂದಿಗೆ ಸಂಪರ್ಕವಿದೆ ಎಂದು ಒಪ್ಪಿಕೊಳ್ಳುವಂತೆ ಪೊಲೀಸರು ತಮಗೆ ಚಿತ್ರಹಿಂಸೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಪೊಲೀಸರು ಉತ್ತರ ನೀಡುವಂತೆ ಕೋರಿದ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿದ್ದಾರೆ.

ದೇಶ

“ಈ ನಾಚಿಕೆಗೇಡಿನ ಭದ್ರತಾ ಲೋಪಕ್ಕಾಗಿ ಉನ್ನತ ಅಧಿಕಾರಿಗಳನ್ನು ಶಿಕ್ಷಿಸದೆ, ಸಂಸದರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಸಿದು, ಆ ಮೂಲಕ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ”

“ಪ್ರಧಾನಿ ಮತ್ತು ಅವರ ಪಕ್ಷವು ದೇಶದಲ್ಲಿ ಏಕಪಕ್ಷೀಯ ಆಡಳಿತವನ್ನು ಸ್ಥಾಪಿಸಲು ಬಯಸುತ್ತಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ತಮ್ಮ ‘ಎಕ್ಸ್’ ಸೈಟ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಭದ್ರತೆ ಕೊರತೆ ಕುರಿತು ಗೃಹ ಸಚಿವರಿಂದ ವರದಿ ಕೇಳಿದ ಕಾರಣಕ್ಕಾಗಿ 141 ಸಂಸದರನ್ನು ಅಮಾನತು ಮಾಡಲಾಗಿದೆ. 6 ಅತಿಕ್ರಮಣ ಪ್ರವೇಶ ಮಾಡಿದವ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾಯ್ದೆ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅತಿಕ್ರಮಣ ಪ್ರವೇಶಕ್ಕೆ ಅನುಕೂಲ ಮಾಡಿಕೊಟ್ಟ ಬಿಜೆಪಿ ಸಂಸದರು ಮುಕ್ತರಾಗಿದ್ದಾರೆ. ಅವರನ್ನು ಇನ್ನೂ ವಿಚಾರಣೆ ಮಾಡಿಲ್ಲ.

ಇದು ಯಾವ ರೀತಿಯ ವಿಚಾರಣೆ? ಸಂಸತ್ತಿನ ಭದ್ರತೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಹಿರಿಯ ಅಧಿಕಾರಿಗಳು ಏಕೆ ಇದರ ಹೊಣೆಯನ್ನು ವಹಿಸಿಕೊಂಡಿಲ್ಲ? ನಿಸ್ಸಂಶಯವಾಗಿ ಅತಿಕ್ರಮಣಕಾರರು ತಿಂಗಳಿನಿಂದ ಈ ಯೋಜನೆ ರೂಪಿಸಿರುತ್ತಾರೆ. ಈ ಗುಪ್ತಚರ ವೈಫಲ್ಯಕ್ಕೆ ಯಾರು ಹೊಣೆ? ಸಂಸತ್ತಿನ ಬಹು-ಪದರದ ಭದ್ರತೆಯನ್ನು ಗಮನಿಸಿ, ಇಬ್ಬರು ಅತಿಕ್ರಮಣ ಪ್ರವೇಶ ಮಾಡಿದವರು ತಮ್ಮ ಶೂಗಳಲ್ಲಿ ಹಳದಿ ಅನಿಲ ಡಬ್ಬಿಗಳನ್ನು ಮರೆಮಾಡಿ ಕಟ್ಟಡದೊಳಗೆ ನುಸುಳಿ, ಭಾರತೀಯ ಪ್ರಜಾಪ್ರಭುತ್ವದ ತೊಟ್ಟಿಲನ್ನು ಹೇಗೆ ತಲುಪಿದರು?

ಪ್ರಧಾನಿ ಮತ್ತು ಅವರ ಪಕ್ಷವು ದೇಶದಲ್ಲಿ “ಏಕಪಕ್ಷೀಯ ಆಡಳಿತ” ಸ್ಥಾಪಿಸಲು ಬಯಸುತ್ತಿದ್ದಾರೆ. ಅವರು “ಏಕ್ ಅಕೇಲಾ” ಎಂದು ಹೇಳುತ್ತಾರೆ. ಇದು ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವುದಕ್ಕೆ ಸಮ. ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸುವ ಮೂಲಕ ಅವರು ನಿಖರವಾಗಿ ಇದನ್ನೇ ಮಾಡಿದ್ದಾರೆ. ಈ ನಾಚಿಕೆಗೇಡಿನ ಭದ್ರತಾ ಲೋಪಕ್ಕಾಗಿ ಉನ್ನತ ಅಧಿಕಾರಿಗಳನ್ನು ಶಿಕ್ಷಿಸದೆ, ಸಂಸದರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಸಿದು, ಆ ಮೂಲಕ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.