ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಹಣ Archives » Dynamic Leader
October 19, 2024
Home Posts tagged ಹಣ
ರಾಜ್ಯ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಯಮಬಾಹಿರ ವರ್ಗಾವಣೆಯಾಗಿದ್ದ ಹಣವನ್ನು ತಕ್ಷಣವೇ ನಿಗಮಕ್ಕೆ ಬಿಡುಗಡೆ ಮಾಡಿ ಜನಾಂಗದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ವಾಲ್ಮೀಕಿ ನಾಯಕ ಸಮಾಜದ ನಿಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಶಾಸಕರಾದ ಬಿ.ಎಂ.ನಾಗರಾಜ, ಟಿ.ರಘುಮೂರ್ತಿ, ಬಸನಗೌಡ ತುರವಿಹಾಳ, ರಾಜಾ ವೇಣುಗೋಪಾಲ ನಾಯಕ, ಡಾ.ಶ್ರೀನಿವಾಸ, ಲೋಕಸೇವಾ ಆಯೋಗದ ಮಾಜಿ ಸದಸ್ಯ ಜಿ.ಟಿ.ಚಂದ್ರಶೇಖರಪ್ಪ ಮತ್ತಿತರ ಮುಖಂಡರನ್ನೊಳಗೊಂಡ ವಾಲ್ಮೀಕಿ ನಾಯಕ ಸಮಾಜದ ನಿಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು  ಭೇಟಿಯಾಗಿ ಚರ್ಚಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಯಮಬಾಹಿರ ವರ್ಗಾವಣೆಯಾಗಿದ್ದ ಹಣವನ್ನು ತಕ್ಷಣವೇ ನಿಗಮಕ್ಕೆ ಬಿಡುಗಡೆ ಮಾಡಿ ಜನಾಂಗದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು ಹಾಗೂ ತಳವಾರ ಹೆಸರಿನಲ್ಲಿ ನಕಲಿ ಪರಿಶಿಷ್ಟ ಪಂಗಡ ಪ್ರಮಾಣಪತ್ರ ಪಡೆಯುತ್ತಿರುವುದನ್ನು ತಡೆಯಲು ಅಗತ್ಯ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ಈ ಬಗ್ಗೆ ತಕ್ಷಣ ಸಭೆ ಕರೆದು ಚರ್ಚಿಸಿ, ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಮಂತ್ರಿಗಳು ನಿಯೋಗಕ್ಕೆ ಭರವಸೆ ನೀಡಿದರು.