ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಹೆಚ್.ಡಿ.ದೇವೇಗೌಡ Archives » Page 2 of 2 » Dynamic Leader
October 23, 2024
Home Posts tagged ಹೆಚ್.ಡಿ.ದೇವೇಗೌಡ (Page 2)
ರಾಜಕೀಯ

ಕೃಪೆ: The New Indian Express,
ಕನ್ನಡ ಪ್ರಭ, ಬೆಂಗಳೂರು.

ಬೆಂಗಳೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಆರಂಭವಾಗಲಿದೆ. ಮೋದಿಯವರು ಅಖಾಡಕ್ಕಿಳಿದಾಗ ಕರ್ನಾಟಕ ಚುನಾವಣೆಯ ಚಿತ್ರಣವೇ ಬದಲಾಗಲಿದೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ.

ಈ ಹೊತ್ತಿನಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಪ್ರತಿನಿಧಿಗೆ ನೀಡಿದ ಸಂದರ್ಶನದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮೋದಿಯವರ ಪ್ರಚಾರದಿಂದ ಈ ಬಾರಿ ವಿಧಾನಸಭೆ ಚುನಾವಣೆ ಮೇಲೆ ಅಷ್ಟು ಪರಿಣಾಮ ಬೀರುವುದಿಲ್ಲ, ಬದಲಿಗೆ ಮುಂದಿನ ವರ್ಷ ಲೋಕಸಭೆ ಚುನಾವಣೆ ಮೇಲೆ ಹೆಚ್ಚು ಪರಿಣಾಮ ಬೀರಬಹುದು ಎಂದಿದ್ದಾರೆ. ಸಂದರ್ಶನದ ಆಯ್ದ ಭಾಗ ಹೀಗಿದೆ:

ಪಕ್ಷದ ಪರ ಪ್ರಚಾರವನ್ನು ಮಾಡುತ್ತಿದ್ದೀರಿ. ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ನೀವು ಹೇಗೆ ನೋಡುತ್ತೀರಿ?
ನನ್ನ ಪ್ರಚಾರದಲ್ಲಿ ವಿಶೇಷವೇನೂ ಇಲ್ಲ. ದಿನಕ್ಕೆ ಮೂರು ಕಾರ್ಯಕ್ರಮಗಳನ್ನು ನಿಗದಿಪಡಿಸಿ ಎಂದು ಪಕ್ಷದ ನಾಯಕರಿಗೆ ಹೇಳಿದ್ದೇನೆ. ಸುಮಾರು 40 ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ. ಕಳೆದ 60 ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕುಮಾರಸ್ವಾಮಿಯವರು ತಮ್ಮ ಕಾರ್ಯಕ್ರಮಗಳಿಂದ ಅದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಿದ್ದಾರೆ. ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದರೂ ಕಷ್ಟಪಡುತ್ತಿದ್ದಾರೆ.

ಜೆಡಿಎಸ್ ಸೇರಿದಂತೆ ಮೂರೂ ಪಕ್ಷಗಳು ಬಹುಮತ ಪಡೆಯುವುದಾಗಿ ಹೇಳಿಕೊಂಡಿವೆ. ನಿಮ್ಮ ಮೌಲ್ಯಮಾಪನ ಏನು?
ನಾನು ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ದೇಶದಲ್ಲೇ ಪ್ರಪ್ರಥಮ ಕುಮಾರಸ್ವಾಮಿ ಅವರು ವಿಶಿಷ್ಟ ಕಾರ್ಯಕ್ರಮ ಪಂಚರತ್ನ ರಥಯಾತ್ರೆಯನ್ನು ರಾಜ್ಯದ ಜನತೆಯ ಮುಂದಿಟ್ಟು ಶ್ರಮಿಸುತ್ತಿದ್ದಾರೆ. ಈ ಸಂದೇಶವನ್ನು ಹಳ್ಳಿಗಳ ಜನರಿಗೆ ತಲುಪಿಸಲಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆಗೆ ಮುನ್ನ ಅದನ್ನು ಜನರ ಬಳಿಗೆ ಕೊಂಡೊಯ್ಯಲಿದ್ದಾರೆ. ಇದು ಸಾಕಷ್ಟು ಪರಿಣಾಮ ಬೀರಿದ್ದು, ಜೆಡಿಎಸ್ ಬಹುಮತ ಪಡೆಯುವ ವಿಶ್ವಾಸವಿದೆ.

ಕೃಷಿ ಸಾಲ ಮನ್ನಾ, ವೃದ್ಧಾಪ್ಯ ವೇತನ, ಇನ್ನೂ ಹಲವು ಕ್ರಮಗಳನ್ನು ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕೈಗೊಂಡಿದ್ದರು. ಅವರು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ರಾಜಕಾರಣಿ ಎಂದು ಅವರ ಶತ್ರುಗಳೂ ಒಪ್ಪಿಕೊಳ್ಳುತ್ತಾರೆ.

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತ ಎಂಬ ಅಭಿಪ್ರಾಯವಿದೆ. ಅದು ನಿಜವೇ?
ಕಳೆದ 2018ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳನ್ನು ಒಮ್ಮೆ ನೋಡಿ. ವಿಜಯಪುರ ಮತ್ತು ರಾಯಚೂರಿನಲ್ಲಿ ತಲಾ ಮೂರು, ಬೀದರ್‌ನಲ್ಲಿ ಎರಡು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಒಂದನ್ನು ಗೆದ್ದಿದ್ದೇವೆ. ನಾವು ಆ ಪ್ರದೇಶದಲ್ಲಿ ಒಂಬತ್ತು ಸ್ಥಾನಗಳನ್ನು ಗೆದ್ದಿದ್ದೇವೆ. ಈ ಬಾರಿ ಆ ಪ್ರದೇಶದಲ್ಲಿ ಹೆಚ್ಚು ಗೆಲ್ಲುತ್ತೇವೆ. ಕೆಲವರು ಜೆಡಿಎಸ್ ನ್ನು ಕೇವಲ ಹಳೆಯ ಮೈಸೂರು ಪಾರ್ಟಿ ಎಂದು ಬ್ರಾಂಡ್ ಮಾಡಲು ಬಯಸುತ್ತಾರೆ. ಸತ್ಯ, ವಾಸ್ತವ ಬೇರೆ ಇದೆ.

ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅದರಲ್ಲಿ ಏನಾದರೂ ಸತ್ಯವಿದೆಯೇ?
ವರುಣಾದಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವುದರಿಂದ ಯಡಿಯೂರಪ್ಪ ಅವರ ಪುತ್ರ ಸ್ಪರ್ಧೆಯಿಂದ ಹಿಂದೆ ಸರಿದ ಬಗ್ಗೆ ಅವರು ಏನು ಹೇಳುತ್ತಾರೆ? ಬಿಜೆಪಿ ಹೈಕಮಾಂಡ್ ಪ್ರತಿಕ್ರಿಯೆ ಏನು? ಅದು ಏನನ್ನು ಸೂಚಿಸುತ್ತದೆ?

2024ರ ಚುನಾವಣೆಯ ಮೊದಲು ಮೈತ್ರಿ ಮಾಡಿಕೊಳ್ಳಲು ವಿರೋಧ ಪಕ್ಷಗಳ ಪ್ರಯತ್ನಗಳ ಬಗ್ಗೆ ನಿಮ್ಮ ಅಭಿಪ್ರಾಯಗಳು?
ಇದು ಕಷ್ಟ. ಬಿಜೆಪಿ 303 ಸ್ಥಾನ ಗೆದ್ದಿದ್ದು, ಈ ಬಾರಿ ಅವರಿಗೆ ಕಷ್ಟ. ಇತರರ ನೆರವಿನಿಂದ ಸರ್ಕಾರ ರಚಿಸಬೇಕು. ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ. ರಾಜಸ್ಥಾನವನ್ನು ನೋಡಿ, ಅಲ್ಲಿ ಹೋರಾಟ ಮಾಡುತ್ತಿದ್ದಾರೆ. ಇತರ ಪಕ್ಷಗಳು ಕಾಂಗ್ರೆಸ್ ನಾಯಕತ್ವವನ್ನು ಒಪ್ಪಿಕೊಳ್ಳುವುದಿಲ್ಲ.

ಪ್ರಧಾನಿ ಮೋದಿಯವರ ರ್‍ಯಾಲಿ ಕರ್ನಾಟಕದಲ್ಲಿ ಬಿಜೆಪಿ ಅಲೆಯನ್ನು ಬದಲಾಯಿಸಬಹುದು ಎಂದು ಪಕ್ಷ ಆಶಿಸುತ್ತಿದೆ.ಈ ಬಗ್ಗೆ ಏನು ಹೇಳುತ್ತೀರಿ?
ಪ್ರಧಾನಿ ಮೋದಿಯವರ ರ್‍ಯಾಲಿಗಳು ಕರ್ನಾಟಕದಲ್ಲಿ ಅಲೆಯನ್ನು ಬದಲಾಯಿಸಬಹುದು ಎಂದು ಬಿಜೆಪಿ ಆಶಿಸುತ್ತಿದೆ. ಅವರು ಸುಮಾರು 40 ರಿಂದ 50 ಸ್ಥಳಗಳಲ್ಲಿ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದರ ಪರಿಣಾಮ ಸಂಸತ್ ಚುನಾವಣೆ ಮೇಲೆ ಹೆಚ್ಚು. ಅಸೆಂಬ್ಲಿ ಚುನಾವಣೆ ಪ್ರಾದೇಶಿಕ ಸಮಸ್ಯೆಯಾಗಿದೆ. ಅವರ ಭಾಷಣಗಳು ಸಂಸತ್ತಿನ ಚುನಾವಣೆಯ ಸಮಯದಲ್ಲಿ ಹೆಚ್ಚು ಪರಿಣಾಮ ಬೀರುತ್ತವೆ, ಆದರೆ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅದು ಕಷ್ಟ.

ಬಿಜೆಪಿ ವಿರುದ್ಧ ಒಗ್ಗಟ್ಟಿನ ಪ್ರತಿಪಕ್ಷ ರೂಪುಗೊಂಡರೆ, ನೀವು ಅದರ ಭಾಗವಾಗುತ್ತೀರಾ?
ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ವಿವಿಧ ಪಕ್ಷಗಳ ನಾಯಕರನ್ನು ಭೇಟಿ ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ.ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ಒಬ್ಬರು ಅದಾನಿ ಬಗ್ಗೆ ಮಾತನಾಡುತ್ತಿದ್ದರೆ ಮತ್ತೊಬ್ಬರು ಇನ್ನೇನೋ ಮಾತನಾಡುತ್ತಿದ್ದಾರೆ. ಅದರಲ್ಲಿ ಯಾವುದೇ ಅರ್ಥವಿಲ್ಲ.

ಕರ್ನಾಟಕದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡನ್ನೂ ಎದುರಿಸುತ್ತಿರುವ ಜೆಡಿಎಸ್ ವಿಶಿಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಪಕ್ಷ ಉಳಿಸಲು ಹೋರಾಟ ನಡೆಸುತ್ತಿದ್ದೇವೆ. ಇದು ರೈತರ ಪಕ್ಷವಾಗಿದ್ದು, ರೈತನ ಮಗನಾಗಿ ನಾನು ಆ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇನೆ. ಜೆಡಿಎಸ್ ರೈತರ ಮತ್ತು ಬಡ ಜನರ ವಿಶ್ವಾಸ ಗಳಿಸಿದೆ. ನಾವು ಯಾವಾಗಲೂ ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿದ್ದೇವೆ. ಅದನ್ನು ಜನ ಮರೆತಿಲ್ಲ.

ರಾಜ್ಯ ಸರ್ಕಾರವು ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ ಬಗ್ಗೆ ನಿಮ್ಮ ಅಭಿಪ್ರಾಯವೇನು?
ನಾನು ಅದನ್ನು ಜಾರಿಗೆ ತಂದಿದ್ದೆ, ಆದರೆ ಬಿಜೆಪಿ ಅದನ್ನು ರದ್ದುಗೊಳಿಸಿತು. ಬಿಜೆಪಿ ಮಾಡಿದ್ದು ತಪ್ಪು. ಅದನ್ನು ನಾವು ಅಧಿಕಾರಕ್ಕೆ ಬಂದರೆ ಮರುಸ್ಥಾಪಿಸುತ್ತೇವೆ.

ಜನಾದೇಶ ಮುರಿದು ಬಿದ್ದರೆ ಜೆಡಿಎಸ್ ಕಾಂಗ್ರೆಸ್ ಅಥವಾ ಬಿಜೆಪಿ ಜೊತೆ ಹೋಗಲಿದೆಯೇ?
ಪ್ರಾಮಾಣಿಕವಾಗಿ ಹೇಳಬೇಕೆಂದರೆ ಅದು ನಡೆಯುತ್ತದೆ ಎಂದು ನಾನು ಭಾವಿಸುವುದಿಲ್ಲ. ಜೆಡಿಎಸ್ ಸರಳ ಬಹುಮತ ಪಡೆಯಲಿದೆ.

ರಾಜಕೀಯ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ನಾಮಪತ್ರ ಭರಾಟೆ ಜೋರಾಗಿದೆ. ಅದರಂತೆ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಂದ ಬಿ ಫಾರಂ ಸ್ವೀಕರಿಸುವಾಗ ನಿಖಿಲ್‌ ಕುಮಾರಸ್ವಾಮಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ತಂದೆ ಹೆಚ್​.ಡಿ.ಕುಮಾರಸ್ವಾಮಿ, ತಾಯಿ ಅನಿತಾ ಕುಮಾರಸ್ವಾಮಿ ಅವರ ಜತೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಚುನಾವಣೆಯಲ್ಲಿ ಗೆಲುವು ಸಾಧಿಸಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಚೆನ್ನಮ್ಮರ ಆಶೀರ್ವಾದ ಪಡೆದರು. ನಿಖಿಲ್ ಕುಮಾರಸ್ವಾಮಿ ಬಿ ಫಾರಂ ಪಡೆಯುವ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ, ಹಾಗೂ ಪತ್ನಿ ರೇವತಿ ಭಾಗಿಯಾಗಿದ್ದರು.

ಹೆಚ್​.ಡಿ.ಕುಮಾರಸ್ವಾಮಿ ಅವರಿಂದ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ನಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು.

ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ತಾಲ್ಲೂಕು ಕಚೇರಿ ಮುಂಭಾಗ ಜೆಡಿಎಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಬೆಳಗ್ಗೆ 10 ಗಂಟೆಗೆ ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚರ್ಚ್ ಹಾಗೂ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೃಹತ್ ಮೆರವಣಿಗೆ ತೆರಳಿ ಮಧ್ಯಾಹ್ನ 12:30ಕ್ಕೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಮೈಸೂರು (ಮಾ.26): ಕುಮಾರಸ್ವಾಮಿ ಹಮ್ಮಿಕೊಂಡಿದ್ದ ಪಂಚರತ್ನ ಯಾತ್ರೆಯಲ್ಲಿ ಒಮ್ಮೆಯಾದರೂ ಭಾಗವಹಿಸಲು ಅವಕಾಶ ಮಾಡಿಕೊಡುವಂತೆ ಭಗವಂತನಲ್ಲಿ ನಾನು ಬೇಡಿಕೊಂಡಿದ್ದೆನು. ಈಗ ಆ ಮಹದಾಸೆ ಈಡೇರಿದೆ ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಹೇಳಿದರು. ಮೈಸೂರು ನಗರದ ರಿಂಗ್ ರಸ್ತೆಯ ಉತ್ತನಹಳ್ಳಿ ಬಳಿಯ ಮೈದಾನದಲ್ಲಿ ಇಂದು ಪಂಚರತ್ನ ರಥಯಾತ್ರೆಯ ಬೃಹತ್ ಸಮಾರೋಪ ಸಮಾವೇಶ ನಡೆಯಿತು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಹೆಚ್.ಡಿ.ದೇವೇಗೌಡರು, ‘ರಾಜ್ಯದಲ್ಲಿ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭವನ್ನು ನೀವು ರೂಪಿಸಿದ್ದೀರಿ. ಕುಮಾರಸ್ವಾಮಿ ತಮ್ಮ ಆರೋಗ್ಯ ಲೆಕ್ಕಿಸದೇ ರಾಜ್ಯ ಸಂಚಾರ ಮಾಡಿದ್ದಾರೆ. ಅವರು ರಾಜ್ಯ ಸುತ್ತಾಡಿದ್ದನ್ನು ನೊಡಿ ಕಣ್ಣು ತುಂಬಿಕೊಂಡಿದ್ದೇನೆ. ನನ್ನ ಆರೋಗ್ಯ ಸರಿಯಾಗಿದ್ದರೆ ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದೆನು. ಭಗವಂತನು ಈ ಕಾರ್ಯಕ್ರಮದಲ್ಲಿ ಒಮ್ಮೆಯಾದರೂ ಭಾಗಿಯಾಗುವಂತೆ ಮಾಡಪ್ಪಾ ಎಂದು ಬೇಡಿಕೊಂಡಿದ್ದೆನು’ ಎಂದರು.

ಮೈಸೂರಿನ ಕೃಷ್ಣರಾಜೇಂದ್ರ ಒಡೆಯರು, ಸರ್.ಎಂ.ವಿಶ್ವೇಶ್ವರಯ್ಯ, ಟಿಪ್ಪು ಸುಲ್ತಾನ್, ಕುವೆಂಪು ಅವರಂತಹ ವಿಶ್ವಮಾನ್ಯ ನಾಯಕರು ಹುಟ್ಟಿದ ಕನ್ನಡ ನಾಡಿನಲ್ಲಿ ಜನಿಸಿದ ಹೆಮ್ಮೆ ನನಗಿದೆ. ನಾನೊಬ್ಬ ಕನ್ನಡಿಗನಾಗಿ ದೇಶದ ಅಭಿವೃದ್ಧಿಗೆ ಪ್ರಧಾನಮಂತ್ರಿಯಾಗಿ ಮಾಡಿದ ಕೆಲಸವು ಇಂದಿಗೂ ಮಾತನಾಡುತ್ತಿದೆ. ನಾಡಿನಲ್ಲಿ ಜಗತ್ತಿನ ಏಳಿಗೆಗಾಗಿ ಒಂದು ಸಣ್ಣ ದೀಪವನ್ನು ಹಚ್ಚಿದ್ದೇನೆ ಎಂಬ ತೃಪ್ತಿಯಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಹೇಳುತ್ತಾ ಜನಸಂದಣಿ ನೋಡಿ ಗದ್ಗದಿತರಾದರು. ತಾವು ಪ್ರಧಾನಮಂತ್ರಿ ಆಗಿದ್ದಾಗ, ರೈತನ ಮಗನಾಗಿ ರೈತರ ಹಕ್ಕುಗಳ ರಕ್ಷಣೆಗೆ ಮಾಡಿದ ಕಾರ್ಯಗಳನ್ನು ಬಿಚ್ಚಿಟ್ಟರು. ಪಂಜಾಬಿನ ರೈತರು ಒಂದು ಭತ್ತದ ತಳಿಗೆ ದೇವೇಗೌಡರ ಹೆಸರನ್ನು ಇಟ್ಟಿರುವ ಬಗ್ಗೆ ನನೆಪಿಸಿಕೊಂಡರು. ಇನ್ನು ಪ್ರಧಾನಮಂತ್ರಿಯಾಗಿ ಆಡಳಿತ ನಡೆಸಿದ ಇಷ್ಟು ವರ್ಷಗಳ ನಂತರವೂ ದೇಶ, ವಿದೇಶದ ಜನರು ಸ್ಮರಿಸುತ್ತಾರೆ. ಹಲವು ಮಹನೀಯರು ಹುಟ್ಟಿದ ನಾಡಿನಲ್ಲಿ ಜಗತ್ತಿನ ಏಳಿಗೆಗಾಗಿ ಒಂದು ಸಣ್ಣ ದೀಪವನ್ನು ಹಚ್ಚಿದ್ದೇನೆ ಎಂಬ ತೃಪ್ತಿಯಿದೆ ಎಂದು ಭಾವುಕರಾದರು.

ಜಾತಿ, ಮತ ಆಧಾರದ ಮೇಲೆ ಅಧಿಕಾರ ಹಿಡಿಯುವುದು ನಿಂತಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಹಾಗೂ ರೈತರ ಹಕ್ಕುಗಳಿಗೆ ನ್ಯಾಯ ಒದಗಿಸಿದ್ದೇನೆ. ರೈತರ ಹಕ್ಕಿಗಾಗಿ, ಕಾವೇರಿ, ಗಂಗೆ, ಕೃಷ್ಣೆ ಸೇರಿ ಹಲವು ನೀರಾವರಿ ಯೋಜನೆಗಳಿಗೆ ಮಾಡಿದ್ದೇನೆ. ನಾನು ಮಹಿಳೆಯರಿಗೆ ರಾಜಕೀಯ ಮೀಸಲಾತಿ ನಿಡಲು ಶ್ರಮಿಸಿದ್ದೇನೆ. ನಾನು ಪ್ರಧಾನಮಂತ್ರಿ ಆಗಿದ್ದಾಗ ಕಾನೂನು ರೂಪಿಸಲು ಮುಂದಾದಾಗ ಅಧಿಕಾರ ಕಳೆದುಕೊಂಡೆನು. ನಂತರ ಅಧಿಕಾರಕ್ಕೆ ಬಂದವರು ಕಾನೂನು ರೂಪಿಸಿದರೂ, ಅದಕ್ಕೆ ಯೋಜನೆ ಹಾಕಿದ್ದ ನನ್ನ ಹೆಸರು ಹೇಳುವುದನ್ನೇ ಮರೆತುಬಿಟ್ಟರು ಎಂದು ಹೇಳಿದರು. ರಾಜ್ಯದಲ್ಲಿ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ದೊರಕಬೇಕಾದರೆ ನಾನು ಪ್ರಧಾನಮಂತ್ರಿ ಚಂದ್ರಶೇಖರ್‌ ಅವರೊಂದಿಗೆ ಹೋರಾಟ ಮಾಡಿದ ಪರಿಪಾಟಲು ನನಗೆ ಗೊತ್ತು. ಬೆಂಗಳೂರು ಅಭಿವೃದ್ಧಿಗೆ ಈ ರೈತನ ಮಗನಾಗಿ ದುಡಿದಿದ್ದೇನೆ. ನಾನು ಏನು ಮಾಡಿದ್ದೇನೆ ಎಂಬುದು ಭಗವಂತನಿಗೆ ಮತ್ತು ನಿಮಗೆ ತಿಳಿದಿದೆ. ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದಾಗ ಬೆಂಗಳೂರು – ಮೈಸೂರು ಹೆದ್ದಾರಿ ಅಭಿವೃದ್ಧಿಗೆ ಏನು ತೀರ್ಮಾನ ಕೈಗೊಂಡಿದ್ದೇನೆ ಎಂಬುದು ಗೊತ್ತಿದೆ. ಅದರೆ, ನಾನು ಪ್ರಚಾರವನ್ನು ಪಡೆಯುವುದಿಲ್ಲ ಎಂದರು.

ನನ್ನ 70 ವರ್ಷಗಳ ಅಧಿಕಾರದಲ್ಲಿ ಎಂದಿಗೂ ಕೊಟ್ಟ ಭರವಸೆ ಈಡೇರಿಸಲು ವಿಫಲವಾಗಿಲ್ಲ. ಒಂದು ವೇಳೆ ನಾನು ಕೊಟ್ಟ ಭರವಸೆ ಈಡೇರಿಸಲಿದ್ದಾಗ ರಾಜಿನಾಮೆ ಕೊಟ್ಟಿದ್ದೇನೆ. ನಾನು ಎಲ್ಲ ಕಾಲಕ್ಕೂ ಅಭಿವೃದ್ಧಿ ಮಂತ್ರ ಜಪಿಸಿದ್ದೇನೆ. ನಾನು ಬೆರಳೆಣಿಕೆ ವರ್ಷಗಳಷ್ಟು ಮಾತ್ರ ಅಧಿಕಾರದಲ್ಲಿ ಇದ್ದು, ದೇವರಾಣೆಗೂ ನಾನು ಜನರ ಅಭಿವೃದ್ಧಿಗೆ ದುಡಿದಿದ್ದೇನೆ. ನನ್ನ ಮಕ್ಕಳು, ಮೊಮ್ಮಕ್ಕಳಿಗೂ ಜನರಿಗೋಸ್ಕರ ದುಡಿಯುವಂತೆ ಹೇಳಿದ್ದೇನೆ. ಅವರೂ ಕೂಡ ನಾನು ಸಾಗಿದ ದುಡಿಮೆ ಹಾದಿಯಲ್ಲಿಯೇ ನಡೆಯುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭವನ್ನು ನೀವು ರೂಪಿಸಿದ್ದೀರಿ. ಕುಮಾರಸ್ವಾಮಿ ತಮ್ಮ ಆರೋಗ್ಯ ಲೆಕ್ಕಿಸದೇ ರಾಜ್ಯ ಸಂಚಾರ ಮಾಡಿದ್ದಾರೆ. ಅವರು ರಾಜ್ಯ ಸುತ್ತಾಡಿದ್ದನ್ನು ನೊಡಿ ಕಣ್ಣು ತುಂಬಿಕೊಂಡಿದ್ದೇನೆ. ನನ್ನ ಆರೋಗ್ಯ ಸರಿಯಾಗಿದ್ದರೆ ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದೆನು. ಭಗವಂತನು ಈ ಕಾರ್ಯಕ್ರಮದಲ್ಲಿ ಒಮ್ಮೆಯಾದರೂ ಭಾಗಿಯಾಗುವಂತೆ ಮಾಡಪ್ಪಾ ಎಂದು ಬೇಡಿಕೊಂಡಿದ್ದೆನು. ನನ್ನ ಆಸೆಯನ್ನು ಕೇಳಿಕೊಂಡ ಭಗವಂತ ನನ್ನನ್ನು ನಿಮ್ಮಮುಂದೆ ನಿಲ್ಲಿಸಿದ್ದಾನೆ. ನಾನು ಭಗವಂತನ ಆಶೀರ್ವಾದದ ಭಾಗವಾಗಿದ್ದೇನೆ. ಆದರೆ, ನನ್ನ ಶಕ್ತಿ ನೀವು ಆಗಿದ್ದೀರಿ ಎಂದರು.

ಸಮಾರೋಪ ಸಮಾರಂಭವನ್ನು ಉದ್ದೇಶಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನನ್ನ ರಾಜಕೀಯ ಜೀವನದ ಅವಿಸ್ಮರಣೀಯ ಕ್ಷಣವಿದು. ನನ್ನ ಪೂಜ್ಯ ತಂದೆಯವರು, ಮಾಜಿ ಪ್ರಧಾನಮಂತ್ರಿಗಳು ಆದ ಶ್ರೀ.ಹೆಚ್.ಡಿ.ದೇವೇಗೌಡ ಪಂಚರತ್ನ ರಥಯಾತ್ರೆ ಸಮಾರೋಪ ಸಮಾವೇಶದಲ್ಲಿ ಭಾಗಿಯಾಗಿದ್ದರು. ಅವರ ಸಾನ್ನಿಧ್ಯದಲ್ಲಿ ನಡೆದ ಜೆಡಿಎಸ್ ಹಬ್ಬ ನನ್ನ ರಾಜಕೀಯ ಜೀವನದ ಮಹೋನ್ನತ ಮೈಲುಗಲ್ಲು. ಮೈಸೂರಿನ ಶ್ರೀ.ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನಡೆದ ಪಂಚರತ್ನ ರಥಯಾತ್ರೆಯ ಐತಿಹಾಸಿಕ ಸಮಾವೇಶಕ್ಕೆ ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಹರಿದುಬಂದಿದ್ದ ಜನಸಾಗರಕ್ಕೆ ನನ್ನ ಅನಂತ ಧನ್ಯವಾದಗಳು ಎಂದರು.

ಪಂಚರತ್ನ ಯಾತ್ರೆ ಸಮಾರೋಪದಲ್ಲಿ ದೇವೇಗೌಡರು ಭಾಷಣ ಮಾಡುತ್ತಿದಾಗ ಕಣ್ಣೀರು ಹಾಕಿದ ಕುಮಾರಸ್ವಾಮಿ ಮತ್ತು ರೇವಣ್ಣ. ಹತ್ತು ಲಕ್ಷಕ್ಕೂ ಹೆಚ್ಚು ಜನರು ಈ ಐತಿಹಾಸಿಕ ಸಮಾವೇಶದಲ್ಲಿ ಸೇರಿರುವ ನಿರೀಕ್ಷೆ ಇದೆ, ರಾಜ್ಯದ ದಶದಿಕ್ಕುಗಳಿಂದ ಆಗಮಿಸುವ ಪ್ರತಿಯೊಬ್ಬರಿಗೂ ಆಸನ ಹಾಗೂ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು.

ಬೆಂಗಳೂರು ರಾಜಕೀಯ

ಬೆಂಗಳೂರು: ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಇಂದು ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಸರ್ವೋದಯ ದಿನಾಚರಣೆ ಆಚರಿಸಲಾಯಿತು. ಪ್ರತಿವರ್ಷದಂತೆ ಈ ವರ್ಷವೂ ದಿನಾಚರಣೆ ಸಾಂಸ್ಕೃತಿಕವಾಗಿ ಬಹಳ ವಿಜೃಂಭಣೆಯಿಂದ ನಡೆಯಿತು. ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷ ಅರ್.ಪ್ರಕಾಶ್ ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ್ದರು.

ಜೆ.ಪಿ.ಭವನದಲ್ಲಿ ಇಂದು ಆಚರಿಸಲಾದ ಸರ್ವೋದಯ ದಿನಾಚರಣೆಯಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಸ್.ರಮೇಶ್, ರಾಜ್ಯ ಹಿರಿಯ ಮುಖಂಡ ಶಫಿಯುಲ್ಲಾ, ನಾಗರಾಜ್, ಮಹಿಳಾ ಘಟಕದ ಅಧ್ಯಕ್ಷೆ ಡಾ.ರೂತ್ ಮನೋರಮ, ಶಾಂತಿನಗರ ಮಹಿಳಾ ಘಟಕದ ಅಧ್ಯಕ್ಷೆ ಸರಸ್ವತಿ ಮುಂತಾದ ಹಲವರು ಭಾಗವಿಸಿದ್ದರು.

ಜೆಡಿಎಸ್ ಕಚೇರಿಯಲ್ಲಿ ನಡೆದ ಸರ್ವೋದಯ ದಿನಾಕಾರಣೆ

ದೇಶಾದ್ಯಂತ ದೇಶಕ್ಕಾಗಿ ಜೀವತೆತ್ತ ಹುತಾತ್ಮರನ್ನು ಸ್ಮರಣೆ ಮಾಡಿ ಅವರ ತ್ಯಾಗ ಸೇವೆ ಮತ್ತು ದೇಶಪ್ರೇಮವನ್ನು ಕೊಂಡಾಡಿ, ಇತರರಲ್ಲಿ ದೇಶ ಪ್ರೇಮ ಮತ್ತು ರಾಷ್ಟಭಕ್ತಿಯನ್ನು ಮೂಡಿಸುವ ಸದುದ್ದೇಶ ಈ ಆಚರಣೆಯ ಮೂಲ ಉದ್ದೇಶವಾಗಿರುತ್ತದೆ. ವಿಶ್ವದಾದ್ಯಂತ ಸುಮಾರು 15 ದೇಶಗಳು ಪ್ರತಿ ವರ್ಷ ಹುತಾತ್ಮರ ದಿನವನ್ನು ಬೇರೆ ಬೇರೆ ದಿನಗಳಲ್ಲಿ ಆಚರಣೆ ಮಾಡಿ ಜನರಲ್ಲಿ ದೇಶ ಪ್ರೇಮದ ಬಗ್ಗೆ ಭಕ್ತಿ ಮೂಡುವಂತೆ ಮಾಡುತ್ತದೆ. ಮೊದಲೆಲ್ಲಾ ಜನವರಿ 26ರ ಗಣರಾಜ್ಯೋತ್ಸವದ ದಿನದಂದು ದೇಶಕ್ಕಾಗಿ ಜೀವತೆತ್ತ ಸೈನಿಕರನ್ನು ನೆನೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿತ್ತು. ಜನವರಿ 30ರಂದು ನಮ್ಮ ದೇಶದ ಸ್ವಾತಂತ್ರಕ್ಕಾಗಿ ‘ಅಹಿಂಸಾ’ ಅಸ್ತ್ರದ ಮುಖಾಂತರ ಹೋರಾಡಿದ ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವನ್ನು ಆಚರಿಸಲಾಗುತ್ತಿದೆ.

ಗಾಂಧೀಜಿಯವರ ಪುಣ್ಯತಿಥಿಯ ನೆನಪಿಗಾಗಿಯೂ ಈ ದಿನವನ್ನು ಹುತಾತ್ಮರ ದಿನವೆಂದು ಆಚರಿಸಲಾಗುತ್ತದೆ. ಈ ದಿನದಂದು ಭಾರತದ ಪ್ರಧಾನ ಮಂತ್ರಿ ಮತ್ತು ವಿವಿಧ ಸೇನಾ ದಳಗಳ ಮುಖ್ಯಸ್ಥರು ಸೇರಿದಂತೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಹುತಾತ್ಮರಿಗೆ ಗೌರವವನ್ನು ಸಲ್ಲಿಸುತ್ತಾರೆ. ಎರಡು ನಿಮಿಷಗಳ ಮೌನಾಚರಣೆಯ ಮಾಡಿ ಪ್ರಾರ್ಥಿಸುತ್ತಾರೆ.